Subscribe to Updates
Get the latest creative news from FooBar about art, design and business.
Author: roovari
ಕಾಸರಗೋಡು : ಪ್ರಖ್ಯಾತ ಸ್ವರ್ಣ ಉದ್ಯಮಿಗಳೂ, ಸಮಾಜಸೇವಕರೂ ಆಗಿದ್ದ ಶ್ರೀ ಜಿ.ಎಲ್. ಆಚಾರ್ಯ ಪುತ್ತೂರು ಇವರ ಶತಮಾನದ ಸ್ಮರಣೆ ಕಾರ್ಯಕ್ರಮವು ದಿನಾಂಕ 09 ಫೆಬ್ರವರಿ 2025ರಂದು ಶ್ರೀ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯೊಂದಿಗೆ ಜರಗಲಿದೆ. ಅಪರಾಹ್ನ 3-00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಉದ್ಘಾಟಿಸಲಿದ್ದು, ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮುಖ್ಯ ಅಭ್ಯಾಗತರಾಗಿ ಪಾಲ್ಗೊಳ್ಳಲಿದ್ದು, ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನಾರಾಯಣ ಭಟ್ ಟಿ. ರಾಮಕುಂಜ ಇವರು ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಶತಮಾನದ ನೆನಪಲ್ಲಿ ಕಿರುಹೊತ್ತಗೆ ‘ಬಂಗಾರ’ ಬಿಡುಗಡೆಗೊಳ್ಳಲಿದ್ದು, ಪತ್ರಕರ್ತ, ಯಕ್ಷಗಾನ ಕಲಾವಿದ ನಾ. ಕಾರಂತ ಪೆರಾಜೆ ಇವರು ಕೃತಿ ಪರಿಚಯ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಡಾ. ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮ ನಿರೂಪಣೆ…
ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯು ದಿನಾಂಕ 03 ಫೆಬ್ರವರಿ 2025ರಂದು ಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿ ಪಾರ್ತಿಸುಬ್ಬ ವಿರಚಿತ ‘ವಾಲಿವಧೆ’ ಆಖ್ಯಾನ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಆನಂದ ಸವಣೂರು, ತೆಂಕಬೈಲು ಗೋಪಾಲಕೃಷ್ಣ ಭಟ್, ಅಚ್ಯುತ ಪಾಂಗಣ್ಣಾಯ ಕೋಡಿಬೈಲು, ಕುಮಾರಿ ಶರಣ್ಯ ನೆತ್ರಕೆರೆ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮ (ದುಗ್ಗಪ್ಪ ನಡುಗಲ್ಲು ಮತ್ತು ಗುಡ್ಡಪ್ಪ ಬಲ್ಯ), ವಾಲಿ (ಗುಂಡ್ಯಡ್ಕ ಈಶ್ವರ ಭಟ್), ಸುಗ್ರೀವ (ಮಾಂಬಾಡಿ ವೇಣುಗೋಪಾಲ ಭಟ್), ತಾರೆ (ಭಾಸ್ಕರ್ ಬಾರ್ಯ) ಸಹಕರಿಸಿದರು. ಟಿ. ರಂಗನಾಥ ರಾವ್ ಸ್ವಾಗತಿಸಿ, ತಾರಾನಾಥ ಸವಣೂರು ವಂದಿಸಿದರು.
ರಾಮನಗರ : ಅಮೂರ್ತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗಾಗಿ ಯುನೆಸ್ಕೋ ಮಾನ್ಯತೆ ಪಡೆದ ಸಂಸ್ಥೆ ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ತು ಇದರ ವತಿಯಿಂದ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ‘ಮಹಿಳಾ ಜಾನಪದ ಲೋಕೋತ್ಸವ’ವನ್ನು ದಿನಾಂಕ 08 ಫೆಬ್ರವರಿ 2025 ಮತ್ತು 09 ಫೆಬ್ರವರಿ 2025ರಂದು ರಾಮನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ‘ಜಾನಪದ ಲೋಕ’ದಲ್ಲಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 08 ಫೆಬ್ರವರಿ 2025ರಂದು ಬೆಳಿಗ್ಗೆ 10-30 ಗಂಟೆಗೆ ರಾಮನಗರ ವಿಧಾನ ಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಹೆಚ್.ಎ. ಇಕ್ಬಾಲ್ ಹುಸೇನ್ ಇವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಾನ್ಯ ಸಚಿವರಾದ ಶಿವರಾಜ್ ಎಸ್. ತಂಗಡಗಿ ಇವರು ‘ಲೋಕೋತ್ಸವ’, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷರಾದ ಟಿ. ತಿಮ್ಮೇ ಗೌಡ ಇವರು ‘ಯುವ ಜಾನಪದೋತ್ಸವ’ ಮತ್ತು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಕಾಶ್ ‘ಕರಕುಶಲ ಮೇಳ’ದ ಉದ್ಘಾಟನೆ ಮಾಡಲಿರುವರು. ರಾಜ್ಯ ಮಟ್ಟದ ಜನಪದ ಕಲೆಗಳ ಯುವ ಜಾನಪದೋತ್ಸವದಲ್ಲಿ ವಿವಿಧ ಕಲಾ ತಂಡಗಳಿಂದ ನಗಾರಿ…
ಕನ್ನಡದ ‘ಮಂಕುತಿಮ್ಮನ ಕಗ್ಗದ ಸರದಾರ’ ಎಂದೇ ಪ್ರಚಲಿತವಿರುವ ಡಿ. ವಿ. ಜಿ. ಇವರ ಸುಪುತ್ರ. ಓರ್ವ ಮೇರು ಬರಹಗಾರ, ಮಹಾನ್ ಸಸ್ಯಶಾಸ್ತ್ರಜ್ಞ ,ಚಿಂತಕ, ಸಂಶೋಧಕ, ವಿದ್ವಾಂಸ, ವಿನೋದ ಪೂರ್ಣ, ವಿಚಾರ ಪೂರ್ಣ ಹಾಗೂ ವೈಜ್ಞಾನಿಕ ಬರಹಗಾರ ಡಾ. ಬಿ. ಜಿ. ಎಲ್. ಸ್ವಾಮಿ ಇವರು 5 ಫೆಬ್ರವರಿ 1916 ರಲ್ಲಿ ಜನಿಸಿದರು .ಇವರ ತಾಯಿ ಭಾಗಿರತಮ್ಮನವರು. ಬಿ. ಜಿ. ಎಲ್. ಸ್ವಾಮಿ ಎಂದೇ ಖ್ಯಾತರಾದ ಇವರ ಪೂರ್ಣ ಹೆಸರು ಬೆಂಗಳೂರು ಗುಂಡಪ್ಪ ಲಕ್ಷ್ಮೀ ನಾರಾಯಣ ಸ್ವಾಮಿ. ಕನ್ನಡದ ಪ್ರಮುಖ ವಿಜ್ಞಾನಿಗಳಲ್ಲಿ ಒಬ್ಬರಾದ ಇವರು ಉತ್ತಮ ಸಾಹಿತಿಯಾಗಿ ಹೆಸರು ಪಡೆದವರು. ಮುಖ್ಯವಾಗಿ ಸಸ್ಯಶಾಸ್ತ್ರ ಕ್ಷೇತ್ರದಲ್ಲಿ ಹಲವು ಪ್ರಮುಖ ಸಂಶೋಧನೆಗಳನ್ನು ನಡೆಸಿದ ಇವರ ಹೆಸರು ವೈಜ್ಞಾನಿಕ ಲೋಕಕ್ಕಿಂತಲೂ ಕನ್ನಡ ಸಾಹಿತ್ಯ ಪ್ರಪಂಚದಲ್ಲಿ ಹೆಚ್ಚು ಪ್ರಸಿದ್ಧಿ ಪಡೆಯಿತು. ವಿಜ್ಞಾನವನ್ನು ಜನಸಾಮಾನ್ಯರಿಗೆ ಸ್ಪಷ್ಟವಾಗಿ ವಿವರಿಸುವ ಸಾಮರ್ಥ್ಯವನ್ನು ಹೊಂದಿದ್ದು, ತಮ್ಮ ಬರಹಗಳ ಮೂಲಕ ವಿಜ್ಞಾನ ಮತ್ತು ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದವರು. ಸಸ್ಯಶಾಸ್ತ್ರ ಅಧ್ಯಯನ ಮಾಡಿ ಬಿ.…
ಉಡುಪಿ : ರಾಗ ಧನ ಸಂಸ್ಥೆಯು ಪ್ರತಿ ವರ್ಷ ಸ್ಥಳೀಯ ಪ್ರತಿಭಾವಂತ ಶಾಸ್ತ್ರೀಯ ಸಂಗೀತ ಸಾಧಕರಿಗೆ ನೀಡುವ “ರಾಗ ಧನ ಪಲ್ಲವಿ ಪ್ರಶಸ್ತಿ”ಗೆ ಗಾಯಕಿ ವಿದುಷಿ ಶ್ರುತಿ ಎಸ್. ಭಟ್ ಆಯ್ಕೆಯಾಗಿದ್ದಾರೆ. ಭಾಷಾ ವಿಜ್ಞಾನಾದಿ ನಾನಾ ಕ್ಷೇತ್ರಗಳ ವಿದ್ವಾಂಸರು ಹಾಗೂ ಸಂಗೀತ ಪ್ರಿಯರೂ ಆದ ಡಾ. ಸುಶೀಲಾ ಉಪಾಧ್ಯಾಯ ಇವರ ಸಂಸ್ಮರಣೆಯಲ್ಲಿ ಇವರ ಪತಿ ಡಾಕ್ಟರ್ ಯು. ಪಿ. ಉಪಾಧ್ಯಾಯ ಇವರು ಸ್ಥಾಪಿಸಿದ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು 07 ಫೆಬ್ರವರಿ 2025ರಂದು ಸಂಜೆ 5 ಗಂಟೆಗೆ ಎಂ. ಜಿ. ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿರುವ 37ನೇಯ ಪುರಂದರ ದಾಸರು ಮತ್ತು ಸಂಗೀತ ತ್ರಿಮೂರ್ತಿ ಉತ್ಸವದ ಸಂದರ್ಭದಲ್ಲಿ ನಡೆಯಲಿದೆ. ಖ್ಯಾತ ಹಿರಿಯ ಕೊಳಲು ವಿದ್ವಾಂಸ ಯು. ರಾಘವೇಂದ್ರ ರಾವ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು ,ನಂತರ ಶ್ರುತಿ ಎಸ್. ಭಟ್ ಅವರ ಸಂಗೀತ ಕಛೇರಿ ನಡೆಯಲಿದೆ ಎಂದು ಸಂಸ್ಥೆ ತಿಳಿಸಿದೆ.
ಉಡುಪಿ : ನಾಡಿನ ಹಿರಿಯ ಕವಿ ಹಾಗೂ ಪತ್ರಕರ್ತರಾದ ಕಡೆಂಗೋಡ್ಲು ಶಂಕರಭಟ್ಟರ ನೆನಪಿನಲ್ಲಿ 1978ರಲ್ಲಿ ಸ್ಥಾಪಿತವಾದ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ಗೆ ಈ ವರ್ಷ ಅಪ್ರಕಟಿತ ಕನ್ನಡ ಕವನ ಸಂಕಲಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿಗೆ ಕವನ ಸಂಕಲನಗಳನ್ನು ಕಳುಹಿಸಲು ಕೊನೆಯ ದಿನಾಂಕ 15 ಮಾರ್ಚ್ 2025 ಕಳುಹಿಸಬೇಕಾದ ವಿಳಾಸ: ಆಡಳಿತಾಧಿಕಾರಿ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂ. ಜಿ. ಎಂ. ಕಾಲೇಜು ಆವರಣ, ಉಡುಪಿ 576 102. ಕಾವ್ಯ ಪ್ರಕಟನೆಗೆ ನೆರವು ನೀಡಿ ಪ್ರೋತ್ಸಾಹಿಸುವ ಉದ್ದೇಶದಿಂದ ರೂಪಾಯಿ 10,000ದ ವಾರ್ಷಿಕ ಬಹುಮಾನವನ್ನು ನೀಡಲಾಗುತ್ತದೆ. ಹಸ್ತಪ್ರತಿ ಹಂತದಲ್ಲಿರುವ 40ಕ್ಕೆ ಕಡಿಮೆ ಇಲ್ಲದ 50ಕ್ಕಿಂತ ಹೆಚ್ಚಿಲ್ಲದ ಕನ್ನಡ ಕವನಗಳ ಅತ್ಯುತ್ತಮ ಸಂಗ್ರಹಕ್ಕೆ ಈ ಬಹುಮಾನವನ್ನು ಕೊಡಲಾಗುವುದು. ತಜ್ಞರ ಸಮಿತಿ ಬಹುಮಾನಕ್ಕೆ ಅರ್ಹವಾದ ಕೃತಿಯನ್ನು ಆಯ್ಕೆ ಮಾಡಲಿದೆ. ಹೆಚ್ಚಿನ ಮಾಹಿತಿಗಾಗಿ https://govindapairesearch.blogspot.com ದೂರವಾಣಿ ಸಂಖ್ಯೆ ಕಛೇರಿ: 0820-2521159 ಅಥವಾ ಮೊಬೈಲ್ ನಂ.9449471449 / 9480575783 ಈ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಆಯೋಜಿಸಿದ ಹಿರಿಯ ಸಾಹಿತಿಗಳ ಮನೆಗೆ ಭೇಟಿ ಕಾರ್ಯಕ್ರಮದಡಿ ನಿವೃತ್ತ ಶಿಕ್ಷಕಿ ಹಾಗೂ ಹಿರಿಯ ಸಾಹಿತಿ ಬಿ. ಸುಲೋಚನಾ ಇವರಿಗೆ ಸನ್ಮಾನ ಕಾರ್ಯಕ್ರಮವು ದಿನಾಂಕ 04 ಫೆಬ್ರವರಿ 2025 ರಂದು ಮಂಗಳೂರಿನ ಉರ್ವ ಪರಿಸರದ ಅವರ ನಿವಾಸದಲ್ಲಿ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು “ನನ್ನ ಕಿಂಚಿತ್ ಸಾಹಿತ್ಯ ಸೇವೆಯನ್ನು ಗುರುತಿಸಿ ಮನೆಗೇ ಬಂದು ಸಮ್ಮಾನ ಮಾಡಿದ್ದು ಮನ ಮುಟ್ಟಿದೆ, ಇದಕ್ಕಿಂತ ಸಂತೋಷ ಸಮಾಧಾನ ಬೇರೆಯಿಲ್ಲ. ಕವಿ ಕಯ್ಯಾರರ ವಿದ್ಯಾರ್ಥಿಯಾಗಿದ್ದು, ಅವರ ಪ್ರೇರಣೆಯಿಂದ ಬರೆಯಲು ಆರಂಭಿಸಿದ್ದರೂ ನಿವೃತ್ತಿಯ ಬಳಿಕವಷ್ಟೇ ಮೂರು ಕೃತಿಗಳನ್ನು ಹೊರ ತರಲು ಸಾಧ್ಯವಾಗಿದೆ. ಮನೆಯವರ, ಬಂಧುಗಳ ಸಹಕಾರ ಮತ್ತು ಮಂಗಳೂರಿನ ಸಾಹಿತ್ಯಿಕ ವಾತಾವರಣ ಹೆಚ್ಚಿನ ಖುಷಿ ನೀಡಿದೆ” ಎಂದರು. ಘಟಕದ ಪದಾಧಿಕಾರಿ ಹಾಗೂ ಕ. ಸಾ. ಪ. ವಿದೇಶೀ ರಾಯಭಾರಿ ಡಾ. ಮುರಲೀಮೋಹನ್ ಚೂಂತಾರು ಸುಲೋಚನಾ ಅವರನ್ನು ಅಭಿನಂದಿಸಿ ಮಾತನಾಡಿ “ಎಲೆ ಮರೆಯ ಸಾಧಕರನ್ನು…
ಉಡುಪಿ : ಲಕ್ಷ್ಮೀ ಗುರುರಾಜ್ ಎನ್.ಎನ್.ಯು. (ರಿ.) ಸಂಸ್ಥೆಯ ವತಿಯಿಂದ 2025-2026ರ ದ್ವಿತೀಯ ಕಾರ್ಯಕ್ರಮ ‘ಗೆಜ್ಜೆ ನಿನಾದ’ ಭರತನಾಟ್ಯ ಕಾರ್ಯಕ್ರಮವು ಯಕ್ಷಗಾನ ಕಲಾರಂಗದ ಐ.ವೈ.ಸಿ. ಹವಾ ನಿಯಂತ್ರಿತ ಸಭಾಂಗಣದಲ್ಲಿ ದಿನಾಂಕ 03 ಫೆಬ್ರವರಿ 2025ರಂದು ನಡೆಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್ ಕಾರ್ಯಕ್ರಮ ಉದ್ಘಾಟಿಸಿ 35 ವರ್ಷಗಳ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸಿ ಸಂಸ್ಥೆಗೆ ಶುಭ ಹಾರೈಸಿದರು. ಉಡುಪಿಯ ಹಿರಿಯ ನೃತ್ಯ ಗುರು ನಾರಾಯಣ್ ಭಟ್ ಉಪಸ್ಥಿತರಿದ್ದರು. ಸಂಸ್ಥೆಯ ನಿರ್ದೇಶಕಿ ವಿದುಷಿ ಲಕ್ಷ್ಮೀ ಗುರುರಾಜ್ ಸ್ವಾಗತಿಸಿ, ಸಂಸ್ಥೆಯ ವಿದ್ಯಾರ್ಥಿನಿ ವಿದುಷಿ ಅರ್ಪಿತಾ ಹೆಗಡೆ ನಿರೂಪಿಸಿದರು. ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ‘ಗೆಜ್ಜೆ ನಿನಾದ’ ನೃತ್ಯ ಕಾರ್ಯಕ್ರಮ ಪ್ರದರ್ಶಿಸಲ್ಪಟ್ಟಿತು.
ಮೂಲ್ಕಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕವು ದಿನಾಂಕ 08 ಫೆಬ್ರವರಿ 2025ರಂದು ಐಕಳ ಪೊಂಪೈ ಕಾಲೇಜಿನಲ್ಲಿ ಮೂಲ್ಕಿ ತಾಲೂಕು ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಿದೆ. ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಸಾಹಿತಿ ಶ್ರೀಧರ ಡಿ.ಎಸ್. ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನವನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ಮೂರುಕಾವೇರಿಯಿಂದ ಪೊಂಪೈ ಕಾಲೇಜುವರೆಗೆ ನಡೆಯಲಿರುವ ಕನ್ನಡ ಭುವನೇಶ್ವರಿ ಮೆರವಣಿಗೆಯನ್ನು ಉದ್ಯಮಿ ಶ್ರೀನಿವಾಸ ಆಚಾರ್ಯ ಉದ್ಘಾಟಿಸಲಿದ್ದಾರೆ. ಕಾಲೇಜಿನ ಸಂಚಾಲಕ ರೆ. ಫಾ. ಓಸ್ವಾಲ್ಡ್ ಮೊಂತೆರೋ ವಸ್ತುಪ್ರದರ್ಶನವನ್ನು ಉದ್ಘಾಟಿಸಲಿದ್ದು, ಕ.ಸಾ.ಪ. ದ.ಕ. ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಆಶಯನುಡಿಗಳನ್ನಾಡಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಕಥೆಗಾರ ಅಬ್ದುಲ್ ರಶೀದ್ ಸಮ್ಮೇಳನಕ್ಕೆ ನುಡಿಸೇಸೆಗೈಯಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಗಣೇಶ್ ಅಮೀನ್ ಸಂಕಮಾರ್, ಹಾಲು ಉತ್ಪಾದಕರ ಒಕ್ಕೂಟದ ಕೆ.ಪಿ. ಸುಚರಿತ ಶೆಟ್ಟಿ, ಮೂಲ್ಕಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ರೋಟರಿಯ ಧನಂಜಯ ಶೆಟ್ಟಿಗಾರ್ ಭಾಗವಹಿಸಲಿದ್ದಾರೆ ಎಂದು ಸಮ್ಮೇಳನ ಸಮಿತಿಯ ಅಧ್ಯಕ್ಷ ಪೃಥ್ವೀರಾಜ ಆಚಾರ್ಯ…
ಪ್ರತಿ ವರ್ಷ ದೆಹಲಿಯ ರಾಷ್ಟ್ರೀಯ ರಂಗಶಾಲೆ (ಎನ್.ಎಸ್.ಡಿ.) ಭಾರತ ರಂಗ ಮಹೋತ್ಸವದ ಹೆಸರಲ್ಲಿ ನಾಟಕೋತ್ಸವವನ್ನು ನಡೆಸುತ್ತಾ ಬಂದಿದೆ. ಈ ವರ್ಷ ಬೆಂಗಳೂರಿನ ಕಲಾಗ್ರಾಮದಲ್ಲಿ ಫೆಬ್ರವರಿ 01ರಿಂದ 08ರವರೆಗೆ ಅದ್ದೂರಿಯಾಗಿ ಈ ಅಂತಾರಾಷ್ಟ್ರೀಯ ನಾಟಕೋತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದೆ. ಈ ರಂಗಪರಿಷೆಯಲ್ಲಿ ರಾಷ್ಟ್ರೀಯ ರಂಗ ಶಾಲೆ ರೆಪರ್ಟರಿಯ ಎರಡು ನಾಟಕಗಳು ಫೆಬ್ರವರಿ 3 ಮತ್ತು 4ರಂದು ಪ್ರದರ್ಶನವಾಗುತ್ತಿವೆ. ಅದರಲ್ಲಿ ಫೆಬ್ರವರಿ 3ರಂದು ಪ್ರದರ್ಶನಗೊಂಡು ಗಮನ ಸೆಳೆದ ಹಿಂದಿ ಭಾಷೆಯ ನಾಟಕ ‘ಮಾಯರಿ ಮೈ ಕಾ ಸೇ ಕಹು’. ರಾಜಸ್ಥಾನದ ಪ್ರಖ್ಯಾತ ಬರಹಗಾರ ವಿಜಯದಾನ್ ದೇತಾರವರ ಜಾನಪದ ಕಥಾ ಸಂಗ್ರಹದಿಂದ ‘ದುವಿಧಾ’ ಕಥೆಯನ್ನು ಆಯ್ಕೆ ಮಾಡಿ ಎನ್.ಎಸ್.ಡಿ.ಯ ಅಜಯ್ ಕುಮಾರ್ ರವರು ರೆಪರ್ಟರಿ ಕಲಾವಿದರಿಗೆ ನಿರ್ದೇಶಿಸಿದ್ದಾರೆ. ರಾಜಸ್ಥಾನಿ ಶೈಲಿಯಲ್ಲಿ ಮೂಡಿ ಬಂದ ಫ್ಯಾಂಟಸಿ ಸ್ವರೂಪದ ಈ ನಾಟಕವು ಅತ್ಯಂತ ಆಕರ್ಷಣೀಯವಾಗಿ ಮೂಡಿ ಬಂದಿದೆ. ಆ ಕಣ್ಮನ ಸೆಳೆಯುವ ಬಣ್ಣಬಣ್ಣದ ವಸ್ತ್ರ ವಿನ್ಯಾಸ ವೈಭವ, ಹಾಡು…