Author: roovari

ಕೋಟ : ಐವತ್ತರ ಸಂಭ್ರಮದ ಸುವರ್ಣ ಪರ್ವವನ್ನು ಆಚರಿಸುತ್ತಿರುವ ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ, ಲೇಖಕ, ಯಕ್ಷಗಾನ ಹಾಗೂ ನಾಟಕ ಕಲಾವಿದರಾದ ದಿವಂಗತ ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಎಚ್. ಶ್ರೀಧರ ಹಂದೆಯವರ ಹೆಸರಿನ 2025ರ ಸಾಲಿನ ‘ಉಡುಪ-ಹಂದೆ ಪ್ರಶಸ್ತಿ’ಗೆ ಯಕ್ಷಗಾನದ ಪ್ರಸಿದ್ಧ ಭಾಗವತರಾದ ಹೆರೆಂಜಾಲು ಗೋಪಾಲ ಗಾಣಿಗ ಮತ್ತು ರಾಷ್ಟೀಯ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್ ಆಯ್ಕೆಯಾಗಿದ್ದಾರೆ. ಹೆರೆಂಜಾಲು ಗೋಪಾಲ ಗಾಣಿಗ : ಕುಂದಾಪುರ ತಾಲೂಕಿನ ನಾಗೂರಿನ ಯಕ್ಷಗಾನ ಭಾಗವತ ಹೆರಂಜಾಲು ಗೋಪಾಲ ಗಾಣಿಗರು, ತಂದೆ ವೆಂಕಟರಮಣ ಗಾಣಿಗರಿಂದ ಬಳುವಳಿಯಾಗಿ ಬಂದ ಯಕ್ಷ ಸಂಪತ್ತನ್ನು ವಿಸ್ತರಿಸಿಕೊಂಡವರು. ಡಾ. ಶಿವರಾಮ ಕಾರಂತರ ನಿರ್ದೇಶನದ ಉಡುಪಿಯ ಯಕ್ಷಗಾನ ಕೇಂದ್ರವನ್ನು ಸೇರಿ, ಗುರು ನೀಲಾವರ ರಾಮಕೃಷ್ಣಯ್ಯ ಹಾಗೂ ಮಹಾಬಲ ಕಾರಂತರ ಗರಡಿಯಲ್ಲಿ ಪಳಗಿ, ಯಕ್ಷಾನದ ಹಿಮ್ಮೇಳ ಮತ್ತು ಮುಮ್ಮೇಳಗಳಲ್ಲಿ ಸಾಧನೆಗೈದರು. ಡಾ. ಶಿವರಾಮ ಕಾರಂತರ ಯಕ್ಷ ಬ್ಯಾಲೆ ತಂಡದ ಮೂಲಕ ರಷ್ಯ, ಲಂಡನ್,…

Read More

ಸಿದ್ದಾಪುರ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ, ಯಕ್ಷಗಾನ ಕಲಾರಂಗ (ರಿ.) ಉಡುಪಿ, ಯಕ್ಷ ನುಡಿಸಿರಿ ಬಳಗ (ರಿ.) ಸಿದ್ದಾಪುರ ಮತ್ತು ಯಕ್ಷ ಗುರುಕುಲ ಬೈಂದೂರು ಇವರ ಸಹಭಾಗಿತ್ವದಲ್ಲಿ ವಿಧಾನಸಭಾ ಕ್ಷೇತ್ರದ ನಾಲ್ಕು ಪ್ರೌಢಶಾಲೆಗಳ ‘ಕಿಶೋರ ಯಕ್ಷ ಸಂಭ್ರಮ -2024’ದ ಸಮಾರೋಪ ಸಮಾರಂಭವು ದಿನಾಂಕ 29 ಡಿಸೆಂಬರ್ 2024ರಂದು ಸಿದ್ದಾಪುರದ ಸರಕಾರಿ ಪ್ರೌಢಶಾಲೆಯ ಮುಂಭಾಗದಲ್ಲಿ ಪ್ರದರ್ಶನ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಜಗದೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಯಕ್ಷ ಸಂಭ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯರ ಮೂಲಕ ಪ್ರಮಾಣ ಪತ್ರ ವಿತರಿಸಲಾಯಿತು. ಮೂವರು ವಿದ್ಯಾರ್ಥಿಗಳು ಅನಿಸಿಕೆಯನ್ನು ಹಂಚಿಕೊಂಡರು. ಅಭ್ಯಾಗತರಾಗಿ ದಾನಿಗಳಾದ ಚಂದ್ರ ಕುಲಾಲ್, ಪ್ರವೀಣ್ ಪಟೇಲ್, ಚಂದ್ರಾನಂದ ಶೆಟ್ಟಿ, ಪಂಚಾಯತ್ ಉಪಾಧ್ಯಕ್ಷರಾದ ಕೃಷ್ಣ ಪೂಜಾರಿ ಭಾಗವಹಿಸಿದರು. ಕಾರ್ಯದರ್ಶಿ ಗೋಪಾಲ ಕಾಂಚನ್ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಇವರು ಶಾಸಕರಿಗೆ ಮತ್ತು ಪ್ರದರ್ಶನ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು. ಟ್ರಸ್ಟಿನ ಸದಸ್ಯರಾದ ನಾರಾಯಣ ಎಂ. ಹೆಗಡೆ ಉಪಸ್ಥಿತರಿದ್ದ ಕಾರ್ಯಕ್ರಮವನ್ನು ಬಾಲಕೃಷ್ಣ ಮಂಜ…

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ, ರಂಗಸಂಪದ ಕೋಟ, ಧಮನಿ ಟ್ರಸ್ಟ್ ತೆಕ್ಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ‘ಸಿನ್ಸ್ 1999 ಶ್ವೇತಯಾನ-95’ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ‘ನಾಟಕಾಷ್ಟಕ’ದ ಏಳನೇ ದಿನದ ಕಾರ್ಯಕ್ರಮ ದಿನಾಂಕ 01 ಜನವರಿ 2025ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕಲಾಪೋಷಕ ಕೋಟ ಗಣಪತಿ ಟಿ. ಶ್ರೀಯಾನರನ್ನು ಅಭಿನಂದಿಸಿ ಮಾತನಾಡಿದ ಬನ್ನೂರು ಶಾರದಾ ಕಾಲೇಜಿನ ಉಪನ್ಯಾಸಕ ರಾಘವೇಂದ್ರ ಶೆಟ್ಟಿ ‘ನಾಟಕಾಷ್ಟಕದ ಈವರೆಗಿನ ನಾಟಕಗಳು ಭಿನ್ನ ಭಿನ್ನವಾಗಿ ರಂಗದಲ್ಲಿ ಕಂಡವು. ವೃತ್ತಿಪರ ಕಲಾವಿದರನ್ನೂ ಮೀರಿಸುವಂತಹ ರಂಗ ಪ್ರಸ್ತುತಿ ಕೆಲವು ಮಕ್ಕಳ ರಂಗಭೂಮಿಯ ನಾಟಕಗಳಲ್ಲಾದವು. ತೆಕ್ಕಟ್ಟೆ ಭಾಗದಲ್ಲಿ ರಂಗಭೂಮಿಯ ಪ್ರೇಕ್ಷಕರನ್ನು ಹಿಡಿದಿಟ್ಟುಕೊಂಡ ಹೆಗ್ಗಳಿಕೆ ಈ ಸಂಸ್ಥೆಯದ್ದು. ಈ ಸಂದರ್ಭವನ್ನು ನೆಪ ಮಾಡಿಕೊಂಡು ಕಲಾ ಪೋಷಕರನ್ನು ಗುರುತಿಸಿ, ಗೌರವಿಸಿದ ಚುಟುಕು ಸಭಾ ಕಾರ್ಯಕ್ರಮ ಇತರರಿಗೆ ಮಾರ್ಗದರ್ಶನವಾಗಿದೆ.” ಎಂದರು. ಎಸ್. ಎಮ್. ಎಸ್. ಕಾಲೇಜಿನ ಪ್ರಾಂಶುಪಾಲರಾದ ಅಭಿಲಾಷ ಸೋಮಯಾಜಿ, ರಂಗ ನಿರ್ದೇಶಕ ರೋಹಿತ್ ಎಸ್. ಬೈಕಾಡಿ, ಉದ್ಯಮಿ ಗೋಪಾಲ ಪೂಜಾರಿ, ಗಣೇಶ್ ಕೊಮೆ, ಸಾತ್ಯಕಿ…

Read More

ಕಟೀಲು : ಶ್ರೀ ದುರ್ಗಾ ಮಕ್ಕಳ ಮೇಳ (ರಿ.) ಇದರ 16ನೇ ವಾರ್ಷಿಕ ಕಲಾಪರ್ವವು ದಿನಾಂಕ 28 ಡಿಸೆಂಬರ್ 2024ರಂದು ಕಟೀಲು ಸರಸ್ವತೀ ಸದನದಲ್ಲಿ ಉದ್ಘಾಟನೆಗೊಂಡಿತು. ಕಿನ್ನಿಗೋಳಿ ಯಕ್ಷಲಹರಿ ಅಧ್ಯಕ್ಷ ರಘುನಾಥ ಕಾಮತ್ ಇವರ ಕಲಾಪರ್ವದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಮಾರಂಭದಲ್ಲಿ ಭಾಗವಹಿಸಿದ ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಇವರು ಮಾತನಾಡಿ “ಮಕ್ಕಳಲ್ಲಿ ಕಲೆಗಳ ಬಗ್ಗೆ ಆಸಕ್ತಿ ಮೂಡಿಸಿದಾಗ ಅವರಲ್ಲಿ ಶಿಸ್ತು ಸಂಸ್ಕಾರ ಜ್ಞಾನಾಭಿವೃದ್ಧಿ ಸಾಧ್ಯ. ಶಾಲಾ ಪಠ್ಯಗಳಲ್ಲಿ ಪುರಾಣದ ವಿಷಯಗಳು ಕಡಿಮೆಯಾಗುತ್ತಿದ್ದು, ಯಕ್ಷಗಾನದ ಬಗ್ಗೆ ಅಸಕ್ತಿ ಮೂಡಿಸುವ ಅಗತ್ಯವಿದೆ. ಚೌಕಿಗೆ ಮಕ್ಕಳು ಅಸಕ್ತಿಯಿಂದ ಬಂದು ವೇಷಹಾಕುವುದನ್ನು ಕುತೂಹಲದಿಂದ ನೋಡುತ್ತಿದ್ದ ದಿನಗಳು ಬದಲಾಗಿವೆ. ಯಕ್ಷಗಾನಕ್ಕೆ ಪ್ರಸಿದ್ಧವಾದ ಕಟೀಲಿನಲ್ಲಿ ಮಕ್ಕಳ ಮೇಳದ ಮೂಲಕ ಯಕ್ಷಗಾನ ಕಲಿಸುವ ಅಭಿನಂದನೀಯ ಕೆಲಸ ಆಗುತ್ತಿದೆ” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಖ್ಯಾತ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್ ಇವರಿಗೆ ‘ದುರ್ಗಾ ಮಕ್ಕಳ ಮೇಳ’ ಪ್ರಶಸ್ತಿ, ಹಿಮ್ಮೇಳ ಕಲಾವಿದ ರಾಮಪ್ರಕಾಶ ಕಲ್ಲೂರಾಯರಿಗೆ ‘ಶ್ರೀನಿಧಿ ಅಸ್ರಣ್ಣ ಪ್ರಶಸ್ತಿ’ ನೀಡಿ…

Read More

ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸಾಪ್ತಾಹಿಕ ನೃತ್ಯಸರಣಿ ಕಾರ್ಯಕ್ರಮವು ದಿನಾಂಕ 06 ಜನವರಿ 2025ರಂದು ಸಂಜೆ ಗಂಟೆ 6-25ಕ್ಕೆ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ಕುಮಾರಿ ಪ್ರಜ್ಞಾ ಪಿ. ಶರ್ಮ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ. ವಿದುಷಿ ಅರ್ಚನಾ ಪುಣ್ಯೇಶ್ ಇವರ ಶಿಷ್ಯೆಯಾಗಿರುವ ಪ್ರಜ್ಞಾ ಭರತನಾಟ್ಯ ಮತ್ತು ಕೂಚಿಪುಡಿ ಎರಡೂ ಪ್ರಕಾರಗಳನ್ನೂ ಅಭ್ಯಾಸ ಮಾಡಿರುವ ಕಲಾವಿದೆ. 2023ರಲ್ಲಿ ಭರತನಾಟ್ಯ ರಂಗಪ್ರವೇಶವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಇವಳು ಕೆ.ಎಸ್.ಇ.ಇ.ಬಿ. ನಡೆಸುವ ಭರತನಾಟ್ಯ ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಗಳನ್ನು ಉನ್ನತ ಶ್ರೇಣಿಯಲ್ಲಿ ಮತ್ತು ಕೂಚಿಪುಡಿ ಜೂನಿಯರ್ ಪರೀಕ್ಷೆಯಲ್ಲಿ 4ನೇ ಸ್ಥಾನ ಪಡೆದು ಯಶಸ್ವಿಯಾಗಿ ಪೂರ್ಣಗೊಳಿಸಿರುತ್ತಾರೆ ಮತ್ತು ಈ ವರ್ಷ ಕೂಚಿಪುಡಿ ಸೀನಿಯರ್ ಪರೀಕ್ಷೆಯನ್ನು ಮುಗಿಸಿರುತ್ತಾಳೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಕೊಡಲ್ಪಡುವ ಶಿಷ್ಯ ವೇತನ…

Read More

ಕನ್ನಡ ನೆಲ, ಸಂಸ್ಕೃತಿಯ ಕುರಿತಂತೆ ಆಳವಾಗಿ ಅಧ್ಯಯನ ಮಾಡಿದ ಶ್ರೇಷ್ಠ ಕನ್ನಡದ ಸಂಶೋಧಕರಲ್ಲಿ ಶಂ.ಬಾ. ಜೋಶಿಯವರು ಒಬ್ಬರು. ಕನ್ನಡ, ಇಂಗ್ಲೀಷ್, ಸಂಸ್ಕೃತ, ಮರಾಠಿ ಭಾಷೆಗಳ ಮೇಲೆ ಪ್ರಭುತ್ವ ಹೊಂದಿದ್ದ ಶಂ.ಬಾ. ಜೋಶಿಯವರ ಅರಿವಿನ ಹರವು ವಿಶಾಲವಾದುದ್ದು. ಕನ್ನಡ ಸಂಶೋಧನಾ ಕ್ಷೇತ್ರದಲ್ಲಿ ಇವರು ಮಾಡಿದ ಸಾಧನೆ ವಿಶಿಷ್ಟವಾದುದು. ಗೋವಿಂದ ಪೈಯವರ ಸಮಕಾಲೀನರಾಗಿದ್ದ ಶಂ.ಬಾ. ಜೋಶಿಯವರು ಕನ್ನಡ ಸಾಂಸ್ಕೃತಿಕ ಶೋಧದಲ್ಲಿ ತಾವು ಬಳಸಿದ ವಿಶ್ಲೇಷಣಾ ವಿಧಾನ ಮತ್ತು ಅಧ್ಯಯನ ಕ್ರಮಗಳಿಂದ ವಿಶಿಷ್ಟರಾಗಿದ್ದಾರೆ. ಸಂಸ್ಕೃತಿಯ ಬಹುಶಿಸ್ತೀಯ ಅಧ್ಯಯನ ವಿಧಾನ, ಪರಿಕಲ್ಪನಾತ್ಮಕವಾಗಿ ಸಂಸ್ಕೃತಿಯ ವ್ಯಾಖ್ಯಾನದ ಪ್ರಯತ್ನ, ಗತಕಾಲದ ವೈಚಾರಿಕ ಆಕೃತಿಗಳು, ವರ್ತಮಾನವನ್ನು ಪ್ರಭಾವಿಸುವ ಬಗೆಯನ್ನು ಅರಿಯುವ ಹಂಬಲ ಮತ್ತು ನೈತಿಕ ಆಯ್ಕೆಯನ್ನು ಮಾಡುವ ಸ್ಥೈರ್ಯ ಇವುಗಳಿಂದಾಗಿ ಶಂ.ಬಾ.ರವರು ಮುಖ್ಯರಾಗುತ್ತಾರೆ. ಕನ್ನಡ ಸಾರಸ್ವತ ಲೋಕದಲ್ಲಿ ‘ಶಂ.ಬಾ.’ ಎಂದೇ ಪ್ರಖ್ಯಾತರಾದ ಶಂಕರ ಬಾಳದೀಕ್ಷಿತ ಜೋಶಿಯವರು, ಬಾಳದೀಕ್ಷಿತ ಜೋಶಿ ಮತ್ತು ಉಮಾಬಾಯಿ ದಂಪತಿಗಳ ಮಗನಾಗಿ 1896ರ ಜನವರಿ 4ರಂದು ಗುರ್ಲಹೊಸೂರಿನಲ್ಲಿ ಜನಿಸಿದರು. ತಮ್ಮ ವಿದ್ಯಾಭ್ಯಾಸವನ್ನು ಗುರ್ಲಹೊಸೂರು, ಬೊಮ್ಮನಹಳ್ಳಿ, ಪುಣೆ ಮತ್ತು ಧಾರವಾಡಗಳಲ್ಲಿ…

Read More

ಉಡುಪಿ : ನಾಡಿನ ಹಿರಿಯ ಕವಿ ಪತ್ರಕರ್ತ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಕೊನೆಯ ದಿನಾಂಕ 15 ಮಾರ್ಚ್ 2025. ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ, ಎಂ. ಜಿ. ಎಂ. ಕಾಲೇಜು ಆವರಣ, ಉಡುಪಿ 576102. ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ ರೂಪಾಯಿ 10,000 ಬಹುಮಾನವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ ಹಾಗೂ 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವನಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುವುದು. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ ಬ್ಲಾಗ್: https://govindapairesearch.blogspot.com ದೂರವಾಣಿ ಸಂಖ್ಯೆ ಕಛೇರಿ : 0820-2521159 ಅಥವಾ ಮೊಬೈಲ್‌ ಸಂಖ್ಯೆ 9449471449 / 9480575783 ಬಹುಮಾನದ ಉಳಿದ…

Read More

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ (ಮಾಹೆ) ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಜಂಟಿ ಆಶ್ರಯದಲ್ಲಿ ಡಾ. ಎನ್. ಟಿ. ಭಟ್ ವಿರಚಿತ ‘ಪಂಪ ಭಾರತ ರೀಟೋಲ್ಡ್ ಆ್ಯಸ್ ಇಂಗ್ಲೀಷ್ ನರೇಟಿವ್’ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 06 ಜನವರಿ 2025ರಂದು ಸಂಜೆ ಘಂಟೆ 4.00 ರಿಂದ ಉಡುಪಿಯ ಎಂ. ಜಿ. ಎಂ. ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಉಡುಪಿಯ ಎಂ. ಜಿ. ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಉಡುಪಿಯ ರಾ. ಗೋ. ಪೈ. ಸಂ. ಕೇಂದ್ರ ಇದರ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ. ಬಿ. ಎ. ವಿವೇಕ ರೈ ಕೃತಿ ಲೋಕಾರ್ಪಣೆಗೊಳಿಸಲಿದ್ದಾರೆ. ವಿಮರ್ಶಕ ಹಾಗೂ ಹಿರಿಯ ಸಾಹಿತಿಗಳಾದ ಶ್ರೀ ರಮೇಶ್ ಭಟ್ ಬೆಳಗೋಡು ಕೃತಿ ಪರಿಚಯ ಮಾಡಲಿದ್ದಾರೆ.

Read More

ಕುಂದಾಪುರ : ಪ್ರದರ್ಶನ ಸಂಘಟನಾ ಸಮಿತಿ ಕುಂದಾಪುರ ಮತ್ತು ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಇದರ ವತಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರದ ಆರು ಪ್ರೌಢಶಾಲೆಗಳ ‘ಕಿಶೋರ ಯಕ್ಷಗಾನ ಸಂಭ್ರಮ’ವನ್ನು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ದಿನಾಂಕ 01 ಜನವರಿ 2025ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಿದರು. ಕುಂದಾಪುರ ಶಾಸಕರಾದ ಶ್ರೀ ಕಿರಣ್ಕುಲಮಾರ್ ಕೊಡ್ಗಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಕುಂದಾಪುರ ಉಪವಿಭಾಗ ಅಧಿಕಾರಿಗಳಾದ ಮಹೇಶ್ಚಂದ್ರ ಕೆ., ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಮೋಹನ್ದಾರಸ್ ಶೆಣೈ, ಕುಂದಾಪುರ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಆದರ್ಶ ಹೆಬ್ಬಾರ್, ಕಾವ್ರಡಿ ಸಿಎ ಬ್ಯಾಂಕ್ನದ ಅಧ್ಯಕ್ಷರಾದ ಸದಾನಂದ ಬಳ್ಕೂರು, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಭಾಗವಹಿಸಿದ್ದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಗೈದರು. ಗಣೇಶ್ ಬ್ರಹ್ಮಾವರ ಸಹಕರಿಸಿ, ನಾರಾಯಣ…

Read More

ಮಂಡ್ಯ : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ಕರ್ನಾಟಕ ಸಂಘ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ‘ಕೆ.ವಿ. ಶಂಕರಗೌಡ ನೆನಪಿನ ನಾಟಕೋತ್ಸವ’ವನ್ನು ದಿನಾಂಕ 09 ಜನವರಿ 2025ರಿಂದ 11 ಜನವರಿ 2025ರವರೆಗೆ ಮಂಡ್ಯದ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ರಂಗಮಂದಿರದಲ್ಲಿ ಆಯೋಜಿಸಿದೆ. ದಿನಾಂಕ 09 ಜನವರಿ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಸಮುದಾಯ ತಂಡದವರಿಂದ ಶ್ರೀ ನಟರಾಜ್ ಹೊನ್ನವಳ್ಳಿ ಇವರ ನಿರ್ದೇಶನದಲ್ಲಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಆಧಾರಿತ ‘ಜುಗಾರಿ ಕ್ರಾಸ್’ ನಾಟಕ ಪ್ರಸ್ತುತಗೊಳ್ಳಲಿದೆ. ದಿನಾಂಕ 10 ಜನವರಿ 2025ರಂದು ಸಂಜೆ 5-00 ಗಂಟೆಗೆ ಶ್ರೀಮತಿ ಬಿ.ಎನ್. ಶಶಿಕಲಾ ಇವರ ನಿರ್ದೇಶನದಲ್ಲಿ ಮೈಸೂರಿನ ಶಶಿ ಥಿಯೇಟರ್ (ರಿ.) ಪ್ರಸ್ತುತ ಪಡಿಸುವ ನಾಟಕ ಡಾ. ಎಚ್.ಎಸ್. ವೆಂಕಟೇಶ ಮೂರ್ತಿಯವರ ‘ಉರಿಯ ಉಯ್ಯಾಲೆ’. ದಿನಾಂಕ 11 ಜನವರಿ 2025ರಂದು ಸಂಜೆ 4-00 ಗಂಟೆಗೆ ಮಂಡ್ಯದ ಮಾಂಡವ್ವ ಕಲಾ ಟ್ರಸ್ಟ್ ತಂಡದವರು ಶ್ರೀ ಕಾರಸವಾಡಿ ಸುರೇಶ್ ಇವರ ನಿರ್ದೇಶನದಲ್ಲಿ ‘ಗದಾಯುದ್ಧ’ ಪೌರಾಣಿಕ ನಾಟಕದ ಪ್ರದರ್ಶನ…

Read More