Author: roovari

ಮಂಗಳೂರು : ಅಖಿಲ ಭಾರತೀಯ ಕೊಂಕಣಿ ಪರಿಷತ್ತು ಆಯೋಜಿಸಿರುವ 25ನೇ ‘ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನ’ವು ದಿನಾಂಕ 04-11-2023 ಮತ್ತು 05-11-2023ರಂದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆಯಿತು. ಈ ಸಮ್ಮೇಳನವನ್ನು ದಿನಾಂಕ 04-11-2023ರಂದು ಹಿಂದಿ ಕವಿ, ವಿಮರ್ಶಕ ಉದಯನ್ ವಾಜಪೇಯಿ ಇವರು ಉದ್ಘಾಟಿಸಿ ಮಾತನಾಡುತ್ತಾ “ಆಳುವ ವರ್ಗವು ಸಾಹಿತಿಗಳನ್ನು ಸಮಾಜದ್ರೋಹಿಗಳಂತೆ ಬಿಂಬಿಸುತ್ತಿದೆ. ಸತ್ಯದ ಪ್ರತಿಪಾದನೆ ಮಾಡದಂತೆ ಹಾಗೂ ತಮ್ಮ ನಿಲುವುಗಳನ್ನು ಮಾರ್ಪಾಡು ಮಾಡಿಕೊಳ್ಳುವಂತೆ ಒತ್ತಡ ಹೇರಲಾಗುತ್ತಿದೆ. ಈ ನಡುವೆಯೂ ತಮ್ಮ ಅಸ್ತಿತ್ವ ಕಳೆದುಕೊಳ್ಳಲು ಬಯಸದ ಸಾಹಿತಿಗಳು ಶೋಷಿತರ ಪರ ದನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೇರ ಬೇರೆ ಸಂಸ್ಕೃತಿ, ಕಲೆಗಳ ಜತೆಗೆ ಆಯಾ ಪ್ರದೇಶಗಳ ಭಾಷೆಗಳೂ ದೇಶದ ಐಕ್ಯತೆಗೆ ಮೂಲ ಆಧಾರ. ಬೇರೆ ಬೇರೆ ಪ್ರದೇಶಗಳಲ್ಲಿ ಭಾಷೆಗಳು ಬದಲಾದರೂ, ಅವು ಪರಸ್ಪರ ಬೆಸೆದು ನಿರಂತರತೆಯನ್ನು ಕಾಯ್ದುಕೊಂಡಿವೆ. ನಿರ್ದಿಷ್ಟ ಭಾಷೆಯ ಬಗ್ಗೆ ನಮಗೆ ತಿಳಿಯದೇ ಇರಬಹುದು. ಆದರೂ ಅವು ನಮ್ಮಲ್ಲಿ ಪ್ರತ್ಯೇಕತೆಯ ಭಾವ ಮೂಡಿಸುವುದಿಲ್ಲ. ಪ್ರಭುತ್ವವನ್ನು ಪ್ರಶ್ನಿಸುವ ಸೃಜನಾತ್ಮಕತೆಯು ಉಳಿದುಕೊಂಡಿದ್ದರೆ ಸಾಹಿತ್ಯ ಮತ್ತು…

Read More

ಮಂಗಳಗಂಗೋತ್ರಿ : ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠ, ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಇದರ ಸಹಯೋಗದೊಂದಿಗೆ ‘ಬಸವಣ್ಣ ಮತ್ತು ಕನಕದಾಸರ ಇಹ ಪರ ಲೋಕದೃಷ್ಟಿ’ ಎಂಬ ವಿಷಯದಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವು ದಿನಾಂಕ 08-11-2023ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಡಾ. ಬಿ.ವಿ ವಸಂತಕುಮಾರ್ ಇವರು ಮಾತನಾಡುತ್ತಾ “ಬಸವಣ್ಣ ಮತ್ತು ಕನಕದಾಸರು ನಡೆನುಡಿಯ ಸಿದ್ಧಾಂತಕ್ಕೆ ಬದ್ಧರಾಗಿದ್ದರು. ಅವರು ಇಹಪರ ಚಿಂತನೆಗಳಲ್ಲಿ ಸಹಜತೆಯನ್ನು ಪುರಸ್ಕರಿಸಿದ್ದರು. ಡಾಂಭಿಕತೆಯನ್ನು ಸದಾ ವಿರೋಧಿಸಿದವರು. ನಾನು ಎಂಬುದು ಹೋಗಿ ನಾವು ಎಂಬ ಸಮಷ್ಟಿ ಭಾವ ಬರಬೇಕಾದರೆ ಆತ್ಮವಿಮರ್ಶೆಯ ಗುಣ ನಮ್ಮಲ್ಲಿರಬೇಕು. ಇವರಿಬ್ಬರ ಲೋಕದೃಷ್ಟಿ ಸತ್ಯದ ಹುಡುಕಾಟವೇ ಆಗಿದೆ. ಮನುಷ್ಯರಿಗೆ ಛಲಬೇಕು ಎಂಬ ಅಂಶವನ್ನು ಪ್ರತಿಪಾದಿಸಿದ ಶರಣ ಮತ್ತು ದಾಸ ಪರಂಪರೆಗಳ ನಾಮರೂಪಗಳು ಭಿನ್ನವಾಗಿದ್ದರೂ ದೃಷ್ಟಿ ಮಾತ್ರ ಒಂದೇ ಆಗಿತ್ತು. ಅದು ಜೀವ ಪರವೂ, ಜೀವ ವಿಕಾಸ ಪರವೂ…

Read More

ವಿವಿಧ ನಾಟ್ಯರೂಪಗಳಲ್ಲಿ ಹಲವಾರು ರಾಮಾಯಣದ ನೃತ್ಯರೂಪಕಗಳು ಇದುವರೆಗೂ ಪ್ರಸ್ತುತವಾಗಿದ್ದರೂ ಬಹುಶಃ ಕೂಚಿಪುಡಿ ನೃತ್ಯಶೈಲಿಯಲ್ಲಿ ಸಂಪೂರ್ಣ ಆಧ್ಯಾತ್ಮ ರಾಮಾಯಣದ ನೃತ್ಯರೂಪಕ ವೇದಿಕೆಯ ಮೇಲೆ ಪ್ರದರ್ಶನಗೊಂಡದ್ದು ಇದೇ ಮೊದಲೆನ್ನಬಹುದು. ದಿನಾಂಕ 28-10-2023ರಂದು ‘ಕೂಚಿಪುಡಿ ಪರಂಪರಾ ಫೌಂಡೇಶನ್’ ನೃತ್ಯ ಸಂಸ್ಥೆಯು ತನ್ನ ‘ನಾಟ್ಯ ಪರಂಪರ ದಶಮಾನೋತ್ಸವ’ದ ಸಂಭ್ರಮಾಚರಣೆಯನ್ನು ಸಂಜಯನಗರದ ರಮಣ ಮಹರ್ಷಿ ಹೆರಿಟೇಜ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ಅಚರಿಸಿತು. ಈ ಸಂದರ್ಭದಲ್ಲಿ ‘ಭವನುತ’ ಎಂಬ ನೃತ್ಯರೂಪಕವನ್ನು ವರ್ಣರಂಜಿತವಾಗಿ ಪ್ರದರ್ಶಿಸಿ ಕಲಾರಸಿಕರ ಮನಸ್ಸನ್ನು ಸೆಳೆಯಿತು. ಲಾಸ್ಯ-ಲಾಲಿತ್ಯತೆಗೆ ಹೆಸರಾದ ಕೂಚಿಪುಡಿ ನಾಟ್ಯಶೈಲಿ ಭರತನಾಟ್ಯಕ್ಕಿಂತ ಕೊಂಚ ಭಿನ್ನವಾಗಿದ್ದು ವೇಷಭೂಷಣ-ವಸ್ತ್ರವೈವಿಧ್ಯ, ನೃತ್ಯದ ಧಾಟಿಯಲ್ಲೂ ಸ್ವಲ್ಪ ಬೇರೆಯಾಗಿದ್ದು, ಕಥಾ ನಿರೂಪಣೆ-ಅಭಿನಯ ಪ್ರಸ್ತುತಿಯಲ್ಲಿ ವೇಗಗತಿಯಲ್ಲಿ ಸಾಗುತ್ತ, ಲಾಸ್ಯ ಭಾವ-ಭಂಗಿ, ನಡೆಯಲ್ಲಿ ಚುರುಕಾಗಿ ಪ್ರವಹಿಸುತ್ತದೆ. ಅಂತೆ ನಡೆದ ‘ಭವನುತ’ ಅರ್ಥಪೂರ್ಣ ಶೀರ್ಷಿಕೆಯ ಮೋಹಕ ನೃತ್ಯರೂಪಕ ಪರಿಣಾಮಯುತವಾಗಿ ಪ್ರದರ್ಶಿತಗೊಂಡಿತು. ನಾಲ್ಕುದಶಕಗಳಿಂದ ಅಚ್ಚ ಶಾಸ್ತ್ರೀಯ ಕೂಚಿಪುಡಿಯ ನೃತ್ಯಶೈಲಿಯಲ್ಲಿ ಪರಿಶ್ರಮಿಸುತ್ತಿರುವ ಆಚಾರ್ಯ ದೀಪಾ ನಾರಾಯಣನ್ ಶಶೀಂದ್ರನ್ ಖ್ಯಾತ ಗುರು ಪದ್ಮಭೂಷಣ ಡಾ. ವೆಂಪಟಿ ಚಿನ್ನಸತ್ಯಂ ಅವರ ಶಿಷ್ಯೆ, ತಮ್ಮ ಅಸಂಖ್ಯ ನೃತ್ಯ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇವರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ಬನ್ನೂರು ಭಾರತಿ ನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ‘ಜಾಂಬವತಿ ಪರಿಣಯ’ ಎಂಬ ತಾಳಮದ್ದಳೆ ದಿನಾಂಕ 31-10-2023ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್ ಇರ್ದೆ, ಆನಂದ ಸವಣೂರು, ನಿತೀಶ್ ಕುಮಾರ್ ಎಂಕಣ್ಣ ಮೂಲೆ ಹಾಗೂ ಚೆಂಡೆ, ಮದ್ದಳೆಗಳಲ್ಲಿ ಪ್ರೊ. ದಂಬೆ ಈಶ್ವರ ಶಾಸ್ತ್ರಿ, ಅಚ್ಚುತ ಪಾಂಗಣ್ಣಾಯ, ಮಾ. ಪರೀಕ್ಷಿತ್ ಮತ್ತು ಮಾ. ಅಭಯ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ಸುಬ್ಬಪ್ಪ ಕೈಕಂಬ (ಶ್ರೀ ಕೃಷ್ಣ), ಪಕಳಕುಂಜ ಶ್ಯಾಮ್ ಭಟ್ (ಜಾಂಬವಂತ), ದುಗ್ಗಪ್ಪ ನಡುಗಲ್ಲು (ಬಲರಾಮ) ಮತ್ತು ಚಂದ್ರಶೇಖರ ಭಟ್ ಬಡೆಕ್ಕಿಲ (ನಾರದ) ಸಹಕರಿಸಿದರು. ಕಾರ್ಯಕ್ರಮದ ಆರಂಭದಲ್ಲಿ ಅಂದು ನಿಧನರಾದ ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಹಾಸ್ಯ ಭೂಷಣ ಪೆರುವೋಡಿ ನಾರಾಯಣ ಭಟ್ ಇವರಿಗೆ ಪುಳು ಈಶ್ವರ್ ಭಟ್ ಅಧ್ಯಕ್ಷತೆಯಲ್ಲಿ ನುಡಿನಮನ ಸಲ್ಲಿಸಲಾಯಿತು. ಇಂದಿನ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ರಾಜಗೋಪಾಲ…

Read More

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವತಿಯಿಂದ ಕಾಂತಾವರ ಕನ್ನಡ ಭವನದಲ್ಲಿ ‘ಕಾಂತಾವರ ಉತ್ಸವ-2023’ವು ದಿನಾಂಕ 01-11-2023 ರಂದು ನಡೆಯಿತು. ಈ ಸಮಾರಂಭದಲ್ಲಿ ಸಂಘದ ದತ್ತಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದ ಹಿರಿಯ ವಿಮರ್ಶಕ, ಕತೆಗಾರ ಬೆಳಗೋಡು ರಮೇಶ ಭಟ್ ”ಕನ್ನಡ ನಾಡು ನುಡಿಗೆ ನಿಸ್ವಾರ್ಥ ಸೇವೆ ಸಲ್ಲಿಸಿದ ಅಪರೂಪದ ಸಾಧಕರು ಅನೇಕರಿದ್ದಾರೆ. ಶಾಸನಗಳಲ್ಲಿಯೂ ಕಾಣದ, ಕನ್ನಡದ ಇತಿಹಾಸ, ಭವಿಷ್ಯಗಳಲ್ಲಿ ಕಾಣಸಿಗದ ಮಹತ್ವದ ಸಾಧಕರನ್ನು ಗುರುತಿಸಿ ಗೌರವಿಸುವುದು ಶ್ರೇಷ್ಠ ಸಾಧನೆ. ಅಂತಹ ಕೆಲಸವನ್ನು ಕಾಂತಾವರದ ನೆಲದಲ್ಲಿ ಕನ್ನಡ ಸಂಘ ಸಾಧಿಸಿದೆ” ಎಂದು ಹೇಳಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ನಾಡಿಗೆ ನಮಸ್ಕಾರ ಗ್ರಂಥ ಮಾಲೆಯ ಕೃತಿಗಳ ಸಂಪಾದಕ ಡಾ. ಬಿ.ಜನಾರ್ದನ ಭಟ್ ವಿವರಿಸಿದರು. ಸಂಘದ ಸಂಚಾಲಕ ವಿಠಲ ಬೇಲಾಡಿ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿ ಸನ್ಮಾನ ಪತ್ರ ವಾಚಿಸಿದರು. ಸಾಧಕರು, ಕೃತಿಕಾರರು ಮತ್ತು ಪ್ರಾಯೋಜಕರನ್ನು ಗೌರವಿಸಲಾಯಿತು. ದತ್ತಿ ನಿಧಿ ಪ್ರಶಸ್ತಿ ಪ್ರದಾನ : ಮೈತ್ರೇಯಿ ಗುರುಕುಲ (ಸಾಂಸ್ಕೃತಿಕ ಏಕೀಕರಣ ಪ್ರಶಸ್ತಿ), ಡಾ.…

Read More

ಸುರತ್ಕಲ್ : ಬಂಟರ ಸಂಘ (ರಿ.) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ಪ್ರಥಮ ವಾರ್ಷಿಕೋತ್ಸವವು ದಿನಾಂಕ 11-11-2023ರ ಶನಿವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಪಟ್ಲ ಶ್ರೀ ಸತೀಶ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷರಾದ ಶ್ರೀ ಲೋಕಯ್ಯ ಶೆಟ್ಟಿ ಮುಂಚೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಮಾತಾ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ ಬಿ.ಇ, ಯಕ್ಷಮಿತ್ರರು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಗದೀಪ್ ಶೆಟ್ಟಿ, ಪೆರ್ಮುದೆ ದಿವ್ಯರೂಪ ಕನ್ ಸ್ಟ್ರಕ್ಷನ್ ನ ಆಡಳಿತ ನಿರ್ದೇಶಕ ಶ್ರೀ ಯಾದವ ಕೋಟ್ಯಾನ್, ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀಮತಿ ಶಕುಂತಳಾ ರಮಾನಂದ ಭಟ್, ಉದ್ಯಮಿ ಶ್ರೀ ಹರೀಶ್ ಶೆಟ್ಟಿ ಪೆರ್ಮುದೆ, ಶ್ರೀ ಪುಂಡಲೀಕ ಹೊಸಬೆಟ್ಟು, ಶ್ರೀಮತಿ ಸಹನಾ ರಾಜೇಶ್ ರೈ ಮೊದಲಾದವರು ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಯಕ್ಷಗುರು ಶ್ರೀ ರಾಕೇಶ್…

Read More

ಮಂಗಳೂರು : ಕಾರ್ವಾಲ್ ಮನೆತನ ಮತ್ತು ಮಾಂಡ್ ಸೊಭಾಣ್ ಜಂಟಿಯಾಗಿ ನೀಡುವ 19ನೇ ‘ಕಲಾಕಾರ್ ಪುರಸ್ಕಾರ’ ಹಸ್ತಾಂತರ ದಿನಾಂಕ 05-11-2023ರಂದು ಕಲಾಂಗಣದಲ್ಲಿ ನೆರವೇರಿತು. ಸಂಗೀತಗಾರ ಆಪೊಲಿನಾರಿಸ್ ಡಿ’ಸೋಜ ಇವರಿಗೆ ಶಾಲು, ಫಲಪುಷ್ಪ, ಸ್ಮರಣಿಕೆ, ಸನ್ಮಾನ ಪತ್ರ ಮತ್ತು ನಗದು ರೂ.50,000/- ನೀಡಿ ಗೌರವಿಸಲಾಯಿತು. ಸನ್ಮಾನ ನೆರವೇರಿಸಿದ ಸಂತ ಎಲೋಶಿಯಸ್ ಸಂಸ್ಥೆಗಳ ರೆಕ್ಟರ್ ವಂ. ಮೆಲ್ವಿನ್ ಪಿಂಟೊ ಮಾತನಾಡಿ “ಅಧ್ಯಾತ್ಮಿಕ ಅನುಭೂತಿಯಿಂದ ಮಾತ್ರ ಭಕ್ತಿಗೀತೆಗಳನ್ನು ರಚಿಸಬಹುದು. ತಮ್ಮ ಭಕ್ತಿಗೀತೆಗಳ ಮುಖಾಂತರ ನಮ್ಮ ಬಾಲ್ಯವನ್ನು ಸ್ಮರಣೀಯಗೊಳಿಸಿದ ಆಪೊಲಿನಾರಿಸ್ ಇವರನ್ನು ಸನ್ಮಾನಿಸಲು ಅತೀವ ಹರ್ಷವಾಗುತ್ತಿದೆ. ಕಲಾವಿದರನ್ನು ಗೌರವಿಸುವುದು ಸಮಾಜದ ಆದ್ಯ ಕರ್ತವ್ಯ. ಇದರಿಂದ ಅವರಿಗೆ ಪ್ರೋತ್ಸಾಹ ದೊರೆತು ಆ ಮುಖಾಂತರ ಅವರು ಕಲೆಗೆ, ಸಮಾಜಕ್ಕೆ ಹೆಚ್ಚಿನ ದೇಣಿಗೆ ನೀಡುತ್ತಾರೆ ಮತ್ತು ಇತರರಿಗೆ ಪ್ರೇರಣೆ ನೀಡುತ್ತಾರೆ” ಎಂದು ಅಭಿನಂದಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಆಪೊಲಿನಾರಿಸ್ ಇವರು “ತನ್ನ ಕುಟಂಬದಲ್ಲಿ ಸಂಗೀತ ಪ್ರಕೃತಿದತ್ತವಾಗಿ ಬಂದಿದ್ದು, ಹಿರಿಯರು, ಒಡಹುಟ್ಟಿದವರು ಸಂಗೀತ ಕ್ಷೇತ್ರದಲ್ಲಿ ದುಡಿದವರು. ಆ ಪ್ರೋತ್ಸಾಹ, ಪ್ರೇರಣೆಯಿಂದ ನಾನೂ ಸಾಧನೆಗಳನ್ನು…

Read More

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಘಟಕ ಮತ್ತು ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್‌ ಹೆಬ್ರಿ ಇದರ ಜಂಟಿ ಸಹಯೋಗದೊಂದಿಗೆ ನವೆಂಬರ್ ತಿಂಗಳ ‘ಸಡಗರ 2023’ ಕಾರ್ಯಕ್ರಮದ ಅಂಗವಾಗಿ ‘ಗಾನಯಾನ’ ಕನ್ನಡ ಗೀತಗಾಯನವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುದ್ರಾಡಿ ಇಲ್ಲಿ ದಿನಾಂಕ 07-11-2023ರಂದು ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ಇವರು “ಕನ್ನಡ ಗೀತ ಗಾಯನದ ಮೂಲಕ ವಿದ್ಯಾರ್ಥಿಗಳಲ್ಲಿ ಸದಭಿರುಚಿಯನ್ನು ಮೂಡಿಸಿ ಕನ್ನಡ ಕಂಪು ಮನೆಮನೆಗಳಲ್ಲಿ ಪಸರಿಸಲಿ” ಎಂದು ಹೇಳಿದರು. “ಚಾಣಕ್ಯ ಸಂಸ್ಥೆ ಹಮ್ಮಿಕೊಂಡ ಗೀತಗಾಯನ ಕಾರ್ಯಕ್ರಮ ಪ್ರತಿ ಹಳ್ಳಿಹಳ್ಳಿಗೂ ತಲುಪಲಿ. ವಿದ್ಯಾರ್ಥಿಗಳ ಬಾಯಲ್ಲಿ ಗೀತೆ ಸದಾ ನಲಿದಾಡಲಿ” ಎಂದು ಲಯನ್ಸ್ ಅಧ್ಯಕ್ಷರಾದ ರಘುರಾಮ ಶೆಟ್ಟಿ ಹೇಳಿದರು. ಮುಖ್ಯ ಅತಿಥಿಗಳಾಗಿ ಲಯನ್ಸ್ ಹೆಬ್ರಿ ಸಿಟಿ ಅಧ್ಯಕ್ಷರಾದ ಶ್ರೀ ರಘುರಾಮ ಶೆಟ್ಟಿ, ಸರಕಾರಿ ನೌಕರರ ಸಂಘ ಹೆಬ್ರಿ ತಾಲೂಕು ಇದರ ಅಧ್ಯಕ್ಷರಾದ ಹರೀಶ…

Read More

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಚಿಂತಕಿ, 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತೆ ಕೆ. ಷರೀಫಾರವರ ‘ನೀರೊಳಗಣ ಕಿಚ್ಚು’ ಕಥಾಸಂಕಲನ ಆಯ್ಕೆಯಾಗಿದೆ. ಕೃಷಿ ಮಾರುಕಟ್ಟೆ ಇಲಾಖೆಯಲ್ಲಿ ಮಾರುಕಟ್ಟೆ ಅಧಿಕಾರಿಯಾಗಿ 2017ರಲ್ಲಿ ನಿವೃತ್ತಿಹೊಂದಿರುವ ಕೆ. ಷರೀಫಾ ಮುಸ್ಲಿಮ್ ಸಮುದಾಯದಿಂದ ಕನ್ನಡಕ್ಕೆ ಬಂದ (1975) ಮೊದಲ ಕವಿಯತ್ರಿ. ಕರ್ನಾಟಕ ಉರ್ದು ಸಾಹಿತ್ಯ ಅಕಾಡೆಮಿ, ಹಂಪಿ ಕನ್ನಡ ವಿವಿಯ ಸಿಂಡಿಕೇಟ್‌, ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನದ ಮಹಿಳಾ ಸಮಿತಿ (ಬೆಳಗಾಂ), ರಾಷ್ಟ್ರಕವಿ ಆಯ್ಕೆ ಸಮಿತಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕ ಆಯ್ಕೆ ಸಮಿತಿಗಳ ಸದಸ್ಯೆಯಾಗಿ, ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕಿಯಾಗಿ, ದೇವರಾಜ ಅರಸು ಶತಮಾನೋತ್ಸವ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ಸೇವೆ ಸಲ್ಲಿಸಿರುವ ಕೆ. ಷರೀಫಾ ಹಲವು ಪ್ರಮುಖ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ‘ಮಹಿಳೆ ಮತ್ತು…

Read More

ಸೋಮವಾರಪೇಟೆ : ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ತಾಲ್ಲೂಕು ಘಟಕವು ಕರ್ನಾಟಕ ರಾಜ್ಯೋತ್ಸವ ಮತ್ತು ಸುವರ್ಣ ಸಂಭ್ರಮದ ಅಂಗವಾಗಿ ವಿದ್ಯಾರ್ಥಿಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದೆ. ಸ್ಪರ್ಧೆಗಳು ದಿನಾಂಕ 22-11-2023ರಂದು ಸೋಮವಾರಪೇಟೆಯ ಮಹಿಳಾ ಸಮಾಜದ ಕಾರ್ಯಾಲಯದಲ್ಲಿ ನಡೆಯಲಿದೆ. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಆರು ಸ್ಪರ್ಧೆಗಳು ಬೆಳಿಗ್ಗೆ ಘಂಟೆ 10.00 ರಿಂದ ಸಂಜೆ 5.00ರ ವರೆಗೆ ನಡೆಯಲಿದೆ. ಸೋಮವಾರಪೇಟೆ ತಾಲೂಕಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಈ ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ರಸ ಪ್ರಶ್ನೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, ಡ್ರಾಯಿಂಗ್ ಸ್ಪರ್ಧೆಗೆ ಶೀಟ್ ಮಾತ್ರ ನೀಡಲಾಗುತ್ತದೆ. ಯು.ಕೆ.ಜಿ.ಯಿಂದ 10 ನೇ ತರಗತಿವರೆಗೆ, ಛದ್ಮವೇಷ ಸ್ಪರ್ಧೆ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಡ್‌ನಲ್ಲಿ ಕಥೆ ಬರೆಯುವ ಸ್ಪರ್ಧೆ, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಹಾಗೂ ಸಾರ್ವಜನಿಕರಿಗೆ ಕನ್ನಡ ಸಮೂಹ ಗೀತೆ ಮತ್ತು ನೃತ್ಯ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ದಿನಾಂಕ 30-11-2023 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಇದೇ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳು ಮತ್ತು…

Read More