Author: roovari

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಇದರ ವಾರ್ಷಿಕೋತ್ಸವ ಪ್ರಯುಕ್ತ ‘ಶ್ರೀ ಆಂಜನೇಯ 57’ ಕಾರ್ಯಕ್ರಮವು ದಿನಾಂಕ 25 ಡಿಸೆಂಬರ್ 2025ರಂದು ಅಪರಾಹ್ನ 1-00 ಗಂಟೆಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಅಪರಾಹ್ನ 1-00 ಗಂಟೆಗೆ ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುತ್ತೂರು ಉಮೇಶ ನಾಯಕ್ ಇವರು ಉದ್ಘಾಟನೆಗೊಳಿಸಲಿದ್ದು, ಬಳಿಕ ಸಂಘದ ಸದಸ್ಯರಿಂದ ‘ತಾಳಮದ್ದಳೆ ವಿಪ್ರಕೂಟ’ ನೂತನ ಪರಿಕಲ್ಪನೆ ಹಾಗೂ 3-00 ಗಂಟೆಗೆ ಕವಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಶ್ಯಮಂತಕಮಣಿ’ ತಾಳಮದ್ದಳೆ ಪ್ರಸ್ತುತಗೊಳ್ಳಲಿದೆ. ಸಂಜೆ 5-00 ಗಂಟೆಗೆ ನಡೆಯಲಿರುವ ಸಭಾ ಕಲಾಪದ ಅಧ್ಯಕ್ಷತೆಯನ್ನು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗದ್ದೆ ಈಶ್ವರ ಭಟ್ ಇವರು ವಹಿಸಲಿದ್ದು, ಶ್ರೀ ಎಡನೀರು ಮಠದ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದಾರೆ. ಹಿರಿಯ ಕಲಾವಿದ ಪಿ.ಟಿ. ಜಯರಾಮ…

Read More

ಉಡುಪಿ : ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಲಯನ್ಸ್ ಕ್ಲಬ್ ಮಲ್ಪೆ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ‘ಜಾನಪದ ಮತ್ತು ಯಕ್ಷಗಾನ ಸಂಭ್ರಮ -2025’ ಕಾರ್ಯಕ್ರಮವು ದಿನಾಂಕ 20 ಡಿಸೆಂಬರ್ 2025ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಲಯನ್ಸ್ ಜಿಲ್ಲೆ 317ಸಿ ಇದರ ಸಾಂಸ್ಕೃತಿಕ (ಜಾನಪದ ಮತ್ತು ಯಕ್ಷಗಾನ) ಕಾರ್ಯಕ್ರಮಗಳ ಸಂಯೋಜಕಿ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ “ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಮಹಿಳೆಯರ ಸಬಲೀಕರಣಕ್ಕೆ ಅತ್ಯುತ್ತಮ ವೇದಿಕೆಯಾಗಿದೆ. ಪ್ರಸ್ತುತ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಇವರ ನೇತೃತ್ವದಲ್ಲಿ ಸಂಸ್ಥೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ” ಎಂದು ಹೇಳಿದರು. ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಇದರ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಇವರು ದೀಪ ಬೆಳಗಿಸುವ…

Read More

ಅರಗ : ತಾಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು ತೀರ್ಥಹಳ್ಳಿ ಹಾಗೂ ಸರ್ಕಾರಿ ಪ್ರೌಢ ಶಾಲೆ ಅರಗ ಇವರ ಸಹಯೋಗದಲ್ಲಿ ತೀರ್ಥಹಳ್ಳಿ ತಾಲೂಕು ಮಟ್ಟದ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 23 ಡಿಸೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಅರಗ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ. ಚಿಟ್ಟೆಬೈಲು ಪ್ರಜ್ಞಾ ಭಾರತಿ ಪ್ರೌಢ ಶಾಲೆಯ ಸಾದ್ವಿ ಎಸ್. ಪ್ರಭು ಇವರು ಈ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ಅರಗ ಸರ್ಕಾರಿ ಪ್ರೌಢ ಶಾಲೆಯ ಜನ್ಯ ಡಿ.ಎಂ. ಇವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.

Read More

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ ದಿನಾಂಕ 28 ಡಿಸೆಂಬರ್ 2025ರಂದು ಕೊಯ್ಯೂರಿನಲ್ಲಿ ನಡೆಯಲಿರುವ 19ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃ ತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ ಇವರು ಆಯ್ಕೆಯಾಗಿದ್ದಾರೆ. ಸಮ್ಮೇಳನ ಸಂಯೋಜನಾ ಸಮಿತಿ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಸಮಾಲೋಚನೆಯ ಬಳಿಕ ಕ.ಸಾ.ಪ. ತಾಲೂಕು ಅಧ್ಯಕ್ಷ ಡಿ. ಯದುಪತಿ ಗೌಡ ಸಮ್ಮೇಳನಾಧ್ಯಕ್ಷರ ಹೆಸರು ಘೋಷಿಸಿದರು. ಯಕ್ಷಗಾನ ಕಲಾ ಸಂಘಟನೆ, ಸಾಂಸ್ಕೃ ತಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಇವರನ್ನು ಆಯ್ಕೆಗೊಳಿಸಲಾಗಿದೆ. ಬಂಗ್ವಾಡಿಯ ಬಿ. ಪದ್ಮನಾಭ ಶೆಟ್ಟಿ ಮತ್ತು ಅನಂತಮತಿ ದಂಪತಿಯ ಪುತ್ರನಾಗಿ ಜನಿಸಿದ ಭುಜಬಲಿಯವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪಾರುಪತ್ಯಗಾರ, ಜಮಾ ಉಗ್ರಾಣದಲ್ಲಿ ಮುತ್ಸದ್ದಿಯಾಗಿ ವಿವಿಧ ಸ್ಥರಗಳಲ್ಲಿ 48 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಕಲಾಪ್ರೇಮಿಗಳಾಗಿ ಕಲಾವಿದರನ್ನು ಸಂಘಟಿಸಿ ಯಕ್ಷಗಾನ ಪ್ರಸಂಗ, ಜಿನಕಥೆ, ಹರಿಕಥೆ, ತಾಳಮದ್ದಳೆ, ಭಕ್ತಿಗೀತೆಗಳು,…

Read More

ಪೆರ್ಲ : ಸವಿ ಹೃದಯದ ಕವಿ ಮಿತ್ರರು ಪೆರ್ಲ ಇದರ ಆಶ್ರಯದಲ್ಲಿ ಕೃತಿ ಬಿಡುಗಡೆ ಹಾಗೂ ಕವಿಗೋಷ್ಠಿಯು ದಿನಾಂಕ 25 ಡಿಸೆಂಬರ್ 2025ರಂದು ಬೆಳಗ್ಗೆ 9-30 ಗಂಟೆಗೆ ಮಂಜೇಶ್ವರ ಗಿಳಿವಿಂಡುನಲ್ಲಿ ನಡೆಯಲಿದೆ. ಬೆಳಗ್ಗೆ 9-30ಕ್ಕೆ ಆರಂಭಗೊಳ್ಳುವ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಕೇರಳ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಉದ್ಘಾಟಿಸಲಿದ್ದು, ಸಾಹಿತಿ ಮಧುರಕಾನನ ಗಣಪತಿ ಭಟ್ ಅಧ್ಯಕ್ಷತೆ ವಹಿಸುವರು. ಸವಿಹೃದಯದ ಕವಿಮಿತ್ರರು ವೇದಿಕೆ ಪೆರ್ಲ ಇದರ ಸಂಚಾಲಕ ಸುಭಾಷ್ ಪೆರ್ಲ ಇವರು ಪ್ರಸ್ತಾವನೆಗೈವರು. ವಿಶ್ರಾಂತ ಪ್ರಾಧ್ಯಾಪಕ ಡಾ. ಪ್ರಮೀಳಾ ಮಾಧವ್ ಕೃತಿ ಬಿಡುಗಡೆಗೊಳಿಸಲಿದ್ದು, ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಕೃತಿ ಪರಿಚಯ ಮಾಡುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್ . ಸುಬ್ಬಯ್ಯಕಟ್ಟೆ ಗಿಳಿವಿಂಡು ಮಂಜೇಶ್ವರ ಇದರ ವ್ಯವಸ್ಥಾಪಕ ಉಮೇಶ್ ಸಾಲ್ಯಾನ್ ಅತಿಥಿಗಳಾಗಿರುವರು. ಬಳಿಕ ನಡೆಯುವ ಕವಿಗೋಷ್ಠಿಯಲ್ಲಿ ಶಿಕ್ಷಕಿ ಸುಶೀಲಾ ಪದ್ಯಾಣ ಇವರು ಅಧ್ಯಕ್ಷತೆ ವಹಿಸುವರು.

Read More

ಉಡುಪಿ : ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ.) ಇದರ ಆಶ್ರಯದಲ್ಲಿ ಮೂರು ದಿನಗಳ ‘ಸಂಗೀತ ಶಿಬಿರ’ವನ್ನು ದಿನಾಂಕ 29ರಿಂದ 31 ಡಿಸೆಂಬರ್ 2025ರವರೆಗೆ ಸಂಜೆ 5-00 ಗಂಟೆಗೆ ಪರ್ಕಳದ ಸರಿಗಮ ಭಾರತಿ ಸಂಗೀತ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ವಿದುಷಿ ತೇಜಸ್ವಿನಿ ಎಂ.ಕೆ. ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ರಾಗಾಲಾಪನೆ, ಕೃತಿ, ನೆರವಲ್ ಮತ್ತು ಕಲ್ಪನಾಸ್ವರ ಮುಂತಾದ ವಿಷಯದ ಬಗ್ಗೆ ತಿಳಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಾ. ಉದಯಶಂಕರ ಹೆಚ್.ಎನ್. 96633 69365 ಮತ್ತು ವಿದುಷಿ ಉಮಾಶಂಕರಿ 99641 40601 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಉಡುಪಿಯ ರಾಗಧನ ಸಂಸ್ಥೆಯು ನಡೆಸುತ್ತಿರುವ ರಾಗರತ್ನಮಾಲಿಕೆ ಸರಣಿಯ 43ನೇ ಸಂಗೀತ ಕಾರ್ಯಕ್ರಮವು ದಿನಾಂಕ 16 ನವೆಂಬರ್ 2025ರಂದು ಮಣಿಪಾಲ ಡಾಟ್‌ನೆಟ್ ಸಭಾಂಗಣದಲ್ಲಿ ನಡೆಯಿತು. ಇಳಿಹಗಲಿನಲ್ಲಿ ಸಂಗೀತೋತ್ಸಾಹಿಗಳಾದ ಎಳೆಯರ ತಂಡ ಉದ್ಘಾಟನಾ ಪೂರ್ವ ಕಛೇರಿಯನ್ನು ನಡೆಸಿಕೊಟ್ಟಿತು. ಪ್ರದ್ಯುಮ್ನ ಭಾಗವತ್ (ಕೊಳಲು), ಪ್ರಮಥ್ ಭಾಗವತ್ (ವಯಲಿನ್) ಅಂತೆಯೇ ಪ್ರಜ್ನಾನ್ (ಮೃದಂಗ). ಮೂರು ಕಾಲಗಳಲ್ಲಿ ನುಡಿಸಲಾದ ನಾಟಕುರಂಜಿ (ಚಲಮೇಲ) ವರ್ಣದೊಂದಿಗೆ ಕಛೇರಿ ಪ್ರಾರಂಭ. ನಾಟ (ಮಹಾಗಣಪತಿಂ), ಸುಪೋಷೀಣಿ (ರಮಿಂಚುವಾರು) ಕೃತಿಗಳು ಶುದ್ಧವಾಗಿ ಮೂಡಿಬಂದವು. ಅತ್ಯಂತ ಗಾಂಭೀರ್ಯ ಮತ್ತು ತೂಕವನ್ನು ಅಪೇಕ್ಷಿಸುವ ಭೈರವಿ (ಕಾಮಾಕ್ಷಿ) ಸ್ವರಜತಿಯನ್ನು ಈ ಕಿಶೋರರು ಏಕರೂಪವಾಗಿ ನಿರ್ವಹಿಸಿದ ಪರಿ ಶ್ಲಾಘನೀಯ. ಪ್ರಧಾನ ರಾಗ ಕಾಂಭೋಜಿ (ಮರಕತವಲ್ಲೀಂ) ರಾಗ, ಸ್ವರ, ವಿಸ್ತಾರಗಳೊಂದಿಗೆ ಮೂಡಿಬಂತು. ಚಾರುಕೇಶಿಯ ನೀರೆತೋರೆಲೆದೇವರ ನಾಮದೊಂದಿಗೆ ಕಛೇರಿ ಸಂಪನ್ನಗೊಂಡಿತು. ಮೃದಂಗ ಸಹವಾದಕ ಬಾಲಕ ಪ್ರಜ್ಞಾನ್‌ ತನ್ನ ತನಿ ಆವರ್ತನದಲ್ಲಿ ಯಾವುದೇ ಹಿರಿಯ ಕಲಾವಿದರಂತೆ ನಡೆ, ಗತಿ, ಭೇದಗಳನ್ನು ಅನಾಯಾಸವಾಗಿ ಪ್ರಸ್ತುತ ಪಡಿಸಿ ರಸಿಕರ ಮನ ಗೆದ್ದನು. ಈ ಮೂವರು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ…

Read More

ಬೆಂಗಳೂರು : ಕರಾವಳಿಯ ಯುವ ಭರತನಾಟ್ಯ ಕಲಾವಿದರಾದ ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರು ಬೆಂಗಳೂರಿನಲ್ಲಿ ದಿನಾಂಕ 25ರಿಂದ 27 ಡಿಸೆಂಬರ್ 2025ರವರೆಗೆ ಪ್ರತಿದಿನ 9-30 ಗಂಟೆಯಿಂದ 5-00 ಗಂಟೆ ತನಕ ಅರ್ಕ ಕಲಾ ಕುಟೀರ ನೃತ್ಯ ಸಂಸ್ಥೆಯು ನಡೆಸುತ್ತಿರುವ ತಾಳ ಪ್ರಕ್ರಿಯಾ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಾಗಾರವು ಮೂರು ದಿನಗಳ ಕಾಲ ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಅರ್ಕ ಥೀಯೇಟರ್ ಮತ್ತು ಸಭಾಂಗಣದಲ್ಲಿ ಜರುಗಲಿದೆ ಎಂದು ಅರ್ಕ ಕಲಾ ಕುಟೀರದ ಗುರುಗಳಾದ ಶ್ರೀಮತಿ ಭಾನುಪ್ರಿಯ ರಾಕೇಶ್ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 8884173606 ಸಂಖ್ಯೆಯನ್ನು ಸಂಪರ್ಕಿಸಿರಿ.

Read More

ಮಂಗಳೂರು : ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನದ ಅಂಗವಾಗಿ ಕನ್ನಡದ ನಡಿಗೆ ಶಾಲೆಯ ಕಡೆಗೆ, ಅಡಿಯಲ್ಲಿ ದಿನಾಂಕ 17 ಡಿಸೆಂಬರ್ 2025ರಂದು ಮಧ್ಯಾಹ್ನ 2-00 ಗಂಟೆಗೆ ಮಂಗಳೂರಿನ ಜೆಪ್ಪು ಕಾಸ್ಸಿಯ ಪ್ರೌಢಶಾಲೆಯ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಮಕ್ಕಳ ಕವಿಗೋಷ್ಠಿಯೊಂದಿಗೆ ಕನ್ನಡ ಭವನ ದಕ್ಷಿಣ ಕನ್ನಡದ ಜಿಲ್ಲಾ ಘಟಕದ ಕಾರ್ಯಕ್ರಮವನ್ನು ನಡೆಸಲಾಯಿತು. ಶಿಕ್ಷಕಿ ಹಾಗೂ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾಗಿರುವ ಶ್ರೀಮತಿ ರೇಖಾ ಸುದೇಶ್ ರಾವ್ ಸ್ವಾಗತಗೈದ ಈ ಸಮಾರಂಭವನ್ನು ಕಾಸಿಯಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀ ಎವರೆಸ್ಟ್ ಕ್ರಾಸ್ತ ಇವರ ಅನುಪಸ್ಥಿತಿಯಲ್ಲಿ ಹಿರಿಯ ಶಿಕ್ಷಕಿ ಆಲೀಸ್ ಕೆ.ಜೆ. ದೀಪ ಬೆಳಗಿ ಉದ್ಘಾಟನೆಗೈದರು. ಡಾ. ರವೀಂದ್ರ ಜೆಪ್ಪು ಇವರು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ್ದರು ಹಾಗೂ ಮಂಗಳೂರಿನ ಮಂಗಳಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮೂಲವ್ಯಾಧಿ ತಜ್ಞ ಹಾಗೂ ಕಣಚೂರು ಆಯುರ್ವೇದ ಕಾಲೇಜಿನ ಮುಖ್ಯ ಸಲಹೆಗಾರ ಗಜಲ್ ಕವಿ ಡಾ. ಸುರೇಶ ನೆಗಳಗುಳಿ ಮುಖ್ಯ ಅತಿಥಿಯಾಗಿ ಮಕ್ಕಳ ಕವನ ವಾಚನದ ವಿಮರ್ಶೆಯೊಂದಿಗೆ…

Read More

ಮಂಗಳೂರು : ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ನೃತ್ಯೋತ್ಸವ ಕಾರ್ಯಕ್ರಮವು ದಿನಾಂಕ 21 ಡಿಸೆಂಬರ್ 2025ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಅರುಣ ಐತಾಳ್ “ಶಾಲಾ ಶೈಕ್ಷಣಿಕ ಬದುಕಿನ ಜೊತೆಗೆ ಭಾರತೀಯ ಲಲಿತ ಕಲೆಯಲ್ಲಿ ಆಗ್ರಪಂಕ್ತಿಯಲಿರುವ ನೃತ್ಯ ಕಲೆಯ ಅಭ್ಯಾಸದಿಂದ ಮನಸ್ಸನ್ನು ಸುಂದರವಾಗಿ ಇಡಲು ಸಾಧ್ಯ. ಶಾಸ್ತ್ರೀಯ ಚೌಕಟ್ಟಿನಲ್ಲಿ ಈ ಕಲೆಯ ಪ್ರಚಾರ ಪ್ರಸಾರ ನಿರಂತರವಾಗಿ ಸಾಗಲಿ” ಎಂದು ಅಭಿಪ್ರಾಯಪಟ್ಟರು. ಪರಿಷತ್ ಅಧ್ಯಕ್ಷೆ ವಿದುಷಿ ರಾಜಶ್ರೀ ಉಳ್ಳಾಲ್ ಅಧ್ಯಕ್ಷತೆ ವಹಿಸಿ “ಪರಿಷತ್ ಇಂತಹ ಕಾರ್ಯಕ್ರಮವನ್ನು ಕ್ರಮವಾಗಿ ಮಂಗಳೂರು, ಉಡುಪಿ ಮತ್ತು ಪುತ್ತೂರು ಮೊದಲಾದ ಕಡೆಗಳಲ್ಲಿ ನೃತ್ಯ ಕಲಿಯುತ್ತಿರುವ ಪ್ರತಿಭೆಗಳ ಪ್ರೋತ್ಸಾಹಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮವನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ” ಎಂದರು. ನಗರದ 9 ನೃತ್ಯ ಸಂಸ್ಥೆಗಳ 60 ಮಕ್ಕಳು ಭಾಗವಹಿಸಿದ್ದರು. ನೃತ್ಯ ಪರಿಷತ್ ಸದಸ್ಯರಾದ ವಿದ್ವಾನ್ ಪ್ರವೀಣ್…

Read More