Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಲಾಸ್ಯ ಅಕಾಡೆಮಿ ಆಫ್ ಡಾನ್ಸ್ ಇದರ ವತಿಯಿಂದ ದಿನಾಂಕ 08 ನವೆಂಬರ್ 2024ರಂದು ಸಂಜೆ 6-30 ಗಂಟೆಗೆ ಮತ್ತು ದಿನಾಂಕ 09 ನವೆಂಬರ್ 2024ರಂದು ಮಧ್ಯಾಹ್ನ 3-00 ಗಂಟೆಗೆ ತಾಳ ಜಟಿಲತೆಗಳ ಬಗ್ಗೆ ಹಾಗೂ ದಿನಾಂಕ 09 ನವೆಂಬರ್ 2024ರಂದು ಬೆಳಿಗ್ಗೆ 9-00 ಗಂಟೆಗೆ ಮತ್ತು ದಿನಾಂಕ 10 ನವೆಂಬರ್ 2024ರಂದು ಬೆಳಿಗ್ಗೆ 9-00 ಗಂಟೆಗೆ ದೇವಿ ಸರಸ್ವತಿ ಕುರಿತು ತಿಲ್ಲಾನ ಕಾರ್ಯಾಗಾರವನ್ನು ಬೆಂಗಳೂರಿನ ಸಂಜಯ್ ನಗರದಲ್ಲಿರುವ ಲಾಸ್ಯ ಅಕಾಡೆಮಿ ಆಫ್ ಡಾನ್ಸ್ ಇದರ ಅನುಗ್ರಹ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರಾವಳಿಯ ನೃತ್ಯ ಕಲಾವಿದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರು ಈ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ಡಾ. ಲಕ್ಷ್ಮೀರೇಖಾ ಅರುಣ್ ಇವರು ತಿಳಿಸಿರುತ್ತಾರೆ. ನೃತ್ಯ ವಿದ್ಯಾರ್ಥಿಗಳಿಗೆ ಕಲಿಸಿಕೊಡುವ ತಿಲ್ಲಾನವು ಮಂಜುನಾಥ್ ಅವರೇ ರಚಿಸಿ, ನೃತ್ಯ ಸಂಯೋಜಿಸಿದ್ದು, ಈಗಾಗಲೇ 15ಕ್ಕೂ ಮಿಕ್ಕಿದ ನೃತ್ಯ ಗುರುಗಳು ತಮ್ಮದೇ ಸಂಯೋಜನೆಯಲ್ಲಿ ಪ್ರದರ್ಶನ ನಡೆಸಿರುತ್ತಾರೆ.
ಸುಳ್ಯ : ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು, ಕನ್ನಡ ಸಾಹಿತ್ಯ ಪರಿಷತ್ ಪಂಜ ಹೋಬಳಿ ಘಟಕ, ನೆಹರು ಮೆಮೋರಿಯಲ್ ಕಾಲೇಜು ಐ. ಕ್ಯೂ. ಎ. ಸಿ. ವಿಭಾಗ ಮತ್ತು ಕನ್ನಡ ಸಂಘ ಇದರ ಅಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ದಿನಾಂಕ 04 ನವಂಬರ್ 2024ರಂದು ನೆಹರು ಮೆಮೋರಿಯಲ್ ಕಾಲೇಜು ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿನಿಧಿ ಉಪನ್ಯಾಸ ನೀಡಲು ಆಗಮಿಸಿದ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಕರ್ನಾಟಕದಲ್ಲಿ ಕನ್ನಡ ನುಡಿ, ನೆಲ ಹಾಗೂ ಜಲದ ಪರಿಸ್ಥಿತಿ ಆತಂಕವನ್ನು ಎದುರಿಸುತ್ತಿದ್ದು, ನಮ್ಮ ಸಂಸ್ಕ್ರತಿ ಮತ್ತು ಸಾಹಿತ್ಯದ ಉಳಿವಿಗಾಗಿ ಕನ್ನಡಿಗರಾದ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ನಮ್ಮತನವನ್ನು ಉಳಿಸಿಕೊಳ್ಳಬೇಕು.” ಎಂದರು. ಕ. ಸಾ. ಪ. ಅದ್ಯಕ್ಷ ಚಂದ್ರಶೇಖರ್ ಪೇರಾಲು ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಾಂಶುಪಾಲ ಡಾ. ರುದ್ರಕುಮಾರ್ ಹಾಗೂ ಪಿ. ಯು.…
ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವಗ್ರಹ ಗುಡಿಯಲ್ಲಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ತಿಂಗಳ ಸರಣಿ ಕಾರ್ಯಕ್ರಮದ ಅಂಗವಾಗಿ ದಿನಾಂಕ 04 ನವೆಂಬರ್ 2024ರಂದು ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಎಂಬ ತಾಳಮದ್ದಳೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀನಾರಾಯಣ ಭಟ್ ಬಟ್ಯಮೂಲೆ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಅಚ್ಯುತ ಪಾಂಗಣ್ಣಾಯ, ಮಾಸ್ಟರ್ ಪರೀಕ್ಷಿತ್ ಸಹಕರಿಸಿದರು. ಮುಮ್ಮೇಳದಲ್ಲಿ ಡಾ. ಎನ್.ಕೆ. ಬಲ್ಲಾಳ್ (ಶ್ರೀ ರಾಮ), ವೇಣುಗೋಪಾಲ್ ಭಟ್ ಮಾಂಬಾಡಿ (ಲಕ್ಷ್ಮಣ), ಶಾರದಾ ಅರಸ್ (ಸೀತೆ), ಗುಡ್ಡಪ್ಪ ಬಲ್ಯ (ಘೋರ ಶೂರ್ಪನಖಿ), ಶುಭಾ ಅಡಿಗ (ಮಾಯಾ ಶೂರ್ಪನಖಿ), ಭಾರತಿ ಜಯರಾಮ್ ಮತ್ತು ಕಿಶೋರಿ ದುಗ್ಗಪ್ಪ ನಡುಗಲ್ಲು (ಮುನಿಗಳು) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ರಂಗನಾಥ ರಾವ್ ಸಹಕರಿಸಿದರು.
ಇದು ಒಂದು ಐತಿಹಾಸಿಕ ಕಥೆ ಆಧಾರಿತವಾದ ಅತ್ಯಂತ ವಿಶಿಷ್ಟ ಕೃತಿ. ಭಾರತದ ಯಾವುದೇ ಭಾಗದ ಇತಿಹಾಸವಲ್ಲ. ನಮಗೆ ಯಾರಿಗೂ ಗೊತ್ತಿಲ್ಲದ ಮೂರುಸಾವಿರ ವರ್ಷಗಳಷ್ಟು ಹಿಂದಿನ ಪ್ರಾಚೀನ ಐಗುಪ್ತದ (ಇವತ್ತಿನ ಈಜಿಪ್ಟ್) ಇತಿಹಾಸ. ಜಗತ್ತಿನ ನಾಗರಿಕತೆಯಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವುದು ಈಜಿಪ್ಟ್ ಎಂದು ನಾವು ಕೇಳಿದ್ದೇವೆ. ಆದರೆ ಇಲ್ಲಿ ಈ ಕಾದಂಬರಿಯಲ್ಲಿರುವುದು ಸತ್ಯ ಘಟನೆಗಳ ವರದಿಗಳಿಂದ ತುಂಬಿದ ಇತಿಹಾಸವಲ್ಲ. ಮನುಷ್ಯನ ಸಾಮಾಜಿಕ, ರಾಜಕೀಯ, ಧಾರ್ಮಿಕ ಮತ್ತು ಸಾಂಸ್ಕೃತಿಕ ಲೋಕಗಳ ರೋಮಾಂಚನಕಾರಿ ಚಿತ್ರಣವಿರುವ ಮನ ಸೆಳೆಯುವ ಕಥೆ. ಪ್ರಜಾಪರಿಪಾಲಕ ರಾಜನೆಂದರೆ ಕೇವಲ ಲೌಕಿಕ ದೃಷ್ಟಿಯಿಂದ ಮಾತ್ರವಲ್ಲ, ಕುರಿಗಳನ್ನು ತನ್ನ ಮಕ್ಕಳಂತೆ ಪ್ರೀತಿಯಿಂದ ಪಾಲಿಸುವ ಕುರುಬನೆಂದು ಐಗುಪ್ತದ ಜನತೆ ನಂಬಿಕೊಂಡು ಬಂದಿದ್ದ ಕಾಲವದು. ಫೆರೋ ಅಹಮೋಸ್ ನ ಮರಣದ ನಂತರ ಆತನ ಪತ್ನಿ, ಚತುರಮತಿ ನುಕಿಯಾ ರಾಜಮಾತೆಯಾಗುವುದರೊಂದಿಗೆ ಆರಂಭವಾಗುವ ಕಥೆ, ಆಕೆಯ ಸೊಸೆ ಆನೆಪ್ ಸಮರ್ಥ ಆಡಳಿತಗಾರ್ತಿಯಾಗಿ ಮುಂದುವರಿದು ಆಕೆಯ ಸಾವಿನೊಂದಿಗೆ ಕೊನೆಯಾಗುತ್ತದೆ. ನಮಗೆ ಅಪರಿಚಿತವಾಗಿರುವ ನೂರಾರು ಸಾಂಸ್ಕೃತಿಕ ವಿಚಾರಗಳು ಕಾದಂಬರಿಯ ಉದ್ದಕ್ಕೂ ಬಿತ್ತರಗೊಂಡಿವೆ. ಶುದ್ಧರಕ್ತಗಳ…
ಬಂಟ್ವಾಳ: ಮೊಡಂಕಾಪು ‘ಸರಿದಂತರ’ ಪ್ರಕಾಶನವು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ಆಯೋಜಿಸಿದ ಪ್ರೊ. ರಾಜಮಣಿ ರಾಮಕುಂಜ ಇವರ ‘ಬಂಟ್ವಾಳದ ಸಾಂಸ್ಕೃತಿಕ ಪರಿಸರ’ ಕೃತಿಯ ಲೋಕರ್ಪಣಾ ಸಮಾರಂಭವು ದಿನಾಂಕ 31 ಅಕ್ಟೋಬರ್ 2024ರ ಗುರುವಾರದಂದು ಬಂಟ್ವಾಳದ ಕನ್ನಡ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಮೂಡುಬಿದಿರೆ ಧವಳಾ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಪುಂಡಿಕಾಯಿ ಗಣಪಯ್ಯ ಭಟ್ ಮಾತನಾಡಿ “ಬಂಟ್ವಾಳದ ಆರಾಧನಾ ಕೇಂದ್ರ, ಶೈಕ್ಷಣಿಕ ವಲಯ, ಸಾಧಕರು, ಸ್ಥಳನಾಮಗಳ ವಿವರಗಳೊಂದಿಗೆ ಇತಿಹಾಸದ ಸೂಕ್ಷ್ಮನೋಟಗಳನ್ನು ಪ್ರೊ. ರಾಜಮಣಿ ರಾಮಕುಂಜ ಅವರ ಬಂಟ್ವಾಳದ ಸಾಂಸ್ಕೃತಿಕ ಪರಿಸರ ಕೃತಿ ನೀಡುತ್ತದೆ. ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನವನ್ನು ಒಂದು ಕೇಂದ್ರವಾಗಿಟ್ಟುಕೊಂಡು ಇಡೀ ಪರಿಸರದ ಸಾಂಸ್ಕೃತಿಕ ಪರಂಪರೆ ಹಾಗೂ ಇತಿಹಾಸದ ಸಮಗ್ರ ನೋಟವನ್ನು ಪುಸ್ತಕ ನೀಡುತ್ತದೆ ಮತ್ತು ಸಾಂಸ್ಕೃತಿಕ ಪರಿಸರವನ್ನು ತೆರೆದಿಡುತ್ತದೆ. ಈ ಕೃತಿಯು ಸಂಶೋಧನಾತ್ಮಕ ನೋಟವನ್ನು ನೀಡಿದೆ. ಪಾಡ್ಡನ, ಮೌಖಿಕ ಮಾಹಿತಿ ಸಹಿತ ದೊರಕಿದ ಮಾಹಿತಿಯೊಂದಿಗೆ ಸೀಮಿತವಾದ ಪ್ರದೇಶವನ್ನು ಸಮಗ್ರವಾಗಿ ನೀಡಿರುವ ಉಲ್ಲೇಖ…
ಮಂಗಳೂರು : ಶಂಭೂರು ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕಿನ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನವು ದಿನಾಂಕ 19 ನವಂಬರ್ 2024ರಂದು ನಡೆಯಲಿದೆ. ಈ ಸಂದರ್ಭದಲ್ಲಿ ತಾಲೂಕಿನಲ್ಲಿ ಮಕ್ಕಳ ಸಾಹಿತ್ಯಾದಿ ಕಲೆಗಳಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗೆ ನೀಡಲಾಗುವ ‘ಬಾಲಬಂಧು ಪುರಸ್ಕಾರ’ಕ್ಕೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯ ಸಹಾಯಕ ಅಧ್ಯಾಪಕಿ ಸುಧಾ ನಾಗೇಶ್ ಇವರನ್ನು ಆಯ್ಕೆ ಮಾಡಲಾಗಿದೆಯೆಂದು ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿದ್ದಾರೆ. ಕವಯಿತ್ರಿಯಾಗಿರುವ ಶ್ರೀಮತಿ ಸುಧಾ ನಾಗೇಶ್ ಇವರು ‘ಮೂಡಲಮನೆ’ ಮತ್ತು ‘ಹೃದಯರಾಗ’ ಎಂಬ ಹನಿ ಕವನ ಸಂಕಲನ ಪ್ರಕಟಿಸಿದ್ದಾರೆ. ‘ಹೀಗೆ ಸುಮ್ಮನೆ’ ಎಂಬ ಹಾಸ್ಯ ಲಹರಿ, ‘ಮಿನಿ ಎನ್ ಸೈಕ್ಲೋಪೀಡಿಯ ಫಾರ್ ಸ್ಟೂಡೆಂಟ್ಸ್’ ಎಂಬ ಮಿನಿ ಅರ್ಥ ಕೋಶ, ‘ಜೀನಿಯಸ್’ ಎಂಬ ವಿದ್ಯಾರ್ಥಿ ಕೈಪಿಡಿ ಹಾಗೂ ‘ರಂಗ ಕಲಾ ಭೂಷಕೆರ್ ಶ್ರೀ ಸೀತಾರಾಮ ಕುಲಾಲೆರ್’ ಎಂಬ ತುಳು ಕೃತಿ ಇವರ ಇತರೆ ಪ್ರಕಟಣೆಗಳು. ಕಳೆದ 15 ವರ್ಷಗಳಿಂದ ‘ಶಾರದಾ…
ಹಂಗಾರಕಟ್ಟೆ : ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ಆಶ್ರಯದಲ್ಲಿ ಕಲಾಕೇಂದ್ರದ ಸಂಸ್ಥಾಪಕ ದಿ. ಐರೋಡಿ ಸದಾನಂದ ಹೆಬ್ಬಾರರ ಸಂಸ್ಮರಣೆ, ಸದಾನಂದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯಕ್ಷ ಸಪ್ತೋತ್ಸವದ ಸಮಾರೋಪ ಸಮಾರಂಭವು ದಿನಾಂಕ 27 ಅಕ್ಟೋಬರ್ 2024ರಂದು ಗುಂಡ್ಮಿಯ ಸದಾನಂದ ರಂಗಮಂಟಪದಲ್ಲಿ ನಡೆಯಿತು. ಯಕ್ಷಗಾನ ವಿದ್ವಾಂಸ ಎಂ. ಪ್ರಭಾಕರ ಜೋಶಿ ಮಾತನಾಡಿ, “ಯಕ್ಷಗಾನ ಕ್ಷೇತ್ರಕ್ಕೆ ಸದಾನಂದ ಹೆಬ್ಬಾರ್ ಇವರ ಕೊಡುಗೆ ಮಹತ್ವದ್ದು. ಯಕ್ಷಗಾನ ಕಲಾಕೇಂದ್ರದ ಮೂಲಕ ಸಾವಿರಾರು ಉತ್ತಮ ಶಿಷ್ಯರನ್ನು ಅವರು ತಯಾರು ಮಾಡಿದ್ದು, ಕಲೆಯ ಮೂಲ ಸತ್ವವನ್ನು ಉಳಿಸಿಕೊಂಡು ಮಂದೆ ಸಾಗಬೇಕಾದರೆ ಇಂತಹ ಕೇಂದ್ರಗಳು ಅಗತ್ಯ” ಎಂದರು. ಅಧ್ಯಕ್ಷತೆ ವಹಿಸಿದ್ದ ಕಲಾಕೇಂದ್ರದ ಅಧ್ಯಕ್ಷ ಆನಂದ ಸಿ. ಕುಂದರ್ ಮಾತನಾಡಿ, “ಈ ಸಂಸ್ಥೆಯು 50 ವರ್ಷ ಪೂರೈಸಿದ್ದು, ಮುಂದಿನ ದಿನಗಳಲ್ಲಿ ಕೇಂದ್ರದ ಅಸ್ತಿತ್ವಕ್ಕೆ ತೊಡಕಾಗಬಾರದು ಎನ್ನುವುದು ಎಲ್ಲಾ ಕಲಾಸಕ್ತರ ಆಶಯ. ಹೀಗಾಗಿ ಕನಿ಼ಷ್ಠ ರೂ. ಎರಡು ಕೋಟಿಯನ್ನು ಕಲಾಭಿಮಾನಿಗಳ ಸಹಕಾರದಿಂದ ಠೇವಣಿ ಇಟ್ಟು, ಅದರ ಬಡ್ಡಿ ಮೊತ್ತದಲ್ಲಿ ನಿರಂತರ ಕಾರ್ಯಕ್ರಮ ಆಯೋಜಿಸುವ…
ಬಂಟ್ವಾಳ : ಮಕ್ಕಳ ಕಲಾಲೋಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಇವರು ಕಡೇಶಿವಾಲಯ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಆಯೋಜಿಸಿದ್ಧ ಬಂಟ್ವಾಳ ತಾಲೂಕು ಮಕ್ಕಳ 17ನೇ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಲಹರಿ’ ಇದರ ಲೋಕರ್ಪಣಾ ಸಮಾರಂಭವು ದಿನಾಂಕ 30 ಅಕ್ಟೋಬರ್ 2024ರಂದು ಕಡೇಶಿವಾಲಯ ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿದ ಎಸ್. ವಿ. ಎಸ್. ದೇವಳ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ. ಎನ್. ಗಂಗಾಧರ ಆಳ್ವ ಮಾತನಾಡಿ “ಪುಸ್ತಕದ ಒಳನೋಟಗಳನ್ನು ನೋದಿದಾಗ ಇದು ಉತ್ತಮ ಮತ್ತು ಸಂಗ್ರಹಯೋಗ್ಯವಾದ ದಾಖಲೆ.” ಎಂದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಇದರ ಸಂಚಾಲಕ ಹಾಗೂ ಸ್ಮರಣ ಸಂಚಿಕೆಯ ಗೌರವ ಸಂಪಾದಕರಾದ ತುಕಾರಾಮ ಪೂಜಾರಿ ಮಾತನಾಡಿ ದಾಖಲೆಗಳನ್ನು ಮಾಡಿಡಬೇಕಾದ ಅಗತ್ಯ ಮತ್ತು ಅವುಗಳ ಮಹತ್ವದ ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ…
ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ವಿವಿಧ ಕನ್ನಡ ಪರ ಸಂಘಟನೆಗಳ ಆಶ್ರಯದಲ್ಲಿ ಅನಂತಮೂರ್ತಿ ಪ್ರೌಢಶಾಲೆಯಲ್ಲಿ ದಿನಾಂಕ 01 ನವೆಂಬರ್ 2024ರಂದು ಜರಗಿದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ನಿವೃತ್ತ ಆಂಗ್ಲ ಉಪನ್ಯಾಸಕಿ ಹಿರಿಯ ಸಾಹಿತಿ ಕ.ಸಾ.ಪ. ಹಿರಿಯ ಸದಸ್ಯೆ ಶ್ರೀಮತಿ ಉಮಾದೇವಿ ಉರಾಳ್, ಗೃಹ ರಕ್ಷಕ ದಳದಲ್ಲಿ ಉತ್ತಮ ಸೇವೆಗಾಗಿ ಕಳೆದ ವರ್ಷ ರಾಜ್ಯ ಪ್ರಶಸ್ತಿ ಪಡೆದ ಎಚ್.ಆರ್. ರಾಘವೇಂದ್ರ ಹಾಗೂ ಸಾರ್ವಜನಿಕ ಜೆ.ಸಿ. ಆಸ್ಪತ್ರೆಯ ಮರಣೋತ್ತರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ದಯಾನಂದ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ ಇವರು, “ಶಿಕ್ಷಕರು ವಿದ್ಯಾರ್ಥಿಗಳಿಗೆ ಕನ್ನಡ ನಾಡು-ನುಡಿಯ ಬಗ್ಗೆ ಅಭಿಮಾನ, ಆಸಕ್ತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವಂತವರು. ಶಿಕ್ಷಕರು ನಾಡು ನುಡಿಯ ಬಗ್ಗೆ ಆಸಕ್ತಿ ವಹಿಸಿ ವಿದ್ಯಾರ್ಥಿಗಳಲ್ಲೂ ಕನ್ನಡದ ಕುರಿತು ಅಭಿಮಾನ ಮೂಡಿಸಬೇಕು” ಎಂದು ಹೇಳಿದರು. ಮೂವರು ಸನ್ಮಾನಿತರ ಸೇವೆಯನ್ನು ಪ್ರಶಂಸಿಸಿ ಅವರನ್ನು ಅಭಿನಂದಿಸಿದರು.…
ಮಂಗಳೂರು : ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಸಾಹಿತಿ ರಘು ಇಡ್ಕಿದು ಇವರ 31ನೇ ಕೃತಿ ‘ಅರಿಮುಡಿ’ ನಗರದ ಪ್ರೆಸ್ ಕ್ಲಬ್ನಲ್ಲಿ ದಿನಾಂಕ 04 ನವೆಂಬರ್ 2024ರಂದು ಲೋಕಾರ್ಪಣೆಗೊಂಡಿತು. ಕೃತಿ ಬಿಡುಗಡೆಗೊಳಿಸಿದ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎಂ. ರಂಗನಾಥ್ ಭಟ್ ಈ ವೇಳೆ ಮಾತನಾಡಿ “ಬರಹಗಾರರಲ್ಲಿ ವಿನಮ್ರತೆ ಮತ್ತು ಸರಿಯಾದ ವಿಚಾರ ಇದ್ದ ಸಂದರ್ಭದಲ್ಲಿ ಜನರಿಗೆ ಇಷ್ಟವಾಗುತ್ತದೆ” ಎಂದರು. ಕೃತಿ ಬಗ್ಗೆ ಮಾತನಾಡಿದ ಸುರತ್ಕಲ್ ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ. ಕೃಷ್ಣಮೂರ್ತಿ, “ಈ ಕೃತಿಗೆ ‘ಅರಿಮುಡಿ’ ಎನ್ನುವ ಶೀರ್ಷಿಕೆ ವಿಶಿಷ್ಟವಾಗಿದೆ. ತುಳುವಿಗೆ ಸಂಬಂಧಿಸಿದ ವಿಷಯಗಳು ಕೃತಿಯಲ್ಲಿದ್ದು, ಕನ್ನಡದಲ್ಲಿ ಕೃತಿ ರಚಿಸಲಾಗಿದೆ” ಎಂದರು. ಅತಿಥಿಗಳಾಗಿದ್ದ ಕೆನರಾ ಪದವಿ ಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಕೆ.ಎಂ. ಹಾಗೂ ಪ್ರಾಂಶುಪಾಲೆ ಲತಾ ಮಹೇಶ್ವರಿ ಕೆ.ಬಿ. ಇವರುಗಳು ಶುಭ ಹಾರೈಸಿದರು. ಪ್ರಕಾಶಕಿ ವಿದ್ಯಾ ಯು. ಮತ್ತು ಕೃತಿಕಾರ ರಘು ಇಡ್ಕಿದು ಉಪಸ್ಥಿತರಿದ್ದರು.