Subscribe to Updates
Get the latest creative news from FooBar about art, design and business.
Author: roovari
ಕಟೀಲು : ಮಯೂರ ಪ್ರತಿಷ್ಠಾನ (ರಿ.) ಮಂಗಳೂರು ಇದರ ಪ್ರಥಮ ವಾರ್ಷಿಕೋತ್ಸವ ಪ್ರಯುಕ್ತ ‘ಮಯೂರಯಾನ -1′ ಕಾರ್ಯಕ್ರಮವನ್ನು ದಿನಾಂಕ 09 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಕಟೀಲು ರಥಬೀದಿಯಲ್ಲಿರುವ ಶ್ರೀ ಸರಸ್ವತೀ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ‘ಅಶ್ವಮೇಧ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಕೋಟೇಶ್ವರ : ಶ್ವೇತಛತ್ರ ಯಕ್ಷಮಿತ್ರ (ರಿ.) ಕೋಣಿ ಕುಂದಾಪುರ ಇವರ ಸಂಯೋಜನೆಯಲ್ಲಿ ತೆಂಕು ಹಾಗೂ ಬಡಗಿನ ಪ್ರಖ್ಯಾತ ಕಲಾವಿದರ ಕೂಡುವಿಕೆಯಲ್ಲಿ ಅದ್ದೂರಿ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 10 ಆಗಸ್ಟ್ 2025ರಂದು ಮಧ್ಯಾಹ್ನ 3-30 ಗಂಟೆಗೆ ಕೋಟೇಶ್ವರ ಹಾಲಾಡಿ ರಸ್ತೆಯಲ್ಲಿರುವ ಯುವ ಮೆರಿಡಿಯನ್ ಗ್ರ್ಯಾಮಿ ಬಾಲ್ ರೂಮ್ ಇಲ್ಲಿ ಆಯೋಜಿಸಲಾಗಿದೆ. ಕೀರಿಕಾಡು ಮಾ. ವಿಷ್ಣು ಭಟ್ಟ ರಚಿಸಿರುವ ಶ್ವೇತಕುಮಾರ ಚರಿತ್ರೆ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ತೆಂಕು ಹಿಮ್ಮೇಳದಲ್ಲಿ ಶ್ರೀಮತಿ ಕಾವ್ಯಶ್ರೀ ಅಜೇರು, ಮದ್ದಲೆಯಲ್ಲಿ ಕೃಷ್ಣಪ್ರಕಾಶ್ ಉಳಿತ್ತಾಯ ಮತ್ತು ಚಂಡೆಯಲ್ಲಿ ಚಂದ್ರಶೇಖರ್ ಆಚಾರ್ಯ ಗುರುವಾಯನಕೆರೆ ಹಾಗೂ ಬಡಗು ಹಿಮ್ಮೇಳದಲ್ಲಿ ಸುರೇಶ್ ಶೆಟ್ಟಿ ಎಸ್., ಕುಮಾರಿ ಚಿಂತನಾ ಹೆಗಡೆ ಮಾಳ್ಕೋಡು, ಮದ್ದಲೆಯಲ್ಲಿ ಸುನಿಲ್ ಭಂಡಾರಿ, ಎನ್.ಜಿ. ಹೆಗಡೆ ಮತ್ತು ಚಂಡೆಯಲ್ಲಿ ಶಿವಾನಂದ ಕೋಟ, ರಾಧಾಕೃಷ್ಣ ಕುಂಜತ್ತಾಯ ಇವರುಗಳು ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ನವೀನ್ ಶೆಟ್ಟಿ ಐರ್ ಬೈಲು, ಸುಧೀರ್ ಉಪ್ಪೂರು, ವಿಶ್ವನಾಥ್ ಕಿರಾಡಿ, ನಾಗೇಶ್ ಆಚಾರ್ಯ ಬೈಲೂರು, ಸೀತಾರಾಮ್ ಕುಮಾರ್ ಕಟೀಲು,…
ಮೂಡಬಿದಿರೆ : ಶಿವರಾಮ ಕಾರಂತ ಪ್ರತಿಷ್ಠಾನ ವತಿಯಿಂದ ನೀಡಲಾಗುವ 2025ರ ಸಾಲಿನ ಶಿವರಾಮ ಕಾರಂತ ಪ್ರಶಸ್ತಿ ಮತ್ತು ಪುರಸ್ಕಾರ ಪ್ರದಾನ ಸಮಾರಂಭ ದಿನಾಂಕ 13 ಆಗಸ್ಟ್ 2025ರಂದು ಸಂಜೆ ಘಂಟೆ 5.00ಕ್ಕೆ ಸೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ. ಶಿವರಾಮ ಕಾರಂತ ಪ್ರತಿಷ್ಠಾನ ಮೂಡುಬಿದಿರೆ ಇದರ ಅಧ್ಯಕ್ಷೆಯಾದ ಜಯಶ್ರೀ ಅಮರನಾಥ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಿರಿಯ ಲೇಖಕ ಪ್ರೊ. ಎನ್. ಟಿ. ಭಟ್, ಚಿಂತಕ ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಶಿವರಾಮ ಕಾರಂತ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ. ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.
‘ಮಾತು ಎಂಬ ವಿಸ್ಮಯ’ ಡಾ. ಮೀನಾಕ್ಷಿ ರಾಮಚಂದ್ರ ಇವರು ಮಲೆಯಾಳದಿಂದ ಕನ್ನಡಕ್ಕೆ ಅನುವಾದಿಸಿರುವ ಸಜಿ ಎಂ. ನರಿಕ್ಕುಯಿ ಇವರ ಒಂದು ಅಪೂರ್ವ ಕೃತಿ. ಮನುಷ್ಯನು ತನ್ನ ಜೀವನದಲ್ಲಿ ಯಶಸ್ಸು ಸಾಧಿಸಬೇಕಿದ್ದರೆ, ಸುಖ ಶಾಂತಿ ನೆಮ್ಮದಿಗಳನ್ನು ಪಡೆಯಬೇಕಿದ್ದರೆ, ಯಾವ ರೀತಿಯ ಧನಾತ್ಮಕ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಅನ್ನುವುದನ್ನು ಲೇಖಕರು ಈ ಕೃತಿಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಶಿಸ್ತುಬದ್ದವಾಗಿ ವಿವರಿಸಿದ್ದಾರೆ. ನಾವು ಆಡುವ ಬಹಿರಂಗದ ಮಾತ್ರವಲ್ಲದೆ ಅಂತರಂಗದೊಳಗಿನ ಮಾತುಗಳು ಹೇಗೆ ನಮ್ಮ ಜೀವನದಲ್ಲಿ ವಿಸ್ಮಯಕರವಾದ ಬದಲಾವಣೆಗಳನ್ನು ಉಂಟುಮಾಡಬಹುದು ಅನ್ನುವುದನ್ನು ಸನ್ನಿವೇಶ-ಸಂದರ್ಭಗಳ ಉಲ್ಲೇಖಗಳ ಮೂಲಕ ಸೋದಾಹರಣವಾಗಿ ಚಿತ್ರಿಸಿದ್ದಾರೆ. ಈ ಕೃತಿಯಲ್ಲಿ ಒಟ್ಟು ಐದು ಭಾಗಗಳಿವೆ. ಪ್ರತಿಯೊಂದು ಭಾಗವನ್ನು 8-10 ಅಧ್ಯಾಯಗಳಾಗಿ ವಿಂಗಡಿಸಲಾಗಿದೆ. ಪ್ರತಿ ಅಧ್ಯಾಯದ ಕೊನೆಗೂ ಆ ಅಧ್ಯಾಯವು ಹೇಳುವ ವಿಚಾರಗಳ ಸಾರಸತ್ವದ ಮೇಲೆ ಬೆಳಕು ಚೆಲ್ಲುವ ಒಂದು ವಾಕ್ಯವನ್ನು ನೀಡಲಾಗಿದೆ. ಇದು ತರಗತಿಯಲ್ಲಿ ಅಧ್ಯಾಪಕರು ಪಾಠ ಮಾಡುವ ರೀತಿಯಲ್ಲಿದೆ. ಓದುಗರು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಇದು ಸಹಕಾರಿ. ‘ಮಾತಿನ ಮಾಂತ್ರಿಕ ಶಕ್ತಿ’ ಎಂಬ ಮೊದಲ ಭಾಗದಲ್ಲಿ ಒಂಭತ್ತು…
ಬೆಂಗಳೂರು : ಬುದ್ದ, ಬಸವ, ಗಾಂಧಿ ಸಾಂಸ್ಕೃತಿಕ ಟ್ರಸ್ಟ್, ಪ್ರೊ. ಕೃಷ್ಣಪ್ಪ ಟ್ರಸ್ಟ್ ಹಾಗೂ ವೀರಲೋಕ ಪಬ್ಲಿಕೇಶನ್ ಸಹಕಾರದಲ್ಲಿ ದಿನಾಂಕ 03 ಜುಲೈ 2025ರಂದು ಆಯೋಜಿಸಿದ ರಾಜ್ಯ ಮಟ್ಟದ ವೈಜ್ಞಾನಿಕ, ವೈಚಾರಿಕ ಸಾಹಿತ್ಯ ಸಮಾವೇಶ-2025 ಕಾರ್ಯಕ್ರಮವು ಶೇಷಾದ್ರಿಪುರಂ ಕಾಲೇಜಿನಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಶಿಕ್ಷಣ ತಜ್ಞೆ ಡಾ. ಗೀತಾ ರಾಮಾನುಜಂ “ನಮ್ಮ ಜೀವನದಲ್ಲಿ ವೈಜ್ಞಾನಿಕ ವಿಚಾರಗಳನ್ನು ಬೆಳೆಸಿಕೊಂಡು, ಸಾಂಪ್ರದಾಯಕವಾಗಿ ತುಂಬಿರುವ ಮೌಢ್ಯದ ಬೇರು ಕಿತ್ತೊಗಯದೇ ಇದ್ದರೇ ಬಡತನವನ್ನು ಕಿತ್ತೊಗೆಯಲು ಸಾಧ್ಯವಿಲ್ಲ. ವೈಜ್ಞಾನಿಕವಾಗಿ ವಿಷಯ ವಿಶ್ಲೇಷಣೆ ಮಾಡದಿದ್ದರೆ ಈ ಸಮಾಜ, ದೇಶ ಬೆಳವಣಿಗೆ ಆಗುವುದಿಲ್ಲ. ನಾವು ಬರೆಯುವ ಸಾಹಿತ್ಯ ಸೂಕ್ಷ್ಮತೆ ಪಡೆದುಕೊಳ್ಳದೇ ಇದ್ದರೆ, ವೈಚಾರಿಕತೆಯ ಅಂಶ ಮೈಗೂಡಿಸಿಕೊಳ್ಳದೇ ಹೋದರೇ, ಪ್ರಶ್ನಿಸುವ ಮತ್ತು ಉತ್ತರ ಪಡೆಯುವ ಮನೋಧರ್ಮವನ್ನು ರೂಪಿಸಿಕೊಳ್ಳದಿದ್ದರೆ ಸಮಾಜಕ್ಕೆ ಏನನ್ನು ಮಾಡಲು ಸಾಧ್ಯವಿಲ್ಲ. ಸಾಹಿತಿಯಾಗಿ ನಮ್ಮ ಸುತ್ತಮುತ್ತ ನಡೆಯುತ್ತಿರುವ ಸೂಕ್ಷ್ಮತೆಗಳನ್ನು ಗಮನಿಸುತ್ತಿರಬೇಕು. ಸಾಹಿತಿ ಜನರ ನಡುವೆ ಹೋಗದೇ ಇದ್ದರೆ, ನಾವು ಬರೆಯುವ ಸಾಹಿತ್ಯ ಯಾರಿಗೆ ಮುಟ್ಟುತ್ತಿದೆ ಎಂದು ಪ್ರಶ್ನಿಸಿಕೊಳ್ಳದೇ…
ಉಡುಪಿ : ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯದಲ್ಲಿ ದಿನಾಂಕ 01 ಆಗಸ್ಟ್ 2025 ಶುಕ್ರವಾರದಂದು ಗಡಿನಾಡಿನ ಧೀರೆ ದಿ. ತೊಟ್ಟೆತ್ತೋಡಿ ಪ್ರೇಮ ಕೆ. ಭಟ್ ಇವರಿಗೆ ನುಡಿನಮನ, ಪುಷ್ಪ ನಮನ ಹಾಗೂ ಸಂಗೀತ ಸಮರ್ಪಣೆಯ ವೈಶಿಷ್ಟ್ಯ ಪೂರ್ಣ ಕಾರ್ಯಕ್ರಮ ಜರುಗಿತು. ಮಂಗಳೂರಿನ ಮಂಗಳಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ. ಪಿ. ಗಣಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಶ್ರೀ ರಾಜಾರಾಮ ಮೀಯಪದವು, ಕ.ಸಾ.ಪ. ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ, ಡಾ. ಚಂದ್ರಶೇಖರ್ ನುಡಿನಮನ ಸಲ್ಲಿಸಿದರು. ಕವಯಿತ್ರಿ ಪ್ರಮೀಳಾ ಚುಳ್ಳಿಕ್ಕಾನ ಅವರು ಪ್ರೇಮಾ ಕೆ. ಭಟ್ಟರ ಬಗ್ಗೆ ಬರೆದ ಕವನಗಳನ್ನು ಹಾಗೂ ಡಾ. ಎಂ.ಎಸ್. ಮಹೇಶ್ ಹಾಗೂ ಕೆ.ಆರ್. ರಾಘವೇಂದ್ರ ಆಚಾರ್ಯ ಹಾಡಿದರು. ನಂತರ ಸಂಸ್ಮರಣಾ ಸಂಗೀತ ಕಛೇರಿಯನ್ನು ಮೈಸೂರಿನ ವಿದ್ವಾನ್ ಎನ್.ಆರ್. ಪ್ರಶಾಂತ್ ನಡೆಸಿಕೊಟ್ಟರು. ವಯಲಿನ್ ನಲ್ಲಿ ತನ್ಮಯಿ ಉಪ್ಪಂಗಳ ಹಾಗೂ ಮೃದಂಗದಲ್ಲಿ ಸುನಾದ ಕೃಷ್ಣ ಅಮೈ ಸಹಕರಿಸಿದರು. ಡಾ. ಉದಯಶಂಕರ್ ಸ್ವಾಗತಿಸಿ, ಸಂಸ್ಥೆಯ ನಿರ್ದೇಶಕಿ ಉಮಾಶಂಕರಿ ವಂದಿಸಿದರು.
ರಾಮನಗರ : ಚುಟುಕು ಸಾಹಿತ್ಯ ಪರಿಷತ್ತು ರಾಮನಗರ ಹಾಗೂ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿಯ ಸಹಯೋಗದಲ್ಲಿ ದಿನಾಂಕ 30 ಆಗಸ್ಟ್ 2025ರ ಶನಿವಾರದಂದು ರಾಮನಗರದ ನ್ಯೂ ಎಕ್ಸ್ ಪರ್ಟ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿರುವ ‘ಚುಟುಕು ಸಾಹಿತ್ಯ ಸಮ್ಮೇಳನ’ದ ಸರ್ವಾಧ್ಯಕ್ಷರಾಗಿ ಸಾಹಿತಿಗಳು, ಕಲಾವಿದರು ಹಾಗೂ ಪೊಲೀಸ್ ಅಧಿಕಾರಿಗಳಾದ ಡಾ. ಶೈಲೇಶ್ ಕಾಕೋಳು ಇವರನ್ನು ಎರಡು ಸಂಸ್ಥೆ ಹಾಗೂ ಹಿರಿಯರು ಆಶಯದಂತೆ ಅವರ ಗಣನೀಯ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ಇವರಿಗೆ ಎರಡು ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಅವರ ರಾಮನಗರದ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಪತ್ರ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ವಕೀಲರಾದ ಶ್ರೀ ಅಂಬರೀಷ್, ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದ ಎಮ್. ರಮೇಶ ಕಮತಗಿ, ನಿವೃತ್ತ ಉಪನ್ಯಾಸಕರಾದ ಪೂರ್ಣಚಂದ್ರ, ಪ್ರೊ. ರಮೇಶ ಹೊಸದೊಡ್ಡಿ, ಚುಟುಕು ಕವಿ ಜಿ. ರಘುನಾಥ್, ವಕೀಲರಾದ ಹರೀಶ್, ಶ್ರೀಮತಿ ಅರ್ಪಿತಾ ಇತರರು ಉಪಸ್ಥಿತರಿದ್ದರು.
ಮಧೂರು : ಉಳಿಯ ದನ್ವಂತರಿ ಯಕ್ಷಗಾನ ಕಲಾಸಂಘ ಮಧೂರು ಇದರ ವಾರದ ಕೂಟ ಉಳಿಯ ಮನೆಯ ಸುಧಾ ಮಂದಿರದಲ್ಲಿ ದಿನಾಂಕ 03 ಆಗಸ್ಟ್ 2025 ಭಾನುವಾರದಂದು ‘ಗುರುದಕ್ಷಿಣೆ’ ಎಂಬ ಪ್ರಸಂಗದ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು ಶ್ರೀ ವಾಸುದೇವ ಕಲ್ಲೂರಾಯ ಮಧೂರು ಮತ್ತು ಶ್ರೀ ರವಿಶಂಕರ ಮಧೂರು ಹಾಗೂ ಮದ್ದಳೆಯಲ್ಲಿ ಶ್ರೀ ಮುರಳಿಮಾಧವ ಮಧೂರು ಮತ್ತು ಶ್ರೀ ಗೋಪಾಲ ಕೃಷ್ಣ ನಾವಡ ಮಧೂರು ಇವರುಗಳು ಸಹಕರಿಸಿದರು. ಮುಮ್ಮೇಳದಲ್ಲಿ ದ್ರೋಣ 1: ಶ್ರೀ ವಿಷ್ಣು ಭಟ್ ಕಕ್ಕೆಪ್ಪಾಡಿ ಮಧೂರು ಮತ್ತು ದ್ರೋಣ 2: ಬ್ರಹ್ಮಶ್ರೀ ಉಳಿಯತಾಯ ವಿಷ್ಣು ಆಸ್ರ, ಏಕಲವ್ಯ: ನರಸಿಂಹ ಬಲ್ಲಾಳ್, ಧ್ರುಪದ ರಾಜ 1: ಶ್ರೀ ಸುದರಕೃಷ್ಣ ಗಟ್ಟಿ ಕಾಸರಗೋಡು ಮತ್ತು ಧ್ರುಪದ ರಾಜ 2: ಶ್ರೀ ಮಯೂರ ಆಸ್ರ ಉಳಿಯ, ಅರ್ಜುನ 1: ಗೋಪಾಲ ಅಡಿಗ ಕೂಡ್ಲು ಮತ್ತು ಅರ್ಜುನ 2 ಶ್ರೀಮತಿ ಸರಸ್ವತಿ ಟೀಚರ್ ಕೂಡ್ಲು, ಕೌಸವಿ : ಶ್ರೀಮತಿ ಧನ್ಯ ಮುರಳಿ ಕೃಷ್ಣ ಆಸ್ರ ಉಳಿಯ…
ಕೋಟ : ಪ್ರತಿಷ್ಠಿತ ಯಕ್ಷ ಕಲಾಸಂಸ್ಥೆಯಾದ ಕೋಟ ಯಕ್ಷ ಸೌರಭ ಶ್ರೀ ಹಿರೇ ಮಹಾಲಿಂಗೇಶ್ವರ ಕಲಾರಂಗ ಇದರ ನೂತನ ಅಧ್ಯಕ್ಷರಾಗಿ ಗಿರೀಶ್ ಗಾಣಿಗ ಬೆಟ್ಲಕ್ಕಿ ಇವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀನಾಥ ಉರಾಳ, ಕಾರ್ಯದರ್ಶಿಯಾಗಿ ವಿಘ್ನೇಶ್ ದೇವಾಡಿಗ, ಜೊತೆ ಕಾರ್ಯದರ್ಶಿಯಾಗಿ ಅನೂಪ ಉರಾಳ, ಕಾರ್ಯಾಧ್ಯಕ್ಷರಾಗಿ ಹರೀಶ್ ದೇವಾಡಿಗ, ಕೋಶಾಧಿಕಾರಿಯಾಗಿ ಕಾರ್ತಿಕ ಆಚಾರ್ಯ ಇವರುಗಳು ಆಯ್ಕೆಯಾದರು. ಈ ನೂತನ ಆಡಳಿತ ಮಂಡಳಿಯ ಸಮಿತಿ ರಚನಾ ಪ್ರಕ್ರಿಯೆಯಲ್ಲಿ ಸ್ಥಾಪಕಾಧ್ಯಕ್ಷ ಹರೀಶ್ ಭಂಡಾರಿ, ನಿಕಟಪೂರ್ವ ಅಧ್ಯಕ್ಷ ರಾಘವೇಂದ್ರ ಕರ್ಕೇರ ಕೋಡಿ ಹಾಗೂ ಹಿರಿ, ಕಿರಿಯ ಸದಸ್ಯರು ಉಪಸ್ಥಿತರಿದ್ದರು.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಆಶ್ರಯದಲ್ಲಿ ನಿವೃತ್ತ ಶಿಕ್ಷಕ, ಕವಿ ವಿ.ಜಿ.ಎಸ್.ಎನ್. ಭಟ್ ಇವರ ‘ಗುಬ್ಬಚ್ಚಿ ಗೂಡು’ ಚುಟುಕು ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 04 ಆಗಸ್ಟ್ 2025ರಂದು ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಲಾ ಕಾಲೇಜಿನಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಕೃತಿ ಲೋಕಾರ್ಪಣೆಗೊಳಿಸಿದ ಹೆಸರಾಂತ ವೈದ್ಯ ಸಾಹಿತಿ ಡಾ. ಮುರಲೀಮೋಹನ್ ಚೂಂತಾರು ಮಾತನಾಡಿ “ಹೇಗೆ ವೈದ್ಯರ ಚುಚ್ಚು ಮದ್ದು ರೋಗಗಳನ್ನು ವಾಸಿ ಮಾಡುವುದೋ ಹಾಗೆಯೇ ಸಮಾಜದಲ್ಲಿರುವ ಕುಂದು ಕೊರತೆಗಳೆಂಬ ರೋಗಗಳಿಗೆ ಕವಿಗಳ ಚುಟುಕುಗಳು ಚುಚ್ಚು ಮದ್ದಿನಂತೆ ಕೆಲಸ ಮಾಡುತ್ತವೆ. ಅವು ಸಮಾಜವನ್ನು ತಿದ್ದುವ, ಎಚ್ಚರಿಸುವ, ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡುತ್ತವೆ. ಕೃತಿಕಾರರು ತಮ್ಮ ಸುತ್ತ ಮುತ್ತಲಿನ ವಿಷಯಗಳನ್ನೇ ಚುಟುಕಾಗಿಸಿ ಇಂತಹ ಕಾರ್ಯವನ್ನು ಮಾಡಿರುವುದು ಅಭಿನಂದನೀಯ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಘಟಕದ ಅಧ್ಯಕ್ಷ ಡಾ. ಮಂಜುನಾಥ ಎಸ್. ರೇವಣ್ಕರ್ ಮಾತನಾಡಿ “ನಿವೃತ್ತ ಜೀವನದಲ್ಲಿ ಸಾಹಿತ್ಯದ ಪ್ರವೃತ್ತಿ ಸಂತಸಮಯ…