Subscribe to Updates
Get the latest creative news from FooBar about art, design and business.
Author: roovari
ತೆಕ್ಕಟ್ಟೆ: ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಸಹಯೋಗದೊಂದಿಗೆ ಭರತನಾಟ್ಯ ತರಗತಿಯ ಗುರು ಶ್ರೀಮತಿ ಅಮೃತಾ ಉಪಾಧ್ಯ ಇವರಿಗೆ ಗುರುವಂದನೆ ಕಾರ್ಯಕ್ರಮವು ದಿನಾಂಕ 12 ಜುಲೈ 2025ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಯಕ್ಷಗುರು ಲಂಬೋದರ ಹೆಗಡೆ ಮಾತನಾಡಿ “ಗುರಿ ಮುಂದಿರಬೇಕು, ಗುರು ಹಿಂದಿರಬೇಕು. ಗುರಿಯನ್ನು ನೆರವೇರಿಸುವಲ್ಲಿ ಗುರು ಮಹತ್ವದ ಪಾತ್ರ ವಹಿಸುತ್ತಾನೆ. ಭರತನಾಟ್ಯದಲ್ಲಿ ವೇದಿಕೆಯನ್ನು ಬಳಸಿಕೊಳ್ಳಬೇಕಾದರೆ ಗುರುವಿಗೆ ವಿಶೇಷ ಸ್ಥಾನವಿದೆ. ಶಿಷ್ಯರು ಗುರುವಿಗೆ ವಂದಿಸಿಯೇ, ಗುರುವನ್ನು ಅವಲಂಬಿಸಿಯೇ ವೇದಿಕೆಯಲ್ಲಿ ವಿಜೃಂಬಿಸುತ್ತಾರೆ. ಗುರು ದಿನವನ್ನು ಮಹತ್ವಪೂರ್ಣವಾಗಿಸಬೇಕಾದದ್ದು ಶಿಷ್ಯನ ಆದ್ಯ ಕರ್ತವ್ಯ” ಎಂದರು. ಕಾರ್ಯಕ್ರಮದಲ್ಲಿ ಶಿಷ್ಯರನೇಕರು ಗುರುವನ್ನು ಗೌರವಿಸಿ ವಂದಿಸಿದರು.
ಪುತ್ತೂರು: ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ನೇತೃತ್ವದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಸಹಕಾರದಲ್ಲಿ, ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇದರ ಆಶ್ರಯದಲ್ಲಿ, ದಿ. ಚಿದಾನಂದ ಕಾಮತ್ ಕಾಸರಗೋಡು ಇವರ ಸ್ಮರಣಾರ್ಥ ‘ಮುಂಗಾರು ಕವಿಗೋಷ್ಠಿ -2025’ ಕಾರ್ಯಕ್ರಮವು 13 ಜುಲೈ 2025ರಂದು ಪ್ರಗತಿ ಸ್ಟಡಿ ಸೆಂಟರ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ರುದ್ರಾಕ್ಷಿ ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟಿಸಿದ ಪ್ರಗತಿ ಎಜುಕೇಶನಲ್ ಫೌಂಡೇಶನ್ (ರಿ.) ಪುತ್ತೂರು ಇದರ ಸ್ಥಾಪಕಾಧ್ಯಕ್ಷರಾದ ಗೋಕುಲ್ ನಾಥ್ ಪಿ. ವಿ. ಮಾತನಾಡಿ “ದಿ. ಚಿದಾನಂದ ಕಾಮತ್ ಇವರು ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅವರ ಸ್ಮರಣಾರ್ಥವಾಗಿ ಕಾರ್ಯಕ್ರಮ ಆಯೋಜಿಸಿ ಹೊಸ ಕವಿಗಳಿಗೆ ವೇದಿಕೆಯನ್ನು ಕಲ್ಪಿಸಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಇನ್ನಷ್ಟು ಒಲವು ತೋರಿಸಿ ಭಾಷಾ ವೈವಿಧ್ಯತೆಯನ್ನು ಹೆಚ್ಚಿಸಬೇಕು” ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಮಾತನಾಡಿ “ಚಿಗುರೆಲೆ ಸಾಹಿತ್ಯ ಬಳಗ…
ತೆಕ್ಕಟ್ಟೆ: ತೆಕ್ಕಟ್ಟೆಯ ಯಶಸ್ವೀ ಕಲಾವೃಂದ ಯಕ್ಷಗಾನ ಕೇಂದ್ರದ ವತಿಯಿಂದ ಗುರುಪೂರ್ಣಿಮೆ – ಗುರುವಂದನೆ ಕಾರ್ಯಕ್ರಮವು ದಿನಾಂಕ 11 ಜುಲೈ 2025ರಂದು ಹಯಗ್ರೀವದಲ್ಲಿ ನಡೆಯಿತು. ಕೈಲಾಸ ಕಲಾಕ್ಷೇತ್ರದ ಅಧ್ಯಕ್ಷ ಹಾಗೂ ಅಧ್ಯಾಪಕರಾದ ಹೆರಿಯ ಮಾಸ್ಟರ್ ಮಾತನಾಡಿ “ಗುರುಗಳು ಜ್ಞಾನದ ದಾರಿದೀಪ. ಶಿಷ್ಯನ ಜೀವನದಲ್ಲಿ ಬೆಳಕು ಚೆಲ್ಲಿ, ಅಜ್ಞಾನವನ್ನು ದೂರ ಮಾಡಿ, ಸರಿಯಾದ ಮಾರ್ಗವನ್ನು ತೋರುವವನು ಗುರು. ಕಲಾ ವಿಭಾಗದಲ್ಲಿನ ಮೌಢ್ಯವನ್ನು ಅಳಿಸಿ, ತಾಳ-ರಾಗ-ಲಯಗಳ ಬಗೆಗೆ ತಿಳುವಳಿಕೆ ನೀಡಿ, ರಂಗದಲ್ಲಿ ಬೆಳಗಿಸುವ ಕಾರ್ಯ ಮಾಡುತ್ತಿರುವವರು ಗುರುಗಳು. ಗುರುವಿನ ದಿನವನ್ನು ಸಂಭ್ರಮವಾಗಿಸಬೇಕಾದುದು ಪ್ರತೀ ಶಿಷ್ಯನ ಕರ್ತವ್ಯ” ಎಂದರು. ಸಮಾರಂಭದಲ್ಲಿ ಯಕ್ಷಗಾನ ಕೇಂದ್ರದ ಗುರುಗಳಾದ ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಲಂಬೋದರ ಹೆಗಡೆ ನಿಟ್ಟೂರು, ಕೃಷ್ಣಯ್ಯ ಆಚಾರ್ ಬಿದ್ಕಲ್ಕಟ್ಟೆ ಇವರನ್ನು ಶಿಷ್ಯರನೇಕರು ವಂದಿಸಿ, ಅಭಿನಂದಿಸಿದರು. ಸಂಸ್ಥೆಯ ಅಧ್ಯಕ್ಷರಾದ ಸೀತಾರಾಮ ಶೆಟ್ಟಿ ಮಲ್ಯಾಡಿ, ಡಾ. ಗಣೇಶ್ ಯು., ಸುಧಾ ಮಣೂರು, ಪಾರ್ವತಿ ಮೈಯ್ಯ, ಭಾಗ್ಯಲಕ್ಷ್ಮೀ, ಗೋಪಾಲ್ ಪೂಜಾರಿ, ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು : ಶ್ರೀ ಗುರುರಾಜ್ ಗಂಟಿಹೊಳೆ ಹಿತೈಷಿಗಳು ಬೆಂಗಳೂರು ಇವರ ಆಯೋಜನೆಯಲ್ಲಿ ‘ಸಂಕಲ್ಪ’ ಕಾರ್ಯಕ್ರಮವನ್ನು ದಿನಾಂಕ 17 ಜುಲೈ 2025ರಂದು ಮಧ್ಯಾಹ್ನ 2-00 ಗಂಟೆಗೆ ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಇಲ್ಲಿರುವ ಬಂಟರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ. ಹೊಸಂಗಡಿ ಶ್ರೀ ಶಿವಶಕ್ತಿ ಭಜನಾ ಮಂಡಳಿ, ಮೋವಾಡಿ ತ್ರಾಸಿಯ ಶ್ರೀ ಮಾಣಿ ಸಿದ್ಧಲಿಂಗೇಶ್ವರ ಭಜನಾ ಮಂಡಳಿ ಮತ್ತು ಹೊಕ್ಕೋಳಿ ಮೋರ್ಟು ಶ್ರೀ ಪಂಜುರ್ಲಿ ಯುವ ಭಜನಾ ಮಂಡಳಿ ಇವರಿಂದ ಶ್ರೀರಾಮ ಕುಣಿತ ಭಜನೆ ಮತ್ತು ‘ಶ್ರೀ ದೇವಿ ಮಹಾತ್ಮೆ’ ಬಡಗುತಿಟ್ಟಿನ ಸಾಂಪ್ರದಾಯಿಕ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಬೆಂಗಳೂರು : ಬೆಂಗಳೂರಿನ ಆಧಾರಿತ ನೃತ್ಯ, ನಾಟಕ ಮತ್ತು ಸಂಗೀತ ತಂಡ ಕ್ರಾನಿಕಲ್ಸ್ ಆಫ್ ಇಂಡಿಯಾ ಇದರ ವತಿಯಿಂದ ಮಹಾನ್ ಭಾವಗೀತೆ ಕವಿ ಮತ್ತು ಸಾಹಿತ್ಯ ದಿಗ್ಗಜ ಡಾ. ಹೆಚ್.ಎಸ್. ವೆಂಕಟೇಶ್ ಮೂರ್ತಿಯವರ ಸ್ಮರಣಾರ್ಥವಾಗಿ ದಿನಾಂಕ 19 ಜುಲೈ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ‘ಬಾನಿನಲ್ಲಿ ಬರೆದವರು’ (ಭಾವಗೀತೆಗಳಲ್ಲಿ ಡಾ. ವೆಂಕಟೇಶ್ ಮೂರ್ತಿ ಅವರ ಕಾವ್ಯಾನುಭವ) ಒಂದು ಸಂಗೀತ ಸಂಜೆ ಆಯೋಜಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 8867419347 | 9741059758.
ಬದಿಯಡ್ಕ : ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 12 ಜುಲೈ 2025ರಂದು ಕಾಸರಗೋಡಿನ ಮುಜುಂಗಾವು ಶ್ರೀಭಾರತೀ ವಿದ್ಯಾಪೀಠದಲ್ಲಿ ವಿದ್ಯಾರ್ಥಿಗಳಿಗೆ ನಡೆದ ಕನ್ನಡ ಸಾಹಿತ್ಯ ಮಾರ್ಗದರ್ಶನ ಅಭಿಯಾನದ 3ನೇ ಶಿಬಿರವು ನಡೆಯಿತು. ಈ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸ್ಥಾಪಕ ಸಂಚಾಲಕ ಡಾ. ಕೆ. ವಾಮನ್ ರಾವ್ ಬೇಕಲ್ “ಕನ್ನಡ ಸಾಹಿತ್ಯದ ಮೂಲಕ ಮಕ್ಕಳಲ್ಲಿ ಭಾಷಾಭಿಮಾನ ಬೆಳೆಸಲು ಸಾಧ್ಯ. ಕನ್ನಡ ಕಟ್ಟುವ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಬೇಕಾದ ಸ್ಥಿತಿಯಿದೆ” ಎಂದು ಹೇಳಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಆಡಳಿತ ಸೇವಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಮಾತನಾಡಿ “ಪ್ರತಿಯೊಬ್ಬ ಕನ್ನಡಿಗರೂ ಕೂಡಾ ಬೇರೆ ಭಾಷೆಯ ಶಬ್ಧಗಳನ್ನು ಸೇರಿಸದ ಶುದ್ಧ ಕನ್ನಡದಲ್ಲಿ ವ್ಯವಹರಿಸುವ ಪ್ರತಿಜ್ಞೆ ಮಾಡಬೇಕು. ಇಂದಿನ ಶೈಕ್ಷಣಿಕ ಕ್ಷೇತ್ರದಲ್ಲಿ ವ್ಯಾಕರಣ ಬದ್ಧವಾದ ಸಾಹಿತ್ಯ ಕಲಿಕೆಯ ಅಗತ್ಯವಿದೆ. ಕನ್ನಡ ವ್ಯಾಕರಣದ ಬಗ್ಗೆ ನಿರ್ಲಕ್ಷ್ಯ ಸಲ್ಲದು” ಎಂದು ಹೇಳಿದರು.…
ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೇಳನೇ ಉಪನ್ಯಾಸ ಕಾರ್ಯಕ್ರಮ ದಿನಾಂಕ 12 ಜುಲೈ 2025 ರಂದು ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜು (ಸ್ವಾಯತ್ತ), ಇಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ ಯುವ ಲೇಖಕಿ ಮತ್ತು ವಾಗ್ಮಿಯಾದ ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ “ದಿಟ್ಟ ಮನಸ್ಸುಗಳ ನಿರ್ಮಾಣ – ಇಂದಿನ ಯುವಕರಿಗಾಗಿ ಸ್ವಾಮಿ ವಿವೇಕಾನಂದರ ಚಿಂತನೆ” ಎಂಬ ವಿಷಯದಲ್ಲಿ ಮಾತನಾಡಿ “ಸ್ವಾಮಿ ವಿವೇಕಾನಂದರು ಯುವಕರನ್ನು ದೇಶದ ನಿಜವಾದ ಶಕ್ತಿ ಎಂದು ಕರೆದು, ಅವರಿಗೆ ಆತ್ಮಶ್ರದ್ಧೆ ಎಂಬ ಅಮೋಘ ಶಸ್ತ್ರವನ್ನು ನೀಡಿದ್ದಾರೆ. ಅವರು ಬೋಧಿಸಿದಂತೆ, “ನೀನು ದೇವನಸ್ವರೂಪ, ನಿನ್ನೊಳಗೇ ಅನಂತ ಶಕ್ತಿ ಇದೆ” ಎಂಬ ನಂಬಿಕೆಯನ್ನು ಪ್ರತಿಯೊಬ್ಬ ಯುವಕನ ಮನಸ್ಸಿನಲ್ಲಿ ಬೆಳೆಸಿದವರು. ಭಯ, ಅನುಮಾನ, ಹತಾಶೆ – ಈ ಎಲ್ಲವುಗಳಿಂದ ಯುವಕರು ಅಸ್ತವ್ಯಸ್ತರಾಗುತ್ತಿರುವ ಈ ಸಮಯದಲ್ಲಿ, ವಿವೇಕಾನಂದರ ಚಿಂತನೆ ದಿಟ್ಟತನವಲ್ಲದೆ ಬೇರೇನಲ್ಲ. ಅವರು ಹೇಳಿದಂತೆ, “ಭಯವೇ ಪಾಪ”. ನಮ್ಮ ಮನಸ್ಸು ಭಯವನ್ನು…
ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ವತಿಯಿಂದ ಕೊಡ ಮಾಡುವ ‘ಪೊಳಲಿ ಶೀನಪ್ಪ ಹೆಗ್ಗಡೆ’ ಮತ್ತು ‘ಎಸ್.ಆರ್. ಹೆಗ್ಡೆ’ ಪ್ರಶಸ್ತಿ ಪ್ರದಾನ 2025 ಸಮಾರಂಭವು ದಿನಾಂಕ 12 ಜುಲೈ 2025ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಿತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಹಿರಿಯ ವಿದ್ವಾಂಸ ಡಾ. ಪಾದೆಕಲ್ಲು ವಿಷ್ಣು ಭಟ್ ‘ತುಳುನಾಡಿನ ಇತಿಹಾಸ ರಚನೆಯ ಕಾರ್ಯದಲ್ಲಿ ಪೊಳಲಿ ಶೀನಪ್ಪ ಹೆಗ್ಗಡೆಯವರ ಕಾರ್ಯ ವಿಶಿಷ್ಟವಾದುದು. ಇತಿಹಾಸಗಾರರ ಶ್ರಮದ ಕಾರ್ಯವನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯವಾದುದು” ಎಂದರು. ಪುರಾತತ್ವ ತಜ್ಞ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಪ್ರಶಸ್ತಿ ಪುರಸ್ಕೃತೆ ಡಾ. ಮಾಲತಿ ಕೃಷ್ಣಮೂರ್ತಿಯವರನ್ನು ಅಭಿನಂದಿಸಿ “ವಸಾಹತು ಕಾಲದ ದಕ್ಷಿಣ ಕನ್ನಡದ ವ್ಯಾಪಾರ ಮತ್ತು ವಾಣಿಜ್ಯದ ಕುರಿತು ಮಾಲತಿಯವರು ನಡೆಸಿದ ಸಂಶೋಧನೆ ಒಳನೋಟಗಳಿಂದ ಕೂಡಿದ್ದು ತುಳುನಾಡಿನ ಇತಿಹಾಸವನ್ನು ಅರಿತುಕೊಳ್ಳಲು ಸಹಕಾರಿಯಾಗಿದೆ” ಎಂದರು. ‘ಮೌಖಿಕ ಪರಂಪರೆ ಮತ್ತು ತುಳುವ ಇತಿಹಾಸ’…
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇದರ ವತಿಯಿಂದ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಮತ್ತು ‘ಹನಿ ಇಬ್ಬನಿ-ಸಿಹಿ ಸಿಂಚನ’ ಮುಂಗಾರು ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮವನ್ನು ದಿನಾಂಕ 13 ಜುಲೈ 2025ರಂದು ಸ್ಥಳೀಯ ಲಾಲ್ಬಾಗ್ನ ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಅಖಿಲ ಭಾರತೀಯ ಸಾಹಿತ್ಯ ಪರಿಷದ್ನ ಜಿಲ್ಲಾಧ್ಯಕ್ಷರಾದ ಪಿ.ಬಿ. ಹರೀಶ್ ರೈಯವರು ವಹಿಸಿಕೊಂಡಿದ್ದರು. ಕಾರ್ಯಕ್ರಮವನ್ನು ಮಾಜಿ ಮೇಯರ್ ದಿವಾಕರ್ ಕದ್ರಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ವನಮಹೋತ್ಸವಕ್ಕೆ ಚಾಲನೆ ನೀಡಿ ಇದರ ಮಹತ್ವದ ಕುರಿತು ಮಾತನಾಡಿದರು. ಗೌರವ ಅತಿಥಿಯಾಗಿ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ನ ಅಧ್ಯಕ್ಷರಾದ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಡೆದ ಕವಿಗೋಷ್ಠಿಯಲ್ಲಿ ಕವಿಗಳಾದ ಗುಣಾಜೆ ರಾಮಚಂದ್ರ ಭಟ್, ಡಾ. ಸುರೇಶ ನೆಗಳಗುಳಿ, ರೇಮಂಡ್ ಡಿಕೂನ ತಾಕೊಡೆ, ಡಾ. ಕೊಳ್ಚಪ್ಪೆ ಗೋವಿಂದ ಭಟ್, ಎಂ.ಎಸ್. ವೆಂಕಟೇಶ ಗಟ್ಟಿ, ಚೇತನ್, ವೈಭವ್ ಡಿ. ಶೆಟ್ಟಿಗಾರ್, ಪ್ರೇಮ…
ಪುತ್ತೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಸಂಯೋಜನೆಯಲ್ಲಿ ದಿನಾಂಕ 25 ಜುಲೈ 2025ರಿಂದ 31 ಜುಲೈ 2025ರವರೆಗೆ ಸಾಯಂಕಾಲ 5-00 ಗಂಟೆಯಿಂದ ರಾತ್ರಿ 8-00 ಗಂಟೆವರೆಗೆ ‘ಭೀಷ್ಮ ಭಾರತ’ ಶೀರ್ಷಿಕೆಯಲ್ಲಿ ಸಂಘದ ಮತ್ತು ಅತಿಥಿ ಕಲಾವಿದರಿಂದ ತಾಳಮದ್ದಳೆ ಸಪ್ತಾಹ ಜರಗಲಿದೆ. ಈ ಬಗ್ಗೆ ಪೂರ್ವಭಾವಿ ಸಭೆಯು ಪುತ್ತೂರು ಪರ್ಲಡ್ಕದ ಅಗಸ್ತ್ಯ ನಿವಾಸದಲ್ಲಿ ದಿನಾಂಕ 13 ಜುಲೈ 2025ರಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಜರಗಿತು. ಸಪ್ತಾಹದಲ್ಲಿ ‘ಗಾಂಗೇಯ’, ‘ಭೀಷ್ಮೊತ್ಪತ್ತಿ’, ‘ಸಾಲ್ವ ಶೃಂಗಾರ’, ‘ಅಂಬಾ ಶಪಥ’, ‘ಗಂಗಾ ಸಾರಥ್ಯ’, ‘ಭೀಷ್ಮ ಸೇನಾಧಿಪತ್ಯ’, ‘ಕರ್ಮಬಂಧ – ಭೀಷ್ಮಪರ್ವ’ ತಾಳಮದ್ದಳೆಯನ್ನು ನಡೆಸಲಾಗುವುದು. ಸಂಘದ ಉಪಾಧ್ಯಕ್ಷರಾದ ಗುಂಡ್ಯಡ್ಕ ಈಶ್ವರ ಭಟ್, ಗುಡ್ಡಪ್ಪ ಬಲ್ಯ, ಭಾಗವತರಾದ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ, ಸತೀಶ್ ಕೆ., ಹರಿಣಾಕ್ಷಿ ಜೆ. ಶೆಟ್ಟಿ, ಭಾರತಿ ರೈ,…