Author: roovari

ಮೂಡುಬಿದಿರೆ : ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ದಿನಾಂಕ 12 ಡಿಸೆಂಬರ್ 2024ರಂದು 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೂರನೇ ದಿನದ ಗಾಯನದ ಬಳಿಕ ಮೂಡಿ ಬಂದ ಸಾಂಸ್ಕೃತಿಕ ವೈಭವದಲ್ಲಿ ಪ್ರೇಕ್ಷಕರೆಲ್ಲ ನೃತ್ಯ ರೂಪಕದ ಸಿಂಚನದಲ್ಲಿ ಮಿಂದೆದ್ದರು. ಆಶಿಂಬಂಧು ಚಟರ್ಜಿ ನಿರ್ದೇಶನದಲ್ಲಿ ಪ್ರಸ್ತುತಗೊಂಡ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರ ಕಥಕ್ ‘ವರ್ಷಧಾರೆ’ಯನ್ನೇ ಸುರಿಸಿತು. ತುಂತುರು ಮಳೆಯನ್ನು ಸಂಭ್ರಮಿಸುವ ಋತುವಿನ ದರ್ಶನ ನೀಡಿತು. ಉತ್ತರದ ಕಥಕ್ ಬಳಿಕ ನೃತ್ಯ ಲೋಕವು ದ್ವೀಪ ರಾಷ್ಟ್ರ ಶ್ರೀಲಂಕಾ ಸಂಸ್ಕೃತಿಗೆ ಹೆಜ್ಜೆ ಇಟ್ಟಿತು. ಅಖಿಲ ಪರಿಮಳನ್ ನಿರ್ದೇಶನದ ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ‘ಭೂಮಿ’ ದ್ವೀಪ ದೇಶದ ಚಮತ್ಕಾರದ ಶಕ್ತಿಯೆಡೆಗೆ ಕೊಂಡೊಯ್ಯಿತು. ತಿರುಗುವ ಚಕ್ರ, ಹಾರುವ ಬೆಂಕಿ ಉಂಡೆ ಇತ್ಯಾದಿಗಳು ಸೊಬಗೇರಿಸಿದವು. ವಿಷ್ಣು, ಸಮನ್, ಕಾತರಂಗಂ, ಪಟ್ಟಿನಿ, ಕಾಳಿ ಮತ್ತು ಸುನಿಯಂ ಶ್ರೀಲಂಕಾದ ಪ್ರಮುಖ ದೇವ-ದೈವಗಳಾಗಿವೆ. ಅವರ ಆರಾಧನಾ ವಿಧಾನವಾಗಿ ನೃತ್ಯ ಬೆಳೆದು ಬಂದಿದೆ. ಶ್ರೀಲಂಕಾದ ಪ್ರಮುಖ ಪಟ್ಟಣವಾಗಿದ್ದ ‘ಕ್ಯಾಂಡಿ’ಯಲ್ಲಿ ಬೆಳೆದು ಬಂದ ನೃತ್ಯ…

Read More

ಮೈಸೂರಿನಲ್ಲಿ ‘ಸಂಚಲನ ಮೈಸೂರು’ ಇವರ ವತಿಯಿಂದ ನಡೆದ ‘ಮಹಿಳಾ ನಾಟಕೋತ್ಸವ’ದಲ್ಲಿ ದಿನಾಂಕ 05 ಡಿಸೆಂಬರ್ 2024ರಂದು ರಂಗಬಂಡಿ ಮಳವಳ್ಳಿ (ರಿ.) ತಂಡದವರಿಂದ ಏಕವ್ಯಕ್ತಿ ಪ್ರಯೋಗದ ‘ಮಧುರ ಮಂಡೋದರಿ’ ನಾಟಕವನ್ನು ಕಲಾಮಂದಿರ ಆವರಣ ಕಿರು ರಂಗಮಂದಿರದಲ್ಲಿ ಆಯೋಜಿಸಲಾಗಿತ್ತು. ತುಂಬಾ ದಿನಗಳಿಂದ ಕೆಲಸ, ಒತ್ತಡಗಳಿಂದ ತುಂಬಿಕೊಂಡಿದ್ದ ಬದುಕಿಗೆ ವಿರಾಮದ ಅಗತ್ಯ ಅನ್ನಿಸಿತ್ತು. ಅಂದುಕೊಂಡಂತೆ ನಾಟಕ ಪ್ರದರ್ಶನಕ್ಕೆ ಕೊಂಚ ಬಿಡುವು ಮಾಡಿಕೊಂಡು ಹೋದೆ ತುಂಬಾ ಕುತೂಹಲದಿಂದ ಕಾದ ಘಳಿಗೆ ಅಂದರೆ ತಪ್ಪಾಗಲಾರದು, ಏಕವ್ಯಕ್ತಿ ಪ್ರಯೋಗ ಅಂದ್ರೆ ಒಂದು ರೀತಿಯ ಸವಾಲ್ ಆಗಿರುತ್ತೆ ಯಾಕೆಂದರೆ ಮುಖ್ಯವಾಗಿ ರಂಗದ ಮೇಲೆ ಒಬ್ಬರೇ ಇದ್ದು ಪ್ರೇಕ್ಷಕರನ್ನು ಒಂದು ಗಂಟೆ ಇಲ್ಲವೇ ಅದಕ್ಕು ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವುದು ಸುಲಭವಾಗಿರುವುದಿಲ್ಲ. ಆದರೆ ಮಧುರ ಮತ್ತು ಮಂಡೋದರಿ ಎರಡು ಪಾತ್ರಗಳನ್ನು ಪ್ರಸ್ತುತ ಪಡಿಸಿದ ವನಿತಾ ರಾಜೇಶ್ ರವರು ತುಂಬಾ ಅಚ್ಚುಕಟ್ಟಾಗಿ ಆ ಪಾತ್ರದಲ್ಲಿ ಜೀವಿಸಿದ ರೀತಿ ಎಲ್ಲರನ್ನೂ ಸೆಳೆಯುವಂತೆ ಮಾಡಿತ್ತು. ನಾಟಕಗಳಲ್ಲಿ ಸ್ತ್ರೀ ಪಾತ್ರಗಳಿಗೆ ಮಹತ್ವ ಸ್ವಲ್ಪ ಕಡಿಮೆ ಎನ್ನುತ್ತಾರೆ. ಆದರೆ ಹೆಣ್ಣಿನ ಪಾತ್ರಗಳಿಗೆ…

Read More

ಉಡುಪಿ: ರಂಗಭೂಮಿ ಕ್ಷೇತ್ರದ ಖ್ಯಾತ ಗಾಯಕ, ನಟ ಬಿ. ಕೃಷ್ಣ ಕಾರಂತ ಇವರು ದಿನಾಂಕ 12 ಡಿಸೆಂಬರ್ 2024ರ ಗುರುವಾರದಂದು ನಿಧನ ಹೊಂದಿದರು. ಇವರಿಗೆ 76 ವರ್ಷ ವಯಸ್ಸಾಗಿತ್ತು. ಉಡುಪಿಯ ಎಂ. ಜಿ. ಎಂ. ಕಾಲೇಜಿನ ಪ್ರಾದೇಶಿಕ ಸಂಶೋಧನಾ ಕೇಂದ್ರ (ಆರ್‌.ಆರ್‌.ಸಿ.) ಇದರ ನಿವೃತ್ತ ಉದ್ಯೋಗಿಯಾಗಿರುವ ಬಿ. ಕೃಷ್ಣ ಕಾರಂತ್ ಖ್ಯಾತ ಗಾಯಕರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು ಮತ್ತು ಧ್ವನಿ ಸುರುಳಿ ಬಹಳ ಜನಪ್ರಿಯವಾಗಿದ್ದವು. ಇವರು ತಮ್ಮ ನಾಟಕಗಳಿಗೆ ಹಿನ್ನೆಲೆ ಗಾಯನ ನೀಡುತಿದ್ದುದು ಮಾತ್ರವಲ್ಲದೆ ಅನೇಕ ರಂಗಭೂಮಿ ನಿರ್ಮಾಣದ ನಾಟಕಗಳಿಗೂ   ಹಿನ್ನೆಲೆ ಗಾಯಕರಾಗಿ ಸಹಕರಿಸಿದ್ದಾರೆ. ಇತ್ತೀಚೆಗಷ್ಟೇ ಉಡುಪಿಯ ರಂಗಭೂಮಿಯವರು ಸಾಂಸ್ಕೃತಿಕ ಮತ್ತು ರಂಗ ಕಲೆಗೆ ನೀಡಿದ ಅಮೂಲ್ಯ ಕೊಡುಗೆಗಾಗಿ ಬಿ.ಕೃಷ್ಣ ಕಾರಂತರನ್ನು ಸನ್ಮಾನಿಸಿದ್ದರು . ರಂಗಭೂಮಿಯ ಎಲ್ಲಾ ಕಾರ್ಯಕ್ರಮಗಳಿಗೆ ಅವರ ಅಚಲ ಬೆಂಬಲ ಮತ್ತು ಪ್ರೋತ್ಸಾಹವು ಸಮುದಾಯದ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿದೆ. ಅವರ ಅಗಲಿಕೆಯಿಂದ ಸಂಗೀತ ಮತ್ತು ರಂಗಭೂಮಿಗೆ ಅಪಾರ ನಷ್ಟವುಂಟಾಗಿದೆ. ಬಿ.ಕೃಷ್ಣ ಕಾರಂತರು ಪತ್ನಿ, ಇಬ್ಬರು ಪುತ್ರರು, ಸಂಬಂಧಿಕರು…

Read More

ಮಂಗಳೂರು : ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಇದರ ವತಿಯಿಂದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇದರ ಆಶ್ರಯದಲ್ಲಿ ‘ವಿಶ್ವಕರ್ಮ ಕಲಾ ಸಿಂಚನ 2024’ ಭಕ್ತಿ ಸಿಂಚನ, ಜ್ಞಾನ ಸಿಂಚನ, ಚಿತ್ರ ಸಿಂಚನ ಮತ್ತು ಪ್ರತಿಭಾ ಸಿಂಚನ, ಕೃತಿ ಬಿಡುಗಡೆ ಮತ್ತು ಸಾಧಕರಿಗೆ ಅಭಿನಂದನೆ ಕಾರ್ಯಕ್ರಮವನ್ನು ದಿನಾಂಕ 15 ಡಿಸೆಂಬರ್ 2024ರಂದು ಪೂರ್ವಾಹ್ನ 9-00 ಗಂಟೆಗೆ ಮಂಗಳೂರು ರಥಬೀದಿಯ ಪಟ್ಟೆ ಲಿಂಗಪ್ಪಾಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಇದರ ಅಧ್ಯಕ್ಷರಾದ ಡಾ. ಎಸ್.ಪಿ. ಗುರುದಾಸ್ ಇವರ ಅಧ್ಯಕ್ಷತೆಯಲ್ಲಿ ಸ್ಪೂರ್ತಿ ಮೆಡಿಕಲ್ ಅಕಾಡೆಮಿಯ ನಿರ್ದೇಶಕರಾದ ಡಾ. ಜ್ಯೋತಿ ಜಗದೀಶ್ ಇವರು ದೀಪ ಪ್ರಜ್ವಲನೆ ಮಾಡಿ ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಲೇಖಕಿ ಕಲಾವಿದೆ ಶ್ರೀಮತಿ ಲಲಿತಾ ಕೆ. ಆಚಾರ್ ಇವರ ‘ಸುಲಲಿತ ಕಾವ್ಯ ಚಿತ್ತಾರ’ ಎಂಬ ಕೃತಿಯು ಲೋಕಾರ್ಪಣೆಗೊಳ್ಳಲಿದೆ. ಸಭಾ ಕಾರ್ಯಕ್ರಮದ ಬಳಿಕ ಭಕ್ತಿಗೀತೆ ಗಾಯನ, ಚಿನ್ನದ ಆಭರಣ ವಿನ್ಯಾಸ, ರಸಪ್ರಶ್ನೆ ಮತ್ತು…

Read More

ಮೂಡುಬಿದಿರೆ : ಆಳ್ವಾಸ್ ವಿರಾಸತ್ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಮೂರನೇ ದಿನವಾದ ದಿನಾಂಕ 12-12-2024ರಂದು ಗೋಧೂಳಿಯಲ್ಲಿ ಗಜಲ್-ಭಜನ್ ಸುಧೆ ಹರಿಸಿದ ಒಸ್ಮಾನ್ ಮೀರ್  ಮೀರ್ ಹಾಗೂ ಅಮೀರ್ ಮೀರ್, ಸಾಥ್ ನೀಡಿದ ಪಾರತಿ ವ್ಯಾಸ್ ಪ್ರೀತಿ, ಭಕ್ತಿ, ದೇಶಪ್ರೇಮ ಹೊನಲಾಗಿಸಿದ ‘ಸೌಹಾರ್ದತೆಯ ಗಾನ ಸಂತ’ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಕಾರ್ಯಕ್ರಮದ ಗೋಧೂಳಿ ಸೊಬಗು ಸೌಹಾರ್ದತೆಯ ಮೆರುಗು ನೀಡಿತ್ತು. ಬಿದಿರೆಯ ಆಗಸದಲ್ಲಿ ಹೊಂಗಿರಣ ಮೂಡಿದ್ದರೆ, ‘ಆಳ್ವಾಸ್ ವಿರಾಸತ್’ನ ವೇದಿಕೆಯಲ್ಲಿ ‘ಸಬ್ ಕಾ ಶುಕ್ರಿಯಾ’ ಎಂದು ವಿನಮ್ರತೆ ವ್ಯಕ್ತಪಡಿಸಿ ಒಸ್ಮಾನ್ ಮೀರ್ ಧನ್ಯರಾದರು, ‘ತುಜ್ ಸೇ ಮೇರಾ ಜೀನಾ ಮರ್ನಾ… ಮೈ ಮುಸಾಫಿರ್ ತು ಮುಸಾಫಿರ್’ ಎಂದು ಅವರ ಪುತ್ರ ಅಮೀರ್ ಮೀರ್ ವೈರಲ್ ಆದ ತಮ್ಮ ಆಲ್ಬಂನ ಗಾನದ ಹೊನಲು ಹರಿಸಿದರು. ‘ತೇರೆ ಬಿನಾ ಸೋ ನಹೀ ಸಕ್ತೇ….’ ಎಂದಾಗ ಸಭಾಂಗಣ ಕಿಕ್ಕಿರಿದ ವಿದ್ಯಾರ್ಥಿಗಳ ಉದ್ಘಾರ ನಿದ್ದೆಗೆಡಿಸಿತು. ಬಳಿಕ ಅಮೀರ್ ಮೀರ್…

Read More

ಕಾರ್ಕಳ : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು ದಿನಾಂಕ 09 ಡಿಸೆಂಬರ್ 2024ರ ಸೋಮವಾರದಂದು ಕರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಇದರ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಮಮತಾ ದೇವಿ ಜಿ. ಎಸ್. ಮಾತನಾಡಿ “ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಅಂದರೆ ಅರ್ಧ ಜಯಶಾಲಿಯಾದಂತೆ. ಪಠ್ಯ ವಿಷಯದ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭೆಯನ್ನು ತೋರಿಸಿ ವಿಜೇತರಾಗಿ.” ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಇದರ ಉಪನಿರ್ದೇಶಕರಾದ…

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಇದರ ವಾರ್ಷಿಕೋತ್ಸವ ಪ್ರಯುಕ್ತ ‘ಶ್ರೀ ಆಂಜನೇಯ 56’ ದಿನಾಂಕ 25 ಡಿಸೆಂಬರ್ 2024ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಬೆಳಗ್ಗೆ 9-00 ಗಂಟೆಗೆ ಈ ಕಾರ್ಯಕ್ರಮವು ಉದ್ಘಾಟನೆಗೊಳ್ಳಲಿದ್ದು, ಬಳಿಕ ಸಂಘದ ಸದಸ್ಯರಿಂದ ‘ಯಕ್ಷ ತಾಪಸಿಯರು – ಸಂವಾದ’ ಮತ್ತು ಭೀಷ್ಮ ಸೇನಾಧಿಪತ್ಯ – ಕರ್ಮಬಂಧ’ ಯಕ್ಷಗಾನ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಆತ್ಮಾಲಯ ಕಲೆ ಮತ್ತು ಸಂಸ್ಕೃತಿ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ಭಾಗವತಹಂಸ ಶ್ರೀ ಪುತ್ತಿಗೆ ರಘುರಾಮ ಹೊಳ್ಳ ಇವರಿಗೆ ‘ಶ್ರೀಮತಿ ಶಾಂತಾ ಮತ್ತು ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಸಂಜೆ 4-30 ಗಂಟೆಗೆ ನಡೆಯಲಿರುವ ಸಭಾ ಕಲಾಪದ ಅಧ್ಯಕ್ಷತೆಯನ್ನು ಪುತ್ತೂರಿನ ಸ್ವರ್ಣೋದ್ಯಮಿ ರೊ. ಬಲರಾಮ ಆಚಾರ್ಯ ಇವರು ವಹಿಸಲಿದ್ದು, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ವೇದಮೂರ್ತಿ ಹರಿನಾರಾಯಣದಾಸ ಆಸ್ರಣ್ಣ ಇವರು…

Read More

ಬೆಂಗಳೂರು : ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ವತಿಯಿಂದ ಕೊಡವ ಕಥೆ ಜೊಪ್ಪೆಯನ್ನು ಹೊರತರಲು ಸೂಕ್ತ ಕತೆಗಳನ್ನು ಆಹ್ವಾನಿಸಲಾಗಿದೆ. ಕಥೆ ಜೊಪ್ಪೆಯಲ್ಲಿ ಸುಮಾರು 25 ರಿಂದ 30ರಷ್ಟು ಕತೆಗಳನ್ನು ಒಂದೇ ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಕತೆಗಳನ್ನು ಎ4 ಅಳತೆಯ ಕಾಗದದಲ್ಲಿ ಸ್ಪುಟವಾಗಿ 5-6 ಪುಟ ಮೀರದಂತೆ ಬರೆಯಬೇಕು. ಕಥೆಗಳು ಸಾಧ್ಯವಾದಷ್ಟು ಕೊಡವ ಸಂಸ್ಕೃತಿ, ಪದ್ಧತಿ ಹಾಗೂ ಮೂಲತನಕ್ಕೆ ಒತ್ತುಕೊಡುವಂತಿದ್ದು ಸಾರ್ವಕಾಲಿಕವಾಗಿರಲಿ.  ಪ್ರಕಟಿತ ಕಥೆಗಳಿಗೆ ಅಕಾಡೆಮಿ ಗೊತ್ತುಪಡಿಸಿರುವಂತೆ ಸಂಭಾವನೆ ನೀಡಲಾಗುವುದು. ಕಥೆಗಾರರು 4-5 ವಾಕ್ಯಗಳಿಗೆ ವೀರದಂತೆ ಸ್ವಪರಿಚಯ, ಇತ್ತೀಚಿನ ಭಾವಚಿತ್ರದೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಲಗತ್ತಿಸಿ 05 ಡಿಸೆಂಬರ್ 2025ರ ಒಳಗಾಗಿ ಅಧ್ಯಕ್ಷರು/ ರಿಜಿಸ್ಟ್ರಾರ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಜೂನಿಯರ್ ಕಾಲೇಜು ರಸ್ತೆ, ಸೌಟ್ಸ್ ಭವನ, ಮ್ಯಾನ್ಸ್ ಕಾಂಪೌಂಡ್, ಮಡಿಕೇರಿ ಈ ವಿಳಾಸಕ್ಕೆ ಕಳುಹಿಸಬಹುದು.

Read More

ಕೋಟ : ಶ್ರೀ ಶಾಂತಿಮತೀ ಪ್ರತಿಷ್ಠಾನ ದ ‘ಸಾಧಕರೆಡೆ ನಮ್ಮ ನಡೆ ‘ ತಿಂಗಳ ಕಾರ್ಯಕ್ರಮವು 29 ನವೆಂಬರ್ 2024 ರಂದು ಕೋಟದ ಗೋವಿಂದ ಉರಾಳರ ಮನೆಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಗೋವಿಂದ ಉರಾಳರನ್ನು ಗೌರವಿಸಲಾಯಿತು.. ಕಾರ್ಯಕ್ರಮದಲ್ಲಿ ಕೋಟ ಸುಜಯೀಂದ್ರ ಹಂದೆ, ಆನಂದರಾಮ ಉರಾಳ,ಶಾಂತಿಮತೀ ಪ್ರತಿಷ್ಠಾನದ ಅಧ್ಯಕ್ಷರಾದ ಸಚ್ಚಿದಾನಂದ ಅಡಿಗರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಚಂದ್ರಶೇಖರ ಅಡಿಗ ಬಾರ್ಕೂರು ಸ್ವಾಗತಿಸಿ, ಪಾಂಡೇಶ್ವರದ ಡಾ. ವಿಜಯ್ ಮಂಜರ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಮಚಂದ್ರ ಉಡುಪ ಬಾರ್ಕೂರು ಕಾರ್ಯಕ್ರಮ ನಿರೂಪಿಸಿ, ಸಚ್ಚಿದಾನಂದ ಅಡಿಗ ಧನ್ಯವಾದಗೈದರು. ಗೋವಿಂದ ಉರಾಳರ ಕುಟುಂಬಸ್ಥರು, ಶಿಷ್ಯ ವೃಂದ ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೊಂದನೇ ಉಪನ್ಯಾಸ ಕಾರ್ಯಕ್ರಮವು ದಿನಾಂಕ 12 ಡಿಸೆಂಬರ್ 2024ರಂದು ಮಂಗಳೂರಿನ ವಳಚ್ಚಿಲ್ ನಲ್ಲಿರುವ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ “ಯುವಕರಲ್ಲಿ ಸಂಯಮ ಮತ್ತು ಪರಿಶ್ರಮ – ಸ್ವಾಮಿ ವಿವೇಕಾನಂದರ ಸಂದೇಶ” ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದ ಪುತ್ತೂರಿನ ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ “ಸ್ವಾಮಿ ವಿವೇಕಾನಂದರು ತಮ್ಮ ಜೀವನದ ಮತ್ತು ಸಂದೇಶಗಳ ಮೂಲಕ ಯುವಕರಿಗೆ ಪ್ರೇರಣೆಯ ರೂಪವಾಗಿದ್ದಾರೆ. ಅವರು ಸಂಯಮವನ್ನು ಜೀವನದ ಪ್ರಮುಖ ಗುಣವೆಂದು ಬೋಧಿಸುತ್ತಾ, ಅದು ಯಶಸ್ಸಿನ ಮೂಲಾಧಾರವೆಂದು ವಿವರಿಸಿದ್ದಾರೆ. ಯುವಕರಿಗೆ ಶ್ರದ್ಧೆ, ತಾಳ್ಮೆ ಮತ್ತು ಪರಿಶ್ರಮದ ಮಹತ್ವವನ್ನು ತಿಳಿಸುವಲ್ಲಿ ಅವರು ಅನನ್ಯವಾದ ಪಾತ್ರವನ್ನು ನಿರ್ವಹಿಸಿದರು. ನಂಬಿಕೆ ಮತ್ತು ಪರಿಶ್ರಮದಿಂದ ಯಾವುದರನ್ನಾದರೂ ಸಾಧಿಸಬಹುದು ಎಂಬ ವಿವೇಕಾನಂದರ ಮಾತು ಯುವಕರಿಗೆ ಆಧ್ಯಾತ್ಮಿಕ ಪ್ರೇರಣೆಯೊಂದಿಗೆ ಆಳವಾದ ಜೀವನದ ಪಾಠವನ್ನು ನೀಡುತ್ತದೆ. ಅವರು ಆತ್ಮವಿಶ್ವಾಸವನ್ನು ಉಕ್ಕಿಸುವ ಮೂಲಕ, ಜೀವನದ ಬದ್ಧತೆ ಮತ್ತು ಗುರಿಯ…

Read More