Author: roovari

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಪ್ರಸಿದ್ಧ ಕಾದಂಬರಿಕಾರರಾದ ಯಂಡಮೂರಿ ವೀರೇಂದ್ರನಾಥ್ ಅವರನ್ನು ಗೌರವಿಸಲಾಯಿತು. ಉಡುಪಿ ಬನ್ನಂಜೆಯ ನಾರಾಯಣ ಗುರು ಸಭಾಂಗಣದಲ್ಲಿ ದಿನಾಂಕ 30-10-2023 ರಂದು ನಡೆದ ಕಾರ್ಯಕ್ರಮದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ ಗೌರವಿಸಿದರು. ಸಮಾರಂಭದಲ್ಲಿ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಪಿ. ವಿ ಭಂಡಾರಿ, ಹರ್ಷ ಇದರ ಆಡಳಿತ ನಿರ್ದೇಶಕರಾದ ಸೂರ್ಯಪ್ರಕಾಶ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಮನೋರೋಗ ತಜ್ಞ ಡಾ. ವಿರೂಪಾಕ್ಷ ದೇವರಮನೆ, ಬಿಲ್ಲವರ ಸೇವಾ ಸಂಘ ಬನ್ನಂಜೆ ಇದರ ಅಧ್ಯಕ್ಷ ಮಾಧವ ಬನ್ನಂಜೆ, ತಾಲೂಕು ಕ ಸಾ ಪ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಮೋಹನ್ ಉಡುಪ, ಕಸಾಪ ಬೈದೂರು ತಾಲೂಕು ಅಧ್ಯಕ್ಷ ಡಾ. ರಘು ನಾಯ್ಕ, ಕಸಾಪ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾದ೯ನ್, ಹಾಸ್ಯ ಭಾಷಣಕಾರರಾದ ಸಂಧ್ಯಾ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕವನ ರಚನಾ ಕಮ್ಮಟ ಕಾರ್ಯಕ್ರಮವು ದಿನಾಂಕ 01-11-2023 ರಂದು ಮಂಗಳೂರಿನ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ತಾರಾನಾಥ “ನಮ್ಮ ದಿನನಿತ್ಯದ ವ್ಯವಹಾರಗಳಲ್ಲಿ ಕನ್ನಡವನ್ನು ವ್ಯಾಪಕವಾಗಿ ಬಳಸಿದ ಹಾಗೆ ಕನ್ನಡವನ್ನು ಉಳಿಸಲು ಸಾಧ್ಯ“ ಎಂದರು. ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ ಬಾಲಕೃಷ್ಣ  ಅವರು ರಾಜ್ಯೋತ್ಸವ ಆಚರಣೆಯ ಹಿಂದೆ ಸಂಘರ್ಷದ ಇತಿಹಾಸ ಇದೆ ಎಂದು ರಾಜ್ಯೋತ್ಸವ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ. ಪಿ ಶ್ರೀನಾಥ ಅವರು ವಹಿಸಿಕೊಂಡಿದ್ದರು. ಲೇಖಕಿ ಅಕ್ಷತಾ ರಾಜ್ ಪೆರ್ಲ ವಿದ್ಯಾರ್ಥಿಗಳಿಗೆ ಕವನ ರಚನಾ ಕಮ್ಮಟವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರಿನ ಕೇಂದ್ರ ಕಾರ್ಯಕಾರಿ ಸಮಿತಿ…

Read More

ಮೂಡುಬಿದಿರೆ : ನಾರಾವಿಯ ಧರ್ಮಶ್ರೀ ಸಭಾಭವನದಲ್ಲಿ ನಿರಂಜನ್ ಜೈನ್ ಕುದ್ಯಾಡಿ ಅವರು ರಚಿಸಿದ ‘ಶಿಖರ್ಜಿಯಲ್ಲಿ ನಿರಂಜನನ ದರ್ಶನ’ ಮತ್ತು ‘ಜಿನಭಕ್ತಿ ಲಹರಿ’ ಕೃತಿ ದಿನಾಂಕ 23-10-2023ರಂದು ಲೋಕಾರ್ಪಣೆಗೊಳಿಸಿದ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾತನಾಡುತ್ತಾ “ಒಂದು ಸಮುದಾಯದ ಒಳಗಿನ ವಿಚಾರಗಳ ಕುರಿತಾಗಿ ಪ್ರಕಟವಾಗುವ ಯಾವುದೇ ಪುಸ್ತಕಗಳು ಎಲ್ಲಾ ಸಮುದಾಯದವರಲ್ಲಿ ಕೊಡುಕೊಳ್ಳುವಿಕೆಗೆ ಒಳಗಾದಾಗ ಆ ಪುಸ್ತಕದ ಸಾರ್ಥಕತೆಯಾಗುತ್ತದೆ. ಒಂದು ಧರ್ಮ ಅಥವಾ ಸಮುದಾಯವನ್ನು ಮತ್ತೊಂದು ಧರ್ಮ ಪರಸ್ಪರ ಅರ್ಥ ಮಾಡಿಕೊಳ್ಳಬೇಕಾದರೆ ಪುಸ್ತಕಗಳ ಕೊಡುಕೊಳ್ಳುವಿಕೆಯ ಅಗತ್ಯವಿದೆ” ಎಂದು ಹೇಳಿದರು. ಕನ್ನಡ ಭಾಷಾ ಪಂಡಿತ ಬಿ.ಪಿ. ಸಂಪತ್ ಕುಮಾರ್ ಮೂಡುಬಿದಿರೆ ಕೃತಿಯನ್ನು ಪರಿಚಯಿಸಿದರು. ಮುಖ್ಯ ಅತಿಥಿಗಳಾದ ಭಾರತೀಯ ಜೈನ್ ಮಿಲನ್‌ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಮತ್ತು ಅನಿತಾ ಸುರೇಂದ್ರ ಕುಮಾ‌ರ್ ಶುಭಾಶಂಸನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪುಸ್ತಕದ ಪ್ರಕಾಶಕರೂ ಆಗಿರುವ ಬೆಂಗಳೂರಿನ ರತ್ನತ್ರಯ ಕ್ರಿಯೇಷನ್ಸ್ ಅದರ ಮುಖ್ಯಸ್ಥೆ ಡಾ. ನೀರಜಾ ನಾಗೇಂದ್ರ ಕುಮಾರ್ ಮಾತನಾಡುತ್ತಾ “ಈ ಕೃತಿಯಲ್ಲಿ…

Read More

ಧಾರವಾಡ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧಾರವಾಡದ ಸಾಹಿತ್ಯ ಗಂಗಾ ಸಂಸ್ಥೆಯು ಆಯೋಜಿಸಿದ ರಾಜ್ಯಮಟ್ಟದ ಕವನ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟಗೊಂಡಿದೆ. ಪ್ರಥಮ ಬಹುಮಾನ ಶ್ರೀಮತಿ ಸ್ನೇಹಲತಾ ದಿವಾಕರ್ ಕುಂಬ್ಳೆ (ಕಾಸರಗೋಡು) ದ್ವಿತೀಯ ಬಹುಮಾನ ಶ್ರೀ ಸದಾಶಿವ ಸೊರಟೂರು (ಹೊನ್ನಾಳಿ) ತೃತೀಯ ಬಹುಮಾನ ಶ್ರೀಮತಿ ರಂಜಿತಾ ಪಿ. ಆರ್ (ಮೈಸೂರು) ಮೆಚ್ಚುಗೆಯ ಬಹುಮಾನ ಶ್ರೀ ಶಿವಕುಮಾರ ಚೆನ್ನಪ್ಪನವರ (ರಾಣಿಬೆನ್ನೂರು) ಮೆಚ್ಚುಗೆಯ ಬಹುಮಾನ ಶ್ರೀ ಚೌಡಪ್ಪ (ಹಂಪಿ) ಈ ಬಾರಿ ಒಟ್ಟು 127 ಕವನಗಳು ಬಂದಿದ್ದು ಡಾ. ಸುಭಾಷ್ ಪಟ್ಟಾಜೆ ಮತ್ತು ಕುಮಾರಿ ಭವ್ಯ ಭಟ್ ಅವರು ತೀರ್ಪುಗಾರರಾಗಿ ಸಹಕರಿಸಿದ್ದಾರೆ. ಸ್ಪರ್ಧೆಯ ಬಗ್ಗೆ ಮಾತನಾಡಿದ ತೀರ್ಪುಗಾರ ಡಾ. ಸುಭಾಷ್ ಪಟ್ಟಾಜೆ “ಜನ ಸಾಮಾನ್ಯರ ಬದುಕಿನ ನೋವು ನಲಿವುಗಳಿಗೆ ಸ್ಪಂದಿಸುವ, ಸಂಸ್ಕೃತಿಯ ಸೂಕ್ಷ್ಮಗಳನ್ನು ಪ್ರತಿಪಾದಿಸಿದ ಕವಿತೆಗಳಿಗೆ ಆದ್ಯತೆಯನ್ನು ನೀಡಲಾಗಿದೆ. ವರದಿಯಾಗಿ, ಘೋಷಣೆಯಾಗಿ ಮತ್ತು ಕೇವಲ ಸ್ವಗತವಾಗಿ ಮೂಡಿಬಂದರೆ ಕವಿತೆ ಎನಿಸಿಕೊಳ್ಳುವುದಿಲ್ಲ. ಚಿಂತನೆಗೆ ಹಚ್ಚುವ, ವೈಚಾರಿಕ ನೆಲೆಗಟ್ಟಿನಲ್ಲಿ ಸಮಕಾಲೀನ ಸ್ಥಿತಿಗತಿಗಳಿಗೆ ಕನ್ನಡಿಯನ್ನು ಹಿಡಿಯುವ, ವಾಸ್ತವ ಸತ್ಯವನ್ನು…

Read More

ಮೂಡುಬಿದಿರೆ : ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಂ ಸುಳ್ಯ ನಿರ್ದೇಶನದಲ್ಲಿ ಪ್ರಸ್ತುತ ಪಡಿಸಿದ ‘ಚಾರುವಸಂತ’ ನಾಟಕವನ್ನು ದಿನಾಂಕ 29-10-2023ರಂದು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದ ಕೃತಿಕಾರ ಡಾ. ಹಂ.ಪ. ನಾಗರಾಜಯ್ಯ (ಹಂಪನಾ) ಅವರು ಮಾತನಾಡುತ್ತಾ “ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ ಚಾರುವಸಂತ. ಇದು ನನ್ನ ಕನಸು ನನಸಾದ ದಿನ. ನಾನು ಯುವಕ ಅಲ್ಲ. ಆದರೆ ಯುವಕನಾಗಲು ಬಯಸುತ್ತೇನೆ. ಭಾರತೀಯ ಕುಟುಂಬಗಳಲ್ಲಿ ಮಾತ್ರವಲ್ಲ, ಎಲ್ಲಾ ಕುಟುಂಬಗಳಲ್ಲೂ ಏಳುಗಾಲ ಹಾಗೂ ಬೀಳುಗಾಲ ಇರುತ್ತದೆ. ಏಳು ಬೀಳುಗಳ ಜೀವನದ ಕಥನವೇ ಚಾರುವಸಂತ. ಎಲ್ಲಾ ಧರ್ಮ, ಮತವನ್ನು ಗೌರವಿಸಬೇಕು. ದ್ವೇಷ, ಅಸೂಯೆ ಬಿಡಬೇಕು. ಮೋಹನ ಆಳ್ವ ಅವರ ಅಂತರಂಗಕ್ಕೆ ಬಿದ್ದ ಯಾವುದೇ ಕಲೆಯಾದರೂ ಕೃತಿಯಾಗುತ್ತದೆ” ಎಂದು ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಮಾತನಾಡಿ, “ಕೃತಿಗಳು ಹೆಚ್ಚು ಮಾತನಾಡಬೇಕು. ಪರಿಸರ ರಕ್ಷಣೆಯ ಮಹತ್ವ ಮತ್ತು ಸುಖ-ದುಖವನ್ನು ಸಮಾನವಾಗಿ ಸ್ವೀಕರಿಸಿ…

Read More

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2023ನೇ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಬೆಂಗಳೂರಿನ ಡಾ. ಲಕ್ಷ್ಮಣ ವಿ.ಎ. ಅವರ ‘ಕಾಯಿನ್ ಬೂತ್’ ಎಂಬ ಕವನ ಸಂಕಲನದ ಹಸ್ತಪ್ರತಿಯು ಗೆದ್ದುಕೊಂಡಿದೆ ಎಂದು ಸಂಘದ ಸ್ಥಾಪಕಾಧ್ಯಕ್ಷರಾದ ಡಾ.ನಾ.ಮೊಗಸಾಲೆಯವರು ಘೋಷಿಸಿದ್ದಾರೆ. ಈ ಸಾಲಿನ ಸ್ಪರ್ಧೆಗೆ ಐವತ್ತ ಒಂಬತ್ತು ಹಸ್ತಪ್ರತಿಗಳು ಬಂದಿದ್ದು ಪ್ರಸಿದ್ಧ ವಿಮರ್ಶಕರಾದ ಡಾ. ರಾಜಶೇಖರ ಹಳೆಮನೆ, ಬೆಳಗೋಡು ರಮೇಶ ಭಟ್ (ವಿಭಾವರಿ ಭಟ್), ಮತ್ತು ಡಾ. ಚಿದಾನಂದ ಸಾಲಿ ಅವರುಗಳು ನೀಡಿದ ಅಂಕಗಳ ಆಧಾರದಲ್ಲಿ ಈ ಪ್ರಶಸ್ತಿಯನ್ನು ನಿರ್ಣಯಿಸಲಾಗಿದೆ. 1979ರಲ್ಲಿ ನಂದಳಿಕೆಯ ವರಕವಿ ಮುದ್ದಣನ ಹೆಸರಿನಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಯು ಹತ್ತು ಸಾವಿರದ ಗೌರವ ಸಂಭಾವನೆ, ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಪ್ರತೀ ವರುಷದಂತೆ ಈ ವರುಷದ ಪ್ರಶಸ್ತಿ ಪ್ರದಾನ ಸಮಾರಂಭವು 2024ರ ಫೆಬ್ರವರಿ ತಿಂಗಳಲ್ಲಿ ಕಾಂತಾವರದ ‘ಕನ್ನಡ ಭವನ’ದಲ್ಲಿ ನಡೆಯಲಿದ್ದು, ಪ್ರಶಸ್ತಿಯ ಪ್ರಾಯೋಜಕರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಅವರು ಪ್ರಶಸ್ತಿ ಪ್ರದಾನವನ್ನು…

Read More

ಮೂಡುಬಿದಿರೆ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪದವಿ ಇಂಗ್ಲಿಷ್ ವಿಭಾಗವು ಹಮ್ಮಿಕೊಂಡ ‘ಎ ಡಾಲ್ಸ್ ಹೌಸ್’ ಪುಸ್ತಕ ಅವಲೋಕನ ಕಾರ್ಯಕ್ರಮವು ದಿನಾಂಕ 27-10-2023ರ ಶುಕ್ರವಾರದಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಧವಲಾ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಪದ್ಮಜಾ ಶೆಟ್ಟಿ “ಮಹಿಳೆ ಸೋತರೂ ಸಲಹುತ್ತಾಳೆ. ಶಕ್ತಿಯಾಗಿ ನಿಲ್ಲುತ್ತಾಳೆ. ಹೆನ್ರಿಕ್ ಹಿಪ್ಸನ್ ಬರೆದ ‘ಎ ಡಾಲ್ಸ್ ಹೌಸ್’ ಎಂಬ ಪುಸ್ತಕವು ಮಹಿಳೆಯ ಶಕ್ತಿ ಮತ್ತು ಸಾಮರ್ಥ್ಯವನ್ನು ತಿಳಿಸುತ್ತದೆ. ಮಹಿಳೆಯರು ಬದುಕಿನುದ್ದಕ್ಕೂ ಹೋರಾಡುತ್ತಾರೆ. ಯಾರಿಲ್ಲದಿದ್ದರೂ ಮತ್ತು ಎಲ್ಲರೂ ಇದ್ದರೂ ಧೈರ್ಯದಿಂದ ಮುನ್ನುಗ್ಗಬೇಕು ಎಂಬ ಆಶಯವನ್ನು ಕತೆ ಬಿಂಬಿಸುತ್ತದೆ. ಸ್ತ್ರೀಯರಿಗೆ ಜೀವನದ ಹಾದಿಯಲ್ಲಿ ಆತ್ಮವಿಶ್ವಾಸ ಮುಖ್ಯ. ಅದುವೇ ಅವರನ್ನು ಗೆಲ್ಲಿಸುತ್ತದೆ” ಎಂದರು. ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ “ಬೇರೆ ಬೇರೆ ವಿಷಯಗಳನ್ನು ಕಲಿಯುವ ಮನಸ್ಸಿರಬೇಕು. ಅಂತಹ ಆಲೋಚನೆ ಪ್ರತಿಯೊಬ್ಬರಲ್ಲೂ ಬರಬೇಕು. ಸಾಹಿತ್ಯವು ವಿಶ್ಲೇಷಣೆ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ನೀಡುತ್ತದೆ. ಏಕದೃಷ್ಟಿಯ ಅಭಿವೃದ್ಧಿಯಿಂದ ಮಾತ್ರ ಬೆಳವಣಿಗೆ ಸಾಧ್ಯವಿಲ್ಲ. ವೈವಿಧ್ಯಮಯ ದೃಷ್ಟಿಕೋನ ಅವಶ್ಯ” ಎಂದರು. ಕಾಲೇಜು…

Read More

ಬೆಂಗಳೂರು : ಬೆಂಗಳೂರಿನ ಶ್ರೀ ಮುರಳೀಧರ ಸಂಗೀತ ನೃತ್ಯ ಮಹಾವಿದ್ಯಾಲಯ ಮತ್ತು ಮೋಹನ ತರಂಗಿಣಿ ಸಂಗೀತ ಸಭಾ ಪ್ರಸ್ತುತ ಪಡಿಸುವ ‘76ನೇ ವಾರ್ಷಿಕ ಸಾಂಸ್ಕೃತಿಕ ಸಂಗೀತ ನೃತ್ಯ ಮಹೋತ್ಸವ’ವು ದಿನಾಂಕ 04-11-2023ರಂದು ನಾದಬ್ರಹ್ಮ ಶಾರದ ಮಂದಿರ ವಿದ್ಯಾಲಯದಲ್ಲಿ ಉದ್ಘಾಟನೆಗೊಳ್ಳಲಿದೆ. ದಿನಾಂಕ 04-11-2023 ಶನಿವಾರದಿಂದ ದಿನಾಂಕ 04-05-2024 ಶನಿವಾರದವರೆಗೆ ಕರ್ನಾಟಕ ಸಂಗೀತ ತ್ರಿಮೂರ್ತಿಗಳ ಹಾಗೂ ಕನಕ ಪುರಂದರ ಸಂಗೀತೋತ್ಸವದ ಅಂಗವಾಗಿ ನಡೆಸುವ 76 ಕಾರ್ಯಕ್ರಮಗಳು. ಈ ಕಾರ್ಯಕ್ರಮವು ಮೋಹನ ತರಂಗಿಣಿ ಸಂಗೀತ ಸಭಾದ ಕಾರ್ಯದರ್ಶಿ ಶ್ರೀಮತಿ ಮರಿಯಮ್ಮ  (ಲಕ್ಷ್ಮೀದೇವಿ) ಮೋಹನ ಕುಮಾರ ಮತ್ತು ಕರ್ನಾಟಕ ಕಾಂಪೋಸ್ಟ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ಇದರ ಮಾಜಿ ಉಪಾಧ್ಯಕ್ಷರಾದ ಶ್ರೀ ಎಂ. ವೆಂಕಟೇಶ್ ಇವರ ಉಪಸ್ಥಿತಿಯಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ ‘ಮಂಜುದಾಸ ರಾಜ್ಯ ಪ್ರಶಸ್ತಿ ಪುರಸ್ಕಾರ’ವನ್ನು ಸಾಹಿತ್ಯ ಕ್ಷೇತ್ರದಲ್ಲಿ ಶ್ರೀ ಸುಬ್ಬು ಹೊಲಿಯರ್, ಸಮಾಜಸೇವೆಗೆ ಶ್ರೀ ಜಿ. ಮಾದೇಶ್ ಬೆಂಗಳೂರು, ಹಿಂದೂಸ್ಥಾನಿ ಸಂಗೀತಕ್ಕೆ ಪಂಡಿತ್ ಶ್ರೀ ರಾಮಪ್ಪ ಪಕೀರಪ್ಪ ಭಜಂತ್ರಿ ಮತ್ತು ಶಹನಾಯಿ ವಾದನಕ್ಕೆ ಆನವಟ್ಟಿ ತಿಮ್ಮಾಪುರ…

Read More

ಮೈಸೂರು : ನಟ ಪ್ರಕಾಶ್ ರಾಜ್ ಇವರ ‘ನಿರ್ದಿಗಂತ’ ಪ್ರಸ್ತುತ ಪಡಿಸುವ ಶರಣ್ಯ ರಾಮಪ್ರಕಾಶ್ ನಿರ್ದೇಶನದ ‘ಪ್ರಾಜೆಕ್ಟ್ ಡಾರ್ಲಿಂಗ್’ ನಾಟಕದ ಪ್ರಥಮ ಪ್ರದರ್ಶನವು ದಿನಾಂಕ 05-11-2023ರಂದು ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನ ರಂಗಶಾಲೆಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 7259537777 ಮತ್ತು 9945281772. ನಾಟಕದ ಬಗ್ಗೆ : ಪ್ರಾಜೆಕ್ಟ್ ಡಾರ್ಲಿಂಗ್ ಒಂದು ಪ್ರಾಯೋಗಿಕ ನಾಟಕ. ರಂಗಭೂಮಿಯನ್ನು ಕಟ್ಟಿದ ಕಲಾವಿದೆಯರು ಯಾರು? ಯಾರ ಹೆಗಲ ಮೇಲೆ ನಮ್ಮ ರಂಗಭೂಮಿಯು ನಿಂತಿದೆ ? ಎಂದು ತಮ್ಮ ಹಿಂದಿನ ತಲೆಮಾರಿನ ಹುಡುಕಾಟದಲ್ಲಿರುವ ಕಲಾವಿದರ ನಡೆದಾಡನ್ನು ಈ ನಾಟಕ ಕಟ್ಟಿಕೊಡುತ್ತದೆ. ನಟರು ತಮ್ಮ ಈ ಹುಡುಕಾಟದಲ್ಲಿ, ಖಾನಾವಳಿ ಚೆನ್ನಿ ಎಂಬ ಅದ್ಭುತ ಪಾತ್ರದೊಂದಿಗೆ ಮುಖಾಮುಖಿಯಾಗುತ್ತಾರೆ. ತನ್ನ ಆಶುತ್ವದ ಮಾತು, ಲೈಂಗಿಕ ವ್ಯಂಗೋಕ್ತಿ, ಡಬಲ್ ಮೀನಿಂಗ್ ಕಾಮಿಡಿಯಿಂದ ಜನಪ್ರಿಯವಾಗಿ ಇಡೀ ರಂಗವನ್ನು ಆಳಿ ಬಾಳಿದ ಚೆನ್ನಿ ಪಾತ್ರದ ಕಥೆಗಳನ್ನು ಕೇಳಿ, ಈ ಚೆನ್ನಿ ಪಾತ್ರದ ನಟಿಯನ್ನು ಭೇಟಿಯಾಗಲೇಬೇಕೆಂಬ ಆಸೆಯಿಂದ ಅವಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಾರೆ. ಈ ಹುಡುಕಾಟದಲ್ಲಿ, ತಮ್ಮ ಬದುಕು ಮತ್ತು…

Read More

ಉಡುಪಿ : ಭಾವನಾ ಫೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಉಡುಪಿಯ ಸ್ಟುಡಿಯೋ ನೆರಳು ಹಾಗೂ ಎಬಿಸಿಡಿ ಡಿಸೈನ್ ಫಂಡಮೆಂಟಲ್ಸ್ ಸಹಯೋಗದಲ್ಲಿ ಆಯೋಜಿಸಿದ ‘ಜನಪದ’ ದೇಶೀಯ ಸರಣಿ ಕಲಾ ಕಾರ್ಯಾಗಾರದ ಎಂಟನೇ ಆವೃತ್ತಿಯು ದಿನಾಂಕ 02-11-2023ರ ಗುರುವಾರದಂದು ಬಡಗುಪೇಟೆಯ 10.03.28 ಗ್ಯಾಲರಿಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಸ್ಟುಡಿಯೋ ‘ನೆರಳು’ ಇದರ ಆರ್ಕಿಟೆಕ್ಟ್ ಸಂಪ್ರೀತ್ ರಾವ್‌ “ ಭಾರತೀಯ ಕಲಾ ಪ್ರಕಾರಗಳೆಲ್ಲ ಬಹಳ ವಿಶಿಷ್ಟತೆಯಿಂದ ಕೂಡಿದುದು. ಇವುಗಳ ಹಿಂದಿರುವ ಜ್ಞಾನವನ್ನು ಈ ತೆರನಾದ ಕಾರ್ಯಾಗಾರಗಳ ಮುಖೇನ ಉಡುಪಿಯ ಪರಿಸರದಲ್ಲಿ ನಡೆಸಿಕೊಡುತ್ತಿರುವ ಭಾವನಾ ಪೌಂಡೇಶನ್‌ನ ಕಾರ್ಯ ಶ್ಲಾಘನೀಯ “ ಎಂದು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಗಳಾದ ಉಡುಪಿಯ ಚಿತ್ರಕಲಾ ಮಂದಿರ ಕಲಾಶಾಲೆಯ ನಿರ್ದೇಶಕರಾದ ಡಾ. ನಿರಂಜನ್ ಯು.ಸಿ ಇವರು “ಶಾಲಾ ಮಕ್ಕಳಿಗೆ ದೇಸೀಯ ಕಲಾಪ್ರಕಾರಗಳನ್ನು ಕಲಿಯಲು ಇದೊಂದು ಉತ್ತಮ ಅವಕಾಶ. ನಾನೂ ಕೂಡ ಈ ಹಿಂದಿನ ಸರಣಿ ಕಾರ್ಯಾಗಾರಗಳಲ್ಲಿ ಭಾಗವಹಿಸಿ ಕಲಾ ಪರಂಪರೆಯ ಹಿಂದಿರುವ ಜ್ಞಾನವನ್ನು ಅರಿತುಕೊಂಡೆ. ಇವೆಲ್ಲ ಒಂದಕ್ಕಿಂತ ಒಂದು ಭಿನ್ನವಾದುದು,…

Read More