Author: roovari

ಸಾಲಿಗ್ರಾಮ : ಐವತ್ತರ ವಸಂತದಲ್ಲಿರುವ ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ಪಾರಂಪಳ್ಳಿ ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಪ್ರಯೋಜಕತ್ವದಲ್ಲಿ ಹಾಗೂ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿಯ ಸಹಕಾರದೊಂದಿಗೆ ಸುವರ್ಣ ಪರ್ವ -3ರ ಸರಣಿಯಲ್ಲಿ ‘ಗೌರವ ಸನ್ಮಾನ ಮತ್ತು ಯಕ್ಷಗಾನ ಪ್ರದರ್ಶನ’ವನ್ನು ಹಮ್ಮಿಕೊಂಡಿದೆ. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಕೆ. ಎಸ್. ಕಾರಂತ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಾಲ್ಲೂರು ಶಿವರಾಮ ಶೆಟ್ಟಿಯವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಮಕ್ಕಳ ಕ್ಷೇತ್ರದಲ್ಲಿ ಕೃಷಿ ಮಾಡಿದ ಮಣೂರಿನ ನಿವೃತ್ತ ಅಧ್ಯಾಪಕ ಯಕ್ಷ ಗುರುಗಳಾದ ಶ್ರೀ ಎಮ್.ಎನ್. ಮಧ್ಯಸ್ಥ ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಮಕ್ಕಳ ಮೇಳದ ಕಲಾವಿದರಿಂದ ‘ವೀರ ವೃಷಸೇನ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಇವರ ಸಹಯೋಗದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 16 ನವೆಂಬರ್ 2024ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಡಿಕೇರಿಯ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಪ್ರಸನ್ನ ಇವರು ಮಾತನಾಡಿ “ಅನ್ನದ ವ್ಯಾಮೋಹದ ಬಲೆಯಲ್ಲಿ ನಮ್ಮನ್ನು ನಾವು ಸಿಕ್ಕಿಸಿ ಹಾಕಿಕೊಂಡಿದ್ದೇನೆ. ಕನ್ನಡ ನೆಲದ ನೀರನ್ನು ಕುಡಿಯುತ್ತೇವೆ. ಕನ್ನಡ ಅನ್ನದ ಭಾಷೆಯಾಗಬೇಕು. ಉದ್ಯೋಗದ ಭಾಷೆಯಾಗಬೇಕು. ಆಗ ಮಾತ್ರ ಕನ್ನಡ ಉಳಿಯಲು ಸಾಧ್ಯ. ಉದ್ಯೋಗಕ್ಕಾಗಿ ಆಂಗ್ಲ ಭಾಷೆಯನ್ನು ಮೆಚ್ಚಿಕೊಳ್ಳುವುದು ಅವಶ್ಯವಾಗಿದೆ. ನಮ್ಮ ಮನೆಯಲ್ಲಿ ನಾವು ನಮ್ಮ ಮಾತೃಭಾಷೆಯನ್ನು ಮಾತನಾಡಬೇಕು. ವ್ಯವಹಾರಕ್ಕೆ ಮಾತ್ರ ಆಂಗ್ಲ ಭಾಷೆಯನ್ನು ಉಪಯೋಗಿಸಿದರೆ ನಮ್ಮ ಭಾಷೆಯ ಉಳಿವು ಮತ್ತು ಬೆಳವಣಿಗೆ ಸಾಧ್ಯ” ಎಂದು ನುಡಿದರು. ಕಾರ್ಯಕ್ರಮದ ಮುಖ್ಯ ಭಾಷಣಕಾರ್ತಿಯಾಗಿ ಆಗಮಿಸಿದ ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ…

Read More

ಮಂಗಳೂರು : ಹರಿಕಥಾ ಪರಿಷತ್‌ (ರಿ.) ಮಂಗಳೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯಗಾಗಿ ‘ಹರಿಕಥಾ ಸ್ಪರ್ಧೆ 2024’ಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯು ಎರಡು ವಿಭಾಗಗಳಲ್ಲಿ ನಡೆಯಲಿದ್ದು, ಕಿರಿಯರ ವಿಭಾಗ : ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ಮತ್ತು ಹಿರಿಯರ ವಿಭಾಗ : ಪದವಿ ಪೂರ್ವ ಹಾಗೂ ಪದವಿ (ಪಿ.ಯು.ಸಿ. ಹಾಗೂ ಡಿಗ್ರಿ) ನಿಯಮಗಳನ್ನು ಗಮನಿಸಿ : * ದಿನಾಂಕ 01 ಡಿಸೆಂಬರ್ 2024ರ ಒಳಗೆ ತಮ್ಮ ಹತ್ತರಿಂದ ಹದಿನೈದು ನಿಮಿಷ ಅವಧಿಯ ಹರಿಕಥಾ ಪ್ರಸ್ತುತಿಯ ವಿಡಿಯೊ/ ಆಡಿಯೊವನ್ನು ಸ್ಪರ್ಧಾಳುವಿನ, ಹೆಸರು, ತರಗತಿ, ವಿಳಾಸ ಈ ವಿವರಗಳೊಂದಿಗೆ ಈ ಮೊಬೈಲ್‌ ಸಂಖ್ಯೆಗೆ ವಾಟ್ಸಪ್ ಮೂಲಕ ಕಳಿಸಿಕೊಡಬೇಕು – 9945370655, email: [email protected] * ಆಯ್ಕೆಯಾದ ಸ್ಪರ್ಧಿಗಳಿಗೆ ಡಿಸೆಂಬರ್ ಮೂರನೇ ವಾರದಲ್ಲಿ ಮಂಗಳೂರಿನಲ್ಲಿ ಆಹ್ವಾನಿತ ಶೋತೃಗಳ ಮುಂದೆ 25 ನಿಮಿಷಗಳ ನೇರ ಸ್ಪರ್ಧೆ ನಡೆಸಲಾಗುವುದು. * ವಿಜೇತ ಸ್ಪರ್ಧಿಗಳಿಗೆ ದಿನಾಂಕ 19 ಜನವರಿ 2025ರಂದು ಮಂಗಳೂರು…

Read More

ಉಡುಪಿ : ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು ಇವರು ಅನಾರೋಗ್ಯದಿಂದ ದಿನಾಂಕ 18 ನವೆಂಬರ್ 2024ರಂದು ನಿಧನರಾಗಿದ್ದಾರೆ. ಇವರು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರ ಶಸ್ತ್ರಚಿಕಿತ್ಸಾ ಕೊಠಡಿಯ ತಂತ್ರಜ್ಞರಾಗಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಕಸ್ತೂರ್ಬಾ ಆಸ್ಪತ್ರೆಯ ಸಹಾಯಕ ಶುಶ್ರೂಷಾಧೀಕ್ಷಕಿ ಕವಿತಾ ಕಾಮತ್, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಇವರು ಸಹಸ್ರಾರು ಮಂದಿ ಯಕ್ಷಗಾನ ಕಲಾವಿದರ ಹುಟ್ಟಿಗೆ ಕಾರಣರಾದವರು. ಸಂಪ್ರದಾಯ ಬದ್ಧವಾದ ಬಡಗುತಿಟ್ಟಿನ ಯಕ್ಷಗಾನ ಕಲೆಯ ಉಳಿವು-ಬೆಳವಿಗೆ ಕಾರಣರಾಗಿದ್ದರು. 90 ದಶಕದಲ್ಲಿ ಮಣಿಪಾಲದ ಸರಳೇಬೆಟ್ಟುವಿನಲ್ಲಿ ಬಾಲಮಿತ್ರ ಯಕ್ಷ-ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಿ ಎಳೆಯ ಪ್ರತಿಭೆಗಳಿಗೆ ನಿರಂತರ ಉಚಿತ ಯಕ್ಷಗಾನ ತರಬೇತಿಯನ್ನು ನೀಡುತ್ತಿದ್ದರು. ಬಾಲಮಿತ್ರ ಯಕ್ಷಗಾನ ಮಂಡಳಿಯು ದೇಶದಲ್ಲಿ ಮಾತ್ರವಲ್ಲದೆ ದುಬೈ, ಸಿಂಗಾಪುರ, ಆಫ್ರಿಕಾ ಸೇರಿ ವಿಶ್ವದ ವಿವಿಧೆಡೆ ಪ್ರದರ್ಶನ ನೀಡಿದೆ. ಅಲ್ಲದೆ ಗ್ರಾಮೀಣ ಪ್ರದೇಶಕ್ಕೆ ಸೀಮಿತವಾಗಿದ್ದ ಮನೆ ಮನೆಗೆ ತೆರಳಿ ಯಕ್ಷಗಾನ ಪ್ರದರ್ಶನ ನೀಡುವ ಹೂವಿನ…

Read More

ಬೆಂಗಳೂರು : ಸಕ್ಕರಿ ಬಾಳಾಚಾರ್ಯ ‘ಶಾಂತಕವಿ’ ಟ್ರಸ್ಟ್ (ರಿ.) ಸಾಧನಕೇರಿ ರಸ್ತೆ, ಧಾರವಾಡ ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ‘ಆಧುನಿಕ ಕನ್ನಡ ರಂಗಭೂಮಿ ದಿನೋತ್ಸವ’ದ ಪ್ರಯುಕ್ತ ಸಂವಾದ ಕಾರ್ಯಕ್ರಮವನ್ನು ದಿನಾಂಕ 23 ನವೆಂಬರ್ 2024ರಂದು ಬೆಂಗಳೂರಿನ ಜೆ.ಸಿ. ರಸ್ತೆ, ಕನ್ನಡ ಭವನ, ಕರ್ನಾಟಕ ನಾಟಕ ಅಕಾಡೆಮಿಯ ಚಾವಡಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ರಂಗಭೂಮಿ – ಸಾಧ್ಯತೆ, ಸವಾಲು ಮತ್ತು ಬಿಕ್ಕಟ್ಟುಗಳು (ಹವ್ಯಾಸಿ ಮತ್ತು ವೃತ್ತಿ ರಂಗಭೂಮಿಯ ಹಲವು ಸಮಸ್ಯೆಗಳು) ಎಂಬ ವಿಷಯದ ಬಗ್ಗೆ ರಂಗ ನಿರ್ದೇಶಕರು ಮತ್ತು ಚಿಂತಕರು ಡಾ. ಪ್ರಕಾಶ್ ಗರುಡ ಹಾಗೂ ದಾವಣಗೆರೆ ರಂಗಾಯಣದ ನಿರ್ದೇಶಕರು ಮತ್ತು ಅಂಕಣಕಾರರಾದ ಮಲ್ಲಿಕಾರ್ಜುನ ಕಡಕೋಳ ಇವರುಗಳು ವಿಷಯ ಮಂಡನೆ ಮಾಡಲಿರುವರು. ಬೆಂಗಳೂರಿನ ಶ್ರೀ ಗುಂಡಣ್ಣ ಇವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

Read More

ಬೆಳಗಾವಿ : ರಂಗಸಂಪದದವರು ಕೋನವಾಳ ಬೀದಿಯಲ್ಲಿರುವ ಲೋಕಮಾನ್ಯ ರಂಗಮಂದಿರದಲ್ಲಿ ಮೂರು ದಿನ ಬೇರೆ ಬೇರೆ ನಾಟಕಗಳ ‘ರಂಗ ಕಾರ್ತಿಕ ನಾಟಕೋತ್ಸವ’ವನ್ನು ಹಮ್ಮಿಕೊಂಡಿದ್ದರು. ಉತ್ಸವದ ಮೊದಲ ದಿನವಾದ ದಿನಾಂಕ 16 ನವೆಂಬರ್ 2024ರಂದು ರಾಜೇಂದ್ರ ಕಾರಂತ ರಚನೆಯ ಡಾ. ಅರವಿಂದ ಕುಲಕರ್ಣಿ ನಿರ್ದೇಶನದ ‘ನಾಯಿ ಕಳೆದಿದೆ’ ನಾಟಕ ಪ್ರದರ್ಶನಗೊಂಡಿತು. ಈ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಎಲ್ಲ ಪ್ರೇಕ್ಷಕರ ಪರವಾಗಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ವಾಗ್ಮಿ ಡಾ. ಬಸವರಾಜ ಜಗಜಂಪಿಯವರು “ನಾಯಿ ಕಳೆದಿದೆ ಎಂಬ ನಾಟಕವು ಸಮಕಾಲೀನ ವಿಷಯವನ್ನು ಅತ್ಯಂತ ಪ್ರಭಾವಿಯಾಗಿ ಬಿಂಬಿಸಿದೆ. ಎಲ್ಲ ಪಾತ್ರಧಾರಿಗಳು ಅಷ್ಟೇ ಪರಿಣಾಮಕಾರಿಯಾಗಿ ಪ್ರೇಕ್ಷಕರ ಮನಮುಟ್ಟುವಂತೆ ಅಭಿನಯಿಸಿ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದಾರೆ. ಬೆಳಗಾವಿಯ ಜನರಲ್ಲಿ ರಂಗಾಸಕ್ತಿಯನ್ನು ಹೆಚ್ಚಿಸುವಲ್ಲಿ ರಂಗಸಂಪದ ತಂಡ ಯಶಸ್ವಿಯಾಗಿದೆ. ಜನರಲ್ಲಿ ರಂಗಭೂಮಿಯ ಒಲವನ್ನು ಮೂಡಿಸುವಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ಅರವಿಂದ ಕುಲಕರ್ಣಿಯವರ ಶ್ರಮದ ಪಾಲು ದೊಡ್ಡದಿದೆ” ಎಂದು ಹೇಳಿದರು. “ನಾಯಿ ಕಳೆದಿದೆ” ನಾಟಕದ ನಿರ್ದೇಶಕ ಡಾ. ಅರವಿಂದ ಕುಲಕರ್ಣಿಯವರು ಮಾತನಾಡಿ “ಕರ್ನಾಟಕದ ಭಾಷೆ ಕನ್ನಡವಾದರೂ ಬೆಂಗಳೂರು,…

Read More

ಬೆಳ್ತಂಗಡಿ: ಬೆಳ್ತಂಗಡಿಯ ದುರ್ಗಾಪರಮೇಶ್ವರಿ ಯಕ್ಷಗಾನ ಅಧ್ಯಯನ ಕೇಂದ್ರದ ಉದ್ಘಾಟನಾ ಸಮಾರಂಭವು ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗದೊಂದಿಗೆ ದಿನಾಂಕ 17 ನವೆಂಬರ್ 2024ರ ಭಾನುವಾರದಂದು ಮುಂಡಾಜೆ ಶಾರದಾ ನಗರದಲ್ಲಿ ನಡೆಯಿತು. ಯಕ್ಷಗಾನ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿದ ರಬ್ಬ‌ರ್ ಸೊಸೈಟಿಯ ಉಪಾಧ್ಯಕ್ಷರಾದ ಮಚ್ಚಿಮಲೆ ಅನಂತ ಭಟ್ ಮಾತನಾಡಿ “ಪುರಾಣವನ್ನು ಮುಂದಿನ ಪೀಳಿಗೆಗೆ ತಿಳಿಸುವ ಸುಲಭ ಕಲಾ ಮಾರ್ಗವೇ ಯಕ್ಷಗಾನ. ಈ ಕಲೆ ಉಳಿದು ಬೆಳೆದರೆ ಸಾಹಿತ್ಯ ಪರಂಪರೆಯೊಂದು ಜೀವಂತವಾಗಿರಲು ಸಾಧ್ಯ.” ಎಂದರು. ಅಧ್ಯಯನ ಕೇಂದ್ರದ ಮುಖ್ಯಸ್ಥ, ರವಿಕುಮಾ‌ರ್ ಮುಂಡಾಜೆ ಮಾತನಾಡಿ “ಯಕ್ಷಗಾನದಲ್ಲಿ ನಾವು ಮಾತ್ರ ಕಾಣಿಸಿಕೊಳ್ಳುವುದಲ್ಲ, ನಮ್ಮ ಊರು ಕೂಡ ಕಾಣಿಸಿಕೊಳ್ಳಬೇಕು. ನಮ್ಮಲ್ಲಿ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಈ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಾರಂಭ ಮಾಡಲಾಗಿದೆ.” ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗಣೇಶ್ ಬಂಗೇರ ಕೂಳೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ದಯಾನಂದ ಪಿ. ಬೆಳಾಲು, ರಾಘವ ಎಚ್‌. ಗೇರುಕಟ್ಟೆ, ಯಕ್ಷಗಾನ ಗುರು…

Read More

ಬದಿಯಡ್ಕ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಬೆಂಗಳೂರು ಇದರ ವತಿಯಿಂದ ತುಳುರತ್ನ ಬಹುಭಾಷಾ ವಿದ್ವಾಂಸ ಡಾಕ್ಟರ್ ಪಿ. ವೆಂಕಟರಾಜು ಪುಣಿಂಚಿತ್ತಾಯರ ‘ಪುವೆಂಪು ನೆನಪು -2024’ ಕಾರ್ಯಕ್ರಮವನ್ನು ದಿನಾಂಕ 20 ನವೆಂಬರ್ 2024ರಂದು ಬೆಳಿಗ್ಗೆ 9-00 ಗಂಟೆಗೆ ಬದಿಯಡ್ಕದ ವಳಮಲೆ ಇರಾ ಸಭಾಭವನದಲ್ಲಿ ಆಯೋಜಿಸಲಾಗಿದೆ. ಬೆಳಿಗ್ಗೆ 9-00 ಗಂಟೆಗೆ ಶ್ರೀಮತಿ ಸಂಧ್ಯಾಗೀತ ಬಾಯಾರು ಮತ್ತು ಬಳಗದವರಿಂದ ‘ಭಾವ ಗಾಯನ’ ನಡೆಯಲಿದೆ. ಬ್ರಹ್ಮಶ್ರೀ ತಂತ್ರಿವರ್ಯ ಉಳಿಯತ್ತಾಯ ವಿಷ್ಣು ಅಸ್ತ್ರ ಇವರ ದಿವ್ಯ ಸಾನಿಧ್ಯದಲ್ಲಿ ಹಿರಿಯ ಕವಿ ಸಾಹಿತಿ ಪ್ರೊ. ವಿ.ಬಿ. ಅರ್ತಿಕಜೆ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನ ಮರದ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಎಸ್. ಪ್ರದೀಪ ಕುಮಾರ ಕಲ್ಕೂರ ಇವರು ನುಡಿ ನಮನ, ಡಾ. ರಾಧಾಕೃಷ್ಣ ಬೆಳ್ಳೂರು ಇವರು ಕೃತಿ ಪರಿಚಯ ಹಾಗೂ ಶಾಸಕರಾದ ಶ್ರೀ ಎನ್.ಎ. ನೆಲ್ಲಿಕುನ್ನು ಇವರು ಹಿರಿಯ…

Read More

ಮಂಗಳೂರು : ಅವಿನಾಶ್ ಫೋಕ್ ಡಾನ್ಸ್ ಮಂಗಳೂರು (ರಿ.) ಅರ್ಪಿಸುವ 3ನೇ ವರ್ಷದ ‘ಕಲಾಯನ’ ಜಾನಪದ ಜಾತ್ರೆ ನೃತ್ಯ ಸ್ಪರ್ಧೆಯನ್ನು ದಿನಾಂಕ 08 ಡಿಸೆಂಬರ್ 2024ರಂದು ಮಧ್ಯಾಹ್ನ 12-00 ಗಂಟೆಗೆ ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 9980358774. ಸ್ಪರ್ಧೆಯ ನಿಯಮಗಳು : * ಪ್ರತೀ ತಂಡವು ಜಾನಪದ ಜಾತ್ರೆಯ ವಿಷಯವನ್ನಾಧರಿಸಿ ಜಾತ್ರಾ ಮಹೋತ್ಸವದ ಪ್ರಾತ್ಯಕ್ಷತೆ ಹಾಗೂ ಸಹಬಾಳ್ವೆಗೆ ಒತ್ತು ನೀಡಬೇಕು. * ಪ್ರತಿಯೊಂದು ತಂಡಕ್ಕೂ 20 ನಿಮಿಷಗಳ ಕಾಲಾವಕಾಶ ನೀಡಲಾಗುವುದು. * ತಂಡದಲ್ಲಿ ಕನಿಷ್ಠ 15 ಮಂದಿ ಗರಿಷ್ಠ 25 ಮಂದಿ. * ಧ್ವನಿಸುರುಳಿಗೆ (ಸಿ.ಡಿ) ಗೆ ಅವಕಾಶವಿಲ್ಲ. * ತಂಡಗಳು ನಿಗದಿಪಡಿಸಿದ ಸಮಯದಲ್ಲೇ ಪ್ರದರ್ಶನ ನೀಡಬೇಕು. ಯಾವುದೇ ಕಾರಣಕ್ಕೂ ಬದಲಾವಣೆಗೆ ಅವಕಾಶ ಇರುವುದಿಲ್ಲ. * ಸ್ಪರ್ಧೆಯಲ್ಲಿ ನೀರು, ಬೆಂಕಿ ಮತ್ತು ಸ್ಫೋಟಕ ಬಳಕೆ ನಿಷೇಧಿಸಲಾಗಿದೆ. * ಅಶ್ಲೀಲ ಅಸಂಬದ್ಧ ಅಥವಾ ಜಾತಿ ಧರ್ಮಗಳ ಅವಹೇಳನಕ್ಕೆ ಅವಕಾಶವಿರುವುದಿಲ್ಲ. * ಕಡ್ಡಾಯವಾಗಿ ದೈವಗಳ ಪಾತ್ರಕ್ಕೆ ಅವಕಾಶವಿಲ್ಲ. * ಮುಕ್ತ…

Read More

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಪುತ್ತೂರು ಘಟಕದ 17ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಶ್ರೀ ರಾಮನಾಮ ತಾರಕ ಹವನಪೂರ್ವಕ ಹನುಮ ಯಾಗದ ಅಂಗವಾಗಿ ದಿನಾಂಕ 15 ನವೆಂಬರ್ 2024ರಂದು ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ವೀರಮಣಿ ಕಾಳಗ’ ಎಂಬ ತಾಳಮದ್ದಳೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರಂಕಿ, ಆನಂದ ಸವಣೂರು ಹಾಗೂ ಚೆಂಡೆ, ಮದ್ದಲೆಗಳಲ್ಲಿ ಪಿ.ಟಿ. ಜಯರಾಮ್ ಭಟ್ ಮತ್ತು ಮಾಸ್ಟರ್ ಅಮೋಘ ಶಂಕರ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಹನೂಮ), ಶುಭಾ ಗಣೇಶ್ (ಶತ್ರುಘ್ನ), ಕಿಶೋರಿ ದುರ್ಗಪ್ಪ ನಡುಗಲ್ಲು (ಈಶ್ವರ), ಹರಿಣಾಕ್ಷಿ ಜೆ. ಶೆಟ್ಟಿ (ವೀರಮಣಿ), ಭಾರತಿ ರೈ (ಶ್ರೀರಾಮ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಹರಿಣಾಕ್ಷಿ ಜೆ. ಶೆಟ್ಟಿ ಪ್ರಾಯೋಜಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ…

Read More