Subscribe to Updates
Get the latest creative news from FooBar about art, design and business.
Author: roovari
ಮಡಿಕೇರಿ : ರಾಷ್ಟ್ರಕವಿ ರಸಋಷಿ ಕುವೆಂಪು ಅವರು ರಚಿಸಿದ ನಾಡಗೀತೆ “ಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ” ಈ ಗೀತೆಗೆ ನೂರು ಪರುಷ ತುಂಬಿದೆ. 1924ರಲ್ಲಿ ಕುವೆಂಪುರವರು ಈ ಗೀತೆಯನ್ನು ರಚಿಸಿದ್ದು ಭಾರಿ ಜನಮನ್ನಣೆ ಗಳಿಸಿಕೊಂಡಿತ್ತು. ಕರ್ನಾಟಕ ಸರಕಾರ ಈ ಗೀತೆಯನ್ನು ನಾಡಗೀತೆ ಎಂದು ಘೋಷಿಸಿತು. ನಂತರ ಸರಕಾರಿ ಮತ್ತು ಸರಕಾರೇತರ ಕಾರ್ಯಕ್ರಮಗಳಲ್ಲಿ ಪ್ರಾರಂಭದಲ್ಲಿ ಹಾಡುವುದು ಕಡ್ಡಾಯವಾಗಿಸಿತು. ಕನ್ನಡ ಸಾಹಿತ್ಯ ಪರಿಷತ್ತು ಬಹಳ ಹಿಂದಿನಿಂದಲೇ ಈ ಗೀತೆಯನ್ನು ತನ್ನ ಕಾರ್ಯಕ್ರಮಗಳಲ್ಲಿ ಅಳವಡಿಸಿಕೊಂಡು ಬಂದಿದೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಾಡಗೀತೆಯ ನೂರನೆಯ ವರ್ಷ ಆಚರಣೆಯನ್ನು ಜಿಲ್ಲೆಯಲ್ಲಿ ವೈವಿಧ್ಯಪೂರ್ಣವಾಗಿ ನಡೆಸುವಂತೆ ತೀರ್ಮಾನಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ದಿನಾಂಕ 29 ಡಿಸೆಂಬರ್ 2024ರಂದು ಕುವೆಂಪು ಜನ್ಮದಿನದಂದು ಮಡಿಕೇರಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಇದರ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ನಾಡಗೀತೆ ಗಾಯನ ಸ್ಪರ್ಧೆ, ನಾಡಗೀತೆ ವಿಶ್ಲೇಷಣೆ, ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.…
ಮಂಗಳೂರು : ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಕದ್ರಿ ಶ್ರೀ ಮಂಜುನಾಥ ದೇವಾಲಯದ ರಾಜಾಂಗಣದಲ್ಲಿ ದಿನಾಂಕ 15 ನವೆಂಬರ್ 2024ರಂದು 12ನೇ ವರ್ಷದ ನುಡಿ ಹಬ್ಬ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಅಂಗವಾಗಿ ‘ದಿ. ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಸಂಸ್ಮರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಮರಣ ಭಾಷಣ ಮಾಡಿ ಪೂಂಜರ ಸಾಧನೆಗಳನ್ನು ಸ್ಮರಿಸಿದ ಯಕ್ಷಾಂಗಣದ ಕಾರ್ಯಾಧ್ಯಕ್ಷ, ಯಕ್ಷಗಾನ ಅರ್ಥಧಾರಿ ಮತ್ತು ವಿಮರ್ಶಕ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ “ಯಕ್ಷಗಾನ ಕ್ಷೇತ್ರದಲ್ಲಿ ಸವ್ಯಸಾಚಿ ಎಂದು ಗುರುತಿಸಲ್ಪಟ್ಟ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಭಾಗವತರಾಗಿ, ಪ್ರಸಂಗಕರ್ತರಾಗಿ, ಹಿಮ್ಮೇಳ – ಮುಮ್ಮೇಳಗಳ ಸಮರ್ಥ ಕಲಾವಿದರಾಗಿ ಮೆರೆದವರು. ಅವರು ಯಕ್ಷರಂಗದಲ್ಲಿ ಸರ್ವ ಸಾಧ್ಯತೆಗಳನ್ನು ಕಂಡರಸಿದ ಶೋಧಕರು. ಮನೆಯನ್ನೇ ಗುರುಕುಲವನ್ನಾಗಿಸಿ ನೂರಾರು ಶಿಷ್ಯರ ಮೂಲಕ ತಮ್ಮ ಯೋಚನೆಗಳನ್ನೆಲ್ಲ ಸಾಕಾರಗೊಳಿಸಿದ ದೊಡ್ಡ ಸಾಹಸಿ. ಸುಮಾರು 32 ಕನ್ನಡ-ತುಳು ಪ್ರಸಂಗಗಳನ್ನು ಬರೆದ…
ಪುತ್ತೂರು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವಿಂಶತಿ ಸರಣಿ ತಾಳಮದ್ದಳೆ – 14 ಸಂಘದ ಸದಸ್ಯೆ ಜಯಂತಿ ಹೆಬ್ಬಾರ್ ಇವರ ಪ್ರಾಯೋಜಕತ್ವದಲ್ಲಿ ದಿನಾಂಕ 25 ನವೆಂಬರ್ 2024ರಂದು ಬನ್ನೂರು ಭಾರತಿ ನಗರದ ಶ್ರೀ ಬಲಮುರಿ ವಿದ್ಯಾಗಣಪತಿ ದೇವಳದ ಆಶ್ರಯದಲ್ಲಿ ನಡೆಯಿತು. ಹಳೆಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧನ’ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ ಚೆಂಡೆ ಮದ್ದಳೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮಾ. ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಹನೂಮಂತನಾಗಿ ಗುಂಡ್ಯಡ್ಕ ಈಶ್ವರ ಭಟ್, ಅರ್ಜುನನಾಗಿ ಭಾಸ್ಕರ್ ಬಾರ್ಯ ಮತ್ತು ಮಾಂಬಾಡಿ ವೇಣುಗೋಪಾಲ ಭಟ್, ವೃದ್ದ ವಿಪ್ರನಾಗಿ ಗುಡ್ಡಪ್ಪ ಬಲ್ಯ, ಶ್ರೀ ರಾಮನಾಗಿ ಬಡೆಕ್ಕಿಲ ಚಂದ್ರಶೇಖರ್ ಭಟ್ಸಹಕರಿಸಿದರು. ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ ಚಂದ್ರಶೇಖರ್ ಭಟ್ ವಂದಿಸಿದರು.
ಮಂಗಳೂರು: ‘ನಾದಸ್ವರ ಸೆಲ್ವಂ’ ವಿದ್ವಾನ್ ನಾಗೇಶ್ ಎ. ಬಪ್ಪನಾಡು ಇವರಿಗೆ ಆಕಾಶವಾಣಿಯ ಅತ್ಯುನ್ನತ ಶ್ರೇಣಿ ಲಭಿಸಿದ ಹಿನ್ನೆಲೆಯಲ್ಲಿ ವಿದ್ವಾನ್ ನಾಗೇಶ್ ಎ. ಬಪ್ಪನಾಡು ಅಭಿನಂದನ ಸಮಿತಿ ವತಿಯಿಂದ ಸಾರ್ವಜನಿಕ ಅಭಿನಂದನಾ ಸಮಾರಂಭ ದಿನಾಂಕ 24 ನವೆಂಬರ್ 2024ರ ರವಿವಾರ ಹಂಪನಕಟ್ಟೆ ವಿ.ವಿ. ಕಾಲೇಜಿನ ರವೀಂದ್ರ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಪೇಜಾವರ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಮಾತನಾಡಿ “ನಾಗೇಶ್ ಬಪ್ಪನಾಡು ಇವರು ಶ್ರೇಷ್ಟ ಕಲಾವಿದರಾಗಿದ್ದು, ಇವರಿಗೆ ಅರ್ಹವಾಗಿಯೇ ಆಕಾಶವಾಣಿಯ ಅತ್ಯುನ್ನತ ಶ್ರೇಣಿ ಲಭಿಸಿದೆ. ಮಂಗಳವಾದ್ಯ ಕ್ಷೇತ್ರದಲ್ಲಿ ಅವರ ಸಾಧನೆ ನಾಡಿಗೆ ಕೀರ್ತಿ ತಂದಿದೆ. ಅವಿಭಜಿತ ಜಿಲ್ಲೆಯ ದೇಗುಲಗಳಲ್ಲಿ ನಾದಸ್ವರಕ್ಕೆ ಅದರದ್ದೇ ಆದ ಮಹತ್ವದ ಸ್ಥಾನವಿದೆ. ಅಯೋಧ್ಯೆಯಲ್ಲಿ ನಾದಸ್ವರವನ್ನು ನುಡಿಸುವ ಅವಕಾಶವನ್ನೂ ಅವರು ಪಡೆದಿದ್ದಾರೆ. ಇಂತಹ ಅವಕಾಶಗಳು ಅವರಿಗೆ ಮುಂದೆಯೂ ಲಭಿಸಲಿ.” ಎಂದರು. ಅಭಿನಂದನಾ ಸಮಿತಿ ಗೌರವಾಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾಗೇಶ್ ಎಂ. ಬಪ್ಪನಾಡು ಇವರನ್ನು ಪತ್ನಿ ಶ್ರೀ ಲತಾ, ಪುತ್ರ…
ವಿರಾಜಪೇಟೆ : ಕೊಡಗು ಜಿಲ್ಲಾ ಕ್ರೀಡಾ ಮತ್ತು ಸಾಂಸ್ಕೃತಿಕ ಇಲಾಖೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ 3ನೇ ವರ್ಷದ ಶಾಸ್ತ್ರೀಯ, ಜನಪದ, ಫ್ರೀ ಸ್ಟೈಲ್ ಹಾಗೂ ಹಿಪ್ ಹೋಪ್ ಸ್ಪರ್ಧೆಯು ದಿನಾಂಕ 18 ನವೆಂಬರ್ 2024ರಂದು ಮಡಿಕೇರಿಯ ಮೈತ್ರಿ ಹಾಲ್ನಲ್ಲಿ ನಡೆಯಿತು. ಸ್ಪರ್ಧೆಯ ಶಾಸ್ತ್ರೀಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗಗಳಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚು ಸೇರಿದಂತೆ ಒಟ್ಟು 156 ಮೆಡಲ್ಗಳನ್ನು ಗೆದ್ದುಕೊಂಡಿದ್ದಾರೆ. ತಂಡದ ಗುರುಗಳಾದ ಹೇಮಾವತಿ ಕಾಂತ್ರಾಜ್ ಹಾಗೂ ಕಾವ್ಯಶ್ರೀ ಕಾಂತ್ ರಾಜ್ ವಿದ್ಯಾರ್ಥಿಗಳಿಗೆ ನೃತ್ಯ ಹಾಗೂ ಸಂಗೀತ ತರಬೇತಿಯನ್ನು ನೀಡಿದ್ದಾರೆ.
ಕುಂದಾಪುರ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ‘ಸಿನ್ಸ್ 1999 ಶ್ವೇತಯಾನ-80’ ಕಾರ್ಯಕ್ರಮದಡಿಯಲ್ಲಿ ಚಿಣ್ಣರ ತಾಳಮದ್ದಳೆ ಕಾರ್ಯಕ್ರಮವು ದಿನಾಂಕ 24 ನವೆಂಬರ್ 2024ರಂದು ಕುಂದಾಪುರ ಕೋಡಿಯ ಚಕ್ರಮ್ಮ ದೇಗುಲದಲ್ಲಿ ನಡೆಯಿತು. ಸಮಾರಂಭದ ಪ್ರಾಯೋಜಕರಾದ ಕೊಡುಗೈ ದಾನಿ ಬಾಂಬೆ ಸೇಫ್ ಕಂಪೆನಿಯ ಮುಖ್ಯಸ್ಥರಾದ ದತ್ತಾನಂದ ಗಂಗೊಳ್ಳಿ ಇವರನ್ನು ಅಭಿನಂದಿಸಿದ ಖ್ಯಾತ ವಕೀಲರಾದ ಎ. ಎಸ್. ಎನ್. ಹೆಬ್ಬಾರ್ ಮಾತನಾಡಿ “ಸಾಂಸ್ಕೃತಿಕ ಕಾರ್ಯಕ್ರಮಗಳು ಗತಕಾಲದಲ್ಲಿ ರಾಜಾಶ್ರಯದಲ್ಲಿ ನೆರವೇರುತ್ತಿತ್ತು. ಹಿಂದೆ ರಾಜರು ನೆರವೇರಿಸುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತ ಕಾಲಘಟ್ಟದಲ್ಲಿ ಪ್ರಾಯೋಜಕರು ನೆರವೇರಿಸುತ್ತಿದ್ದಾರೆ. ಇಂದು ಪ್ರಾಯೋಜಕರೇ ರಾಜರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುವ ಯಶಸ್ವಿ ಕಲಾವೃಂದದ ಮಕ್ಕಳ ಕಾರ್ಯಕ್ರಮವನ್ನು ದತ್ತಾನಂದ ಗಂಗೊಳ್ಳಿ ಪ್ರಯೋಜನೆ ನೀಡಿ ಅವಕಾಶ ಕೊಟ್ಟು ನಿಜಾರ್ಥದಲ್ಲಿ ರಾಜರಾದರು.” ಎಂದರು. ಗುರುಗಳಾದ ಲಂಬೋದರ ಹೆಗಡೆ ನಿಟ್ಟೂರು ಮಾತನಾಡಿ “ಕಲಾ ಚಟುವಟಿಕೆಗಳು ನಿರಂತರವಾಗಿ ಸಾಗಿ ಬಂದಾಗ ಒಂದಷ್ಟು ಕಲಾವಿದರುಗಳಿಗೆ ಅವಕಾಶ ಕಲ್ಪಿತವಾಗುತ್ತದೆ. ಪ್ರಾಯೋಜಕರ ನೆರವಿನಿಂದ ಸಾಧ್ಯವಾಗುವ ಅವಕಾಶವನ್ನು ಸಂಸ್ಥೆ ಸದಾ ಸ್ಮರಿಸುತ್ತದೆ.” ಎಂದರು. ಸಮಾರಂಭದಲ್ಲಿ ಉದ್ಯಮಿ ಗೋಪಾಲ ಪೂಜಾರಿ, ಸಭಾಭವನದ…
ಬೆಂಗಳೂರು : ಜಂಗಮ ಕಲೆಕ್ಟಿವ್ ಬೆಂಗಳೂರು ಆಯೋಜಿಸುವ ‘ವಿಚಾರಕ್ರಾಂತಿ ಆಹ್ವಾನ – ಕುವೆಂಪು ಸಾಹಿತ್ಯದ ಪ್ರಸ್ತುತತೆ’ ಕಾರ್ಯಕ್ರಮವು ದಿನಾಂಕ 08 ಡಿಸೆಂಬರ್ 2024ರಂದು ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಬಿ. ಐ. ಸಿ. ಯಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ ಘಂಟೆ 11-00ರಿಂದ 11- 30ರ ವರೆಗೆ ಮೈಸೂರಿನ ಮಾಯ್ಕಾರ ತಂಡದಿಂದ ಕುವೆಂಪು ಕಾವ್ಯಗಾಯನ, 11- 45 ರಿಂದ 1-30ರ ವರೆಗೆ ಇಂಗ್ಲೀಷ್ ಪ್ರಾಧ್ಯಾಪಕರು ಹಾಗೂ ರಾಜಕೀಯ ಚಿಂತಕರಾದ ವಿ. ಎಲ್. ನರಸಿಂಹಮೂರ್ತಿ ಇವರ ಸಂಯೋಜನೆಯಲ್ಲಿ ಲೇಖಕರು ಹಾಗೂ ಕನ್ನಡ ಅಧ್ಯಾಪಕರಾದ ಡಾ: ರವಿಕುಮಾರ್ ಬಾಗಿ ಇವರಿಂದ ‘ಕುವೆಂಪು ವೈಚಾರಿಕತೆಯ ಕುರಿತು ಮಾತು’ ಹಾಗೂ ಕವಿ ಮತ್ತು ಪ್ರಕಾಶಕರಾದ ಅಕ್ಷತ ಹುಂಚದಕಟ್ಟೆ ಇವರಿಂದ ‘ಕುವೆಂಪು ಕವಿತೆ ಮತ್ತು ಆತ್ಮಕತೆ ಕುರಿತು ಮಾತು’ ಕಾರ್ಯಕ್ರಮಗಳು ನಡೆಯಲಿವೆ. ಅಪರಾಹ್ನ 2-30 ರಿಂದ 3-30ರ ವರೆಗೆ ಪ್ರಶಸ್ತಿ ವಿಜೇತ ನಟ ಮತ್ತು ಸಂಗೀತಗಾರರಾದ ಸಂತೋಷ್ ದಿಂಡಗೂರು ಇವರಿಂದ ‘ಮಲೆಗಳಲ್ಲಿ ಮದುಮಗಳು’ ಆಯ್ದಭಾಗಗಳ ಓದು, ಸಂಜೆ ಘಂಟೆ 3-30 ರಿಂದ 5-00ರ…
ಮುಂಬೈ : ಕಲಾಸೇವೆಯಲ್ಲಿರುವಾಗಲೇ ಹವ್ಯಾಸಿ ಭಾಗವತ ಹೃದಯಘಾತಕ್ಕೊಳಗಾಗಿ ಕಲಾಲೀನವಾದ ಘಟನೆ ಮುಂಬಯಿಯಲ್ಲಿ ದಿನಾಂಕ 23 ನವೆಂಬರ್ 2024 ರಂದು ಸಂಭವಿಸಿದೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಬ್ರಹ್ಮಾವರ ಸಮೀಪದ ಕುಕ್ಕೆಹಳ್ಳಿ ಮುಂಗ್ರಿಬೈಲು ನಿವಾಸಿ ವಿಟ್ಠಲ ಪ್ರಭು ಅವರು ಭಾಗವತಿಕೆ ಮಂಚದಲ್ಲೇ ಹೃದಯಾಘಾತಕ್ಕೆ ಒಳಗಾದ ಹವ್ಯಾಸಿ ಭಾಗವತ. ಮುಂಬಯಿಯಲ್ಲಿ ಉದ್ಯಮ ನಡೆಸುತ್ತಿದ್ದ ಅವರು ಹವ್ಯಾಸಿ ಕಲಾವಿದರಾಗಿ ಯಕ್ಷಗಾನದಲ್ಲಿ ಭಾಗವಹಿಸುತ್ತಿದ್ದರು. ತನ್ನ ತಂಡದ ಮೂಲಕ ಹಲವಾರು ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಯನ್ನೂ ನೀಡಿದ್ದರು. ಯಕ್ಷಗಾನ ತಾಳಮದ್ದಳೆ, ವೇಷಧಾರಿಕೆ ಮಾತ್ರವಲ್ಲದೆ ಯಕ್ಷಗಾನ ನಿರ್ದೇಶನ, ಮರಾಠಿ ಹಾಗೂ ಕೊಂಕಣಿ ಭಾಷೆಯಲ್ಲಿ ಯಕ್ಷಗಾನ ಪರಿಚಯಿಸಿದ್ದರು. ನವೆಂಬರ್ 23ರ ರಾತ್ರಿ ಮುಂಬಯಿಯ ದಹಿಸರ್ನ ಕಾಶಿಮಠದಲ್ಲಿ ಇವರದೇ ನಿರ್ದೆಶನದಲ್ಲಿ ‘ಶ್ರೀಕೃಷ್ಣ ಪಾರಿಜಾತ’ ಯಕ್ಷಗಾನದ ಪ್ರದರ್ಶನ ನಡೆಯುತ್ತಿದ್ದಾಗ ಭಾಗವತಿಕೆಯನ್ನು ಮಾಡುತ್ತಿರುವಾಗ ಎದೆನೋವು ಕಾಣಿಸಿಕೊಂಡಿದ್ದು, ತತ್ಕ್ಷಣ ಬೇರೊಬ್ಬರು ಭಾಗವತರನ್ನು ನೇಮಿಸಿ ಪ್ರಭು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯೆ ಅವರು ಕೊನೆಯುಸಿರೆಳೆದರು.
ಉಡುಪಿ : ಇತ್ತೀಚೆಗೆ ನಿಧನರಾದ ಜಾನಪದ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದ ಸಾಧಕರಾದ ಕುದಿ ವಸಂತ ಶೆಟ್ಟಿ ಇವರಿಗೆ ನುಡಿನಮನ ಕಾರ್ಯಕ್ರಮವು ದಿನಾಂಕ 24 ನವೆಂಬರ್ 2024ರ ರವಿವಾರದಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಧಾರ್ಮಿಕ ಮುಖಂಡ ನಟರಾಜ್ ಹೆಗ್ಡೆ ಮಾತನಾಡಿ “ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡುವ ಮೂಲಕ ಸಾವಿರಾರು ಸಂಸ್ಕಾರವಂತ ವಿದ್ಯಾರ್ಥಿಗಳನ್ನು ರೂಪಿಸುವಲ್ಲಿ ಕಾರಣೀಭೂತರಾಗಿದ್ದ ಕುದಿ ವಸಂತ ಶೆಟ್ಟಿಯವರು ಜಾನಪದ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹೆಚ್ಚಿನ ಪರಿಣತಿ ಹೊಂದಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಅವರು ಎಲ್ಲರಿಗೂ ಬೇಕಾದವರಾಗಿದ್ದರು. ಹಾಗಾಗಿ ಅವರು ಒಬ್ಬ ವ್ಯಕ್ತಿಯಾಗಿರದೆ ಸಮಾಜದ ಶಕ್ತಿಯಾಗಿದ್ದರು.” ಎಂದು ಹೇಳಿದರು. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಹರಿಪ್ರಸನ್ನ ಶೆಟ್ಟಿ, ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ನ್ಯಾಯವಾದಿ ಸತೀಶ್ ಪೂಜಾರಿ, ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ನಾಯಕ್, ಡಯಟ್ ಇದರ ಪ್ರಾಂಶುಪಾಲ ಅಶೋಕ್ ಕಾಮತ್ ಮೊದಲಾದವರು ನುಡಿನಮನ ಸಲ್ಲಿಸಿದರು.…
ಮಡಿಕೇರಿ : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಸ್ಪರ್ಧೆ ಮತ್ತು 2023-24ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗೆ ಟಿ. ಪಿ. ರಮೇಶ್ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವು ದಿನಾಂಕ 30 ನವೆಂಬರ್ 2024ರ ಶನಿವಾರ ಬೆಳಗ್ಗೆ ಗಂಟೆ 10.00 ಕ್ಕೆ ಮಡಿಕೇರಿಯ ಲಯನ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಲೋಕನಾಥ ಅಮೆಚೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಐಶ್ವರ್ಯ ಆರ್ ನಡೆಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್, ಶಿಕ್ಷಣ ಇಲಾಖೆ ಮಡಿಕೇರಿಯ ತಾಲೂಕು…