Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ಇದರ ವತಿಯಿಂದ ನೀಡಲಾಗುವ ‘ರಮಣಶ್ರೀ ಶರಣ ಸಾಹಿತ್ಯ’ ಪ್ರಶಸ್ತಿಯನ್ನು ದಿನಾಂಕ 18 ನವೆಂಬರ್ 2024ರಂದು ಬೆಂಗಳೂರಿನ ರಮಣಶ್ರೀ ಹೋಟೇಲಿನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವರು ಉಡುಪಿಯ ಸಾಹಿತಿ ಎಂ.ಜಿ.ಎಂ. ಕಾಲೇಜಿನ ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಗೋ.ರು. ಚನ್ನಬಸಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಡಾ. ಮನು ಬಳಿಗಾರ, ಸಾಹಿತಿಗಳಾದ ಷಡಕ್ಷರಿ, ವಿಶ್ವೇಶ್ವರ ಭಟ್, ಸೋಮಶೇಖರ್ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ : 46ನೆಯ ‘ವಾದಿರಾಜ – ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮವು 06 ಡಿಸೆಂಬರ್ 2024ರಿಂದ 08 ಡಿಸೆಂಬರ್ 2024 ರವರೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ, ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ.) ಪರ್ಕಳ ಸಂಸ್ಥೆಗಳು ಸಂಘಟಿಸಿವೆ. ಸಂಗೀತೋತ್ಸವದ ಪ್ರಯುಕ್ತ ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ಯನ್ನು ದಿನಾಂಕ 07 ನವೆಂಬರ್ 2024ರಂದು ಮಧ್ಯಾಹ್ನ 2-00 ಗಂಟೆಗೆ ಸರಿಯಾಗಿ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿಯಲ್ಲಿ ನಡೆಸಲಾಗುವುದು. ಸ್ಪರ್ಧಾಳುಗಳು ವಾದಿರಾಜರ ಮತ್ತು ಕನಕದಾಸರ ಎರಡೆರಡು ಕೀರ್ತನೆಗಳನ್ನು ಅಭ್ಯಸಿಸಿದ್ದು, ತೀರ್ಪುಗಾರರು ಕೇಳುವ ನಾಲ್ಕು ಕೀರ್ತನೆಗಳಲ್ಲಿ ಯಾವುದಾದರು ಒಂದು ಕೀರ್ತನೆಯನ್ನು ಹಾಡಲು ಶಕ್ತರಿರಬೇಕು. ಭಾಗವಹಿಸಲು ಇಚ್ಛಿಸುವವರು ಕಡ್ಡಾಯವಾಗಿ ತಮ್ಮ ಹೆಸರು, ವಿಳಾಸವನ್ನು 01 ಡಿಸೆಂಬರ್ 2024ರ ಒಳಗಾಗಿ…
ಕುಂಬಳೆ : ಬದಿಯಡ್ಕದ ಸಮತಾ ಸಾಹಿತ್ಯ ವೇದಿಕೆ ಆಶ್ರಯದಲ್ಲಿ ಮಧೂರು ಉಳಿಯದ ತರುಣ ಕಲಾ ವೃಂದ (ರಿ.) ಇವರ ಸಹಯೋಗದಲ್ಲಿ ‘ಡಾ. ಮಹೇಶ್ವರಿ ಯು. ಸಾಹಿತ್ಯ ಸಲ್ಲಾಪ’ ಕಾರ್ಯಕ್ರಮವನ್ನು ದಿನಾಂಕ 24 ನವೆಂಬರ್ 2024ರಂದು ಪರಕ್ಕಿಲ ಶ್ರೀ ಮಹಾದೇವ ಕ್ಷೇತ್ರದ ನಟರಾಜ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಶ್ರೀ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ಉಳಿಯ ತರುಣ ಕಲಾ ವೃಂದದ ಗೌರವಾಧ್ಯಕ್ಷರಾದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಬೆಳಿಗ್ಗೆ 11-00 ಗಂಟೆಗೆ ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಇವರ ಅಧ್ಯಕ್ಷತೆಯಲ್ಲಿ ‘ಡಾ. ಮಹೇಶ್ವರಿ ಯು. ಸಾಹಿತ್ಯ ದರ್ಶನ’ ವಿಷಯ ಮಂಡನೆಯಲ್ಲಿ ಕಾವ್ಯದ ಬಗ್ಗೆ : ಸಾಹಿತಿ ಡಾ. ಸೌಮ್ಯ ಪ್ರಸಾದ್, ಲೇಖನ, ಅಂಕಣ ಬರಹಗಳ ಬಗ್ಗೆ ಸಂಶೋಧನಾ ವಿದ್ಯಾರ್ಥಿ ಶ್ರೀ ಕಾರ್ತಿಕ್ ಪಡ್ರೆ ಹಾಗೂ ವಿಮರ್ಶೆ, ಸಂಶೋಧನೆಯ ಬಗ್ಗೆ ಸಾಹಿತಿ ಡಾ. ಸುಭಾಷ್ ಪಟ್ಟಾಜೆ ಇವರುಗಳು ಮಾತನಾಡಲಿದ್ದಾರೆ.…
ಮಂಗಳೂರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕುಳಾಯಿ ಇದರ ಕಾರ್ತಿಕ ದೀಪೋತ್ಸವದ ಪ್ರಯುಕ್ತ ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಮಂಡಳಿ ಕುಳಾಯಿ ಇದರ ಕಲಾವಿದರಿಂದ ‘ರಾಜಾ ದಂಡಕ’ ಪ್ರಸಂಗದ ಯಕ್ಷಗಾನ ಬಯಲಾಟವು ಪ್ರಾಧ್ಯಾಪಕರು ಮತ್ತು ಯಕ್ಷಗಾನ ರಂಗ ನಿರ್ದೇಶಕರಾದ ಡಾ. ದಿನಕರ ಎಸ್. ಪಚ್ಚನಾಡಿ ಇವರ ನಿರ್ದೇಶನದಲ್ಲಿ ದಿನಾಂಕ 20 ನವೆಂಬರ್ 2024ನೇ ಬುಧವಾರ ದೇವಳದ ರಂಗಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಹಿಮ್ಮೇಳದಲ್ಲಿ ಬೋಂದೇಲ್ ಸತೀಶ್ ಶೆಟ್ಟಿ, ಹರಿಪ್ರಸಾದ್ ಕಾರಂತ ಸರಪಾಡಿ, ಜಯರಾಮ ಆಚಾರ್ಯ ಚೇಳ್ಯಾರು, ಸೂರಜ್ ಆಚಾರ್ಯ ಮುಲ್ಕಿ, ಬಾಯಾರು ಎಸ್. ಎನ್. ಭಟ್, ಸುರೇಶ್ ಕಾಮತ್ ಹಾಗೂ ಮಾಧವ ಮಯ್ಯ ತಡಂಬೈಲು ಸಹಕರಿಸಿದರು. ಮುಮ್ಮೇಳದಲ್ಲಿ ಇಕ್ಷಾಕುಪಾತ್ರದಲ್ಲಿ ಶ್ರೀನಿಧಿ ಹೊಸಬೆಟ್ಟು, ಪುರೋಹಿತನಾಗಿ ನಂದಪ್ರಸಾದ ಕುಳಾಯಿ ಹಾಗೂ ಮಾ. ವಿದ್ವತ್ ಹೆಬ್ಬಾರ್ ಕುಳಾಯಿ, ಬಾಲ ದಂಡಕನಾಗಿ ಮಾ. ಶಂಕರನಾರಾಯಣ ಕಾರಂತ ಕುಳಾಯಿ, ರಾಜಾ ದಂಡಕನಾಗಿ ವಿನೋದ್ ರಾವ್ ಕುತ್ತೆತ್ತೂರು, ದೂತನಾಗಿ ದಿವಾಕರ ಕುಳಾಯಿ, ಮಂತ್ರಿಯಾಗಿ ಶ್ರೀನಿಧಿ ಹೊಸಬೆಟ್ಟು ಶುಕ್ರಾಚಾರ್ಯರಾಗಿ ವೇದವ್ಯಾಸ ರಾವ್ ಕುತ್ತೆತ್ತೂರು, ಅರಜೆಯಾಗಿ…
ಮಂಗಳೂರು : ಮಂಗಳೂರಿನ ಶ್ರೀ ಕಿಶೋರ್ ರೇವಲಾಲ್ ರಾಜ್ ಇವರ ಚೊಚ್ಚಲ ಕಾದಂಬರಿ ಕೃತಿ ‘ಮೇರಿ ಖಾಮೋಶಿ, ಮೇರಿ ಆವಾಜ್’ ಇದರ ಲೋಕರ್ಪಣಾ ಸಮಾರಂಭವು ದಿನಾಂಕ 24 ನವೆಂಬರ್ 2024ರ ಭಾನುವಾರದಂದು ಸಂಜೆ ಘಂಟೆ 5.00 ರಿಂದ ಮಂಗಳೂರಿನ ನವಭಾರತ ವೃತ್ತದ ಬಳಿಯಿರುವ ಹೊಟೇಲ್ ಓಷಿಯನ್ ಪರ್ಲ್ ಇದರ ಪೆಸಿಫಿಕ್ 4 ಸಭಾಂಗಣದಲ್ಲಿ ನಡೆಯಲಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಕಾದಂಬರಿಯ ಲೋಕರ್ಪಣಾ ಸಮಾರಂಭದಲ್ಲಿ ‘ಸೇ ಗುಡ್ ಬೈ ಟು ಬೋರಿಂಗ್ ಲೈಫ್’ ಕೃತಿಯ ಲೇಖಕರಾದ ಶ್ರೀ ಗೋಕುಲ್ ರೂಪಾರೆಲಿಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಇದರ ವತಿಯಿಂದ ಮೂಡುಬಿದಿರೆಯ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ 21 ನವೆಂಬರ್ 2024ರಂದು ರಂಗ ಮಾಂತ್ರಿಕ ಡಾ. ಜೀವನ್ರಾಂ ಸುಳ್ಯ ನಿರ್ದೇಶನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸಿದ, ನಾಡೋಜ ಹಂಪನಾ ವಿರಚಿತ ದೇಸೀ ಮಹಾ ಕಾವ್ಯವನ್ನು ರಂಗರೂಪಕ್ಕೆ ತಂದ ಡಾ. ನಾ.ದಾ. ಶೆಟ್ಟಿಯವರ ‘ಚಾರುವಸಂತ’ ನಾಟಕದ ಪ್ರದರ್ಶನ, ರಂಗಪಯಣ ಉದ್ಘಾಟನೆ ಮತ್ತು ನಾಟಕ ಕೃತಿ ಬಿಡುಗಡೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಕೃತಿ ಬಿಡುಗಡೆಗೊಳಿಸಿದ ವಿಶ್ರಾಂತ ಕುಲಪತಿ ಪ್ರೊ. ಬಿ.ಎ. ವಿವೇಕ ರೈ ಇವರು ಮಾತನಾಡಿ ‘ಬರಹ ಅಥವಾ ಕಾವ್ಯವನ್ನು ರಂಗರೂಪಕ್ಕೆ ತರುವುದು ಒಂದು ಸಾಹಸ. ‘ಚಾರುವಸಂತ’ದ ಮೂಲಕ ಹಂಪನಾ ಅವರ ಕನಸು ಈಡೇರಿದೆ’ ಎನ್ನುತ್ತಾ ಬರಹದಿಂದ ರಂಗರೂಪಕ್ಕೆ ಕತೆಯನ್ನು ತರುವ ಅನುಭವಗಳನ್ನು ಹಂಚಿಕೊಳ್ಳುತ್ತಾ ‘ಕಾವ್ಯ ಭಾಷೆಯನ್ನೇ ಹೆಚ್ಚಾಗಿ ರಂಗರೂಪಕ್ಕೆ ಬಳಸಲಾಗಿದೆ’ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ‘ಚಾರುವಸಂತ’ ನಾಟಕಕ್ಕೆ…
ಹುಬ್ಬಳ್ಳಿ : ಹುಬ್ಬಳ್ಳಿಯ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಪ್ರತಿಷ್ಠಾನದಿಂದ ವಿವಿಧ ಪ್ರಶಸ್ತಿಗೆ ಕನ್ನಡದ ಶ್ರೇಷ್ಠ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಿದೆ.ಜಾನಪದ ಪ್ರಕಾರದಲ್ಲಿ ‘ಜಾನಪದ ಸಿರಿ’ ಪ್ರಶಸ್ತಿ, ಮಹಿಳೆಯರು ರಚಿಸಿದ ಯಾವುದೇ ಪ್ರಕಾರದ ಕೃತಿಗೆ ‘ಅಕ್ಕ ಪ್ರಶಸ್ತಿ’, 18 ವರ್ಷದೊಳಗಿನ ಮಕ್ಕಳು ರಚಿಸಿದ ಯಾವುದೇ ಪ್ರಕಾರದ ಸಾಹಿತ್ಯ ಕೃತಿಗ ‘ಅರಳುಮೊಗ್ಗು ಪ್ರಶಸ್ತಿ’ ನೀಡಿ ನೀಡಲಾಗುತ್ತಿದೆ. ಎಲ್ಲಾ ಪ್ರಶಸ್ತಿಗಳು ತಲ್ಲಾ 25 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪಾತ್ರ ಒಳಗೊಂಡಿದೆ. 2023ರ ಜನವರಿಯಿಂದ 2024ರ ಡಿಸೆಂಬರ್ವರೆಗೆ ಪ್ರಥಮ ಬಾರಿಗೆ ಮುದ್ರಣವಾದ ಮೇಲ್ಕಾಣಿಸಿದ ಪ್ರಕಾರದ ಕೃತಿಗಳನ್ನು ರಚಿಸಿದ ಲೇಖಕರು ಎರಡು ಪ್ರತಿಗಳನ್ನು ದಿನಾಂಕ 25 ಡಿಸೆಂಬರ್ 2024ರ ಒಳಗಾಗಿ ಚಂದ್ರಶೇಖರ ವಸ್ತ್ರದ, ಬೆಳಗು, ಆನಂದಾಶ್ರಮ ರಸ್ತೆ, ಪಂಚಾಕ್ಷರಿ ನಗರ, 5ನೆ ಕ್ರಾಸ್, ಗದಗ- 582 101. ಈ ವಿಳಾಸಕ್ಕೆ ಕಳುಹಿಸಬಹುದು.
ಉಡುಪಿ : ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಪ್ರಾಯೋಜಿತ ಯಕ್ಷಗಾನ ಕೇಂದ್ರ ಇಂದ್ರಾಳಿ ಕೊಡಮಾಡುವ ಗುರು ಮಟಪಾಡಿ ವೀರಭದ್ರ ನಾಯಕ್ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 09 ನವೆಂಬರ್ 2024ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಾಹೆಯ ಸಹಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ಮಾತನಾಡಿ “ಯಕ್ಷಗಾನ ಕಲೆಗೆ ಪ್ರಾಚೀನ ಇತಿಹಾಸವಿದೆ. ಅದು ಬೆಳೆದುಬಂದ ಬಗೆ ನಿಜಕ್ಕೂ ಆಶ್ಚರ್ಯ ತರುತ್ತಿದೆ. ಇಂದು ಯಕ್ಷಗಾನ ಕಲೆಯ ಬಗ್ಗೆ ಜನರಲ್ಲಿ ಆಸಕ್ತಿ ಇದೆ. ಶಾಲಾ ಕಾಲೇಜುಗಳಲ್ಲಿಯೂ ಮಕ್ಕಳು ಅದರಲ್ಲಿ ಭಾಗವಹಿಸುವುದನ್ನು ನೋಡಿದರೆ ಮುಂದೆ ಅದು ಇನ್ನೂ ಹೆಚ್ಚು ಜನಪ್ರಿಯವಾಗಲಿದೆ. ಈ ನಿಟ್ಟಿನಲ್ಲಿ ಉಡುಪಿಯ ಇಂದ್ರಾಳಿಯ ಯಕ್ಷಗಾನ ಕೇಂದ್ರ ಕಲೆಯ ಪ್ರೋತ್ಸಾಹಕ್ಕೆ ಶ್ರಮಿಸುತ್ತಿದೆ. ಯಕ್ಷಗಾನ ಕೇಂದ್ರಕ್ಕೆ ಮಾಹೆಯ ಬೆಂಬಲ ನಿರಂತರವಾಗಿ ಇದೆ. ಪರಂಪರೆಯ ಯಕ್ಷಗಾನ ಕಲೆಗೆ ಜನ ಬೆಂಬಲ ನೀಡಬೇಕು.” ಎಂದು ಹೇಳಿದರು. ಮಾಹೆಯ ಸಹಕುಲಪತಿ ಡಾ. ನಾರಾಯಣ ಸಭಾಹಿತ್ ಸಮಾರಂಭವನ್ನು ಉದ್ಘಾಟಿಸಿದರು. 2024ನೇ ಸಾಲಿನ ಪ್ರಶಸ್ತಿ ಪುರಸ್ಕೃತರಾದ ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷಧಾರಿ ಎಳ್ಳಂಪಳ್ಳಿ…
ಸುರತ್ಕಲ್ : ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಇತಿಹಾಸ ಪ್ರಾಧ್ಯಾಪಕ, ಲೇಖಕ ಹಾಗೂ ಹಿರಿಯ ಪತ್ರಕರ್ತರಾದ ಪ್ರೊ. ಪಿ. ಕೆ. ಮೊಯ್ಲಿ ದಿನಾಂಕ 21 ನವೆಂಬರ್ 2024ರಂದು ಸ್ವಗೃಹದಲ್ಲಿ ನಿಧನರಾದರು. ಆರು ಮಂದಿ ಪುತ್ರಿಯರು, ಅಳಿಯಂದಿರು ಹಾಗೂ ಅಪಾರ ಶಿಷ್ಯ ವೃಂದವನ್ನು ಶ್ರೀಯುತರು ಅಗಲಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಮೂಲತಃ ಪಣಂಬೂರಿನವರಾದ ಪ್ರೊ. ಪಿ. ಕೆ. ಮೊಯ್ಲಿ ಸುರತ್ಕಲ್ ವಿದ್ಯಾದಾಯಿನೀ ಪ್ರೌಢಶಾಲೆಯ ಮೊದಲ ತಂಡದ ವಿದ್ಯಾರ್ಥಿಯಾಗಿದ್ದರು. ಜಿಲ್ಲಾ ಬೋರ್ಡ್ ಇದರ ಆಡಳಿತಕ್ಕೊಳಪಟ್ಟ ಮೂಡಬಿದ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನಾಗಿ ಸೇರಿ ಮುಂದೆ ಮಂಗಳೂರಿನಲ್ಲಿ ಶಿಕ್ಷಕ ತರಬೇತಿ, ದಕ್ಷಿಣ ಭಾರತ ಹಿಂದೀ ಪ್ರಚಾರ ಸಭೆಯ ರಾಷ್ಟ್ರಭಾಷಾ ಪ್ರವೀಣ ಪದವಿ, ಬಿ. ಎ. ಪದವಿ ಪಡೆದರು. ಪಂಜದಲ್ಲಿ ಹೈಸ್ಕೂಲ್ ಶಿಕ್ಷಕರಾಗಿ ಸೇವೆಗೆ ಸೇರಿ ಮುಂದೆ ಬೈಂದೂರು, ಮುಡಿಪು, ಕಾರ್ಕಳಗಳಲ್ಲಿ ಪ್ರೌಢಶಾಲೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದರು. ಬನಾರಾಸ್ ವಿಶ್ವವಿದ್ಯಾನಿಲಯದಿಂದ ಇತಿಹಾಸ ವಿಷಯದಲ್ಲಿ ಎಂ. ಎ. ಪದವಿಯನ್ನು ಪಡೆದು ಪದವಿ ಪೂರ್ವ ಕಾಲೇಜಿನಲ್ಲಿ…
ಸಾಲಿಗ್ರಾಮ : ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ತನ್ನ ಐವತ್ತರ ಸಂಭ್ರಮಾಚರಣೆಯ ಸುವರ್ಣ ಪರ್ವದ ಮೂರನೆಯ ಕಾರ್ಯಕ್ರಮವನ್ನು ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ (ರಿ) ಪಾರಂಪಳ್ಳಿ, ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಾರ್ಕಡ ಗೆಳೆಯರ ಬಳಗದ ಜಂಟಿ ನೆರವಿನೊಂದಿಗೆ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಪ್ರಾಂಗಣದಲ್ಲಿ 23 ನವಂಬರ್ 2024ರ ಶನಿವಾರದಂದು ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಅನುಪಮವಾದ ಕೃಷಿ ಮಾಡಿದ ನಿವೃತ್ತ ಅಧ್ಯಾಪಕ, ಯಕ್ಷ ಗುರು, ಲೇಖಕ, ಹವ್ಯಾಸಿ ಯಕ್ಷಗಾನ ಮತ್ತು ನಾಟಕ ಕಲಾವಿದರಾದ ಮಣೂರಿನ ಎಂ. ಎನ್. ಮಧ್ಯಸ್ಥರಿಗೆ ಮಕ್ಕಳ ಮೇಳದ ಸುವರ್ಣ ಪರ್ವ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಗುರುನರಸಿಂಹ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಕೆ. ಎಸ್. ಕಾರಂತರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಕನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದಾರೆ. ನಿವೃತ್ತ ಅಂಚೆ ಪಾಲಕ ಹಾಗೂ ಪ್ರಗತಿಪರ ಕೃಷಿಕರಾದ ಪಾರಂಪಳ್ಳಿ ಪಿ. ಸದಾಶಿವ ಮಧ್ಯಸ್ಥ ಹಾಗೂ ಕೆನರಾಬ್ಯಾಂಕ್…