Author: roovari

ಕುಂದಾಪುರ : ಕರ್ನಾಟಕ ಗಮಕ ಕಲಾ ಪರಿಷತ್ತು (ರಿ.), ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು, ಕುಂದಾಪುರ ಘಟಕ ಇವರ ಸಹಯೋಗದಲ್ಲಿ ಕನಕ ಜಯಂತಿಯ ಪ್ರಯುಕ್ತ ‘ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನ’ ಕಾರ್ಯಕ್ರಮನ್ನು ದಿನಾಂಕ 30-11-2023ರಂದು ಸಂಜೆ 4.30ಕ್ಕೆ ಕುಂದಾಪುರ, ಎ.ಎಸ್.ಎನ್. ಹೆಬ್ಬಾರ್ ಇವರ ಸ್ವಗೃಹ ‘ನುಡಿ’ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಉಡುಪಿ ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್‌ ಕುಮಾರ್‌ ಕೆಮ್ಮಣ್ಣು ಇವರ ಗೌರವ ಉಪಸ್ಥಿತಿ ಹಾಗೂ ಕುಂದಾಪುರದ ಹಿರಿಯ ನ್ಯಾಯವಾದಿ ಮತ್ತು ಕಲಾ-ಸಾಹಿತ್ಯ ಪೋಷಕರಾದ ಶ್ರೀ ಎ.ಎಸ್.ಎನ್. ಹೆಬ್ಬಾರ್ ಇವರ ಆತಿಥ್ಯದಲ್ಲಿ ನಡೆಯಲಿದೆ. ಕನಕದಾಸ ಕೀರ್ತನೆಗಳ ಗಾಯನ ಮತ್ತು ಗಮಕ ವಾಚನ ವ್ಯಾಖ್ಯಾನದಲ್ಲಿ ದ.ರಾ. ಬೇಂದ್ರೆಯವರ ಮೇಘದೂತ (ಪೂರ್ವ ಮೇಘ)ದ ವಾಚನವನ್ನು ಪ್ರಸಿದ್ಧ ಗಮಕಿ ಶ್ರೀಮತಿ ಮಂಜುಳಾ ಸುಬ್ರಹ್ಮಣ್ಯ ಮಂಚಿ ಮತ್ತು ವ್ಯಾಖ್ಯಾನವನ್ನು ಸಂಸ್ಕೃತ ವಿದ್ವಾಂಸರು ಮತ್ತು ಕವಿಗಳಾದ ಡಾ. ರಾಘವೇಂದ್ರ ರಾವ್, ಪಡುಬಿದ್ರೆ ಇವರು ನಡೆಸಿಕೊಡಲಿದ್ದಾರೆ.…

Read More

ಶಿರ್ವ : ಕೇಂದ್ರ ಸಾಹಿತ್ಯ ಅಕಾಡೆಮಿ ಹಾಗೂ ಪರಿಚಯ (ರಿ) ಪಾಂಬೂರು ಇದರ ಜಂಟಿ ಸಹಯೋಗದೊಂದಿಗೆ ಪಾಂಬೂರು ಪರಿಚಯದಲ್ಲಿ ‘ಕವಿಸಂಧಿ ಹಾಗೂ ಕಥಾಸಂಧಿ’ ಸಾಹಿತ್ಯಪೂರ್ಣ ಕಾರ್ಯಕ್ರಮವು ದಿನಾಂಕ 19-11-2023ರಂದು ಜರಗಿತು. ಖ್ಯಾತ ಕೊಂಕಣಿ ಕವಿ ಜೊ.ಸಿ. ಸಿದ್ಧಕಟ್ಟೆ ಇವರು ಕವಿತಾ ಸಂಧಿಯನ್ನು ಹಾಗೂ ಖ್ಯಾತ ಸಣ್ಣಕತೆಕಾರ ಗೋಕುಲ್‌ದಾಸ್ ಪ್ರಭುರವರು ಕಥಾ ಸಂಧಿಯನ್ನು ನಡೆಸಿಕೊಟ್ಟರು. ಪಾಂಬೂರ್‌ ಚರ್ಚ್ ಧರ್ಮಗುರು ವಂ| ಗುರು ಹೆನ್ರಿ ಮಸ್ಕರೇನ್ಹಸ್‌ರವರು ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ನಿಮಂತ್ರಕ, ಕವಿ ಮೆಲ್ವಿನ್‌ ರೊಡ್ರಿಗಸ್‌ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಪರಿಚಯ ಆಡಳಿತ ವಿಸ್ವಸ್ಥ ಡೊ| ವಿನ್ಸೆಂಟ್ ಆಳ್ವ ವಂದನಾರ್ಪಣೆಗೈದರು. ಪರಿಚಯ ಕಾರ್ಯದರ್ಶಿ ಪ್ರಕಾಶ್ ನೊರೋನ್ನಾ ಕಾರ್ಯಕ್ರಮವನ್ನು ಸಂಯೋಜಿಸಿದರು. ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗದ ಸದಸ್ಯರಾದ ಸಾಹಿತಿ ಶ್ರೀ ಎಚ್.ಎಮ್.ಪೆರ್ನಾಲ್ ಹಾಗೂ ಶ್ರೀ ಸ್ಟ್ಯಾನಿ ಬೇಳಾ ಹಾಗೂ ಪರಿಚಯದ ಟ್ರಸ್ಟಿಗಳೊಂದಿಗೆ ಸಾಹಿತ್ಯಾಭಿಮಾನಿಗಳು ಉಪಸ್ಥಿತರಿದ್ದರು.

Read More

ಉಡುಪಿ : ರಂಗಭೂಮಿ ವತಿಯಿಂದ 44ನೇ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯು ದಿನಾಂಕ 22-11-2023ರಂದು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಹೆ ವಿ.ವಿ. ಸಹ ಕುಲಾಧಿಪತಿ ಹಾಗೂ ರಂಗಭೂಮಿಯ ಗೌರವಾಧ್ಯಕ್ಷ ಡಾ. ಎಚ್‌.ಎಸ್‌. ಬಲ್ಲಾಳ್ ಇವರು “ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ಅತ್ಯಾಚಾರದ ಬಗ್ಗೆ ನಾಟಕದ ಮೂಲಕ ಅರಿವು ಮೂಡಿಸುವುದರಿಂದ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯವಿದೆ. ದೇಶದ ಯುವ ಜನತೆಗೆ ನಾಟಕ ಸ್ಪರ್ಧೆಗಳ ಮೂಲಕ ಅರಿವು ಮೂಡಿಸುವ ಕೆಲಸವಾಗಬೇಕು. ಸಿನೆಮಾ ತಾರೆಯರಿಗಿಂತಲೂ ನಾಟಕ, ಯಕ್ಷಗಾನ ಕಲಾವಿದರ ಶ್ರಮ ಅಪಾರ. ಸಿನೆಮಾದಲ್ಲಿ ಒಂದು ದೃಶ್ಯಕ್ಕೆ ಹಲವಾರು ಟೇಕ್ ಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ನಾಟಕ, ಯಕ್ಷಗಾನದಲ್ಲಿ ಹಾಗೆ ಸಾಧ್ಯವಿಲ್ಲ. ಈ ಕಾರಣಕ್ಕೆ ಇಂತಹ ಕಲೆ ಮತ್ತಷ್ಟು ಬೆಳೆಯಬೇಕು. ನಾಟಕಗಳಲ್ಲಿ ಯುವಜನತೆ ಹಾಗೂ ಮಕ್ಕಳ ಪಾಲ್ಗೊಳ್ಳುವಿಕೆ ಅತೀ ಅಗತ್ಯವಾಗಿದೆ. ಇದರಿಂದ ಈ ಕಲೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯಲು ಸಾಧ್ಯ” ಎಂದು ಹೇಳಿದರು. ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ…

Read More

ಶಿರ್ವ : ಉಡುಪಿ ಪೇಜಾವರ ಮಠದ ಆಡಳಿತಕ್ಕೊಳಪಟ್ಟ, ಪಾಜಕ ಆನಂದತೀರ್ಥ ವಿದ್ಯಾಲಯದಲ್ಲಿ ಹೊಸನಗರ ತಾಲೂಕಿನ ಹೆಗ್ಗೋಡು ಕಿನ್ನರ ಮೇಳ ನಾಟಕ ತಂಡದಿಂದ “ಅನ್ನೇ ಫ್ರಾಂಕ್ ಡೈರಿ’ ನಾಟಕ ಪ್ರದರ್ಶನ ದಿನಾಂಕ 20-11-2023ರಂದು ನಡೆಯಿತು. ಆನಂದತೀರ್ಥ ವಿದ್ಯಾಸಂಸ್ಥೆಗೆ ಹಲವಾರು ವರ್ಷದಿಂದ ಈ ನಾಟಕ ತಂಡ ಆಗಮಿಸಿ ಮಕ್ಕಳ ಮನೋವಿಕಾಸಕ್ಕೆ ಬೇಕಾದ ನಾಟಕವನ್ನು ಪ್ರದರ್ಶಿಸುತ್ತಾ ಬಂದಿದ್ದು, ಈ ವರ್ಷವೂ ಕೂಡ ಹತ್ತನೇ ತರಗತಿಯ ಇಂಗ್ಲೀಷ್‌ನ ಒಂದು ಪಾಠವಾದ ಅನ್ನೇಫ್ರಾಂಕ್ ಪಾಠವನ್ನು ಸರಳವಾಗಿ ರೂಪಾಂತರಿಸಿ, ಮಕ್ಕಳಿಗೆ ಅರ್ಥವಾಗುವಂತೆ ಪ್ರಸ್ತುಪಡಿಸಿದರು. ಈ ನಾಟಕ ತಂಡದಲ್ಲಿರುವ ನುರಿತ, ಅನುಭವೀ ನಾಟಕ ಕಲಾವಿದರು ಮಾಡುವ ನಟನೆ ಮಕ್ಕಳ ಮನಸ್ಸಿಗೆ ಬೇಗ ನಾಟುವಂತಿರುತ್ತದೆ. 5ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ನಾಟಕ ನೋಡಿ ಆನಂದಿಸಿದರು. ಪ್ರಿನ್ಸಿಪಲ್ ಡಾ. ಗೀತಾ ಎಸ್. ಕೋಟ್ಯಾನ್, ಸಂಯೋಜಕರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ತಾಂತ್ರಿಕ ವಿಭಾಗದ ಛಾಯ ಕೋಟ್ಯಾನ್, ಪೂರ್ಣಿಮಾ, ನಿಶ್ಚಿತಾ ಸಹಕರಿಸಿದರು.

Read More

ಬೆಂಗಳೂರು : ಶ್ರೀ ಡಿ. ಸುಬ್ಬರಾಮಯ್ಯ ಲಲಿತ ಕಲಾ ಟ್ರಸ್ಟ್ (ರಿ.) ಇದರ 30ನೇ ರಾಗ ಶ್ರೀ ಸಮ್ಮೇಳನ 2023ರ ಪ್ರಯುಕ್ತ ‘ತೆಂಕುತಿಟ್ಟು ಯಕ್ಷಗಾನ ಹಾಡುಗಾರಿಕೆ’ ದಿನಾಂಕ 02-12-2023ರಂದು ಸಂಜೆ ಗಂಟೆ 4.45ಕ್ಕೆ ಬೆಂಗಳೂರಿನ ಬಸವನಗುಡಿ, ಬಿ.ಪಿ. ವಾಡಿಯಾ ರಸ್ತೆ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಇಲ್ಲಿ ನಡೆಯಲಿದೆ. ಶ್ರೀ ಪಿ. ನಿತ್ಯಾನಂದ ರಾವ್ ಸುರತ್ಕಲ್ ಇವರ ಹಾಡುಗಾರಿಕೆಗೆ ಧರ್ಮಸ್ಥಳದ ಶ್ರೀ ಬಿ. ಜನಾರ್ದನ ತೋಳ್ಪಾಡಿತ್ತಾಯ ಇವರು ಮದ್ದಲೆಯಲ್ಲಿ ಸಹಕರಿಸಲಿದ್ದಾರೆ.

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೇ ಸಾಲಿನ ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಗೆ ದತ್ತಿ ದಾನಿಗಳ ಆಶಯದಂತೆ ಮಂಡ್ಯ ಜಿಲ್ಲೆಯ ಒಬ್ಬರು ಜನಪದ ಕಲಾವಿದರು ಸೇರಿದಂತೆ ರಾಜ್ಯದಲ್ಲಿ ಜಾನಪದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಒಟ್ಟು ಮೂರು ಜನಪದ ಸಾಧಕರನ್ನು ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿʼ ಪ್ರಶಸ್ತಿಯನ್ನು ಮಂಡ್ಯ ಜಿಲ್ಲೆಯ ಹಿರಿಯ ಸಮಾಜಸೇವಕರಾದ ಶ್ರೀ ಎಸ್.ಎಮ್. ಶಂಕರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿದ್ದು. ಪ್ರತಿ ವರ್ಷ ಜನಪದ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರನ್ನು ಗುರುತಿಸಿ ಗೌರವಿಸಲಾಗುತ್ತದೆ.  2023ನೇ ಸಾಲಿನ ‘ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ’ ಪ್ರಶಸ್ತಿಯನ್ನು ಮಂಡ್ಯ ಜಿಲ್ಲೆ ನಾಗಮಂಗಲದ ಡಿ.ವಿ.ರುದ್ರೇಶ್, ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ ಕದರಮ್ಮ ಹಾಗೂ ಮದ್ದೂರು ತಾಲೂಕಿನ ಸಿ.ಎನ್. ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಜಾನಪದ ಕಲಾವಿದರಿಗಾಗಿಯೇ ಮೀಸಲಾಗಿರುವ…

Read More

ಧಾರವಾಡ : ಚಿತ್ರಕಲಾ ಶಿಲ್ಪಿ ಶ್ರೀ ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಇದರ ‘ಶ್ರೀ ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ 2023’ವು ದಿನಾಂಕ 29-11-2023ರಂದು ಸಂಜೆ ಗಂಟೆ 5.30ಕ್ಕೆ ಕರ್ನಾಟಕ ಕುಲ ಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ನಡೆಯಲಿದೆ. ಪ್ರಶಸ್ತಿಗೆ ಭಾಜನರಾಗಿರುವ ಕಲಾವಿದರು ಚಿತ್ರಕಲಾ ಪ್ರಾತ್ಯಕ್ಷಿಕೆಯನ್ನು ದಿನಾಂಕ 28-11-2023ರಂದು ಬೆಳಿಗ್ಗೆ ಗಂಟೆ 11ಕ್ಕೆ ಧಾರವಾಡದ ಸರಕಾರಿ ಚಿತ್ರಕಲಾ ಮಹಾವಿದ್ಯಾಲಯದ ಆರ್ಟ್ ಗ್ಯಾಲರಿಯಲ್ಲಿ ನೀಡಲಿದ್ದಾರೆ. ಈ ಪ್ರಶಸ್ತಿ ಪ್ರದಾನ ಸಮಾರಂಭವು ಭಾರತ ಸರ್ಕಾರದ ಮಾನ್ಯ ಕೇಂದ್ರ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ ಇವರ ಘನ ಉಪಸ್ಥಿತಿಯಲ್ಲಿ ಮಾನ್ಯ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ ಎಸ್‌. ಲಾಡ್ ಇವರು ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶ್ರೀ ಡಿ.ವ್ಹಿ. ಹಾಲಭಾವಿ ರಾಷ್ಟ್ರೀಯ…

Read More

ಮಂಗಳೂರು : ಅಂಡಾಲಬೀಡು ಕುಟುಂಬ ಟ್ರಸ್ಟ್ ವತಿಯಿಂದ ಮರಕಡದ ಅಂಡಾಲಬೀಡು ಧರ್ಮಚಾವಡಿಯಲ್ಲಿ ಕವಿ ಅಂಡಾಲ ಗಂಗಾಧರ ಶೆಟ್ಟರ ಸಹಸ್ರ ಚಂದ್ರದರ್ಶನ ಶಾಂತಿಹೋಮ, ಅಂಡಾಲ ಅಭಿನಂದನ ಮತ್ತು ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 22-11-2023ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಕವಿ ಸಾಹಿತಿಗಳಾದ ಡಾ. ವಸಂತಕುಮಾರ ಪೆರ್ಲ ಇವರು ಮಾತನಾಡಿ “ಸಾಹಿತ್ಯವು ಮನಸ್ಸನ್ನು ವಿಕಾಸಗೊಳಿಸಿ, ಬುದ್ದಿಯನ್ನು ಬಲಗೊಳಿಸುವ ಒಂದು ಕಲೆ. ಸಾಹಿತ್ಯ ಸಂಘಟನೆಗಳ ಮೂಲಕ ಒಂದು ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಅರಿವು ವಿಸ್ತಾರವಾದಂತೆ ಸಮಾಜದಲ್ಲಿರುವ ಅಪನಂಬಿಕೆಗಳು ದೂರವಾಗಿ ವ್ಯಕ್ತಿ ವ್ಯಕ್ತಿಗಳೊಳಗೆ ಸುಮಧುರ ಬಾಂಧವ್ಯ ಏರ್ಪಡಲು ಸಾದ್ಯವಾಗುತ್ತದೆ. ಅಂಡಾಲ ಗಂಗಾಧರ ಶೆಟ್ಟಿಯವರು ಬ್ಯಾಂಕ್ ಉದ್ಯೋಗಿಯಾಗಿ ವೃತ್ತಿಜೀವನ ಆರಂಭಿಸಿ ಅನಂತರ ಸಾಹಿತ್ಯ ಮತ್ತು ಧಾರ್ಮಿಕ ಕ್ಷೇತ್ರದತ್ತ ಆಕರ್ಷಿತರಾಗಿ ಕುಟುಂಬಸ್ಥರ ಮತ್ತು ಹತ್ತು ಸಮಸ್ತರ ಸಹಕಾರದೊಂದಿಗೆ ಅಂಡಾಲಬೀಡಿನ ಚಿತ್ರಣವನ್ನು ಬದಲಾಯಿಸಿದರು. ತನ್ನೊಂದಿಗೆ ಊರವರ ಬದುಕನ್ನು ಹಸನುಗೊಳಿಸಿದರು” ಎಂದು ಹೇಳಿದರು. ತನ್ನ ಬದುಕಿಗೆ ಕೊಡುಗೆ ನೀಡಿದ ಮಹನೀಯರನ್ನು ಮತ್ತು ಅಂಡಾಲದ ಏಳಿಗೆಗೆ ಪಟ್ಟ ಪರಿಶ್ರಮವನ್ನು…

Read More

ಮಂಗಳೂರು : ಯಕ್ಷಾಂಗ‌ಣ ಮಂಗಳೂರು, ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023’ ಹನ್ನೊಂದನೇ ವರ್ಷದ ನುಡಿ ಹಬ್ಬದಲ್ಲಿ ದಿನಾಂಕ 22-11-2023ರಂದು ಯಕ್ಷಗಾನದ ಪ್ರಸಿದ್ಧ ಹಾಸ್ಯಪಟು ದಿ| ಬೆಟ್ಟಂಪಾಡಿ ಬಾಳಪ್ಪ ಶೆಟ್ಟರ ಸಂಸ್ಮರಣಾ ಸಮಾರಂಭ ನಡೆಯಿತು. ಈ ಸಮಾರಂಭವನ್ನು ಉದ್ಘಾಟಿಸಿದ ಶ್ರೀ ರಾಮಕೃಷ್ಣ ಕೋ-ಆಪರೇಟಿವ್ ಸೊಸೈಟಿ (ಲಿ.) ಇದರ ಅಧ್ಯಕ್ಷರಾದ ಶ್ರೀ ಜೈರಾಜ್ ಬಿ.ರೈ ಇವರು ಮಾತನಾಡಿ “ಸಾಧನಾಶೀಲ ಕಲಾವಿದರ ಹೆಸರಿನೊಂದಿಗೆ ಅವರ ಮನೆತನದ ಅಥವಾ ಊರಿನ ಹೆಸರು ಸೇರಿಕೊಂಡಿರುತ್ತದೆ. ಇದು ಅಂಥವರ ಸಮಗ್ರ ಕುಟುಂಬಕ್ಕೆ ಸಲ್ಲುವ ಗೌರವ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟರು ಈ ನಿಟ್ಟಿನಲ್ಲಿ ಮಾದರಿಯಾಗಿ ನಿಲ್ಲುತ್ತಾರೆ. ಅವರ ಸುಪುತ್ರ ಯಕ್ಷಾಂಗಣದೊಂದಿಗೆ ಕೈಜೋಡಿಸಿ ಬಾಳಪ್ಪ ಶೆಟ್ಟರ ಸಂಸ್ಮರಣೆ ನಡೆಸುತ್ತಿರುವುದು ಅಭಿನಂದನೀಯ” ಎಂದು ಹೇಳಿದರು. ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಸ್ಮರಣಾ ಭಾಷಣ ಮಾಡಿ ದಿವಂಗತ ಬಾಳಪ್ಪ ಶೆಟ್ಟರ…

Read More

ಮಂಗಳೂರು : ಭಾರತೀಯ ವಿದ್ಯಾಭವನ ಮಂಗಳೂರು ಮತ್ತು ಯೂನಿಯನ್ ಬ್ಯಾಂಕ್ ಸಹಯೋಗದೊಂದಿಗೆ ರಾಗತರಂಗ ಸಂಸ್ಥೆಯು ಭಾರತೀಯ ವಿದ್ಯಾಭವನದಲ್ಲಿ ದಿನಾಂಕ 17-11-2023ರಿಂದ 19-11-2023ರವರೆಗೆ ಶಾಲಾ ಮಕ್ಕಳಿಗಾಗಿ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಏರ್ಪಡಿಸಿತ್ತು. ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಿಂದ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ದಿನಾಂಕ 17-11-2023ರಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ನಗರಪಾಲಿಕೆಯ ಸದಸ್ಯ ಶ್ರೀ ದಿವಾಕರ್ ಪಾಂಡೇಶ್ವರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಭಾರತೀಯ ವಿದ್ಯಾಭವನ ಗೌರವ ಕಾರ್ಯದರ್ಶಿ ಶ್ರೀ ಸುಧೀರ್ ಕುಮಾರ್ ಶೆಟ್ಟಿ ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುದೇಶ್ ಶೆಟ್ಟಿ ಕೊಡಿಯಾಲಬೈಲ್, ಮಾನವ ಹಕ್ಕುಗಳ ಜಿಲ್ಲಾ ಯುವ ಘಟಕದ ಉಸ್ತುವಾರಿ ಶಮ್ಮಿ ಆತ್ಮಚರಣ್, ಭಾರತೀಯ ವಿದ್ಯಾಭವನ ನಿರ್ದೇಶಕರು, ರಾಗತರಂಗದ ಗೌರವಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು, ಡಾ. ದೇವರಾಜ್, ರಾಗತರಂಗದ ಅಧ್ಯಕ್ಷರಾದ ಆಶಾ ಹೆಗ್ಡೆ, ಕಾರ್ಯದರ್ಶಿ ಪಿ.ಸಿ.ರಾವ್, ಕೋಶಾಧ್ಯಕ್ಷರಾದ ಸೌಮ್ಯ ರಾವ್‌ ಮತ್ತು ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಪೂರ್ಣಿಮಾ ರಾವ್ ಮತ್ತು ಮಮತಾ ರಾಜೀವ್‌ ಸ್ಪರ್ಧೆಗಳನ್ನು…

Read More