Author: roovari

ಕಾಸರಗೋಡು : ರಂಗ ಚಿನ್ನಾರಿ ಕಾಸರಗೋಡು (ರಿ.) ಇದರ ಸಂಗೀತ ಘಟಕವಾದ ‘ಸ್ವರ ಚಿನ್ನಾರಿ’ ಪ್ರಸ್ತುತ ಪಡಿಸುವ 2ನೇ ಸರಣಿ ಕಾರ್ಯಕ್ರಮ ‘ಕನಕ ಸ್ಮರಣೆ’ ದಿನಾಂಕ 28-11-2023ರಂದು ಸಂಜೆ 5 ಗಂಟೆಗೆ ಕಾಸರಗೋಡಿನ ಕರಂದಕ್ಕಾಡು ಪದ್ಮಗಿರಿ ಕಲಾ ಕುಟೀರದಲ್ಲಿ ನಡೆಯಲಿದೆ.  ಖ್ಯಾತ ಕವಿಗಳಾದ ಶ್ರೀಕೃಷ್ಣಯ್ಯ ಅನಂತಪುರ ಇವರ ಅಧ್ಯಕ್ಷತೆಯಲ್ಲಿ ತುಳು ಸಾಹಿತಿ ಶ್ರೀ ಸತೀಶ್ ಸಾಲಿಯಾನ್ ಮತ್ತು ಕಾಸರಗೋಡಿನ ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕಿಯಾದ ಡಾ. ಆಶಾಲತಾ ಇವರುಗಳು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5.30ರಿಂದ ನಡೆಯಲಿರುವ ‘ಕನಕ ದಾಸರ ಗೀತೆಗಳ ‘ಸಂಗೀತ ರಸ ಸಂಜೆ’ಯಲ್ಲಿ ಹಾಡಲಿರುವ ಗಾಯಕರು ಶ್ರೀ ಕಿಶೋರ್ ಪೆರ್ಲ, ಶ್ರೀ ಗಣೇಶ್ ಪ್ರಸಾದ್ ನಾಯಕ್, ಶ್ರೀ ರತ್ನಾಕರ್ ಎಸ್. ಓಡಂಗಲ್ಲು, ಶ್ರೀಮತಿ ಪ್ರತಿಜ್ಞಾ ರಂಜಿತ್, ಶ್ರೀಮತಿ ಅಕ್ಷತಾ ಪ್ರಕಾಶ್, ಶ್ರೀಮತಿ ಜಯಶ್ರೀ ಅನಂತಪುರ, ಶ್ರೀಮತಿ ಬಬಿತಾ ಆಚಾರ್ಯ. ಕೀಬೋರ್ಡಿನಲ್ಲಿ ಪುರುಷೋತ್ತಮ್ ಕೊಪ್ಪಲ್, ಹಾರ್ಮೋನಿಯಂನಲ್ಲಿ ಸತ್ಯನಾರಾಯಣ ಐಲ, ರಿದಂ ಪ್ಯಾಡಿನಲ್ಲಿ ಪ್ರಭಾಕರ್ ಮಲ್ಲ ಮತ್ತು ತಬಲಾದಲ್ಲಿ ಲವಕುಮಾರ್…

Read More

ಪುತ್ತೂರು : ನಾಟ್ಯರಂಗ ಪುತ್ತೂರು ಪ್ರಸ್ತುತ ಪಡಿಸಿದ ‘ನೃತ್ಯ ಹರ್ಷ’ ಕಾರ್ಯಕ್ರಮವು ವಿವೇಕಾನಂದ ಕನ್ನಡ ಶಾಲಾ ಸಭಾಂಗಣದಲ್ಲಿ ದಿನಾಂಕ 19-11-2023ರಂದು ಸಂಪನ್ನಗೊಂಡಿತು. ಕರ್ನಾಟಕ ಕಲಾಶ್ರೀ ಶಾರದಾಮಣಿ ಶೇಖರ್ ಅವರು ದೀಪ ಪ್ರಜ್ವಲಿಸಿ ಮಾತನಾಡಿ “ಕಲೆ ವ್ಯಕ್ತಿತ್ವವನ್ನು ಅರಳಿಸುತ್ತದೆ. ಬಾಲ್ಯದಿಂದಲೇ ಮಕ್ಕಳಿಗೆ ಹೆತ್ತವರಾದ ನಾವು ನೀಡುವ ಪ್ರೋತ್ಸಾಹ, ಪ್ರೇರಣೆ ಮಕ್ಕಳಲ್ಲಿ ಕಲಾಸಕ್ತಿಯನ್ನು ಬೆಳೆಸುತ್ತದೆ. ಈ ನಿಟ್ಟಿನಲ್ಲಿ ನೃತ್ಯ, ರಂಗಕಲೆಯಲ್ಲಿ ಸ್ವ-ಸಾಮರ್ಥ್ಯ ಹಾಗೂ ನಿರಂತರ ಶ್ರಮಗಳಿಂದ ವಿಭಿನ್ನ ಆಲೋಚನೆ ಹಾಗೂ ಅನುಷ್ಠಾನಗಳಿಂದ ಗುರುತಿಸಿಕೊಂಡಿರುವ ನೃತ್ಯ ಗುರುಗಳಾದ ಮಂಜುಳಾ ಸುಬ್ರಹ್ಮಣ್ಯ ಇವರ ಸಾರಥ್ಯದಲ್ಲಿ ಮಕ್ಕಳ ಕಲಾ ಪ್ರಜ್ಞೆ ಅರಳಿ ಬೆಳಗಲಿ” ಎಂದು ಶುಭ ಹಾರೈಸಿದರು. ಅಭ್ಯಾಗತರಾಗಿ ಉಪಸ್ಥಿತರಿದ್ದ ಶಾಲಾ ಆಡಳಿತ ಸಮಿತಿಯ ಸದಸ್ಯರೂ, ದಂತ ವೈದ್ಯರೂ ಆದ ಡಾಕ್ಟರ್ ಆಶಾ ಇವರು “ಭಾರತೀಯ ಶ್ರೇಷ್ಠ ಕಲಾ ಪ್ರಕಾರವಾದ ಶಾಸ್ತ್ರೀಯ ನೃತ್ಯ ಅಭಿನಯಕ್ಕೆ ಇಂದು ಸಾಕ್ಷಿಯಾದ ವಿವೇಕಾನಂದ ಕನ್ನಡ ಶಾಲೆ ಸದಾ ಈ ಬಗೆಯ ಕಾರ್ಯಕ್ರಮಗಳಿಗೆ ಸ್ಪಂದಿಸುತ್ತಲೇ ಬಂದಿದೆ. ಇಂದಿಗ ಇಲ್ಲಿ ಪ್ರದರ್ಶನ ನೀಡುತ್ತಿರುವ ಎಲ್ಲಾ ಮಕ್ಕಳಿಗೂ,…

Read More

ಪುತ್ತೂರು : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ, ಶಿಕ್ಷಣ ಇಲಾಖೆ ಪುತ್ತೂರು, ಗ್ರಾಮ ಪಂಚಾಯತ್ ಬಜತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯೊಂದಿಗೆ, ಮಿತ್ರಂಪಾಡಿ ಜಯರಾಮ ರೈಯವರ ಮಹಾಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಘೋಷವಾಕ್ಯದಲ್ಲಿ ನಡೆಯುವ ಗ್ರಾಮ ಸಾಹಿತ್ಯ ದಶ ಸಂಭ್ರಮ ಕಾರ್ಯಕ್ರಮವು ಈ ಬಾರಿ ಬಜತ್ತೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದಿನಾಂಕ 25-11-2023ರಂದು ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಗಂಗಾಧರ ಪಿ.ಎನ್. ಅವರು ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿರುವ ಶ್ರೀಮತಿ ವಿಮಲಾ ಭರತ್, ಬಜತ್ತೂರು ಕ್ಲಸ್ಟರ್ ಸಿ.ಆರ್‌.ಪಿ. ಮಂಜುನಾಥ್ ಕೆ.ವಿ. ಹಾಗೂ ಉಪ್ಪಿನಂಗಡಿ ಹೋಬಳಿ ಕ.ಸಾ.ಪ. ನಿಯೋಜಿತ ಅಧ್ಯಕ್ಷರಾದ ಶ್ರೀ ಕರುಣಾಕರ ಸುವರ್ಣ, ಕೋಶಾಧ್ಯಕ್ಷರಾದ ಡಾ. ಹರ್ಷ ಕುಮಾರ್ ರೈ, ಶ್ರೀ ಹಿರಿಯ ಪತ್ರಕರ್ತರಾದ ಉದಯಕುಮಾರ್ ಯು.ಎಲ್. ಅವರು ಭಾಗವಹಿಸಲಿದ್ದಾರೆ. ಪುತ್ತೂರು ಉಮೇಶ್ ನಾಯಕ್ ಅವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರು ಸಾಹಿತಿಗಳಾದ ವಿಲ್ಫ್ರೆಡ್…

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರ ಹೆಬ್ರಿ ಇವರ ಸಹಯೋಗದೊಂದಿಗೆ ‘ದತ್ತಿ ಉಪನ್ಯಾಸ’ ಹಾಗೂ ‘ಓದುವ ಬೆಳಕು’ ಕಾರ್ಯಕ್ರಮ ದಿನಾಂಕ 18-11-2023ರಂದು ಹೆಬ್ರಿಯ ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರದಲ್ಲಿ ಜರುಗಿತು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾದ ತಿಂಗಳ ಸಡಗರ ಕಾರ್ಯಕ್ರಮದಲ್ಲಿ ಅಂಬಲಪಾಡಿ ಜಾನಕಿ ವ್ಯಾಸ ಬಲ್ಲಾಳ ದತ್ತಿ ಹಾಗೂ ಶ್ರೀ ಸದಾನಂದ ಸುವರ್ಣ ದತ್ತಿ ಉಪನ್ಯಾಸವು ಅ.ಪೊಳಲಿ ಬಾಲಕೃಷ್ಣ ಶೆಟ್ಟಿ ಮತ್ತು ಡಾ.ಶಿವರಾಮ ಕಾರಂತ ಬದುಕು ಮತ್ತು ಬರಹ ಎಂಬ ಎರಡು ದತ್ತಿ ಉಪನ್ಯಾಸಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಮೃತ ಭಾರತಿ ಪ್ರೌಢಶಾಲೆ ಹೆಬ್ರಿ ಇಲ್ಲಿಯ ಕನ್ನಡ ಅಧ್ಯಾಪಕರಾದ ಮಹೇಶ್ ಹೈಕಾಡಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯತ್ ಗ್ರಂಥಾಲಯದ ಅರಿವು ಕೇಂದ್ರದ ವತಿಯಿಂದ ನಡೆಸಲಾದ ‘ಓದುವ ಬೆಳಕು’ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ತಾವು ಓದಿದ ಮೆಚ್ಚಿನ…

Read More

ಮಡಿಕೇರಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆಯ ಸಂಯುಕ್ತಾಶ್ರಯದಲ್ಲಿ ದಿನಾಂಕ 17-11-2023ರಂದು ಹಾಕತ್ತೂರು ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಬಿ.ಆರ್. ಸಾಯಿನಾಥ್’ ಮತ್ತು ತ್ರಿಭಾಷಾ ಸಾಹಿತಿ ಮುಲ್ಲೇಂಗಡ ದಿ. ಬೇಬಿ ಚೋಂದಮ್ಮ ಅವರ ಸ್ಮರಣಾರ್ಥ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡೇ ಗೌಡ ಇವರು ಉದ್ಘಾಟಿಸಿ ಮಾತನಾಡುತ್ತಾ “ಶಾಲೆಗಳಿಗೆ ಸಾಹಿತ್ಯವನ್ನು ಕೊಂಡೊಯ್ದು ವಿದ್ಯಾರ್ಥಿಗಳನ್ನು ಸಾಹಿತ್ಯಾಸಕ್ತರನ್ನಾಗಿ ಕನ್ನಡ ಭಾಷೆಯನ್ನು ಬೆಳೆಸುವ ಕಾರ್ಯಕ್ರಮ ಪ್ರತಿಯೊಂದು ಶಾಲೆಗಳಲ್ಲಿ ವ್ಯವಸ್ಥಿತವಾಗಿ ನಡೆಯಬೇಕು” ಎಂದು ನುಡಿದರು. ಕೊಡಗಿನ ಮಹಿಳಾ ಸಾಹಿತ್ಯದಲ್ಲಿ ಕಥೆಗಾರ್ತಿ ಗೌರಮ್ಮ ಅವರ ಸಾಧನೆಯ ಕುರಿತು ಮಾತನಾಡಿ, “ನಂಜನಗೂಡು ತಿರುಮಲಾಂಬಾ ಕಲ್ಯಾಣಮ್ಮನವರ ಸಮಕಾಲೀನರಾಗಿ ಗೌರಮ್ಮನವರು ಬರೆದ ಪುಸ್ತಕಗಳು ಇಂದು ಓದುಗರ ಮನದಲ್ಲಿ ಅಚ್ಚಳಿಯದೆ ಉಳಿದಿವೆ. ಹತ್ತನೇ ಶತಮಾನದ ಕವಿ ನಾಗವರ್ಮ 15ನೇ ಶತಮಾನದ ಜೈನ ಕವಿ ದೇವಪ್ಪ ರೆ.ಫಾ.ಕಿಟಲ್ ಅನಂತರ ಪಂಜೆ ಮಂಗೇಶರಾಯರು, ಭಾರತೀಸುತರು,…

Read More

ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ. ಡಾ.ದಯಾನಂದ ಪೈ, ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ, ಹನ್ನೊಂದನೇ ವರ್ಷದ ನುಡಿ ಹಬ್ಬ ‘ಶ್ರೀಹರಿ ಚರಿತ್ರೆ’ ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023 ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ದಿನಾಂಕ 19-11-2023ರಂದು ಉದ್ಘಾಟನೆಗೊಂಡಿತು.  ಈ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರು ಮಾತನಾಡುತ್ತಾ “ಯಕ್ಷಗಾನ ಹಲವು ರೋಗಗಳಿಗೆ ಔಷಧ ರೂಪದಲ್ಲಿ ಪರಿಣಾಮ ಬೀರುತ್ತದೆ. ಯಕ್ಷಗಾನ ವೀಕ್ಷಣೆಯಿಂದ ಮಾನಸಿಕ ಒತ್ತಡ ದೂರವಾಗಿ ನೆಮ್ಮದಿ ಪಡೆಯಬಹುದು. ತಾಳಮದ್ದಳೆ ಸಪ್ತಾಹದ ಮೂಲಕ ಯಕ್ಷಾಂಗಣ ಸಂಸ್ಥೆ ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದೆ” ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ “ಇಂದಿನ ಪೀಳಿಗೆ ಮೊಬೈಲ್ ವೀಕ್ಷಣೆಗೆ ಸಮಯ…

Read More

ಕಾಸರಗೋಡು : ಕಾಸರಗೋಡಿನ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಸ್ಥೆ ರಂಗ ಚಿನ್ನಾರಿಯ ಅಂಗ ಸಂಸ್ಥೆಯಾದ ನಾರಿ ಚಿನ್ನಾರಿಯ ಹನ್ನೊಂದನೆಯ ಸರಣಿ ಕಾರ್ಯಕ್ರಮವು ದಿನಾಂಕ 19-11-2023ರಂದು ಚತುರ್ಭಾಷೆಗಳ ನಾರಿಯರ ಸಮ್ಮಿಲನದ ‘ರಸ ಪಯಸ್ವಿನಿ’ ಪದ್ಮಗಿರಿ ಕಲಾಕುಟೀರ ಕರಂದಕ್ಕಾಡಿನಲ್ಲಿ ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ಸಂಪನ್ನಗೊಂಡಿತು. ಪ್ರಪ್ರಥಮವಾಗಿ ಕಾಸರಗೋಡಿನ ನಾಲ್ಕು ಭಾಷೆಗಳ ಮಹಿಳೆಯರು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಕಲೆತು ಸಂಭ್ರಮಿಸಿದರು. ಈ ವಿಶಿಷ್ಟ ಕಾರ್ಯಕ್ರಮವನ್ನು ಹಿರಿಯ ಲೇಖಕಿ, ವಿಶ್ರಾಂತ ಪ್ರಾಧ್ಯಾಪಕಿ ಡಾ. ಪ್ರಮೀಳಾ ಮಾಧವ್ (ಕನ್ನಡ), ಸಂಶೋಧಕಿ, ಸಾಹಿತಿ, ಕುಶಾಲಾಕ್ಷಿ ಕುಲಾಲ್ (ತುಳು), ಗಾಯಕಿ, ಗೃಹಿಣಿ ಮಾಯಾ ಮುಕುಂದ ರಾಜ್ (ಕೊಂಕಣಿ), ಸಮಾಜ ಸೇವಕಿ, ಮಾನವ ಹಕ್ಕು ಸಂರಕ್ಷಣಾ ಸಮಿತಿ ಅಧ್ಯಕ್ಷೆ ಜುಲೇಖಾ ಮಾಹಿನ್ (ಮಲಯಾಳ) ಜತೆಗೂಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಡಾ. ಪ್ರಮೀಳಾ ಮಾಧವ್ “ನಾಲ್ಕು ಭಾಷೆಗಳ ಅಕ್ಕತಂಗಿಯರೆಲ್ಲ ಸೇರಿ ಸಂತೋಷಗೊಳ್ಳುವ ಸಂದಭ೯ವನ್ನು ಮೊದಲ ಬಾರಿಗೆ ಸೃಷ್ಟಿಸಿದ ನಾರಿಚಿನ್ನಾರಿಯ ಹೆಜ್ಜೆಯನ್ನು ಶ್ಲಾಘಿಸಿದರು. ಹೆಣ್ಣು ಮಕ್ಕಳ ಕುರಿತಾಗಿ ಇರುವ ಅನೇಕ ಪೂವಾ೯ಗ್ರಹಗಳು ಕಡಿಮೆಯಾಗಿವೆ.…

Read More

ವಿರಾಜಪೇಟೆ : ಮೊಗರಗಲ್ಲಿಯಲ್ಲಿ ಸಾಧಿಕ್ ಆರ್ಟ್ ಗ್ಯಾಲರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕಲಾ ಉತ್ಸವ ಕೊಡಗು -2023’ ವರ್ಣಚಿತ್ರಗಳು, ಶಿಲ್ಪಗಳು, ಅನುಸ್ಥಾಪನ ಕಲೆ, ಛಾಯಾಗ್ರಹಣ ಇವುಗಳ ತಯಾರಿಕೆ ಮತ್ತು ಪ್ರದರ್ಶನವು ದಿನಾಂಕ 11-11-2023ರಂದು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವು ದಿನಾಂಕ 31-12-2023ರ ತನಕ ನಡೆಯಲಿದೆ. ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಈ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿ “ಕೊಡಗು ರಮ್ಯ ಪರಿಸರದ, ಪ್ರಕೃತಿ ಸೊಬಗಿನ ನಾಡು. ಇದು ಕಲಾವಿದರಿಗೆ ಸ್ಫೂರ್ತಿ ನೀಡುತ್ತದೆ. ಇದನ್ನೇ ಕುಂಚದಲ್ಲಿ ಅರಳಿಸಿದರೆ ಉತ್ತಮ ಕಲಾ ಚಿತ್ರ ಮೂಡಿ ಬರುತ್ತದೆ. ಆದ್ದರಿಂದ ಕಲಾವಿದರಿಗೆ ಒತ್ತಾಸೆ ನೀಡುವಂತಹ ತಾಣಗಳನ್ನು ಆರಿಸಿ ಚಿತ್ರಕಲಾ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಕಲೆ, ಸಾಹಿತ್ಯಕ್ಕೆ ಕೊಡಗು ಮರುಭೂಮಿಯಂತೆ. ವಿದ್ಯಾವಂತರಿದ್ದರೂ ಕಲೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಬರುವುದಿಲ್ಲ ಹಾಗೂ ಪ್ರೋತ್ಸಾಹ ನೀಡುವುದಿಲ್ಲ. ಕಲಾವಿದರಿಗೆ ಪ್ರೋತ್ಸಾಹ ನೀಡಿ ವೇದಿಕೆ ಒದಗಿಸಬೇಕು” ಎಂದು ಅಭಿಪ್ರಾಯಪಟ್ಟರು. ಕೊಡಗು ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನೀರ್…

Read More

ಗದಗ : ಲಕ್ಷ್ಮೇಶ್ವರದ ಕಲಾ ವೈಭವ ಸಾಂಸ್ಕೃತಿಕ ವಿವಿದೋದ್ದೇಶ ಸಂಸ್ಥೆಯು ಒಂದು ದಿನದ ಭರತನಾಟ್ಯ ಕಾರ್ಯಗಾರವನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿತ್ತು. ಯುವ ಭರತನಾಟ್ಯ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ದಿನಾಂಕ 19-11-2023ರಂದು ಈ ಕಾರ್ಯಕ್ರಮವನ್ನು ನಡೆಸಿಕೊಂಡರು. ಸಂಸ್ಥೆಯ ನಿರ್ದೇಶಕಿಯಾಗಿರುವ ಯುವ ಭರತನಾಟ್ಯ ಕಲಾವಿದೆ ಕು. ಭವ್ಯ.ಎಸ್ ಕತ್ತಿ ಇವರ ಶಿಷ್ಯರು ಈ ಕಾರ್ಯಾಗಾರದ ಪ್ರಯೋಜನವನ್ನು ಪಡೆದುಕೊಂಡರು. ಇದು ಮಂಜುನಾಥ್ ಇವರ 77ನೇ ಕಾರ್ಯಾಗಾರವಾಗಿದೆ.

Read More

ಶಿವಮೊಗ್ಗ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಇದರ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಂಗಳೂರಿನ ಮಂಗಳಾ ಆಸ್ಪತ್ರೆಯ ಆಯುರ್ವೇದ ಹಾಗೂ ಮೂಲವ್ಯಾಧಿ ಕ್ಷಾರ ಚಿಕಿತ್ಸಾ ತಜ್ಞ ಮತ್ತು ಬರಹಗಾರ ಡಾ. ಸುರೇಶ ನೆಗಳಗುಳಿ ಇವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ದಿನಾಂಕ 19-11-2023ದಂದು ಶಿವಮೊಗ್ಗದ ಕರ್ನಾಟಕ ಸಭಾಭವನದಲ್ಲಿ ಕರ್ನಾಟಕ ಮರು ನಾಮಕರಣದ ಸುವರ್ಣ ಸಂಭ್ರಮದ ನಿಮಿತ್ತ ಏರ್ಪಡಿಸಲಾಗಿದ್ದ ಪಂಚ ಭಾಷಾ ಕವಿಗೋಷ್ಠಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು. ವೇದಿಕೆ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್, ಜಿಲ್ಲಾಧ್ಯಕ್ಷೆ ಡಾ. ಹಸೀನಾ ಕೆ.ಹೆಚ್., ರಂಜಾನ್ ದರ್ಗಾ, ನಾಗರಾಜ್ ದೊಡ್ಮನಿ, ಖ್ಯಾತ ಗಜಲ್ ಕವಿ ಸಿದ್ಧರಾಮ‌ ಹೊನ್ಕಲ್, ಮಂಗಳೂರಿನ‌ ನ್ಯಾಯವಾದಿ ಕವಯಿತ್ರಿ ವೇದಿಕೆಯ ಉಪಾಧ್ಯಕ್ಷೆ ಶ್ರೀಮತಿ ಪರಿಮಳಾ ಮಹೇಶ್, ಉಳುವಂಗಡ ಕಾವೇರಿ ಉದಯ, ಬಿ.ಎಂ. ಬಶೀರ್, ನಾಗೇಶ್ ಎಂ. ಅನ್ವೇಕರ, ಉಳ್ಳಾಲದ ಆರಕ್ಷಕ ಇಲಾಖೆಯ ಮನ್ಸೂರ್ ಮುಲ್ಕಿ, ಲತಾ ಎಂ.ಕೆ. ತುರುವೇಕೆರೆ, ಜೆ.ಜಿ. ನರಸಿಂಹ ಮೂರ್ತಿ ಮತ್ತಿತರ ಹಲವು ಗಣ್ಯರು ಈ…

Read More