Author: roovari

ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮವು 17 ಆಗಸ್ಟ್2024ರಂದು ಕರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಆಗಮಿಸಿದ ವೇದಾಂತ ಹಾಗೂ ಯೋಗ ಪ್ರವೀಣರಾದ ಡಾ. ಶಶಾಂಕ ಹತ್ವಾರ್ ‘ಮುಂಡಕ ಉಪನಿಷತ್ತು’ ಇದರ ಕುರಿತು ಮಾತನಾಡಿ “ವೇದಜ್ಞಾನದ ಮೂಲ ಸಂಸ್ಕಾರವು ತಂದೆಯಿಂದ ಮಕ್ಕಳಿಗೆ ನಂತರ ಹೆಚ್ಚಿನ ಜ್ಞಾನವು ಗುರುಗಳಿಂದ ಶಿಷ್ಯರಿಗೆ ಪಾರಂಪರಿಕವಾಗಿ ದೊರೆಯುವ ವಿದ್ಯೆಯಾಗಿದೆ. ಮುಂಡಕವು ಜ್ಞಾನಕ್ಕೆ ಸಂಬಂಧಿಸಿದ ಉಪನಿಷತ್ತು ಆಗಿದ್ದು ಇದನ್ನು ಸಂಹಿತಾ ಉಪನಿಷತ್ತು ಎಂಬುದಾಗಿಯೂ ಕರೆಯಲಾಗುತ್ತಿದೆ. ಯಾವುದನ್ನು ತಿಳಿದುಕೊಂಡಾಗ ಎಲ್ಲವನ್ನೂ ತಿಳಿದುಕೊಂಡಂತಾಗುವುದೋ ಅದನ್ನೇ ಪರಾ ವಿದ್ಯೆ, ಬ್ರಹ್ಮಜ್ಞಾನ, ಮೋಕ್ಷ ಎನ್ನಲಾಗುತ್ತದೆ. ನಮ್ಮೊಳಗೆ ಪ್ರತಿಯೊಬ್ಬರಲ್ಲಿಯೂ ಭಗವಂತನ ವಿಶೇಷ ಚೇತನವಿದ್ದು ಸಾಧನೆಯಿಂದ ಆ ಚೈತನ್ಯ ಸ್ವರೂಪದ ಅರಿವಾಗುತ್ತದೆ. ಲೌಕಿಕದಲ್ಲಿದ್ದುಕೊಂಡೇ ಈ ಬ್ರಹ್ಮ ಜ್ಞಾನವನ್ನು ಹೊಂದಬಹುದಾಗಿದೆ. ವೇದಾಂತವು ಸ್ವಂತ ಅಧ್ಯಯನದಿಂದ ಕಲಿಯುವ ವಿದ್ಯೆಯಾಗಿದೆ. ಇದು…

Read More

ಉಡುಪಿ : ಛಾಯಾಚಿತ್ರ ಕಲಾವಿದ ಮುರಳೀಧರ್ ಭಟ್ ಕೊಡವೂರು ಇವರಿಗೆ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ “ವಿಪ್ರ ಛಾಯಾ ಸಾಧಕ ಪ್ರಶಸ್ತಿ”ಪ್ರದಾನ ಸಮಾರಂಭವು 18 ಆಗಸ್ಟ್ 2024 ರಂದು ವಿಪ್ರಶ್ರೀ ಕಲಾ ಭವನ, ಕೊಡವೂರು ಇಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಶ್ರೀನಿವಾಸ ತೋಡತ್ತಿಲ್ಲಾಯ, ಸುಬ್ರಹ್ಮಣ್ಯ ಉಪಾಧ್ಯಾಯ, ವಿಪ್ರ ಸೇನಾನಿ ಶ್ರೀ ಗಣೇಶ್ ಅಡಿಗ, ದಿನಕರ ರಾವ್, ಸಂಘದ ಅಧ್ಯಕ್ಷ ಸುರೇಂದ್ರ ಉಪಾಧ್ಯಾಯ, ಗೌರವಾಧ್ಯಕ್ಷರುಗಳಾದ ಗೋವಿಂದ ಐತಾಳ್, ಗುರುರಾಜ್ ರಾವ್, ಕಾರ್ಯದರ್ಶಿ ಪ್ರವೀಣ್ ಬಲ್ಲಾಳ್ , ಕೋಶಾಧಿಕಾರಿ ಚಂದ್ರಶೇಖರ್ ರಾವ್ ಜೊತೆ ಕೋಶಾಧಿಕಾರಿ ಶ್ರೀಧರ ಶರ್ಮ ಹಾಗೂ ಕಲ್ಪನಾ ಭಟ್ ಉಪಸ್ಥಿತರಿದ್ದರು.

Read More

ಮಂಗಳೂರು : ಜನತಾ ಬಜಾರಿನಲ್ಲಿ ತುಳುಕೂಟದ ನೂತನ ಕಟ್ಟಡ ಕೂಟ ಚಾವಡಿಯ ಉದ್ಘಾಟನಾ ಸಮಾರಂಭವು ದಿನಾಂಕ 18 ಆಗಸ್ಟ್ 2024ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಾನಗರ ಪಾಲಿಕೆಯ ನಾಮ ನಿರ್ದೇಶಿತ ಸದಸ್ಯ ಹೇಮಂತ್ ಗರೋಡಿಯವರು ಮಾತನಾಡಿ  “ತುಳು ಭಾಷಾ ಬೆಳವಣಿಗೆಗೆ ನಾವು ಅಗತ್ಯ ಪ್ರಯತ್ನ ಪಡಬೇಕಾಗಿದೆ. ಅಂತೆಯೇ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಲು ನಾವು ಮಕ್ಕಳಲ್ಲಿ ತುಳುಕಲಿಕಾ ಸ್ಪೂರ್ತಿಯನ್ನೂ ವೃದ್ಧಿಸಬೇಕಾಗಿದೆ. ಹಾಗಾಗಿ ತುಳುಕೂಟದ ಈ ನೂತನ ಕಟ್ಟಡ ಕೂಟ ಚಾವಡಿ ನಿರಂತರ ಕಲಿಕಾ ಕೇಂದ್ರವಾಗಲಿ” ಎಂದು ಹೇಳಿದರು. ಲೇಖಕಿ – ವಾಗ್ಮಿ, ನಿವೃತ್ತ ಶಿಕ್ಷಕಿ ಕೆ.ಎ. ರೋಹಿಣಿಯವರು “ಮಹಿಳೆಯರು ಕೂಡಾ ತುಳು ಸಾಂಸ್ಕೃತಿಯ ಬಗ್ಗೆ ಎಳೆಯರಿಗೆ ತಿಳಿ ಹೇಳುತ್ತಾ, ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿದರೆ ತುಳು ಕೂಟದ ಉದ್ದೇಶ ಸಾರ್ಥಕವಾಗುತ್ತದೆ.” ಎಂದು ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಸಭಾಧ್ಯಕ್ಷತೆಯನ್ನು ತುಳು ಕೂಟದ ಅಧ್ಯಕ್ಷರಾದ ಮರೋಳಿ ಬಿ. ದಾಮೋದರ ನಿಸರ್ಗ ಇವರು ವಹಿಸಿದ್ದರು. ಚಂದ್ರಶೇಖರ ಸುವರ್ಣ, ನಾರಾಯಣ ಬಿ.ಡಿ., ಹೇಮಾ ನಿಸರ್ಗ, ಪಿ.…

Read More

ಬೆಂಗಳೂರಿನ ‘ಸಾಧನಾ ಡ್ಯಾನ್ಸ್ ಸೆಂಟರ್’ ನೃತ್ಯಶಾಲೆಯ ಹೆಸರಾಂತ ನೃತ್ಯಗುರು ಭಾವನಾ ವೆಂಕಟೇಶ್ವರ ಬದ್ಧತೆ ಮತ್ತು ಪ್ರಯೋಗಶೀಲತೆಗಳಿಗೆ ಹೆಸರಾದವರು. ಸುಮಾರು ಎರಡು ದಶಕಗಳಿಗೂ ಹೆಚ್ಚಿನ ನೃತ್ಯಾನುಭವವುಳ್ಳ ಇವರು ನೃತ್ಯಾಕಾಂಕ್ಷಿಗಳಿಗೆ ಉತ್ತಮ ವಿದ್ಯೆಯನ್ನು ಧಾರೆಯೆರೆಯುತ್ತ ಭರವಸೆಯ ಕಲಾವಿದೆಯರನ್ನು ರೂಪಿಸುವ ನಿಟ್ಟಿನಲ್ಲಿ ನಿರಂತರ ಶ್ರಮಿಸುತ್ತ ಬಂದಿದ್ದಾರೆ. ಗುರು ಭಾವನಾ ಅವರ ನುರಿತ ಗರಡಿಯಲ್ಲಿ ರೂಹು ತಳೆದ ನೃತ್ಯಶಿಲ್ಪ ಧೃತಿ ರಾಮಚಂದ್ರ ಬಹು ಆಸಕ್ತಿಯಿಂದ ಭರತನಾಟ್ಯವನ್ನು ಕಳೆದ ಒಂದು ದಶಕದಿಂದ ಕಲಿಯುತ್ತಿದ್ದಾರೆ. ಶ್ರೀಮತಿ ಕೆ. ಆರ್. ಧನುಜಾ ಮತ್ತು ಎನ್. ರಾಮಚಂದ್ರ ಅವರ ಪುತ್ರಿಯಾದ ಧೃತಿ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲೂ ಪರಿಶ್ರಮ ಹೊಂದಿದ್ದು, ಬಹುಮುಖ ಪ್ರತಿಭೆಯಾಗಿ ನಾಡಿನಾದ್ಯಂತ ತನ್ನ ನೃತ್ಯಪ್ರದರ್ಶನಗಳನ್ನು ನೀಡಿದ್ದಾಳೆ. ನೃತ್ಯದ ಹಲವು ಆಯಾಮಗಳನ್ನು ಅಭ್ಯಸಿಸುತ್ತಿರುವ ಧೃತಿ, ತನ್ನ ಪ್ರತಿಭಾ ಪ್ರದರ್ಶನಕ್ಕಾಗಿ 23 ಆಗಸ್ಟ್ 2024ರ ಶುಕ್ರವಾರದಂದು ಸಂಜೆ 5.30 ಕ್ಕೆ ಜಯನಗರದ ‘ವಿವೇಕ ಯುವಪಥ’ ಆಡಿಟೋರಿಯಂ ನಲ್ಲಿ ವಿಧ್ಯುಕ್ತವಾಗಿ ತನ್ನ ರಂಗಪ್ರವೇಶವನ್ನು ನೆರವೇರಿಸಿಕೊಳ್ಳಲಿದ್ದಾರೆ. ಅವರ ಸೊಬಗಿನ ನೃತ್ಯ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಎಲ್ಲ ಕಲಾರಸಿಕರಿಗೂ ಆದರದ…

Read More

ಧಾರವಾಡ : ಆರು ದಶಕಗಳ ಕಾಲ ಸಂಗೀತ-ನೃತ್ಯ-ಸಾಂಸ್ಕೃತಿಕ ಲೋಕದಲ್ಲಿ ಕಲಾವಿದರು ಹಾಗೂ ಶ್ರೋತೃವರ್ಗದ ಕೊಂಡಿಯಾದವರು ಅನಂತ ಹರಿಹರ ಇವರು. ಅನೇಕ ಯುವ ಕಲಾವಿದರಿಗೆ ಸ್ಫೂರ್ತಿಯನ್ನು ತುಂಬಿದವರು, ವೇದಿಕೆಗಳನ್ನೊದಗಿಸಿದ ಯಶಸ್ವಿ ಸಂಘಟಕ, ಸಂಸ್ಕೃತಿಯ ರಾಯಭಾರಿಯಾಗಿ ಎಲ್ಲರ ಮನದಲ್ಲಿ ವಿಶೇಷ ಛಾಪನ್ನು ಮೂಡಿಸಿದವರು ‘ಧಾರವಾಡ ಸಂಗೀತ’ದ ಪರಿಚಾರಕ ಅನಂತ ಹರಿಹರರಾಗಿದ್ದಾರೆ. ಇವರಿಗೆ ಧಾರವಾಡದ ಯುವ-ಪ್ರಬುದ್ಧ ಕಲಾವಿದರು ಮೂರು ದಿನ ನಡೆಯುವ ಸಂಗೀತೋತ್ಸವದ ಮೂಲಕ ನಮನ ಸಲ್ಲಿಸಲಿದ್ದಾರೆ. ಧಾರವಾಡದ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕೇಂದ್ರ ಮಂತ್ರಿ ಪ್ರಹ್ಲಾದ ಜೋಶಿ ಪ್ರೇರಿತ ಹುಬ್ಬಳ್ಳಿಯ ಕ್ಷಮತಾ ಸಂಸ್ಥೆಗಳ ಜಂಟಿಯಾಗಿ ‘ಅನಂತ ಸ್ವರ ನಮನ’ ಮೂರು ದಿನಗಳ ಈ ಸಂಗೀತೋತ್ಸವವನ್ನು ಆಯೋಜಿಸಿವೆ. ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ದಿನಾಂಕ 23-08-2024ರಿಂದ 25-08-2024ರವರೆಗೆ ಪ್ರತಿದಿನ ಸಂಜೆ ಗಾಯನ-ವಾದನಗಳ ನಿನಾದ ರಿಂಗಣಿಸಲಿದೆ. ಈ ಸಂಗೀತೋತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ, ಬೆಂಗಳೂರಿನ ನಿತೀನ ಢವಳೆ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಕರ್ನಾಟಕ ಬ್ಯಾಂಕ್ ಹಾಗೂ ಕ್ಯಾನರಾ…

Read More

ಮಂಗಳೂರು : ಕೆನರಾ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 13 ಆಗಸ್ಟ್ 2024ರಂದು ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ವಿನಮ್ರ ಇಡ್ಕಿದು ಹಾಡಿದ ಕಯ್ಯಾರ ಕಿಞ್ಞಣ್ಣ ರೈಯವರ ಬಹಳ ಪ್ರಸಿದ್ಧ ಗೀತೆ ‘ಏರುತಿಹುದು ಹಾರುತಿಹುದು ನೋಡು ನಮ್ಮ ಬಾವುಟ….’ ಎಂಬ ದೇಶಭಕ್ತಿ ಗೀತೆಯನ್ನು ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎಂ. ರಂಗನಾಥ ಭಟ್ ಇವರು ಬಿಡುಗಡೆಗೊಳಿಸಿದರು. ಅವರು ಮಾತನಾಡಿ “ಕಯ್ಯಾರ ಕಿಞ್ಞಣ್ಣ ರೈ ನಮ್ಮ ನಾಡಿನ ಹೆಮ್ಮೆಯ ಕವಿ. ನಾಡಿನ ಬಗ್ಗೆ ದೇಶದ ಬಗ್ಗೆ ಅಪಾರ ಕಾಳಜಿ ಇದ್ದ ಕವಿ. ಇಂತಹ ಕವಿಯ ದೇಶಭಕ್ತಿ ಗೀತೆಯ ರಚನೆಗಳನ್ನು ಮತ್ತೆ ಮತ್ತೆ ಹೊಸ ಹೊಸ ರೂಪಗಳಲ್ಲಿ ಹಾಡುತ್ತಾ ದೇಶಭಕ್ತಿಯ ಸಂಚಲನವನ್ನು ಉಂಟುಮಾಡುವುದು ಶ್ಲಾಘನೀಯ ಕೆಲಸ. ಇದನ್ನು ನಮ್ಮ ವಿದ್ಯಾರ್ಥಿ ವಿನಮ್ರ ಇಡ್ಕಿದು ಮಾಡಿದ್ದಾನೆ ಎನ್ನುವುದು ಅಭಿಮಾನದ ಸಂಗತಿ” ಎಂದು ನುಡಿದರು. ‘ಏರೊಂದುಂಡು ರಾವೊಂದುಂಡು….’ ತುಳು ದೇಶಭಕ್ತಿ ಗೀತೆಯನ್ನು ಕೆನರಾ ಪಿ.ಯು. ಕಾಲೇಜಿನ ಸಂಚಾಲಕರಾದ ಟಿ. ಗೋಪಾಲಕೃಷ್ಣ ಶೆಣೈಯವರು ಬಿಡುಗಡೆಗೊಳಿಸಿದರು. ಅವರು…

Read More

ಬೆಂಗಳೂರು : ‘ಕಲ್ಲಚ್ಚು ಪ್ರಕಾಶನ’ ಇದರ ವತಿಯಿಂದ ಮೋಹನ್ ದಾಸ್ ಕೆ.ಎಸ್. ಇವರ ‘ಚಿದಂಬರ’ ಕವನ ಸಂಕಲನ ಬಿಡುಗಡೆ ಮತ್ತು 2024ರ ಕಲ್ಲಚ್ಚು ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 24 ಆಗಸ್ಟ್ 2024ರಂದು ಬೆಳಗ್ಗೆ 11-00 ಗಂಟೆಗೆ ಬೆಂಗಳೂರಿನ ಕುಮಾರಕೃಪ ರಸ್ತೆ, ಕರ್ನಾಟಕ ಚಿತ್ರಕಲಾ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಇದರ ಅಧ್ಯಕ್ಷರಾದ ಬಿ. ಎಲ್. ಶಂಕರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಕನ್ನಡ ವಿಶ್ವ ವಿದ್ಯಾಲಯ ಹಂಪಿ ಇದರ ಉಪಕುಲಪತಿಗಳಾದ ಪ್ರೊ. ಡಿ.ವಿ. ಪರಮಶಿವಮೂರ್ತಿ ಇವರು ಕೃತಿ ಲೋಕಾರ್ಪಣೆಗೊಳಿಸಲಿರುವರು. ಲೇಖಕರು ಮತ್ತು ದಿ ಹಿಂದು ಪತ್ರಿಕೆಯ ಹಿರಿಯ ಉಪ ಸಂಪಾದಕರಾದ ಡಾ. ನಾಗೇಶ್ ಪ್ರಭು ಇವರಿಗೆ ‘ಕಲ್ಲಚ್ಚು ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ಕೊಟ್ಟಾಯಂನ ಮನೋರಮ ಸ್ಕೂಲ್ ಆಫ್ ಕಮ್ಯೂನಿಕೇಷನ್ ಅಶ್ವಿನ್ ಬಿ.ಎಂ. ಇವರು ಕವನ ವಾಚನ ಮಾಡಲಿದ್ದಾರೆ.

Read More

ಬೆಂಗಳೂರು : ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ.) ಟೆಸ್ಟ್ ವಿರಾಜಪೇಟೆ ಹಾಗೂ ಡಿವೈನ್ ಟೆಂಪಲ್ ಪೌಂಡೇಶನ್ (ರಿ.) ಬೆಂಗಳೂರು ಇದರ ಸಹಯೋಗದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ದಿನಾಂಕ 18 ಆಗಸ್ಟ್ 2024ರಂದು ನಡೆದ ರಾಷ್ಟ್ರ ಮಟ್ಟದ ನೃತ್ಯ ಪ್ರದರ್ಶನ ಕಾರ್ಯಕ್ರಮದಲ್ಲಿ ಸಾಹಿತ್ಯ ಹಾಗೂ ಪತ್ರಿಕೋದ್ಯಮದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಕೆಂಗಲ್ ಹನುಮಂತಯ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಡಾ. ಕೆಂಚನೂರು ಶಂಕರ್, ಸುಧಾಕರ ಬನ್ನಂಜೆ, ಶಶಿಧರ ಕೋಟೆ, ಡಾ. ಎಂ.ಪಿ. ಮೋಹನ್, ಪ್ರೇಮಾಂಜಲಿ ಆಚಾರ್ಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Read More

ಮಳವಳ್ಳಿ : ರಂಗಬಂಡಿ ಇದರ ವತಿಯಿಂದ ‘ಮಳವಳ್ಳಿ ಸುಂದರಮ್ಮ ರಂಗೋತ್ಸವ 2024-25’ ಕಾರ್ಯಕ್ರಮಗಳನ್ನು ದಿನಾಂಕ 21 ಆಗಸ್ಟ್ 2024ರಿಂದ 25 ಆಗಸ್ಟ್ 2024ರವೆರೆಗೆ ಮಳವಳ್ಳಿಯ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟಾಂಡ್ ಹಿಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ದಿನಾಂಕ 21 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ರಾಜ್ಯ ಪ್ರಶಸ್ತಿ ವಿಜೇತ ವೃತ್ತಿ ರಂಗಭೂಮಿಯ ಖ್ಯಾತ ರಂಗ ನಿರ್ದೇಶಕರಾದ ಶ್ರೀ ವೈ.ಎಂ. ಪುಟ್ಟಣ್ಣಯ್ಯ ಮತ್ತು ತಂಡದವರಿಂದ ಮಳವಳ್ಳಿ ಸುಂದರಮ್ಮ ನಟಿಸಿದ್ದ ನಾಟಕಗಳ ವಿಶೇಷ ರಂಗಸಂಗೀತ ಕಾರ್ಯಕ್ರಮ, ದಿನಾಂಕ 22 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಮೈಮ್ ರಮೇಶ್ ಇವರ ನೃತ್ಯ ಸಂಯೋಜನೆ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೈಸೂರಿನ ಜಿ.ಪಿ.ಐ.ಇ.ಆರ್. ರಂಗ ತಂಡ ಪ್ರಸ್ತುತ ಪಡಿಸುವ ನಾಟಕ ‘ಮಂಟೇಸ್ವಾಮಿ ಕಥಾ ಪ್ರಸಂಗ’, ದಿನಾಂಕ 23 ಆಗಸ್ಟ್ 2024ರಂದು ಸಂಜೆ 7-00 ಗಂಟೆಗೆ ಸುಮತಿ ಕೆ.ಆರ್. ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮಂಡ್ಯದ ವಿಮಲರಣದೀವೆ ಮಹಿಳಾ ನಾಟಕ ತಂಡದವರಿಂದ ‘ನ್ಯಾಯ ಕೇಳಿದ ನಿಂಗವ್ವ’ ಎಂಬ…

Read More

ಮಂಗಳೂರು : ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘವನ್ನು ಮುನ್ನಡೆಸಿದ್ದ ಕೀರ್ತಿಶೇಷ ನಾಗೇಶ ಪ್ರಭುಗಳ ಸಂಸ್ಮರಣೆ ಕಾರ್ಯಕ್ರಮವು ಶ್ರೀ ಮಹಾಮಾಯಿ ದೇವಸ್ಥಾನದ ವಠಾರದಲ್ಲಿ ದಿನಾಂಕ 18 ಆಗಸ್ಟ್ 2024ರಂದು ಜರಗಿತು. ಈ ಕಾರ್ಯಕ್ರಮದಲ್ಲಿ ಅಶೀರ್ವಚನವನ್ನು ನೀಡುತ್ತ ಇಸ್ಕಾನ್ ಸಂಸ್ಥೆಯ ಕಾರ್ಯದರ್ಶಿ ಸನಂದನ ದಾಸ ಪ್ರಭು “ಸಂತೃಪ್ತಿಯೇ ಸಾರ್ಥಕ ಜೀವನಕ್ಕೆ ದಾರಿ. ಇದ್ದುದರಲ್ಲೇ ತೃಪ್ತಿ ಪಡುತ್ತಾ ಜೀವನವನ್ನು ನಡೆಸಿದವರು ನಾಗೇಶ್ ಪ್ರಭುಗಳು. ತತ್ವ ವಿಚಾರದ ಆಳವಾದ ಜ್ಞಾನ ಹೊಂದಿದ್ದು ಮಾತ್ರವಲ್ಲದೆ ತನ್ನ ವಿಚಾರಗಳಲ್ಲಿ ತಪ್ಪುಗಳಿದ್ದರೆ ಅವುಗಳನ್ನು ಪ್ರಾಂಜಲವಾಗಿ ಒಪ್ಪುವ ಮನೋಭಾವ ಅವರಲ್ಲಿ ಇತ್ತು” ಎಂದು ಹೇಳಿದರು. ಶ್ರೀ ಮಹಾಗಣಪತಿ ದೇವಸ್ಥಾನ ಉರ್ವಸ್ಟೋರ್ ಇದರ ಕಾರ್ಯದರ್ಶಿ ಶ್ರೀಧರ ಮಣಿಯಾಣಿಯವರು ಈ ಯಕ್ಷಗಾನ ಸಂಘದ ಸದಸ್ಯರ ಶಿಸ್ತಿನ ಬಗ್ಗೆ ಪ್ರಶಂಸೆಯ ಮಾತನ್ನಾಡಿದರು. ಇನ್ನೋರ್ವ ಅತಿಥಿ ಜಿ.ಕೆ. ಭಟ್ ಸೇರಾಜೆ ಮಾತನಾಡಿ “ನಾಗೇಶ ಪ್ರಭುಗಳು ಯಕ್ಷಗಾನ ಭಾಗವತ, ಅರ್ಥಧಾರಿ, ಹಿಮ್ಮೇಳ ವಾದಕ, ಸಂಘಟಕ ಮಾತ್ರವಲ್ಲದೆ ಓರ್ವ ಪೋಷಕ ಹಾಗೂ ಉತ್ತಮ ವಿಮರ್ಶಕನೂ ಆಗಿದ್ದರು” ಎಂದರು. ಶ್ರೀ ಮಹಾಗಣಪತಿ…

Read More