Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಕರ್ನಾಟಕ ಸರ್ಕಾರ ಮತ್ತು ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರ ಇವರ ಸಹಯೋಗದೊಂದಿಗೆ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವನ್ನು ದಿನಾಂಕ 15 ನವೆಂಬರ್ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 10ನೇ ಆವೃತ್ತಿಯ ವಿದ್ಯಾರ್ಥಿಗಳು ಪ್ರಯೋಗಿಸುವ ತಿಂಗಳ ನಾಟಕ ‘ಪಂಚವಟಿ’ ಯಕ್ಷಗಾನ ಪ್ರಸಂಗ ಗುರು ಬನ್ನಂಜೆ ಸಂಜೀವ ಸುವರ್ಣ ಇವರ ಪರಿಕಲ್ಪನೆ ಮತ್ತು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳಲಿದೆ.
ಸುರತ್ಕಲ್ : ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗು ರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ದಿನ್ನಕ 09 ನವೆಂಬರ್ 2025ರಂದು ಜರಗಿತು. ಕಾರ್ಯಕ್ರಮವನ್ನು ಮಂಬೈ ವಿ.ಕೆ. ಸಮೂಹ ಸಂಸ್ಥೆಯ ಚೆಯರ್ ಮ್ಮಾನ್ ಮಧ್ಯಗುತ್ತು ಕರುಣಾಕರ ಎಂ. ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಕೆ. ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಇವರು ಉದ್ಘಾಟಿಸಿದರು. ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ “ರಂಗಚಾವಡಿ ಸಂಸ್ಥೆ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಸಂಸ್ಥೆ. ಅನೇಕ ಕಲಾವಿದರನ್ನು ಗುರುತಿಸಿ ನಾಡಿಗೆ ಪರಿಚಯಿಸಿದ ಕೀರ್ತಿ ರಂಗಚಾವಡಿ ಸಂಸ್ಥೆಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ರಂಗಚಾವಡಿ ಅಕಾಡೆಮಿಯನ್ನಾಗಿ ರಚಿಸಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ” ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಕುಸೇಲ್ದರಸೆ ನವೀನ್…
ತುಮಕೂರು : ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಕ್ಕಳ ಸಂಸ್ಥೆ ‘ರಂಗಕಹಳೆ’ ಬೆಂಗಳೂರು ಇದರ ವತಿಯಿಂದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಮನೋತ್ಸವದ ಪ್ರಯುಕ್ತ ‘ಮಕ್ಕಳ ರಂಗ ಉತ್ಸವ’ವನ್ನು ದಿನಾಂಕ 15 ನವೆಂಬರ್ 2025ರಂದು ಬೆಳಗ್ಗೆ 10-30 ಗಂಟೆಗೆ ತುಮಕೂರಿನ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಭರತನಾಟ್ಯ, ಜನಪದ ಗೀತೆ, ಡೊಳ್ಳು ಕುಣಿತ, ಯಕ್ಷಗಾನ ಮತ್ತು ಜನಪದದ ಸಮೂಹ ನೃತ್ಯ, ಆರ್.ಕೆ. ಫಿಲಂ ಸ್ಟೂಡಿಯೋಸ್ ಇವರಿಂದ ಶ್ರೀ ಅಟಲ್ ಬಿಹಾರಿ ವಾಜಪೇಯಿರವರ ಜೀವನಾಧಾರಿತ ‘ಸಾಕ್ಷ್ಯಚಿತ್ರ’, ಸಿ. ಲಕ್ಷ್ಮಣ ಇವರ ನಿರ್ದೇಶನದ ಕಲಾತ್ಮಕ ಚಲನಚಿತ್ರ ‘ಕಾರಣಿಕ ಶಿಶು’ ಪ್ರದರ್ಶನ, ಗುರು ಸಾಗರ್ ಟಿ.ಎಸ್. ಇವರ ನಿರ್ದೇಶನದಲ್ಲಿ ಶ್ರೀ ಸಾಯಿ ರಾಮನ್ ನೃತ್ಯ ಕೇಂದ್ರದವರಿಂದ ‘ನೃತ್ಯ ದರ್ಶನ’, ಬೆಂಗಳೂರಿನ ಗೌರಿಶಂಕರ ಅಕಾಡೆಮಿ ಫಾರ್ ಕಲ್ಚರ್ ಅಂಡ್ ಸ್ಪೋರ್ಟ್ಸ್ ಟ್ರಸ್ಟ್ ಇವರಿಂದ ಸಿ. ಲಕ್ಷ್ಮಣ ಇವರ ನಿರ್ದೇಶನದಲ್ಲಿ ‘ಬೊಮ್ಮನಹಳ್ಳಿಯ ಕಿಂದರಿ ಜೋಗಿ’ ಹಾಗೂ ಬೆಂಗಳೂರಿನ ಪೂಜಾ ಮತ್ತು ತಂಡದವರಿಂದ ಓಹಿಲೇಶ ಲಕ್ಷ್ಮಣ ಇವರ ನಿರ್ದೇಶನದಲ್ಲಿ ‘ಮೋಡಣ್ಣನ…
ಬೆಂಗಳೂರು : ಶ್ರೀ ಪೇಜಾವರ ಮಠ ವಿದ್ಯಾಪೀಠ ಬೆಂಗಳೂರು ಆಯೋಜನೆಯಲ್ಲಿ ನೀರ್ಮಾಣ್ ಯಕ್ಷಬಳಗ (ರಿ.) ಅರ್ಪಿಸುವ ತಿಂಗಳ ತಿರುಳು ಸರಣಿಯ 37ನೇ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮವನ್ನು ದಿನಾಂಕ 15 ನವೆಂಬರ್ 2025ರಂದು ಸಂಜೆ 7-30 ಗಂಟೆಗೆ ಬೆಂಗಳೂರು ವಿದ್ಯಾಪೀಠದ ಶ್ರೀ ಪೇಜಾವರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ. ಕವಿ ಯಕ್ಷಋಷಿ ಹೊಸ್ತೋಟ ಮಂಜುನಾಥ ಭಾಗವತರು ವಿರಚಿತ ‘ಗೋವರ್ಧನ ಗಿರಿಪೂಜೆ’ ಯಕ್ಷಗಾನ ತಾಳಮದ್ದಲೆಯ ಹಿಮ್ಮೇಳದಲ್ಲಿ ಬಾಲಕೃಷ್ಣ ಹಿಳ್ಳೋಡಿ ಭಾಗವತರು, ಚಿನ್ಮಯ ಅಂಬಾರಗೊಡ್ಲು ಮದ್ದಲೆ ಮತ್ತು ಮಿತ್ರ ಮಧ್ಯಸ್ಥ ಚೆಂಡೆಯಲ್ಲಿ ಹಾಗೂ ಮುಮ್ಮೇಳದಲ್ಲಿ ರವಿ ಐತುಮನೆ, ಚಂದನ್ ಕಲಾಹಂಸ, ಸಮರ್ಥ ಬೆಂಕಟವಳ್ಳಿ, ಕುಮಾರಿ ಸಿರಿ ಹಳ್ಳದಾಚೆ, ರಾಘವೇಂದ್ರ ಹೆಗಡೆ ವಾಜಗೋಡು ಮತ್ತು ಮನೋಜ್ ಭಟ್ ಏಳಗದ್ದೆ ಸಹಕರಿಸಲಿದ್ದಾರೆ.
ಪಡುಬಿದ್ರಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಘಟಕ ಇದರ ವತಿಯಿಂದ ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ -2025 ‘ಪರಿಕ್ರಮ’ ಕನ್ನಡ ಕಥಾ ಸಾಹಿತ್ಯದ ಚಿಂತನ-ಮಂಥನ ಕಾರ್ಯಕ್ರಮವು ಖ್ಯಾತ ಕಥೆಗಾರ, ಹಿರಿಯ ಸಾಹಿತಿ, ಸಾಮಾಜಿಕ ಕಾರ್ಯಕರ್ತ ಫಕೀರ್ ಮುಹಮ್ಮದ್ ಕಟ್ಟಾಡಿ ಇವರ ಸರ್ವಾಧ್ಯಕ್ಷತೆಯಲ್ಲಿ ದಿನಾಂಕ 15 ನವೆಂಬರ್ 2025ರಂದು ಹೆಜಮಾಡಿ ಬಿಲ್ಲವರ ಸಂಘದ ಸಭಾಭವನದಲ್ಲಿ ಜರಗಲಿದೆ. ಬೆಳಿಗ್ಗೆ ಗಂಟೆ 8-00ಕ್ಕೆ ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿ, ಕನ್ನಡ ಮಾತೆ ಭುವನೇಶ್ವರೀ ದೇವಿಯ ಶೋಭಾಯಾತ್ರೆಗೆ ಚಾಲನೆ ದೊರೆಯಲಿದೆ. ಬಳಿಕ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಎ. ಮೆಂಡನ್ ರಾಷ್ಟ್ರ ಧ್ವಜಾರೋಹಣಗೈಯಲಿದ್ದಾರೆ. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ. ಪುಂಡಲೀಕ ಮರಾಠೆ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡಲಿದ್ದಾರೆ. ಕಾಪುವಿನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇವರು ಸಮ್ಮೇಳನವನ್ನು ಉದ್ಘಾಟಿಸಲಿದ್ದು ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಪಾಂಗಾಳ ಬಾಬು…
Mumbai : In the city that never sleeps – where the hum of traffic meets the rhythm of dreams – Mumbai witnessed an evening of divine resonance and cultural splendour as Arunodaya Kala Niketan, the city’s eminent 66-year-old institution, celebrated its Suvarna Mahotsavam on 2nd November 2025, a festival of music and dance paying homage to its illustrious founder, Vidwan Guru M. N. Suvarna Ji. The grand event was curated by Dr. Guru Meenakshi Shriyan, Artistic Director of Arunodaya Kala Niketan, who continues the glorious legacy of her father with devotion and artistic excellence. The festival commenced with a musical…
ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ಹೋಬಳಿ ಘಟಕ ಇವರ ವತಿಯಿಂದ ‘ಸಂಸ್ಕೃತಿ ಚಿಂತನ ಸಮಾರಂಭ’ವನ್ನು ದಿನಾಂಕ 16 ನವೆಂಬರ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಮೂಡುಬಿದಿರೆ ಕಲ್ಲಬೆಟ್ಟು ಮುರಾರ್ಜಿ ದೇಸಾಯಿ ವಸತಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ಹೋಬಳಿ ಘಟಕದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಇವರು ವಹಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಮೂಡಬಿದಿರೆ ತಾಲೂಕು ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಇವರು ಶುಭ ನುಡಿಗಳನ್ನಾಡಲಿದ್ದಾರೆ. ‘ಮಾನವ ಜನ್ಮ – ಮಾನವ ಧರ್ಮ’ ಎಂಬ ವಿಷಯದ ಬಗ್ಗೆ ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢ ಶಾಲೆಯ ಪ್ರಧಾನ ಅಧ್ಯಾಪಕರಾದ ದಿನಕರ ಕುಂಭಾಶಿ ಇವರು ಉಪನ್ಯಾಸ ನೀಡಲಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ನೆಲೆ ನಿಂತಿರುವ ಮಲೆನಾಡ ಬರಹಗಾರರ ಸೃಜನಾತ್ಮಕ ಅಭಿವ್ಯಕ್ತಿಯ ವೇದಿಕೆಯಾಗಿ ʼಮಲೆನಾಡ ಬರಹಗಾರರ ವೇದಿಕೆʼ ರೂಪುಗೊಂಡಿದೆ. ಪುಸ್ತಕ ಪ್ರಕಟಣೆ, ವಿಚಾರ ಸಂಕಿರಣ, ಚಿಂತನಾ ಕಮ್ಮಟಗಳು, ಸಮ್ಮೇಳನಗಳು ಹೀಗೆ ವಿಭಿನ್ನ ಯೋಜನೆಗಳನ್ನು ಹೊಂದಿರುವ ಈ ವೇದಿಕೆಯ ಮೊದಲ ಪುಸ್ತಕವಾಗಿ ‘ಕಾಡಸುರಗಿ’ ಎಂಬ ನಲವತ್ತು ಮಲೆನಾಡು ಸಾಧಕರ ಜೀವನ ಸಾಧನೆಯನ್ನು ಪರಿಚಯಿಸುವ ಕೃತಿಯು ದಿನಾಂಕ 15 ನವಂಬರ್ 2025ರ ಶನಿವಾರ ಸಂಜೆ ಗಂಟೆ 5-30ಕ್ಕೆ ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ದೇಶಕರಾದ ಪದ್ಮಶ್ರೀ ಗಿರೀಶ್ ಕಾಸರವಳ್ಳಿಯವರು ಕೃತಿಯನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್, ಪ್ರಖ್ಯಾತ ಗಾಯಕಿ ನಾಡೋಜ ಡಾ. ಬಿ.ಕೆ. ಸುಮಿತ್ರ, ಜವಹರಲಾಲ್ ನೆಹರು ತಾರಾಲಯದ ನಿರ್ದೇಶಕರಾದ ಡಾ. ಬಿ.ಆರ್. ಗುರುಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಮಲೆನಾಡು ಬರಹಗಾರರ ವೇದಿಕೆ ಅಧ್ಯಕ್ಷರಾದ ಪ್ರೊ. ಎನ್.ಎಸ್. ಶ್ರೀಧರ ಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಒಟ್ಟು ಹದಿನೆಂಟು ಲೇಖಕರ ಲೇಖನಗಳ ಕೃತಿಯನ್ನು…
ಮೈಸೂರು : ನಟನ ರಂಗಶಾಲೆಯ ವತಿಯಿಂದ 2025-26ನೇ ಸಾಲಿನ ವಾರಾಂತ್ಯ ರಂಗಶಾಲೆಯ ಮಕ್ಕಳ ಅಭ್ಯಾಸಿ ಪ್ರಯೋಗದ ಪ್ರಯುಕ್ತ ‘ಅಲೀಬಾಬಾ ಮತ್ತು 40 ಕಳ್ಳರು’ ನಾಟಕ ಪ್ರದರ್ಶನವನ್ನು ದಿನಾಂಕ 15 ಮತ್ತು 16 ನವೆಂಬರ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರ, ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವನ್ನು ಡಾ. ಚಂದ್ರಶೇಖರ ಕಂಬಾರರು ರಚಿಸಿದ್ದು, ರಾಗ ಸಂಯೋಜನೆ ರಾಜು ಅನಂತಸ್ವಾಮಿ, ನಿರ್ದೇಶನ ಸಹಾಯ ವಿನೀತ್ ಗೋಖಲೆ ಹಾಗೂ ವಿರಂಗ್ ಅಮೋಘ ಇವರು ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 7259537777, 9480468327 ಮತ್ತು 9845595505 ಸಂಖ್ಯೆಗಳನ್ನು ಸಂಪರ್ಕಿಸಿರಿ.
ಕೊಡಗು : “ಕಲಾ ಉತ್ಸವ ಕೊಡಗು 2025” ಕಾರ್ಯಕ್ರಮದ ವತಿಯಿಂದ ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಕರ್ನಾಟಕ ವಿಕಾಸ ರಂಗ ಮತ್ತು ಮನೆ ಮನೆ ಕಾವ್ಯಗೋಷ್ಠಿ ಸಂವರ್ಧಕ ಪರಿಷತ್ತು ಬಳಗಗಳ ಸದಸ್ಯರಿಂದ ಕವಿಗೋಷ್ಠಿ ಮತ್ತು ಗೀತ ಗಾಯನ ಕಾರ್ಯಕ್ರಮವನ್ನು ವಿರಾಜಪೇಟೆ ಮೊಗರಗಲ್ಲಿ ಏರ್ಪಡಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವ ಕವಿಗಳು, ಕವಯಿತ್ರಿಯರು, ಗಾಯಕರು ವೈಲೇಶ್ ಪಿ.ಎಸ್. ಕೊಡಗು 8861405738, ಕಲಾ ಉತ್ಸವ ಕೊಡಗು 2025ರ ರೂವಾರಿ ಸಾದಿಕ್ ಹಂಸ +91 98458 20257, ಹಿರಿಯ ಕವಿಗಳಾದ ಗಿರೀಶ ಕಿಗ್ಗಾಲು 091413 95426, ಕವಯಿತ್ರಿ ವಿಮಲ ದಶರಥ +91 90086 13729, ರಾಜ್ಯ ಸಂಚಾಲಕರಾದ ಭಾಗ್ಯವತಿ ಅಣ್ಣಪ್ಪ +91 98454 75153, ಇವರ ದೂರವಾಣಿ ಸಂಖ್ಯೆಗಳಿಗೆ ಸಂದೇಶಗಳನ್ನು ಕಳುಹಿಸುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಇದೇ ಸಂದರ್ಭದಲ್ಲಿ ಲವಿನ್ ಲೋಪೇಸ್ರವರ ಕೃತಿ ಲೋಕಾರ್ಪಣೆ ಇರುತ್ತದೆ.