Author: roovari

ಉಡುಪಿ : ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ- ಐರೋಡಿ ಸಂಸ್ಥೆಗೆ ಐವತ್ತರ ಸಂಭ್ರಮಾಚರಣೆಯ ಸಂದರ್ಭದಲ್ಲಿ ಹಮ್ಮಿಕೊಂಡ ‘ಯಕ್ಷ ಸಪ್ತೋತ್ಸವ’ ಕಾರ್ಯಕ್ರಮವು ದಿನಾಂಕ 01-01-2024ರಂದು ಉದ್ಘಾಟನೆಗೊಂಡಿತು. ಈ ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರು ಮಾತನಾಡುತ್ತಾ “ಇಂದಿನ ಯುವ ಪೀಳಿಗೆ ಹಿರಿಯರನ್ನು ಗೌರವಿಸುವಂತಾಗಲು, ತಮ್ಮ ತಂದೆತಾಯಿಯರ ಮಾತುಗಳನ್ನು ಪಾಲಿಸುವಂತಾಗಲು ರಾಮಾಯಣದ ನೈತಿಕ ಮೌಲ್ಯಗಳನ್ನು ಅವರಿಗೆ ದಾಟಿಸುವ ಕೆಲಸವಾಗಬೇಕು. ಯಕ್ಷಗಾನದಿಂದ ಈ ಕಾರ್ಯವನ್ನು ಮಾಡಲು ಸಾಧ್ಯವಿದೆ. ಇಂದು ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿರುವುದು, ವೃದ್ಧ ತಂದೆತಾಯಿ ವೃದ್ಧಾಶ್ರಮಗಳನ್ನು ಸೇರುತ್ತಿರುವುದನ್ನು ಕಂಡಾಗ ದಿಗಿಲು ಹುಟ್ಟುತ್ತದೆ. ದುಡ್ಡಿನಿಂದ ಮಾನವ ಸಂಬಂಧಗಳು ಬಲಗೊಳ್ಳಲಾರವು ಎಂಬುದನ್ನು ಈ ಘಟನೆಗಳು ಸಾಬೀತುಪಡಿಸುತ್ತವೆ. ಇಂದಿನ ಯುವಜನರಿಗೆ ವೃದ್ಧರೇಕೆ ಬೇಡವಾಗಿದ್ದಾರೆ ಎಂಬುದನ್ನು ವಿಮರ್ಶಿಸಿದಾಗ, ಅವರಲ್ಲಿ ಸಂಸ್ಕಾರ ಹಾಗೂ ನೈತಿಕ ಮೌಲ್ಯಗಳ ಅಧ:ಪತನ ಕಂಡು ಬರುತ್ತಿದೆ. ಈ ಸಮಸ್ಯೆಗೆ ಮರ್ಯಾದ ಪುರುಷೋತ್ತಮನ ಆದರ್ಶಗಳನ್ನು ಸಾರುವ ರಾಮಾಯಣ ರಾಮಬಾಣವಾಗಬಲ್ಲದು. ಆದ್ದರಿಂದ ಮಕ್ಕಳನ್ನು ಯಕ್ಷಗಾನ ಕಲಿಕೆಗೆ ಸೇರಿಸಿ.…

Read More

ಉಡುಪಿ : ಬೆಂಗಳೂರಿನ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಇಂಜೀನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಸಮಗ್ರ ಸಾಹಿತ್ಯ ಸೇವೆ ಮತ್ತು ಜೀವಮಾನ ಸಾಧನೆಗಾಗಿ ಕೊಡಮಾಡುವ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ’ಯನ್ನು ದಿನಾಂಕ 30-12-2023ರಂದು ಉಡುಪಿಯ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಪ್ರವರ್ತಕ ಹಾಗೂ ಲೇಖಕರೂ ಆಗಿರುವ ಡಾ. ತಲ್ಲೂರು ಶಿವರಾಮ ಶೆಟ್ಟಿಯವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದ ಸಂಸ ಬಯಲು ರಂಗಮಂದಿರದಲ್ಲಿ ನಡೆದ ಕೆಂಪೇಗೌಡ ಕರ್ನಾಟಕ ಪ್ರಾದೇಶಿಕ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು. ಕಾರ್ಯಕ್ರಮದಲ್ಲಿ ಟ್ರಸ್ಟಿನ ಅಧ್ಯಕ್ಷ ರಮೇಶ್ ಸುರ್ವೆ, ಗೌರವಾಧ್ಯಕ್ಷ ರಮೇಶ್ ಎನ್. ಅಂಗಡಿ, ಬೆಳಗಾವಿ ಚಿಪ್ಪಲಕಟ್ಟಿ ಹಿರೇಮಠದ ಡಾ.ಕಲ್ಮೇಶ್ವರ ಸ್ವಾಮಿ, ಬೆಂಗಳೂರು ವನಕಲ್ಲು ಶ್ರೀ ಮಲ್ಲೇಶ್ವರ ಸುಕ್ಷೇತ್ರದ ಡಾ. ಬಸವರಮಾನಂದ ಮಹಾಸ್ವಾಮಿ, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶ್ ಕುಮಾರ್ ಎಸ್. ಹೊಸಮನಿ, ನಟಿ ಮೀನಾ, ನಟ ಶಂಕರ ಭಟ್, ಸಾಹಿತಿ ಡಾ. ಮಹಂತೇಶ ಮಲ್ಲನಗೌಡರ ಹಾಗೂ ಮತ್ತಿತರ…

Read More

ಮೈಸೂರು : ಕುಮಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್ (ರಿ.) ಮೈಸೂರು ಪ್ರಸ್ತುತ ಪಡಿಸುವ 32ನೇ ‘ಅಂತರರಾಷ್ಟ್ರೀಯ ನಿರಂತರ ಕಲೆಮನೆ ಫೆಸ್ಟಿವಲ್’ ಕಾರ್ಯಕ್ರಮವು ದಿನಾಂಕ 07-01-2024ರಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನ ಕಲೆಮನೆ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ವಿಶೇಷ ಆಹ್ವಾನಿತರಾದ ಯು.ಸಿ.ಎಫ್.ಎ., ಯು.ಒ.ಎಂ. ಸಂಗೀತ ಬೋಧನಾ ವಿಭಾಗದ ವಿದುಷಿ ಶ್ರೀಮತಿ ಆರ್.ಕೆ. ಚಂದ್ರಿಕಾ, ಶ್ರೀ ಸದ್ಗುರು ಸಂಗೀತ ಶಾಲೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ವಿ. ಮಹಾಲಕ್ಷ್ಮಿ, ಯು.ಸಿ.ಎಫ್.ಎ., ಯು.ಒ.ಎಂ. ಸಂಗೀತ ಬೋಧನಾ ವಿಭಾಗದ ಡಾ.ಎಸ್. ಗೀತಾ, ಮೈಸೂರಿನ ಕೆ.ಎಸ್.ಜಿ.ಎಚ್. ಸಂಗೀತ ವಿಶ್ವವಿದ್ಯಾಲಯದ ಬೋಧನಾ ವಿಭಾಗದ ಕಲಾರತ್ನ ವಿದ್ವಾನ್ ರಾವ್ ಆರ್. ಶರತ್, ಶಾಂತಲಾ ಅಕಾಡೆಮಿ ಆಫ್ ಮ್ಯೂಸಿಕ್ & ಡ್ಯಾನ್ಸ್ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ ಶಾಂತಲಾ ವಟ್ಟಂ, ಖ್ಯಾತ ನೃತ್ಯ ಗುರು ಹಾಗೂ ಮೈಸೂರು ಆರ್ಟ್ ಗ್ಯಾಲರಿಯ ಕಾರ್ಯದರ್ಶಿಯಾದ ಡಾ. ಜಮುನಾರಾಣಿ ಮಿರ್ಲೆ, ಮಂಡ್ಯ ಮದ್ದೂರಿನ ಶ್ರೀ ನಂದಿಕೇಶ್ವರ ಭರತನಾಟ್ಯ ಕಲಾಶಾಲೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿದುಷಿ…

Read More

ಮಂಗಳಾದೇವಿ : ಯಕ್ಷ ಪ್ರತಿಭೆ ಮಂಗಳೂರು ವತಿಯಿಂದ 15ನೇ ವರ್ಷದ ಸಂಭ್ರಮ, ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಕಾರ್ಯಕ್ರಮವು ಶ್ರೀ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿ ದಿನಾಂಕ 23-12-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಕಟೀಲು ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ ಇವರು ಉದ್ಘಾಟಿಸಿ ಮಾತನಾಡುತ್ತಾ “ಕಲಾವಿದರನ್ನು, ಕಲಾ ಪೋಷರಕನ್ನು ಗುರುತಿಸಿ ಅವರಿಗೆ ಸಮ್ಮಾನ, ಪ್ರಶಸ್ತಿ ಪ್ರದಾನ ಮಾಡುವುದು ಶ್ರೇಷ್ಠ ಕಾರ್ಯ. ವರ್ಷದಿಂದ ವರ್ಷಕ್ಕೆ ಗೋಪಾಲಕೃಷ್ಣ ಆಸ್ರಣ್ಣ ಅವರನ್ನು ಸಂಸ್ಮರಣೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಾಕಷ್ಟು ಸಂಘಟನೆಗಳು ಅವರ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡುತ್ತಿದೆ ಇಂದು ಸಂತೋಷದ ವಿಚಾರ, ಕಟೀಲಿನ ಒಂದು ಮೇಳ ಆರು ಮೇಳಗಳಾಗಿ ವಿಸ್ತರಣೆಗೊಳ್ಳಲೂ ಅವರೇ ಕಾರಣ ಎನ್ನಲು ಹೆಮ್ಮೆಯಾಗುತ್ತಿದೆ” ಎಂದು ಹೇಳಿದರು. ಮನಪಾ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮೂಡುಬಿದಿರೆಯ ಉದ್ಯಮಿ ಶ್ರೀಪತಿ ಭಟ್, ಬರ್ಕೆ ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷ ಸುಚೇಂದ್ರ ಅಮೀನ್, ಹರಿನಾರಾಯಣ ಬೈಪಡಿತ್ತಾಯ, ಸಂಸ್ಮರಣಾ ಸಮಿತಿ ಗೌರವಾಧ್ಯಕ್ಷ ಡಾ. ಹರಿಕೃಷ್ಣ…

Read More

ಮುಡಿಪು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ವತಿಯಿಂದ ಹರೇಕಳ ನ್ಯೂಪಡ್ಪು ಸರಕಾರಿ ಪ್ರೌಢಶಾಲೆಯಲ್ಲಿ ‘ಕನ್ನಡ ಸಂಭ್ರಮ’ ಕಾರ್ಯಕ್ರಮವು ದಿನಾಂಕ 29-12-2023ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರಾದ ಪ್ರೊ. ಬಿ.ಕೆ. ಸರೋಜಿನಿ ಇವರು “ಕನ್ನಡದಲ್ಲಿರುವ ಶಾಲಾ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಪರಿಭಾಷೆಗಳನ್ನು ನೀಡುವಾಗ ಇಂಗ್ಲಿಷ್ ಮತ್ತು ಸಂಸ್ಕೃತ ಪದಗಳನ್ನು ಹೆಚ್ಚು ಬಳಕೆ ಮಾಡುವುದರಿಂದ ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದ್ದು, ಸರಳ ಕನ್ನಡ ಪದಗಳನ್ನು ಅಳವಡಿಸುವ ಪ್ರಯತ್ನ ನಡೆಯಬೇಕಿದೆ. ಮಕ್ಕಳ ಸಾಹಿತ್ಯ ಎಳೆಯ ಮಕ್ಕಳಲ್ಲಿ ಭಾಷಾಭಿಮಾನವನ್ನೂ, ಕಲ್ಪನಾಶಕ್ತಿಯನ್ನೂ, ಮೌಲ್ಯಗಳನ್ನು ಬಿತ್ತುತ್ತವೆ. ಸರಕಾರ ಮತ್ತು ಸಂಘ ಸಂಸ್ಥೆಗಳು ಮಕ್ಕಳ ಸಾಹಿತ್ಯ ರಚನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು” ಎಂದು ಹೇಳಿದರು. ಅತಿಥಿಗಳಾಗಿ ಭಾಗವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಮಾತನಾಡಿ “ನಾವು ತುಳು, ಬ್ಯಾರಿ, ಕೊಂಕಣಿ ಯಾವ ಭಾಷೆಯನ್ನಾಡುವುದಾದರೂ ಕರ್ನಾಟಕದಲ್ಲಿರುವವರು ಕನ್ನಡಿಗರು ಎಂಬ ಭಾವನೆಯಿಂದ ಇರಬೇಕು. ಕನ್ನಡ ನನಗೆ ಎಲ್ಲವನ್ನೂ ನೀಡಿ…

Read More

ಕನ್ನಡದ ನಮ್ಮ ಸಂದರ್ಭದ ಬಹುಮುಖ್ಯ ಚಿಂತಕರಲ್ಲಿ ಲಕ್ಷ್ಮೀಶ ತೋಳ್ಪಾಡಿಯವರೂ ಒಬ್ಬರು. ತಮ್ಮ ವಿದ್ವತ್ಪೂರ್ಣ ಉಪನ್ಯಾಸಗಳಿಂದ, ಪ್ರಖರವಾದ ಯೋಚನೆಗಳ ಗುಚ್ಛದಂತಿರುವ ಬರವಣಿಗೆಗಳಿಂದ ನಾಡಿನಾದ್ಯಂತ ಪರಿಚಿತರಾದವರು. ಶ್ರೋತೃಗಳನ್ನು ಚಿಂತನೆಗೆ ಹಚ್ಚಿ ಮುನ್ನಡೆಸುವ ಅವರ ಮಾತಿನ ಶೈಲಿ ಅನನ್ಯವಾದುದು. ಸಾಹಿತಿ, ವಿಮರ್ಶಕ, ಚಿಂತಕ ಇಂತಹ ಉಪಾಧಿಗಳನ್ನೋ ಪ್ರಚಾರವನ್ನೋ ಯಾವತ್ತೂ ಇಷ್ಟಪಡದ ಅವರು ಸಹಜವಾಗಿ ಯೋಚಿಸುವ ಓರ್ವ ಜಿಜ್ಞಾಸು. ತಾನು ಯಾವುದೇ ವಿಷಯನ್ನು ಕುರಿತು ಮಾತನಾಡಿದರೂ ಅದರ ಬಗೆಗೆ ತೀವ್ರವಾಗಿ ಯೋಚಿಸಿ, ಹೊಸ ನೋಟಗಳನ್ನು ನೀಡಬಲ್ಲ ಸೃಜನಶೀಲ ಪ್ರತಿಭೆ ಅವರದ್ದು. ಹಾಗಾಗಿಯೇ ಸಹಜ ಕುತೂಹಲವನ್ನು ಬೆಳೆಸಿಕೊಂಡಿರುವ ಜ್ಞಾನ ಪಿಪಾಸುಗಳಿಗೆ ತೋಳ್ಪಾಡಿಯವರ ಸಂಪರ್ಕ ಹಿತವನ್ನುಂಟುಮಾಡಿದರೆ, ಪ್ರಚಾರ ಪ್ರಸಿದ್ಧಿ, ಸ್ಥಾನ-ಮಾನ ಬಯಸುವವರು ಅವರ ಹತ್ತಿರ ಸುಳಿಯುವುದಿಲ್ಲ. ಕನ್ನಡದಲ್ಲಿ ಕುರ್ತಕೋಟಿ, ಕಿ.ರಂ. ನಾಗರಾಜ ಮುಂತಾದವರನ್ನೊಳಗೊಂಡ ಮೌಖಿಕ ವಿದ್ವಾಂಸ ಪರಂಪರೆಯೊಂದನ್ನು ಗುರುತಿಸುವುದಿದೆ. ಇವರು ಬರೆದದ್ದು ಕಡಮೆ. ಆದರೆ ಉಪನ್ಯಾಸಕ್ಕೆ ನಿಂತರೆ, ಅವರ ಮೂಲಕ ಹರಿದು ಬರುವ ಜ್ಞಾನಪ್ರವಾಹವು ಎಂಥವರನ್ನೂ ವಿಸ್ಮಯಗೊಳಿಸುತ್ತದೆ. ತೋಳ್ಪಾಡಿಯವರನ್ನು ಇವರ ಸಾಲಿಗೆ ಸೇರಿಸಬಹುದು. ಅವರ ಉಪನ್ಯಾಸಗಳೆಂದರೆ ಮೊದಲೇ ಸಿದ್ಧಪಡಿಸಿಕೊಂಡ ಟಿಪ್ಪಣಿಗಳ…

Read More

ಕಾಸರಗೋಡು : ರಂಗಚಿನ್ನಾರಿ ಕಾಸರಗೋಡು (ರಿ.) ಇದರ ಸಂಗೀತ ಘಟಕ ‘ಸ್ವರಚಿನ್ನಾರಿ’ ಏರ್ಪಡಿಸುವ ಕನ್ನಡ ನಾಡಗೀತೆ – ಭಾವಗೀತೆಗಳ ಕಲಿಕಾ ಶಿಬಿರ ‘ಕನ್ನಡ ಧ್ವನಿ’ ಕಾರ್ಯಕ್ರಮವು ದಿನಾಂಕ 06-01-2024ರಂದು ಬೆಳಿಗ್ಗೆ 10 ಗಂಟೆಗೆ ಕಾಸರಗೋಡಿನ ಡಯಟ್ ಮಾಯ್ಪಾಡಿ ಇಲ್ಲಿ ನಡೆಯಲಿದೆ. ರಂಗಚಿನ್ನಾರಿಯ ನಿರ್ದೇಶಕರಾದ ಶ್ರೀ ಕೆ. ಸತೀಶ್ಚಂದ್ರ ಭಂಡಾರಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಡಯಟ್ ಮಾಯ್ಪಾಡಿಯ ಪ್ರಾಂಶುಪಾಲರಾದ ಡಾ. ಕೆ. ರಘುರಾಮ್ ಭಟ್ ಇವರು ಉದ್ಘಾಟಿಸಲಿದ್ದಾರೆ. ಖ್ಯಾತ ಗಾಯಕರಾದ ಶ್ರೀ ಕಿಶೋರ್ ಪೆರ್ಲ ಮತ್ತು ಶ್ರೀಮತಿ ಪ್ರತಿಜ್ಞಾ ರಂಜಿತ್ ಶಿಬಿರ ನಿರ್ದೇಶಕರಾಗಿ ಈ ಕನ್ನಡ ನಾಡಗೀತೆ – ಭಾವಗೀತೆಗಳ ಕಲಿಕಾ ಶಿಬಿರವನ್ನು ನಡೆಸಲಿದ್ದಾರೆ.

Read More

ಮಂಗಳೂರು : ಶ್ರೀ ಶನೈಶ್ಚರ ದೇವಸ್ಥಾನ ಬಜ್ಪೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 06-01-2024ರಂದು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಇದೇ ಸಂದರ್ಭದಲ್ಲಿ ಅಪರಾಹ್ನ 2 ಗಂಟೆಯಿಂದ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹಾಗೂ ಬಳಗದವರಿಂದ ‘ಶ್ರೀ ಶನೈಶ್ಚರ ಮಹಾತ್ಮೆ – ವಿಕ್ರಮಾದಿತ್ಯ ಚರಿತ್ರೆ’ ಎಂಬ ತುಳು ಯಕ್ಷಗಾನ ತಾಳಮದ್ದಳೆಯನ್ನು ಏರ್ಪಡಿಸಲಾಗಿದೆ. ಹಿಮ್ಮೇಳದಲ್ಲಿ ಭಾಗವತರು ತೋನ್ಸೆ ಪುಷ್ಕಳ ಕುಮಾರ್ ಮತ್ತು ಪ್ರಶಾಂತ ರೈ ಪುತ್ತೂರು, ಮೃದಂಗದಲ್ಲಿ ರೋಹಿತ್ ಉಚ್ಚಿಲ್ ಹಾಗೂ ಚೆಂಡೆಯಲ್ಲಿ ಜಿತೇಶ್ ಕೋಳ್ಯೂರು ಸಹಕರಿಸಲಿರುವರು. ಭಾಸ್ಕರ ರೈ ಕುಕ್ಕುವಳ್ಳಿ, ವಸಂತ ದೇವಾಡಿಗ, ಪಶುಪತಿ ಶಾಸ್ತ್ರಿ ಶಿರಂಕಲ್ಲು, ರವಿ ಅಲೆವೂರಾಯ ವರ್ಕಾಡಿ, ಡಾ. ದಿನಕರ ಎಸ್.ಪಚ್ಚನಾಡಿ ಅರ್ಥಧಾರಿಗಳಾಗಿ ಭಾಗವಹಿಸಲಿರುವರು. ವಾರ್ಷಿಕ ಪೂಜಾ ವಿಧಿಗಳನ್ನು ರಾಜೇಂದ್ರ ಪ್ರಸಾದ್ ಎಕ್ಕಾರ್, ಅಭಿಜಿತ್ ಆನಂದ ಭಟ್ ಅವರ ನೇತೃತ್ವದಲ್ಲಿ ರವಿ ಶಾಂತಿ, ಶ್ರೀಧರ ಶಾಂತಿ, ಯಶೋಧರ ಶಾಂತಿ, ಜಗದೀಶ ಶಾಂತಿ ಮೊದಲಾದ ಅರ್ಚಕ ವೃಂದದವರು ನಡೆಸಿ ಕೊಡಲಿದ್ದಾರೆ.

Read More

ಬೆಂಗಳೂರು : ಸಂಚಾರಿ ಥಿಯೇಟರ್ ಪ್ರಸ್ತುತ ಪಡಿಸುವ ‘ನರಿಗಳಿಗೇಕೆ ಕೋಡಿಲ್ಲ ?’ ಎಂಬ ಮಕ್ಕಳ ನಾಟಕವು ದಿನಾಂಕ 07-01-2023ರಂದು ಬೆಂಗಳೂರಿನ ರಂಗಶಂಕರದಲ್ಲಿ ಮಧ್ಯಾಹ್ನ ಗಂಟೆ 3.30ಕ್ಕೆ ಹಾಗೂ ಸಂಜೆ ಗಂಟೆ 7.30ಕ್ಕೆ ನಡೆಯಲಿದೆ. ಐವತ್ತು ಅರವತ್ತು ವರುಷಗಳ ಹಿಂದೆ ಮಕ್ಕಳ ಪುಸ್ತಕ ಎಂಬ ಹೆಸರಿನಲ್ಲಿ ಹೊರಡುತ್ತಿದ್ದ ಮಾಸಪತ್ರಿಕೆಯಲ್ಲಿ ಪ್ರಕಟವಾಗಿದ್ದ, ಕುವೆಂಪು ಅವರು ರಚಿಸಿರುವ ಕಥೆ ನರಿಗಳೀಗೇಕೆ ಕೋಡಿಲ್ಲ ? ಎಲ್ಲಾ ಜೀವರಾಶಿಯನ್ನು ತನ್ನ ತೆಕ್ಕೆಯಲ್ಲಿಟ್ಟು ಲಾಲಿಸುವ, ಸಮತೋಲನದಿಂದ ಕಾಪಾಡುವ, ತನ್ನೊಳಗೆ ಕಾರುಣ್ಯ, ಕಾಠಿಣ್ಯ ಎರಡೂ ಇವೆ ಎಂಬುದನ್ನು ಮನದಟ್ಟು ಮಾಡುವ, ಕೊಲ್ಲುವುದಕ್ಕಿಂತಲೂ ಕಾಯುವುದು ಮುಖ್ಯ ಎಂದು ಪಿಸುಮಾತಿನಲ್ಲಿ ಹೇಳುವ ಕತೆ ಇದು. ನಮ್ಮ ಮೇಲೆ ಸವಾರಿ ಮಾಡುವ ಅಹಂಕಾರವನ್ನು ಮುರಿದು ಎಸೆಯಬೇಕಾದ ಬಗ್ಗೆಯೂ ಮಾತನಾಡುವ, ನಿಸರ್ಗದ ತೊಟ್ಟಿಲಲ್ಲಿ ಕ್ರೌರ್ಯ ಇರಬಹುದು. ಆದರೆ ಕುತಂತ್ರಕ್ಕೆ, ಅಹಂಕಾರಕ್ಕೆ ಜಾಗವಿಲ್ಲ ಎನ್ನುವುದನ್ನು ಮನದಟ್ಟು ಮಾಡುವ ಕತೆ ಇದು. ಇದನ್ನು ಮಂಗಳಾ ಎನ್. ಮತ್ತು ಶಾಂತಾ ನಾಗರಾಜ ರಂಗರೂಪಕ್ಕೆ ತಂದಿದ್ದಾರೆ. ಶಶಿಧರ್ ಅಡಪ ಅವರ ವಿನ್ಯಾಸವಿದೆ. ಗಜಾನನ…

Read More

ಮಂಗಳೂರು : ಉಡುಪಿ ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಸಾಹಿತ್ಯ ಸಂಗಮ (ರಿ.) ಇದರ ಆಶ್ರಯದಲ್ಲಿ ಸಂದೀಪ ಸಾಹಿತ್ಯ ಆತ್ರಾಡಿ ಮತ್ತು ಪುನ್ನಾಗ ಪ್ರಕಾಶನ ಕಾರ್ಕಳ ಇವರ ‘ಪುಸ್ತಕ ಬಿಡುಗಡೆ’ ಕಾರ್ಯಕ್ರಮವು ದಿನಾಂಕ 06-01-2024ರಂದು ಅಪರಾಹ್ನ ಗಂಟೆ 3.00ರಿಂದ ಮುಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀಮತಿ ಇಂದಿರಾ ಹಾಲಂಬಿ ಇವರ ಎರಡು ಪುಸ್ತಕಗಳಾದ ‘ಅಂಬಾ ಪ್ರತಿಜ್ಞೆ’ ಹಾಗೂ ‘ಗಯ ಗಂಧರ್ವ ಪರಾಜಯ’ ಮತ್ತು ಶ್ರೀಮತಿ ಸಾವಿತ್ರಿ ಮನೋಹರ್ ಇವರ ನಾಟಕ ಕೃತಿ ‘ಪಂಚ ಪ್ರಹಸನಗಳು’ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಇವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಮಕ್ಕಳ ಸಾಹಿತ್ಯ ಸಂಗಮ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸರ್ವರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.

Read More