Author: roovari

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಮ್ಮೇಳನ ಸಮಿತಿ ಮಂಗಳೂರು ಇವರ ವತಿಯಿಂದ ಆಯೋಜಿಸುವ ‘ವರ್ಣಯಾನ’ ಒಂದು ದಿನದ ಸಮ್ಮೇಳನವು ದಿನಾಂಕ 09 ನವೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲ್ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದ್ದು, 1ರಿಂದ 4ನೇ ತರಗತಿಯವರಿಗೆ ‘ಪರಿಸರ’, 5ರಿಂದ 7ನೇ ತರಗತಿಯವರಿಗೆ ‘ಹಳ್ಳಿಯ ಜೀವನ’, 8ರಿಂದ 10ನೇ ತರಗತಿಯವರಿಗೆ ‘ನಮ್ಮ ಕರಾವಳಿ’ ಮತ್ತು ಪ್ರಥಮ ಹಾಗೂ ದ್ವಿತೀಯ ಪಿಯುಸಿಯವರಿಗೆ ‘ತುಳು ನಾಡಿನ ಸಂಸ್ಕೃತಿ ಮತ್ತು ಕಲಾ ವೈಭವ’ ಎಂಬ ವಿಷಯದಲ್ಲಿ ಯಾವುದೇ ಮಾಧ್ಯಮದಲ್ಲಿ ಚಿತ್ರ ರಚಿಸಬಹುದು. ಚಿತ್ರಕಲಾ ಸ್ಪರ್ಧೆಯ ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ 94819 77542 ಮತ್ತು 99720 84156 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಯೋಜಿತವಾಗಿದ್ದ ಎಚ್.ವಿ. ನಂಜುಂಡಯ್ಯನವರ 165ನೆಯ ಮತ್ತು ಕೀರ್ತಿನಾಥ ಕುರ್ತಕೋಟಿಯವರ 97ನೆಯ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 13 ಅಕ್ಟೋಬರ್ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು “ಎಚ್.ವಿ. ನಂಜುಂಡಯ್ಯ ಮತ್ತು ಕೀರ್ತಿನಾಥ ಕುರ್ತಕೋಟಿಯವರು ನೀಡಿದ ಅಪಾರ ಕೊಡುಗೆಯ ಮೂಲಕ ಕನ್ನಡ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಹುಮುಖಿಯಾಗಿ ಬೆಳೆಯಲು ಕಾರಣವಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರು ಮತ್ತು ಮೊದಲ ಮೂರು ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರೂ ಆಗಿದ್ದ ಎಚ್.ವಿ. ನಂಜುಂಡಯ್ಯನವರು ಮೈಸೂರು ವಿಶ್ವವಿದ್ಯಾಲಯನ್ನು ಕಟ್ಟಿ ಬೆಳೆಸಿದವರು. ನಂಜನಗೂಡಿನಲ್ಲಿ ಮುನ್ಸೀಫರಾಗಿ ಉದ್ಯೋಗ ಪ್ರಾರಂಭಿಸಿದ ಅವರು ಹಾಸನದ ಅಸಿಸ್ಟೆಂಟ್ ಕಮೀಷನರ್, ಬೆಂಗಳೂರಿನ ಸಬ್ ಜಡ್ಜ್, ಮದರಾಸು ವಿಶ್ವವಿದ್ಯಾಲಯದ ಫೆಲೋ, ಮೈಸೂರು ಸರ್ಕಾರದ ಕಾರ್ಯದರ್ಶಿ; ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ, ಸರಕಾರದ ಮುಖ್ಯ ಕಾರ್ಯದರ್ಶಿ, ಮುಖ್ಯ ನ್ಯಾಯಾಧೀಶ, ವಿದ್ಯಾ ಇಲಾಖೆಯ ಪ್ರಧಾನ ಆಡಳಿತಾಧಿಕಾರಿ, ಕೌನ್ಸಿಲರ್ ಹೀಗೆ ವಿವಿಧ ಹುದ್ದೆಗಳಲ್ಲಿ…

Read More

ಮಂಗಳೂರು : ರಾಗತರಂಗ ಮಂಗಳೂರು ಸಂಸ್ಥೆಯು ಭಾರತೀಯ ವಿದ್ಯಾ ಭವನ ಮಂಗಳೂರು ಇದರ ಸಹಯೋಗದೊಂದಿಗೆ ವಿಶೇಷವಾಗಿ ಸರಕಾರಿ ಕನ್ನಡ ಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಹೈಸ್ಕೂಲ್ ಮಕ್ಕಳಿಗಾಗಿ ದಿನಾಂಕ 24, 25 ಮತ್ತು 26 ಅಕ್ಟೋಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಮಂಗಳೂರಿನ ಪಾಂಡೇಶ್ವರ ಭಾರತೀಯ ವಿದ್ಯಾ ಭವನದಲ್ಲಿ ಆಯೋಜಿಸಲಾಗಿದೆ. ದಿನಾಂಕ 24 ಅಕ್ಟೊಬರ್ 2025 ಶುಕ್ರವಾರದಂದು ದೇಶ ಭಕ್ತಿಗೀತೆ (ಸಮೂಹ ಗಾನ), ಜಾನಪದ ಗೀತೆ – ಕನ್ನಡ ಮತ್ತು ತುಳು), ಚಿತ್ರ ರಚನೆ ವಿಷಯ: ನಮ್ಮೂರ ಜಾತ್ರೆ ಮತ್ತು ಅಪರಾಹ್ನ 2-00 ಘಂಟೆಗೆ ಆಶು ಭಾಷಣ ಮತ್ತು ಸಾಮಾನ್ಯ ಜ್ಞಾನ ರಸ ಪ್ರಶ್ನೆ, ದಿನಾಂಕ 25 ಅಕ್ಟೊಬರ್ 2025 ಶನಿವಾರದಂದು ಛದ್ಮವೇಷ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಭಾವಗೀತೆ ಮತ್ತು ದಿನಾಂಕ 26 ಅಕ್ಟೊಬರ್ 2025 ಆದಿತ್ಯವಾರದಂದು ಭರತನಾಟ್ಯ, ಕರ್ನಾಟಕ ವಾದ್ಯ ಸಂಗೀತ, ಜಾನಪದ ನೃತ್ಯ, ಹಿಂದೂಸ್ತಾನಿ ವಾದ್ಯ ಸಂಗೀತ, ಕೀ ಬೋರ್ಡ್ ಸ್ಪರ್ಧೆಗಳು ನಡೆಯಲಿದ್ದು,…

Read More

ಮಂಗಳೂರು : ಸನಾತನ ನಾಟ್ಯಾಲಯದ ವತಿಯಿಂದ ವಿದುಷಿ ಸಿಂಚನಾ ಎಸ್. ಕುಲಾಲ್‌ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು ದಿನಾಂಕ 12 ಅಕ್ಟೋಬರ್ 2025ರಂದು ಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ.‌ ಮೋಹನ ಆಳ್ವ “ಪ್ರಸ್ತುತ ಸಮಯದಲ್ಲಿ ಔಪಚಾರಿಕ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಭಾರತೀಯ ಶಾಸ್ತ್ರೀಯ ಕಲೆಗಳನ್ನು ಕಲಿಯಬೇಕು. ಈ ಕಲಾಶಿಕ್ಷಣವು ಯುವಜನರಿಗೆ ಸುಂದರವಾದ ಮನಸ್ಸನ್ನು ಕಟ್ಟುವ ತರಬೇತಿಯನ್ನು ನೀಡುತ್ತದೆ. ಈ ಕಲೆಯನ್ನು ಸ್ವೀಕರಿಸಿದ ವ್ಯಕ್ತಿಗಳು ಜೀವನದಲ್ಲಿ ಸೌಂದರ್ಯ ಪ್ರಜ್ಞೆಯೊಂದಿಗೆ ದೇಶದ ಸಂಪತ್ತಾಗಿ ಬೆಳೆಯುತ್ತಾರೆ. ಆದ್ದರಿಂದ ದೇಶದಲ್ಲಿರುವ ಯುವಜನ ಸಂಪತ್ತು ಇಂತಹ ಶಿಕ್ಷಣ ಪಡೆದು ರಾಷ್ಟ್ರವನ್ಮು ಕಟ್ಟಬೇಕು” ಎಂದು ಹೇಳಿದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ ಸಿಂಚನ ಕುಲಾಲ್ ಇವರ ಸಾಧನೆಯ ಹಾದಿಯನ್ನು ಶ್ಲಾಘಿಸಿದರು. ಹಿರಿಯ ನೃತ್ಯ ಗುರುಗಳಾದ ಉಳ್ಳಾಲ ಮೋಹನ ಕುಮಾರ್‌ ಇವರು ದೀಪ ಬೆಳಗಿ, ಕಲಾವಿದೆಗೆ ಗೆಜ್ಜೆ ಪ್ರದಾನ ಮಾಡಿ…

Read More

ಉಡುಪಿ : ಖ್ಯಾತ ಹಾಸ್ಯ ನಟ, ರಂಗಭೂಮಿ ಕಲಾವಿದ, ರಂಗಕರ್ಮಿ ರಾಜು ತಾಳಿಕೋಟೆ ಅವರು ಉಡುಪಿಯ ಖಾಸಗಿ‌‌ ಆಸ್ಪತ್ರೆಯಲ್ಲಿ ದಿನಾಂಕ 13 ಅಕ್ಟೋಬರ್ 2025ರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಶೈನ್ ಶೆಟ್ಟಿ ಅಭಿನಯದ ಹೊಸ‌ ಚಿತ್ರದಲ್ಲಿ ಕಳೆದ ಎರಡು‌‌ ದಿನಗಳಿಂದ ಉಡುಪಿಯಲ್ಲಿ ರಾಜು ತಾಳಿಕೋಟೆ ಶೂಟಿಂಗ್ನಲ್ಲಿ ಭಾಗವಹಿಸಿದ್ದರು. ನಿನ್ನೆ ರಾತ್ರಿ 12 ಗಂಟೆ ಹೊತ್ತಿಗೆ ರಾಜು ತಾಳಿಕೋಟೆ ಅವರಿಗೆ ಎದೆ‌ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಶೈನ್ ಶೆಟ್ಟಿ ಅವರ ತಂಡ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಇಂದು ಸಂಜೆ 5.30ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ವೃತ್ತಿ ರಂಗಭೂಮಿ ಕಲಾವಿದರಾಗಿದ್ದ ರಾಜು ತಾಳಿಕೋಟೆ ಅವರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕ ಸಿಂದಿಗಿ ಗ್ರಾಮದವರು. ಮೂಲ ಹೆಸರು ರಾಜೇಸಾಬ ಮುಕ್ತುಮಸಾಬ್ ತಾಳಿಕೋಟೆ. ಪ್ರಸ್ತುತ ತಾಳಿಕೋಟಿ ಗ್ರಾಮದಲ್ಲಿ ಕುಟಂಬದೊಡನೆ ವಾಸವಾಗಿ ದ್ರಾಕ್ಷಿ ಕೃಷಿಯಲ್ಲಿ ತೊಡಗಿದ್ದರು. ಸದ್ಯ ಅವರು ಧಾರವಾಡ ರಂಗಾಯಣ ನಿರ್ದೇಶಕರೂ ಆಗಿದ್ದರು.…

Read More

ಧಾರವಾಡ : ಮನೋಹರ ಗ್ರಂಥಮಾಲ ಹಾಗೂ ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಕೀರ್ತಿನಾಥ ಕುರ್ತಕೋಟಿ ಇವರ 97ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ ‘ಕೀರ್ತಿ ನೆನಪು’ ಹಾಗೂ ‘ವಾಗರ್ಥ’ ಕೃತಿ ಕುರಿತು ಸಂವಾದ ಕಾರ್ಯಕ್ರಮವು ದಿನಾಂಕ 13 ಅಕ್ಟೋಬರ್ 2025ರ ಸೋಮವಾರದಂದು ಧಾರವಾಡದ ರಂಗಾಯಣ ಆವರಣದಲ್ಲಿರುವ ಸುವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಡಾ. ಶ್ರೀರಾಮ ಭಟ್ಟ ಮಾತನಾಡಿ “ಸುಮಾರು ಐದು ದಶಕಗಳ ಕಾಲ ಕುರ್ತಕೋಟಿ ಅವರು ಬೇಂದ್ರೆಯವರ ಜೀವನ ಮತ್ತು ಸಾಹಿತ್ಯ ಕುರಿತು ಬರೆದ ಕೃತಿ ಹಾಗೂ ಲೇಖನಗಳ ಸಮಗ್ರ ಕೃತಿ ‘ವಾಗರ್ಥ’. ಬೇಂದ್ರೆ ಅವರ ಕಾವ್ಯ ಭಾವ ಪ್ರಧಾನವಾದರೆ, ಕುರ್ತಕೋಟಿ ಅವರ ವಿಮರ್ಶೆ ಜ್ಞಾನ ಪ್ರಧಾನವಾದದ್ದು. ಬೇಂದ್ರೆಯವರ ಕಾವ್ಯಕ್ಕೆ ಇರುವ ಮೌಲ್ಯವೇ ಕುರ್ತಕೋಟಿ ಅವರ ವಿಮರ್ಶೆಗೆ ಇದೆ. ಬೇಂದ್ರೆಯವರ ಕಾವ್ಯ ಅರ್ಥವಾಗ ಬೇಕಾದರೆ ಕುರ್ತಕೋಟಿ ವಿಮರ್ಶೆ ಓದಲೇ ಬೇಕು. ಮಾತು ಅರ್ಥದ ಅಭಿನ್ನತೆಯಿಂದ ಕೂಡಿದ್ದು ವಾಗರ್ಥ. ಕಾಳಿದಾಸನ ಈ ಶ್ಲೋಕ ಅದರಲ್ಲಿ ಬರುವ ವಾಗರ್ಥ…

Read More

ಮಂಗಳೂರು : ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಮಂಗಳೂರು ಇದರ ಅಂಗ ಸಂಸ್ಥೆಯಾದ ಕೆನರಾ ಕಾಲೇಜಿನ ಮೂಲಕ ನಡೆಸಲಾಗುತ್ತಿರುವ ಏರ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನನಲ 14 ಅಕ್ಟೋಬರ್ 2025ರ ಅಪರಾಹ್ನ ಘಂಟೆ 2.00ಕ್ಕೆ ಕಾಲೇಜಿನ ರತ್ನ ಎಸ್. ಶೆಣೈ ಮೆಮೋರಿಯಲ್ ಸಭಾಂಗಣದಲ್ಲಿ ಜರಗಲಿದೆ. ಈ ಬಾರಿಯ ಪ್ರಶಸ್ತಿಗೆ ಚೇಂಪಿ ವೇ. ಮೂ. ರಾಮಚಂದ್ರ ಅನಂತ ಭಟ್ ಹಾಗೂ ಡಾ. ಸೋಂದ ಭಾಸ್ಕರ ಭಟ್ ಇವರನ್ನು ಆಯ್ಕೆ ಮಾಡಲಾಗಿದೆ. ಕೆನರಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಿ. ವಾಸುದೇವ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಏರ್ಯ ಬಾಲಕೃಷ್ಣ ಹೆಗ್ಡೆ ಉಪಸ್ಥಿತರಿರುವರು.

Read More

ಉಡುಪಿ : ತುಳು ರಂಗ ಭೂಮಿ ಬೆಳವಣಿಗೆಗೆ ಶ್ರಮಿಸಿದವರಲ್ಲಿ ಒಬ್ಬರದಾದ ದಿ. ಕೆಮ್ತೂರು ದೊಡ್ಡಣ್ಣ ಶೆಟ್ಟಿ ಅವರ ನೆನಪಿನಲ್ಲಿ ತುಳುಕೂಟ ಉಡುಪಿ ವತಿಯಿಂದ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದೆ. 24ನೇ ವರ್ಷದ ಸ್ಪರ್ಧೆ 2026ರ ಜನವರಿಯಲ್ಲಿ ಉಡುಪಿಯಲ್ಲಿ ನಡೆಯಲಿದೆ. ಈ ಸ್ಪರ್ಧೆಗೆ ತುಳು ಹವ್ಯಾಸಿ ನಾಟಕ ತಂಡಗಳಿಗೆ ಭಾಗವಹಿಸಲು ಅವಕಾಶವಿದ್ದು, ಪ್ರವೇಶ ಪತ್ರ ಸ್ವೀಕರಿಸಲು 09 ನವಂಬರ್ 2025 ಕೊನೆಯ ದಿನವಾಗಿದೆ. ಸ್ಪರ್ಧೆಗೆ ಗರಿಷ್ಠ 7 ನಾಟಕಗಳನ್ನು ಆಯ್ಕೆ ಮಾಡಲಾಗುವುದು. ವಿಜೇತ ತಂಡಗಳಿಗೆ ಪ್ರಥಮ 20 ಸಾವಿರ, ದ್ವಿತೀಯ 15 ಸಾವಿರ ಹಾಗೂ ತೃತೀಯ 10 ಸಾವಿರ ನಗದು ಬಹುಮಾನ, ನಿರ್ದೇಶನ, ಸಂಗೀತ, ರಂಗವಿನ್ಯಾಸ, ಬೆಳಕು, ನಟ, ನಟಿ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಿ. ಪ್ರಭಾಕರ ಭಂಡಾರಿ -9880825626 ಇವರನ್ನು ಸಂಪರ್ಕಿಸಬಹುದು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

Read More

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕಾಟಿಪಳ್ಳದ ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಸಂಘ ಆಯೋಜಿಸಿದ್ದ ವೃತ್ತಿಪರ ಯಕ್ಷಗಾನ ಮೇಳದ ಪ್ರಥಮ ಮಹಿಳಾ ಭಾಗವತರಾಗಿದ್ದ ಲೀಲಾವತಿ ಬೈಪಾಡಿತ್ತಾಯ ಅವರ ಸಂಸ್ಮರಣಾ ಗೋಷ್ಠಿ ಕಾರ್ಯಕ್ರಮವು ದಿನಾಂಕ 12 ಅಕ್ಟೋಬರ್ 2025ರ ಭಾನುವಾರದಂದು ಮಂಗಳೂರಿನ ತುಳು ಸಾಹಿತ್ಯ ಅಕಾಡೆಮಿಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ಯಕ್ಷಗಾನ ತಜ್ಞ ಪ್ರಭಾಕರ ಜೋಶಿ ಮಾತನಾಡಿ “ಮಹಿಳಾ ಕಲಾವಿದೆಯಾಗಿ ಮಾತ್ರವಲ್ಲ, ಭಾಗವತಿಕೆ ವಲಯದಲ್ಲೇ ಪ್ರಥಮರ ಸಾಲಿನಲ್ಲಿ ನಿಲ್ಲುವ ಲೀಲಾವತಿ ಬೈಪಾಡಿತ್ತಾಯ ಅವರ ಯಕ್ಷಗಾನ ಪ್ರಾವೀಣ್ಯವು ‘ಲೀಲಾವತಿ ಪ್ರಜ್ಞೆ’ಯಾಗಿ ಕಲಾಕ್ಷೇ ತ್ರದಲ್ಲಿ ಪುನರುತ್ಥಾನಗೊಳ್ಳಬೇಕು. ಯಕ್ಷಗಾನದಲ್ಲಿ ಮಹಿಳೆಯರ ಚಾಪು ಮೂಡಿ ವರ್ಷಗಳು ಅನೇಕ ಆಗಿವೆ. ಆದರೆ ಪೂರ್ಣಾವಧಿ ಕಲಾವಿದೆಯಾಗಿ, ವೃತ್ತಿಪರತೆಯನ್ನು ಮೂಡಿಸಿದ ಮೊದಲಿಗರು ಲೀಲಾವತಿ. ಅವರಿಗೆ ಆರಂಭದಲ್ಲಿ ಆರ್ಥಿಕ ಬಡತನ ಇದ್ದರೂ ಕಲಾಶ್ರೀಮಂತಿಕೆ ಇತ್ತು. ರಾಗ, ಲಯ, ತಾಳ, ಕಾಲಪ್ರಭೇದ ಅರಿತು ಭಾಗವತಿಕೆ ಮಾಡಿ ಅವರು ಯಕ್ಷಗಾನದ ಗುರುವಾಗಿಯೂ ಹೆಸರು ಮಾಡಿದ್ದಾರೆ. ನಿಷ್ಕಲ್ಮಶ, ಗಂಭೀರ ವ್ಯಕ್ತಿತ್ವ ಹೊಂದಿದ್ದ…

Read More

ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇದರ ಸಹಯೋಗದಲ್ಲಿ ಕೋಟ ಶಿವರಾಮ ಕಾರಂತರ 123ನೇ ಜನ್ಮದಿನಾಚರಣೆ ಹಾಗೂ ಯಕ್ಷಗಾನ ಪೂರ್ವರಂಗ ಕೃತಿ ಅನಾವರಣ ಸಮಾರಂಭವು ದಿನಾಂಕ 10 ಅಕ್ಟೋಬರ್ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾಹೆಯ ಸಹಕುಲಪತಿಗಳಾದ ಡಾ. ನಾರಾಯಣ ಸಭಾಹಿತ್ ಮಾತನಾಡಿ “ಡಾ. ಶಿವರಾಮ ಕಾರಂತರು ಸಾಹಿತಿ, ಮಾನವತಾವಾದಿ, ಪರಿಸರಪ್ರೇಮಿ, ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ ಅಣುಸ್ಥಾವರವಾದಾಗ ಅದರ ವಿರುದ್ಧ ಪ್ರತಿಭಟನೆಗೆ ಇಳಿದ ಮೊದಲಿಗರು. ಅದಕ್ಕೋಸ್ಕರ ದೇಶದ ಲೋಕಸಭಾ ಮಹಾಚುನಾವಣೆಯಲ್ಲಿ ಕಾರವಾರದಿಂದ ಚುನಾವಣೆಗೆ ನಿಂತು ಸ್ಪರ್ಧಿಸಿದರು. ನಾನು ರಾಜಕೀಯ ವ್ಯಾಮೋಹಿಯಲ್ಲ, ಬದಲು ಪರಿಸರ ಹಾನಿಯ ವಿರೋಧಿ. ಕೈಗಾ ಅಣುಸ್ಥಾವರ ಬಂದರೆ ಉತ್ತರಕನ್ನಡದ ಜೀವವೈವಿಧ್ಯ, ಕಾಡು ಪರಿಸರ ನಾಶವಾಗುತ್ತದೆ. ಅದಕ್ಕಾಗಿ ನಾನು ಚುನಾವಣೆಗೆ ನಿಲ್ಲುತ್ತೇನೆ. ಪರಿಸರ ಜಾಗೃತಿಗಾಗಿ ನಾನು ಮನೆಮನೆ ಸುತ್ತಾಡುವೆ, ಹೊರತು ಅಧಿಕಾರಕ್ಕಾಗಿ ಅಲ್ಲ, ಎಂಬುದಾಗಿ ಲೋಕಸಭಾ ಚುನಾವಣೆಗೆ ನಿಂತು 60,000 ಮತಗಳನ್ನು…

Read More