Author: roovari

ಮಂಗಳೂರು : ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಹಿಂದಿ ಸಂಘದ ವಾರ್ಷಿಕ ಚಟುವಟಿಕೆ ಕಾರ್ಯಕ್ರಮವು ದಿನಾಂಕ 03-11-2023ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂತ ಅಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಉದಯ್ ಕುಮಾರ್ ಬಿ ಮಾತನಾಡುತ್ತಾ “ಹಿಂದಿ ಭಾಷೆಯು ಸರಳವಾಗಿದ್ದು ಎಲ್ಲಾ ಕ್ಷೇತ್ರಗಳಲ್ಲಿಯೂ ಅವಕಾಶವನ್ನು ಕಲ್ಪಿಸುತ್ತದೆ. ಭಾಷೆಯ ಮಹತ್ವವನ್ನು ತಿಳಿಸುವ ಜೊತೆಗೆ ಮನುಷ್ಯನ ಭಾವನೆಗಳನ್ನು ವ್ಯಕ್ತಪಡಿಸುವಲ್ಲಿ ಭಾಷೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ” ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಆಶಾಲತಾ ಎಸ್. ಸುವರ್ಣ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಐಕ್ಯೂಎಸಿ ಸಂಯೋಜಕರಾದ ಶ್ರೀ ಯತಿನ್ ಉಪಸ್ಥಿತರಿದ್ದರು. ಹಿಂದಿ ವಿಭಾಗ ಮುಖ್ಯಸ್ಥರು ಶ್ರೀ ಉಮೇಶ್ ಹೆಗಡೆ ಸ್ವಾಗತಿಸಿ, ಪ್ರಣಮ್ ಎ. ರೈ ವಂದಿಸಿ, ಸುಮಲಕ್ಷ್ಮೀ ನಿರೂಪಿಸಿದರು.

Read More

ಪುತ್ತೂರು: ನಾಟ್ಯರಂಗ ಪುತ್ತೂರು ಕಲಾವಿದೆಯರು ಅರ್ಪಿಸುವ ‘ನೃತ್ಯ ಹರ್ಷ’ ಕಾರ್ಯಕ್ರಮ ದಿನಾಂಕ 19-11-2023ರಂದು ಭಾನುವಾರ ಸಂಜೆ ಗಂಟೆ 6.15ಕ್ಕೆ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಶಾಲೆಯ ಆಡಳಿತ ಮಂಡಳಿ ಸದಸ್ಯೆ ಡಾ. ಆಶಾ ಇವರ ಗೌರವ ಉಪಸ್ಥಿತಿಯಲ್ಲಿ ಮಂಗಳೂರಿನ ಸನಾತನ ನಾಟ್ಯಾಲಯದ ನೃತ್ಯ ಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿಶೇಖರ್ ಅವರು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟನೆ ಮಾಡಲಿರುವರು. ಹಿಮ್ಮೇಳದಲ್ಲಿ ನಟುವಾಂಗ ಮತ್ತು ನಿರ್ದೇಶನವನ್ನು ವಿದುಷಿ ಮಂಜುಳಾ ಸುಬ್ರಹ್ಮಣ್ಯ ನಿರ್ವಹಿಸಲಿದ್ದು, ಹಾಡುಗಾರಿಕೆಯಲ್ಲಿ ಪವಿತ್ರಾ ವಿನಯ್‌ ಮಯ್ಯ, ಮೃದಂಗದಲ್ಲಿ ಚಂದ್ರಶೇಖರ ಗುರುವಾಯನಕೆರೆ ಹಾಗೂ ಕೊಳಲು ವಾದನದಲ್ಲಿ ಕೃಷ್ಣ ಗೋಪಾಲ ಪುಂಜಾಲಕಟ್ಟೆ ಸಹಕರಿಸಲಿದ್ದಾರೆ. ಪ್ರಸಾಧನ – ಶಿವರಾಮ ಕಲ್ಮಡ್ಕ, ಬೆಳಕಿನ ನಿರ್ವಹಣೆ – ಪೃಥ್ವಿನ್ ಉಡುಪಿ, ಧ್ವನಿ ಮತ್ತು ಬೆಳಕು – ಅಶ್ವತ್ಥ್ ಸೌಂಡ್ಸ್ ಮತ್ತು ಲೈಟ್ಸ್ ಪುತ್ತೂರು ಇವರು ನಿರ್ವಹಿಸಲಿದ್ದಾರೆ. ನಾಟ್ಯರಂಗದ ಕಲಾವಿದೆಯರಾದ ಅವನಿ ಬೆಳ್ಳಾರೆ, ಕೀರ್ತನಾ ವರ್ಮ, ಮೇಧಾ ಭಟ್, ಶರ್ವಿನಾ ಶೆಟ್ಟಿ, ಪ್ರಜ್ಞಶ್ರೀ ‘ನೃತ್ಯ-ಹರ್ಷ’ವನ್ನು…

Read More

ಮಡಿಕೇರಿ : ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಹಾಗೂ ಎನ್.ಎಸ್.ಎಸ್. ಘಟಕದ ಉದ್ಘಾಟನೆಯು ದಿನಾಂಕ 07-11-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಜ್ಹಮೀರ್ ಅಹಮದ್ ಮಾತನಾಡುತ್ತಾ “ಕನ್ನಡ ಭಾಷೆಯು ಶ್ರೀಮಂತ ಭಾಷೆಯಾಗಿದ್ದು, ವಿಶ್ವ ಭಾಷೆಗಳ ರಾಣಿಯಾಗಿದೆ. ನಮ್ಮ ಮಾತೃ ಭಾಷೆ ಅನೇಕ ಇದ್ದರೂ ಕನ್ನಡ ಭಾಷೆ ನಮ್ಮನ್ನು ಸಾಮಾಜಿಕವಾಗಿ ಒಗ್ಗೂಡಿಸುತ್ತದೆ. ಬಿ.ಎಂ.ರೈಸ್, ಕಿಟೆಲ್, ಮೊಗ್ಲಿಂಗ್ ರಂತಹ ವಿದೇಶಿಗರು ಕನ್ನಡ ಭಾಷೆಗೆ ಕೊಡುಗೆ ನೀಡಿದ್ದಾರೆ. ಕನ್ನಡ ಭಾಷಾ ಅಭಿಮಾನವನ್ನು ಪ್ರತಿಯೊಬ್ಬ ಕನ್ನಡಿಗನೂ ಬೆಳೆಸಿಕೊಳ್ಳಬೇಕು” ಎಂದು ಅಭಿಪ್ರಾಯಪಟ್ಟರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಆನಂದ್‌ ಮಾತನಾಡಿ, “ಕನ್ನಡ ಭಾಷೆಯ ಸೊಗಡು ನಮ್ಮೆಲ್ಲರ ಹೆಮ್ಮೆಯಾಗಿದ್ದು, ಭಾಷೆಯ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ” ಎಂದರು. ಕಾಲೇಜಿನ ಎನ್‌.ಎಸ್‌.ಎಸ್‌ ಘಟಕವನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ.ವೀಣಾ, ಕನ್ನಡ ವಿಭಾಗದ ಮುಖ್ಯಸ್ಥ ಬಿ.ಬಿ.ಸುನಿಲ್ ಕುಮಾರ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಅಂಬಿಕಾ, ಎನ್‌.ಎಸ್‌.ಎಸ್‌. ಅಧಿಕಾರಿ ಸೋಮಣ್ಣ…

Read More

ಕಟೀಲು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು, ಪುತ್ತೂರು ಇವರ ವತಿಯಿಂದ ದಿನಾಂಕ 08-11-2023ರಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ಇಲ್ಲಿ ಸೇವಾ ರೂಪವಾಗಿ “ಜಾಂಬವತಿ ಕಲ್ಯಾಣ” ಎಂಬ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಪದ್ಯಾಣ ಗೋವಿಂದ ಭಟ್ ಚೆಂಡೆ ಮದ್ದಳೆಗಳಲ್ಲಿ ರಾಮ್ ಪ್ರಕಾಶ್ ಕಲ್ಲೂರಾಯ, ದುರ್ಗೇಶ್ ಕಟೀಲು ಮುರಳಿ ಕಟೀಲು ಸಹಕರಿಸಿದರು.ಹಿಮ್ಮೇಳದಲ್ಲಿ ಶುಭಾ ಅಡಿಗ (ಶ್ರೀ ಕೃಷ್ಣ), ಪ್ರೇಮಲತಾ ರಾವ್ (ನಾರದ), ಕಿಶೋರಿ ದುಗ್ಗಪ್ಪ ನಡುಗಲ್ಲು (ಜಾಂಬವಂತ) ಹರಿಣಾಕ್ಷಿ.ಜೆ.ಶೆಟ್ಟಿ(ಬಲರಾಮ) ಸಹಕರಿಸಿದರು ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ ವಂದಿಸಿದರು.ದೇವಳದ ಅನುವಂಶೀಯ ಅರ್ಚಕರಾದ ವೇದಮೂರ್ತಿ ಶ್ರೀ ಹರಿನಾರಾಯಣ ಅಸ್ರಣ್ಣ ಕಲಾವಿದರಿಗೆ ಶ್ರೀ ದೇವಿಯ ಪ್ರಸಾದವನ್ನಿತ್ತು ಹರಸಿದರು.ಕಾರ್ಯಕ್ರಮದ ಬಳಿಕ 2023ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀಮತಿ ಲೀಲಾವತಿ ಹರಿನಾರಾಯಣ ಬೈಪಡಿತ್ತಾಯರ ಬಜಪೆ ಸಮೀಪದ ತಳಕಳದಲ್ಲಿರುವ ನಿವಾಸಕ್ಕೆ ತೆರಳಿ, ಅಲ್ಲಿ ಅವರನ್ನು ದಂಪತಿ ಸಮೇತರಾಗಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

Read More

‘ಹಚ್ಚೇವು ಕನ್ನಡದ ದೀಪ’ ಗೀತೆಯನ್ನು ಕೇಳದ ಕನ್ನಡಿಗರೇ ಇಲ್ಲ ಮತ್ತು ಆ ಗೀತೆಯಲ್ಲಿ ಅಡಗಿರುವ ಕನ್ನಡತ್ವವನ್ನು ಅನುಭವಿಸದವರೇ ಇಲ್ಲ. ಇಂದಿಗೂ ಆ ಹಾಡನ್ನು ಕೇಳಿದರೆ ಮೈಮನಗಳಲ್ಲಿ ಇರುವ ನರವನ್ನು ಹೊಸೆದು ಬತ್ತಿ ಮಾಡಿ ದೀಪ ಬೆಳಗಿದ ಅನುಭವ. ಅಷ್ಟೊಂದು ಉತ್ಕಟ ಭಾಷಾ ಅಭಿಮಾನವನ್ನು ಮತ್ತು ಪ್ರೀತಿಯನ್ನು ತಮ್ಮ ಸಾಹಿತ್ಯದ ಮೂಲಕ ಪ್ರತಿಬಿಂಬಿಸಿದವರು ಕರ್ಕಿಯವರು. ಡಿ.ಎಸ್. ಕರ್ಕಿಯವರು ಬೆಳಗಾವಿ ಜಿಲ್ಲೆಯ ಹಿರೆಕೊಪ್ಪ ಗ್ರಾಮದಲ್ಲಿ 1907 ನವೆಂಬರ್ 15ರಂದು ಜನಿಸಿದರು. ಇವರ ತಾಯಿ ದುಂಡವ್ವ,  ತಂದೆ ಸಿದ್ದಪ್ಪ. ದುಂಡಪ್ಪ ಸಿದ್ದಪ್ಪ ಕರ್ಕಿ ಎಂಬುದು ಇವರ ಪೂರ್ಣನಾಮ. ಚಿಕ್ಕಂದಿನಲ್ಲಿಯೇ ತಾಯಿಯನ್ನು ಕಳೆದುಕೊಂಡ ಇವರ ಪ್ರಾಥಮಿಕ ಶಿಕ್ಷಣ ತಾಯಿಯ ತವರೂರಾದ ಬೆಲ್ಲದ ಬಾಗೇವಾಡಿಯಲ್ಲಿ ಆಯಿತು. ಬೆಳಗಾವಿಯ ಗಿಲಗಂಜಿ ಅರಟಾಳ ಹೈಸ್ಕೂಲಿನಲ್ಲಿ ಮಾಧ್ಯಮಿಕ ಶಿಕ್ಷಣ ಪೂರೈಸಿದ ಕರ್ಕಿಯವರು ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪದವಿ ಅಭ್ಯಾಸದ ನಂತರ 1935ರಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಬೆಲ್ಲದ ಬಾಗೇವಾಡಿಯಲ್ಲಿ ಪ್ರಾಥಮಿಕ ಶಿಕ್ಷಣ, ಬೆಳಗಾವಿಯ ಜಿ.ಎ. ಹೈಸ್ಕೂಲಿನಲ್ಲಿ ಪ್ರೌಢಶಿಕ್ಷಣ ಪಡೆದರು. ಕೊಲ್ಲಾಪುರದ ರಾಜಾರಾಮ ಕಾಲೇಜು,…

Read More

ಉಡುಪಿ : ಭರತನಾಟ್ಯ, ಸಂಗೀತ, ಸಂಸ್ಕೃತಿ, ನಾಟಕ ಮತ್ತು ಶಿಕ್ಷಣಗಳ ವಿಶಿಷ್ಟ ಸಮ್ಮಿಲನವಾಗಿ ಹೆಸರು ಮಾಡಿರುವ ‘ನಾಟ್ಯಾಯನ’ ಯುಗಳ ನೃತ್ಯ ಕಾರ್ಯಕ್ರಮ ಉಡುಪಿಯ ಅಮೃತ್ ಗಾರ್ಡನಿನಲ್ಲಿ ದಿನಾಂಕ 04-11-2023 ರಂದು ಪ್ರದರ್ಶನಗೊಂಡಿತು. ಗೌಡ ಸಾರಸ್ವತ ಸಾಮಾಜದ ಪುರೋಹಿತ ಪ್ರಮುಖರಲ್ಲಿ ಒಬ್ಬರಾದ ವೇ.ಮೂ. ಚೇಂಪಿ ರಾಮಚಂದ್ರ ಅನಂತ ಭಟ್ ಅವರ ಷಷ್ಠಿ ಪೂರ್ತಿ ಸಂಭ್ರಮದ ಪ್ರಯುಕ್ತ ಆಯೋಜನೆಗೊಂಡ ಈ ಕಾರ್ಯಕ್ರಮ ವಿದ್ವಜ್ಜನ ಸಹಿತ ಸರ್ವರ ಮನಸೂರೆಗೊಂಡು ಎಲ್ಲರ ಪ್ರಸಂಶೆಗೆ ಪಾತ್ರವಾಯಿತು. ವಿದುಷಿ ಅಯನಾ.ವಿ. ರಮಣ್ ಪ್ರಸ್ತುತ ಪಡಿಸಿದ ಸನ್ಯಾಸ ಸೂಕ್ತ, ಅದ್ಭುತ ಸ್ಮರಣಶಕ್ತಿಯ ಕವಿನಾಮಾವಳಿ, ವಿದ್ವಾನ್ ಮಂಜುನಾಥ್. ಎನ್. ಪುತ್ತೂರು ಅವರೊಂದಿಗೆ ಅಭಿನಯಿಸಿದ ಅವರದೇ ರಚನೆಯ ಮೇಳಪ್ರಾಪ್ತಿ, ವಿಭಿನ್ನವಾಗಿ ಯುಗಳ ನೃತ್ಯಕ್ಕೆ ಅಳವಟ್ಟ ಪುರಂದರ ದಾಸರ ‘ಭಾಗ್ಯದ ಲಕ್ಷ್ಮೀ ಬಾರಮ್ಮ’ ಮುಂತಾದವು ವಿಶೇಷ ಮೆಚ್ಚುಗೆ ಗಳಿಸಿದವು. ಕಾರ್ಯಕ್ರಮದ ಬಳಿಕ ನಾಟ್ಯಾಯನದ ನಿರ್ದೇಶಕ ಕೆ.ವಿ. ರಮಣ್ ಮಂಗಳೂರು – ಡಾ. ಮೂಕಾಂಬಿಕ ಜಿ.ಎಸ್. ದಂಪತಿ ಸಹಿತ ಕಲಾವಿದರನ್ನು ಗೌರವಿಸಲಾಯಿತು. ಉಪನ್ಯಾಸಕ ರಾಮಚಂದ್ರ ನಿರೂಪಿಸಿ ಚೇಂಪಿ…

Read More

ಮಂಗಳೂರು : ಮಧುರತರಂಗ (ರಿ.), ದ.ಕ. ಮಂಗಳೂರು ಅರ್ಪಿಸುವ ಶ್ರೀ ಲಕ್ಷ್ಮೀ ವೆಂಕಟರಮಣ ಮಠ ಪೋಳ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇವರ ಸಹಕಾರದೊಂದಿಗೆ ‘ಭಾವ-ಗಾನಾಮೃತ ಸಮೂಹ ಗಾಯನ’ 2023ನೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜ್ಯೂ. ರಾಜ್‌ಕುಮಾರ್ ಖ್ಯಾತಿಯ, ಕರ್ನಾಟಕ ಸ್ವರಕಂಠೀರವ, ಸ್ವರತಪಸ್ವಿ ಜಗದೀಶ ಶಿವಪುರ ಮತ್ತು ಬಳಗದವರಿಂದ ದಿನಾಂಕ 22-11-2023ನೇ ಬುಧವಾರ ಸಂಜೆ ಗಂಟೆ 4.30ರಿಂದ ಪೋಳ್ಯ ಶ್ರೀವಾರಿ ವೇದಿಕೆ, ಶ್ರೀನಿವಾಸ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಶ್ರೀ ಲಕ್ಷ್ಮೀವೆಂಕಟರಮಣ ಪೋಳ್ಯ ಮಠದ ಅಧ್ಯಕ್ಷರಾದ ಶ್ರೀ ಉಮಾಶಂಕರ ಎದುರ್ಕಳ ಇವರು ಜ್ಯೋತಿ ಬೆಳಗಿ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ ಇವರು ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಗಾಯಕ ಕಲಾವಿದರಾದ ಶ್ರೀ ಪ್ರಭಾಕರ ಆಚಾರ್ಯ ಎನ್. ವಿಟ್ಲ ಮತ್ತು ಕಲ್ಲಚ್ಚು ಪ್ರಕಾಶನದ ‘ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ ಶ್ರೀ ಮಹೇಶ್ ಆರ್ ನಾಯಕ್ ಇವರುಗಳನ್ನು ಸನ್ಮಾನಿಸಲಾಗುವುದು. ಮಧುರತರಂಗದ ಅಧ್ಯಕ್ಷರು,…

Read More

ಬಂಟ್ವಾಳ : ಕಾರಿಂಜ ‘ಯಕ್ಷಾವಾಸ್ಯಮ್’ನ ತೃತೀಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಕಾವಳ ಪಡೂರು ಗ್ರಾಮದ ವಗ್ಗ ಕಾಡಬೆಟ್ಟು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ದಿನಾಂಕ 05-11-2023ರಂದು ಪಚ್ಚಾಜೆಗುತ್ತು ಜಿನರಾಜ ಅರಿಗ ಇವರು ಉದ್ಘಾಟಿಸಿದರು. ಈ ಸಂದರ್ಭ ಯಕ್ಷಗಾನ ವಿದ್ವಾಂಸ, ಪ್ರಸಂಗಕರ್ತ ಗಣೇಶ ಕೊಲಕಾಡಿ ಅವರಿಗೆ 2013ರ ‘ಯಕ್ಷಾವಾಸ್ಯಮ್’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಮಾಧವ ಎಂ.ಕೆ. ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, “ಯಕ್ಷಗಾನ ಕಲೆಯಲ್ಲಿ ಜನ ಸಂಸ್ಕೃತಿ ಮತ್ತು ಧರ್ಮವಿದೆ. ಕಲೆಯ ಮೇಲೆ ಅಭಿರುಚಿ ಹೊಂದಿದಾಗ ಉತ್ತಮ ನಾಗರಿಕ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಕಲೆ ಮತ್ತು ಕಲಾವಿದರನ್ನು ಬೆಳಸುತ್ತಿರುವ ಯಕ್ಷವಾಸ್ಯಮ್ ಕಾರ್ಯ ಪ್ರಶಂಸನೀಯ” ಎಂದು ಹೇಳಿದರು. ಗಣೇಶ ಕೊಲಕಾಡಿ ಅವರ ಶಿಷ್ಯ ದೀವಿತ್ ಕೆ.ಎಸ್. ಪೆರಾಡಿ ಅಭಿನಂದನಾ ಮಾತುಗಳನ್ನಾಡಿ, “ಗಣೇಶ ಕೊಲಕಾಡಿ ಅವರು ತಮ್ಮ ಅನಾರೋಗ್ಯದಲ್ಲಿಯೂ ಯಕ್ಷಗಾನದ ಬಗ್ಗೆ ವಿಶೇಷ ಕಾಳಜಿ ವಹಿಸಿ ಯಕ್ಷಗಾನಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ…

Read More

ಬೆಳಗಾವಿ : ರಂಗಸಂಪದ (ಲಿ), ಬೆಳಗಾವಿ, ಸಕ್ಕರಿ ಬಾಳಾಚಾರ್ಯ ಶಾಂತಕವಿ ಟ್ರಸ್ಟ್, ಧಾರವಾಡ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ಥ ಮಂಡಳಿ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ‘ಆಧುನಿಕ ಕನ್ನಡ ರಂಗಭೂಮಿ ದಿನ’ ಕಾರ್ಯಕ್ರಮವು ದಿನಾಂಕ 18-11-2023ರಂದು ಸಂಜೆ 5 ಗಂಟೆಗೆ ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ನ್ಯಾಯವಾದಿಗಳಾದ ಶ್ರೀ ಎಸ್.ಎಮ್, ಕುಲಕರ್ಣಿ ಇವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಡಾ. ಸರಜೂ ಕಾಟಕರ ಮತ್ತು ಡಾ. ರಾಮಕೃಷ್ಣ ಮರಾಠೆ ಇವರುಗಳು ಭಾಗವಹಿಸಲಿರುವರು. ಕಾರ್ಯಕ್ರಮದ ಕೊನೆಯಲ್ಲಿ ರಂಗಸಂಪದ ಬೆಳಗಾವಿ ಪ್ರಸ್ತುತಪಡಿಸುವ ದಿ. ಶಿಂಪಿ ಲಿಂಗಣ್ಣ ರಚನೆ ಮತ್ತು ಡಾ. ಅರವಿಂದ ಕುಲಕರ್ಣಿ ನಿರ್ದೇಶನದಲ್ಲಿ ‘ಅಣ್ಣ-ಬಾಪು’ (ಸ್ವರ್ಗದಲ್ಲಿ ಬಾಪೂಜಿ ಮತ್ತು ಬಸವಣ್ಣ ಇವರ ಸಂಭಾಷಣೆ) ದ್ವಿಪಾತ್ರ ಕಿರು ನಾಟಕ ಪ್ರದರ್ಶನ ನಡೆಯಲಿದೆ. ಶ್ರೀ ಅರವಿಂದ ಪಾಟೀಲ ಮತ್ತು ಡಾ. ಅರವಿಂದ ಕುಲಕರ್ಣಿ ಈ ನಾಟಕದಲ್ಲಿ ಅಭಿನಯಿಸುವ ಕಲಾವಿದರು. ರಂಗಸಂಪದ ಇದರ ಅಧ್ಯಕ್ಷರಾದ ಡಾ.…

Read More

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಮಾಹೆ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಇದರ ಆಶ್ರಯದಲ್ಲಿ ಬಾರಕೂರು ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಉಡುಪಿ ಜಿಲ್ಲಾ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ದಿನಾಂಕ 18-11-2023 ಶನಿವಾರ ಬೆಳಿಗ್ಗೆ 9 ಘಂಟೆಗೆ ಎಂ.ಜಿ.ಎಂ. ಕಾಲೇಜು ಆವರಣದಲ್ಲಿರುವ ಗೀತಾಂಜಲಿ ಸಭಾಂಗಣದಲ್ಲಿ ನಡೆಸಲಾಗುವುದು. ಆಸಕ್ತರು ಶಾಲಾ ಗುರುತು ಚೀಟಿಯೊಂದಿಗೆ ಅಂದು ಬೆಳಿಗ್ಗೆ 9-00 ಗಂಟೆಗೆ ಹೆಸರು ನೋಂದಾಯಿಸಿ ಸ್ಪರ್ಧೆಯಲ್ಲಿ ಭಾಗವಹಿಸುವುದು. ಪ್ರವೇಶ ಶುಲ್ಕವಿರುವುದಿಲ್ಲ. ಸ್ಪರ್ಧಾ ವಿಷಯ : 1ರಿಂದ 4ನೇ ತರಗತಿ : ಐಚ್ಛಿಕ 5ರಿಂದ 7ನೇ ತರಗತಿ : ಐಚ್ಛಿಕ 8ರಿಂದ 10ನೇ ತರಗತಿ : ಗೂಡುದೀಪ ಅಥವಾ ರಾಷ್ಟ್ರೀಯ ಹಬ್ಬ ಪಿಯುಸಿಯವರಿಗೆ : ಸ್ವಾತಂತ್ರ್ಯ ಹೋರಾಟಗಾರರು ಅಥವಾ ಪರಿಸರ ಸಂರಕ್ಷಣೆ ಪದವಿ ವಿದ್ಯಾರ್ಥಿಗಳಿಗೆ : ಉಡುಪಿ ಪರ್ಯಾಯೋತ್ಸವ ಅಥವಾ ವಿಶ್ವಶಾಂತಿ ಸ್ಪರ್ಧಾಳುಗಳು ಈ ಕೆಳಗಿನ ವಿಷಯಗಳನ್ನು ಗಮನದಲ್ಲಿಡುವುದು…

Read More