Subscribe to Updates
Get the latest creative news from FooBar about art, design and business.
Author: roovari
ಮಂಗಳೂರು : ರಾಮಕೃಷ್ಣ ಮಠ ಮಂಗಳಾದೇವಿ ಮಂಗಳೂರು ಇವರ ಸಹಯೋಗದಲ್ಲಿ ದಾಸಸಾಹಿತ್ಯ ಸೇವಾ ಪ್ರತಿಷ್ಠಾನ ಮಂಗಳೂರು ಪ್ರಸ್ತುತ ಪಡಿಸುವ ಶ್ರೀಶಾ ಸೌಹಾರ್ದ ಕೋ-ಅಪರೇಟಿವ್ ಸೊಸೈಟಿ ಪ್ರಾಯೋಜಿತ ‘ಹರಿದಾಸ ನಮನ’ ಕಾರ್ಯಕ್ರಮವು ದಿನಾಂಕ 02-05-2024ರಂದು ಸಂಜೆ ಗಂಟೆ 5-15ಕ್ಕೆ ಮಂಗಳೂರಿನ ಶ್ರೀರಾಮಕೃಷ್ಣ ಮಠದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯ ಕಂಡ ಅಪರೂಪದ ಸಂಗೀತದ ಯುವ ಪ್ರತಿಭೆ, ಝೀ ಕನ್ನಡ ವಾಹಿನಿಯ ಜನಪ್ರಿಯ ಸರಿಗಮಪ ಸೀರಿಸ್ – 2019ರ ವಿಜೇತ ಬೆಂಗಳೂರಿನ ಕೀರ್ತನ್ ಹೊಳ್ಳ ಇವರ ಹಾಡುಗಾರಿಕೆಗೆ ತೇಜಸ್ ಕಾಟೋಟಿ ಹಾರ್ಮೋನಿಯಂ ಮತ್ತು ರಾಜೇಶ್ ಭಾಗವತ್ ತಬಲಾ ಸಾಥ್ ನೀಡಲಿದ್ದಾರೆ.
ಕಲಬುರಗಿ : ವಿಶ್ವರಂಗ ನಾಟಕ ಮತ್ತು ನೃತ್ಯ ಸೇವಾ ಸಂಘ (ರಿ) ಕಲಬುರಗಿ ರಂಗಸಂಸ್ಥೆಯು 25 ದಿನಗಳ ಕಾಲ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದು, ದಿನಾಂಕ 14-04-2024ರಂದು ‘ಚಿಣ್ಣರ ಮೇಳ -2024’ರ ಉದ್ಘಾಟನಾ ಸಮಾರಂಭ ನೆರವೇರಿತು. ಪ್ರಾಸ್ತಾವಿಕ ಹಾಗೂ ಸ್ವಾಗತ ನುಡಿಗಳನ್ನಾಡಿದ ಶಿಬಿರದ ನಿರ್ದೇಶಕ ಡಾ. ವಿಶ್ವರಾಜ್ ಪಾಟೀಲ್ “ವಿಶ್ವರಂಗದ 15 ವರ್ಷಗಳ ಪಯಣದಲ್ಲಿ ಏಳುಬೀಳುಗಳನ್ನಾಡುತ್ತಾ, ರಂಗಭೂಮಿಯ ಮೂಲಕ ಶಿಕ್ಷಣ ಇಲ್ಲಿ ಪಡೆದುಕೊಳ್ಳಲು ಅವಕಾಶವಿದೆ. ರಂಗಭೂಮಿ ಬಹಳ ಪ್ರಭಾವಿ ಮಾಧ್ಯಮ. ಇಲ್ಲಿ ಮಕ್ಕಳು ಧೈರ್ಯವಾಗಿ ವೇದಿಕೆ ಮೇಲೆ ಮಾತನಾಡಲು ಕಲಿಯುತ್ತಾರೆ, ಭಾಷೆ, ಉಚ್ಛಾರಣೆ ಸ್ಪಷ್ಟತೆ ಬರುತ್ತದೆ. ರಂಗಭೂಮಿಯ ಮೂಲಕ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ” ಎಂದು ಶಿಬಿರದ ಉದ್ದೇಶವನ್ನು ವಿವರಿಸಿ ಎಲ್ಲಾ ಅಥಿತಿ ಗಣ್ಯರನ್ನು ಸ್ವಾಗತಿಸಿದರು. ಚಲನಚಿತ್ರ ನಟರಾದ ಶ್ರೀ ಶರಣರಾಜ್ ಅವರು ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿ, “ಇಂದಿನ ಮಕ್ಕಳ ಸೃಜನಾತ್ಮಕ ಬೆಳವಣಿಗೆಗೆ ರಂಗ ಶಿಬಿರಗಳು ಬಹಳ ಮಹತ್ವದ ಕೆಲಸವಾಗಿದೆ. ಯಾಕೆಂದರೆ ಶಾಲೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ,…
ಮಂಗಳೂರು : ಕಲ್ಕೂರ ಪ್ರತಿಷ್ಠಾನವು ಆಯೋಜಿಸಿದ್ದ ಭಾಗವತ ಸುಬ್ರಹ್ಮಣ್ಯ ಧಾರೇಶ್ವರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ದಿನಾಂಕ 27-04-2024ರಂದು ಮಂಗಳೂರಿನ ಎಂ. ಜಿ. ರಸ್ತೆಯಲ್ಲಿರುವ ಕಲ್ಕೂರ ಪ್ರತಿಷ್ಠಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದ ಪ್ರಸಿದ್ದ ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ “ಸದಾ ಉಲ್ಲಾಸದಿಂದಿದ್ದ ಉತ್ಕೃಷ್ಟ ಭಾಗವತರಾಗಿ ಸಜ್ಜನಿಕೆಯಿಂದ ಸುಬ್ರಹ್ಮಣ್ಯ ಧಾರೇಶ್ವರರು ತನ್ನದೇ ಹಾದಿಯಲ್ಲಿ ಪ್ರಸಿದ್ಧರಾದವರು. ಅವರ ಅಕಾಲಿಕ ನಿಧನ ಸಮಗ್ರ ಗಾನ ಲೋಕಕ್ಕೆ ತೀವ್ರ ಆಘಾತವನ್ನುಂಟುಮಾಡಿದೆ. ಅನೇಕ ಹೊಸ ಪ್ರಸಂಗಗಳಿಗೆ ಜೀವ ತುಂಬಿ ಮೆರೆಸಿದ ಪ್ರಯೋಗಶೀಲರೂ ಆಗಿದ್ದ ಧಾರೇಶ್ವರರು ಓರ್ವ ಅಪೂರ್ವ ಭಾಗವತರು.” ಎಂದವರು ಸ್ಮರಿಸಿದರು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿ “ದಿವಂಗತ ಕಾಳಿಂಗ ನಾವಡರ ನಿಧನದ ಬಳಿಕ ಅಷ್ಟೇ ಯೋಗ್ಯತೆಯ ಕಲಾವಿದನಾಗಿ ಬಡಗು ತಿಟ್ಟಿನಲ್ಲಿ ಹೆಸರುಗಳಿಸಿದ ಭಾಗವತರ ಸಾಲಿನಲ್ಲಿ ಧಾರೇಶ್ವರರು ಅಗ್ರಗಣ್ಯರೆನಿಸುತ್ತಾರೆ.” ಎಂದು ಗುಣಗಾನಗೈದರು. ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ “ಯಕ್ಷಗಾನ ರಂಗದಲ್ಲಿ ಶತಮಾನದ ಧ್ವನಿಯಾಗಿ…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದೆ.2023 ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. 2023ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 53 ವಿವಿಧ ಪುಸ್ತಕಗಳಿಗೆ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಅನೇಕ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದ್ದು ಒಟ್ಟಾರೆ 57ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560 018’ ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ. ಸ್ಪರ್ಧೆಗೆ ಅನ್ವಯಿಸುವ ನಿಯಮಗಳು: 1) ಪ್ರತಿಗಳನ್ನು ದಿನಾಂಕ: 31…
ಕನ್ನಡದಲ್ಲಿ ಕಾದಂಬರಿಯು ಅತ್ಯಂತ ಹುಲುಸಾಗಿ ಬೆಳೆದ ಸಾಹಿತ್ಯ ಪ್ರಕಾರವಾಗಿದೆ. ಕಾಲಕ್ಕೆ ತಕ್ಕಂತೆ ಬದಲಾಗುತ್ತಾ ಅದು ತನ್ನ ಜೀವಂತಿಕೆಯನ್ನು ಉಳಿಸಿಕೊಂಡಿದೆ. ಅದರ ಬೆಳವಣಿಗೆಯನ್ನು ಸ್ಥೂಲವಾಗಿ ನವೋದಯ, ಪ್ರಗತಿಶೀಲ, ನವ್ಯ, ಬಂಡಾಯ ಯುಗಗಳೆಂದು ಗುರುತಿಸಲಾಗುತ್ತದೆ. ಆಧುನಿಕ ಕನ್ನಡ ಸಾಹಿತ್ಯದ ಬೆಳವಣಿಗೆಯ ಈ ಹಂತಗಳನ್ನು ಕಾಲಕ್ರಮದಲ್ಲಿ ಒಂದು ಮುಗಿದ ನಂತರ ಇನ್ನೊಂದು ಆರಂಭವಾಯಿತು ಎನ್ನುತ್ತಿದ್ದರೂ ಅವುಗಳೆಲ್ಲ ಏಕಕಾಲದಲ್ಲಿ ಅಸ್ತಿತ್ವದಲ್ಲಿರುವುದನ್ನು ಅಲ್ಲಗೆಳೆಯುವಂತಿಲ್ಲ. ಈಗ ಬಂಡಾಯ ಯುಗ ಮುಗಿದರೂ ಅದರ ಸೂಕ್ಷ್ಮ ದನಿಯನ್ನು ಹೊಂದಿದ ಅನೇಕ ಕಾದಂಬರಿಗಳು ಬರುತ್ತಿವೆ. ನವ್ಯ ಮಾರ್ಗದ ಕೃತಿಗಳೂ ಬೆಳಕು ಕಾಣುತ್ತಿವೆ. ಡಾ. ಲಲಿತಾ ಎಸ್.ಎನ್. ಭಟ್ ಅವರ ‘ಅಪರಾಜಿತಾ’ ಎಂಬ ಕಾದಂಬರಿಯು ನವ್ಯ ಮತ್ತು ಬಂಡಾಯದ ಸತ್ವವನ್ನು ಹೀರಿಕೊಂಡು ರೂಪು ತಾಳಿದೆ. ಮಧ್ಯಂತರದಲ್ಲೇ ಆರಂಭಗೊಂಡು ಹಿನ್ನೋಟ ತಂತ್ರದ ಮೂಲಕ ವಿಷಯಗಳನ್ನು ನಿರೂಪಿಸುತ್ತಾ ಉದ್ಯೋಗಸ್ಥ ಮಹಿಳೆಯ ಜೀವನಕ್ರಮವನ್ನು ಹಿಡಿದಿಡುವ ಕೃತಿಯು ಮೀರಾ ಎಂಬ ವೈದ್ಯೆಯ ದೃಷ್ಟಿಕೋನದಿಂದ ಬದುಕನ್ನು ಅವಲೋಕಿಸುತ್ತದೆ. ಆಕೆಯ ಆತ್ಮಶೋಧನೆ, ದ್ವಂದ್ವ, ಸ್ವಗತಗಳಿಂದ ಆರಂಭಗೊಳ್ಳುವ ಕಾದಂಬರಿಯು ಆಪ್ತವಾದ ನಿರೂಪಣೆಯೊಂದಿಗೆ ಬದುಕಿನ ಸಂಕೀರ್ಣ ಸಮಸ್ಯೆಗಳಿಗೆ…
ಮೈಸೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಮತ್ತು ಕಥಾಬಿಂದು ಪ್ರಕಾಶನ ಮಂಗಳೂರು ಇದರ ಆಶ್ರಯದಲ್ಲಿ ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ‘ಸಾಹಿತ್ಯ ಸಂಭ್ರಮ 2024’ವು ದಿನಾಂಕ 01-05-2024ರಂದು ಬೆಳಿಗ್ಗೆ ಗಂಟೆ 10-00ಕ್ಕೆ ಮೈಸೂರು ವಿಧ್ಯಾವರ್ಧಕ ಕಾಲೇಜು ರಸ್ತೆ, ಚಂದ್ರಕಲಾ ಆಸ್ಪತ್ರೆ ಹತ್ತಿರ, ವಿಜಯನಗರ 1ನೇ ಹಂತ, ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ನಡೆಯಲಿದೆ. ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಡ್ಡಿಕೆರೆ ಗೋಪಾಲ್ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರ್ಕಾರ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಾನಸ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಡಾ. ಟಿ. ತ್ಯಾಗರಾಜು ಮೈಸೂರು ಇವರ ‘ಮನದ ಮಾತು’, ಪುಷ್ಪಾ ನಾಗತಿಹಳ್ಳಿಯವರ ‘ಅನುಗತ’ ಮತ್ತು ‘ಧರೆಯಂಚಿನ ಮರ’, ಶೋಭಿತಾ ಮೈಸೂರು (ಶೋಭ ಟಿ.ಆರ್.) ಇವರ ‘ಸಂಜೆಯ ಸೂರ್ಯ’, ಲತಾ ಕೆ.ಎಸ್. ಹೆಗಡೆಯವರ ‘ಕನ್ನಡದ ತರುಲತೆ’ ಮತ್ತು ‘ಗುಬ್ಬಿಯ ಗೂಡು’ ಮತ್ತು ಹಾ.ಮ. ಸತೀಶ್ ಬೆಂಗಳೂರು ಇವರ ‘ನುಡಿಹಾರ’…
ಬೆಂಗಳೂರು : ರಾಷ್ಟ್ರೀಯ ಸಾರ್ವಜನಿಕ ಕನ್ನಡ ಮತ್ತು ಕಲಾ ಸಂಸ್ಕೃತಿ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ರಾಸಾ ಪಬ್ಲಿಕೇಷನ್ಸ್ ಇದರ ಆಯೋಜನೆಯಲ್ಲಿ ಕನ್ನಡ ಸಾಹಿತ್ಯ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ – 2024 ಸಮಾರಂಭವು ದಿನಾಂಕ 25-05-2024 ರಂದು ಮೈಸೂರಿನಲ್ಲಿ ನಡೆಯಲಿದೆ. ಕವಿಗೋಷ್ಠಿಯಲ್ಲಿ ವಾಚನ ಮಾಡಲು ಇಚ್ಚಿಸುವ ಕವಿಗಳು, ಸಾಹಿತಿಗಳು ಮತ್ತು ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಆಸಕ್ತಿ ಹೊಂದಿರುವ ಮಕ್ಕಳು, ಕಲಾವಿದರು ಹಾಗೂ ಕಲಾಪೋಷಕರು ನೋಂದಣಿ ಮಾಡಿಕೊಳ್ಳಬಹುದು. ನೋಂದಣಿಗಾಗಿ ತಮ್ಮ ಪೂರ್ಣ ಹೆಸರು (ಆಧಾರ್ ಪ್ರತಿಯಲ್ಲಿ ಇರುವಂತೆ) ವೃತ್ತಿ, ವಿಳಾಸ, ಇತ್ತೀಚಿನ ಉತ್ತಮ ಗುಣಮಟ್ಟದ ಫೋಟೊವನ್ನು ವ್ಯಾಟ್ಸ್ ಆಪ್ ಮೂಲಕ ಕಳುಹಿಸಿ. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ – 7406401473 ಈ ಸಂಖ್ಯೆಯನ್ನು ಸಂಪರ್ಕಿಸಬಹುದು.
ಧಾರವಾಡ : ಕರ್ನಾಟಕ ಶಾಸನ ಸಾಹಿತ್ಯ ಪರಿಷತ್ತು ಧಾರವಾಡ, ಜನತಾ ಶಿಕ್ಷಣ ಸಮಿತಿ ವಿದ್ಯಾಗಿರಿ ಧಾರವಾಡ ಮತ್ತು ರಾಷ್ಟ್ರೀಯ ದೃಶ್ಯಕಲಾ ಅಕಾಡೆಮಿ ಧಾರವಾಡ ಇವರುಗಳ ಸಹಯೋಗದಲ್ಲಿ ಕರ್ನಾಟಕ ಶಾಸನ ಸಾಹಿತ್ಯ ಪರಿಷತ್ತಿನ ಮೊದಲ ಮಹಾಧಿವೇಶನ -2024’ವು ದಿನಾಂಕ 29-04-2024 ಮತ್ತು 30-04-2024ರಂದು ಧಾರವಾಡ ವಿದ್ಯಾಗಿರಿ ಇಲ್ಲಿರುವ ಜನತಾ ಶಿಕ್ಷಣ ಸಮಿತಿಯ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಸಭಾಂಗಣದಲ್ಲಿ ನಡೆಯಲಿದೆ. ದಿನಾಂಕ 29-04-2024ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಇವರ ಸರ್ವಾಧ್ಯಕ್ಷತೆಯಲ್ಲಿ ಹುಬ್ಬಳ್ಳಿಯ ಹಿರಿಯ ವಿದ್ವಾಂಸರಾದ ಡಾ. ಬಿ.ವಿ. ಶಿರೂರ ಇವರು ಈ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀಮತಿ ಹನುಮಾಕ್ಷಿ ಗೋಗಿ ಇವರ ‘ಕಾಳಗಿ ಇತಿಹಾಸ ಮತ್ತು ಸಂಸ್ಕೃತಿ’ ಮತ್ತು ‘ಮುದನೂರು ಮತ್ತು ಯಡ್ರಾಮಿ ಶಾಸನಗಳು’ ಹಾಗೂ ಪ್ರೊ. ಎಸ್.ಸಿ. ಪಾಟೀಲ ಇವರ ‘ದೃಶ್ಯಕಲಾ ಸಂಚಯ’, ‘ವಚನಕಾರ ಹಂಡೆ ಚಂದಿಮರಸನ ಶಾಸನಗಳು’ ಮತ್ತು ಹಂಡೆ ಅರಸರ ಸಾಂಸ್ಕೃತಿಕ ಚರಿತ್ರೆ’ ಎಂಬ ಕೃತಿಗಳು ಲೋಕಾರ್ಪಣೆಗೊಳ್ಳಲಿವೆ. ಶ್ರೀಮತಿ ಹನುಮಾಕ್ಷಿ ಗೋಗಿ…
ಶಿವಮೊಗ್ಗ : ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಸಾಹಿತ್ಯ ಹುಣ್ಣಿಮೆಯ 225ನೇ ಕಾರ್ಯಕ್ರಮ ಮೇ ತಿಂಗಳ ಕೊನೆಯ ವಾರದಲ್ಲಿ ನಡೆಯಲಿದೆ ಎಂದು ಕ. ಸಾ. ಪ. ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರೊಂದಿಗೆ ನಡೆದ ಸಮಾಲೋಚನೆಯ ನಂತರ ಪೂಜ್ಯರ ಮಾರ್ಗದರ್ಶನದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ನಡೆದಿದೆ. ಅಲ್ಲಿ ಆಯ್ಕೆಯಾದವರು ಸೇರಿದಂತೆ ನಾಡಿನಾದ್ಯಂತ ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಪಿ. ಯು. ವರೆಗೆ ಓದುತ್ತಿರುವ ಮಕ್ಕಳು ಭಾಗವಹಿಸಲು ಅವಕಾಶವಿದೆ. ಮಕ್ಕಳು ತಾವು ಬರೆದ ಸ್ವಂತ ಕವನ, ಕಥೆ, ಪ್ರಬಂಧಗಳ ಜೊತೆಗೆ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಶಾಲೆ ಮತ್ತು ತಂದೆ, ತಾಯಿಯ ಒಪ್ಪಿಗೆ ಪಡೆದು ಕಳುಹಿಸಲು ಕೋರಲಾಗಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಮಕ್ಕಳು,…
ಕಪ್ಪು ಮನುಜರು ನಾವು ಕಪ್ಪು ಮನುಜರು ಈ ಮಣ್ಣ ಕರಿಯೊಡಲ ಕೆಸರಲ್ಲಿ ಮಿಂದು ಬಂದವರು… ಹಾಡಿಲ್ಲದ ದಲಿತ ಚಳುವಳಿಯನ್ನು ಊಹಿಸಲು ಸಾಧ್ಯವೇ ? ಇಲ್ಲ… ! ಕಳ್ಳುಬಳ್ಳಿ ಸಂಬಂಧದಂತೆ ಹೋರಾಟದ ಹಾಡುಗಳೊಂದಿಗೆ ದಲಿತ ಚಳುವಳಿ ಬೆಸೆದು ಬೆಳೆದು ಬಂದಿದೆ. ದಲಿತ ಸಂಘಟನೆಗಳ ಯಾವುದೇ ಹೋರಾಟ, ಕಾರ್ಯಕ್ರಮಗಳಲ್ಲಿ ಈಗಲೂ ಹೋರಾಟದ ಹಾಡಿನೊಂದಿಗೆ ಶುರುವಾಗುವ ಪ್ರತೀತಿ ಮುಂದುವರಿದಿದೆ. ಇಂಥದ್ದೊಂದು ಪರಂಪರೆಯನ್ನು ಆಧರಿಸಿ ಹಾಡುಗಳೊಂದಿಗೆ ದಲಿತ ಚಳುವಳಿ ಬೆಳೆದು ಬಂದ ಕಥನವನ್ನು ರಂಗಭೂಮಿ ಮೂಲಕ ನಿರೂಪಿಸುವ ಪ್ರಯತ್ನ ನಡೆದಿರುವುದು ವರ್ತಮಾನದ ದೃಷ್ಟಿಯಿಂದ ಮಹತ್ವದ್ದು. ಶಂಕರ್ ನಾಗ್ ಪ್ರಶಸ್ತಿ ಪುರಸ್ಕೃತ ಉದಯೋನ್ಮುಖ ರಂಗಕರ್ಮಿ ಕೆ.ಪಿ. ಲಕ್ಷ್ಮಣ್ ವಿನ್ಯಾಸಗೊಳಿಸಿರುವ ’ಪಂಚಮ ಪದ’ ಎಂಬ ನಾಟಕ, ಚಂದ್ರಶೇಖರ್ ನಿರ್ದೇಶನದಲ್ಲಿ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರದರ್ಶನ ಕಂಡಿದೆ. ದಲಿತ ಚಳುವಳಿಯ ಚರಿತ್ರೆಗೆ ಮಹತ್ವದ ದಾಖಲೆಯಾಗಿರುವ ಪಂಚಮ ಪತ್ರಿಕೆ ಮತ್ತು ಹಾಡು ಎರಡನ್ನೂ ಒಟ್ಟು ತಂದು ‘ಪಂಚಮ ಪದ’ ಆಗಿದೆ. ರಾಜ್ಯದ ಜನ ಚಳುವಳಿಗಳ ಇತಿಹಾಸದಲ್ಲಿ ಎಪ್ಪತ್ತು ಮತ್ತು ಎಂಬತ್ತರ ದಶಕದ ಅವಧಿ ಗುರುತರವಾದುದು.…