Author: roovari

ಪುತ್ತೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ (ಕನ್ನಡ ಮತ್ತು ಸಂಸ್ಕೃತಿ ಇಲಾಖೆ) ಇವರು ಜಿ. ಎಸ್. ಟಿ. ಮಹಿಳಾ ಮಂಡಳಿ, ಪುತ್ತೂರು ಇವರ ಸಹಯೋಗದೊಂದಿಗೆ ಆಯೋಜಿಸುವ ಕೊಂಕಣಿ ರಂಗ ತರಂಗ ಮತ್ತು ಸಾಹಿತ್ಯ ಸಂಭ್ರಮ-3 ಕಾರ್ಯಕ್ರಮವು ದಿನಾಂಕ 14 ಸೆಪ್ಟೆಂಬರ್ 2025ರ ಭಾನುವಾರದಂದು ಅಪರಾಹ್ನ ಘಂಟೆ 3.00ಕ್ಕೆ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸುಕ್ರತೀಂದ್ರ ಕಲಾಮಂದಿರದಲ್ಲಿ ನಡೆಯಲಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಧರ್ಮದರ್ಶಿ ವ್ಯವಸ್ಥಾಪಕರಾದ ಡಾ. ಅಶೋಕ್ ಪ್ರಭು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಡಾಲ ದೇಶಸ್ಥ ಗೌಡ ಬ್ರಾಹ್ಮಣ ಸಮಾಜದ ಮುಖಂಡರಾದ ಡಾ. ವೈ. ಉಮಾನಾಥ ಶೆಣೈ, ಗೌರವ ಅತಿಥಿಗಳಾಗಿ ಜಿ. ಎಸ್. ಬಿ. ಮಹಿಳಾ ಮಂಡಳಿಯ ಅಧ್ಯಕ್ಷ್ಯೆಯಾದ ಶ್ರೀಮತಿ ಎಮ್. ವಿದ್ಯಾ ಭಟ್ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಪುತ್ತೂರಿನ ಹಿರಿಯ ಸಾಹಿತಿಯಾದ ಶ್ರೀ ಉಲ್ಲಾಸ್ ಕೆ. ಪೈ…

Read More

ಸಾಣೇಹಳ್ಳಿ : ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2025-26ನೆಯ ಸಾಲಿನ ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವ ಅಭ್ಯಾಸ ಮಾಲಿಕೆಯ ಯಕ್ಷಗಾನ ಪ್ರಯೋಗ ದಿನಾಂಕ 12 ಸೆಪ್ಟೆಂಬರ್ 2025ರಂದು ಸಂಜೆ 7-00 ಗಂಟೆಗೆ ಸಾಣೇಹಳ್ಳಿಯ ಎಸ್.ಎಸ್. ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಹಟ್ಟಿಯಂಗಡಿ ರಾಮ ಭಟ್ಟ ರಚಿತ ‘ಅತಿಕಾಯ ಮತ್ತು ಇಂದ್ರಜಿತು ಕಾಳಗ’ ಪ್ರಸಂಗವನ್ನು ಭಾರ್ಗವ ಕೆ.ಎನ್. ಇವರ ನಿರ್ದೇಶನದಲ್ಲಿ ಪ್ರಸ್ತುತ ಪಡಿಸಲಿದ್ದು, ಕುಶ ಎಂ.ಆರ್. ಇವರು ಮದ್ದಲೆ, ನಾಗಭೂಷಣ ಕೆ.ಎಸ್. ಇವರು ಚಂಡೆಯಲ್ಲಿ, ಶೈಲೇಶ್ ತೀರ್ಥಹಳ್ಳಿ ಯಕ್ಷಗಾನ ಹೆಜ್ಜೆಗಾರಿಕೆಯಲ್ಲಿ ಹಾಗೂ ಶ್ರೀ ಮಹಾ ಗಣಪತಿ ಶ್ರೀ ವೀರಾಂಜನೇಯ ಯಕ್ಷಗಾನ ಮಂಡಲಿ ಕೇಡಲಸರ ಪ್ರಸಾಧನದಲ್ಲಿ ಸಹಕರಿಸಲಿದ್ದಾರೆ.

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಇವರು ಕಥೊಲಿಕ್ ಸಭಾ ಮಂಗಳೂರು (ರಿ.) ಸುರತ್ಕಲ್ ಘಟಕದ ಸಹಯೋಗದೊಂದಿಗೆ ಆಯೋಜಿಸುವ ವೊವಿಯೊ ವೇರ್ಸ್ ಬಾಳ್ ಗಿತಾಂ ಕಾರ್ಯಾಗಾರವು (ಮದುವೆ ಸೋಭಾಣೆ ಮತ್ತು ಶಿಶು ಗೀತೆಗಳು) ದಿನಾಂಕ 14 ಸೆಪ್ಟೆಂಬರ್ 2025ರ ಭಾನುವಾರದಂದು ಬೆಳಗ್ಗೆ ಘಂಟೆ 9.30ಕ್ಕೆ ಸುರತ್ಕಲ್ಲಿನ ಸೆಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಲಿದೆ. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸೆಕ್ರೆಡ್ ಹಾರ್ಟ್ ಚರ್ಚ್ ಸುರತ್ಕಲ್ ಇಲ್ಲಿನ ಧರ್ಮಗುರುಗಳಾದ ಆ. ವಂ. ಅಸ್ಟಿನ್ ಪೀಟರ್ ಪೆರಿಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ. ಆರ್. ಪಿ. ಎಲ್. ಇದರ ಗ್ರೂಪ್ ಜನರಲ್ ಮೆನೇಜರ್ ಆದ ಶ್ರೀ ಕೃಷ್ಣಾ ಹೆಗ್ಡೆ, ಕೆಥೋಲಿಕ್ ಸಭಾ ಸುರತ್ಕಲ್ ಘಟಕದ ಅಧ್ಯಕ್ಷರಾದ ಶ್ರೀ ಒಲ್ವಿನ ಡಿ’ಸೋಜ, ಕೆಥೋಲಿಕ್ ಸಭಾ ಸುರತ್ಕಲ್ ವಲಯದ ಅಧ್ಯಕ್ಷರಾದ ಶ್ರೀ ಲಾರೆನ್ಸ್ ಡಿ’ಸೋಜ ಹಾಗೂ ಸುರತ್ಕಲ್ ಚರ್ಚ್ ಇದರ ಉಪಾಧ್ಯಕ್ಷರಾದ ಶ್ರೀ ರಸ್ಸೆಲ್…

Read More

ಬೆಂಗಳೂರು : ರಂಗ ತಂಡ ಸಂಚಲನ ಮೈಸೂರು (ರಿ.) ಮೈಸೂರು ಅಭಿನಯಿಸುವ ‘ಎರಡೆರಡ್ಲಾ ಐದು’ ಕನ್ನಡ ಹಾಸ್ಯ ನಾಟಕ ಪ್ರದರ್ಶನವನ್ನು ದಿನಾಂಕ 14 ಸೆಪ್ಟೆಂಬರ್ 2025ರಂದು ಮಧ್ಯಾಹ್ನ ಗಂಟೆ 3-30 ಹಾಗೂ ಸಂಜೆ 7-00ಕ್ಕೆ ಬೆಂಗಳೂರಿನ ಜೆಪಿ ನಗರದ ವ್ಯೋಮ ಆರ್ಟ್ ಥಿಯೇಟರ್ ಅಂಡ್ ಸ್ಟುಡಿಯೋನಲ್ಲಿ ಆಯೋಜಿಸಲಾಗಿದೆ. ಈ ನಾಟಕವನ್ನು ಏಕೆ ನೋಡಬೇಕು ? * ಮೋಸ ಮಾಡದೆ, ಲಂಚವನ್ನು ತೆಗೆದುಕೊಳ್ಳದೇ ಪ್ರಾಮಾಣಿಕತೆಯಿಂದ ದುಡಿದರೆ ಒಂದಲ್ಲ ಒಂದು ದಿನ ಅದರ ಫಲ ಸಿಕ್ಕೆ ಸಿಗುತ್ತದೆ. * ಕಷ್ಟಗಳು ಬಂದಾಗ ಮಾತ್ರ ಸಂಬಂಧಗಳು ಗಟ್ಟಿಯಾಗಿ ಒಬ್ಬರಿಗೊಬ್ಬರು ಸಹಕಾರಿಯಾಗಿ ನಿಲ್ಲಲು ಸಾಧ್ಯವಾಗುತ್ತದೆ. * ಶಾಂತಿ ಅನ್ನುವುದು ಹೊರಗಡೆ ಸಿಗುವ ವಸ್ತು ಅಲ್ಲ. ಅದು ಆಂತರಿಕ ಅನ್ನುವುದು ಈ ನಾಟಕದಲ್ಲಿ ಗೊತ್ತಾಗುತ್ತದೆ. * ಪ್ರೇಮ ಪ್ರೀತಿ ಅನ್ನುವುದು ಕೇವಲ ಆಕರ್ಷಣೆಯಲ್ಲ. ಅದು ಆತ್ಮಕ್ಕೆ ಸಂಬಂಧಪಟ್ಟದ್ದು. ಈ ನಾಟಕವನ್ನು ಹೇಗೆ ಕಟ್ಟಿದ್ದು, ಯಾರು ಕಟ್ಟಿದ್ದು? * ಕೇವಲ 12 ದಿನಗಳಲ್ಲಿ ಈ ನಾಟಕವನ್ನು ಕಟ್ಟಿದ ಶ್ರೇಯಸ್ಸು, ಸಂಚಲನ…

Read More

ಮಂಗಳೂರು : ಅಂತಾರಾಷ್ಟ್ರೀಯ ಕಲಾವಿದ, ಯಕ್ಷಗಾನ ಹಾಗೂ ರಂಗಭೂಮಿಯ ಕಲಾವಿದ ದಿ. ಪಿ.ವಿ. ಪರಮೇಶ್ ಇವರ ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ದಿನಾಂಕ 15 ಸೆಪ್ಟೆಂಬರ್ 2025ನೇ ಸೋಮವಾರ ಬೆಳಿಗ್ಗೆ 10-30ಕ್ಕೆ ಶ್ರೀ ಕೃಷ್ಣ ಜನ್ಮಮಹೋತ್ಸವ ಸಮಿತಿ (ರಿ.) ಕದ್ರಿ ಇವರ ವೇದಿಕೆ ಮತ್ತು ಸಹಯೋಗದೊಂದಿಗೆ ಕದ್ರಿ ದೇವಸ್ಥಾನದಲ್ಲಿ ನಡೆಯಲಿದೆ. ಯಕ್ಷಗಾನದಲ್ಲಿ ನಾನಾ ಭಾಷೆಗಳಲ್ಲಿ ಮನೋಜ್ಞವಾಗಿ ನಟಿಸಬಲ್ಲ ಸಹೃದಯೀ ಕಲಾವಿದ ಪಿ. ನಾಗೇಶ ಕಾರಂತ ಇವರಿಗೆ ಪರಮೇಶ್ ರವರ ನೆನಪಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ ಕಾರ್ಯಕ್ರಮವನ್ನು ಸರಯೂ ತಂಡ ನಿರ್ವಹಿಸಲಿದ್ದು, ಪ್ರಶಸ್ತಿ ಪ್ರದಾನದ ಬಳಿಕ ಸರಯೂ ಬಾಲ ಯಕ್ಷ ವೃಂದ (ರಿ.) ಮಕ್ಕಳ ಮೇಳದಿಂದ ‘ಶ್ರೀಕೃಷ್ಣ ಕಾರುಣ್ಯ’ ಎಂಬ ಯಕ್ಷಗಾನ ಬಯಲಾಟವೂ ನಡೆಯಲಿದೆ ಎಂದು ಸರಯೂ ತಂಡದ ಗೌರವ ಸಂಚಾಲಕರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹಾಗೂ ನಿರ್ದೇಶಕ ವರ್ಕಾಡಿ ರವಿ ಅಲೆವೂರಾಯ ತಿಳಿಸಿದ್ದಾರೆ.

Read More

ಮಂಗಳೂರು : ಪರರ ಸೇವೆ ದೇವರ ಸೇವೆ ಎಂಬ ಧ್ಯೇಯವನ್ನು ತನ್ನದಾಗಿಸಿಕೊಂಡು ಬಾಳನ್ನು ಸಾಗಿಸಿದ್ದ ಶ್ರೀಮತಿ ದಿ. ಗಾಯತ್ರಿ ನಾಗೇಶ್ ರಾಮಕ್ಷತ್ರಿಯ ಸಮಾಜದ ಅಭಿಮಾನದ ಪುತ್ರಿ. ಬಹುಮುಖ ಪ್ರತಿಭೆಯ ಗಾಯತ್ರಿ ಇವರ ವೈಕುಂಠ ಸಮಾರಾಧನೆ ಕ್ರಿಯೆಯ ದಿನದಂದು ಮಂಗಳೂರು ಶರವು ದೇವಸ್ಥಾನದ ಸಮೀಪವಿರುವ ಬಾಳಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ಮರೆಯಲಾಗದವರು ವ್ಯಕ್ತಿ ಚಿತ್ರಣ ಕೃತಿ ಕನ್ನಡ ಭವನ ಪ್ರಕಾಶನ ಕಾಸರಗೋಡು, ಇದರ ಸಂಸ್ಥಾಪಕ ಅಧ್ಯಕ್ಷರು ಸಂಚಾಲಕರು ಆಗಿರುವಂತಹ ಡಾ. ವಾಮನ್ ರಾವ್ ಬೇಕಲ್ ಇವರ ನೇತೃತ್ವದಲ್ಲಿ ಕೃತಿ ಬಿಡುಗಡೆ ಸಮಾರಂಭವನ್ನು ರಾಮಕ್ಷತ್ರಿಯ ಮಹಿಳಾ ಯಕ್ಷವೃಂದ ಜೆಪ್ಪು ಮಂಗಳೂರು ಇವರ ಸ0ಯುಕ್ತ ಆಶ್ರಯದಲ್ಲಿ ದಿನಾಂಕ 09 ಸೆಪ್ಟೆಂಬರ್ 2025ರಂದು ಆಯೋಜಿಸಲಾಯಿತು. ಈ ಕೃತಿಯನ್ನು ಬರೆದವರು ಕಾಸರಗೋಡು ಕನ್ನಡ ಭವನ ಪ್ರಕಾಶನದ ಸಂಸ್ಥಾಪಕಿ ಶ್ರೀಮತಿ ಸಂಧ್ಯಾ ರಾಣಿ ಟೀಚರ್, ಕೃತಿಯನ್ನು ಡಾ. ಶಿವಾನಂದ ಬೇಕಲ್ ಲೋಕಾರ್ಪಣೆಗೊಳಿಸಿದರು. ಅಂದಿನ ಸಭೆಯ ಅಧ್ಯಕ್ಷತೆಯನ್ನು ರಾಮಕ್ಷತ್ರಿಯ ಸೇವಾ ಸಂಘ ಮಂಗಳೂರು ಜಪ್ಪು ಅಧ್ಯಕ್ಷರಾದ ಮುರಳಿಧರ ಸಿ.ಎಚ್. ವಹಿಸಿದ್ದರು. ಕನ್ನಡ ಭವನ…

Read More

ಬೆಂಗಳೂರು : ಕಪ್ಪಣ್ಣ ಅಂಗಳ ಇದರ ವತಿಯಿಂದ ‘ನೃತ್ಯ ಭಾನು’ 93ನೇ ಶಾಸ್ತ್ರೀಯ ನೃತ್ಯ ಕಾರ್ಯಕ್ರಮವನ್ನು ದಿನಾಂಕ 12 ಸೆಪ್ಟೆಂಬರ್ 2025ರಂದು ಸಂಜೆ 06-30 ಗಂಟೆಗೆ ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ಆಯೋಜಿಸಲಾಗಿದೆ. ಇದು ಶಾಂತಲಾ ನಾಟ್ಯ ಸಿರಿ ಪುರಸ್ಕೃತ ಗುರು ಬಿ. ಭಾನುಮತಿ ಇವರಿಗೆ ಸಮರ್ಪಿತ ಉತ್ಸವವಾಗಿದೆ. ಶ್ವೇತಾ ಕೃಷ್ಣ ರಾವ್ ಮತ್ತು ಮೃದುಲಾ ರಾಮಾನುಜನ್ ಇವರಿಂದ ‘ಭರತನಾಟ್ಯ’ ಪ್ರದರ್ಶನ ನಡೆಯಲಿದೆ.

Read More

ಧಾರವಾಡ : ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಮೆಮೋರಿಯಲ್ ಫೌಂಡೇಷನ್ ಟ್ರಸ್ಟ್ ಬೆಂಗಳೂರು ಮತ್ತು ಭಾರತೀಯ ಸಂಗೀತ್ ವಿದ್ಯಾಲಯ ಧಾರವಾಡ ಇವರು ಪ್ರಸ್ತುತ ಪಡಿಸುವ ‘ಸ್ಮರಣೆ’ ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸಂಗೀತೋತ್ಸವ -2025 ಕಾರ್ಯಕ್ರಮವನ್ನು ದಿನಾಂಕ 14 ಸೆಪ್ಟೆಂಬರ್ 2025ರಂದು ಧಾರವಾಡದ ಸೃಜನ ಅಣ್ಣಾಜಿ ರಾವ್ ಶೀರೂರ್ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ‘ಇನ್ಫೋಸಿಸ್ ಸಿತಾರ್ ನವಾಜ್ ಉಸ್ತಾದ್ ಬಾಲೇಖಾನ್ ಸ್ಮಾರಕ ಪ್ರಶಸ್ತಿ -2025’ ಮತ್ತು ‘ಉಸ್ತಾದ್ ಬಾಲೇಖಾನ್ ಸ್ಮಾರಕ ಪಕ್ಕವಾದ್ಯ ಪ್ರಶಸ್ತಿ -2025’ ಪ್ರದಾನ ಮಾಡಲಾಗುವುದು. ಸಿತಾರ್ ರತ್ನ ಸಮಿತಿಯ ಅಧ್ಯಕ್ಷರಾದ ರಾಘವೇಂದ್ರ ಆಯಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.

Read More

ಲೇಖಕಿ ಸೃಜನಾ ಸೂರ್ಯ ಇವರ ಮೊದಲ ಕಥಾಸಂಕಲನ ‘ದುಂಡು ಮಲ್ಲಿಗೆಯ ಮುಖದವಳು’. ಇದರಲ್ಲಿ ಹತ್ತೊಂಬತ್ತು ಸುಂದರ ಕಥೆಗಳಿವೆ. ಮನಶ್ಶಾಸ್ತ್ರದಲ್ಲಿ ಎಂ.ಎ. ಮಾಡಿದ ಸೃಜನಾರವರಿಗೆ ಅದೇ ವಿಷಯವನ್ನು ಹಿನ್ನೆಲೆಯಾಗಿಟ್ಟುಕೊಂಡು ಕುತೂಹಲ ಹುಟ್ಟಿಸುತ್ತಾ ಹೋಗುವ ಕಥೆಗಳನ್ನು ಬರೆಯುವುದು ಕಷ್ಟವೇನಲ್ಲ ಅನ್ನುವುದಕ್ಕೆ ಇಲ್ಲಿನ ಹಲವು ಕಥೆಗಳು ಸಾಕ್ಷಿಯಾಗಿವೆ. ಅಲ್ಲದೆ ಪಾತ್ರಗಳ ಒಳತೋಟಿಯನ್ನು ಗುರುತಿಸುವುದರಲ್ಲೂ ಅದು ಅವರಿಗೆ ಸಹಕಾರಿಯಾಗಿದೆ. ಮೊದಲ ಕಥೆ ‘ಮುಚ್ಚಿದ ಕಿಟಿಕಿ’ಯಲ್ಲಿ ಪೂಜಾ- ಸೀಮಾ ಅನ್ನುವ ಇಬ್ಬರು ಆತ್ಮೀಯ ಗೆಳತಿಯರು. ಇಬ್ಬರ ನಡುವಣ ಪ್ರೀತಿ ಅದೆಷ್ಟು ಗಾಢವಾಗಿದೆಯೆಂದರೆ ಸೀಮಾಗೆ ಪೂಜಾಳ ಜತೆಗೇ ಬದುಕು ಸಾಗಿಸೋಣ ಅನ್ನಿಸುತ್ತದೆ. ಆದರೆ ಹಿರಿಯರ ಮುಂದೆ ಹೇಳಿಕೊಳ್ಳುವ ಧೈರ್ಯವಾಗುವುದಿಲ್ಲ. ಹಾಗೆ ಸೀಮಾಳ ಮದುವೆ ನಿಶ್ಚಯವಾದಾಗ ಕೊನೆಯದಾಗಿ ಅವಳು ಪೂಜಾಳಲ್ಲಿ ಭವಿಷ್ಯದ ಬದುಕಿನ ಭರವಸೆ ಕೊಡಬಹುದೇ ಎಂದು ಕೇಳುತ್ತಾಳೆ. ಆದರೆ ಪೂಜಾ ಬೇಡವೆನ್ನುತ್ತಾಳೆ. ತನ್ನಂಥ ಸಲಿಂಗಿಗೆ ಮದುವೆಯಿಂದ ತೊಂದರೆಯಾದೀತು. ಆದರೆ ಸೀಮಾಳಂಥ ದ್ವಿಲಿಂಗಿಗೆ ಏನೂ ನಷ್ಟವಾಗಲಾರದು ಅನ್ನುತ್ತಾಳೆ. ಮದುವೆಯಾಗಿ ಬೆಂಗಳೂರಿಗೆ ಹೋಗಿ ನೆಲೆಯೂರುವ ಸೀಮಾ, ಕೆಲವು ವರ್ಷಗಳ ನಂತರ ಒಂದು ದಿನ…

Read More

ಮೈಸೂರು : ರಂಗಾಯಣ ಮೈಸೂರು ಇದರ ಭಾರತೀಯ ರಂಗಶಿಕ್ಷಣ ಕೇಂದ್ರದ 2025-26ನೇ ಸಾಲಿನ ವಿದ್ಯಾರ್ಥಿಗಳ ಅಭ್ಯಾಸ ಮಾಲಿಕೆ ಪ್ರದರ್ಶನವನ್ನು ದಿನಾಂಕ 14 ಸೆಪ್ಟೆಂಬರ್ 2025ರಂದು ಸಂಜೆ 6-30 ಗಂಟೆಗೆ ಮೈಸೂರು ರಂಗಾಯಣದ ಭೂಮಿಗೀತ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ. ಕುಮಾರವ್ಯಾಸ ಭಾರತದ ರಂಗ ವಾಚಿಕ ಪ್ರಯೋಗ ‘ಹಡೆದ ಕೊಡಲಿಗಳು’ ನಾಟಕ ಕೆ.ಜಿ. ಮಹಾಬಲೇಶ್ವರ ಇವರ ರಂಗ ಪಠ್ಯ ಮತ್ತು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.

Read More