Author: roovari

ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದ ಆಶ್ರಯದಲ್ಲಿ ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಪ್ರತಿಷ್ಠಿತ ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಹಾಗೂ ಅನುವಾದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 01 ಫೆಬ್ರವರಿ 2026ರಂದು ಕೊಡಿಯಾಲ್ ಬೈಲ್ ನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಡೆಯಿತು. ಕೊಂಕಣಿಯ ಹಿರಿಯ ರಂಗಕರ್ಮಿ ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ ಇವರಿಗೆ ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಠ ಪ್ರಶಸ್ತಿ ಹಾಗೂ ಹಿರಿಯ ಕೊಂಕಣಿ ಅನುವಾದಕಿ ಮಾಯಾ ಅನಿಲ್ ಖರಂಗಟೆ ಇವರಿಗೆ ಡಾ. ಪಿ. ದಯಾನಂದ ಪೈ ವಿಶ್ವ ಕೊಂಕಣಿ ಅನುವಾದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿ ಫಲಕ ಸೇರಿದಂತೆ ತಲಾ ರೂ. ಒಂದು ಲಕ್ಷ ನಗದು ಒಳಗೊಂಡಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಫ್ರಾನ್ಸಿಸ್ ಫೆರ್ನಾಂಡಿಸ್ ಕಾಸ್ಸಿಯಾ ಅವರು, “ನಾಟಕ ರಂಗದಲ್ಲಿ ಪ್ರೇಕ್ಷಕರಿಗೆ ಮನೋರಂಜನೆ ಸಿಗುತ್ತದೆ. ಆದರೆ, ಕಲಾವಿದರು ಹಾಗೂ ಬರಹಗಾರರು ಅನೇಕ ಸವಾಲು, ಸಂಕಷ್ಟಗಳನ್ನು ಎದುರಿಸುತ್ತಾರೆ. ವಿಶ್ವ ಕೊಂಕಣಿ…

Read More

ಕುಂಭಾಶಿ : ಹೊಸ ತಲೆಮಾರಿನ ಅರ್ಥದಾರಿಗಳ ಪರಿಶೋಧದ ಅಡಿಯಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಈವರೆಗೆ 12 ತಾಳಮದ್ದಳೆಯನ್ನು ಆಯೋಜಿಸಿದ್ದು, ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರತೀ ಸಂಕಷ್ಟಹರ ಚತುರ್ಥಿ ದಿನದಂದು ಯಕ್ಷ ನುಡಿಸಿರಿ ಬಳಗ ಸಿದ್ಧಾಪುರ ಸಹಯೋಗದೊಂದಿಗೆ ಶ್ರೀ ವಿನಾಯಕ ದೇವಸ್ಥಾನದ ಸಹಕಾರದೊಂದಿಗೆ ದಿನಾಂಕ 05 ಫೆಬ್ರವರಿ 2026ರಂದು ಸಂಜೆ 4-00 ಗಂಟೆಗೆ ಅರ್ಥಾಂಕುರ-14 ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರಸಿದ್ಧ ಅರ್ಥದಾರಿ ವಾಸುದೇವ ರಂಗ ಭಟ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಪ್ರಸಿದ್ಧ ವಾಗ್ಮಿ ಪವನ್ ಕಿರಣ್‌ಕೆರೆ ಭಾಗವಹಿಸಲಿದ್ದಾರೆ. ಯುಗಳ ಸಂವಾದ ಕಾರ್ಯಕ್ರಮವಾಗಿ ಈ ಇಬ್ಬರು ಅರ್ಥದಾರಿಗಳು ಮಾತಿನ ಮಂಟಪದಲ್ಲಿ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಭಾಗವತರಾಗಿ ಲಂಬೋದರ ಹೆಗಡೆ ನಿಟ್ಟೂರು, ಮದ್ದಳೆವಾದಕರಾಗಿ ರಾಘವೇಂದ್ರ ಹೆಗಡೆ ಯಲ್ಲಾಪುರ, ಚಂಡೆಯಲ್ಲಿ ಕುಮಾರ ಅಮೀನ್ ಕೊಕ್ಕರ್ಣಿ ಭಾಗವಹಿಸಲಿದ್ದಾರೆ. ಬಳಿಕ ಶ್ರೀಪರ್ಣ ಯಕ್ಷ ಬಳಗ ತೆಕ್ಕಟ್ಟೆ ಕಲಾವಿದರಿಂದ ‘ವರಾಹ ರೂಪಂ’ ಯಕ್ಷಗಾನ ಪ್ರದರ್ಶನಗೊಳ್ಳಲಿದ್ದು, ಭಾಗವತರಾಗಿ ಪಂಚಮಿ ವೈದ್ಯ ತೆಕ್ಕಟ್ಟೆ, ಮದ್ದಳೆವಾದಕರಾಗಿ ರಾಘವೇಂದ್ರ ಹೆಗಡೆ ಹಾಗೂ…

Read More

ಬಳ್ಳಾರಿ : ಟಿ.ಕೆ. ಗಂಗಾಧರ ಪತ್ತಾರ ಇವರ ‘ಕನ್ನಡಕೆ ಬೆಳಕಿತ್ತ ಪಶ್ಚಿಮದ ಹಣತೆಗಳು’ ಪುಸ್ತಕ ಲೋಕಾರ್ಪಣೆ ಸಮಾರಂಭವನ್ನು ದಿನಾಂಕ 08 ಫೆಬ್ರುವರಿ 2026ರಂದು ಬೆಳಗ್ಗೆ 10-00 ಗಂಟೆಗೆ ಬಳ್ಳಾರಿ ಡಾ. ರಾಜ್ ಕುಮಾರ್ ರಸ್ತೆಯಲ್ಲಿರುವ ಸಾಂಸ್ಕೃತಿಕ ಸಮುಚ್ಚಯ ಆವರಣದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾಧ್ಯಕ್ಷರಾದ ಡಾ. ನಿಷ್ಠಿ ರುದ್ರಪ್ಪ ಇವರು ಉದ್ಘಾಟನೆ ಮಾಡಲಿದ್ದು, ಲೋಹಿಯಾ ಪ್ರಕ್ರಶನದ ಸಿ. ಚೆನ್ನಬಸವಣ್ಣ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಸಿ.ಬಿ. ಚಿಲ್ಕರಾಗಿ ಕೃತಿ ಲೋಕಾರ್ಪಣೆ ಮಾಡಲಿದ್ದು, ವಿಶ್ರಾಂತ ಕಲಾ ಶಿಕ್ಷಕ ಕೆ.ಬಿ. ಸಿದ್ಧಲಿಂಗಪ್ಪ ಕೃತಿ ಪರಿಚಯ ಮಾಡಲಿದ್ದಾರೆ.

Read More

ಸುಳ್ಯ : ಸುಳ್ಯ ಪ್ರೆಸ್ ಕ್ಲಬ್, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ತಾಲೂಕು ಘಟಕದ ಆಶ್ರಯದಲ್ಲಿ ದಿನಾಂಕ 31 ಜನವರಿ 2026ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಲೇಖಕ, ಸಂಶೋಧಕ ಡಾ. ಸುಂದರ ಕೇನಾಜೆಯವರ ‘ಮಾತಿಲ್ಲದ ಮಾತು’ ಅಂಕಣ ಬರಹಗಳ ಕೃತಿ ಬಿಡುಗಡೆ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಕೃತಿ ಲೋಕಾರ್ಪಣೆಗೊಳಿಸಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಮಾತನಾಡಿ “ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಸಾಮಾಜಿಕ ನ್ಯಾಯ ದೊರಕಿಸಿಕೊಡುವುದೇ ಕಲೆ ಮತ್ತು ಸಾಹಿತ್ಯದ ಮೂಲ ಧ್ಯೇಯ. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ಸ್ವಸ್ಥ ಸಮಾಜ ಕಟ್ಟಲು ಸಾಧ್ಯವಿಲ್ಲ. ಸಮಾಜದಲ್ಲಿ ಕಂಡ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಅದನ್ನು ಎದುರಿಸುವ ಶಕ್ತಿಯನ್ನು ಸಾಹಿತ್ಯ ಮತ್ತು ಕಲೆಗಳು ಪ್ರದರ್ಶಿಸಬೇಕು. ವಾಸ್ತವವನ್ನು ಬಿಂಬಿಸದಿದ್ದರೆ ಅಂತಹಾ ಸಾಹಿತ್ಯ ಮತ್ತು ಕಲೆ ಅಪ್ರಸ್ತುತವಾಗುತ್ತದೆ. ಒಬ್ಬ ಸಾಹಿತಿ ಒಂದು ಪದ ಸೃಷ್ಟಿಸಿದರೆ ಅದು…

Read More

ಮಂಗಳೂರು : ನೃತ್ಯಾಂಗನ್ ಟ್ರಸ್ಟ್ ಈ ಬಾರಿ ತನ್ನ 13ನೇ ಆವೃತ್ತಿಯ ‘ಸಮರ್ಪಣ್ 2026’ ಎರಡು ದಿನಗಳ ಭಾರತೀಯ ಶಾಸ್ತ್ರೀಯ ನೃತ್ಯೋತ್ಸವನ್ನು ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ದಿನಾಂಕ 7 ಮತ್ತು 8 ಫೆಬ್ರವರಿ 2026ರಂದು ಪ್ರತಿದಿನ ಸಂಜೆ ಗಂಟೆ 5-45ಕ್ಕೆ ಆಯೋಜಿಸಿದೆ. ದಿನಾಂಕ 7 ಫೆಬ್ರವರಿ 2026ರಂದು ನಡೆಯುವ ಕಾರ್ಯಕ್ರಮಕ್ಕೆ ಶಾರದಾ ನಾಟ್ಯಾಲಯ ಕುಳಾಯಿ ಹೊಸಬೆಟ್ಟುವಿನ ಕಲಾ ನಿರ್ದೇಶಕಿ, ಗುರು ಭಾರತಿ ಸುರೇಶ್ ಚಾಲನೆ ನೀಡುವರು. ಅನಂತರ, ಮೈಸೂರಿನ ಶ್ರೀದುರ್ಗಾ ನೃತ್ಯ ಅಕಾಡೆಮಿಯ ಶ್ರೀವಿದ್ಯಾ ಶಶಿಧರ್ ಅವರ ಶಿಷ್ಯರಾದ ಭುವನ್ ಕುಮಾರ್ ಎಸ್, ಸ್ಪೂರ್ತಿ ಬಿ.ವಿ. ಮತ್ತು ನಿಸರ್ಗ ಎಸ್. ಭರತನಾಟ್ಯ ತ್ರಯ ಪ್ರದರ್ಶನ ನೀಡುವರು. ನಂತರ ಚೆನ್ನೈಯ ಅಶ್ವತಿ ಸುರೇಶ್ ಏಕವ್ಯಕ್ತಿ ಭರತನಾಟ್ಯ ಪ್ರದರ್ಶನ ನೀಡುವರು. ದಿನಾಂಕ 08 ಫೆಬ್ರವರಿ 2026ರಂದು ಕಲ್ಲಡ್ಕದ ಕಲಾನಿಕೇತನ ಡಾನ್ಸ್ ಫೌಂಡೇಶನ್ ಇದರ ಕಲಾ ನಿರ್ದೇಶಕಿ, ಗುರು ವಿದ್ಯಾ ಮನೋಜ್ ಚಾಲನೆ ನೀಡುವರು. ನಂತರ ಬೆಂಗಳೂರಿನ ಗೌರಿ ಮನೋಹರಿ ಎಚ್. ಹಾಗೂ ಕಿನ್ನಿಗೋಳಿ ಮೂಲದ…

Read More

ಮಾಲತಿ ಪಟ್ಟಣಶೆಟ್ಟಿಯವರು ಕಾವ್ಯ ಮತ್ತು ಕಥೆಗಳ ಜೊತೆಗೆ ಪ್ರಬಂಧಗಳನ್ನು ಕೂಡ ಬರೆದಿದ್ದಾರೆ. 2020ರಲ್ಲಿ ಪ್ರಕಟವಾದ ‘ಬಗೆದಷ್ಟು ಜೀವಜಲ’ ಎಂಬ ಸಂಕಲನದಲ್ಲಿ ಇಪ್ಪತ್ತಾರು ಪ್ರಬಂಧಗಳಿವೆ. ಬಗೆದಷ್ಟು ಉಕ್ಕಿ ಬರುವ ಬದುಕಿನ ಚೆಲುವು ಎಂಬ ಅರ್ಥವನ್ನು ಈ ಶೀರ್ಷಿಕೆಯು ಧ್ವನಿಸುತ್ತದೆ. ಅವರ ಪ್ರಬಂಧಗಳಲ್ಲಿ ಅನುಭವಾತ್ಮಕ, ಆತ್ಮಕಥಾನಕ ವಿಚಾರಗಳೊಂದಿಗೆ ಪ್ರವಾಸ, ಪ್ರಸಂಗ ಮತ್ತು ವ್ಯಕ್ತಿಚಿತ್ರಗಳಿವೆ. ಇವುಗಳು ನೆನಪಿನ ತುಣುಕುಗಳಂತಿರುವ ಅನುಭವ ಕಥನದ ಅಧ್ಯಾಯಗಳಂತಿರುವುದರಿಂದ ಶುದ್ಧಾಂಗವಾಗಿ ಲಲಿತಪ್ರಬಂಧ ಅಥವಾ ಹರಟೆ ಪ್ರಕಾರಕ್ಕೆ ಸೇರುವುದಿಲ್ಲ. ಲೇಖಕಿಯ ಆತ್ಮಕತೆಯ ಪುಟದಂತಿರುವ ‘ನೆನಪು ಗಂಧರ್ವರು’ ಕಲಿಕೆಯ ಮೇಲಿನ ಆಸಕ್ತಿ, ಆಟಪಾಠಗಳೊಡನೆ ಸಾಗುತ್ತಿದ್ದ ಚಟುವಟಿಕೆಗಳು, ಸ್ಪರ್ಧೆಗಳು, ದೊರೆತ ಸಾಹಿತ್ಯ ಸಂಸ್ಕಾರ ಹಿನ್ನೆಲೆಯಲ್ಲಿ ಅವರ ಶಾಲಾಜೀವನದ ವಿವರಗಳನ್ನು ಕಟ್ಟಿಕೊಡುತ್ತದೆ. ‘ಇದಕ್ಕೆ ಏನೆನ್ನಬೇಕು?’ ಎಂಬ ರಚನೆಯು ಇದರ ಮುಂದುವರಿದ ಪುಟದಂತಿದ್ದು ಗುರು ಶಿಷ್ಯೆಯರ ಸಂಬಂಧ ಭಕ್ತಿ ಆರಾಧನೆಗಳನ್ನು ಮೀರಿ ಪ್ರೇಮವಾಗಿ ಬದಲಾಗುವ ರೀತಿಯು ನವಿರಾಗಿ ಮೂಡಿ ಬಂದಿದೆ. “ಇದಕ್ಕೆ ಏನೆನ್ನಬೇಕು? ಗುರುಭಕ್ತಿಯೇ? ಪ್ರೀತಿಯೇ? ಸ್ನೇಹವೇ? ಹುಚ್ಚು ಹಂಬಲವೇ? ಅಥವಾ ಹೆಸರಿಸಲು ಬಾರದ ಮುಗ್ಧ, ಸ್ನಿಗ್ಧ ಎಳೆಹರೆಯದ…

Read More

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಾ. ಡಿಸೋಜಾ ಮಕ್ಕಳ ಸಾಹಿತ್ಯ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕತೆ ಬರೆಯುವ ಸ್ಪರ್ಧೆಯನ್ನು ನಗರದ ಮಹದೇವ ಪೇಟೆಯಲ್ಲಿರುವ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ದಿನಾಂಕ 10 ಫೆಬ್ರುವರಿ 2026ರಂದು ಬೆಳಿಗ್ಗೆ 10-30 ಗಂಟೆಗೆ ಏರ್ಪಡಿಸಲಾಗಿದೆಯೆಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ. ಸ್ಪರ್ಧೆಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆಗಳಿಂದ ಓರ್ವ ಅಥವಾ ಇಬ್ಬರು ವಿದ್ಯಾರ್ಥಿಗಳನ್ನು ಕಳುಹಿಸಬಹುದು. ಕಥಾ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಹೆಸರನ್ನು ದಿನಾಂಕ 05 ಫೆಬ್ರುವರಿ 2026ರ ಒಳಗಾಗಿ ಮೊಬೈಲ್ ಸಂಖ್ಯೆ 9113892396 ಗೆ ವಾಟ್ಸಪ್ ಮೂಲಕ ಕಳುಹಿಸಬಹುದು ಅಥವಾ ಅಧ್ಯಕ್ಷರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುದರ್ಶನ ವೃತ್ತದ ಬಳಿ, ಮಡಿಕೇರಿ ಈ ವಿಳಾಸಕ್ಕೆ ಪತ್ರ ಮುಖೇನ ತಿಳಿಸಬೇಕಾಗಿ ಕ.ಸಾ.ಪ. ಜಿಲ್ಲಾಧ್ಯಕ್ಷರು ಕೋರಿದ್ದಾರೆ.

Read More

ಮಂಗಳೂರು : ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 290ನೇ ಕಾರ್ಯಕ್ರಮವಾಗಿ ಸುರ್ ಸೊಭಾಣ್ ಗಾಯನ ಶಾಲೆಯ ವಿದ್ಯಾರ್ಥಿಗಳಿಂದ ‘ಸುರ್ ಸುರಾಯ್’ ಎಂಬ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಮತ್ತು ಕೊಂಕಣಿ ಹಾಡುಗಳ ಸಂಗೀತ ಸಂಜೆ ದಿನಾಂಕ 01 ಫೆಬ್ರವರಿ 2026ರಂದು ಶಕ್ತಿನಗರದ ಕಲಾಂಗಣದಲ್ಲಿ ಪ್ರಸ್ತುತವಾಯಿತು. ಈ ಕಾರ್ಯಕ್ರಮವನ್ನು ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚಾರ್ಡ್ ಮೊರಾಸ್ ಅವರು ಗಂಟೆ ಬಾರಿಸಿ ಉದ್ಘಾಟಿಸಿದರು. ಮಾಂಡ್ ಸೊಭಾಣ್ ಪದಾಧಿಕಾರಿಗಳಾದ ಲುವಿ ಜೆ. ಪಿಂಟೊ, ರೊನಿ ಕ್ರಾಸ್ತಾ ಮತ್ತು ಎಲ್ರೊನ್ ರೊಡ್ರಿಗಸ್ ಉಪಸ್ಥಿತರಿದ್ದರು. ಆರಂಭದಲ್ಲಿ ಆಸ್ಟನ್ ಪಿಂಟೊ ಇವರಿಂದ ಕೊಳಲು ವಾದನ ನಡೆಯಿತು. ನಂತರ ನಿರ್ದೇಶಕಿ ಶಿಲ್ಪಾ ಕುಟಿನ್ಹಾ ನೇತೃತ್ವದಲ್ಲಿ ಮಕ್ಕಳು ಹಿಂದೂಸ್ತಾನಿ ಶಾಸ್ತ್ರೀಯ ಗಾಯನದ ಕೆಲ ರಾಗಗಳನ್ನು ಹಾಗೂ ಕೊಂಕಣಿಯ ಕೆಲ ಹಾಡುಗಳನ್ನು ಪ್ರಸ್ತುತಪಡಿಸಿದರು. ಎರಿಕ್ ಒಝೇರಿಯೊ ಸ್ವರ ಸಂಯೋಜಿಸಿದ ಕೆಲ ಹಾಡುಗಳನ್ನು ಸರ್ ಗಮದಲ್ಲಿ ಹಾಡುವ ಪ್ರಯೋಗ ಕೂಡಾ ನಡೆಯಿತು. ಸಹತರಬೇತುದಾರೆ ಡಿಯಲ್ ಡಿಸೋಜ ಮತ್ತು ಮಕ್ಕಳ ಪೋಷಕರು ಕೂಡಾ ಒಂದೊಂದು ಹಾಡುಗಳನ್ನು…

Read More

ಉಡುಪಿ : ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಇವರ ವತಿಯಿಂದ 2024 (ಜನವರಿ 2024ರಿಂದ ಡಿಸೆಂಬರ್ 2024) ಹಾಗೂ 2025 (ಜನವರಿ-2025ರಿಂದ ಡಿಸೆಂಬರ್-2025)ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ’ಗಾಗಿ ಪುಸ್ತಕಗಳನ್ನು ಪ್ರದಾನ ಮಾಡಲು ಉದ್ದೇಶಿಸಲಾಗಿದ್ದು, 2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಅಂದರೆ ಜನವರಿಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು), ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ), ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ. ಪ್ರಶಸ್ತಿಗಾಗಿ ಪರಿಗಣಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ದಿನಾಂಕ 20 ಫೆಬ್ರವರಿ 2026ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ. ಕಾಲೋನಿ, ಲಕಮನಹಳ್ಳಿ, ಧಾರವಾಡ-580004…

Read More

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ‘ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ.)’ ಇದರ ವತಿಯಿಂದ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭವನ್ನು ದಿನಾಂಕ 07 ಫೆಬ್ರುವರಿ 2026ರಂದು ಅಪರಾಹ್ನ 2-30 ಗಂಟೆಗೆ ಮಂಗಳೂರಿನ ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಕುಂತಳಾ ಟಿ. ಶೆಟ್ಟಿಯವರು ವಹಿಸಲಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲ ಸಚಿವರಾದ ಡಾ. ಎ. ಸುಬ್ಬಣ್ಣ ರೈ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಪ್ರಕಟಿತ ಕವನ ಸಂಕಲನದ ಬಗ್ಗೆ ಕವಿ ಡಾ. ವಸಂತಕುಮಾರ್ ಪೆರ್ಲ ಹಾಗೂ ಸಂಶೋಧನಾತ್ಮಕ ಕೃತಿಯ ಬಗ್ಗೆ ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಕೃಷ್ಣಮೂರ್ತಿ ಪಿ. ಇವರು ಅನಿಸಿಕೆಗಳನ್ನಾಡಲಿದ್ದಾರೆ. ಮುಂಬಯಿಯ ಸುನೀತಾ ಎಂ. ಶೆಟ್ಟಿ ಪ್ರಾಯೋಜಿಸುವ ‘ತೌಳವ ಸಿರಿ’ ಪ್ರಶಸ್ತಿಗೆ ತುಳು, ಕನ್ನಡ ಮತ್ತು ಕೊಂಕಣಿ ಭಾಷೆಯ ಹಿರಿಯ ಲೇಖಕಿ ಕ್ಯಾಥರಿನ್…

Read More