Author: roovari

ಹಂಪಿ : ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ ಕನ್ನಡ ವಿಶ್ವವಿದ್ಯಾಲಯ ಹಂಪಿ ಸಹಯೋಗದಲ್ಲಿ ‘ದಕ್ಷಿಣ ಭಾರತೀಯ ಭಾಷೆಗಳಲ್ಲಿ ಸಾಹಿತ್ಯ ವಿಮರ್ಶೆ’ ಎಂಬ ವಿಷಯದ ಬಗ್ಗೆ ವಿಚಾರಗೋಷ್ಠಿಯನ್ನು ದಿನಾಂಕ 05 ಆಗಸ್ಟ್ 2025, ಮಂಗಳವಾರ ಬೆಳಗ್ಗೆ 10-00 ಗಂಟೆಗೆ ಹಂಪಿ ವಿದ್ಯಾರಣ್ಯ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಿ.ವಿ. ಪರಮಶಿವಮೂರ್ತಿ ಇವರು ಉದ್ಘಾಟನೆ ಮಾಡಲಿದ್ದು, ಪ್ರಸಿದ್ಧ ಲೇಖಕರು ವಿಮರ್ಶಕರಾದ ಎಸ್. ಸಿರಾಜ್ ಅಹಮದ್ ಇವರು ಆಶಯ ನುಡಿಗಳನ್ನಾಡಲಿದ್ದಾರೆ. ಬೆಳಗ್ಗೆ 11-00 ಗಂಟೆಗೆ ಮೊದಲನೆಯ ಗೋಷ್ಠಿಯಲ್ಲಿ ‘ತಮಿಳು ವಿಮರ್ಶೆ – ಒಂದು ಅವಲೋಕನ’ ಎಂಬ ವಿಷಯದ ಬಗ್ಗೆ ಆರ್. ಮೊರಿಸ್ ಜಾಯ್ ಮತ್ತು ಎನ್. ಗೋವಿಂದರಾಜನ್, ಮಧ್ಯಾಹ್ನ 12-00 ಗಂಟೆಗೆ ಎರಡನೆಯ ಗೋಷ್ಠಿಯಲ್ಲಿ ‘ತೆಲುಗು ವಿಮರ್ಶೆ – ಒಂದು ಅವಲೋಕನ’ ಎಂಬ ವಿಷಯದ ಬಗ್ಗೆ ಸಿ. ಮೃಣಾಳಿನಿ ಮತ್ತು ಕಾಸುಲ ಪ್ರತಾಪ ರೆಡ್ಡಿ, ಮಧ್ಯಾಹ್ನ 02-00 ಗಂಟೆಗೆ ಮೂರನೆಯ ಗೋಷ್ಠಿಯಲ್ಲಿ…

Read More

ಬೆಳಗಾವಿ : ಶಿವಾ ಆಫ್ ಸೆಟ್ ಪ್ರಿಂಟರ್ಸ್ ಮತ್ತು ಪಬ್ಲಿಷರ್ಸ್ ಹಾಗೂ ಗುರುದೇವ ಪ್ರಕಾಶನ ವತಿಯಿಂದ ದಿನಾಂಕ 03 ಆಗಸ್ಟ್ 2025ರಂದು ಮಂಗಳೂರಿನ ಕಣಚ್ಚೂರು ನಾಟೆಕಲ್ ನ ವೈದ್ಯಕೀಯ ಮುಖ್ಯ ನಿರ್ದೇಶಕ, ಸಲಹೆಗಾರ ಹಾಗೂ ಬರಹಗಾರ ಡಾ. ಸುರೇಶ ನೆಗಳಗುಳಿ ಇವರಿಗೆ ‘ನಮ್ಮ ವೈದ್ಯೋ ನಾರಾಯಣ’ ಎಂಬ ಪ್ರಶಸ್ತಿಯನ್ನು ಬೆಳಗಾವಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡುವುದಾಗಿ ನಮ್ಮ‌ ವೈದ್ಯೋ ನಾರಾಯಣ ಸಂಪಾದಕರಾದ ಶ್ರೀ ಸುನಿಲ್ ಪರೀಟ ಇವರು ತಿಳಿಸಿದ್ದಾರೆ. ಸದ್ರಿ ಪ್ರಕಾಶನದ ವೈದ್ಯರ ಕುರಿತಾದ ಕವನ ಸಂಕಲನ ಲೋಕಾರ್ಪಣೆಯ ನೆನಪಿನಲ್ಲಿ ಕವನ ಬರೆದ ಇವರನ್ನು ಆ ವೇಳೆ ಶಾಲು ಹಾರ ಸ್ಮರಣಿಕೆ ಸಹಿತ ಸನ್ಮಾನಿಸಲಾಗುವುದು. ಇವರು ಬರವಣಿಗೆಯಲ್ಲಿ ಐವತ್ತು ವರ್ಷಗಳ ಅನುಭವಿಯಾಗಿದ್ದು ಮುಕ್ತಕ, ಗಜಲ್, ಭಾವಗೀತೆ ಸಹಿತ 14 ಸಂಕಲನಗಳನ್ನು ಲೋಕಾರ್ಪಣೆ ಮಾಡಿರುತ್ತಾರೆ. ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಾಗೂ ಬದಲಾಗದವರು ಎಂಬ ಚಲನಚಿತ್ರದಲ್ಲಿ ನಟರಾಗಿಯೂ ಅಭಿನಯಿಸಿದ್ದು, ಹಲವಾರು ಟಿ.ವಿ., ಆಕಾಶವಾಣಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುತ್ತಾರೆ.

Read More

ವಿಜಯಪುರ : ಕುಮಾರವ್ಯಾಸ ಭಾರತ ವೇದಿಕೆ ಇದರ ವತಿಯಿಂದ ಶ್ರಾವಣ ಮಾಸದ ದಂಪತ್ ಪೂಜೆ ಕಾರ್ಯಕ್ರಮದಲ್ಲಿ ಗಮಕ ವಾಚನ ವ್ಯಾಖ್ಯಾನವು ದಿನಾಂಕ 03 ಆಗಸ್ಟ್ 2025ರಂದು ಬೆಳಿಗ್ಗೆ 11-00 ಗಂಟೆಗೆ ವಿಜಯಪುರದ ರಾಘವೇಂದ್ರ ಕಾಲನಿಯಲ್ಲಿರುವ ಕುಮಾರವ್ಯಾಸ ಭಾರತ ಭವನದಲ್ಲಿ ನಡೆಯಲಿದೆ. ಕುಮಾರ ವಾಲ್ಮೀಕಿ ಕವಿಗಳ ತೊರವೆ ರಾಮಾಯಣದ ‘ಸೀತಾರಾಮ ಕಲ್ಯಾಣ ಪ್ರಸಂಗ’ದ ವಾಚನ ಶ್ರೀಮತಿ ಶಾಂತಾ ಕೌತಾಳ್ ಮತ್ತು ವ್ಯಾಖ್ಯಾನ ಕಲ್ಯಾಣರಾವ್ ದೇಶಪಾಂಡೆ ಇವರುಗಳು ನಡೆಸಿಕೊಡಲಿದ್ದಾರೆ.

Read More

ಕೊಪ್ಪಳ : ಮೇಘನಾ ಪ್ರಕಾಶನ ಕೊಪ್ಪಳ ಹಾಗೂ ಕೊಪಣನಾಡು ಸಂಶೋಧನಾ ಸಂಸ್ಥೆ ಗಂಗಾವತಿ ಇವರ ಸಹಯೋಗದಲ್ಲಿ ಡಾ. ಶರಣಬಸಪ್ಪ ಕೋಲ್ಕಾರ ಇವರ ‘ಕೃಷ್ಣದೇವರಾಯನ ಸಮಾಧಿ ಹಾಗೂ ಕೆಂಪೇಗೌಡ ಬಂಧನದಲ್ಲಿದ್ದ ಸೆರೆಮನೆ’ ಕಿರು ಪುಸ್ತಕ ಲೋಕಾರ್ಪಣೆ ಸಮಾರಂಭವು ದಿನಾಂಕ 03 ಆಗಸ್ಟ್ 2025ರಂದು ಬೆಳಗ್ಗೆ 11-00 ಗಂಟೆಗೆ ಕೊಪ್ಪಳ ಕುಷ್ಟಗಿ ರಸ್ತೆಯಲ್ಲಿರುವ ‘ಸಪ್ತಗಿರಿ ಸಹ್ಯಾದ್ರಿ’ಯಲ್ಲಿ ನಡೆಯಲಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಮಹಾಂತೇಶ ಮಲ್ಲನಗೌಡರ್ ಇವರು ವಹಿಸಲಿದ್ದು, ಸಾಹಿತಿ ಡಾ. ಬಸವರಾಜ ಪೂಜಾರ ಇವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಉಪನ್ಯಾಸಕರಾದ ಪ್ರೊ. ಶರಣಬಸಪ್ಪ ಬಿಳಿಯಲಿ ಇವರು ಕೃತಿ ಕುರಿತು ಮಾತನಾಡಲಿದ್ದು, ಉಪನ್ಯಾಸಕರಾದ ಡಾ. ಸಿದ್ಧಲಿಂಗಪ್ಪ ಕೊಟ್ನೆಕಲ್ ಮತ್ತು ಡಾ. ಶರಣಬಸಪ್ಪ ಕೋಲ್ಕಾರ ಇವರುಗಳು ಭಾಗವಹಿಸಲಿದ್ದಾರೆ.

Read More

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಶಾಸ್ತ್ರೀಯ ನೃತ್ಯ ಕಲಾವಿದರ ಸಂಘಟನೆ ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್ (ರಿ.) ಮಂಗಳೂರು ಇದರ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದಿನಾಂಕ 03 ಆಗಸ್ಟ್ 2025ರಂದು ಅಪರಾಹ್ನ 3-30 ಗಂಟೆಗೆ ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದ ಧ್ಯಾನ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಶರವು ಮಹಾಗಣಪತಿ ದೇವಸ್ಥಾನದ ಶಿಲಾ ಶಿಲಾ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಶಾಸ್ತ್ರಿಯವರು ಶುಭಾಸಂಶನೆಗೈಯಲಿದ್ದು, ಇದೇ ಸಂದರ್ಭದಲ್ಲಿ ವಿದುಷಿ ಶ್ರೀವಿದ್ಯಾ ಇವರ ಶಿಷ್ಯೆ ರೆಮೋನಾ ಎವೆಟ್ ಪಿರೇರಾ ಇವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

Read More

ನಾಪೋಕ್ಲು : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳ ಒಕ್ಕೂಟದ ಸಹಯೋಗದಲ್ಲಿ ‘ಅರೆ ಭಾಷೆಲಿ ಕಥೆ ಬರೆಮೋ’ ಒಂದು ದಿನದ ಕಾರ್ಯಾಗಾರ ದಿನಾಂಕ 27 ಜುಲೈ 2025ರಂದು ನಡೆಯಿತು. ಅಕಾಡೆಮಿ ಸದಸ್ಯೆ ಬಡ್ಡಡ್ಕ ಚಂದ್ರಾವತಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಪುಟಾಣಿ ಕೂಡಕಂಡಿ ಅನ್ವಿತ ಸುದೀಪ್ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಮಾಜದ ಅಧ್ಯಕ್ಷರಾದ ಕೊಡಪಾಲು ಗಣಪತಿ ಮಾತನಾಡಿ “ಸಮಾಜದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಒಂದು ಅಪರೂಪದ ಸುವರ್ಣ ಅವಕಾಶ. ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕು” ಎಂದು ನುಡಿದರು. ಮಹಿಳಾ ಒಕ್ಕೂಟದ ಅಧ್ಯಕ್ಷೆಯಾದ ಕಡ್ಲೇರ ತುಳಸಿ ಮೋಹನ್ ಮಾತನಾಡಿ “ಚೇರಂಬಾಣೆ ಗೌಡ ಸಮಾಜ ಕೇವಲ ಮದುವೆ ಸಮಾರಂಭಗಳಿಗೆ ಮೀಸಲಾಗಿರದೆ ಕಲೆ, ಕ್ರೀಡೆ, ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮಗಳಿಗೂ ನೆರಳಾಗಬೇಕು ಎಂಬ ಉದ್ದೇಶದಿಂದ ಮಹಿಳಾ ಒಕ್ಕೂಟವನ್ನು ರಚಿಸಲಾಗಿದೆ. ವಿದ್ಯಾರ್ಥಿಗಳಿಗಾಗಿ ಇದು ಚೊಚ್ಚಲ ಕಾರ್ಯಕ್ರಮವಾಗಿದ್ದು, ಮುಂದೆ ಯುವ ಸಮೂಹಕ್ಕೆ ಹಾಗೂ ಮಹಿಳೆಯರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು…

Read More

ಉಡುಪಿ : ಯಕ್ಷಶಿಕ್ಷಣ ಟ್ರಸ್ಟ್ (ರಿ.) ಉಡುಪಿ ಈ ವರ್ಷ ಉಡುಪಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 94 ಶಾಲೆಗಳಲ್ಲಿ ಯಕ್ಷಶಿಕ್ಷಣ ನೀಡುತ್ತಿದ್ದು, ಸರಕಾರಿ ಬಾಲಕಿಯರ ಪ್ರೌಢಶಾಲೆಯ ಯಕ್ಷಗಾನ ತರಗತಿಗಳ ಉದ್ಘಾಟನೆಯು ದಿನಾಂಕ 01 ಆಗಸ್ಟ್ 2025ರಂದು ಶಾಲೆಯ ಸಭಾಭವನದಲ್ಲಿ ಜರಗಿತು. ಟ್ರಸ್ಟಿನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶ್ ಪಾಲ್ ಎ. ಸುವರ್ಣ ಜ್ಯೋತಿ ಬೆಳಗಿಸಿ “ಯಕ್ಷಗಾನ ಕಲಾರಂಗದ ಸಹಕಾರದಿಂದ ಈ ಮಹಾಭಿಯಾನ ಯಶಸ್ವಿಯಾಗಿ ಮುಂದುವರೆಯುತ್ತಿದೆ” ಎಂದು ಹೇಳಿದರು. ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕವಾಗಿ ಮಾತನಾಡಿ “ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಈ ಕಾರ್ಯಕ್ರಮ ಕಳೆದ 18 ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ” ಎಂದರು. ದಾನಿ ಡಾ. ಬಿ.ಜಿ. ಆಚಾರ್ಯರು ಬಾಲ್ಯದಲ್ಲಿ ಯಕ್ಷಗಾನ ತನ್ನ ಮೇಲೆ ಬೀರಿದ ಪ್ರಭಾವವನ್ನು ನೆನಪಿಕೊಂಡರು. ಎಸ್.ಡಿ.ಎಂ.ಸಿ. ಗೌರವಾಧ್ಯಕ್ಷೆ ತಾರಾದೇವಿ, ಟ್ರಸ್ಟಿಗಳಾದ ನಾರಾಯಣ ಎಂ. ಹೆಗಡೆ, ಮೀನಾಲಕ್ಷಣಿ ಅಡ್ಯಂತಾಯ, ಯಕ್ಷಗಾನ ಗುರುಗಳಾದ ನಿರಂಜನ್ ಭಟ್, ಆದ್ಯತಾ ಭಟ್, ಎಸ್.ಡಿ.ಎಂ.ಸಿ. ಅಧ್ಯಕ್ಷೆ ನವ್ಯಾ ನಾಯಕ್ ವೇದಿಕೆಯಲ್ಲಿ…

Read More

ಸುಳ್ಯ : ಖ್ಯಾತ ಕಾದಂಬರಿಕಾರ, ಹಿರಿಯ ಸಾಹಿತಿಗಳಾದ ಶ್ರೀ ಪ್ರಭಾಕರ ಶಿಶಿಲ ಅವರು ಹಲವಾರು ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಪಾರ ಸಾಧನೆಗಾಗಿ ‘ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ದಿನಾಂಕ 03 ಆಗಸ್ಟ್ 2025ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಖ್ಯಾತ ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿಗಳಾದ ಶ್ರೀ ಮೋಹನ್ ನಂಗಾರು, ಹಾ.ಮ. ಸತೀಶ್ ಬೆಂಗಳೂರು, ನಾರಾಯಣ ರೈ ಕುಕ್ಕುವಳ್ಳಿ, ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿ ಇನ್ನಿತರರು ಪ್ರದಾನ ಮಾಡುವರು. ಚಂದನ ಸಾಹಿತ್ಯ ವೇದಿಕೆಯು ತನ್ನ 20ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವ 2025 ಈ ಸಮಾರಂಭದಲ್ಲಿ ಸಾಹಿತಿ ಶ್ರೀ ಪ್ರಭಾಕರ ಶಿಶಿಲ ಇವರಿಗೆ ಕರ್ನಾಟಕ ಸಾಹಿತ್ಯ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ ಎಚ್. ಭೀಮರಾವ್ ವಾಷ್ಠರ್ ಸುಳ್ಯ ಇವರು ತಿಳಿಸಿದ್ದಾರೆ.

Read More

ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ.) ಸಿದ್ಧನಹಳ್ಳಿ ಇದರ ವತಿಯಿಂದ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ ಬೆಂಗಳೂರು ಮತ್ತು ವೀರಲೋಕ ಕನ್ನಡ ಪುಸ್ತಕ ಪ್ರಕಾಶನ ಇವರ ಸಹಯೋಗದಲ್ಲಿ ರಾಜ್ಯ ಮಟ್ಟದ ವೈಜ್ಞಾನಿಕ, ವೈಚಾರಿಕ ಸಾಹಿತ್ಯ ಸಮಾವೇಶ -2025 ಪ್ರಶಸ್ತಿ ಪ್ರದಾನ, ವಿಚಾರ ಸಂಕಿರಣ, ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ದಿನಾಂಕ 03 ಜುಲೈ 2025ರಂದು ಬೆಳಗ್ಗೆ 09-30 ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರಂ ಎರಡನೇ ಮಹಡಿಯಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ದತ್ತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 9-30 ಗಂಟೆಗೆ ಧ್ವಜಾರೋಹಣ, 9-45 ಗಂಟೆಗೆ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗೆ ಚಾಲನೆ ಮತ್ತು 10-00 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಚಾಲನೆಗೊಳ್ಳಲಿವೆ. ಖ್ಯಾತ ಶಿಕ್ಷಣ ತಜ್ಞರಾದ ಡಾ. ಗೀತಾ ರಾಮಾನುಜಂ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ವಿಜ್ಞಾನ ಲೇಖಕ ಡಾ. ಆರ್.ಎಸ್. ರವೀಂದ್ರ ಇವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವರು. ಇದೇ ಸಂದರ್ಭದಲ್ಲಿ 2025ನೇ ಸಾಲಿನ ಶ್ರೀ ಶಶಿಕಾಂತ್ ರಾವ್ ದತ್ತಿ ಪುನೀತ್…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಇದರ ಸಹಯೋಗದಲ್ಲಿ ‘ಭೀಷ್ಮ ಭಾರತ’ ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭವು ದಿನಾಂಕ 31 ಜುಲೈ 2025ರಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಜರುಗಿತು. ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ ಸಪ್ತಾಹದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮುಖ್ಯ ಅತಿಥಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಆಂಜನೇಯ ಯಕ್ಷಗಾನ ಕಲಾ ಸಂಘದ ಕಾರ್ಯಕ್ರಮಗಳು ಉನ್ನತ ಮಟ್ಟದಲ್ಲಿ ನಡೆಯುತ್ತಿವೆ. 56 ವಸಂತಗಳನ್ನು ಕಂಡ ಸಂಘ, ಶತಮಾನಗಳನ್ನು ಪೂರೈಸಲಿ ಎಂದು ಶುಭ ಕೋರಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಹಾಗೂ ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ರೈ ಮೇಗಿನಗುತ್ತು ಇನ್ನು ಮುಂದೆಯೂ ದೇವಳದಲ್ಲಿ ಆಂಜನೇಯ ಸಂಘದ ತಾಳಮದ್ದಳೆಗಳು ನಡೆದಾಗ ತಮ್ಮ…

Read More