Author: roovari

ಮಂಗಳೂರು : ಅಖಿಲ ಭಾರತ ತುಳು ಒಕ್ಕೂಟ (ರಿ.) ಇದರ ವತಿಯಿಂದ ‘ತುಳು ಜಾನಪದ ಉಚ್ಚಯ 2024’ ಕಾರ್ಯಕ್ರಮವನ್ನು ದಿನಾಂಕ 24 ಆಗಸ್ಟ್ 2024ರಂದು ಬೆಳಗ್ಗೆ ಗಂಟೆ 9-30ಕ್ಕೆ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಾಗಿದೆ. ಬೆಳಗ್ಗೆ 8.30ಕ್ಕೆ ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಿಂದ ಪುರಭವನದವರೆಗೆ ನಡೆಯುವ ತುಳುವೆರೆ ದಿಬ್ಬಣ ಮೆರವಣಿಗೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಇವರು ಉದ್ಘಾಟಿಸಲಿದ್ದಾರೆ. ದಿವಾಕರ ಶೆಟ್ಟಿ ಸಾಂಗ್ಲಿ, ನಗ್ರಿಗುತ್ತು ರೋಹಿತ್ ಶೆಟ್ಟಿ ಕರ್ನೂರು ಮೋಹನ್ ರೈ, ಅಶೋಕ್ ಪಕ್ಕಳ ಮುಂಬಯಿ ಭಾಗವಹಿಸಲಿದ್ದಾರೆ. ಕಂಬಳ ಕೂಟಕ್ಕೆ ಹೆಸರುವಾಸಿಯಾದ ನಂದಳಿಕೆ ಶ್ರೀಕಾಂತ ಭಟ್ ಅವರ ಗಿಡ್ಡೆರು ‘ನಂದಳಿಕೆ ಪಾಂಡು’ವಿಗೆ ಸನ್ಮಾನ ನಡೆಯಲಿದೆ. ಬೆಳಗ್ಗೆ 9-30ಕ್ಕೆ ನಡೆಯಲಿರುವ ನಮ್ಮ ತುಳುನಾಡ ಕಲಾ ಪಂಥವನ್ನು ಡಾ. ಎ. ಸದಾನಂದ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರೊ. ಪಿ.ಎಲ್. ಧರ್ಮ, ಬಿ. ರಮಾನಾಥ ರೈ, ಐವನ್ ಡಿಸೋಜ, ರಾಜೇಶ್ ಖನ್ನಾ, ಜಾನಕಿ ಬ್ರಹ್ಮಾವರ್ ಉಪಸ್ಥಿತರಿರಲಿದ್ದಾರೆ. ನಾನಾ ಅಕಾಡೆಮಿಗಳ…

Read More

ನೀರ್ಚಾಲು : ಶಂಕರ ಶರ್ಮ ಕುಳಮರ್ವ ಇವರು ಭಾಮಿನಿ ಷಟ್ಪದಿಯಲ್ಲಿ ರಚಿಸಿರುವ ‘ಉತ್ತರ ಕಾಂಡ ಕಾವ್ಯಧಾರಾ’ ಕೃತಿಯ ಲೋಕಾರ್ಪಣಾ ಸಮಾರಂಭವು ನೀರ್ಚಾಲಿನ ಮಹಾಜನ ಸಂಸ್ಕೃತ ಕಾಲೇಜು ಉನ್ನತ ಪ್ರೌಢಶಾಲಾ ಸಭಾಂಗಣದಲ್ಲಿ ದಿನಾಂಕ 18 ಆಗಸ್ಟ್ 2024ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಖ್ಯಾತ ವಿದ್ವಾಂಸ ವಿಶ್ರಾಂತ ಪ್ರಾಂಶುಪಾಲ ಡಾ. ಪಾದೇಕಲ್ಲು ವಿಷ್ಣು ಭಟ್ ಇವರು ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡುತ್ತಾ “ರಾಮಾಯಣದ ಉತ್ತರ ಕಾಂಡದ ಕಥೆಯನ್ನು ಭಾಮಿನಿ ಷಟ್ಪದಿಯಲ್ಲಿ ಶಂಕರ ಶರ್ಮ ಕುಳಮರ್ವರು ಸೊಗಸಾಗಿ ನಿರೂಪಿಸಿದ್ದಾರೆ. ಇದು ಹೊಸಗನ್ನಡ ಕಾಲಘಟ್ಟದ ಅಪೂರ್ವ ಕೃತಿ” ಎಂದು ಹೇಳಿದರು. ಶಾಲಾ ಪ್ರಬಂಧಕ ಜಯದೇವ ಖಂಡಿಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ರಾಂತ ಪ್ರಾಂಶುಪಾಲ ಬೇ.ಸಿ. ಗೋಪಾಲಕೃಷ್ಣ ಭಟ್ ಕೃತಿಯ ಅವಲೋಕನ ಮಾಡಿ “ಶಂಕರ ಶರ್ಮರು ರಚಿಸಿದ ಈ ಮಹಾಕಾವ್ಯದಲ್ಲಿ ಅದರದ್ದೇ ಆದ ವಿಶೇಷ ಗುಣಗಳಿವೆ. ಸುಂದರ, ಸುಲಲಿತ, ಸುಮಧುರವಾಗಿದೆ” ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್…

Read More

ಕಾರ್ಕಳ : ಕನ್ನಡ ಜಾನಪದ ಪರಿಷತ್ ಬೆಂಗಳೂರು ಮತ್ತು ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ ಘಟಕ ಇವರ ಕಾರ್ಕಳ ತಾಲೂಕು ಘಟಕದ ಪದಪ್ರದಾನ ಕಾರ್ಯಕ್ರಮ ಹಾಗೂ ‘ವಿಶ್ವ ಜಾನಪದ ದಿನಾಚರಣೆ’ಯನ್ನು ದಿನಾಂಕ 24 ಆಗಸ್ಟ್ 2024ರಂದು ಮಧ್ಯಾಹ್ನ 4-00 ಗಂಟೆಗೆ ಕಾರ್ಕಳದ ಬಂಡಿಮಠದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಕಂಬಳ ಸಮಿತಿಯ ಜೊತೆ ಕಾರ್ಯದರ್ಶಿಯಾದ ಶ್ರೀ ರವೀಂದ್ರ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಕನ್ನಡ ಜಾನಪದ ಪರಿಷತ್ ಇದರ ರಾಜ್ಯಾಧ್ಯಕ್ಷರಾದ ಡಾ. ಜಾನಪದ ಎಸ್. ಬಾಲಾಜಿ ಇವರು ಈ ಕಾರ್ಯಕ್ರಮವನು ಉದ್ಘಾಟನೆ ಮಾಡಲಿರುವರು. ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ ತಾಳಮದ್ದಳೆ ಅರ್ಥಧಾರಿಗಳಾದ ಶ್ರೀ ಕೆ. ವಸಂತ್ ಇವರನ್ನು ಸನ್ಮಾನಿಸಲಾಗುವುದು.

Read More

ಕಾರ್ಕಳ : ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆ ಕಾರ್ಕಳ ಇದರ ತಿಂಗಳ ಕಾರ್ಯಕ್ರಮದಲ್ಲಿ ‘ವಿಶೇಷ ಉಪನ್ಯಾಸ’ವು ದಿನಾಂಕ 21 ಆಗಸ್ಟ್ 2024ರಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.     ಈ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಭಾಗವಹಿಸಿದ ಎಸ್.ವಿ.ಟಿ. ಪದವಿಪೂರ್ವ ಕಾಲೇಜಿನ ನಿವೃತ್ತ ಕನ್ನಡ ಉಪನ್ಯಾಸಕರಾದ ಶ್ರೀ ರಾಮ ಭಟ್ ಇವರು ‘ದೈನಂದಿನ ಬದುಕಿನಲ್ಲಿ ಹಾಸ್ಯ’ ಎಂಬ ವಿಷಯದ ಕುರಿತಾಗಿ ವಿಶೇಷ ಉಪನ್ಯಾಸವನ್ನು ನೀಡಿ “ದೈನಂದಿನ ಬದುಕಿನಲ್ಲಿ ಹಾಸ್ಯ ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಬದುಕಿನ ಭಾರ ಕಡಿಮೆಯಾಗಬೇಕಾದರೆ ನಮ್ಮ ಜೀವನದ ಜೇಬಿನೊಳಗೆ ಹಾಸ್ಯ ನಿತ್ಯ ತುಂಬಿರಬೇಕು. ಜೀವನದ ಪ್ರತಿಕ್ಷಣವನ್ನು ಸಂಭ್ರಮಿಸುವುದರ ಮುಖೇನ ಬದುಕನ್ನು ಹಸನುಗೊಳಿಸಬಹುದು” ಎಂದು ಅಭಿಪ್ರಾಯಪಟ್ಟರು.   ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಅಧ್ಯಕ್ಷೆ ಶ್ರೀಮತಿ ಮಿತ್ರಪ್ರಭಾ ಹೆಗ್ಡೆಯವರು ಸ್ವಾಗತಿಸಿದರು. ಅನುಪಮಾ ಚಿಪ್ಲೂಣ್ಕರ್ ಪ್ರಾರ್ಥಿಸಿ, ಡಾ. ಸುಮತಿ ಪಿ. ಉಪನ್ಯಾಸಕಾರರನ್ನು ಪರಿಚಯಿಸಿದ ಕಾರ್ಯಕ್ರಮವನ್ನು ಕಾರ್ಯದರ್ಶಿ ಮಾಲತಿ ಜಿ. ಪೈಯವರು ನಿರ್ವಹಿಸಿದರು.  ಬಿ.ವಿ. ಸುಲೋಚನಾ ಧನ್ಯವಾದವನ್ನಿತ್ತರು.…

Read More

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠ ಉಡುಪಿ, ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು, ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ ರಾಗ ಧನ ಉಡುಪಿ ಸಂಸ್ಥೆಯು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಪ್ರಸ್ತುತಪಡಿಸುವ ‘ರಾಗರತ್ನ ಮಾಲಿಕೆ- 27’ ಸಂಗೀತ ಕಾರ್ಯಕ್ರಮವು ದಿನಾಂಕ 31 ಆಗಸ್ಟ್ 2024 ಶನಿವಾರ ಸಂಜೆ 7-00 ಗಂಟೆಗೆ ಉಡುಪಿಯ ರಾಜಾಂಗಣದಲ್ಲಿ ನಡೆಯಲಿದೆ. ಬೆಂಗಳೂರಿನ ಶ್ರೀ ಈಶ್ವರ ಅಯ್ಯರ್ ಇವರ ಹಾಡುಗಾರಿಕೆಗೆ ವಯೊಲಿನ್ ನಲ್ಲಿ ಕುಮಾರಿ ಪೃಥ್ವಿ ಭಾಸ್ಕರ್ ಹಾಗೂ ಮೃದಂಗದಲ್ಲಿ ಪವನ್ ಮಾಧವ್ ಮಾಸೂರ್ ಸಹಕರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ: ಉಮಾಶಂಕರಿ ಕಾರ್ಯದರ್ಶಿ, ರಾಗ ಧನ ಉಡುಪಿ (ರಿ). 9964140601.

Read More

ಮೈಸೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ : ನಾಟಕ 50 ರಾಷ್ಟ್ರೀಯ ವಿಚಾರ ಸಂಕಿರಣವನ್ನು ದಿನಾಂಕ 24 ಆಗಸ್ಟ್ 2024ರಂದು ಬೆಳಗ್ಗೆ 10-00 ಗಂಟೆಗೆ ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ವಿ. ನಾಗರಾಜ ಮೂರ್ತಿ ಇದರ ಅಧ್ಯಕ್ಷತೆಯಲ್ಲಿ ಮಾನ್ಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹಾದೇವಪ್ಪ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ಬೆಳಗ್ಗೆ 11-00 ಗಂಟೆಗೆ ನಡೆಯಲಿರುವ ಗೋಷ್ಠಿ 1ರಲ್ಲಿ ರಂಗ ನಿರ್ದೇಶಕರಾದ ಡಾ. ಸಿ. ಬಸವಲಿಂಗಯ್ಯ ಇವರು ಅಧ್ಯಕ್ಷತೆ ವಹಿಸಲಿದ್ದು, ‘ಚಳಿವಳಿಯ ರೂಪವಾಗಿ ರಂಗಭೂಮಿ’ ಎಂಬ ವಿಷಯದ ಬಗ್ಗೆ ಮೈಸೂರಿನ ಡಾ. ಎಸ್.ಆರ್. ರಮೇಶ್, ‘ಆಧುನಿಕ ರಂಗಭೂಮಿಯ ಅಭಿನಯ…

Read More

ಮಡಿಕೇರಿ : ಕೊಡವ ಕೂಟಾಳಿಯಡ ಕೂಟದ ಮಾಸಭೆ ಹಾಗೂ ಆಡಳಿತ ಮಂಡಳಿಯ ಚುನಾವಣೆ 19 ಆಗಸ್ಟ್ 2024ರ ಸೋಮವಾರದಂದು ವಿರಾಜಪೇಟೆಯ ಕೊಡಗು ಉಪಾಧ್ಯಾಯರ ಸಹಕಾರ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾದ ಚಂಗುಲಂಡ ಸೂರಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೆಟ್ಟೋಳಿರ ಶರತ್ ಸೋಮಣ್ಣ, ಉಪಾಧ್ಯಕ್ಷರಾಗಿ ಬೊಜ್ಜಂಗಡ ಚೆಂಗಪ್ಪ , ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿಯಾಗಿ ಬೊಜ್ಜಂಗಡ ಭವ್ಯ ದೇವಯ್ಯ, ಸಲಹೆಗಾರರಾಗಿ ಶ್ರೀ ಚೊಟ್ಟಂಡ ಪ್ರಭು ಸೋಮಯ್ಯ ನಿರ್ದೇಶಕರಾಗಿ ಕಾಂಗಿರ ಸಂತೋಷ್ ದೇವಯ್ಯ, ಅಮ್ಮಾಟಂಡ ಚೇತನ್, ಕಾಳಮಂಡ ರಾಬಿನ್, ನೂರೆರ ಸರಿತ ಉತ್ತಯ್ಯ, ಕೊಟ್ಟಂಗಡ ಕವಿತ ವಾಸುದೇವ ಹಾಗೂ ಮಾಚಿಮಾಡ ಡಿಂಪಲ್ ವಾಸು ಇವರುಗಳು ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷೆ ಚಿಮ್ಮಚ್ಚಿರ ಪವಿತ್ರ ರಜನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಮಂಗಳೂರು : ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟ್ ಇದರ ವಾರ್ಷಿಕೋತ್ಸವದ ಅಂಗವಾಗಿ ಒಂದು ದಿನದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತೋತ್ಸವ ಕಾರ್ಯಕ್ರಮವು 25 ಆಗಸ್ಟ್ 2024ರಂದು ಮಂಗಳೂರಿನಲ್ಲಿರುವ ಉರ್ವಾಸ್ಟೋರಿನ ತುಳುಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಪ್ರಾರಂಭವಾಗಲಿರುವ ಈ ಕಾರ್ಯಕ್ರಮದಲ್ಲಿ ಖ್ಯಾತ ಕಲಾವಿದರಾದ ಮುಂಬೈನ ಪಂ. ರಾಮ್ ದೇಶಪಾಂಡೆ ಹಾಗೂ ಮೈಸೂರಿನ ವಿದುಷಿ ಶ್ರೀಮತಿ ದೇವಿ ಇವರಿಂದ ಹಿಂದುಸ್ತಾನಿ ಗಾಯನ ಕಚೇರಿ ನಡೆಯಲಿದೆ. ಇವರಿಗೆ ಹಾರ್ಮೋನಿಯಂನಲ್ಲಿ ಹೇಮಂತ್ ಭಾಗವತ್ ಮತ್ತು ಪ್ರಸಾದ್ ಕಾಮತ್, ತಬಲಾದಲ್ಲಿ ಗೋವಾದ ಡಾ. ಉದಯ್ ಕುಲಕರ್ಣಿ ಮತ್ತು ರಾಜೇಶ್ ಶ್ರೀನಿವಾಸ್ ಭಾಗವತ್ ಸಹಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳಿಂದ ಲಘು ಶಾಸ್ತ್ರೀಯ ಸಂಗೀತ ವೈವಿಧ್ಯ ನಡೆಯಲಿದೆ. ಟ್ರಸ್ಟಿನ ಶ್ರೀಮತಿ ಲೋಲಾಕ್ಷಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು, ಪಂ. ರಾಮ್ ದೇಶಪಾಂಡೆ ದೀಪ ಬೆಳಗಿಸಿ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ ಜಿ., ಎಂ. ಆರ್. ಪಿ. ಎಲ್. ಜನರಲ್ ಮ್ಯಾನೇಜರ್ ಮಂಜುನಾಥ…

Read More

ಮೂರುಕಜೆ : ‘ಗಮಕ ಶ್ರಾವಣ’ದ ಸರಣಿ ಕಾರ್ಯಕ್ರಮಗಳ ದ್ವಿತೀಯ ಸಮಾರಂಭದ ಉದ್ಘಾಟನೆಯು ದಿನಾಂಕ 09 ಆಗಸ್ಟ್ 2024ರಂದು ಮೂರುಕಜೆಯ ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ವಿಟ್ಲ ಪಡ್ನೂರು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷೆ ಶ್ರೀಮತಿ ರೇಶ್ಮ ಶಂಕರಿ ಬಲಿಪಗುಳಿ ಇವರು ಮಾತನಾಡಿ “ಗಮಕ ಕಲೆ ಕನ್ನಡ ಸಂಸ್ಕೃತಿಯ ದ್ಯೋತಕ. ಅದು ಅತ್ಯಂತ ಪ್ರಾಚೀನವಾದುದು. ಭಾರತೀಯ ಸಂಸ್ಕೃತಿಯನ್ನು ಜನರಿಗೆ ಯಥಾವತ್ತಾಗಿ ಪರಿಚಯಿಸುವುದಕ್ಕೆ ಇದು ಬಹಳ ಉತ್ತಮವಾದ ಮಾಧ್ಯಮ. ಗಮಕ ಕಲಾಪರಿಷತ್ತು ಮತ್ತು ಸಿರಿಗನ್ನಡ ವೇದಿಕೆಯ ಕೇರಳ ಗಡಿನಾಡ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಶ್ರಾವಣ ಮಾಸದ ಪರ್ವಕಾಲದಲ್ಲಿ ವಿಶೇಷವಾಗಿ ರಾಮಾಯಣದ ಪುಣ್ಯಕಥೆಯನ್ನು ಪ್ರಚಾರಗೊಳಿಸಿ ಜನರಲ್ಲಿ ಸಚ್ಚಾರಿತ್ರ್ಯವನ್ನು ಬೆಳೆಸುವ ಮಹತ್ಕಾರ್ಯವನ್ನು ಮಾಡುತ್ತಿರುವುದು ಸ್ತುತ್ಯರ್ಹವಾಗಿದೆ” ಎಂದು ಅಭಿಪ್ರಾಯಪಟ್ಟರು. ಸಮಾರಂಭದ ಅಧ್ಯಕ್ಷತೆಯನ್ನು ಗಮಕಕಲಾ ಪರಿಷತ್ತಿನ ಅಧ್ಯಕ್ಷರಾದ ಟಿ. ಶಂಕರನಾರಾಯಣ ಭಟ್ಟರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುಕುಲದ ಅಧಿಕಾರಿಗಳಾದ ಶ್ರೀ ಜಗನ್ನಾಥ್ ಅವರು “ಭಾರತೀಯ ಸಂಸ್ಕೃತಿಯನ್ನು ಸಾರುವ ಮಹಾಕಾವ್ಯಗಳನ್ನು ಸಾಧ್ಯವಿದ್ದಷ್ಟೂ ಪ್ರಚಾರಗೊಳಿಸಬೇಕು” ಎಂದು…

Read More

ಬೆಂಗಳೂರು : ಶ್ರೀ ಗಣೇಶ ನೃತ್ಯಾಲಯ (ರಿ.) ನೃತ್ಯ ಮತ್ತು ಸಂಗೀತ ಶಾಲೆಯ ವತಿಯಿಂದ ಕರಾವಳಿಯ ಯುವ ನೃತ್ಯ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರಿಂದ ಎರಡು ದಿನಗಳ ಕಾರ್ಯಾಗಾರವನ್ನು ದಿನಾಂಕ 24-08-2024 ಮತ್ತು 25-08-2024ರಂದು ಬೆಂಗಳೂರಿನ ಎಸ್.ಜಿ.ಎನ್. ಅರಿಶಿನಕುಂಟೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ದಿನಾಂಕ 25 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ನಡೆಯಲಿರುವ ‘ನೃತ್ಯೋಲ್ಲಾಸ’ ತಿಂಗಳ ಕಾರ್ಯಕ್ರಮದಲ್ಲಿ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಹಾಗೂ ಶ್ರೀ ಗಣೇಶ ನೃತ್ಯಾಲಯದ ಶ್ರೀಮತಿ ಭಾವನಾ ಗಣೇಶ ಮತ್ತು ಎಂ.ಡಿ. ಗಣೇಶ್ ಇವರ ಶಿಷ್ಯ ವೃಂದದವರಿಂದ ಸಮೂಹ ನೃತ್ಯ ಪ್ರದರ್ಶನ ನಡೆಯಲಿದೆ. ಸಂಸ್ಕೃತ ವಿದ್ವಾನ್ ಶ್ರೀ ಶಂಕರ್ ಭಟ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

Read More