Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ 8ನೇ ವಾರ್ಷಿಕೋತ್ಸವದ ಪ್ರಯುಕ್ತ ಪಣಂಬೂರು ವೆಂಕಟ್ರಾಯ ಐತಾಳ ಸಂಸ್ಮರಣಾ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ ಕಾರ್ಯಕ್ರಮವನ್ನು ದಿನಾಂಕ 15 ಜೂನ್ 2025ರಿಂದ 21 ಜೂನ್ 2025ರವರೆಗೆ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 15 ಜೂನ್ 2025ರಂದು ಅಪರಾಹ್ನ 2-30 ಗಂಟೆಗೆ ಬಾಳದ ಅಷ್ಟಾವಧಾನಿ ಡಾ. ರಾಮಕೃಷ್ಣ ಪೆಜತ್ತಾಯ ಇವರಿಂದ ‘ಕನ್ನಡ ಸಂಸ್ಕೃತ ಅಷ್ಟಾವಧಾನ’ ಮತ್ತು ರಾತ್ರಿ 8-00 ಗಂಟೆಗೆ ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದರಿಂದ ‘ತಾಮ್ರಧ್ವಜ ಕಾಳಗ’, ದಿನಾಂಕ 16 ಜೂನ್ 2025ರಂದು ರಾತ್ರಿ 7-00 ಗಂಟೆಗೆ ಯು.ಎಸ್.ಎ.ಯ ಕುಮಾರಿ ಸಿದ್ದಿ ಜಯದೇವ್ ತಂತ್ರಿ ಇವರಿಂದ ಭರತನಾಟ್ಯ ಕಾರ್ಯಕ್ರಮ ಮತ್ತು 8-00 ಗಂಟೆಗೆ ‘ಕರ್ಣ ಪರ್ವ’, ದಿನಾಂಕ 17 ಜೂನ್ 2025ರಂದು ‘ಗದಾ ಪರ್ವ’, ದಿನಾಂಕ 18 ಜೂನ್ 2025ರಂದು ‘ಮನ್ಮಥೋಪಖ್ಯಾನ’, ದಿನಾಂಕ 19 ಜೂನ್…
ಯು. ಎ. ಇ. : ಯಕ್ಷಗಾನ ಅಭ್ಯಾಸ ಕೇಂದ್ರ ಯು. ಎ. ಇ. ವತಿಯಿಂದ ಕೊಡಮಾಡುವ 2024-2025 ನೇ ಸಾಲಿನ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’ಯನ್ನು ಯಕ್ಷಗಾನದ ಪ್ರಾತಿನಿಧಿಕ ಕಲಾವಿದ, ಕಾಸರಗೋಡು ಸುಬ್ರಾಯ ಹೊಳ್ಳರಿಗೆ ನೀಡಲಾಗುವುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಯಕ್ಷಗಾನ ಅಭ್ಯಾಸ ಕೇಂದ್ರ ಯು. ಎ. ಇ. ಯ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 29 ಜೂನ್ 2025ರಂದು ಯಕ್ಷಧ್ರುವ ಪಟ್ಲ ಪೌಂಡೇಶನ್ ದುಬೈ (ಯು. ಎ. ಇ.) ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿರುವ ದುಬಾಯಿ ಯಕ್ಷೋತ್ಸವ 2025 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮುಂಬೈ : ಪ್ರಥ್ವಿ ಥಿಯೇಟರ್ ಪ್ರಸ್ತುತ ಪಡಿಸುವ ‘ಉದಯಸ್ವರ’ ಸಂಗೀತ ಕಛೇರಿಯನ್ನು ದಿನಾಂಕ 15 ಜೂನ್ 2025ರಂದು ಬೆಳಿಗ್ಗೆ 7-30 ಗಂಟೆಗೆ ಮುಂಬೈಯ ಪ್ರಥ್ವಿ ಥಿಯೇಟರ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಭಾರತೀಯ ಶಾಸ್ತ್ರೀಯ ಸಂಗೀತ ಕಛೇರಿಯಲ್ಲಿ ರಜತ್ ಪ್ರಸನ್ನ ಇವರ ಕೊಳಲು ವಾದನಕ್ಕೆ ತೇಜೋವೃಷ್ ಜೋಶಿ ಇವರು ತಬಲಾ ಸಾಥ್ ನೀಡಲಿದ್ದಾರೆ.
ಕಾಸರಗೋಡು : ಕಾಸರಗೋಡು ಸರಕಾರಿ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ, ಜಾನಪದ ವಿದ್ವಾಂಸ, ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ. ಎ. ಶ್ರೀನಾಥ್ ಕಾಸರಗೋಡು ‘ಕಯ್ಯಾರ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು, ಗ್ರೀನ್ ಸ್ಟಾರ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಕಯ್ಯಾರ್, 16ನೇ ವಾರ್ಡ್ ಕಯ್ಯಾರ್ ಕುಟುಂಬ ಶ್ರೀ ಘಟಕಗಳ ಸಹಯೋಗದಲ್ಲಿ ಕಯ್ಯಾರ ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ದಿನಾಂಕ 18 ಜೂನ್ 2025ರಂದು ಬೆಳಗ್ಗೆ ಗಂಟೆ 9-00ರಿಂದ ನಡೆಯುವ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು. ಕನ್ನಡ ಎಂ.ಎ. ಪದವೀಧರ, ಚಿಂತಕ, ವಾಗಿ, ಸಂಘಟಕ, ಸಮಾಜ ಸೇವಕರೂ ಆದ ಶ್ರೀನಾಥ್, ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಳವಾದ ಜ್ಞಾನವುಳ್ಳ ಕಾಸರಗೋಡಿನ ಸಾಹಿತ್ಯಕ, ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಯಲ್ಲಿ ಹೆಸರು ಪಡೆದಿದ್ದಾರೆ. ಮೂರು ದಶಕಗಳ ಕಾಲ ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ,…
ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಮತ್ತಿತರ ಕಲಾಪ್ರಕಾರಗಳಲ್ಲಿ 2024ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ 01-01-2024ರಿಂದ 31-12-2024ರ ಒಳಗೆ) ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ/ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪುಸ್ತಕಕ್ಕೆ ರೂ.25,000/- ನಗದು ಬಹುಮಾನವನ್ನು ನೀಡಲಾಗುವುದು. ಯಕ್ಷಗಾನ ಕ್ಷೇತ್ರದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹಾರ್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಕೃತಿ ಅಥವಾ ಅಭಿನಂದನ ಕೃತಿಯಾಗಿರಬಾರದು, ಸ್ವರಚಿತವಾಗಿರಬೇಕು. ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು. ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು -560002, ಇವರಿಗೆ ದಿನಾಂಕ 10 ಜುಲೈ 2025ರೊಳಗೆ ಅರ್ಜಿಯೊಂದಿಗೆ ಪುಸ್ತಕದ…
ಆಲೂರು : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಲೂರು ತಾಲೂಕು ಘಟಕ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಸಭೆಯು ದಿನಾಂಕ 13 ಜೂನ್ 2025ರಂದು ಜರಗಿತು. ಈ ಸಭೆಯಲ್ಲಿ ಪಾಲ್ಗೊಂಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ “ನಾಡು-ನುಡಿ ಸೇವೆಯಲ್ಲಿ ತೊಡಗಿರುವ ಕನ್ನಡಪರ ಸಂಘಟನೆಗಳಿಗೆ ಪಾರದರ್ಶಕ ಹಾಗೂ ಪ್ರಮಾಣಿಕ ವ್ಯವಹಾರ ದೃಷ್ಠಿಕೋನಗಳು ಬಹಳ ಮುಖ್ಯವಾಗುತ್ತವೆ. ಈ ನಿಟ್ಟಿನಲ್ಲಿ ಕಳೆದ ಮೂರೂ ತಾಲೂಕು ಸಮ್ಮೇಳನಗಳ ಖರ್ಚುವೆಚ್ಚಗಳನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಲೂರು ತಾಲೂಕು ಘಟಕ ಪಾರದರ್ಶಕವಾಗಿ ನೀಡಿರುವುದು ಸ್ತುತ್ಯಾರ್ಹ ಸಂಗತಿ. ನಮ್ಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯು ಪ್ರಾರಂಭದಿಂದಲೂ ಎಲೆಮರೆಕಾಯಿಯಂತಹ ಸಾಧಕರನ್ನು ಗುರುತಿಸುವ ಹಿನ್ನೆಲಯಲ್ಲಿ ಸರಳ ಹಾಗೂ ಗುಣಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು ಕನ್ನಡಪರ ಮನಸ್ಸುಗಳನ್ನು ಒಂದುಗೂಡಿಸಿ ಉತ್ತಮೋತ್ತಮ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಹರಿಹಳ್ಳಿಯಲ್ಲಿ ನಡೆದ ಆಲೂರು ತಾಲೂಕು ಮೂರನೇ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಹರಿಹಳ್ಳಿಯ ಮಂಗಳ ಕಲಾ ಸಾಹಿತ್ಯ ವೇದಿಕೆಯ ಕೊಡುಗೆ ಅಪಾರವಿದೆ” ಎಂದು ಅಭಿಪ್ರಾಯಪಟ್ಟರು. ಸಾಹಿತ್ಯ…
ಯಶವಂತ ಸರದೇಶಪಾಂಡೆ ಒಬ್ಬ ಹುಟ್ಟುಕಲಾವಿದ. ಎಳವೆಯಲ್ಲಿಯೇ ನಾಟಕದ ಬಗ್ಗೆ ಅತಿಯಾದ ಒಲವು ಬೆಳೆಸಿಕೊಂಡವರು. ಇವರ ನಿರ್ದೇಶನದ ‘ಆಲ್ ದಿ ಬೆಸ್ಟ್’ ನಾಟಕ ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನ ಕಂಡಿದೆ. ಉತ್ತಮ ನಿರ್ದೇಶಕ, ನಾಟಕಕಾರ ಹಾಗೂ ಹಾಸ್ಯ ನಾಟಕಗಳ ರಚನೆ ಮತ್ತು ತಮ್ಮ ನಟನಾ ಕೌಶಲ್ಯದಿಂದ ಕರ್ನಾಟಕದಾದ್ಯಂತ ಜನಮನ ಗೆದ್ದವರು ಯಶವಂತ ಸರದೇಶಪಾಂಡೆಯವರು. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಒಕ್ಕಲಿ ಎಂಬ ಹಳ್ಳಿಯಲ್ಲಿ ಶ್ರೀಧರರಾವ್ ಗೋಪಾಲರಾವ್ ಸರದೇಶಪಾಂಡೆ ಮತ್ತು ಕಲ್ಪನಾದೇವಿ ದಂಪತಿಗಳ ಸುಪುತ್ರರಾಗಿ 1965 ಜೂನ್ 13ರಂದು ಜನಿಸಿದರು. ನಾಟಕದಲ್ಲಿ ಅತಿಯಾದ ಆಸಕ್ತಿ ಇದ್ದ ಇವರಿಗೆ ಹೆಗ್ಗೋಡಿನ ‘ನೀನಾಸಮ್’ ನಾಟಕ ಸಂಸ್ಥೆಯಿಂದ ಪಡೆದ ಡಿಪ್ಲೋಮಾ ಪದವಿ ಮತ್ತು ನ್ಯೂಯಾರ್ಕ್ ವಿಶ್ವವಿದ್ಯಾಲಯದಿಂದ ದೊರೆತ ನಾಟಕ ರಚನೆ ಮತ್ತು ಚಲನಚಿತ್ರ ಸಂಭಾಷಣೆಯ ವಿಶೇಷ ತರಬೇತಿಯು ಇವರ ಆಸಕ್ತಿಯನ್ನು ಕೆರಳಿಸಿ, ಆ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುಂದುವರೆಯಲು ಅವಕಾಶ ಮಾಡಿಕೊಟ್ಟಿತು. ರಾಜ್ಯದಾದ್ಯಂತ ಸಂಚರಿಸಿ ಹಲವಾರು ನಾಟಕಗಳನ್ನು ನಿರ್ದೇಶಿಸಿದ ಖ್ಯಾತಿ ಇವರದು. ‘ಅಂಧ ಯುಗ’, ‘ಇನ್ಸ್ಪೆಕ್ಟರ್ ಜನರಲ್’, ‘ಮಿಡ್ ಸಮ್ಮರ್…
ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಬಂಟ್ವಾಳ ಘಟಕದ ಪದಾಧಿಕಾರಿಗಳ ಸಭೆ ಅಧ್ಯಕ್ಷರಾದ ಚಂದ್ರಹಾಸ. ಡಿ. ಶೆಟ್ಟಿ ರಂಗೋಲಿ ಇವರ ಅಧ್ಯಕ್ಷತೆ ಯಲ್ಲಿ ದಿನಾಂಕ 09 ಜೂನ್ 2025ರಂದು ಬಿ. ಸಿ. ರೋಡಿನ ಹೋಟೆಲ್ ರಂಗೋಲಿಯಲ್ಲಿ ಜರಗಿತು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿ ಗುತ್ತು, ಸಂಚಾಲಕರಾಗಿ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಬಿ. ದೇವದಾಸ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಮೋಹನ ದಾಸ್ ಕೊಟ್ಟಾರಿ, ಉಪಾಧ್ಯಕ್ಷರುಗಳಾಗಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಬಿಕ್ರಿಬೆಟ್ಟು, ಸತೀಶ್ ಶೆಟ್ಟಿ ಮೊಡಂಕಾಪು, ಕೋಶಾಧಿಕಾರಿಗಳಾಗಿ ಶಂಕರ ಶೆಟ್ಟಿ ಪರಾರಿ, ಗೌರವ ಸಲಹೆಗಾರರಾಗಿ ರಾಜೇಶ್ ನಾಯ್ ಉಳಿಪ್ಪಾಡಿ, ಬಿ. ರಮಾನಾಥ ರೈ, ಚಂದ್ರಹಾಸ್. ಡಿ. ಶೆಟ್ಟಿ ರಂಗೋಲಿ, ಸತೀಶ್ ಶೆಟ್ಟಿ ಪಟ್ಲ, ಎ. ರುಕ್ಮಯ್ಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಸದಾನಂದ. ಡಿ. ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ಸೇಸಪ್ಪ ಮಾಸ್ಟರ್. ಆಯ್ಕೆಗೊಂಡರು. ಸಮಾರಂಭದಲ್ಲಿ ಜಗನ್ನಾಥ ಚೌಟ ಬದಿಗುಡ್ಡೆ, ಸದಾನಂದ…
ಮಂಗಳೂರು: ಬ್ಯಾರಿ ಕಲಾರಂಗ ಮಂಗಳೂರು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಪ್ರಥಮ ಕಾರ್ಯಕ್ರಮವಾಗಿ ಸಂಘದ ಅಧ್ಯಕ್ಷ ಅಜೀಜ್ ಬೈಕಂಪಾಡಿ ವಿರಚಿತ ‘ಬ್ಯಾರಿ ಬಾಸೆ ಪಡಿಕೋರು’ ಎಂಬ ಪುಸ್ತಕದ ಲೋಕರ್ಪಣಾ ಸಮಾರಂಭವು ದಿನಾಂಕ 12 ಜೂನ್ 2025ರ ಗುರುವಾರದಂದು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಯಿತು. ಸಮಾರಂಭದಲ್ಲಿ ಪುಸ್ತಕ ಲೋಕಾರ್ಪಣೆಗೊಳಿಸಿದ ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ ಮಾತನಾಡಿ “ದ. ಕ. ಜಿಲ್ಲೆ ತುಳು, ಕನ್ನಡ, ಕೊಂಕಣಿ, ಬ್ಯಾರಿ, ಅರೆಭಾಷೆ ಹೀಗೆ ವೈವಿಧ್ಯಮಯ ಭಾಷಿಗರ ಪ್ರದೇಶವಾಗಿದೆ. ‘ಬ್ಯಾರಿ ಭಾಷೆ ಪಡಿಕೋರು’ ಪುಸ್ತಕ ಭಾಷೆಯ ಬೆಳವಣಿಗೆಯ ಜತೆಗೆ ಹೊಸಬರಿಗೆ ಬ್ಯಾರಿ ಭಾಷೆಯ ಶಬ್ದಗಳನ್ನು ತಿಳಿಯಲು ಸಹಕಾರಿಯಾಗಿದೆ” ಎಂದರು. ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಮಹಮ್ಮದ್ ಬಡ್ಡೂರು ಮಾತನಾಡಿ “ಭಾಷೆಯಲ್ಲಿ ಮೇಲು, ಕೀಳು ಎಂಬುವುದಿಲ್ಲ. ಮಾತನಾಡುವವರ ಸಂಖ್ಯೆಯಲ್ಲಿ ಮಾತ್ರ ಹೆಚ್ಚು ಕಡಿಮೆ ಇದೆ. ಹೊರ ಜಿಲ್ಲೆಗಳಿಂದ ಬರುವ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ‘ಬ್ಯಾರಿ ಬಾಸೆ ಪಡಿಕೋರು’ ಪುಸ್ತಕ ಉತ್ತಮ ಕೈಪಿಡಿಯಾಗಿದೆ” ಎಂದರು. ಬ್ಯಾರಿ…
ಕಾರ್ಕಳ: ಇಲ್ಲಿನ ಕಲ್ಲೊಟ್ಟೆ ನಿವಾಸಿ ಹೆಸರಾಂತ ಶಿಲ್ಪಿ ಶೇಷಪ್ಪ ಆಚಾರ್ಯ ಅಲ್ಪ ಕಾಲದ ಅಸೌಖ್ಯದಿಂದಾಗಿ 12 ಜೂನ್ 2025 ರಂದು ರಾತ್ರಿ ನಿಧನ ಹೊಂದಿದರು. ಅವರಿಗೆ 68ವರ್ಷ ವಯಸ್ಸಾಗಿತ್ತು. ಅನೇಕ ದೇವಾಲಯಗಳನ್ನು ಹಾಗೂ ವಿಗ್ರಹಗಳನ್ನು ನಿರ್ಮಿಸಿರುವ ಇವರು ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಶ್ರೀ ಕಾಳಿಕಾಂಬೆಯ ಶಿಲಾಮಯ ಗರ್ಭ ಗುಡಿಯ ನಿರ್ಮಾಣ ಮಾಡಿದ್ದರು. ಶಿಲ್ಪ ಕ್ಷೇತ್ರದಲ್ಲಿ ಇವರು ಸಲ್ಲಿಸಿದ ಗಣನೀಯ ಸೇವೆಗೆ ಅನೇಕ ದೇವಸ್ಥಾನ, ಸಂಘ ಸಂಸ್ಥೆಯವರು ಇವರನ್ನು ಸನ್ಮಾನಿಸಿದ್ದರು. ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.