Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆ್ಯಂಡ್ ಕಲ್ಚರಲ್ ಹೆರಿಟೇಜ್ (ಇಂಟಾಕ್)ನ ಮಂಗಳೂರು ಶಾಖೆ, ಆರ್ಟ್ ಕೆನರಾ ಟ್ರಸ್ಟ್ ಮತ್ತು ಚಿರಂತನ ಚಾರಿಟೇಬಲ್ ಟ್ರಸ್ಟ್ ಇದರ ಸಹಯೋಗದೊಂದಿಗೆ ಪ್ರಸ್ತುತ ಪಡಿಸುವ ಕರ್ನಾಟಕದ ಸಂಗೀತ ಪರಂಪರೆ ಸರಣಿ 7ರಲ್ಲಿ ವಿಶ್ವ ಸಂಗೀತ ದಿನದಂದು ಬೈಠಕ್ @ ಕೊಡಿಯಾಲ್ಗುತ್ತು ಸಂಗೀತ ಕಛೇರಿಯನ್ನು ದಿನಾಂಕ 21 ಜೂನ್ 2025ರಂದು ಸಂಜೆ 5-30 ಗಂಟೆಗೆ ಕೊಡಿಯಾಲ್ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿಂದೂಸ್ತಾನಿ ಗಾಯಕಿ ವಿಭಾ ಎಸ್. ನಾಯಕ್ ಇವರ ಹಾಡುಗಾರಿಕೆಗೆ ರಾಜೇಶ್ ಭಾಗವತ್ ತಬಲಾ ಹಾಗೂ ಕುಮಾರಿ ಮೇಧಾ ಭಟ್ ಇವರು ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ.
ಸ್ವಾತಂತ್ರ್ಯಪ್ರಿಯರ ಮನಸ್ಸನ್ನು ಪ್ರಚೋದಿಸುವ ಕಮ್ಯೂನಿಸ್ಟ್ ಪಕ್ಷವು ನಡೆಸಿದ ಲೋಕೋತ್ತರ ಹೋರಾಟಗಳಲ್ಲಿ ಕಯ್ಯೂರು ರೈತ ಹೋರಾಟವೂ ಒಂದು. ಅಲ್ಲಿನ ರೈತಾಪಿ ಸಂಗಾತಿಗಳಾದ ಮಠತ್ತಿಲ್ ಅಪ್ಪು, ಕೋಯಿತ್ತಾಟಿಲ್ ಚಿರುಕಂಡನ್, ಪೊಡೋರ ಕುಂಞಂಬು ನಾಯರ್ ಮತ್ತು ಅಬೂಬಕ್ಕರನ್ನು ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತವು 1943 ಮಾರ್ಚ್ 29ರಂದು ಗಲ್ಲಿಗೇರಿಸಿತು. ಕಯ್ಯೂರು ತೇಜಸ್ವಿನಿ ನದಿಯ ತೀರವು ಈ ಕ್ರಾಂತಿಕಾರಿಗಳ ಸಮರ ಗೀತೆಯನ್ನು ಇಂದಿಗೂ ಹಾಡುತ್ತಿದೆ. ಕಯ್ಯೂರಿನ ಚರಿತ್ರೆಯು ಕಾದಂಬರಿಯಾಗಿ, ಕ್ರಾಂತಿಗೀತೆಯಾಗಿ, ಚಲನಚಿತ್ರವಾಗಿ ಜನರ ನಡುವೆ ಹರಿದಾಡುತ್ತಿದೆ. ಭಾರತ ದೇಶದ ಸ್ವಾತಂತ್ರ್ಯ ಹೋರಾಟದ ಪುಟಗಳಲ್ಲಿ ಕಯ್ಯೂರು ಹೋರಾಟಕ್ಕೆ ದೊರಕಬೇಕಾದ ಸ್ಥಾನ ದೊಡ್ಡದು. ಸ್ವಾತಂತ್ರ್ಯಕ್ಕಾಗಿ ನಡೆಸಿದ ಕಯ್ಯೂರು ಸಮರವೇ ಈ ಕಾದಂಬರಿಯ ವಸ್ತು. ಈ ಹೋರಾಟಕ್ಕೆ ಸಮೀಪದ ನಿರೀಕ್ಷಕರಾಗಿದ್ದ ಕನ್ನಡ ಪ್ರಗತಿಶೀಲ ಲೇಖಕ ನಿರಂಜನರು ಬ್ರಿಟಿಷ್ ಏಕಾಧಿಪತ್ಯದ ಕರಾಳ ವ್ಯವಸ್ಥೆಯ ವಿರುದ್ಧ ದಂಗೆಯೆದ್ದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ನಾಲ್ವರು ಹೋರಾಟಗಾರರ ವೀರಗಾಥೆಯನ್ನು ಸರಳ ಭಾಷೆಯಲ್ಲಿ, ಓದುಗರ ಕುತೂಹಲವನ್ನು ಕೆರಳಿಸುವಂತೆ, ದೇಶಪ್ರೇಮ ಹಾಗೂ ಕ್ರಾಂತಿಯನ್ನು ಬಡಿದೆಬ್ಬಿಸುವಂತೆ ವಿವರಿಸಿದ್ದಾರೆ. ಈ ಕಾದಂಬರಿಯ ಮುಖ್ಯ…
ಬೆಂಗಳೂರು : ಸಪ್ತಕ ಬೆಂಗಳೂರು ಇದರ ವತಿಯಿಂದ ‘ಗಾಯನ ಸನ್ಮಾನ ವಂದನ’ ಕಾರ್ಯಕ್ರಮವನ್ನು ದಿನಾಂಕ 21 ಜೂನ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಸೇವಾ ಸದನದಲ್ಲಿ ಆಯೋಜಿಸಲಾಗಿದೆ. ಶ್ರೀಮತಿ ಅರ್ಚನ ಶೆಣೈ ಇವರ ಹಾಡುಗಾರಿಕೆಗೆ ಯೋಗೀಶ್ ಭಟ್ ತಬಲಾ ಮತ್ತು ವಿಘ್ನೇಶ್ ಭಾಗವತ್ ಹಾರ್ಮೋನಿಯಂ ಸಾಥ್ ನೀಡಲಿದ್ದಾರೆ. ತಬಲಾ ವಾದಕ ಜಿ.ಜಿ. ಹೆಗಡೆ ಇವರನ್ನು ಸನ್ಮಾನಿಸಲಾಗುವುದು. ಡಾ. ಗಜಾನನ್ ಸಭಾಹಿತ್ ಇವರಿಂದ ಕೊಳಲು ಹಾಗೂ ಶ್ರೀಮತಿ ಸುಮಾ ಹೆಗ್ಡೆ ಇವರಿಂದ ಸಂತೂರ್ ದ್ವಂದ್ವ ವಾದನಕ್ಕೆ ಗುರುಮೂರ್ತಿ ವೈದ್ಯ ತಬಲಾ ಸಾಥ್ ನೀಡಲಿದ್ದಾರೆ.
ಉಡುಪಿ : ಬೆಂಗಳೂರಿನ ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ಆಯೋಜಿಸಿದ `ರಂಗ ದಿಬ್ಬಣ- 2025 ‘ ಕಾರ್ಯಕ್ರಮವು ದಿನಾಂಕ 09 ಜೂನ್ 2025ರ ಸೋಮವಾರದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ನಾಡು, ನುಡಿ, ನೆಲ, ಜಲ, ಕಲೆ ಭಾಷೆ, ಸಂಸ್ಕೃತಿ ಹಾಗೂ ಸಮಾಜ ಸೇವೆ ಮಾಡಿದ ನಾಡಿನ ಸಾಧಕರಿಗೆ ನೀಡುವ `ಕರುನಾಡ ಸೇವಾ ಕಣ್ಮಣಿ’ ರಾಜ್ಯ ಪ್ರಶಸ್ತಿಯನ್ನು ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರಿಗೆ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾಜಿ ಲೋಕಾಯುಕ್ತ ಜಸ್ಟಿಸ್ ಸಂತೋಷ್ ಹೆಗ್ಡೆ, ಖ್ಯಾತ ಗಾಯಕಿ ಸಂಗೀತಾ ಕಟ್ಟಿ ಕುಲಕರ್ಣಿ, ಅಹಲ್ಯಾ ಫೌಂಡೇಶನ್ ಇದರ ಸಂಸ್ಥಾಪಕಾಧ್ಯಕ್ಷೆಯಾದ ಮಹಾಲಕ್ಷ್ಮಿ, ಸಂಸ್ಥೆಯ ಗೌರವಾಧ್ಯಕ್ಷರಾದ ಡಾ. ಕೆಂಚನೂರು ಶಂಕರ, ಮಂಗಳೂರು ಶ್ರೀಮಾತಾ ಅನ್ನಪೂರ್ಣ ಸಿಂಗ್, ಡಾ. ಮಂಜುಳಾ ಮಹಾದೇವ್, ಡಾ. ಅನು ಮೊದಲಾದವರು ಉಪಸ್ಥಿತರಿದ್ದರು. ಡಾ.ತಲ್ಲೂರು ಶಿವರಾಮ ಶೆಟ್ಟಿ ಪ್ರಸ್ತುತ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ, ರಂಗಭೂಮಿ ಉಡುಪಿ…
ಬ್ರಹ್ಮಾವರ : ಬಡಗುತಿಟ್ಟಿನ ಪ್ರಸಿದ್ಧ ಚಂಡೆ ವಾದಕರಾದ ನೀಲಾವರ ಸೂರ್ಯ ದೇವಾಡಿಗರು ದಿನಾಂಕ 14 ಜೂನ್ 2025ರಂದು ನಿಧನ ಹೊಂದಿದರು. ಅವರಿಗೆ 56ವರ್ಷ ವಯಸ್ಸಾಗಿತು. ಮಡಮಕ್ಕಿ, ಅಮೃತೇಶ್ವರಿ, ಮೇಗರವಳ್ಳಿ, ಹಾಲಾಡಿ ಮತ್ತು ದೀರ್ಘಕಾಲ ಮಂದಾರ್ತಿ ಮೇಳ ಹೀಗೆ ಒಟ್ಟು ಮೂರು ದಶಕಗಳ ಕಾಲ ಚಂಡೆವಾದಕರಾಗಿ ಸೇವೆಗೈದಿದ್ದರು. ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಎ. ಪಿ. ಪಾಠಕರ ಶಿಷ್ಯರಾಗಿ ಚಂಡೆ, ಮದ್ದಲೆ ವಾದನ ನುಡಿಸುವುದನ್ನು ಕರಗತ ಮಾಡಿಕೊಂಡಿದ್ದರು. ಜೊತೆಗೆ ಕುಲಕಸುಬಾದ ವಾದ್ಯ ನುಡಿಸುವುದನ್ನು, ಮುಖ್ಯವಾಗಿ ನೀಲಾವರ ದೇವಳದಲ್ಲಿ, ತನ್ನ ಪ್ರವೃತ್ತಿಯಾಗಿ ಸ್ವೀಕರಿಸಿ ಅದರಲ್ಲಿ ತೊಡಗಿಸಿಕೊಂಡಿದ್ದರು. ಕೆಲವು ವರ್ಷದ ಹಿಂದೆ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಆಗಿದ್ದು, ಈ ತಿರುಗಾಟದಲ್ಲಿ ಒಂದು ತಿಂಗಳು ಮಾತ್ರ ಮಾರಣಕಟ್ಟೆ ಮೇಳದಲ್ಲಿ ಚಂಡೆವಾದಕರಾಗಿ ಸೇವೆ ಸಲ್ಲಿಸಿದ್ದರು. ಸರಳ ಸಜ್ಜನಿಕೆಯ ಇವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಕಲಾಭಿಮಾನಿಗಳನ್ನು ಅಗಲಿದ್ದಾರೆ..
ಉಡುಪಿ : ಮಂಗಳೂರಿನ ಕಲ್ಲಚ್ಚು ಪ್ರಕಾಶನ ಮತ್ತು ಮಂಡ್ಯದ ಶ್ರೀರಾಮ ಪ್ರಕಾಶನ ಇವರ ಸಂಯುಕ್ತ ಆಶ್ರಯದಲ್ಲಿ ‘ಸುಪ್ತದೀಪ್ತಿ’ ಕಾವ್ಯನಾಮದಿಂದ ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾಗಿರುವ ಜ್ಯೋತಿ ಮಹಾದೇವ್ ಇವರ ಪ್ರಬಂಧ ಮತ್ತು ಕವನ ಸಂಕಲನಗಳ ಅನಾವರಣ ದಿನಾಂಕ 21 ಜೂನ್ 2025ರಂದು ಅಪರಾಹ್ನ ಗಂಟೆ 3-30ಕ್ಕೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಹಿರಿಯ ವಿದ್ವಾಂಸ ಲಕ್ಷ್ಮೀಶ ತೋಳ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ‘ಅಕ್ಷರ ಲೋಕದ ನೋಟಗಳು’ ಪ್ರಬಂಧ ಸಂಕಲನವನ್ನು ಆರ್.ಆರ್.ಸಿ. ಸಹಸಂಶೋಧಕ ಡಾ. ಅರುಣ ಕುಮಾರ್ ಎಸ್.ಆರ್. ಹಾಗೂ ಕವನ ಸಂಕಲನ ‘ದೀಪ ನಕ್ಕಿತು’ ಕೃತಿಯನ್ನು ಪ್ರಸಿದ್ಧ ಕಾದಂಬರಿಕಾರ ಎಂ.ಆರ್. ದತ್ತಾತ್ರಿ ಇವರು ಬಿಡುಗಡೆಗೊಳಿಸುವರು. ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲೆ ಪ್ರೊ. ವನಿತಾ ಮಯ್ಯ ಇವರು ಅಭ್ಯಾಗತರಾಗಿ ಆಗಮಿಸಲಿದ್ದು, ಮಂಗಳೂರಿನ ಕಲ್ಲಚ್ಚು ಪ್ರಕಾಶನದ ಪ್ರಕಾಶಕ, ಸಾಹಿತಿ ಮಹೇಶ ಆರ್. ನಾಯಕ್ ಮತ್ತು ಶ್ರೀರಾಮ ಪ್ರಕಾಶನದ ಅಚ್ಯುತಾನಂದ ಎಂ.ಸಿ ಉಪಸ್ಥಿತರಿರುವರು. ಅಮೇರಿಕ ಕನ್ನಡಿತಿ ಕಥೆಗಾರ್ತಿ ತ್ರಿವೇಣಿ ಶ್ರೀನಿವಾಸ ರಾವ್ ನಿರೂಪಿಸುವರು.…
ಮಂಗಳೂರು: ಸನಾತನ ನಾಟ್ಯಾಲಯ ವತಿಯಿಂದ ಆಯೋಜಿಸಿದ ಸ್ವರುಣ್ ಸ್ಮರಣಾಂಜಲಿ ಕಾರ್ಯಕ್ರಮ ದಿನಾಂಕ 15 ಜೂನ್ 2025ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕಿಯಾಗಿ ಭಾಗವಹಿಸಿದ ವಾಗ್ಮಿ ಹಾರಿಕಾ ಮಂಜುನಾಥ್ ಮಾತನಾಡಿ “ಭಾರತದ ಜ್ಞಾನಪುಂಜ ಎಂದರೆ ಅದು ಕಾಶ್ಮೀರ. ಆದ್ದರಿಂದ ಅದು ಭಾರತ ಮಾತೆಯ ಸಿಂಧೂರವೇ ಹೊರತು ಕೇವಲ ಪ್ರವಾಸಿ ತಾಣ ಎಂದು ಸೀಮಿತ ಮಾಡುವುದು ಸರಿಯಲ್ಲ. ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆ ಆಳಿದ ಊರು ಕಾಶ್ಮೀರ. ಅಗಾಧ ಗ್ರಂಥಗಳು ರೂಪುಗೊಂಡ, ತಪಸ್ವಿಗಳು ಋಷಿಗಳು ಇದ್ದ ನಾಡು ಕಾಶ್ಮೀರ. ಜಗತ್ತಿನಲ್ಲಿ ಪ್ರಾಚೀನ ಎಂದು ಕರೆಸಿಕೊಂಡ ಗ್ರೀಕ್, ರೋಮನ್, ಲೆಬನಾನ್ ಸೇರಿದಂತೆ ಅನೇಕ ಜನಾಂಗಗಳು ಅಳಿಸಿ ಹೋದವು. ಆದರೆ ಸನಾತನ ಧರ್ಮದ ಮೇಲೆ ಸಾವಿರಕ್ಕೂ ಹೆಚ್ಚು ವರ್ಷ ದಾಳಿ ನಡೆಯಿತು. ಆದರೆ ಸನಾತನ ಹಿಂದೂ ಧರ್ಮ ಜಾಗೃತವಾಗಿದೆ. ತಾಯಿ ಭಾರತಿಯ ಸಿಂಧೂರ ಕಾಪಾಡಲು ಆಕೆಯ ಮಕ್ಕಳು ಸದಾ ಜಾಗೃತರಾಗಿದ್ದರು. ಇಂದಿಗೂ ಜಾಗೃತರಾಗಿದ್ದಾರೆ” ಎಂದು ವಿವರಿಸಿದರು. ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ “ಸಣ್ಣ…
ಕಾಸರಗೋಡು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು, ಗ್ರೀನ್ ಸ್ಟಾರ್ ಆಟ್ಸ್ ಮತ್ತು ಸ್ಪೋಟ್ಸ್ ಕ್ಲಬ್ ಕಯ್ಯಾರು, 16ನೇ ವಾರ್ಡ್ ಕಯ್ಯಾರು ಕುಟುಂಬಶ್ರೀ ಘಟಕಗಳು ಇವರ ಸಹಯೋಗದಲ್ಲಿ ನಾಡೋಜ ಕವಿ ಡಾ. ಕಯ್ಯಾರ ಕಿಞಣ್ಣ ರೈಯವರ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದಿನಾಂಕ 18 ಜೂನ್ 2025ರಂದು ಬೆಳಿಗ್ಗೆ 9-00 ಗಂಟೆಗೆ ಕಯ್ಯಾರು ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸುವರು. ಕಲ್ಕೂರ ಫೌಂಡೇಶನ್ ಮಂಗಳೂರು ಅಧ್ಯಕ್ಷ, ಗಸಾಸಾ ಅಕಾಡೆಮಿ ಕಾಸರಗೋಡು ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡುವರು. ಬಹುಭಾಷಾ ಕವಿ,…
ಉಡುಪಿ : ಮಣಿಪಾಲದ ಲೇಖಕಿ ವೈದೇಹಿಯವರ ಮನೆ ‘ಇರುವಂತಿಗೆ’ಯಲ್ಲಿ ದಿನಾಂಕ 14 ಜೂನ್ 2025ರಂದು ಪುಸ್ತಕ ಬಿಡುಗಡೆಯ ಸರಳ ಸಮಾರಂಭದಲ್ಲಿ ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಎಂಬ ಕೃತಿ ಲೋಕಾರ್ಪಣೆಗೊಂಡಿತು. ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ಕನ್ನಡದ ಹಿರಿಯ ಲೇಖಕಿ ವೈದೇಹಿ ಇವರು ಮಾತನಾಡಿ “ಬೇರೆ ಬೇರೆ ಭಾಷೆಗಳಲ್ಲಿರುವ ಸಾಹಿತ್ಯಗಳ ನಡುವೆ ವಿನಿಮಯಗಳು ನಡೆಯುವ ಮೂಲಕವಷ್ಟೇ ಯಾವುದೇ ಸಾಹಿತ್ಯ ಬೆಳವಣಿಗೆ ಸಾಧಿಸಲು ಸಾಧ್ಯ. ಎರಡು ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಿದ ಭಾಷಾಂತರಕಾರರಿಲ್ಲದೆ ಆ ರೀತಿಯ ವಿನಿಮಯ ಸಾಧ್ಯವಿಲ್ಲ’ ಎಂದು ಹೇಳಿದರು. ಮಾಹೆ ವಿಶ್ವವಿದ್ಯಾನಿಲಯದ ಗಾಂಧಿ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ. ವರದೇಶ್ ಹಿರೇಗಂಗೆ, ಕೃತಿಕಾರ್ತಿ ಪಾರ್ವತಿ ಜಿ. ಐತಾಳ್ ಮತ್ತು ಸಾಂಸ್ಕೃತಿಕ ಸಂಘಟಕರಾದ ಶ್ರೀನಿವಾಸ ಮೂರ್ತಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಸ್ರೂರು ಶಾರದಾ ಕಾಲೇಜಿನ ಕನ್ನಡ ಉಪನ್ಯಾಸಕ ಕುಮಾರ್ ಸ್ವಾಗತಿಸಿ, ಗಾಂಧಿ ಅಧ್ಯಯನ ಕೇಂದ್ರದ ಸಂಶೋಧಕಿ ಕೌಸ್ತುಭ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕೊಪ್ಪಳ : ಕುಷ್ಟಗಿ ರಸ್ತೆಯಲ್ಲಿರುವ ಪದಕಿ ಟೌನ್ ಶಿಪ್ ಪ್ರದೇಶದ ಶಾಂತಿ ನಿವಾಸದಲ್ಲಿ ದಿನಾಂಕ 15 ಜೂನ್ 2025ರಂದು ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಕೊಪ್ಪಳ ಇದರ ವತಿಯಿಂದ ಹಮ್ಮಿಕೊಂಡಿದ್ದ ಖ್ಯಾತ ಕವಿ ಡಾ. ಎಚ್.ಎಸ್. ವೆಂಕಟೇಶ್ ಮೂರ್ತಿ ಇವರಿಗೆ ನುಡಿನಮನ ಹಾಗೂ ಜಿಲ್ಲಾ ಮಟ್ಟದ ಮುಂಗಾರು ಕಾವ್ಯೋತ್ಸವ (ಚುಟುಕು, ಕವಿತೆ, ಶಾಹಿರಿ ಹಾಗೂ ಗಜಲ್ ವಾಚನಗಳ ಝಲಕ್) ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಈ ಕಾರ್ಯಕ್ರಮದಲ್ಲಿ ಎಚ್.ಎಸ್.ವಿ.ಯವರ ‘ಬದುಕು ಬರಹ’ ಕುರಿತು ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ರವಿತೇಜ ಅಬ್ಬಿಗೇರಿ “ಭಾವಗೀತೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬರಹ ರೂಪದಲ್ಲಿ ಪ್ರಕಟಿಸಿದ ಶ್ರೇಯಸ್ಸು ಖ್ಯಾತ ಕವಿ ದಿವಂಗತ ಎಚ್.ಎಸ್. ವೆಂಕಟೇಶ ಮೂರ್ತಿಯವರಿಗೆ ಸಲ್ಲುತ್ತದೆ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಯಾವುದೇ ಗುಂಪು ಪಂಗಡಕ್ಕೆ ಸೀಮಿತಗೊಳ್ಳದೆ ನಿರಂತರ ಅಧ್ಯಯನ ಸಾಹಿತ್ಯ ಕೃಷಿ ಮಾಡುತ್ತಾ ಸುಮಾರು ನೂರಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ, ಇಂತಹ ಸಾಹಿತ್ಯ ದಿಗ್ಗಜರ ಪರಂಪರೆಯನ್ನು ಯುವ…