Author: roovari

ಮೈಸೂರು : ನಟನ ಸಂಸ್ಥೆಯು ಮೈಸೂರಿನ ರಾಮಕೃಷ್ಣ ನಗರದ ನಟನ ರಂಗಶಾಲೆಯಲ್ಲಿ ಮನುಜ ರಂಗ ಟ್ರಸ್ಟ್ (ರಿ.) ಬೆಂಗಳೂರು ಆಯೋಜನೆಯಲ್ಲಿ ಶ್ರೀ ಸಾಯಿ ಕಲಾ ಯಕ್ಷ ಬಳಗ ಮತ್ತು ಡಾ. ಕೆ. ಶಿವರಾಮ ಕಾರಂತ ಬಾಲವನ ಪುತ್ತೂರು ಮಹಿಳಾ ಯಕ್ಷಗಾನ ಮೇಳದವರಿಂದ ಪ್ರಪ್ರಥಮ ಬಾರಿಗೆ ಮೈಸೂರಿನಲ್ಲಿ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರಸಂಗವು ಪ್ರದರ್ಶನಗೊಳ್ಳಲಿದೆ. ನಮ್ಮೊಂದಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಡಿಕೆ ಮತ್ತು ಕೆಜೆಎಸ್ ಅಧ್ಯಕ್ಷ ಗ್ರೇಶಿಯಸ್ ರೋಡ್ರಿಗಸ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್, ನಟನದ ಸಂಸ್ಥಾಪಕ ಮಂಡ್ಯ ರಮೇಶ್ ಪಾಲ್ಗೊಳ್ಳುವರು. ಹೆಚ್ಚಿನ ಮಾಹಿತಿಗೆ 93804 86553, 72595 3777 ಸಂಪರ್ಕಿಸಬಹುದು.

Read More

ಬೆಂಗಳೂರು : ಕರ್ನಾಟಕ ಸುಗಮ ಸಂಗೀತ ಪರಿಷತ್ತು (ರಿ.) ಬೆಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ‘ಗೀತೋತ್ಸವ -2025’ 19ನೇ ರಾಜ್ಯಮಟ್ಟದ ಸುಗಮ ಸಂಗೀತ ಸಮ್ಮೇಳನವನ್ನು ದಿನಾಂಕ 02 ಮತ್ತು 03 ಆಗಸ್ಟ್ 2025ರಂದು ಮೈಸೂರಿನ ಕಲಾ ಮಂದಿರದಲ್ಲಿ ಆಯೋಜಿಸಲಾಗಿದೆ. ದಿನಾಂಕ 02 ಆಗಸ್ಟ್ 2025ರಂದು ಬೆಳಗ್ಗೆ 9-30 ಗಂಟೆಗೆ ಕಾವ್ಯ ದಿಬ್ಬಣದಲ್ಲಿ ಸಮ್ಮೇಳನಾಧ್ಯಕ್ಷರು ಹಾಗೂ ಸಾಹಿತಿ ಕಲಾವಿದರ ಮೆರವಣಿಗೆ ನಡೆಯಲಿದೆ. 10-00 ಗಂಟೆಗೆ ಮಾನ್ಯ ಸಚಿವರಾದ ಡಾ. ಹೆಚ್.ಪಿ. ಮಹದೇವಪ್ಪ ಇವರಿಂದ ಈ ಸಮ್ಮೇಳನ ಉದ್ಘಾಟನೆಗೊಳ್ಳಲಿದ್ದು, ವೈ.ಕೆ. ಮುದ್ದುಕೃಷ್ಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀಯುತ ನಗರ ಶ್ರೀನಿವಾಸ ಉಡುಪ ಇವರು ಸಮ್ಮೇಳನಾಧ್ಯಕ್ಷರ ಅಧಿಕಾರ ಸ್ವೀಕಾರ ಮಾಡಲಿದ್ದು, ಎನ್.ಎಸ್. ಪ್ರಸಾದ್ ಇವರು ಧ್ವಜ ಹಸ್ತಾಂತರ ಮಾಡಲಿದ್ದಾರೆ. ಹಿರಿಯ ಕವಿ ಗೀತ ಸಂಗಮ ಕೃತಿ ಬಿಡುಗಡೆ ಮಾಡಲಿದ್ದು, ಇದೇ ಸಂದರ್ಭದಲ್ಲಿ ‘ಕಾವ್ಯಶ್ರೀ ಪ್ರಶಸ್ತಿ’ ಮತ್ತು ‘ಭಾವಶ್ರೀ ಪ್ರಶಸ್ತಿ’ಗಳನ್ನು ಪ್ರದಾನ ಮಾಡಲಾಗುವುದು. 12-00 ಗಂಟೆಯಿಂದ ‘ಭಾವ ಕುಸುಮ’ ಮತ್ತು ‘ಭಾವಾಂಜಲಿ’…

Read More

ಕಾಸರಗೋಡು: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಸಂಪಾಜೆ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ವತಿಯಿಂದ ನಡೆದ ಯಕ್ಷಗಾನ ತಾಳಮದ್ದಳೆ ದಶಾಹದ ಸಮಾರೋಪ ಸಮಾರಂಭ ದಿನಾಂಕ 27 ಜುಲೈ 2025ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಎಲ್. ಧರ್ಮ ಮಾತನಾಡಿ “ಕರಾವಳಿಯ ಗಂಡುಮೆಟ್ಟಿದ ಕಲೆ ಯಕ್ಷಗಾನ ಮನರಂಜನೆ ಜತೆಗೆ ಕಲಾವಿದರಿಗೆ ಜೀವನ ಕಟ್ಟಿಕೊಟ್ಟ ಕಲಾ ಪ್ರಾಕಾರವಾಗಿದೆ” ಎಂದು ಹೇಳಿದರು. ಕರ್ನಾಟಕ ಸರ್ಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉದ್ಯಮಿ ಕೆ. ಕೆ. ಶೆಟ್ಟಿ, ಜ್ಯೋತಿಷಿ ಪದ್ಮನಾಭ ಎಲ್. ಶರ್ಮ ಇರಿಞಾಲಕುಡ ಅತಿಥಿಯಾಗಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಬಡಗುತಿಟ್ಟಿನ ಹಿರಿಯ ಭಾಗವತ ಕೊಳಗಿ ಕೇಶವ ಹೆಗಡೆ ಅವರನ್ನು ಸ್ವಾಮೀಜಿ ಸನ್ಮಾನಿಸಿದರು. ಕಲಾವಿದ ವಾಸುದೇವ ರಂಗ ಭಟ್ಟ ಅವರನ್ನು ಸ್ವಾಮೀಜಿ ಆಶೀರ್ವದಿಸಿದರು. ಶ್ರೀಮಠದ ವ ಪ್ರಬಂಧಕ ರಾಜೇಂದ್ರ ಕಲ್ಲೂರಾಯ ಸ್ವಾಗತಿಸಿ, ಪ್ರತಿಷ್ಠಾನದ…

Read More

ಮಡಿಕೇರಿ : ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾದ ಡಾ. ಕೆ.ಬಿ. ಸೂರ್ಯಕುಮಾರ್ ಇವರನ್ನು ದಿನಾಂಕ 30 ಜುಲೈ 2025ರಂದು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ವೈದ್ಯ ಬರಹಗಾರರ ಸಂಘದ ವತಿಯಿಂದ ಕರ್ನಾಟಕ ರಾಜ್ಯದ ವೈದ್ಯರ ಶ್ರೇಷ್ಠ ಪುಸ್ತಕಗಳಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಮಡಿಕೇರಿಯ ಖ್ಯಾತ ವೈದ್ಯರಾದ ಡಾ. ಕೆ.ಬಿ. ಸೂರ್ಯಕುಮಾರ್ ಇವರು ಬರೆದು, ಹರಿವು ಪ್ರಕಾಶನದವರು ಪ್ರಕಟಿಸಿರುವ ‘ಮಂಗಳಿ’ – ತೃತೀಯ ಲಿಂಗಿಗಳ ಜೀವನ ಆಧಾರಿತ ಒಂದು ಕಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಪ್ರಮುಖರು ಹಾಗೂ ಪದಾಧಿಕಾರಿಗಳು ನಗರದಲ್ಲಿರುವ ಡಾ. ಸೂರ್ಯಕುಮಾ‌ರ್ ಅವರ ಕ್ಲಿನಿಕ್ ನಲ್ಲಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಮಾತನಾಡಿದ ಕೊಡಗು ಕನ್ನಡ ಭವನದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, “ಕೊಡಗಿನಲ್ಲಿ ಹುಟ್ಟಿ, ಬೆಳೆದ ಡಾ. ಕೆ.ಬಿ. ಸೂರ್ಯಕುಮಾ‌ರ್ ವೃತ್ತಿಯಲ್ಲಿ ವೈದ್ಯರಾದರೂ ಪ್ರವೃತ್ತಿಯಲ್ಲಿ…

Read More

ಮಂಗಳೂರು : ಸ್ಥಳೀಯ ಲೆಕ್ಕಪತ್ರ ಪರಿಶೋಧಕ ಎಸ್.ಎಸ್. ನಾಯಕ್ ಅವರ ಕಛೇರಿ ಸಭಾಭವನದಲ್ಲಿ ನಿವೃತ್ತ ಅರಣ್ಯಧಿಕಾರಿ ಲಕ್ಷ್ಮಣ ಮೂರ್ತಿಯವರು ಬರೆದ ‘ರಾಣಿ ಅಬ್ಬಕ್ಕದೇವಿ ಜತೆ ಪಯಣ’ ಕೃತಿಯ ಏಳನೇ ಮುದ್ರಣದ ಲೋಕಾರ್ಪಣೆಯು ದಿನಾಂಕ 30 ಜುಲೈ 2025ರಂದು ವಿಜೃಂಭಣೆಯಿಂದ ನಡೆಯಿತು. ಸಿ.ಎ. ಎಸ್.ಎಸ್. ನಾಯಕ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದ ಈ ಕಾರ್ಯಕ್ರಮವನ್ನು ದೇಶ ವಿದೇಶ ಖ್ಯಾತಿಯ ಸಿ.ಎ. ಗೋಕುಲದಾಸ ಪೈ ಉದ್ಘಾಟಿಸಿ “ನಮ್ಮ‌ ನೆರೆಯವರೇ ಆದ ಸಾಧರನ್ನು ನಾವು ಅರಿತಿರುವುದಿಲ್ಲ. ಬದಲಾಗಿ ದೂರದ ವಿದೇಶೀಯವರ ಸುದೀರ್ಘ ಅಧ್ಯಯನ‌ ಮಾಡುತ್ತೇವೆ. ಈ ಸಂಕಲನವು ನಮ್ಮ ನಾಡಿನ‌ ಪ್ರಥಮ ಸಾಹಸಿ ಮಹಿಳೆಯ ವ್ಯಕ್ತಿ ಚಿತ್ರಣ ಅಧ್ಯಯನ ಯೋಗ್ಯ” ಎಂದು ಹೇಳಿದರು.‌ ಅನಂತರ ಎಸ್.ಎಸ್. ನಾಯಕರು ಲಕ್ಷ್ಮಣ ಮೂರ್ತಿಯವರ ನಿವೃತ್ತಿಯ ನಂತರದ ಪ್ರವೃತ್ತಿಯ ಓಘವನ್ನು ವರ್ಣಿಸುತ್ತಾ ಸುಭಾಶಿತ ಹಾಗೂ ಸ್ವರಚಿತ ಚುಟುಕು ಸಹಿತ ಗುಣಗಾನ‌ ಮಾಡಿದರು. ಇನ್ನೋರ್ವ ಮುಖ್ಯ ಅತಿಥಿ ಡಾ. ರಾಜೇಶ ನಾಯಕ್ ರವರು ಅಬ್ಬಕ್ಕನ ಪ್ರಾಮುಖ್ಯತೆಯನ್ನು ಸವಿವರವಾಗಿ ವರ್ಣಿಸಿದರು. ಲೇಖಕ ಕೆ.ವಿ. ಲಕ್ಷ್ಮಣ…

Read More

ಬೆಂಗಳೂರು : ನವದೆಹಲಿಯ ಸಂಸ್ಕೃತಿ ಸಚಿವಾಲಯದ ಸಹಕಾರದೊಂದಿಗೆ ‘ಪದ’ ಪ್ರಸ್ತುತ ಪಡಿಸುವ ಮೂರು ದಿನಗಳ ಪೌರಾಣಿಕ ರಂಗೋತ್ಸವ ಕಾರ್ಯಕ್ರಮವು ದಿನಾಂಕ 05ರಿಂದ 07 ಆಗಸ್ಟ್ 2025ರವರೆಗೆ ನಡೆಯಲಿದೆ. ದಿನಾಂಕ 05 ಆಗಸ್ಟ್ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ, ರವೀಂದ್ರ ಕಲಾ ಕ್ಷೇತ್ರದ ನಯನ ರಂಗಮಂದಿರದಲ್ಲಿ ಈ ಕಾರ್ಯಕ್ರಮವನ್ನು ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ ಇವರು ಉದ್ಘಾಟನೆ ಮಾಡಲಿದ್ದು, ಕೆ.ಎ. ದಯಾನಂದ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಮತ್ತು ಪದ್ಮಶ್ರೀ ಪುರಸ್ಕೃತ ಹಾಸನ ರಘು ಇವರಿಗೆ ‘ಪದ ಗೌರವ’ ನೀಡಿ ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಡಾ. ಎಸ್.ಎಲ್.ಎನ್. ಸ್ವಾಮಿ ಇವರ ನಿರ್ದೇಶನದಲ್ಲಿ ಗೋಕುಲ ಸಹೃದಯ ಅಭಿನಯದ ‘ಪಂಚಗವ್ಯ’ ನಾಟಕ ಪ್ರದರ್ಶನ ನಡೆಯಲಿದೆ. ದಿನಾಂಕ 06 ಆಗಸ್ಟ್ 2025ರಂದು ಸಂಜೆ 4-30 ಗಂಟೆಗೆ ಬೆಂಗಳೂರಿನ ಮತ್ತಲ್ಲಹಳ್ಳಿ ಸಮುಚ್ಚಯ ಭವನ ಕಲಾಗ್ರಾಮದಲ್ಲಿ ಬಿ. ಪುಟ್ಟಸ್ವಾಮಯ್ಯ ಇವರು ರಚಿಸಿರುವ ಟಿ. ಮಂಜುನಾಥ್…

Read More

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀಯುತ ತಾರಾನಾಥ್ ಗಟ್ಟಿಯವರ ನೇತೃತ್ವದಲ್ಲಿ ಅಕಾಡೆಮಿಯ ಸದಸ್ಯರ ಸಹಕಾರದೊಂದಿಗೆ ತುಳು ಭಾಷೆ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಾ ಬಂದಿವೆ . ಕಾಲೇಜು ವಿದ್ಯಾರ್ಥಿಗಳಿಗೆ ತುಳು ನಾಟಕ ಕಾರ್ಯಗಾರ ನಡೆಸಿ, ಅಲ್ಲಿ ತರಬೇತುಗೊಂಡ ವಿದ್ಯಾರ್ಥಿಗಳಿಂದ ಆ ನಾಟಕವನ್ನು ಬೇರೆ ಬೇರೆ ವೇದಿಕೆಗಳಲ್ಲಿ ಪ್ರದರ್ಶನ ಮಾಡುವ ಕಾರ್ಯಕ್ರವೂ ಇದರಲ್ಲಿ ಒಂದು. ಸರಕಾರಿ ಪದವಿ ಪೂರ್ವ ಹೆಣ್ಮಕ್ಕಳ ಕಾಲೇಜು ಬಲ್ಮಠದಲ್ಲಿ ಅಬ್ಬರವಿಲ್ಲದ, ಸರಳವಾದ, ಸುಂದರ ನಾಟಕವೊಂದು ಪ್ರದರ್ಶನಗೊಂಡಿತು. ಅಮೃತ ಕಾಲೇಜು ಪಡೀಲ್, ಮಂಗಳೂರು ಇಲ್ಲಿಯ ವಿದ್ಯಾರ್ಥಿಗಳು ಶ್ರೀ ಜಗನ್ ಪವಾರ್ ಬೇಕಲ್ ಇವರ ಅದ್ಭುತ ನಿರ್ದೇಶನದಲ್ಲಿ ರಂಗದ ಮೇಲೆ ಪ್ರದರ್ಶಿಸಿದ ನಾಟಕ “ಪಗಪು”. ಇದು ಪ್ರಥಮ ಪ್ರದರ್ಶನ. ಇನ್ನು ಬೇರೆ ಬೇರೆ ವೇದಿಕೆಗಳಲ್ಲಿ ಈ ನಾಟಕ ಪ್ರದರ್ಶನಗೊಳ್ಳಲಿದೆ. ಶಾಲಾ-ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸೌಹಾರ್ದ ಸಂಸ್ಕೃತಿಯನ್ನು ಹಾಗೂ ನಾಟಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾಟಕದ ಬಗ್ಗೆ ಆಸಕ್ತಿ ಮೂಡಿಸಲು ಹಮ್ಮಿಕೊಂಡ ಕಾರ್ಯಕ್ರಮ ಇದು. “ಪಗಪು” ನಾಟಕದಲ್ಲಿ ಎಲ್ಲಾ…

Read More

ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇವರ ವತಿಯಿಂದ ಮತ್ತು ನಾಟ್ಕ ಬೆಂಗಳೂರು ಇವರ ಸಹಕಾರದೊಂದಿಗೆ ‘ರಂಗಸಂವಾದ -07’ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ, ಕರ್ನಾಟಕ ನಾಟಕ ಅಕಾಡೆಮಿ ಕಛೇರಿ ಆವರಣದ ರಂಗಚಾವಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ರಂಗಕರ್ಮಿಗಳು ಹಾಗೂ ಕಲಾ ನಿರ್ದೇಶಕರಾದ ಶಶಿಧರ್ ಅಡಪ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದು, ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಡಾ. ಕೆ.ವಿ. ನಾಗರಾಜಮೂರ್ತಿ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

Read More

ಮಣಿಪಾಲ : ಹೆಜ್ಜೆ ಗೆಜ್ಜೆ ಫೌಂಡೇಶನ್ (ರಿ.) ಉಡುಪಿ-ಮಣಿಪಾಲ್ ಅರ್ಪಿಸುವ ‘ನೃತ್ಯವಾಹಿನಿ -5’ ಶಾಸ್ತ್ರೀಯ ನೃತ್ಯ ಸರಣಿ ಕಾರ್ಯಕ್ರಮವು ದಿನಾಂಕ 03 ಆಗಸ್ಟ್ 2025ರಂದು ಸಂಜೆ 6-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಹತ್ತಿರ ಇರುವ ಹೆಜ್ಜೆ ಗೆಜ್ಜೆ ನೃತ್ಯ ಸ್ಟುಡಿಯೋದಲ್ಲಿ ನಡೆಯಲಿದೆ. ವೀಣಾ ವಿನೋದಿನಿ ಮತ್ತು ವಿದುಷಿ ಪವನ ಬಿ. ಆಚಾರ್ ಮಣಿಪಾಲ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದುಷಿ ರಾಧಿಕಾ ಶೆಟ್ಟಿ ಇವರ ಶಿಷ್ಯೆ ಕುಮಾರಿ ಅದಿತಿ ಲಕ್ಷ್ಮಿ ಭಟ್ ಮಂಗಳೂರು ಇವರು ಭರತನಾಟ್ಯ ಪ್ರದರ್ಶನ ನೀಡಲಿದ್ದಾರೆ.

Read More

ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಶಾರದಾ ವಿದ್ಯಾಲಯ ಜಂಟಿ ಆಶ್ರಯದಲ್ಲಿ 111ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ದಿನಾಂಕ 31 ಜುಲೈ 2025ರಂದು ಶಾರದಾ ವಿದ್ಯಾಲಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾರದಾ ವಿದ್ಯಾಲಯ ಇಲ್ಲಿನ ಚೇರ್ಮೆನ್ ಡಾ. ಎಂ. ಬಿ. ಪುರಾಣಿಕ್ ಮಾತನಾಡಿ “ಸಾಹಿತ್ಯ ಕಾರ್ಯಕ್ರಮಗಳು ನಿರಂತರ ನಡೆಯಬೇಕು .ವಿದ್ಯಾರ್ಥಿಗಳು ಪತ್ರಿಕೆ ಓದುವ, ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ವಿದ್ಯಾಲಯ ಪ್ರಾಂಶುಪಾಲರಾದ ಚಂದ್ರಿಕಾ ಭಂಡಾರಿ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲರಾದ ಪ್ರೊಫೆಸರ್ ಕೃಷ್ಣ ಮೂರ್ತಿ, ನಿವೃತ್ತ ಕನ್ನಡ ಉಪನ್ಯಾಸಕಿ ಸುಮನ ಜಿ., ಹಿರಿಯ ವಿಜಯವಾಣಿ ದೈನಿಕ ವರದಿಗಾರರಾದ ಹರೀಶ್ ಮೋಟುಕಾನ, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ,ದಯಾನಂದ ಕಟೀಲು, ವೇದಿಕೆಯಲ್ಲಿ ಉಪಸ್ಥಿರಿದರು . ಮಾಲತಿ ಶೆಟ್ಟಿ ಮಾಣೂರು ಸ್ವಾಗತಿಸಿ, ಎನ್. ಸುಬ್ರಾಯ ಭಟ್ ಕಾರ್ಯಕ್ರಮ ನಿರೂಪಿಸಿ,…

Read More