Author: roovari

ಹಾಸನ : ರತ್ನಾಕಲಾ ಪದ್ಮ ಕುಟೀರ ಟ್ರಸ್ಟ್ ಮತ್ತು ನಾಟ್ಯಕಲಾ ನಿವಾಸ್ ಹಾಸನ 18ನೇ ವಾರ್ಷಿಕೋತ್ಸವ ಪ್ರಯುಕ್ತ ಪ್ರಸ್ತುತ ಪಡಿಸುವ ‘ಹರಿ ಹರ ಸುತ’ ಮತ್ತು ‘ನಾಟ್ಯ ದಾಸೋಹಂ’ ಭರತನಾಟ್ಯ ಪ್ರದರ್ಶನವನ್ನು ದಿನಾಂಕ 02 ಆಗಸ್ಟ್ 2025ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಜೆ 4-00 ಗಂಟೆಗೆ ‘ಹರಿ ಹರ ಸುತ’ ಮತ್ತು 6-15 ಗಂಟೆಗೆ ‘ನಾಟ್ಯ ದಾಸೋಹಂ’ ಭರತನಾಟ್ಯ ಮೂಲಕ ಹರಿದಾಸ ಸಾಹಿತ್ಯದ ಪರಿಶೋಧನೆಯಲ್ಲಿ ಕರ್ನಾಟಕ ಕಲಾಶ್ರೀ ಶಾರದಾಮಣಿ ಶೇಖರ್, ಕರ್ನಾಟಕ ಕಲಾಶ್ರೀ ರಾಜಶ್ರೀ ಶೆಣೈ, ವಿದ್ಯಾಶ್ರೀ ರಾಧಾಕೃಷ್ಣ, ಮಂಜುಳ ಸುಬ್ರಹ್ಮಣ್ಯ, ಉನ್ನತ್ ಜೈನ್, ಡಾ. ಸಾಗರ್ ಟಿ.ಎಸ್., ಮಂಜರಿಚಂದ್ರ ಪುಷ್ಪರಾಜ್ ಮತ್ತು ರಾಧಿಕಾ ಶೆಟ್ಟಿ ಇವರುಗಳು ನೃತ್ಯ ಪ್ರದರ್ಶನ ನೀಡಲಿದ್ದಾರೆ.

Read More

ಬೆಂಗಳೂರು: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಪ್ರಸಕ್ತ ಸಾಲಿನಿಂದ ಕಿಶೋರ ಕನಕ ಕಾವ್ಯ ಸ್ಪರ್ಧೆ ಆಯೋಜಿಸುತ್ತಿದೆ. ಕನಕದಾಸರ ಕಾವ್ಯಗಳನ್ನು ಮಾತ್ರ ಗಮಕ ವಾಚನಕ್ಕೆ ಪರಿಗಣಿಸಲಾಗುತ್ತದೆ. 10ರಿಂದ 15 ವರ್ಷದೊಳಗಿನವರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಥಮ ಸ್ಥಾನ ಪಡೆದವರಿಗೆ ರೂಪಾಯಿ 20 ಸಾವಿರ, ದ್ವೀತಿಯ ಸ್ಥಾನ ಪಡೆದವರಿಗೆ ರೂಪಾಯಿ 15 ಸಾವಿರ, ತೃತೀಯ ಸ್ಥಾನ ಪಡೆದವರಿಗೆ ರೂಪಾಯಿ 10 ಸಾವಿರ ಹಾಗೂ ಇಬ್ಬರಿಗೆ ಸಮಾಧಾನಕರ ಬಹುಮಾನವಾಗಿ ತಲಾ ರೂಪಾಯಿ 5 ಸಾವಿರ ನೀಡಲಾಗುತ್ತದೆ. ಕಿಶೋರ ಕನಕ ಕಾವ್ಯ ಗಮಕ ಸ್ಪರ್ಧೆಯ ನಿಯಮಗಳು : 1. ಈ ಸ್ಪರ್ಧೆಯು ಕಿಶೋರ ಪ್ರತಿಭೆಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಕಿಶೋರ ಪ್ರತಿಭೆ ಅಂದರೆ 10 ರಿಂದ 15 ವರ್ಷದ ವಯೋಮಾನದವರು. 2. ಕನಕದಾಸರ ಕಾವ್ಯಗಳನ್ನು ಮಾತ್ರ ಗಮಕ ವಾಚನಕ್ಕೆ ಆಯ್ಕೆಮಾಡಿಕೊಳ್ಳುವುದು. 3. ಸ್ಪರ್ಧೆಯಲ್ಲಿ ಭಾಗವಹಿಸುವವರ ವಯಸ್ಸು 15 ವರ್ಷ ಮೀರಿರಬಾರದು. ಜನ್ಮ ದಿನಾಂಕಕ್ಕೆ ಸಂಬಂಧಿಸಿದ ದಾಖಲೆಯನ್ನು ಸಲ್ಲಿಸಬೇಕು. 4. ಗಾಯನಕ್ಕೆ ಶೃತಿ ಬಾಕ್ಸ್‌ನ್ನು ಮಾತ್ರ ಬಳಸಬೇಕು. ಮೊಬೈಲ್…

Read More

ಹೆಬ್ರಿ : ತುಳುವ ಭಾಷೆ, ಸಂಸ್ಕೃತಿ ಹಾಗೂ ಸಮುದಾಯದ ಹಕ್ಕುಗಳ ಸಂರಕ್ಷಣೆಯ ಉದ್ದೇಶದಿಂದ 1928ರಲ್ಲಿ ಸ್ಥಾಪಿತವಾದ ತುಳುವ ಮಹಾಸಭೆ, ತನ್ನ ಹೆಬ್ರಿ ತಾಲೂಕು ಘಟಕದ ನವ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ, ಹೆಸರಾಂತ ದಂತವೈದ್ಯರು ಮತ್ತು ಸಮಾಜಸೇವಕರಾದ ಡಾ. ಶರತ್ ಕುಮಾರ್ ಶೆಟ್ಟಿಯವರನ್ನು ಹೆಬ್ರಿ ತಾಲೂಕು ಸಂಚಾಲಕರಾಗಿ ನೇಮಕ ಮಾಡಿದೆ. ಡಾ. ಶರತ್ ಕುಮಾರ್ ಶೆಟ್ಟಿ, ಪ್ರಸ್ತುತ ಸುಳ್ಯದ ಕೆ.ವಿ.ಜಿ. ದಂತ ಕಾಲೇಜಿನಲ್ಲಿ ಪ್ರೊಫೆಸರ್, ವಿಭಾಗಾಧ್ಯಕ್ಷ ಮತ್ತು ಸ್ನಾತಕೋತ್ತರ ಅಧ್ಯಯನಗಳ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಒರ್ಥೋಡಾಂಟಿಕ್ಸ್ ಕ್ಷೇತ್ರದ ನುರಿತ ತಜ್ಞರಾಗಿದ್ದು, ವೈಜ್ಞಾನಿಕ ಮತ್ತು ಸಾಮಾಜಿಕ ಕಕ್ಷೆಯಲ್ಲಿ ಸುದೀರ್ಘ ಸೇವೆಯನ್ನು ನೀಡುತ್ತಿದ್ದಾರೆ. ಅವರು ಇಂಡಿಯನ್ ಡೆಂಟಲ್ ಅಸೋಸಿಯೇಶನ್ – ಸುಳ್ಯ ಶಾಖೆಯ ಅಧ್ಯಕ್ಷ, ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಮಂಗಳೂರು ಲೆಗಿಯನ್ ನಿರ್ದೇಶಕ, ಲಯನ್ಸ್ ಕ್ಲಬ್ ಮೆಟ್ರೋ ಗೋಲ್ಡ್ ಮಂಗಳೂರಿನ ಆರೋಗ್ಯ ಶಿಬಿರ ಸಂಯೋಜಕ ಮತ್ತು ಭಾರತೀಯ ಮಾನವ ಹಕ್ಕುಗಳ ಸಂಘದ ಮಾಜಿ ಅಧ್ಯಕ್ಷರಾಗಿ ಸಮಾಜಮುಖಿ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ…

Read More

ಬೆಂಗಳೂರು : ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ 2024ನೇ ಸಾಲಿನ ವಿವಿಧ ಪುಸ್ತಕ ಬಹುಮಾನಕ್ಕೆ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ. ಕಾದಂಬರಿ, ವಿಜ್ಞಾನ ಸಾಹಿತ್ಯ, ಲಲಿತ ಪ್ರಬಂಧ, ಭಾರತದ ಯಾವುದೇ ಭಾಷೆಯ ಅನುವಾದಿತ ಕಾದಂಬರಿ/ಕಥಾ ಸಂಕಲನ/ ಜೀವನ ಚರಿತ್ರೆ, 50 ವರ್ಷದ ಒಳಗಿನವರಿಗಾಗಿ ಕಾವ್ಯಕ್ಕಾಗಿ ಪ್ರಶಸ್ತಿ, ವಚನ ಸಾಹಿತ್ಯದಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ಕೃತಿ, ಸಣ್ಣಕಥೆ, ಪ್ರವಾಸ ಸಾಹಿತ್ಯ, ಹಾಸ್ಯ ಕೃತಿ, ಮಕ್ಕಳ ಸಾಹಿತ್ಯ, ನಾಟಕ, ಸಂಶೋಧನೆ, ಆತ್ಮಕಥನ, 2024ರಲ್ಲಿ ಡಿಜಿಟಲ್ ಮತ್ತು ಮುದ್ರಣ ಮಾಧ್ಯಮದಲ್ಲಿ ಪ್ರಕಟಗೊಂಡ ಕಥೆಗಳ ಕೃತಿಗಳನ್ನು ದಿನ್ನಕ 20 ಆಗಸ್ಟ್ 2025ರ ಒಳಗೆ ಕರ್ನಾಟಕ ಲೇಖಕಿಯರ ಸಂಘ (ರಿ.) ಬೆಂಗಳೂರು, ನಂ.206, 2ನೇ ಮಹಡಿ, ವಿಜಯ ಮ್ಯಾನ್ ಶನ್, 2ನೇ ಕ್ರಾಸ್, 2ನೇ ಮುಖ್ಯ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018 ಇಲ್ಲಿಗೆ ಕಳುಹಿಸಿಕೊಡಬೇಕು.

Read More

ಮಡಿಕೇರಿ : ಕೊಡಗು ಪತ್ರಕರ್ತರ ಸಂಘದ ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟ್, ಅಮ್ಮತ್ತಿ ಇವರ ಸಹಯೋಗದಲ್ಲಿ ದಿನಾಂಕ 03 ಆಗಸ್ಟ್ 2025ರಂದು ಕಥಾ ಸಮಯ. ಕಥೆ ಹೇಳುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮುದೋಷ್ ಪೂವಯ್ಯ ಮಾಹಿತಿ ನೀಡಿದ್ದಾರೆ. ಕಾವಾಡಿ ಅಮ್ಮತ್ತಿಯ ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟಿನ ಆವರಣದಲ್ಲಿ ಆಯೋಜಿತ ಕಥಾ ಸಮಯ ಕಾರ್ಯಕ್ರಮವನ್ನು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಉದ್ಘಾಟಿಸಲಿದ್ದಾರೆ. ಕೊಡಗು ಪತ್ರಿಕಾಭವನದ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್, ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಹಿರಿಯ ಸಾಹಿತಿಗಳಾದ ಬಾಚರಣಿಯಂಡ ಅಪ್ಪಣ್ಣ, ಬಾರಿಯಂಡ ಜೋಯಪ್ಪ, ಅಸೀಮಾ ಮಾಸಪತ್ರಿಕೆಯ ಸಂಪಾದಕ ಮಾಣಿಪಂಡ ಸಂತೋಷ್ ತಮ್ಮಯ್ಯ, ಪಕ್ಷಿ ತಜ್ಞ ಡಾ. ಎಸ್.ವಿ. ನರಸಿಂಹನ್, ಕಾಮಧೇನು ಗೋಶಾಲಾ ಸಂರಕ್ಷಣಾ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟಿ ಕೆ. ರಾಮಚಂದ್ರ ಭಟ್, ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ,…

Read More

ಬೆಂಗಳೂರು: ಬಿ. ಎಂ. ಶ್ರೀ. ಪ್ರತಿಷ್ಠಾನವು ‘ಶಾ. ಬಾಲುರಾವ್‌ ಯುವ ಬರಹಗಾರ ಪ್ರಶಸ್ತಿ’ ಮತ್ತು ‘ಶಾ. ಬಾಲುರಾವ್‌ ಅನುವಾದ ಪ್ರಶಸ್ತಿ’ಗೆ ಕೃತಿಗಳನ್ನು ಆಹ್ವಾನಿಸಿದೆ. ಯುವ ಬರಹಗಾರ ಪ್ರಶಸ್ತಿಗೆ 35 ವರ್ಷದೊಳಗಿನವರು 2024ರಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾಗಿರುವ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳನ್ನು ಸಲ್ಲಿಸಬಹುದು. ಅನುವಾದ ಪ್ರಶಸ್ತಿಗೆ 2024ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡ, ಅನ್ಯ ಭಾಷೆಯಿಂದ ಕನ್ನಡಕ್ಕೆ ಅನುವಾದವಾಗಿರುವ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಳು ತಲಾ ರೂಪಾಯಿ 25 ಸಾವಿರ ನಗದು ಬಹುಮಾನವನ್ನು ಒಳಗೊಂಡಿವೆ. ಲೇಖಕರು ಸ್ವವಿವರದ ಜತೆಗೆ ಪ್ರಕಟಗೊಂಡ ಕೃತಿಯ ಮೂರು ಪ್ರತಿಗಳನ್ನು ಗೌರವ ಕಾರ್ಯದರ್ಶಿ, ಬಿ. ಎಂ. ಶ್ರೀ. ಪ್ರತಿಷ್ಠಾನ, 3ನೇ ಮುಖ್ಯರಸ್ತೆ, ನರಸಿಂಹರಾಜ ಕಾಲೊನಿ, ಬೆಂಗಳೂರು-560019 ಈ ವಿಳಾಸಕ್ಕೆ ದಿನಾಂಕ 30 ಆಗಸ್ಟ್ 2025ರೊಳಗೆ ಕಳುಹಿಸಬೇಕು ಎಂದು ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಶಾಂತರಾಜು ತಿಳಿಸಿದ್ದಾರೆ.

Read More

ನಂದಳಿಕೆ : ವಿಶಾಲ ಯಕ್ಷ ಕಲಾ ಬಳಗ ನಂದಳಿಕೆ ಕಾರ್ಕಳ ತಾಲೂಕು ಇದರ ವತಿಯಿಂದ ಹಮ್ಮಿಕೊಂಡ ತಾಳಮದ್ದಳೆ ಜ್ಞಾನಯಜ್ಞ ಶತಕೋತ್ತರ ಪ್ರಸ್ತುತಿ ಹಾಗೂ ಬೆಳ್ಮಣ್ ಜೇಸಿ ಸಂಸ್ಥೆ ಆಗಸ್ಟ್ ತಿಂಗಳ ಸಮಾರಂಭ ನಿಮಿತ್ತ ದಿನಾಂಕ 02 ಆಗಸ್ಟ್ 2025ರಂದು ಸಂಜೆ 6-00 ಗಂಟೆಗೆ ನಂದಳಿಕೆ ಬೋರ್ಡ್ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಕವಿ ಸಂಕಯ ಭಾಗವತ ವಿರಚಿತ ‘ಸೊರ್ಕುದ ದಾರುಕೆ’ ಕೃಷ್ಣಾರ್ಜುನ ಕಾಳಗದ ಆಯ್ದ ಭಾಗದ ಹಿಮ್ಮೇಳದಲ್ಲಿ ಗಣೇಶ ಮಯ್ಯ ವರ್ಕಾಡಿ, ಕುಮಾರ ಮಯ್ಯ ವರ್ಕಾಡಿ ಮತ್ತು ಭವಿಷ್ಯ ಶೆಟ್ಟಿ ಪಂಜಿನಡಕ ಹಾಗೂ ಮುಮ್ಮೇಳದಲ್ಲಿ ಅರ್ಜುನ : ವಿಶ್ವನಾಥ ಸಾಂತೂರು ಮತ್ತು ದಾರುಕ : ಸುಬ್ರಹ್ಮಣ್ಯ ಪಂಜಿನಡಕ ಸಹಕರಿಸಲಿದ್ದಾರೆ.

Read More

ಮೈಸೂರು : ಪರಿವರ್ತನ ರಂಗ ಸಮಾಜ (ರಿ.) ಇದರ 25ನೇ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಸ್ತುತಪಡಿಸುವ ತಂಡದ 30ನೇ ನಾಟಕ ರವೀಂದ್ರ ಭಟ್ ಇವರ ಕೃತಿ ಆಧಾರಿತ ‘ಮೂರನೇ ಕಿವಿ’ ನಾಟಕ ಪ್ರದರ್ಶನವನ್ನು ದಿನಾಂಕ 02 ಮತ್ತು 03 ಆಗಸ್ಟ್ 2025ರಂದು ಸಂಜೆ 7-00 ಗಂಟೆಗೆ ಮೈಸೂರಿನ ಕಿರುರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರೊ. ಎಸ್.ಆರ್. ರಮೇಶ್ ಇವರು ರಂಗಪಠ್ಯ, ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ನಮನ ಕಲಾ ವೇದಿಕೆಯ ಸಹಕಾರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮಾತು ಬಾರದಿರುವ ಪ್ರಪಂಚದಲ್ಲಿ ಶಬ್ದ ಮತ್ತು ಮಾತಿಗೆ ಅಗಾಧವಾದ ಪ್ರಾಮುಖ್ಯತೆ ಇದೆ. ಹುಟ್ಟಿನಿಂದಲೇ ಕಿವುಡರಾದವರಿಗೆ ಮಾತನಾಡುವುದನ್ನು ಕಲಿಸಲು ನಡೆಸುವ ದೀರ್ಘ ಪ್ರಯತ್ನವೇ ಮೂರನೇ ಕಿವಿ ಕೃತಿಯ ಪ್ರಮುಖ ಉದ್ದೇಶ. ಮಾತು ಕಲಿಸುವ ಪ್ರಯತ್ನದ ಹಿನ್ನೆಲೆಯಲ್ಲಿ ವಿಜ್ಞಾನವಿದೆ. ಕಲಿಕಾ ಅಭ್ಯಾಸಗಳಿವೆ. ನಿತ್ಯ ನಡೆಸುವ ಹೋರಾಟವಿದೆ. ಉತ್ಸಾಹವಿದೆ. ನಿರಾಶೆ, ಬೇಗುದಿ, ಆಶ್ಚರ್ಯ, ಕುತೂಹಲ ಎಲ್ಲವನ್ನು ಒಳಗೊಳ್ಳುವ ಸಾಹಸ ಹೋರಾಟವಿದು. ತಾಯಿ ಮಗ ಜೊತೆಯಲ್ಲಿ ನಡೆಸುವ ಈ ಕಠಿಣ ಹೋರಾಟದಲ್ಲಿ ಬೆಂಬಲವಾಗಿ ತಂದೆ…

Read More

ಮಂಗಳೂರು : ತುಳುನಾಡಿನ ನಾಡಗೀತೆ ಪ್ರಕಟಣೆಗೊಂಡ ಆಟಿಯ 12ನೇ ದಿನದಂದು ದಿನಾಂಕ 28 ಜುಲೈ 2025ರಂದು ನಾಡ ಗೀತೆಯನ್ನು ಹಾಡುವ ಜೊತೆಗೆ ಮೋಹನಪ್ಪ ತಿಂಗಳಾಯರನ್ನು ಸ್ಮರಣೆ ಮಾಡುವ ಕಾರ್ಯವನ್ನು ಐತಿಹಾಸಿಕ ಶ್ರೀ ಜ್ಞಾನೋದಯ ಸಮಾಜ ಮಂದಿರದಲ್ಲಿ ಮಂಗಳೂರು ವಿ.ವಿ. ಕಾಲೇಜಿನ ತುಳು ಎಂ.ಎ. ವಿದ್ಯಾರ್ಥಿಗಳು ಮಾಡಿದರು. ಶ್ರೀ ಜ್ಞಾನೋದಯ ಸಮಾಜದ ಅಧ್ಯಕ್ಷ ಪ್ರೇಮ ಚಂದ್ರ ತಿಂಗಳಾಯ ಸ್ವಾತಂತ್ರ್ಯ ಹೋರಾಟ, ಸಾಮಾಜಿಕ ಸುಧಾರಣೆಯ ಕಾರ್ಯಗಳನ್ನು ವಿವರಿಸಿದರು. ಪ್ರಫುಲ್ಲ ಚಂದ್ರ ತಿಂಗಳಾಯರು ಶುಭ ಹಾರೈಸಿದರು. ಕೃಷ್ಣಮೂರ್ತಿ ಚಿತ್ರಾಪುರ ಮಾತನಾಡಿ “ಸ್ವಾತಂತ್ರ್ಯ ಚಳುವಳಿ, ಏಕೀಕರಣ ಹೋರಾಟ, ನವೋದಯ ಕಾಲದ ಸಾಹಿತ್ಯ ರಚನೆಯ ಕಾಲಘಟ್ಟದ ಹಿನ್ನೆಲೆಯೊಂದಿಗೆ ತಿಂಗಳಾಯರು ಮತ್ತು ಇತರ ತುಳುನಾಡ ಸಾಹಿತಿಗಳ ಕಾರ್ಯ ಚಟುವಟಿಕೆಗಳನ್ನು ಅಧ್ಯಯನ ಮಾಡಬೇಕಾಗಿದೆ” ಎಂದರು. ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್ ಮಾತನಾಡಿ “ಸಾಮಾಜಿಕ ಚಳುವಳಿಗಳಿಗೆ ರಂಗಭೂಮಿಯನ್ನು ಸಮರ್ಥವಾಗಿ ಬಳಕೆ ಮಾಡಲಾಗಿದ್ದು, ತುಳುನಾಡ ರಂಗಭೂಮಿಯಲ್ಲಿ ಶ್ರೀ ಜ್ಞಾನೋದಯ ಸಮಾಜಕ್ಕೆ ಮಹತ್ವದ ಸ್ಥಾನ ನೀಡಬೇಕು” ಎಂದರು. ತುಳು ವಿಭಾಗದ ಉಪನ್ಯಾಸಕರಾದ ಮಣಿ ಎಂ.…

Read More

ಮಂಗಳೂರು : ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇವರ ಆಶ್ರಯದಲ್ಲಿ ಎಂಟನೇ ವರ್ಷದ ‘ಯಕ್ಷ ವೈಭವ -2025’ ಕಾರ್ಯಕ್ರಮವನ್ನು ದಿನಾಂಕ 02 ಆಗಸ್ಟ್ 2025ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂಜೆ 7-00 ಗಂಟೆಗೆ ಆಯೋಜಿಸಲಾಗಿದ್ದು, ಯಕ್ಷಗಾನ ಮತ್ತು ಪ್ರಶಸ್ತಿ ಪ್ರದಾನ ನಡೆಯಲಿದೆ. ತೆಂಕುತಿಟ್ಟಿನ ಹಿರಿಯ ಹಿಮ್ಮೇಳ ಕಲಾವಿದ ಪೆರುವಾಯಿ ಶ್ರೀ ನಾರಾಯಣ ಭಟ್ ಇವರಿಗೆ ‘ಭ್ರಾಮರೀ ಯಕ್ಷಮಣಿ ಪ್ರಶಸ್ತಿ’ ಮತ್ತು ಯಕ್ಷಸಂಗಮ ಮೂಡಬಿದಿರೆ ಮತ್ತು ಹಿರಿಯ ನೇಪಥ್ಯ ಕಲಾವಿದ ವಸಂತ ವಾಮದಪದವು ಇವರಿಗೆ ‘ಭ್ರಾಮರೀ ಯಕ್ಷಸೇವಾ ಪುರಸ್ಕಾರ’ ಪ್ರದಾನ ಮಾಡಲಾಗುವುದು. ತೆಂಕುತಿಟ್ಟಿನ ಸುಪ್ರಸಿದ್ಧ ಹಿಮ್ಮೇಳ ಮತ್ತು ತೆಂಕು – ಬಡಗಿನ ಮುಮ್ಮೇಳ ಕಲಾವಿದರ ಕೂಡುವಿಕೆಯಲ್ಲಿ ‘ಶ್ರೀಮತಿ ಪರಿಣಯ’, ‘ಸಾಧ್ವಿ ಸೈರಂದ್ರಿ’ ಹಾಗೂ ‘ವೈಜಯಂತಿ ಪರಿಣಯ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗಳು ನಡೆಯಲಿದೆ.

Read More