Author: roovari

ಮಂಗಳೂರು: ಸಂಗೀತ ಪರಿಷತ್ ಮಂಗಳೂರು ಮತ್ತು ಭಾರತೀಯ ವಿದ್ಯಾಭವನ ಸಂಸ್ಥೆಗಳ ಸಂಯುಕ್ತ ಆಶಯದಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಂಗೀತಾಭ್ಯಾಸಿಗಳಿಗೆ ಕರ್ನಾಟಕ ಶಾಸ್ತ್ರೀಯ ಸಂಗೀತ ಸರ್ಧೆಗಳನ್ನು ಆಯೋಜಿಸಲಾಗಿದೆ. 15 ವರ್ಷಗಳಿಗಿಂತ ಕೆಳಗಿನವರು ಜೂನಿಯರ್ ಹಾಗೂ 20 ವರ್ಷಗಳಿಗಿಂತ ಕೆಳಗಿನವರು ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಬಹುದು. ಸ್ಪರ್ಧೆಗಳು ದಿನಾಂಕ 15-10-2023ರಂದು ಭಾರತೀಯ ವಿದ್ಯಾಭವನದಲ್ಲಿ ನಡೆಯಲಿವೆ. ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಯು ಎರಡು ವಿಳಂಬ ಕಾಲ ಮತ್ತು ಎರಡು ಮಧ್ಯಮ ಕಾಲದ ಕೃತಿಗಳನ್ನು ಹಾಡಲು ಸಮರ್ಥರಿರಬೇಕು. ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಯು ಒಂದು ವರ್ಣ, ಮೂರು ಬೇರೆ ಬೇರೆ ವಾಗ್ಗೇಯಕಾರರ ಒಂದೊಂದು ಕೃತಿಗಳನ್ನು ಆಲಾಪನೆ, ನೆರವಲ್, ಸ್ವರ ಪ್ರಸ್ತಾರ ಸಹಿತ ಮತ್ತು ಒಂದು ದೇವರ ನಾಮ/ತಿಲ್ಲಾನ/ ಜಾವಳಿಗಳನ್ನು ಹಾಡಲು ತಯಾರಿ ನಡೆಸಬೇಕು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 10-10-2023. ವಿಜೇತರಾದವರನ್ನು ಮಂಗಳೂರು ಸಂಗೀತೋತ್ಸವದ ಸಂದರ್ಭ ಗೌರವಿಸಲಾಗುವುದು. ಅರ್ಜಿಗಳನ್ನು ಸಂಗೀತ ಪರಿಷತ್‌ ಮಂಗಳೂರು 12-1-33, ಸಿಂಧೂರ, ನ್ಯೂಫೀಲ್ಡ್‌ ರಸ್ತೆ, ಮಹಾ ಮಾಯ ದೇವಸ್ಥಾನದ ಹತ್ತಿರ, ರಥಬೀದಿ, ಮಂಗಳೂರು- 575001…

Read More

ಕಾಸರಗೋಡು : ಕಾಸರಗೋಡಿನ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು (ರಿ.), ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ವಿದ್ಯಾರ್ಥಿಗಳ ‘ಸ್ನೇಹರಂಗ’ ಸಾದರ ಪಡಿಸುವ ‘ಕನ್ನಡ ವಿದ್ಯಾರ್ಥಿ ಕಲರವ’ ಕಾರ್ಯಕ್ರಮವು ದಿನಾಂಕ 07-10- 2023ರ ಶನಿವಾರದಂದು ಬೆಳಗ್ಗೆ ಘಂಟೆ 10.00 ರಿಂದ ನಡೆಯಲಿದೆ. ಕಾಸರಗೋಡು ಕರಂದಕ್ಕಾಡಿನ ಪದ್ಮಗಿರಿ ಕಲಾಕುಟೀರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಖ್ಯಾತ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರರಾದ ಶ್ರೀ ಭೋಜರಾಜ್ ವಾಮಂಜೂರು ಉದ್ಘಾಟಿಸಲಿರುವರು. ಮಾಜಿ ನಗರ ಸಭಾಧ್ಯಕ್ಷರಾದ ಶ್ರೀ ಎಸ್.ಜೆ ಪ್ರಸಾದ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಈ ಸಮಾರಂಭದಲ್ಲಿ ಕಾಸರಗೋಡು ಸರಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮತ್ತು ಸ್ನೇಹರಂಗದ ಮಾರ್ಗದರ್ಶಕಿಯಾದ ಡಾ.ಆಶಾಲತಾ ಚೇವಾರ್ ಹಾಗೂ ಸ್ನೇಹರಂಗದ ಅಧ್ಯಕ್ಷರಾದ ಶ್ರೀ ಲೋಹಿತ್ ಉಪಸ್ಥಿತರಿರುವರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಕಾಲೇಜು ಕಾಸರಗೋಡಿನ  ಕನ್ನಡ ವಿಭಾಗ ಮುಖ್ಯಸ್ಥರಾದ ಶ್ರೀಮತಿ ಸುಜಾತ ವಹಿಸಲಿದ್ದಾರೆ.

Read More

ಮಂಗಳೂರು : ಜಲ್ಲಿಗುಡ್ಡೆಯ ಸ್ವಸ್ತಿಕ್ ಕಲಾ ಕೇಂದ್ರ (ರಿ.) ಇದರ ವತಿಯಿಂದ ಯಕ್ಷರಂಗದ ಕಣ್ಮಣಿ ದಿ| ಬಾಬು ಕುಡ್ತಡ್ಕ ಅವರ ಹೆಸರಿನಲ್ಲಿ ಪ್ರತೀ ವರ್ಷ ನೀಡಲಾಗುವ ಪ್ರತಿಷ್ಠಿತ ‘ಬಾಬು ಕುಡ್ತಡ್ಕ ಪ್ರಶಸ್ತಿ’ಗೆ ತೆಂಕುತಿಟ್ಟಿನ ಹೆಸರಾಂತ ಹಿರಿಯ ಕಲಾವಿದ ವೇಣೂರು ಸದಾಶಿವ ಕುಲಾಲ್‌ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರೂ.10,000 ನಗದು ಪುರಸ್ಕಾರದೊಂದಿಗೆ ಸ್ಮರಣಿಕೆ, ಪ್ರಶಸ್ತಿ ಪತ್ರ ಹಾಗೂ ಫಲಕಾಣಿಕೆಯನ್ನೊಳಗೊಂಡಿರುತ್ತದೆ. ಮಂಗಳೂರಿನ ಕುದ್ಮುಲ್ ರಂಗರಾವ್‌ ಪುರಭವನದಲ್ಲಿ ದಿನಾಂಕ 08-10-2023ರಂದು ಸಂಜೆ 3 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು ಇವರು ವಹಿಸಲಿದ್ದು, ಮಾಜಿ ಸರಕಾರಿ ಮುಖ್ಯ ಸಚೇತಕರಾದ ಐವನ್ ಡಿಸೋಜಾ, ಪಡೀಲಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನದ ಟ್ರಸ್ಟಿಯಾದ ಡಾ. ಅಣ್ಣಯ್ಯ ಕುಲಾಲ್, ಮಾಜಿ ಶಾಸಕರಾದ ಶ್ರೀ ಜೆ.ಆರ್. ಲೋಬೋ ಮತ್ತು ಶ್ರೀದೇವಿ ಶಿಕ್ಷಣ ಸಮೂಹ ಸಂಸ್ಥೆಗಳ ಟ್ರಸ್ಟಿಯಾದ ಶ್ರೀ ಎ.ಸದಾನಂದ ಶೆಟ್ಟಿ ಇವರುಗಳು ವಿಶೇಷ ಅಭ್ಯಾಗತರಾಗಿ ಆಗಮಿಸಲಿರುವರು.…

Read More

ಉಡುಪಿ : ನಮ ತುಳುವೆರ್ ಕಲಾ ಸಂಘಟನೆ (ರಿ.) ಮತ್ತು ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕ ಇವರ ಸಹಕಾರದೊಂದಿಗೆ ‘ನವರಂಗೋತ್ಸವ’ ಶರನ್ನವರಾತ್ರಿಯ ಪ್ರಯುಕ್ತ ನೃತ್ಯ ಸ್ಪರ್ಧೆ (ಸಾಮೂಹಿಕ ವಿಭಾಗ)ಯು ದಿನಾಂಕ 15-10-2023ನೇ ರವಿವಾರ ಸಂಜೆ ಗಂಟೆ 5ಕ್ಕೆ ಮುದ್ರಾಡಿಯ ನಾಟ್ಕದೂರು ಬಿ.ವಿ.ಕಾರಂತ ಬಯಲು ರಂಗಸ್ಥಳದಲ್ಲಿ ನಡೆಯಲಿದೆ. ಸ್ಪರ್ಧೆಯ ನಿಯಮಗಳು : * ಭಕ್ತಿ ಪ್ರಧಾನ ನೃತ್ಯಕ್ಕೆ ಮಾತ್ರ ಅವಕಾಶ. * ಸಮಯ 5 ನಿಮಿಷ ಮಾತ್ರ. * ಸಾಮೂಹಿಕ ವಿಭಾಗದಲ್ಲಿ ಕನಿಷ್ಠ 6 ಮಂದಿ ಇರಲೇಬೇಕು. * ತೀರ್ಪುಗಾರರ ತೀರ್ಮಾನವೇ ಅಂತಿಮ. * ಹೆಬ್ರಿ ತಾಲೂಕು ವ್ಯಾಪ್ತಿಯವರಾಗಿರಬೇಕು. * 16 ವರ್ಷದೊಳಗಿನವರಿಗೆ ಮಾತ್ರ ಅವಕಾಶ. ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದ ತಂಡಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಭಾಗವಹಿಸುವವರು ದಿನಾಂಕ 12-10-2023 ಗುರುವಾರದೊಳಗೆ ಹೆಸರನ್ನು ನೊಂದಾಯಿಸಕೊಳ್ಳಬೇಕಾಗಿ ವಿನಂತಿ. ಹೆಸರನ್ನು ನೋಂದಾಯಿಸುವವರು 9449904727, 9743218708 ಈ ವಾಟ್ಸಪ್ ನಂಬರನ್ನು ಸಂಪರ್ಕಿಸಬಹುದು.

Read More

ಮಂಗಳೂರು : ಕೊಂಕಣಿಯ ಪ್ರಸಿದ್ಧ ಕಲಾ ತಂಡ ‘ಕೊಮಿಡಿ ಕಂಪೆನಿ’ಯು ತಮ್ಮ ತಂಡದ ಸದಸ್ಯ ದಿ. ಸುನಿಲ್ ಕ್ರಾಸ್ತಾ ಸ್ಮರಣಾರ್ಥ ಆಯೋಜಿಸಿದ ‘ಕರ್ ನಾಟಕ್’ ಆಹ್ವಾನಿತ ತಂಡಗಳ ನಾಟಕ ಸ್ಪರ್ಧೆಯ ಸಮಾರೋಪ ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ದಿನಾಂಕ 24-09-2023ರಂದು ನಡೆಯಿತು. ಲೋಗೋಸ್ ಥಿಯೇಟರ್ ತಂಡದ ‘ನಾನ್ ಲೈಂಗಿಕ ತೊಳಿಲಾಲಿ’ ನಾಟಕವು ರೂ.40,000/- ಬಹುಮಾನ ಮೊತ್ತದೊಡನೆ ಪ್ರಥಮ ಸ್ಥಾನ ಪಡೆಯಿತು. ರಂಗ್ ಥಿಕಾಂ ತಂಡದ ‘ಸೊರ್ ಯಾ ವ್ಯಾಪಾರಿಚೊ ದುಡು’ ನಾಟಕಕ್ಕೆ ರೂ.30,000/- ದ್ವಿತೀಯ ಸ್ಥಾನ, ಉತ್ಸಾಹಿ ಕಲಾಕಾರ್ ಗಂಟಾಲ್ಕಟ್ಟೆ ತಂಡದ ‘ಮ್ಹಜ್ಯಾ ಪುತಾಚೊ ಕಿಣ್ಕುಳೊ’ ನಾಟಕವು ತೃತೀಯ ಸ್ಥಾನಿಯಾಗಿ ರೂ.20,000/- ಬಹುಮಾನ ಪಡೆಯಿತು. ಉತ್ತಮ ನಟ-ಪ್ರಕಾಶ್ ಕೆ., ಉತ್ತಮ ನಟಿ- ಸ್ಪೀಡಲ್ ಡಿ’ಸೋಜಾ, ಪೋಷಕ ಪಾತ್ರ-ಡೊನ್ನಾ ಡಿ’ಸೋಜಾ, ಸಂಗೀತ- ಕ್ಲಾನ್ವಿನ್ ಫೆರ್ನಾಂಡಿಸ್, ನಿರ್ದೇಶಕ -ಕ್ರಿಸ್ಟೋಫರ್ ಡಿ’ಸೋಜಾ, ಕಥೆ – ಚಾಫ್ರಾ ಡಿ’ಕೋಸ್ತಾ, ತೀರ್ಪುದಾರರ ಮೆಚ್ಚುಗೆಯ ಪಾತ್ರ- ಕಿಯಾರಾ ಪಿರೇರಾ, ಸ್ತ್ರೀ ಲೇಖಕಿ ಪ್ರೀತಿ ಮಾರ್ತಾ ಡಿ’ಸೋಜಾ ಅವರನ್ನೂ ಗೌರವಿಸಲಾಯಿತು. ಲಿನೆಟ್…

Read More

ಕಾಸರಗೋಡು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಯೋಗದಲ್ಲಿ ಸಾಮಾಜಿಕ, ಸಾಂಸ್ಕೃತಿಕ ಸಂಸ್ಥೆ ರಂಗಚಿನ್ನಾರಿ ಕಾಸರಗೋಡು ಇದರ ಮಹಿಳಾ ಘಟಕ ನಾರಿಚಿನ್ನಾರಿಯ 9ನೇ ಸರಣಿ ಕಾರ್ಯಕ್ರಮ ‘ವರ್ಷ ರಿಂಗಣ’ವು ದಿನಾಂಕ 30-09-2023ರಂದು ಕಾಸರಗೋಡು ಕೊ-ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಹಿತಿ ಡಾ. ಮೀನಾಕ್ಷಿ ರಾಮಚಂದ್ರ ಇವರು ಮಾತನಾಡುತ್ತಾ “ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಕವಿತೆಗಳು ಸಮಾಜದ ಕನ್ನಡಿಯಾಗಬೇಕು. ಜಗತ್ತನ್ನು, ಸಮಾಜವನ್ನು ಎಚ್ಚರಿಸುವ ಮತ್ತು ತಿದ್ದುವ ದೊಡ್ಡ ಜವಾಬ್ದಾರಿ ಸಾಹಿತಿ, ಕವಿಯ ಮೇಲಿದೆ ಎಂದು ಹೇಳಿದರು. ಅವರು ‘ನೀನಿಲ್ಲ..ಇಲ್ಲಿ ನಾನು ಮಾತ್ರ’ ಲಕ್ಷ್ಮಿ ಕೆ. ಅವರ ಮೂರನೆಯ ಕವನ ಸಂಕಲನವನ್ನು ಬಿಡುಗಡೆಗೊಳಿಸಿ ಅವರ ಕಾವ್ಯೋತ್ಸಾಹವನ್ನು ಶ್ಲಾಘಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಿಚಿನ್ನಾರಿ ಕಾರ್ಯಾಧ್ಯಕ್ಷೆ ಸವಿತಾ ಟೀಚರ್ ವಹಿಸಿದರು. ಕತೆಗಾರ್ತಿ ಸ್ನೇಹಲತಾ ದಿವಾಕರ್ ಪುಸ್ತಕ ಪರಿಚಯ ಮಾಡಿದರು. ಸರೋಜಿನಿ ಕೆ. ಭಟ್ ಅವರು ಪ್ರಥಮ ಪ್ರತಿ ಸ್ವೀಕರಿಸಿ ಶುಭ ಹಾರೈಸಿದರು. ಕಾಸರಗೋಡು ಸರಕಾರಿ ಕಾಲೇಜಿನ ಸಹಾಯಕ…

Read More

ತೆಕ್ಕಟ್ಟೆ : ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ (ರಿ.) ಕೊಮೆ ತಕ್ಕಟ್ಟೆ ಆಯೋಜಿಸಿದ ಹೊಸ ತಲೆಮಾರಿನ ಅರ್ಥಧಾರಿಗಳ ವೇದಿಕೆಯಾದ ‘ಅರ್ಥಾಂಕುರ’ ಸರಣಿಯ ಮೂರನೇ ಕಾರ್ಯಕ್ರಮವು ದಿನಾಂಕ 01-10-2023ರಂದು ರೋಟರಿ ಕ್ಲಬ್ ತೆಕ್ಕಟ್ಟೆ ಇದರ ಸಹಕಾರದೊಂದಿಗೆ ನಡೆಯಿತು. ಜೇಸಿ ತರಬೇತುದಾರರಾಗಿ, ನಿರೂಪಕರಾಗಿ, ಸಂಘಟಕರಾಗಿ, ಬರಹಗಾರರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಪರಿಚಾರಕರಾಗಿ ಗುರುತಿಸಿಕೊಂಡು ಆದರ್ಶ ಶಿಕ್ಷಕರಾಗಿ ವಿದ್ಯಾರ್ಥಿಗಳನ್ನು ರೂಪಿಸಿ ಇದೀಗ ಕರ್ನಾಟಕ ರಾಜ್ಯ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶ್ರೀ ನರೇಂದ್ರ ಕುಮಾರ್ ಇವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದ ಯಕ್ಷಗುರುಗಳಾದ ಸೀತಾರಾಮ ಶೆಟ್ಟಿ ಕೊಯಿಕೂರು “ವ್ಯಕ್ತಿ ಸಮಾಜಮುಖಿಯಾಗಿ ಬೆಳೆಯಬೇಕು. ಪ್ರತಿಭೆ ನಿಂತ ನೀರಾಗಬಾರದು. ಅವಕಾಶ ಪಡೆದು ಇತರರಿಗೆ ಅವಕಾಶ ನೀಡುವ ಸಲುವಾಗಿ ಸದಾ ಚಿಂತಿಸುವ ನರೇಂದ್ರ ಕುಮಾರ್ ಹತ್ತು ಹಲವು ಕಾರ್ಯಕ್ರಮಗಳನ್ನು ಸಂಯೋಜಿಸಿ ಸೈ ಎನಿಸಿಕೊಂಡವರು. ಸಂಸ್ಥೆಯ ನಿಕಟವರ್ತಿಗಳಾದ ಇವರ ಸಾಧನೆ ಸಂಸ್ಥೆಗೆ ಹೆಮ್ಮೆ ತಂದ ವಿಶಯ. ಇವರನ್ನು ಸಮ್ಮಾನಿಸಿ ಸಂಸ್ಥೆ ಧನ್ಯತೆಯನ್ನು ಹೊಂದಿದೆ” ಎಂದು ಅಭಿನಂದನಾ ಮಾತುಗಳನ್ನಾಡಿದರು.…

Read More

ವಿಜಯಪುರ :  ವಿಜಯಪುರ ಜಿಲ್ಲೆ ನಿಡಗುಂದಿ ತಾಲ್ಲೂಕಿನ ಮುದ್ದಾಪುರದ ಏಕತಾರಿ ಕಲಾವಿದ ವೀರಭದ್ರಪ್ಪ ದಳವಾಯಿ ತನ್ನ 81ನೆಯ ವಯಸ್ಸಿನಲ್ಲಿ  ಸೋಮವಾರ ದಿನಾಂಕ 02-10-2023ರಂದು ನಿಧನರಾದರು. ಅವರ ಅಂತ್ಯಕ್ರಿಯೆಯು ಸ್ವಗ್ರಾಮದಲ್ಲಿ ನಡೆಯಿತು. ಅವರಿಗೆ ಪತ್ನಿ, ಗೊಂಬೆಯಾಟದ ಕಲಾವಿದ ಸಿದ್ದು ಬಿರಾದಾರ ಹಾಗೂ ಐವರು ಪುತ್ರಿಯರು ಇದ್ದಾರೆ. ಏಕತಾರಿ ನುಡಿಸುತ್ತ ತತ್ವ ಪದಗಳನ್ನು ಹಾಡುತ್ತಿದ್ದ ವೀರಭದ್ರಪ್ಪ ಆಕಾಶವಾಣಿ ಕಲಾವಿದರಾಗಿದ್ದರು. ಐದು ರಾಜ್ಯಗಳಲ್ಲಿ 600ಕ್ಕೂ ಹೆಚ್ಚು ಕಲಾ ಪ್ರದರ್ಶನವನ್ನು ನೀಡಿದ್ದರು. ಮಹರ್ಷಿ ವಾಲ್ಮೀಕಿ ಸಾಂಸ್ಕೃತಿಕ ಸಂರಕ್ಷಣಾ ಕಲಾ ಸಂಘ ಸ್ಥಾಪಿಸಿ, ಮುದ್ದಾಪುರದಲ್ಲಿ ಸ್ವಂತದ 4 ಗುಂಟೆ ಜಾಗವನ್ನು ನೀಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ವೆಚ್ಚದಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿದ್ದರು. ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

Read More

ಕಾಸರಗೋಡು : ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನದ ವಿಂಶತಿ ವರ್ಷಾಚರಣೆಯ ಅಂಗವಾಗಿ 2023ರ ಸಾಲಿನ ‘ಭರವಸೆಯ ಬೆಳಕು’ ಪುರಸ್ಕಾರವನ್ನು ಬದಿಯಡ್ಕದ ಚಿತ್ತರಂಜನ್ ಕಡಂದೇಲು ಅವರಿಗೆ ದಿನಾಂಕ 01-10-2023ರಂದು ಪ್ರದಾನ ಮಾಡಲಾಯಿತು. ಯಕ್ಷಗಾನ ಸಹಿತ ವಿವಿಧ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಶ್ರೀ ಹರೀಶ್ ಕುಮಾರ್ ಮತ್ತು ಶಿಕ್ಷಕಿ ಶ್ರೀಮತಿ ಜ್ಯೋತ್ಸ್ನಾ ಕಡಂದೇಲು ಅವರ ಸುಪುತ್ರರಾಗಿರುವ ಚಿತ್ತರಂಜನ್ ಕಡಂದೇಲುರವರು ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕ್ಯಾಪ್ಟನ್ ಗಣೇಶ ಕಾರ್ಣಿಕ್, ಕನ್ನಡ ಭವನ ಸ್ಥಾಪಕ ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್, ರಾಧಾಕೃಷ್ಣ ಕೆ. ಉಳಿಯತ್ತಡ್ಕ ಮತ್ತು ಪ್ರೋ. ಎಂ. ಶ್ರೀನಾಥ್ ಮೊದಲಾದವರು ಉಪಸ್ಥಿತರಿದ್ದರು.

Read More

ಮಂಗಳೂರು : ನಗರದ ಪುರಭವನದಲ್ಲಿ ತುಳುವೆರೆ ಆಯನೊ ಕೂಟ ಕುಡ್ಲ ಇದರ ಪದಗ್ರಹಣ ಸಮಾರಂಭವು ದಿನಾಂಕ 30-09-2023ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಸದಾಶಿವ ಶೆಟ್ಟಿ ಕನ್ಯಾನ ಇವರಿಗೆ ‘ತುಳುವೆರೆ ಕರ್ಣೆ’ ಬಿರುದು ನೀಡಿ ಗೌರವಿಸಲಾಯಿತು. ಅವರು ಮಾತನಾಡುತ್ತಾ “ತುಳು ಭಾಷೆಯಲ್ಲಿ ವಿವಿಧ ರೀತಿಯ ಪ್ರಾದೇಶಿಕ ಬದಲಾವಣೆ, ಜಾತಿಯಲ್ಲಿಯೂ ಭಾಷೆಯ ಬದಲಾವಣೆಗಳಿವೆ. ಇದೆಲ್ಲವೂ ತುಳುನಾಡಿನ ತುಳು ಭಾಷೆಯ ವೈಶಿಷ್ಟ್ಯತೆ ಸಾರುತ್ತದೆ” ಎಂದು ಹೇಳಿದರು. ಈ ಸಮಾರಂಭವನ್ನು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಶ್ರೀ ಹರಿನಾರಾಯಣ ಆಸ್ರಣ್ಣ ಉದ್ಘಾಟಿಸಿದರು. ಸಂಸದ ಶ್ರೀ ನಳಿನ್ ಕುಮಾರ್ ಕಟೀಲು, ಶಾಸಕರಾದ ಶ್ರೀ ವೇದವ್ಯಾಸ ಕಾಮತ್‌, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ಶ್ರೀ ರಮನಾಥ ರೈ, ವಿಶ್ವ ಬಂಟರ ಕೂಟಗಳ ಒಕ್ಕೂಟದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿ, ಮಾಜಿ ಮೇಯ‌ರ್ ಶ್ರೀ ಪ್ರೇಮಾನಂದ ಶೆಟ್ಟಿ, ಪಾಲಿಕೆ ಹಣಕಾಸು ಸ್ಥಾಯೀ ಸಮಿತಿ ಅಧ್ಯಕ್ಷ ಶ್ರೀ ವರುಣ್ ಚೌಟ, ವಕೀಲ ಶ್ರೀ ಪದ್ಮರಾಜ್, ಅಖಿಲ ಭಾರತ…

Read More