Author: roovari

ಶಿವಮೊಗ್ಗ : ಶಿವಮೊಗ್ಗದ ಮಾನಸ ಇಂಟರ್ನ್ಯಾಷನಲ್ ಸ್ಕೂಲ್ ವತಿಯಿಂದ ಪ್ರತಿ ವರ್ಷ ಕೊಡ ಮಾಡುವ ಪ್ರತಿಷ್ಠಿತ ‘ಮಾನಸ ರತ್ನ ಪ್ರಶಸ್ತಿ’ಯನ್ನು ಖ್ಯಾತ ರಂಗಭೂಮಿ ಕಲಾವಿದ, ಜನಪ್ರಿಯ ಕಾರ್ಯಕ್ರಮ ನಿರೂಪಕ, ಕ್ರಿಯಾಶೀಲ ಶಿಕ್ಷಕ ಹಾಗೂ ಹಲವಾರು ಸಾಮಾಜಿಕ ಶೈಕ್ಷಣಿಕ ಧಾರ್ಮಿಕ ಹಾಗೂ ನೌಕರರ ಸಂಘಟನೆಯ ಮುಂಚೂಣಿಯಲ್ಲಿದ್ದು ಕಾರ್ಯನಿರ್ವಹಿಸುತ್ತಿರುವ ಸುಬ್ರಹ್ಮಣ್ಯ ಜಿ. ಉಪ್ಪುಂದ ಇವರಿಗೆ ದಿನಾಂಕ 04-01-2024ರಂದು ಶಿವಮೊಗ್ಗದ ಕುವೆಂಪು ರಂಗ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಯಿತು. ಲಾವಣ್ಯ (ರಿ.) ಬೈಂದೂರು ನಾಟಕ ಸಂಸ್ಥೆಯ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಅಭಿಮಾನಿಗಳ ಮನೆಗೆದ್ದಿರುವ ಸುಬ್ರಹ್ಮಣ್ಯ ಜಿ. ಉಪ್ಪುಂದ ಅವರು ಕಳೆದ ಎರಡು ವರ್ಷಗಳ ಹಿಂದೆ ಶಿವಮೊಗ್ಗದಲ್ಲಿ ಅಭಿನಯಿಸಿದ ‘ಮರಣ ಮೃದಂಗ’ ನಾಟಕದಲ್ಲಿ ಇವರ ಶ್ರೇಷ್ಠ ಅಭಿನಯವನ್ನು ಗುರುತಿಸಿ, ಕಾರ್ಯಕ್ರಮ ನಿರೂಪಕರಾಗಿ, ಶಿಕ್ಷಕರ ಮತ್ತು ನೌಕರರ ಸಂಘಟನೆ ಮುಖ್ಯಸ್ಥರಾಗಿ, ಹಲವಾರು ಸಾಮಾಜಿಕ ಧಾರ್ಮಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡ ಪರಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.…

Read More

ಉಡುಪಿ : ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪದವಿ ವಿಭಾಗದ ಕನ್ನಡ ಉಪನ್ಯಾಸಕ ಶ್ರೀ ಶಿವಕುಮಾರ ಅಳಗೋಡು ಅವರ ‘ಯಕ್ಷಗಾನ ಪೂರ್ವರಂಗ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ. ಹವ್ಯಾಸಿ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥಧಾರಿ, ಛಂದೋಬದ್ಧ ಯಕ್ಷಕವಿಯಾಗಿರುವ ಶ್ರೀ ಶಿವಕುಮಾರರು ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಅರುಣ್ ಕುಮಾರ್‌ಎಸ್. ಆರ್. ಇವರ ಮಾರ್ಗದರ್ಶನದಲ್ಲಿ ಈ ಪ್ರಬಂಧವನ್ನು ರಚಿಸಿದ್ದಾರೆ. ಶ್ರೀಯುತರು ಮಂಗಳೂರು ವಿ.ವಿ. ಯಿಂದ ಕನ್ನಡ ಎಂ.ಎ. ಪದವಿಯನ್ನು ದ್ವಿತೀಯ ರ‍್ಯಾಂಕ್‌ನೊಂದಿಗೆ ಪಡೆದಿದ್ದು, ಎನ್.ಇ.ಟಿ., ಕೆ.ಎಸ್.ಇಟಿ. ಪರೀಕ್ಷೆಗಳಲ್ಲೂ ಉತ್ತೀರ್ಣರಾಗಿರುತ್ತಾರೆ. 9 ವಿಭಿನ್ನ ಕೃತಿಗಳನ್ನು ಪ್ರಕಟಿಸಿರುವ ಇವರು ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ನಿಟ್ಟೂರು ಅಳಗೋಡು ಸಮೀಪದ ಶ್ರೀಮತಿ ಗೀತಾ ಮತ್ತು ಶ್ರೀ ಅನಂತಮೂರ್ತಿಯವರ ಸುಪುತ್ರರಾಗಿರುತ್ತಾರೆ.

Read More

ಬೆಂಗಳೂರು : ಬೆಂಗಳೂರಿನ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಯೋಜಿಸಿದ ರಾಜ್ಯಮಟ್ಟದ ಮಹಿಳಾ ಸಮಾವೇಶ ‘ಅಭಿಜಾತೆ-2024’ ದಿನಾಂಕ 06 ಮತ್ತು 07-01-2024ರಂದು ಬೆಂಗಳೂರಿನ ಶಂಕರಪುರಂನಲ್ಲಿರುವ ಶ್ರೀ ಶೃಂಗೇರಿ ಶಂಕರಮಠದ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಲಾ ಸಾಧಕಿ ಭರತಾಂಜಲಿ ನೃತ್ಯ ಸಂಸ್ಥೆಯ ನೃತ್ಯ ಗುರು ವಿದುಷಿ ಪ್ರತಿಮಾ ಶ್ರೀಧರ್ ಅವರನ್ನು ‘ಧೀ ಶಕ್ತಿ’ ಪುರಸ್ಕಾರ ನೀಡಿ ಸಮ್ಮಾನಿಸಲಾಯಿತು. ಸಂಚಾಲಕಿ ಡಾ. ಶುಭ ಮಂಗಳಾ ಸುಧೀರ್ ಹಾಗೂ ಸಮ್ಮೇಳನ ಕಾರ್ಯಾಧ್ಯಕ್ಷೆ ಮೇದಿನಿ ಉದಯ ಗರುಡಾಚಾರ್ ಮೊದಲಾದವರು ಉಪಸ್ಥಿತರಿದ್ದರು.

Read More

ಮಡಿಕೇರಿ : ಕೊಡಗು ಜಿಲ್ಲಾ, ವಿರಾಜಪೇಟೆ ತಾಲೂಕು ಅಮೃತ್ತಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸರಕಾರಿ ಪ್ರೌಢಶಾಲೆ ಕೊಂಡಂಗೇರಿ ಇವುಗಳ ವತಿಯಿಂದ ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿನಿಧಿ ಕಾರ್ಯಕ್ರಮವು ದಿನಾಂಕ 04-01-2024ರಂದು ಕೊಂಡಂಗೇರಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ವಿರಾಜಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ರಾಜೇಶ್ ಪದ್ಮನಾಭ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಕೊಂಡಂಗೇರಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಜಯಂತಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಕನ್ನಡ ಭಾಷೆಯನ್ನು ಉಳಿಸಿ, ಸಶಕ್ತಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕನ್ನಡ ಸಾಹಿತ್ಯದ ಅಭಿರುಚಿಯನ್ನು ಮೂಡಿಸಿಕೊಳ್ಳಬೇಕು.” ಎಂದು ಹೇಳಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ‘ಕೊಡಗಿನ ಮಹಿಳಾ ಸಾಹಿತಿಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಸೋಮೆಯಂಡ ಕೌಶಲ್ಯ ಸತೀಶ್ “ಮಹಿಳೆಯರ ಪ್ರತಿಭೆ ಅನಾವರಣಗೊಳ್ಳಲು ಪುರುಷರ ಸಹಕಾರ ಅತ್ಯಗತ್ಯ. ಕುಟುಂಬದ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಮಕ್ಕಳ ಭವಿಷ್ಯ ರೂಪಿಸಿ ಪರಿಪೂರ್ಣ ವ್ಯಕ್ತಿತ್ವ ರೂಪಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು.”…

Read More

ಧಾರವಾಡ : ಕಾದಂಬರಿ ಪಿತಾಮಹ ಗಳಗನಾಥರ 155ನೇ ಜನ್ಮದಿನೋತ್ಸವ ಹಾಗೂ 2022-23ನೇ ಸಾಲಿನ ‘ಶ್ರೀ ಗಳಗನಾಥ ಮತ್ತು ನಾ. ಶ್ರೀ. ರಾಜಪುರೋಹಿತ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 05-01-2024ನೇ ಶುಕ್ರವಾರದಂದು ಧಾರವಾಡದ ಅಲೂರು ವೆಂಕಟರಾವ್ ಸ್ಮಾರಕ ಭವನದಲ್ಲಿ ನಡೆಯಿತು. ಗಳಗನಾಥ ಮತ್ತು ನಾ. ಶ್ರೀ. ರಾಜಪುರೋಹಿತ ಪ್ರತಿಷ್ಠಾನ ಸಹಯೋಗದಲ್ಲಿ ನಡೆದ ಸಮಾರಂಭದಲ್ಲಿ ರೂಪಾಯಿ 50 ಸಾವಿರ ನಗದನ್ನು ಒಳಗೊಂಡ 2022-23ನೇ ಸಾಲಿನ ‘ಗಳಗನಾಥ ಪ್ರಶಸ್ತಿ’ಯನ್ನು ಸಾಹಿತಿ ಜಯಂತ ಕಾಯ್ಕಿಣಿಗೆ ಹಾಗೂ ಅಷ್ಟೇ ಮೊತ್ತದ ‘ನಾ. ಶ್ರೀ. ರಾಜಪುರೋಹಿತ ಪ್ರಶಸ್ತಿ’ಯನ್ನು ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡಮಿಯ ಅಧ್ಯಕ್ಷರಾದ ಡಾ. ದೇವರಕೊಂಡಾ ರೆಡ್ಡಿಯವರಿಗೆ, ಕಥೆಗಾರ ಹಾಗೂ ಸಾಹಿತಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ ಪ್ರದಾನಿಸಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಸಾಹಿತಿ ಜಯಂತ ಕಾಯ್ಕಿಣಿ ಮಾತನಾಡಿ “ನಾನು ಕಾದಂಬರಿ ಬರೆದಿಲ್ಲ. ಆದಾಗ್ಯೂ ಗಳಗನಾಥ ಅವರ ಹೆಸರಿನ ಪ್ರಶಸ್ತಿ ನೀಡಿರುವುದು ಖುಷಿ ಇದೆ. ಆದರೆ, ಇದು ರಾವಣನ ಕೈಯಲ್ಲಿ ಆತ್ಮಲಿಂಗ ಕೊಟ್ಟಂತೆ ಅನುಭವ ನೀಡಿದೆ ಎಂದರು. ಅನಾಮಿಕರಾಗಿ ಬರಿಯೋದು,…

Read More

ಮಂಗಳೂರು : ಭರತನಾಟ್ಯ ಗುರು ಶ್ರೀಕಾಂತ್ ಸುಬ್ರಹ್ಮಣ್ಯಂ ಅವರ ಶಿಷ್ಯೆ ಅನನ್ಯಾ ಚಿಂಚಳ್ಳರ್ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ದಿನಾಂಕ 07-01-2024ರಂದು ಮಧ್ಯಾಹ್ನ 3.30ಕ್ಕೆ ಮಂಗಳೂರಿನ ಡಾನ್ ಬಾಸ್ಕೊ ಸಭಾಂಗಣದಲ್ಲಿ ನಡೆಯಿತು. ಅನನ್ಯಾ ಚಿಂಚಳ್ಳ‌ರ್ ಅವರು ವಿದೇಶದಲ್ಲಿ ಹುಟ್ಟಿ ಬೆಳೆದು, ವಿದೇಶದಲ್ಲಿದ್ದುಕೊಂಡೇ ಅಪ್ಪಟ ಭಾರತೀಯ ಶಾಸ್ತ್ರೀಯ ಭರತನಾಟ್ಯವನ್ನು ಕಲಿತು, ಭಾರತದಲ್ಲಿ ಪ್ರದರ್ಶನ ನೀಡಿದರು. ಇಂಗ್ಲೆಂಡ್‌ನ ಲೀಡ್ಸ್‌ ನಗರದಲ್ಲಿ ಹುಟ್ಟಿ ತನ್ನ ಶಾಲಾ ಶಿಕ್ಷಣದ ಜತೆಗೆ ಗುರು ಶ್ರೀಕಾಂತ್ ಸುಬ್ರಹ್ಮಣ್ಯಂ ಅವರ ಶಿಷ್ಯೆಯಾಗಿ, ತನ್ನ ಐದನೇ ವಯಸ್ಸಿನಲ್ಲಿಯೇ ಭರತನಾಟ್ಯದ ಅಭ್ಯಾಸವನ್ನು ಪ್ರಾರಂಭಿಸಿದ ಅನನ್ಯಾ ಅವರು 6 ಗ್ರೇಡಿನ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ನಗರದ ಡೊಂಗರಕೇರಿಯ ಡಾ. ಪ್ರವೀಣ್ ಪ್ರಭಾಕರ್ ಮತ್ತು ಡಾ. ದೀಪಾ ಪ್ರವೀಣ್ ಅವರ ಪುತ್ರಿ. ಈ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಮಂಗಳೂರಿನ ನೃತ್ಯಭಾರತಿ ನಿರ್ದೇಶಕಿ ವಿದುಷಿ ಗೀತಾ ಸರಳಾಯ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಅತಿಥಿಯಾಗಿ ಭಾಗವಹಿಸಿದ್ದರು.

Read More

ಬಂಟ್ವಾಳ: ಪುತ್ತೂರು ಶ್ರೀದೇವಿ ನೃತ್ಯಾರಾಧನಾ ಕಲಾ ಕೇಂದ್ರದ ಆಶ್ರಯದಲ್ಲಿ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನೃತ್ಯಧಾರ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಸಮಾರಂಭವು ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ದಿನಾಂಕ 07-01-2024ರ ಭಾನುವಾರದಂದು ನಡೆಯಿತು. ಕರ್ನಾಟಕ ಕಲಾಶ್ರೀ ವಿದ್ವಾನ್ ಕೆ. ಚಂದ್ರಶೇಖರ ನಾವಡ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯಕ್ಷಗಾನದ ಹಾಸ್ಯ ಕಲಾವಿದ ರಸಿಕರತ್ನ ದಿ. ನಯನ ಕುಮಾರ್ ಸ್ಮರಣಾರ್ಥ ನೀಡಲಾಗುವ ಕಲಾನಯನ ಪ್ರಶಸ್ತಿಯನ್ನು ಪುತ್ತೂರಿನ ಚರ್ಮವಾದ್ಯ ತಯಾರಕ ಮತ್ತು ಕೊಳಲು ವಾದಕ ಪಿ. ರಾಜರತ್ನಂ ದೇವಾಡಿಗ ಅವರಿಗೆ ಪ್ರದಾನ ಮಾಡಲಾಯಿತು. ವಸ್ತ್ರ ವಿನ್ಯಾಸಗಾರ ಮತ್ತು ಮುಖವರ್ಣಿಕೆ ಕಲಾವಿದ ಸುನೀಲ್ ಉಚ್ಚಿಲ ದಂಪತಿ ಅವರನ್ನು ಸನ್ಮಾನಿಸಲಾಯಿತು. ತುಳುವೆ‌ರ್ ಜನಪದ ಕೂಟದ ಖಜಾಂಜಿ ಪ್ರಭು ರೈ ಮಾತನಾಡಿ “ಇದೊಂದು ಅರ್ಥಗರ್ಭಿತ ಕಾರ್ಯಕ್ರಮವಾಗಿದ್ದು, ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ವ್ಯಕ್ತಿತ್ವ ನಿರ್ಮಾಣದ ಕೆಲಸವು ಸಂಸ್ಥೆಯಿಂದಾಗುತ್ತಿರುವುದು ಅಭಿನಂದನೀಯ ಎಂದರು.” ಬಾಲಕೃಷ್ಣ ಪ್ರಭು ವೇದಿಕೆಯಲ್ಲಿದ್ದರು. ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರದ ಸಂಚಾಲಕ ಉದಯ…

Read More

ಮಣಿಪಾಲ : ವಿದುಷಿ ಭ್ರಮರಿ ಶಿವಪ್ರಕಾಶ್ ಅವರು ಮಂಡಿಸಿದ ಸಾಹಿತಿ ರಂಗಕರ್ಮಿ ಪ್ರೊ. ಉದ್ಯಾವರ ಮಾಧವ ಆಚಾರ್ಯರ ‘ಸಮೂಹ-ಉಡುಪಿ ರಂಗ ಪ್ರಯೋಗಗಳ ಅಧ್ಯಯನ’ ಎಂಬ ವಿಷಯದ ಕುರಿತು ನಡೆಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಮಾಹೆ ವಿ.ವಿ.ಯು ಪಿಎಚ್.ಡಿ. ನೀಡಿದೆ. ಇವರು ಮಾಹೆ ವಿ.ವಿ.ಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾದೇಶಿಕ ಜಾನಪದ ರಂಗ ಕಲೆಗಳ ಅಧ್ಯಯನ ಕೇಂದ್ರದ (ಆರ್‌.ಆರ್‌.ಸಿ.) ಮೂಲಕ ಮಣಿಪಾಲ ಸೆಂಟರ್ ಫಾರ್ ಯುರೋಪಿಯನ್ ಸ್ಟಡೀಸ್ ವಿಭಾಗದ ಮುಖ್ಯಸ್ಥೆ ಡಾ. ನೀತಾ ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು. ಶ್ರೀಮತಿ ಭ್ರಮರಿ ಶಿವಪ್ರಕಾಶ್ ಶಾಸ್ತ್ರೀಯ ಭರತನಾಟ್ಯ ಕ್ಷೇತ್ರದಲ್ಲಿ ತನ್ನ ಅಧ್ಯಯನ ಆಧಾರಿತ ಸೃಜನಶೀಲ ನೃತ್ಯ ಕಾರ್ಯಕ್ರಮಗಳ ಮೂಲಕ ಗುರುತಿಸಿಕೊಂಡಿರುವ ಕಲಾವಿದೆ. ವಸುಂಧರಾ ನೃತ್ಯ ಬಾಣಿಯ ಹರಿಕಾರ್ತಿ, ಹಿರಿಯ ಗುರು ಡಾ. ವಸುಂಧರಾ ದೊರೆಸ್ವಾಮಿಯವರಲ್ಲಿ ಕಳೆದ 26 ವರ್ಷಗಳಿಂದ ಶಿಷ್ಯತ್ವ ವಹಿಸಿದ್ದಾರೆ. ಪ್ರಸ್ತುತ ಮಂಗಳೂರಿನ ನಾದನೃತ್ಯ ಸ್ಕೂಲ್ ಆಫ್ ಡಾನ್ಸ್ ಎಂಡ್ ಕಲ್ಬರಲ್…

Read More

ಸುರತ್ಕಲ್ : ಸಮಗ್ರ ಗ್ರಾಮೀಣ ಆಶ್ರಮ ಪೆರ್ನಾಲು ಉಡುಪಿ ಜಿಲ್ಲೆ, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ-ಕೇರಳ, ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ) ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ, ಕಾಸರಗೋಡು ಮತ್ತು ಗೋವಿಂದ ದಾಸ ಕಾಲೇಜು ಸುರತ್ಕಲ್‌ ಇವರ ಸಂಯುಕ್ತ ಆಶ್ರಯದಲ್ಲಿ ‘ಬುಡಕಟ್ಟು ಯುವ ಬರಹಗಾರರ ಕಮ್ಮಟ’ವು ದಿನಾಂಕ 13-01-2024 ಮತ್ತು 14-01-2024ರಂದು ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ದೃಶ್ಯ ಶ್ರಾವ್ಯ ಮಂದಿರದಲ್ಲಿ ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕಿ ಡಾ. ಸಬಿತಾ ಗುಂಡ್ಮಿ ಇವರ ನಿರ್ದೇಶನದಲ್ಲಿ ನಡೆಯಲಿರುವ ಈ ಕಮ್ಮಟವನ್ನು ಪೂರ್ವಾಹ್ನ 9.30ಕ್ಕೆ ಸಿಂಬಿಯೋಸಿಸ್ ಅಂತಾರಾಷ್ಟ್ರೀಯ ಡೀಮ್ಡ್ ಕಾನೂನು ವಿಶ್ವವಿದ್ಯಾನಿಲಯ ಪುಣೆಯ ನಿರ್ದೇಶಕರಾದ ಡಾ. ಶಶಿಕಲಾ ಗುರುಪುರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಗೋವಿಂದ ದಾಸ ಕಾಲೇಜಿನ ಪ್ರಾಚಾರ್ಯ ಪ್ರೊ. ಪಿ. ಕೃಷ್ಣಮೂರ್ತಿಯವರು ಅಧ್ಯಕ್ಷತೆ ವಹಿಸಲಿದ್ದು, ಹಿಂದೂ ವಿದ್ಯಾದಾಯಿನಿ ಸಂಘ (ರಿ) ಸುರತ್ಕಲ್‌ ಇದರ ಕಾರ್ಯದರ್ಶಿ ಶ್ರೀರಂಗ ಹೆಚ್., ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ-ಕೇರಳದ ಅಧ್ಯಕ್ಷೆ ಸುಶೀಲ ನಾಡ…

Read More

ಮಂಗಳೂರು : ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಿಸಿದ ಪತ್ರಕರ್ತ ಸಾಹಿತಿ ರಘುನಾಥ ಎಂ. ವರ್ಕಾಡಿ ಬರೆದಿರುವ ‘ಸೂರ್ಯೆ ಚಂದ್ರೆ ಸಿರಿ’ ದೇವಕಿ ಬೈದ್ಯೆತಿ ಹೇಳಿರುವ ತುಳು ಜನಪದ ಕಥಾ ಸಂಕಲನ ಲೋಕಾರ್ಪಣೆಯ ಕಾರ್ಯಕ್ರಮ ದಿನಾಂಕ 04-01-2024ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಕೃತಿಕಾರ ರಘುನಾಥ ಎಂ. ವರ್ಕಾಡಿ ಸ್ವಾಗತಿಸಿದರು. ಶ್ರೀನಿವಾಸ ವಿಶ್ವವಿದ್ಯಾನಿಲಯ ಮುಕ್ಕದ ಪ್ರೊ. ಎಂ.ಎಸ್. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಅಧ್ಯಕ್ಷರು ಡಾ. ತುಕಾರಾಮ ಪೂಜಾರಿ ‘ಸೂರ್ಯೆ ಚಂದ್ರೆ ಸಿರಿ’ ಕೃತಿ ಲೋಕಾರ್ಪಣೆಗೊಳಿಸಿದರು. ಡಾ. ತುಕಾರಾಮ ಪೂಜಾರಿ ಮಾತನಾಡಿ “ಕೃತಿಕಾರರು 30 ಕತೆಗಳನ್ನು ಬಾರೀ ಅಂದವಾಗಿ ಜೋಡಣೆ ಮಾಡಿದ್ದಾರೆ. ಮೊದಲ ಕತೆಯೆ ಅತಿಕಾರ ತಳಿಯ ಬಗ್ಗೆ ಇದೆ. ಈ ತಳಿಯ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಇದನ್ನು ಎಣೆಲ್ ನಲ್ಲಿ ಬಿತ್ತಿದರೂ ಪೈರು ಆಗುವುದು ಸುಗ್ಗಿಯಲ್ಲಿ. ತುಳುನಾಡನ್ನು ಯಾವ ರೀತಿಯಲ್ಲಿ ನೋಡುವುದಾದರೂ ಶಾಸನ ಆಧಾರವಾಗಿದೆ. ಶಾಸನ ಬರೆಸುವವನು ರಾಜ.…

Read More