Subscribe to Updates
Get the latest creative news from FooBar about art, design and business.
Author: roovari
ಶಿರಿಸಿ : ರಾಗ ತಪಸ್ವಿ, ಗಾನ ಯೋಗಿ ಎಂದೆ ಪ್ರಸಿದ್ಧರಾಗಿದ್ದ ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ತಿಮ್ಮಯ್ಯ ಹೆಗಡೆ ದಿನಾಂಕ 01 ಡಿಸೆಂಬರ್ 2024ರಂದು ನಿಧನರಾದರು. ಇವರಿಗೆ 94 ವರ್ಷ ವಯಸ್ಸಾಗಿತ್ತು. ಶಿರಸಿ ಸಮೀಪದ ಬಾಳೆಹದ್ದದಲ್ಲಿ ಜನಿಸಿದ ಕೃಷ್ಣ ಭಾಗವತರು ಏಳು ದಶಕಗಳಿಗೂ ಅಧಿಕ ಕಾಲ ಯಕ್ಷಗಾನ ಪದ್ಯ ಹಾಡುತ್ತಾ ಹೊಸ ಹೊಸ ರಾಗಗಳನ್ನು ಅನ್ವೇಷಿಸುತ್ತಾ ಸಂಗೀತಕ್ಕಾಗಿಯೇ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಹೊಸ್ತೋಟ ಮಂಜುನಾಥ ಭಾಗವತ ಸೇರಿದಂತೆ ಆ ಕಾಲದ ಹಿರಿಯ ಕಲಾವಿದರೊಂದಿಗೆ ನಿಕಟ ಒಡನಾಟ ಹೊಂದಿದ್ದ ಇವರು ಯಕ್ಷಗಾನ ಪದ್ಯಗಳಿಗೆ ಹೊಸ ಹೊಸ ರಾಗಗಳನ್ನು ಸಂಯೋಜಿಸುತ್ತಾ ಪ್ರತೀ ವರ್ಷ ನೂರಾರು ತಾಳಮದ್ದಲೆಗಳಲ್ಲಿ ಭಾಗವಹಿಸುತ್ತಿದ್ದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತರಾದ ಇವರಿಗೆ,2018ರಲ್ಲಿ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಶ್ರೀಯುತರು ಪತ್ನಿ ಪುತ್ರಿ ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಯಕ್ಷಗಾನ ಕಲಾವಿದ ವಸಂತ ಭಟ್ ದಿನಾಂಕ 02 ಡಿಸೆಂಬರ್ 2024ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೃಷ್ಣಯ್ಯರ ಪುತ್ರರಾದ ಇವರು ಅಮೃತೇಶ್ವರೀ, ಬಾಳೆಹೊಳೆ ಹಾಗೂ ದೀರ್ಘಕಾಲ ಗುತ್ಯಮ್ಮ ಮೇಳದಲ್ಲಿ ವೇಷಧಾರಿಯಾಗಿ ಕಲಾಸೇವೆ ಗೈದಿದ್ದಾರೆ. ದೇವೇಂದ್ರ, ಶತ್ರುಘ್ನ, ಕಮಲಭೂಪ, ಹಂಸಧ್ವಜ, ಬಲರಾಮ, ಮೊದಲಾದ ರಾಜ ವೇಷದೊಂದಿಗೆ ಬಣ್ಣದ ವೇಷ ಮಾಡಿ ಜನ ಮೆಚ್ಚುಗೆ ಗಳಿಸಿದ್ದರು. ಪ್ರಕೃತ ಗುತ್ಯಮ್ಮ ಮೇಳದ ಕಲಾವಿದರಾಗಿದ್ದ ವಸಂತ ಭಟ್ ಓರ್ವ ಸರಳ ಸಜ್ಜನಿಕೆಯ ಕಲಾವಿದರಾಗಿದ್ದರು. ಶ್ರೀಯುತರು ಪತ್ನಿ, ಈರ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ‘ಮನೆಯೇ ಗ್ರಂಥಾಲಯ’ ಅಭಿಯಾನದ 125ನೇ ಕೇಂದ್ರದ ಉದ್ಘಾಟನಾ ಸಮಾರಂಭವು ದಿನಾಂಕ 02 ಡಿಸೆಂಬರ್ 2024ರ ಸೋಮವಾರದಂದು ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ “ಡಿಜಿಟಲ್ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರು ಪುಸ್ತಕ ಓದುವ ಸಂಸ್ಕೃತಿ ಮುಂದುವರಿಸಬೇಕು. ಜಿಲ್ಲಾಡಳಿತದಲ್ಲಿ ಎಲ್ಲ ಇಲಾಖೆ ಇರುವುದರಿಂದ ಸದ್ಯ ಸ್ಥಳಾವಕಾಶದ ಕೊರತೆ ಇದೆ. ಮುಂದಿನ ದಿನಗಳಲ್ಲಿ ಗ್ರಂಥಾಲಯಕ್ಕಾಗಿಯೇ ಒಂದು ಕೊಠಡಿ ಮೀಸಲಿಡಲು ಪ್ರಯತ್ನಿಸಲಾಗುವುದು.”ಎಂದು ಭರವಸೆ ನೀಡಿದರು. ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ “ಘಟಕದ ಎಲ್ಲಾ ಉತ್ಸಾಹಿ ಪದಾಧಿಕಾರಿಗಳ ಸಹಕಾರದಲ್ಲಿ ಕನ್ನಡದ ಸೇವೆಗಾಗಿ ಜಿಲ್ಲಾ ಘಟಕದ ಸಹಕಾರದಿಂದ ವಿನೂತನ ಕಾರ್ಯಕ್ರಮ ಆಯೋಜಿಸುತ್ತಿದ್ದೇವೆ. ಮಣಿಪಾಲ…
ಮಂಗಳೂರು : ರಾಗತರಂಗ (ರಿ.) ಮಂಗಳೂರು ಇದರ ವತಿಯಿಂದ ಭಾರತೀಯ ವಿದ್ಯಾಭವನ ಮಂಗಳೂರು ಸಹಯೋಗದೊಂದಿಗೆ ‘ಬಾಲ ಪ್ರತಿಭಾ 2024’ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಯ ಶಾಲಾ ಮಕ್ಕಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ದಿನಾಂಕ 13 ಡಿಸೆಂಬರ್ 2024ರಿಂದ 15 ಡಿಸೆಂಬರ್ 2024ರವರೆಗೆ ಮಂಗಳೂರಿನ ಪಾಂಡೇಶ್ವರದ ಭಾರತೀಯ ವಿದ್ಯಾಭವನದಲ್ಲಿ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಾಯಿಸಲು 06 ಡಿಸೆಂಬರ್ 2024 ಕೊನೆಯ ದಿನಾಂಕವಾಗಿದ್ದು, ದಿನಾಂಕ 13 ಡಿಸೆಂಬರ್ 2024ರಂದು ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ದೇಶ ಭಕ್ತಿ ಗೀತೆ ಸಮೂಹ ಗಾನ, ಸುಗಮ ಸಂಗೀತ ಮತ್ತು ಆಶು ಭಾಷಣ ಸ್ಪರ್ಧೆಗಳು ನಡೆಯಲಿದೆ. ದಿನಾಂಕ 13 ಡಿಸೆಂಬರ್ 2024, 14 ಡಿಸೆಂಬರ್ 2024 ಮತ್ತು 15 ಡಿಸೆಂಬರ್ 2024ರಂದು ಖಾಸಗಿ ಹಾಗೂ ಕೇಂದ್ರೀಯ ವಿದ್ಯಾಲಯದ ಮಕ್ಕಳಿಗೆ ಸಾಮಾನ್ಯ ಜ್ಞಾನ, ಛದ್ಮವೇಷ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಭಾವಗೀತೆ, ಭರತನಾಟ್ಯ, ಜನಪದ ನೃತ್ಯ, ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ಥಾನಿ ವಾದ್ಯ ಸಂಗೀತ…
ಪುತ್ತೂರು : ಪಾಲಿಂಜೆ ಶ್ರೀ ಮಹಾವಿಷ್ಣು ದೇವಳದಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ವಿಂಶತಿ ಸಂಭ್ರಮದ ಅಂಗವಾಗಿ 17ನೇ ಸರಣಿ ತಾಳಮದ್ದಳೆ ಬೋಳೂರು ಮಧು ಕುಮಾರ್ ವಿರಚಿತ ‘ಸುದರ್ಶನ ವಿಜಯ’ ಎಂಬ ಆಖ್ಯಾನದೊಂದಿಗೆ ದಿನಾಂಕ 01 ಡಿಸೆಂಬರ್ 2024ರಂದು ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ, ಆನಂದ ಸವಣೂರು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ತಾರಾನಾಥ ಸವಣೂರು ಮತ್ತು ಮಾಸ್ಟರ್ ಪರೀಕ್ಷಿತ್ ಹಂದ್ರಟ್ಟ ಸಹಕರಿಸಿದರು. ಮುಮ್ಮೇಳದಲ್ಲಿ ಕಿಶೋರಿ ದುಗ್ಗಪ್ಪ ನಡುಗಲ್ಲು (ಮಹಾವಿಷ್ಣು), ಜಯಂತಿ ಹೆಬ್ಬಾರ್ (ಮಹಾಲಕ್ಷ್ಮಿ), ಶುಭಾ ಗಣೇಶ್ (ಸುದರ್ಶನ), ಪ್ರೇಮಲತಾ ರಾವ್ (ದೇವೇಂದ್ರ), ಹರಿಣಾಕ್ಷಿ ಜೆ. ಶೆಟ್ಟಿ (ಶತ್ರು ಪ್ರಸೂದನ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಶ್ರವಣಕುಮಾರ ಮತ್ತು ರಮೇಶ್ ಅಂಗಿಂತ್ತಾಯ ಕಲಾವಿದರಿಗೆ ಶ್ರೀ ದೇವರ ಪ್ರಸಾದವನ್ನಿತ್ತು ಗೌರವಿಸಿದರು. ಪ್ರೇಮಲತಾ ರಂಗನಾಥ್ ರಾವ್ ಪ್ರಾಯೋಜಿಸಿದ್ದರು.
ಉಡುಪಿ : ಆರ್ಟಿಸ್ಟ್ಸ್ ಫೋರಂ ಪ್ರಸ್ತುತ ಪಡಿಸುವ ‘ಆನ್ ಆರ್ಟ್ ಫ್ಯೂಷನ್’ ವೇದಿಕೆಯ ಕಲಾವಿದರ ಸದಸ್ಯರಿಂದ ‘ಚಿತ್ರಕಲೆಗಳ ಪ್ರದರ್ಶನ’ವನ್ನು ದಿನಾಂಕ 06 ಡಿಸೆಂಬರ್ 2024ರಿಂದ 15 ಡಿಸೆಂಬರ್ 2024ರವರೆಗೆ ಬೆಂಗಳೂರಿನ ದ್ವಿಜ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 06 ಡಿಸೆಂಬರ್ 2024ರಂದು ಸಂಜೆ 5-30 ಗಂಟೆಗೆ ಈ ಪ್ರದರ್ಶನವು ಉದ್ಘಾಟನೆಗೊಳ್ಳಲಿದ್ದು, ಯು. ಭಾಸ್ಕರ ರಾವ್ , ಎಚ್.ಕೆ. ರಾಮಚಂದ್ರ, ಜನಾರ್ದನ ಹವಾಂಜೆ, ಖುರ್ಷಿದ್ ಯಾಕೂಬ್, ಎಸ್. ನಾಗರಾಜ್ ಹನೇಹಳ್ಳಿ, ಪವನ್ ಕುಮಾರ್ ಅತ್ತಾವರ, ರಮೇಶ್ ರಾವ್, ಸಕು ಪಂಗಳ, ಸಪ್ನ ನೋರೋನ್ಹ, ಸಂತೋಷ್ ಪೈ, ಶರತ್ ಪಲಿಮಾರ್, ಶಿವ ಹದಿಮಣಿ, ಸಿಂಧು ಕಾಮತ್, ಸಿತಾರಾ ರಾವ್ ಇವರುಗಳ ಚಿತ್ರಕಲೆಗಳ ಪ್ರದರ್ಶನ ನಡೆಯಲಿದೆ. ArtFusion
ಮಂಗಳೂರು : ಪುಸ್ತಕ ಬಹುಮಾನ – 2024 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2024ರ ಕ್ಯಾಲೆಂಡರ್ ವರ್ಷದಲ್ಲಿ (01 ಜನವರಿ 2024ರಿಂದ 31 ಡಿಸೆಂಬರ್ 2024) ಪ್ರಕಟಿತವಾದ (1) ಕೊಂಕಣಿ ಕವನ, (2) ಕೊಂಕಣಿ ಸಣ್ಣಕತೆ ಅಥವಾ ಕಾದಂಬರಿ, (3) ಕೊಂಕಣಿಗೆ ಭಾಷಾಂತರಿಸಿದ ಕೃತಿ (ಪ್ರಥಮ ಆದ್ಯತೆ) ಅಥವಾ ಲೇಖನ/ ಅಧ್ಯಯನ/ ವಿಮರ್ಶೆ ಬಗ್ಗೆ ಲೇಖಕರಿಂದ, ಪ್ರಕಾಶಕರಿಂದ ಪುಸ್ತಕ ಬಹುಮಾನಕ್ಕಾಗಿ ಪುಸ್ತಕದ 4 ಪ್ರತಿಗಳ ಜೊತೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪುಸ್ತಕ ಬಹುಮಾನವು ರೂ.25,000/- ಗೌರವಧನ, ಹಾರ, ಪ್ರಮಾಣಪತ್ರ, ಫಲತಾಂಬೂಲವನ್ನು ಒಳಗೊಂಡಿದೆ. ಗೌರವ ಪ್ರಶಸ್ತಿ – 2024 : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನಲ್ಲಿ 1. ಕೊಂಕಣಿ ಸಾಹಿತ್ಯ, 2. ಕೊಂಕಣಿ ಕಲೆ (ಕೊಂಕಣಿ ನಾಟಕ, ಸಂಗೀತ, ಚಲನಚಿತ್ರ) 3. ಕೊಂಕಣಿ ಜಾನಪದ ಈ ಮೂರು ವಿಭಾಗಗಳಲ್ಲಿ ಜೀವಮಾನದ ಸಾಧನೆಗಾಗಿ ಅರ್ಹರಿಂದ ಗೌರವ ಪ್ರಶಸ್ತಿಗಾಗಿ ಅರ್ಜಿ ಕರೆಯಲಾಗಿದೆ. ಈ ಪ್ರಶಸ್ತಿಯು ರೂ.50,000/- ಗೌರವಧನ, ಶಾಲು, ಸ್ಮರಣಿಕೆ, ಹಾರ, ಪ್ರಮಾಣ…
ಬೆಂಗಳೂರು: ಕನ್ನಡ ಸಂಘರ್ಷ ಸಮಿತಿಯು ನೀಡುವ ಕುವೆಂಪು ಚಿರಂತನ ಪ್ರಶಸ್ತಿಗಾಗಿ 2024ನೇ ಸಾಲಿನ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. 2024ನೇ ಇಸವಿಯಲ್ಲಿ ಪ್ರಕಟಗೊಂಡ ವೈಚಾರಿಕತೆಗೆ ಒತ್ತುಕೊಟ್ಟು ರಚಿತಗೊಂಡ ಕಥೆ, ಕಾದಂಬರಿ, ನಾಟಕ ಮುಂತಾದ ಕೃತಿಗಳನ್ನು ಪ್ರಶಸ್ತಿ ಆಯ್ಕೆಗಾಗಿ ಕಳುಹಿಸಿಸಬಹುದಾಗಿದೆ. ಕೃತಿಯ ಎರಡು ಪ್ರತಿಗಳನ್ನು ಎ. ಎಸ್. ನಾಗರಾಜಸ್ವಾಮಿ, ಅಧ್ಯಕ್ಷ, ಕನ್ನಡ ಸಂಘರ್ಷ ಸಮಿತಿ, ನಂ.3, 1ನೇ ತಿರುವು, 1ನೇ ಮುಖ್ಯ ರಸ್ತೆ, ಅನ್ನಪೂರ್ಣೇಶ್ವರಿ ಬಡಾವಣೆ, ಉಲ್ಲಾಳ ಮುಖ್ಯ ರಸ್ತೆ, -560 056. ಈ ವಿಳಾಸಕ್ಕೆ ದಿನಾಂಕ 01 ಜನವರಿ 2025ರೊಳಗೆ ಕಳುಹಿಸಿಕೊಡಬಹುದು. ಪ್ರಶಸ್ತಿಯು ಐದು ಸಾವಿರ ನಗದು, ಫಲಕ ಹಾಗೂ ಅಭಿನಂದನಾ ಪತ್ರವನ್ನು ಒಳಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗಾಗಿ – 9739001410
ಬೆಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2023ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಕತೆಗಾರ ಡಾ.ಮಿರ್ಜಾ ಬಷೀರ್ ಅವರ ‘ಅಬ್ರಕಡಬ್ರ’ ಕಥಾಸಂಕಲನ ಆಯ್ಕೆಯಾಗಿದೆ. ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪದವಿ ಪಡೆದು, ಕೆ. ಪಿ. ಎಸ್. ಸಿ. ಪರೀಕ್ಷೆ ಮೂಲಕ ಸರ್ಕಾರಿ ಸೇವೆಗೆ ಸೇರ್ಪಡೆಯಾಗಿ, ಪಶು ಸಂಗೋಪನಾ ಇಲಾಖೆಯಲ್ಲಿ ಸುಮಾರು 34 ವರ್ಷಗಳ ಕಾಲ ಪಶು ವೈದ್ಯರಾಗಿ ಸೇವೆ ಸಲ್ಲಿಸಿ, ಸ್ವಯಂ ನಿವೃತ್ತಿ ಪಡೆದಿರುವ ಡಾ.ಮಿರ್ಜಾ ಬಷೀರ್ ಮೂಲತಃ ಚಿತ್ರದುರ್ಗದ ಚಳ್ಳಕೆರೆಯವರು.
ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ದಿನಾಂಕ 28 ನವೆಂಬರ್ 2024ರಂದು ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಭಾಗಕ್ಕೆ ಏರ್ಪಡಿಸಿದ ‘ಕನ್ನಡ ನಾಡು ನುಡಿ ಸಾಹಿತ್ಯ ಹಾಗೂ ಸಾಂಸ್ಕೃತಿಕ’ ರಸಪ್ರಶ್ನೆ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಸಾಂಸ್ಕೃತಿಕ ವೇದಿಕೆಯ ಗೌರವ ಅಧ್ಯಕ್ಷರಾದ ಶ್ರೀಮತಿ ಸುಧೀಷ್ಣಾ ಕುಮಾರಿಯವರು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಉದ್ದೇಶ ಹಾಗೂ ಅಗತ್ಯತೆಗಳ ಬಗ್ಗೆ ಸಭೆಗೆ ತಿಳಿಸಿದರು. ಕನ್ನಡ ನಾಡು, ನುಡಿ ಸಾಹಿತ್ಯವನ್ನು ಹಾಗೂ ನಮ್ಮ ಸಾಂಸ್ಕೃತಿಕ ವೈಭವವನ್ನು ಮಕ್ಕಳು ಅರಿಯುವ ಅಗತ್ಯವಿದೆ. ಮಕ್ಕಳಲ್ಲಿ ಓದುವ ಅಭ್ಯಾಸ ಕಡಿಮೆಯಾಗಿದೆ. ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಮಕ್ಕಳನ್ನು ಓದಲು ಹಚ್ಚುತ್ತವೆ ಇನ್ನಷ್ಟು ಜ್ಞಾನ ಸಂಪಾದಿಸುವ ಕುತೂಹಲ ಕೆರಳಿಸುವ ವಿಷಯ ಸಂಗ್ರಹಿಸುವ ಆಸಕ್ತಿಯನ್ನು ಮಕ್ಕಳಲ್ಲಿ ಮೂಡಿಸುತ್ತದೆ. ಆ ಕಾರಣದಿಂದ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ…