Subscribe to Updates
Get the latest creative news from FooBar about art, design and business.
Author: roovari
ಕೊಪ್ಪಳ : ಆದಿ ಅನಾದಿ ಕಾಲದಿಂದ ಸಾಹಿತ್ಯದಲ್ಲಿ ಚುಟುಕಿಗೆ ಪ್ರಾಧಾನ್ಯತೆ ಸಿಕ್ಕಿದೆ. ರಾಜ್ಯಮಟ್ಟದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ಗುರುತಿಸಿಕೊಂಡಂತೆ ಕೊಪ್ಪಳವು ಹಿಂದೆ ಬಿದ್ದಿಲ್ಲ. ದಿ. ಹನುಮಂತಪ್ಪ ಅಂಡಗಿ ಚಿಲವಾಡಗಿ ನಿರಂತರ, 12 ವರ್ಷ ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ತಿನ ಪೋಷಕರಾಗಿ ಮುನ್ನಡೆಸಿದ್ದರು. ಅವರ ಆಶಯ ಮುಂದುವರೆಸುವ ಸೌಭಾಗ್ಯ ನನಗೆ ಸಿಕ್ಕಿದೆ. ಈ ಹಿನ್ನಲೆಯಲ್ಲಿ ಕೊಪ್ಪಳ ಚುಟುಕು ಸಾಹಿತ್ಯ ಪರಿಷತ್ತಿಗೆ ಜೀವ ತುಂಬುವ ಹಾದಿಯಲ್ಲಿ, ಕೊಪ್ಪಳ ಜಿಲ್ಲಾ ಮಟ್ಟದ ಚುಟುಕು ಕವಿಗೋಷ್ಠಿಗೆ, ಕವಿಗಳಿಗೆ ಆಹ್ವಾನ ನೀಡಲಾಗಿದೆ. ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತನ್ನು ಡಾ. ಎಂ.ಜಿ.ಆರ್. ಅರಸ್ ಉದ್ಘಾಟಿಸಲಿದ್ದು, ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ನಡೆಯಲಿದೆ. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಚುಟುಕು ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 01 ಡಿಸೆಂಬರ್ 2024ರಂದು ಸಂಜೆ 4-00 ಗಂಟೆಗೆ ಕೊಪ್ಪಳದ ಕಿನ್ನಾಳ ರಸ್ತೆಯಲ್ಲಿರುವ ಶಾಂತಿ ನಿಕೇತನ ಕಟ್ಟಡ ಆವರಣದ, ಸೇಂಟ್ ಫಾಲ್ಸ್ ಪದವಿ ಕಾಲೇಜ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕವನ ವಾಚಿಸುವ ಕವಿಗಳಿಗೆ ಪ್ರಮಾಣ…
ಕಮತಗಿ : ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಮತ್ತು ಹೆಜ್ಜೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ (ರಿ.) ಇವುಗಳ ಸಹಯೋಗದಲ್ಲಿ ಜಾನಪದ ಹಾಡುಗಾರ, ಗೀತ ರಚನೆಕಾರ, ನಾಟಕಕಾರ ಹಾಗೂ ಚಲಚಿತ್ರ ನಟರಾದ ಶ್ರೀ ಗುರುರಾಜ್ ಹೊಸಕೋಟೆಯವರ ಸರ್ವಾಧ್ಯಕ್ಷತೆಯಲ್ಲಿ ಕರ್ನಾಟಕ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ‘ಮೇಘಮೈತ್ರಿ ನೇಕಾರ ಸಾಹಿತ್ಯ ಸಮ್ಮೇಳನ – 2024’ವನ್ನು ದಿನಾಂಕ 23 ನವೆಂಬರ್ 2024ರಂದು ಕಮತಗಿಯ ಹಿರೇಮಠದ ಶ್ರೀ ಚೆನ್ನಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ಮೆರವಣಿಗೆ, ನೇಕಾರರ ಬದುಕು-ಬವಣೆ ಕುರಿತ ಕವಿಗೋಷ್ಠಿ, ವಿಚಾರಗೋಷ್ಠಿ, ಕಲಾ ಪ್ರದರ್ಶನ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಗಾಂಧಿ ಚೌಕದಿಂದ ಹಿರೇಮಠದವರೆಗೆ ನಡೆಯಲಿರುವ ಕಾಲ್ನಡಿಗೆ ಮೆರೆವಣಿಗೆಗೆ ಹುನಗುಂದ ತಾಲೂಕು ಕ.ಸಾ.ಪ.ದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಸಜ್ಜನ ಇವರು ಚಾಲನೆ ನೀಡಲಿದ್ದು, ಧ್ವಜಾರೋಹಣ, ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮತ್ತು ಖಾದಿ ಭಂಡಾರಕ್ಕೆ ಚಾಲನೆ ನಡೆಯಲಿದೆ. ಕಮತಗಿಯ ಹಿರೇಮಠದ ಶ್ರೀ ಶ್ರೀ…
ಮಂಗಳೂರು : ಮಂಗಳೂರಿನ ಪ್ರತಿಷ್ಟಿತ ನೃತ್ಯ ಸಂಸ್ಥೆಯಾದ ನೃತ್ಯಾಂಗನ್ ಪ್ರಸ್ತುತ ಪಡಿಸುವ ‘ಮಂಥನ 2024’ ಭರತನಾಟ್ಯ ಉತ್ಸವದ ದಶಮ ಆವೃತ್ತಿವನ್ನು ದಿನಾಂಕ 22 ನವೆಂಬರ್ 2024ರಂದು ಸಂಜೆ 5-45 ಗಂಟೆಗೆ ಮಂಗಳೂರಿನ ಡಾನ್ ಬೋಸ್ಕೋ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಚೆನ್ನೈ ಮೂಲದ ಭರತನಾಟ್ಯ ಕಲಾವಿದೆ ವಿದುಷಿ ಲಾವಣ್ಯ ಅನಂತ್ ಇವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಹೆಸರಾಂತ ಭರತನಾಟ್ಯ ಕಲಾವಿದರಾದ ಕೊಡಗಿನ ವಿದುಷಿ ಶಿಲ್ಪಾ ನಂಜಪ್ಪ, ಚೆನ್ನೈಯ ವಿದುಷಿ ದಿವ್ಯಾ ನಾಯರ್, ಬೆಂಗಳೂರಿನ ವಿದುಷಿ ಇಂದು ವೇಣು, ಪುತ್ತೂರಿನ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಮತ್ತು ಮಂಗಳೂರಿನ ವಿದುಷಿ ರಾಧಿಕಾ ಶೆಟ್ಟಿ ಇವರುಗಳು ಏಕ ವ್ಯಕ್ತಿ ಪ್ರದರ್ಶನ ನೀಡಲಿದ್ದು, ಇವರಿಗೆ ನಟುವಾಂಗದಲ್ಲಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ, ಹಾಡುಗಾರಿಕೆಯಲ್ಲಿ ನಂದಕುಮಾರ್ ಉಣ್ಣಿಕೃಷ್ಣನ್, ಮೃದಂಗದಲ್ಲಿ ಶ್ರೀ ಕಾರ್ತಿಕ್ ವಿಧಾತ್ರಿ ಹಾಗೂ ಕೊಳಲಿನಲ್ಲಿ ಶ್ರೀ ನಿತೀಶ್ ಅಮ್ಮಣ್ಣಯಾ ಇವರುಗಳು ಸಹಕರಿಸಲಿದ್ದಾರೆ.
ಕಾಸರಗೋಡು : ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಮಟ್ಟದ 63ನೇ ಕೇರಳ ರಾಜ್ಯ ಶಾಲಾ ಕಲೋತ್ಸವ ದಿನಾಂಕ 18 ನವೆಂಬರ್ 2024ರ ಸೋಮವಾರದಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಜೇಶ್ವರದ ಶಾಸಕ ಎ. ಕೆ. ಎಂ. ಅಶ್ರಫ್ ಮಾತನಾಡಿ “ಕೇರಳದಲ್ಲಿ ಪ್ರತಿ ವರ್ಷ ನಡೆಯುವ ಶಾಲಾ ಕಲೋತ್ಸವವನ್ನು ಏಷ್ಯಾದ ಅತಿ ದೊಡ್ಡ ಕಲೋತ್ಸವ ಎಂದೇ ಅಂತಾರಾಷ್ಟ್ರೀಯ ಮಾಧ್ಯಮಗಳು ಬಿಂಬಿಸಿವೆ. ಪಠ್ಯದೊಂದಿಗೆ ಕಲೆ, ಕ್ರೀಡೆ ಸಹಿತ ಪಠೇತರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಕೇರಳದ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ. ಕಲೆಗೆ ಜಾತಿ, ಮತ, ಧರ್ಮಗಳ ಬೇಧವಿಲ್ಲ. ಇದರಿಂದ ಜನರನ್ನು ಒಗ್ಗೂಡಿಸಲು ಸಾಧ್ಯವಾಗುತ್ತದೆ. ಯಕ್ಷಗಾನ, ಭರತ ನಾಟ್ಯ, ಶಾಸ್ತ್ರೀಯ ಸಂಗೀತ ಸಹಿತ ನಾನಾ ಕಲಾ ಪ್ರಕಾರಗಳನ್ನೊಳಗೊಂಡ ಶಾಲಾ ಕಲೋತ್ಸವವು ನಾಳೆಯ ಗೋವಿಂದ ಪೈ ಹಾಗೂ ಕಯ್ಯಾರ ಕಿಂಞಣ್ಣ ರೈಗಳಂಥ ಮೇರು ವ್ಯಕ್ತಿಗಳನ್ನು ನಾಡಿಗೆ ಸಮರ್ಪಿಸುವ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತಿದೆ.” ಎಂದರು. ಎಣ್ಮಕಜೆ ಗ್ರಾಮ ಪಂಚಾಯತ್ ಮತ್ತು ಕಲೋತ್ಸವದ ಸ್ವಾಗತ ಸಮಿತಿಯ ಅಧ್ಯಕ್ಷರಾದ…
ಉಡುಪಿ : ರಾಗ ಧನ ಉಡುಪಿ (ರಿ.) ಸಂಸ್ಥೆಯ ರಾಗರತ್ನಮಾಲಿಕೆ -31 ‘ಗೃಹಸಂಗೀತ’ ಕಾರ್ಯಕ್ರಮವು ದಿನಾಂಕ 24 ನವೆಂಬರ್ 2024ರಂದು ಉಡುಪಿ ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಶ್ರೀ ಹೆಮ್ಮಿಗೆ ಎಸ್. ಪ್ರಶಾಂತ್ ಬೆಂಗಳೂರು ಇವರ ಹಾಡುಗಾರಿಕೆಗೆ ಬೆಂಗಳೂರಿನ ಶ್ರೀಮತಿ ಚಾರುಲತಾ ರಾಮಾನುಜಂ ವಯಲಿನ್ ನಲ್ಲಿ ಹಾಗೂ ಶ್ರೀ ಸುನಾದಕೃಷ್ಣ ಅಮೈ ಮೃದಂಗದಲ್ಲಿ ಸಹಕರಿಸಲಿದ್ದಾರೆ ಎಂದು ರಾಗ ಧನ ಉಡುಪಿಯ ಕಾರ್ಯದರ್ಶಿ ಉಮಾಶಂಕರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ – 9964140601
ಹೊನ್ನಾವರ : ಲಯನ್ಸ್ ಕ್ಲಬ್ ಹೊನ್ನಾವರ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಮೆಕ್ಕೆಕಟ್ಟು ಮೇಳ ಹಾಗೂ ಅತಿಥಿ ದಿಗ್ಗಜರ ಕೂಡುವಿಕೆಯಲ್ಲಿ ‘ಲಯನ್ಸ್ ಯಕ್ಷ ಸಂಜೆ’ ಕಾರ್ಯಕ್ರಮವನ್ನು ದಿನಾಂಕ 24 ನವೆಂಬರ್ 2024ರಂದು ಸಂಜೆ 6-00 ಗಂಟೆಗೆ ಹೊನ್ನಾವರದ ಎಸ್.ಡಿ.ಎಮ್. ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ‘ಭೀಷ್ಮ ವಿಜಯ’ ಮತ್ತು ‘ಕವಿ ರತ್ನ ಕಾಳಿದಾಸ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.
ಮಂಗಳೂರು : ಸನಾತನ ನಾಟ್ಯಾಲಯ ಮತ್ತು ನೃತ್ಯಾಂಗಣ ಇವುಗಳ ಜಂಟಿ ಆಶ್ರಯದಲ್ಲಿ ‘ಭರತನಾಟ್ಯಂ ಕಾರ್ಯಾಗಾರ’ವನ್ನು ದಿನಾಂಕ 9 ಡಿಸೆಂಬರ್ 2024 ಮತ್ತು 10 ಡಿಸೆಂಬರ್ 2024ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಸನಾತನ ನಾಟ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರವನ್ನು ವಿದ್ವಾನ್ ವೈಭವ ಅರೆಕರ್ ಇವರು ನಡೆಸಿಕೊಡಲಿದ್ದು, ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗೆ 9845169506 ಮತ್ತು 9845091838 ಸಂಖ್ಯೆಯನ್ನು ಸಂಪರ್ಕಿಸಿರಿ.
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಸಹಯೋಗದಲ್ಲಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಇವರ ನೂತನ ಕೃತಿ ‘ಸೀಯನ’ ಚೀಪೆ ಕೋಪೆದ ಪಾಕ ಪದೊಕುಲು ಕವನ ಸಂಕಲನದ ಲೋಕಾರ್ಪಣೆ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮವು ದಿನಾಂಕ 17 ನವೆಂಬರ್ 2024ರಂದು ಕದ್ರಿ ಶ್ರೀ ಮಂಜುನಾಥ ದೇವಾಲಯದ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಮತ್ತು ಹಿರಿಯ ಜಾನಪದ ಸಂಶೋಧಕರಾದ ಪ್ರೊ. ಎ. ವಿ. ನಾವಡ ಮಾತನಾಡಿ “ತುಳು ಭಾಷೆಯಲ್ಲಿ ಬರೆಯುವ ಹೆಚ್ಚಿನ ಲೇಖಕರು ಭಾಷೆಯ ಬಗ್ಗೆ ಗಂಭೀರವಾಗಿ ಯೋಚಿಸುವುದಿಲ್ಲ. ಆದರೆ ಭಾಸ್ಕರ ರೈ ಕುಕ್ಕುವಳ್ಳಿಯವರ ‘ಸೀಯನ’ ಕೃತಿಯಲ್ಲಿ ವಸ್ತುವೈವಿಧ್ಯತೆಯೊಂದಿಗೆ ಭಾಷೆಯನ್ನು ಸಶಕ್ತವಾಗಿ ಬಳಸಲಾಗಿದೆ. ‘ಸೀಯನ’ ಶೀರ್ಷಿಕೆಯೇ ಅಪ್ಪಟ ತುಳು ದೇಸಿ ಪದ. ಮೂರು ವಿಭಾಗಗಳಲ್ಲಿ ಪ್ರಕಟವಾಗಿರುವ ನೂರಕ್ಕೂ ಹೆಚ್ಚಿನ ಅವರ ಕವಿತೆಗಳಲ್ಲಿ ತುಳು ಬದುಕಿನ ನೈಜ ಚಿತ್ರಣವನ್ನು ವಿವಿಧ ಆಯಾಮಗಳಲ್ಲಿ ಕಟ್ಟಿ ಕೊಡಲಾಗಿದೆ.…
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.) ಇದರ ವತಿಯಿಂದ ದಿನಾಂಕ 23 ನವೆಂಬರ್ 2024ರಂದು ‘ಓದು-ಸಂವಾದ’ ಕಾರ್ಯಕ್ರಮ ಮತ್ತು ದಿನಾಂಕ 24 ನವೆಂಬರ್ 2024 ರಂದು ಕೃತಿ ಬಿಡುಗಡೆ ಸಮಾರಂಭವು ಮಂಗಳೂರಿನ ಉರ್ವಸ್ಟೋರ್ ಅಶೋಕ ನಗರ ಕಚೇರಿ ಬಳಿಯಿರುವ ಸಾಹಿತ್ಯ ಸದನದಲ್ಲಿ ನಡೆಯಲಿದೆ. ದಿನಾಂಕ 23 ನವೆಂಬರ್ 2024ರಂದು ಅಪರಾಹ್ನ 2-30 ಗಂಟೆಗೆ ನಡೆಯಲಿರುವ ‘ಓದು-ಸಂವಾದ’ ಕಾರ್ಯಕ್ರಮದಲ್ಲಿ ಲೇಖಕಿ ಉಷಾ ಪಿ. ರೈಯವರ ‘ಒಲ್ಲೆನೆನ್ನದಿರು ನಮ್ಮದಲ್ಲದ ನಾಳೆಗಳ’ (ಆತ್ಮಕಥನ ಭಾಗ -2) ಸಂವಾದ ನಡೆಯಲಿದೆ. ಶ್ರೀಮತಿ ವನಜಾಕ್ಷಿ ಉಳ್ಳಾಲ ಇವರು ಆಶಯ ಗೀತೆ ಹಾಗೂ ಶ್ರೀಮತಿ ಕಾತ್ಯಾಯಿನಿ ಭಿಡೆಯವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದು, ಕ.ಲೇ.ವಾ. ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ಅಧ್ಯಕ್ಷತೆ ವಹಿಸಲಿದ್ದಾರೆ. ದಿನಾಂಕ 24 ನವೆಂಬರ್ 2024ರಂದು ಅಪರಾಹ್ನ 3-00 ಗಂಟೆಗೆ ನಡೆಯಲಿರುವ ಕೃತಿ ಬಿಡುಗಡೆ ಸಮಾರಂಭದಲ್ಲಿ ಚಂದ್ರಕಲಾ ನಂದಾವರ ಇವರ…
ಕೇರಳದ ಪ್ರಸಿದ್ಧ ಲೇಖಕರಾದ ವೈಕಂ ಮುಹಮ್ಮದ್ ಬಷೀರ್ ಇವರು ಮಲಯಾಳಂನಲ್ಲಿ ಮುಸ್ಲಿಂ ಸಂವೇದನೆಯನ್ನು ತಂದ ಮೊದಲಿಗರು. ಮುಸ್ಲಿಂ ಸಂಸ್ಕೃತಿಯ ಅನಾವರಣವನ್ನು ಮಾಡುವುದರೊಂದಿಗೆ ತಮ್ಮ ಸಮುದಾಯದವರೂ ಒಳಗೊಂಡಂತೆ ಸಮಾಜದ ವಿವಿಧ ಸ್ತರಗಳಿಗೆ ಸೇರಿದ ಮೂಢರು, ಸೋಗಲಾಡಿ ರಾಜಕಾರಣಿಗಳು, ಹುಸಿ ಕ್ರಾಂತಿಕಾರಿಗಳನ್ನು ಚಿತ್ರಿಸಿದರು. ಎಲ್ಲಾ ಮತಧರ್ಮಗಳಲ್ಲಿರುವ ಒಳಿತನ್ನು ಸ್ವೀಕರಿಸುವುದರೊಂದಿಗೆ ಕೆಡುಕುಗಳನ್ನು ವಿರೋಧಿಸಿದರು. ಎಲ್ಲೂ ರೊಚ್ಚು, ಆವೇಶ ಮತ್ತು ಅಬ್ಬರಗಳಿಲ್ಲ. ಯಾಕೆಂದರೆ ಅವರಲ್ಲಿರುವ ಹಾಸ್ಯ ಪ್ರಜ್ಞೆಯು ಭಾವಾತಿರೇಕ ಮತ್ತು ಅತಿಯಾದ ಆದರ್ಶಗಳಿಗೆ ಕಟ್ಟೆಯನ್ನು ಕಟ್ಟಿತು. ವ್ಯವಸ್ಥೆಯನ್ನು ವಿರೋಧಿಸಿ ಬರೆಯುವಾಗ ಅವರು ಕ್ರಾಂತಿಕಾರಿ ಎನಿಸಿಕೊಳ್ಳದೆ ಮಾನವ ಪ್ರೇಮಿ ಎನಿಸಿಕೊಂಡರು. ಮಾನವೀಯ ಸಂಬಂಧಗಳು ಶಿಥಿಲವೂ ಅಪರಿಚಿತವೂ ಆಗುತ್ತಿರುವ ಈ ಹೊತ್ತಿನಲ್ಲಿ ಪ್ರೀತಿಯ ದನಿಗಳು ಅನಿವಾರ್ಯವೂ ಅಪೇಕ್ಷಣೀಯವೂ ಆಗಿವೆ. ಸರಕು ಸಂಸ್ಕೃತಿಯ ಭೌತಿಕ ಸಂಪನ್ನತೆ, ಬೌದ್ಧಿಕ ಹೆಚ್ಚುಗಾರಿಕೆ, ಶುಷ್ಕ ತತ್ವೋಪದೇಶಗಳು ಬದುಕನ್ನು ಆರ್ದಗೊಳಿಸಲಾರವು. ಪ್ರೀತಿ ಎಂಬ ಎರಡಕ್ಷರಗಳೇ ಬದುಕಿನ ತಾರಕ ಮಂತ್ರ ಎನಿಸಬಲ್ಲವು. ಪ್ರೀತಿಯ ತುಡಿತವನ್ನು ಹೊಂದಿದ ಸಾಹಿತ್ಯವು ಸದಾ ಜೀವಂತವಾಗಿರುತ್ತದೆ. ಆದ್ದರಿಂದ ಮೋಹನ ಕುಂಟಾರ್ ಅವರು ವೈಕಂ ಮುಹಮ್ಮದ್…