Author: roovari

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಆಶ್ರಯದಲ್ಲಿ ಕನ್ನಡದ ಹಿರಿಯ ಸಾಹಿತಿಗಳಾದ ಶಿರಸಿಯ ಸುಬ್ರಾಯ ಮತ್ತಿಹಳ್ಳಿ (ವಿಮರ್ಶನ ಸಾಹಿತ್ಯ), ಉಡುಪಿಯ ಅಂಶುಮಾಲಿ (ಬಹುಭಾಷಾ ಸಾಹಿತ್ಯ), ಕೋಟಾದ ನೀಲಾವರ ಸುರೇಂದ್ರ ಅಡಿಗ (ಸಮಗ್ರ ಸಾಹಿತ್ಯ) ಇವರಿಗೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ದಿನಾಂಕ 01-11-2023ರಂದು ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2003’ವನ್ನು ಮಣಿಪಾಲದ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸ್ ಇದರ ಮುಖ್ಯಸ್ಥರಾದ ಪ್ರೊ. ವರದೇಶ್ ಹಿರೇಗಂಗೆ ಅವರು ಪ್ರದಾನ ಮಾಡಿ ಮಾತನಾಡುತ್ತಾ “ನಾನು ಇಂಗ್ಲಿಷ್ ವಿರೋಧಿಯಲ್ಲ, ಆದರೆ ಎಲ್ಲ ಭಾಷೆಗಳನ್ನು ಇಂಗ್ಲಿಷ್ ನುಂಗಿ ನೀರು ಕುಡಿಯಬಾರದು. ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ” ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತ ಅಧಿಕಾರಿಯಾದ ಡಾ.…

Read More

ಮಂಗಳೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು, ಮಂಗಳೂರು ಹವ್ಯಕ ಸಭಾ, ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಮಂಗಳೂರು ಸಹಯೋಗದಲ್ಲಿ ಶ್ರೀ ಭಾರತೀ ಕಾಲೇಜಿನ ಶಂಕರಶ್ರೀ ಸಭಾಭವನದಲ್ಲಿ ರಾಜ್ಯೋತ್ಸವ ರಸಸಂಜೆ ಕಾರ್ಯಕ್ರಮ ದಿನಾಂಕ 01-11-2023ರಂದು ಜರುಗಿತು. ಈ ಕಾರ್ಯಕ್ರಮದಲ್ಲಿ ಖ್ಯಾತ ಹಾಸ್ಯ ಕಲಾವಿದ ವೈ.ವಿ. ಗುಂಡೂರಾವ್ ಇವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ “ಆಂಗ್ಲರಿಗೆ ವರ್ಷದಲ್ಲಿ ಎರಡು ತಿಂಗಳು ‘ವರಿ ‘ ಜನವರಿ ಫೆಬ್ರವರಿ, ಉತ್ತರ ಕರ್ನಾಟಕದವರಿಗೆ ಗಂಟೆ ಗಂಟೆಗೆ ‘ವರಿ’ ಆರೂವರಿ ಏಳೂವರಿ, ಬ್ಯಾಂಕ್ ನವರಿಗೆ ರಿಕ’ವರಿ’ ಹೀಗೆ ಎಲ್ಲರಿಗೂ ವರಿ ಇದೆ, ಎಲ್ಲರ ವರಿಯನ್ನೂ ಪರಿಹರಿಸುವವಳು ನಮ್ಮ ಕನ್ನಡ ತಾಯಿ ಭುವನೇಶ್ವರಿ” ಎಂದು ವಿವರಿಸಿದರು. ಕಬಾಲಿಡ ಎಂದರೆ ಕನ್ನಡ (ಕರ್ನಾಟಕ ಬ್ಯಾಂಕ್ ಲಿ. ಡ -ಕನ್ನಡ) ಹಾಸ್ಯಗಳ ಪ್ರಸ್ತುತಿಯ ಮೂಲಕ, ಸಭಾಂಗಣದಲ್ಲಿ ತುಂಬಿದ್ದ ಕನ್ನಡ ಮನಸ್ಸುಗಳನ್ನು ನಗೆಗಡಲಲ್ಲಿ ತೇಲಿಸುವುದರೊಂದಿಗೆ ಹೆಚ್. ಡುಂಡಿರಾಜ್ ಅವರು ಸೈಬರ್ ಅಪರಾಧದ…

Read More

ಮಂಗಳೂರು : ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕೋತ್ಸವ ಪ್ರಯುಕ್ತ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದಿನಾಂಕ 29-10-2023ರಂದು ಆಯೋಜಿಸಿದ್ದ ‘ಕಥಾಬಿಂದು ಸಾಹಿತ್ಯೋತ್ಸವ’ವನ್ನು ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯಾಧಿಕಾರಿ ಶ್ರೀಧ‌ರ್ ಇವರು ಉದ್ಘಾಟಿಸಿದರು. ಅವರು ಮಾತನಾಡುತ್ತಾ “ಓದು ಜ್ಞಾನ ಸಂಪಾದನೆಗೆ ಮೂಲ. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಬೇಕು. ಮಕ್ಕಳು ಇಂದು ಮೊಬೈಲ್ ಗೀಳಿಗೆ ಬಿದ್ದಿದ್ದಾರೆ. ಅದರಿಂದ ದೂರಸರಿಸಿ, ಓದುವ ಹವ್ಯಾಸ ರೂಢಿಸಿಕೊಳ್ಳುವಂತೆ ಅವರನ್ನು ಒತ್ತಾಯಿಸಬೇಕು. ಇಂದು ಪುಸ್ತಕ ಓದುವವರ ಸಂಖ್ಯೆಯೇ ಕಡಿಮೆಯಾಗಿದೆ. ಹಾಗಾಗಿ ಪುಸ್ತಕಗಳನ್ನು ಮುದ್ರಿಸಿ ಮಾರಾಟ ಮಾಡುವುದು ಸುಲಭದ ಕೆಲಸವಲ್ಲ”” ಎಂದು ಹೇಳಿದರು. ಲೇಖಕಿ ವೀಣಾ ಕಾರಂತ್ ಮಾತನಾಡಿ, “ಕಥಾಬಿಂದು ಸಂಚಾಲಕ ಪ್ರದೀಪ್‌ ಅವರ ಸಹಕಾರ, ಪ್ರೋತ್ಸಾಹದಿಂದ 10 ಕೃತಿಗಳ ಬಿಡುಗಡೆಯಾಗಿರುವುದು ಸಂತೋಷದ ವಿಚಾರ. ಒಂದೇ ಬಾರಿ 50 ಕೃತಿಗಳನ್ನು ಬಿಡುಗಡೆಗೊಳಿಸುವುದು ಸುಲಭದ ಕೆಲಸವಲ್ಲ” ಎಂದರು. ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಮಾತನಾಡಿ, “ಕನ್ನಡ ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಹೆಚ್ಚು ಕನ್ನಡ…

Read More

ಬಳ್ಳಾರಿ : ಅರಿವು ಟ್ರಸ್ಟ್ ಸಾಹಿತ್ಯ ಬಳಗದಿಂದ “ಸಂಗಂ ಸಾಹಿತ್ಯ ಪುರಸ್ಕಾರ-2023”ಕ್ಕೆ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು 2021, 2022 ಮತ್ತು 2023ನೇ ಸಾಲಿನಲ್ಲಿ ಪ್ರಥಮ ಮುದ್ರಣ ಕಂಡ ಕನ್ನಡ ಕಥಾ ಸಂಕಲನಗಳನ್ನು ಮಾತ್ರ ಆಯ್ಕೆಗೆ ಕಳುಹಿಸಬಹುದು. ಪ್ರಶಸ್ತಿಯು ರೂ.25,000/- ನಗದು ಮತ್ತು ಸ್ಮರಣಿಕೆ ಒಳಗೊಂಡಿರುತ್ತದೆ. ಆಸಕ್ತ ಬರಹಗಾರರು, ಪ್ರಕಾಶಕರು ತಮ್ಮ ನೆಚ್ಚಿನ ಕೃತಿಗಳ 4 ಪ್ರತಿಗಳನ್ನು ಸ್ಪರ್ಧೆಗೆ ಕಳುಹಿಸಲು ಕೋರಿದೆ. ನಿಯಮಗಳು : • ಮರುಮುದ್ರಣಗೊಂಡ ಕೃತಿಗಳಿಗೆ, ಹಸ್ತಪ್ರತಿಗಳಿಗೆ, ಅನುವಾದಿತ ಹಾಗೂ ಸಂಪಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ. • ಈ ಮೇಲ್ಕಂಡ ವರ್ಷಗಳಲ್ಲಿ ಪ್ರಕಟಗೊಂಡ ಕಥಾ ಸಂಕಲನಗಳು 22-11-2023ರೊಳಗಾಗಿ ನಮಗೆ ತಲುಪುವಂತೆ ಕಳುಹಿಸಬೇಕು. • ಸಾಹಿತ್ಯ ಪುರಸ್ಕಾರ ಆಯ್ಕೆ ಪ್ರಕ್ರಿಯೆಯ ಕುರಿತು ಸಂಗಂ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. • ಪುಸ್ತಕಗಳನ್ನು ಈ ಕೆಳಕಂಡ ವಿಳಾಸಕ್ಕೆ ರಿಜಿಸ್ಟರ್ ಅಂಚೆಯ ಮೂಲಕ ಕಳುಹಿಸಿಕೊಡತಕ್ಕದ್ದು. • ನಿಗದಿತ ದಿನಾಂಕದೊಳಗೆ ಕಳುಹಿಸಲು ಕೋರಿದೆ. ಅವಧಿಯ ನಂತರ ಬಂದ ಕೃತಿಗಳನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಕೃತಿಗಳನ್ನು ಕಳುಹಿಸಬೇಕಾದ ವಿಳಾಸ :…

Read More

ಮುಡಿಪು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ಘಟಕ ಮತ್ತು ವಿಶ್ವಮಂಗಳ ವಿದ್ಯಾ ಸಂಸ್ಥೆ ಮಂಗಳಗಂಗೋತ್ರಿ ಆಶ್ರಯದಲ್ಲಿ ವಿಶ್ವಮಂಗಳದಲ್ಲಿ ದಿನಾಂಕ 01-11-2023ರಂದು ಕನ್ನಡ ರಾಜ್ಯೋತ್ಸವ ಮತ್ತು ವಿಶೇಷೋಪನ್ಯಾಸ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮುಡಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಲತಾ ಅಭಯ್ “ಎಲ್ಲರನ್ನು ಸಮಭಾವದಿಂದ ನೋಡುವ ಗೌರವಿಸುವ ಮನೋಭಾವ ಕನ್ನಡಿಗರದ್ದು. ಪರಧರ್ಮ, ಪರ ವಿಚಾರಗಳನ್ನೂ ಗೌರವಿಸುತ್ತಾ ಬಂದ ಸಹಿಷ್ಣು ಪರಂಪರೆ ಕನ್ನಡ ನಾಡಿನದ್ದು. ಕನ್ನಡ ಭಾಷೆ ಸಾಹಿತ್ಯದ ಕುರಿತಾದ ತಿಳುವಳಿಕೆಯನ್ನು ಹೆಚ್ಚಿಸುವ ಕಾರ್ಯಕ್ರಮಗಳು ಗ್ರಾಮಾಂತರ ಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕಿದೆ. ಈ ನಿಟ್ಟಿನಲ್ಲಿ ಉಳ್ಳಾಲದ ಕನ್ನಡ ಸಾಹಿತ್ಯ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ” ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕ ಡಾ. ಪರಮೇಶ್ವರ ವಹಿಸಿದ್ದರು. ಸಮಾರಂಭದಲ್ಲಿ ಉಳ್ಳಾಲ ಕಸಾಪ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ, ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರು, ಉಳ್ಳಾಲ ಹೋಬಳಿ…

Read More

ಮಂಗಳೂರು: ದಿನಾಂಕ 31-10-2023 ರಂದು ಮೂಡುಬಿದಿರೆಯಲ್ಲಿ ನಿಧನರಾದ ಹಿರಿಯ‌ ಸಾಧಕ ಹಾಗೂ ಸಾಮಾಜಿಕ ನೇತಾರ ಎಂ.ಆನಂದ ಆಳ್ವ ಮತ್ತು ಅದೇ ದಿನ ಸಾಯಂಕಾಲ ನಿಧನರಾದ ಯಕ್ಷಗಾನದ ಹಿರಿಯ ಹಾಸ್ಯ ದಿಗ್ಗಜ ಪೆರುವಡಿ ನಾರಾಯಣ ಭಟ್ಟರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ದಿನಾಂಕ 01-11-2023 ರಂದು ಮಂಗಳೂರಿನ ‘ಯಕ್ಷಾಂಗಣ’ದಲ್ಲಿ ನಡೆಯಿತು. “ತಮ್ಮ ಶಿಸ್ತುಬದ್ಧ ಜೀವನ ಶೈಲಿಯಿಂದಾಗಿ 2023 ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ದಿನದಂದು 106 ವಸಂತಗಳ ತುಂಬು ಬದುಕನ್ನು ಪೂರೈಸಿದ್ದ ಮಿಜಾರುಗುತ್ತು ಆನಂದ ಆಳ್ವರು ಪರಿಪೂರ್ಣ ವ್ಯಕ್ತಿತ್ವಕ್ಕೊಂದು ಶ್ರೇಷ್ಠ ಮಾದರಿ. ಶತಾಯುಷಿಗಳಾಗಿ ಆಗಲೇ ಅಮರತ್ವಕ್ಕೇರಿದ್ದ ಅವರು ಇದೀಗ ಭೌತಿಕವಾಗಿ ನಮ್ಮನ್ನಗಲಿದ್ದಾರೆ.  ಕೃಷಿ ಬದುಕಿನ ಉನ್ನತ ನಿದರ್ಶನವೂ ಸೇರಿದಂತೆ ಆಧುನಿಕ ಮೂಡಬಿದ್ರೆಯ ಶಿಲ್ಪಿ, ಕನ್ನಡ ನಾಡಿನ ಸಾಂಸ್ಕೃತಿಕ ವಕ್ತಾರ ಡಾ.ಎಂ.ಮೋಹನ ಆಳ್ವರೇ ಸ್ವಯಂ ಆನಂದ ಆಳ್ವರು ಸಮಾಜಕ್ಕೆ ಬಿಟ್ಟು ಹೋದ ದೊಡ್ಡ ಆಸ್ತಿ’. ” ಎಂದು ಯಕ್ಷಾಂಗಣ ಮಂಗಳೂರು ಇದರ ಕಾರ್ಯಾಧ್ಯಕ್ಷ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಹಾಸ್ಯರಸದ ಮೇರು ಪ್ರತಿಭೆ ಪೆರುವಡಿ:   ಅದೇ ದಿನ…

Read More

ಬಂಟ್ವಾಳ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಹಾಗೂ ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಮಕ್ಕಳ ಶಿಬಿರ ‘ಸಾಹಿತ್ಯ ಸಂಭ್ರಮ’ವು ದಿನಾಂಕ 28-10-2023 ಮತ್ತು 29-10-2023ರಂದು ಮಂಚಿ ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಈ ಮಕ್ಕಳ ಶಿಬಿರವನ್ನು ಮಂಚಿ ಕೊಲ್ನಾಡು ಸರಕಾರಿ ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ ಇವರು ಉದ್ಘಾಟಿಸಿ “ಸಾಹಿತ್ಯ, ಬರಹಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕ ಸಾಧನವಾಗಿವೆ. ವಿದ್ಯಾರ್ಥಿ ದೆಸೆಯಲ್ಲೇ ಸಾಹಿತ್ಯ ಕ್ಷೇತ್ರದಲ್ಲಿ ಒಲವು ತೋರಿಸಿದರೆ ಮುಂದಕ್ಕೆ ದೊಡ್ಡ ಸಾಧನೆ ಮಾಡಬಹುದು” ಎಂದು ಹೇಳಿದರು. ಮಕ್ಕಳ ಸಾಹಿತ್ಯ ಪರಿಷತ್ ದ.ಕ. ಜಿಲ್ಲಾಧ್ಯಕ್ಷೆ ಪರಿಮಳ ಮಹೇಶ ರಾವ್ ಮಂಗಳೂರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಯಮಿ ದೇವಿ ಪ್ರಸಾದ್ ಚೆಂಗಲ್ಪಾಡಿ, ಗೌರವ ಸಲಹೆಗಾರ ಬಾಲಕೃಷ್ಣ ಕಾರಂತ್ ಎರುಂಬು, ಶಾಲಾ ಮುಖ್ಯೋಪಾಧ್ಯಾಯ ಸುಶೀಲಾ ವಿಟ್ಲ, ಸಾಹಿತಿ ಹಾಗೂ ಪತ್ರಕರ್ತ ಜಯಾನಂದ ಪೆರಾಜೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ…

Read More

ಇರಾ : ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.), ಕುಂಡಾವು ಇರಾ, ಉಳ್ಳಾಲ ತಾಲೂಕು ಮತ್ತು ಸುವರ್ಣ ಮಹೋತ್ಸವ ಸಮಿತಿ, ಯುವಕ ಮಂಡಲ (ರಿ.) ಇರಾ ಉಳ್ಳಾಲ ತಾಲೂಕು, ದ.ಕ. – ಇವರ ಜಂಟಿ ಆಶ್ರಯದಲ್ಲಿ ‘ಕಲ್ಲಾಡಿ ವಿಠಲ ಶೆಟ್ಟಿ ಸಂಸ್ಮರಣಾ’ ಕಾರ್ಯಕ್ರಮ ದಿನಾಂಕ 29-10-2023ನೇ ಆದಿತ್ಯವಾರ ಅಪರಾಹ್ನ ಗಂಟೆ 2.00ರಿಂದ ಯಕ್ಷ ಕೈಲಾಸ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬಯಲು ರಂಗಮಂದಿರ, ಕುಂಡಾವು ಇಲ್ಲಿ ‌ನಡೆಯಿತು. ಸಂಸ್ಮರಣಾ ಕಾರ್ಯಕ್ರಮದಲ್ಲಿ ಖ್ಯಾತ ಹಿಮ್ಮೇಳ ಕಲಾವಿದರಾದ ಶ್ರೀ ಪೆರುವಾಯಿ ನಾರಾಯಣ ಭಟ್‌ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಇರಾ ಶ್ರೀ ‌ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮೋಕ್ತೇಸರರೂ, ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ (ರಿ.) ಕುಂಡಾವು ಇರಾ ಇದರ ಗೌರವ ಅಧ್ಯಕ್ಷರೂ ಆದ ಕಲ್ಲಾಡಿ ಶ್ರೀ ದೇವಿ ಪ್ರಸಾದ್ ಶೆಟ್ಟಿ, ಆಡಳಿತ ಸಮಿತಿಯ ಸದಸ್ಯರೂ, ಸುವರ್ಣ ಮಹೋತ್ಸವ ಸಮಿತಿ ಯುವಕ ಮಂಡಲ (ರಿ.) ಇರಾ ಇದರ ಪ್ರಧಾನ ಸಂಚಾಲಕರೂ ಆದ ಶ್ರೀ…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ 19ನೇ ಗೌರಮ್ಮ ದತ್ತಿನಿಧಿ ಪ್ರಶಸ್ತಿಯನ್ನು ಸಾಹಿತಿ ಕಟ್ರತನ ಲಲಿತ ಅಯ್ಯಣ್ಣ ಮತ್ತು ಈರಮಂಡ ಹರಿಣ್ ವಿಜಯ್ ಅವರಿಗೆ ದಿನಾಂಕ 27-10-2023ರ ಶುಕ್ರವಾರ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧಾ ಬಹುಮಾನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕೊಡಗು ವಿಶ್ವ ವಿದ್ಯಾನಿಲಯದ ಚಿಕ್ಕಅಳುವಾರ ಜ್ಞಾನಕಾವೇರಿ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹ್ಮದ್ ಅವರು ಮಾತನಾಡಿ “ಕತೆಗಾರ್ತಿ ಕೊಡಗಿನ ಗೌರಮ್ಮ ಅವರು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೊಡಗಿನ ಗೌರಮ್ಮ ಸ್ವಾತಂತ್ರ್ಯ ಪೂರ್ವದಲ್ಲಿ ಸಣ್ಣ ಕತೆಗಳನ್ನು ಬರೆಯುವ ಮೂಲಕ ಮಹಿಳಾ ಸಬಲೀಕರಣ, ಸಮಾಜದಲ್ಲಿ ಸಮಾನತೆ ಹೀಗೆ ಹಲವು ವಿಚಾರಗಳ ಕುರಿತು ಕನ್ನಡ ಸಾಹಿತ್ಯದಲ್ಲಿ ಬೆಳಕು ಚೆಲ್ಲಿದ್ದಾರೆ. ಬದುಕಿದ 27 ವರ್ಷದಲ್ಲಿ ಸಾಮಾಜಿಕ ಕ್ರಾಂತಿಯನ್ನೇ ಉಂಟು ಮಾಡಿದ್ದರು. ಮಹಾತ್ಮ ಗಾಂಧೀಜಿಯವರು…

Read More

ಕಾರ್ಕಳ : ಸಾಹಿತ್ಯಾಸಕ್ತರಿಗೆ ಹಾಗೂ ಓದುಗರಿಗೆ ಎಲ್ಲಾ ರೀತಿಯ ಪುಸ್ತಕಗಳು ಹಾಗೂ ಓದಿನ ಅಭಿರುಚಿಯನ್ನು ಬೆಳೆಸುವ ಮಹತ್ವಾಕಾಂಕ್ಷೆಯಿಂದ ಕಾರ್ಕಳದ ಜೋಡುರಸ್ತೆಯ ಅದಿಧನ್‌ ಎನ್‌ಕ್ಲೇವ್‌ನಲ್ಲಿ ಬೃಹತ್‌ ಪುಸ್ತಕ ಮತ್ತು ಸ್ಟೇಶನರಿ ವಸ್ತುಗಳ ಮಳಿಗೆ ‘ಪುಸ್ತಕ ಮನೆ’ ಕಾರ್ಕಳ ಕ್ರಿಯೇಟಿವ್‌ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶುಭಾರಂಭಗೊಂಡಿದೆ. ಎಲ್ಲಾ ತರಹದ ವಯೋಮಾನದ ವ್ಯಕ್ತಿಗಳಿಗೆ ಪುಸ್ತಕ ಪ್ರಿಯರಿಗೆ ರಿಯಾಯಿತಿ ದರದಲ್ಲಿ ದೊಡ್ಡ ಮಟ್ಟದ ಪುಸ್ತಕ ಸಂಗ್ರಹವಿದೆ. ಕೃತಿಗಳನ್ನು ಅಲ್ಲಿಯೇ ಓದುವ ಅವಕಾಶವನ್ನೂ ಗ್ರಂಥಾಲಯದ ರೂಪದಲ್ಲಿ ವ್ಯವಸ್ಥೆ ಮಾಡಲಾಗಿದೆ. ದೂರದ ಊರುಗಳಿಂದ ಪುಸ್ತಕಗಳನ್ನು ಅಥವಾ ಸಾಮಾಗ್ರಿಗಳನ್ನು ತರಲು ಕಷ್ಟವಾಗುವುದರಿಂದ ಕಾರ್ಕಳದಲ್ಲಿಯೇ ಒಂದು ಹೊಸ ಪರಿಕಲ್ಪನೆಯ “ಪುಸ್ತಕ ಮನೆ” ದಿನಾಂಕ  16-10-2023ರಂದು ಶಾಸಕರಾದ ಶ್ರೀ ವಿ ಸುನಿಲ್‌ ಕುಮಾರ್‌ ಇವರಿಂದ ಉದ್ಘಾಟನೆಗೊಂಡಿದೆ. ವಿಶೇಷತೆ : ಕಾರ್ಕಳ ‘ಪುಸ್ತಕ ಮನೆ’ ಕ್ರಿಯೇಟಿವ್‌ ಸಂಸ್ಥೆಯ ಸಪ್ತ ಸಂಸ್ಥಾಪಕರ ಕನಸಿನ ಕೂಸು. ಕಾರ್ಕಳದ ಆಸುಪಾಸಿನ ಸಾಹಿತ್ಯದಲ್ಲಿ ಆಸಕ್ತಿ ಹೊಂದಿರುವ ಜನರಿಗೆ ಯಾವುದೇ ಲೇಖಕರ ಕೃತಿಗಳೂ ಸುಲಭದಲ್ಲಿ ಓದಲು ಸಿಗಬೇಕು ಮತ್ತು ಮುಂದಿನ ಪೀಳಿಗೆಯ ಜನರನ್ನು…

Read More