Author: roovari

ಬೆಂಗಳೂರು : ಕಾವಿ ಆರ್ಟ್ ಫೌಂಡೇಶನ್ ಹಾಗೂ ಆರ್ಟ್ ಮ್ಯಾಟರ್ಸ್ ಇದರ ವತಿಯಿಂದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಕಾರದಲ್ಲಿ ಸಂಯೋಜಿಸಿದ ‘ಕರಾವಳಿಯ ಕಾವಿ ಕಲೆ ಮತ್ತು ಯಕ್ಷಗಾನ’ ವಿಚಾರ ಸಂಕಿರಣವು ಜಯನಗರದ ಯುವಕ ಸಂಘದ ವಿವೇಕ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಅಕಾಡೆಮಿಯ ರಿಜಿಸ್ಟ್ರಾರ್ ನಮೃತ ಎನ್. ಇವರು ಉದ್ಘಾಟನೆಗೊಳಿಸಿ ಮಾತನಾಡಿ “ಕರ್ನಾಟಕ ಕರಾವಳಿಯ ರಂಗಕಲೆಯಾದ ಯಕ್ಷಗಾನವು ವಿಶ್ವದೆಲ್ಲೆಡೆ ಮಾನ್ಯತೆಯನ್ನು ಪಡೆಯುತ್ತಿದೆ. ಈ ಭಾಗದ ಅಳಿವಿನಂಚಿನಲ್ಲಿರುವ ಕಾವಿ ಕಲೆ ಹಾಗೂ ಯಕ್ಷಗಾನದ ಅಂತರ್‌ ಶಿಸ್ತನ್ನು ಮರುದಾಖಲಿಸುವ ಈ ವಿಚಾರ ಸಂಕಿರಣವು ಒಂದು ಮೈಲಿಗಲ್ಲೆನಿಸಲಿದೆ. ಯುವ ಪೀಳಿಗೆ ಈ ಕಲೆಯಲ್ಲಿ ಇನ್ನಷ್ಟು ತೊಡಗಿಕೊಳ್ಳಬೇಕು” ಎಂಬುದಾಗಿ ಆಶಿಸಿದರು. ಮುಖ್ಯ ಅತಿಥಿಗಳಾಗಿ ಯುವಕ ಸಂಘದ ಮಾರ್ಗದರ್ಶಕರಾದ ಜಿ.ಆರ್. ಜಗದೀಶ್, ಆಡಳಿತ ಮಂಡಳಿ ಸದಸ್ಯರಾದ ಡಾ. ಗೌರೀಶ್‌ ಜೋಷಿ ಬೆಂಗಳೂರು, ಆರ್ಟ್ ಗ್ಯಾಲರಿಯ ಸಂಯೋಜಕರಾದ ಶಿವಪ್ರಸಾದ್, ಕಾವಿ ಆರ್ಟ್ ಫೌಂಡೇಶನ್‌ನ ಅಧ್ಯಕ್ಷರಾದ ಹಾವಂಜೆ ಮಂಜುನಾಥ ರಾವ್ ಉಪಸ್ಥಿತರಿದ್ದರು. ವಿಚಾರ ಸಂಕಿರಣದಲ್ಲಿ ಉಡುಪಿಯ ಪಿ.ಪಿ.ಸಿ. ಕಾಲೇಜಿನ ಪ್ರಾಧ್ಯಾಪಕರಾಗಿರುವ ಡಾ.…

Read More

ಮಂಗಳೂರು : ಕಾದಂಬರಿಕಾರ ಕಿಶೋರ್ ರಾಜ್ ಬರೆದಿರುವ ಹಿಂದಿ ಕಾದಂಬರಿ ‘ಮೇರಿ ಖಾಮೋಶಿ ಮೇರಿ ಅವಾಜ್’ ಇದರ ಲೋಕರ್ಪಣಾ ಸಮಾರಂಭವು ದಿನಾಂಕ 1 ಡಿಸೆಂಬರ್ 2024ರ ಭಾನುವಾರದಂದು ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕಾದಂಬರಿ ಲೋಕಾರ್ಪಣೆಗೊಳಿಸಿದ ಸಾಹಿತಿ ಗೋಕುಲ್ ರೂಪರೇಲಿ ಮಾತನಾಡಿ “ಹಿಂದಿ ಭಾಷಾ ಪ್ರಿಯರಿಗೆ ಇದೊಂದು ರಸದೌತಣ. ಕೊಲೆ ರಹಸ್ಯ ಕಂಡು ಹಿಡಿಯುವ ಡ್ರಿಲ್ಲರ್ ಕಥೆಯನ್ನು ಕಾದಂಬರಿ ಹೊಂದಿದೆ.” ಎಂದರು. ಭೂಪೇಂದ್ರ ಆರ್.ರಾಜ್, ಬಿಪಿನ್ ಆರ್.ರಾಜ್, ಗೋವಿಂದ್ ಭಟ್, ಹೀನಾ ಜಗದೀಶ್ ಉಪಸ್ಥಿತರಿದ್ದರು.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಪಾಕ್ಷಿಕ ತಾಳಮದ್ದಳೆ ಕಾರ್ಯಕ್ರಮದ ಪ್ರಯುಕ್ತ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ ಬೊಳುವಾರು ಪುತ್ತೂರು ಇಲ್ಲಿ ‘ಕೃಷ್ಣ ಸಂಧಾನ’ ಎಂಬ ಆಖ್ಯಾನದೊಂದಿಗೆ ದಿನಾಂಕ 30 ನವೆಂಬರ್ 2024ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್ ಇರ್ದೆ, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ಮತ್ತು ಮಾಸ್ಟರ್ ಪರೀಕ್ಷಿತ್ ಹಂದ್ರಟ್ಟ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಹಾಗೂ ಮಾಂಬಾಡಿ ವೇಣುಗೋಪಾಲ ಭಟ್ (ಶ್ರೀ ಕೃಷ್ಣ), ಗುಡ್ಡಪ್ಪ ಬಲ್ಯ (ಕೌರವ), ದುಗ್ಗಪ್ಪ ನಡುಗಲ್ಲು (ಧರ್ಮರಾಯ), ಗಣರಾಜ ಭಟ್ ಬಡೆಕ್ಕಿಲ (ವಿದುರ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು.

Read More

ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ. ಜಿ. ಎಂ ಕಾಲೇಜು, ಉಡುಪಿ ಹಾಗೂ ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಸಂಸ್ಥೆಗಳು ಜಂಟಿಯಾಗಿ ಆಯೋಜಿಸುವ 46ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮವು ದಿನಾಂಕ 6,7 ಮತ್ತು 8 ಡಿಸೆಂಬರ್ 2024ರಂದು (ಶುಕ್ರವಾರ, ಶನಿವಾರ ಮತ್ತು ಆದಿತ್ಯವಾರ) ಉಡುಪಿಯ ಎಂ. ಜಿ. ಎಂ. ಕಾಲೇಜು ಆವರಣದ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ದಿನಾಂಕ 06 ಡಿಸೆಂಬರ್ 2024ರ ಶುಕ್ರವಾರ ಸಾಯಂಕಾಲ ಘಂಟೆ 4.00ಕ್ಕೆ ಎಂ. ಜಿ. ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭವನ್ನು ಟಿ. ಮೋಹನದಾಸ ಪೈ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಟಿ. ರಂಗ ಪೈ ಉದ್ಘಾಟಿಸಲಿರುವರು ಸಭಾಕಾರ್ಯಕ್ರಮದ ಬಳಿಕ ವಿಶ್ರಾಂತ ಪ್ರಾಚಾರ್ಯರಾದ ಡಾ. ಅನಿಲ್…

Read More

ಮಂಗಳೂರು: ಕೊಂಕಣಿತ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಇದರ 39ನೇ ವರ್ಷಾಚರಣೆ ಹಾಗೂ  ತಿಂಗಳ ವೇದಿಕೆ ಸರಣಿಯ  23 ನೇ ವರ್ಷಾಚರಣೆಯ ಅಂಗವಾಗಿ ತನ್ನ ಕೊಂಕಣಿ ಕೆಲಸಗಳಿಗೆ ಜನರ ಸಹಕಾರ ಕೋರಿ `ಧಿಗೊ ಅಭಿಯಾನ್’ ಎಂಬ ಧನ ಸಂಗ್ರಹ ಅಭಿಯಾನಕ್ಕೆ ಚಾಲನೆ ಹಾಗೂ ತಿಂಗಳ ವೇದಿಕೆ ಸರಣಿಯಲ್ಲಿ 276 ನೇ  ಕಾರ್ಯಕ್ರಮವಾಗಿ ಕಲಾಕುಲ್ ತಂಡದಿಂದ `ಆಯ್ರಿಕ್ ಸಯ್ರಿಕ್’ ನಾಟಕವು ದಿನಾಂಕ 01 ಡಿಸೆಂಬರ್ 2024 ರಂದು ಪ್ರದರ್ಶನಗೊಂಡಿತು. ಶಕ್ತಿನಗರದ  ಕಲಾಂಗಣದಲ್ಲಿ ಧಿಗೊ ಅಭಿಯಾನದ ಕರಪತ್ರ ಹಾಗೂ ಕೂಪನ್ ಗಳನ್ನು ಬಿಡುಗಡೆಗೊಳಿಸಿದ ಮಂಗಳೂರಿನ ಪ್ರಸಿದ್ಧ ಚಾರ್ಟರ್ಡ್ ಎಕೌಂಟೆಂಟ್ ಒಲ್ವಿನ್ ರೊಡ್ರಿಗಸ್ ಮಾತನಾಡಿ “ಮಾಂಡ್ ಸೊಭಾಣ್ ಕೊಂಕಣಿಗಾಗಿ ನಿರಂತರವಾಗಿ ಉತ್ತಮ ಕೆಲಸಗಳನ್ನು ಮಾಡುತ್ತಾ ಬಂದಿದೆ. ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗಾಗಿ ಬಹು ತ್ಯಾಗದ ಹಾಗೂ ಶ್ರಮದ ಕೆಲಸಗಳನ್ನು ಅವರು ಮಾಡುತ್ತಿದ್ದಾರೆ. ನಾವೂ ಸ್ವಲ್ಪ ತ್ಯಾಗ ಮಾಡಿ ಅವರಿಗೆ ಸಹಕರಿಸೋಣ.’’ ಎಂದು ಕರೆ ಕೊಟ್ಟರು. ತನ್ನ ಕೊಂಕ್ಣಿ ಚಟುವಟಿಕೆಗಳಿಗಾಗಿ ಈ ಧಿಗೊ (ಬೆಂಬಲ) ಅಭಿಯಾನವನ್ನು…

Read More

ತೆಕ್ಕಟ್ಟೆ: ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಇದರ ಹಿಮ್ಮೇಳ ಮುಮ್ಮೇಳ ತರಗತಿಗಳ ವಾರ್ಷಿಕೋತ್ಸವ “ರಂಗಾರ್ಪಣ-1” ಕಾರ್ಯಕ್ರಮ ಹಾಗೂ ‘ಸಿನ್ಸ್ 1999 ಶ್ವೇತಯಾನ- 82’ ಕಾರ್ಯಕ್ರಮವಾಗಿ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ವಿಭಾಗದ ಆಯ್ದ ಸಾಧಕರನ್ನು ಗುರುತಿಸಿ ಅಭಿನಂದಿಸುವ ಸಮಾರಂಭ ದಿನಾಂಕ 01 ಡಿಸೆಂಬರ್ 2024ರಂದು ತೆಕ್ಕಟ್ಟೆ ಹಯಗ್ರೀವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಅಭಿವಂದಿಸಿದ ಹವ್ಯಾಸಿ ಯಕ್ಷಗಾನ ಹಿರಿಯ ಕಲಾವಿದ ಸೀತಾರಾಮ ಸೋಮಯಾಜಿ ಮಾತನಾಡಿ “ನಿರಂತರ ಸಾಂಸ್ಕೃತಿಕ ಚಟುವಟಿಕೆಯಿಂದ ಸಮಾಜದಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದ ಯಶಸ್ವೀ ಕಲಾವೃಂದ ಸಾಧನೆಯ ಪಥದಲ್ಲಿದ್ದು ಇತರ ವಿಭಾಗದ ಅನೇಕ ಸಾಧಕರನ್ನು ಗುರುತಿಸುತ್ತಿರುವುದು ನಿಜಕ್ಕೂ ಸ್ತುತ್ಯರ್ಹ. ಸಾಧನೆಗೈದವರಿಗಲ್ಲದೇ ಸಾಮಾನ್ಯರಿಗೆ ಪ್ರಶಸ್ತಿ ಲಭಿಸಲು ಸಾಧ್ಯವಿಲ್ಲ. ಸಮಾಜಮುಖಿ ಕೆಲಸವನ್ನು ಮಾಡುತ್ತಾ ಉತ್ತುಂಗಕ್ಕೇರಿದಾಗಲೆ ಪ್ರಶಸ್ತಿ ದೊರೆಯಲು ಸಾಧ್ಯ. ಸಾಧನೆಗೈದ ಸಂಸ್ಥೆಯಿಂದಲೇ ಸಾಧಕರನ್ನು ಗುರುತಿಸಿ ಅಭಿನಂದಿಸುವ ಕಾರ್ಯ ಶ್ಲಾಘ್ಯಯೋಗ್ಯ.” ಎಂದರು. ಮೆಕ್ಕೆಕಟ್ಟು ಮೇಳದ ಯಜಮಾನರಾದ ರಂಜಿತ್ ಕುಮಾರ್ ಶೆಟ್ಟಿ ಮಾತನಾಡಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಸಮಾಜ ಸೇವೆಯಲ್ಲಿ ನಿರಂತರವಾಗು ತೊಡಗಿಸಿಕೊಂಡ ಕೊರ್ಗಿ…

Read More

ವಿಜಯಪುರ : ಕುಮಾರವ್ಯಾಸ ಭಾರತ ವೇದಿಕೆಯಿಂದ `ಕನಕದಾಸರ ಜಯಂತಿ’ ಕಾರ್ಯಕ್ರಮವನ್ನು ದಿನಾಂಕ 30 ನವೆಂಬರ್ 2024ರ ಶನಿವಾರದಂದು ವಿಜಯಪುರದ ಗುಜ್ಜರ ಗಲ್ಲಿಯ ಶ್ರೀ ಗುರುವಿಠ್ಠಲ ಕೃಪಾ ಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ದರಬಾರ ಶಾಲೆಯ ನಿವೃತ್ತ ಶಿಕ್ಷಕಿಯಾದ ಶ್ರೀಮತಿ ಇಂದಿರಾ ಗೋವಿಂದ ಪುರೋಹಿತ ಮಾತನಾಡಿ “ಕನಕದಾಸರು ಪ್ರತಿಭಾವಂತ ಹಾಗೂ ವಿನಯವಂತ ವ್ಯಕ್ತಿತ್ವವನ್ನು ಹೊಂದಿದ್ದರು. ಪುರಂದರ ದಾಸರ ಜೊತೆಗೆ ಕನಕದಾಸರ ಹೆಸರು ಕರ್ನಾಟಕದಲ್ಲಿ ಅತೀ ಖ್ಯಾತಿಯನ್ನು ಪಡೆದಿದೆ. ಇವರು ಕೀರ್ತನೆಗಳ ಜೊತೆಗೆ ಮಹಾಕಾವ್ಯಗಳಾದ ನಳ-ದಮಯಂತಿ, ಹರಿಭಕ್ತಿಸಾರ, ರಾಮಧಾನ್ಯ ಚರಿತೆ, ಮೋಹನ ತರಂಗಿಣಿ ಮುಂತಾದ ಕಾವ್ಯಗಳನ್ನು ಬರೆದಿರುವುದು ಕನ್ನಡಿಗರಿಗೆ ಮಾಡಿದ ಮಹದುಪಕಾರವಾಗಿದೆ. `ಕೂಡಿ ಬಾಳಿದರೆ ಸ್ವರ್ಗಸುಖ’ ಎಂಬ ನೀತಿ ವಾಕ್ಯವನ್ನು ಕನಕದಾಸರು ಸಮಾಜದ ಎಲ್ಲ ವರ್ಗಗಳಿಗೆ ನೀಡಿದರು.” ಎಂದರು. ಕಾರ್ಯಕ್ರಮದ ಆರಂಭದಲ್ಲಿ ಹಿರಿಯ ಗಮಕಿ ಶ್ರೀಮತಿ ಶಾಂತಾ ಕೌತಾಳ್ ಹಾಗೂ ಕಲ್ಯಾಣರಾವ್ ದೇಶಪಾಂಡೆ ಇವರುಗಳಿಂದ ಕನಕದಾಸರ ನಳಚರಿತ್ರೆಯ ‘ಕಾರ್ಕೋಟಕ’ ಪ್ರಸಂಗದ ಗಮಕ ಕಾವ್ಯವಾಚನ ಹಾಗೂ ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು. ನಂತರ ವಿಜಯಪುರ…

Read More

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಸಂಸ್ಥೆಯ ಮಣಿಪುರಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ `ನಿಂಗೋಲ್ ಚಕೊಬಾ’ ಆಚರಣೆಯು ದಿನಾಂಕ 01 ಡಿಸೆಂಬರ್ 2024ರ ಭಾನುವಾರ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಭಾಂಗಣದಲ್ಲಿ  ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ “2 ಸಾವಿರ ವರ್ಷಗಳ ಇತಿಹಾಸವಿರುವ ಮೈತೇಯಿ ಸಂಸ್ಕೃತಿ ಇಂದಿಗೂ ಶ್ರೀಮಂತವಾಗಿ ಉಳಿದಿರುವುದಕ್ಕಾಗಿ ನಾವೆಲ್ಲರೂ ಹೆಮ್ಮೆ ಪಡಬೇಕು. ಸಹೋದರ ಸಹೋದರಿಯರ ನಡುವೆ ಇರುವ ಭ್ರಾತೃತ್ವ ಮತ್ತು ರಕ್ಷಣಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಮೈತೇಯಿ ಸಂಸ್ಕೃತಿಯ ಪ್ರಮುಖ ಹಬ್ಬ ‘ನಿಂಗೋಲ್ ಚಕೋಬಾ’. ಭಾರತ ದೇಶವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಎಲ್ಲಾ ಸಂಪ್ರದಾಯ, ಆಚರಣೆ, ಭಾಷೆ, ಆಹಾರ ಪದ್ಧತಿ, ನಂಬಿಕೆಗಳು ಮತ್ತು ಸಂಸ್ಕೃತಿಯನ್ನು ಗೌರವಿಸಿ, ಎಲ್ಲವನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮೈತೇಯಿ ಸಂಸ್ಕೃತಿಯುಳ್ಳ ಆಚರಣೆ ಮಾಡುವುದರೊಂದಿಗೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಮಣಿಪುರದಲ್ಲಿ ಕಷ್ಟದ ಪರಿಸ್ಥಿತಿಯಲ್ಲಿ ಇರುವ ಆಯ್ದ…

Read More

ಮಂಗಳೂರು : ಕುದುರೆಮುಖ ಕನ್ನಡ ಸಂಘ ಹಾಗೂ ಕುದುರೆಮುಖ ಕ್ರೀಡಾ ಮತ್ತು ಮನೋರಂಜನಾ ಸಮಿತಿ ಇವರ ಸಹಯೋಗದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭವು ದಿನಾಂಕ 30 ನವೆಂಬರ್ 2024ರಂದು ಕಾವೂರು ನೆಹರೂ ಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಧಾನ ಭಾಷಣ ಮಾಡಿದ ಸಾಹಿತಿ ಹಾಗೂ ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ, ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ “ಕನ್ನಡ ಮಾಧ್ಯಮದಲ್ಲಿ ಕಲಿತ ಅದೆಷ್ಟೋ ಮಂದಿ ರಾಷ್ಟ್ರ – ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಎಲ್ಲಿಯೂ ಅವರನ್ನು ಭಾಷೆಯ ತೊಡಕು ಕಾಡಲಿಲ್ಲ. ಈಗಲೂ ನಮ್ಮ ಮಾತೃಭಾಷೆ ಉಳಿದಿದ್ದರೆ ಅದು ಕನ್ನಡ ಶಾಲೆಗಳಿಂದಲೇ. ಕರ್ನಾಟಕ ಮರು ನಾಮಕರಣಗೊಂಡ ಸುವರ್ಣ ಸಂಭ್ರಮದಲ್ಲಾದರೂ ಸರಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಕನ್ನಡ ಶಾಲೆ, ವಿ.ವಿ.ಗಳನ್ನು ಸದೃಢಗೊಳಿಸಬೇಕು. ಕನ್ನಡಕ್ಕೆ ಗಡಿ ರೇಖೆಗಳಿಲ್ಲ; ಪಂಚ ದ್ರಾವಿಡ ಭಾಷೆಗಳಲ್ಲಿ ಅದು ಅತ್ಯಂತ ಶ್ರೀಮಂತವಾದುದು. ಹುಲುಸಾದ ಸಾಹಿತ್ಯ ಕೃಷಿಯೊಂದಿಗೆ ವಿಸ್ತಾರವಾದ ಜಾನಪದ ಹಾಗೂ ಮೌಖಿಕ ಪರಂಪರೆ ಕನ್ನಡದಲ್ಲಿದೆ.…

Read More

ಕೋಟ : ಕೋಟದ ಸುವಿಕಾ ಸಾಂಸ್ಕೃತಿಕ ಸಂಘಟನೆಯು 2025ರ ಜನವರಿಯಲ್ಲಿ ನಡೆಯುವ ಕಾಲೇಜು ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನಕ್ಕಾಗಿ ಉಡುಪಿ ಜಿಲ್ಲಾ ಪದವಿ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಕವನಗಳನ್ನು ಆಹ್ವಾನಿಸುತ್ತಿದೆ. ಆಯ್ಕೆಯಾದ ಕವಿತೆಗಳನ್ನು ಸಮ್ಮೇಳನದ ಕವಿಗೋಷ್ಠಿಯಲ್ಲಿ ವಾಚಿಸಲು ಅವಕಾಶವಿದ್ದು, ಸಂಘಟನೆ ಪ್ರಕಟಿಸಲಿರುವ ಕವನ ಸಂಕಲನದಲ್ಲಿ ಬಳಸಿಕೊಳ್ಳಲಾಗುವುದು. ಒಬ್ಬರು ತಮ್ಮ ಸ್ವರಚಿತ ಒಂದು ಕವಿತೆಯನ್ನು ಮಾತ್ರ ಕಳುಹಿಸಬಹುದಾಗಿದೆ. ಕವಿತೆಗಳು ‘A4’ ಅಳತೆಯ ಹಾಳೆಯಲ್ಲಿ ಟೈಪ್ ಮಾಡಿದ್ದು, ತಮ್ಮ ಕಿರು ಪರಿಚಯ, ಅನುಕೂಲದ ಅಂಚೆ ವಿಳಾಸ, ವಾಟ್ಸಾಪ್ ಸಂಖ್ಯೆ ಮತ್ತು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ “ಸುಜಯೀಂದ್ರ ಹಂದೆ ಎಚ್., ಸುವಿಕಾ ಸಾಂಸ್ಕೃತಿಕ ಸಂಘಟನೆ ಕೋಟ, ಪಟೇಲರ ಮನೆ, ಕೋಟ ಅಂಚೆ, ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ- 576221 ಇವರಿಗೆ ಸಾಮಾನ್ಯ ಅಂಚೆಯಲ್ಲಿ 20 ಡಿಸೆಂಬರ್ 2024ರ ಒಳಗಾಗಿ ಕಳುಹಿಸಿಕೊಡಬಹುದು. ಹೆಚ್ಚಿನ ಮಾಹಿತಿಗೆ 9845414622 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಂಘಟನೆಯ ಕಾರ್ಯದರ್ಶಿ ವಿನಿತಾ ಸುಜಯೀಂದ್ರ ಹಂದೆ ತಿಳಿಸಿದ್ದಾರೆ.

Read More