Author: roovari

ಧಾರವಾಡ : ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟಿನ 2026ನೇ ಸಾಲಿನ ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಧಾರವಾಡದ ಹಿರಿಯ ಸಾಹಿತಿ ಪ್ರೊ. ಮಾಲತಿ ಪಟ್ಟಣಶೆಟ್ಟಿ ಹಾಗೂ ಹಾವೇರಿಯ ಹಿರಿಯ ಕವಿ ಸತೀಶ ಕುಲಕರ್ಣಿ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷರಾದ ಡಾ. ಸರಜೂ ಕಾಟ್ಕರ್ ಪ್ರಶಸ್ತಿ ಪುರಸ್ಕೃತರ ಮಾಹಿತಿ ಪ್ರಕಟಿಸಿದರು. ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಯು ರೂ. ಒಂದು ಲಕ್ಷ ನಗದು ಹಾಗೂ ಸ್ಮರಣಿಕೆ ಹೊಂದಿದೆ. ಆದರೆ ಈ ಸಲ ಇಬ್ಬರು ಸಾಧಕರಿಗೆ ಪ್ರಶಸ್ತಿ ಹಂಚಿರುವ ಹಿನ್ನೆಲೆಯಲ್ಲಿ ತಲಾ ರೂ.50 ಸಾವಿರ ನೀಡಲಾಗುವುದು. ದಿನಾಂಕ 31 ಜನವರಿ 2026ರಂದು ಸಂಜೆ ಗಂಟೆ 5-00ಕ್ಕೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Read More

ಮಂಗಳೂರು : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯ (ರಿ.) ಮತ್ತು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಲಲಿತ ಕಲಾ ಸಂಘ ಇವರ ಸಹಯೋಗದೊಂದಿಗೆ ವಿದುಷಿ ಶೀಲಾ ದಿವಾಕರ್ ಇವರಿಗೆ ‘ಗಾನ ಶಾರದೆಗೆ ನಮನ’ ಗುರುವಿಗೊಂದು ನಾಟ್ಯ ನಮನ ಕಾರ್ಯಕ್ರಮವನ್ನು ದಿನಾಂಕ 26 ಜನವರಿ 2026ರಂದು ಸಂಜೆ 5-30 ಗಂಟೆಗೆ ಸುರತ್ಕಲ್ಲಿನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ ಆಚಾರ್ಯ ಪಿ. ಇವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಾದನೃತ್ಯ ಸ್ಕೂಲ್ ಆಫ್ ಡಾನ್ಸ್ ಎಂಡ್ ಕಲ್ಚರಲ್ ಟ್ರಸ್ಟ್ (ರಿ.) ಇವರ ನಿರ್ದೇಶಕರಾದ ಡಾ. ಭ್ರಮರಿ ಶಿವಪ್ರಕಾಶ್ ಮತ್ತು ಕಲಾಪೋಷಕರಾದ ಎಲ್. ದಿವಾಕರ್ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ. ಭ್ರಮರಿ ಶಿವಪ್ರಕಾಶ್ ಇವರಿಂದ ನುಡಿ ನಮನ, ಸಂಪತ್ ಎಸ್.ಬಿ. ಹೊಸಬೆಟ್ಟು ಮತ್ತು ಆದರ್ಶ್ ಎಸ್.ಜೆ. ಮುಲ್ಕಿ ಇವರ ಗೀತ ನಮನಕ್ಕೆ ವಿಜಯ್ ಆಚಾರ್ಯ ಕುಳಾಯಿ ಕೀ ಬೋರ್ಡ್ ಮತ್ತು ಪ್ರಥಮ್…

Read More

ಮೂಡುಬಿದಿರೆ : ಸುರಸಾರವ ಸಂಗೀತ ಶಾಲೆಯ ವತಿಯಿಂದ ದ್ವಿತೀಯ ವರ್ಷದ ‘ಸಂಗೀತೋತ್ಸವ-2026’ ದಣಿದ ದನಿಗೆ ರಾಗದ ಬೆಸುಗೆ ಕಾರ್ಯಕ್ರಮವನ್ನು ದಿನಾಂಕ 25 ಜನವರಿ 2026ರಂದು ಸಂಜೆ 5-00 ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಆಯೋಜಿಸಲಾಗಿದೆ. ಸಂಸ್ಥೆಯ ಅತ್ಯುನ್ನತ ಪುರಸ್ಕಾರವಾದ ‘ಸುರಸಾರವ ಕಲಾವಿಭೂಷಣ’ ಪ್ರಶಸ್ತಿಯನ್ನು ಹಿರಿಯ ಉದ್ಯಮಿ ಶ್ರೀಪತಿ ಭಟ್ ಇವರಿಗೆ ನೀಡಿ ಗೌರವಿಸಲಾಗುವುದು. ಉಡುಪಿಯ ಶ್ರೀಮತಿ ಪೂರ್ಣಿಮಾ, ವೇದಮೂರ್ತಿ ಶಶಿಧರ್ ಪುರೋಹಿತ್ ಕಟಪಾಡಿ, ಆಲ್ವಿನ್ ಅಂದ್ರಾದೆ ಸಾಸ್ತಾನ ಮತ್ತು ಸುಶಾಂತ್ ಭಂಡಾರಿ ಮಂಗಳೂರು ಇವರಿಗೆ ‘ಸುರಸಾರವ ಕಲಾಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಮುಲ್ಕಿ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಉದ್ಯಮಿ ಶ್ರೀಪತಿ ಭಟ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.ಮತ್ತಿತರರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ಗಂಟೆ 1-45ರಿಂದ ಶಾರದಾ ಪೂಜೆ, ಗುರುವಂದನೆ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ…

Read More

ಮಂಗಳೂರು : ನೃತ್ಯ ಭಾರತಿ (ರಿ.) ಕದ್ರಿ ಮಂಗಳೂರು ಮತ್ತು ಶ್ರೀಮತಿ ರಾಧಾ ಕೆ. ಹಾಗೂ ಶಿವಪ್ರಸಾದ್ ಎಂ. ಭಟ್ ಇವರ ವತಿಯಿಂದ ವಿದುಷಿ ಶ್ರಾವ್ಯ ಎಂ. ಭಟ್ ಇವರ ಭರತನಾಟ್ಯ ರಂಗಪ್ರವೇಶಂ ಕಾರ್ಯಕ್ರಮವನ್ನು ದಿನಾಂಕ 24 ಜನವರಿ 2026ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶಾಂತಲಾ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರು ಉಳ್ಳಾಲ್ ಮೋಹನ್ ಕುಮಾರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಕರ್ನಾಟಕ ಕಲಾಶ್ರೀ ರಾಜಶ್ರೀ ಉಳ್ಳಾಲ್, ವಿದ್ವಾನ್ ಸುಜಯ್ ಶ್ಯಾನ್ ಬೋಗ್ ಮತ್ತು ವಿದುಷಿ ಶ್ರೀವಿದ್ಯಾ ರಾವ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದುಷಿ ಗೀತಾ ಸರಳಾಯ ಇವರ ನಿರ್ದೇಶನ, ವಿದುಷಿ ರಶ್ಮಿ ಸರಳಾಯ ಇವರ ನಟುವಾಂಗ, ವಿದ್ವಾನ್ ವಿನೀತ್ ಪುರವಂಕರ ಇವರ ಹಾಡುಗಾರಿಕೆ, ವಿದ್ವಾನ್ ಪೇಯನ್ನೂರ್ ರಾಜನ್ ಇವರ ಮೃದಂಗ ಮತ್ತು ಉಡುಪಿಯ ವಿದ್ವಾನ್ ಮುರಳೀಧರ ಇವರು ಕೊಳಲು ವಾದನದಲ್ಲಿ ಸಹಕರಿಸಲಿದ್ದಾರೆ.

Read More

ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ‘ಸಾಹಿತ್ಯ ವೈಭವ 2026’ ಕಾರ್ಯಕ್ರಮವನ್ನು ದಿನಾಂಕ 25 ಜನವರಿ 2026ರಂದು ಬೆಳಗ್ಗೆ 9-00 ಗಂಟೆಗೆ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಅಭಿಷೇಕ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಎಸ್. ಗಣೇಶ್ ರಾವ್ ಇವರು ಉದ್ಘಾಟನೆ ಮಾಡಲಿದ್ದು, ಕೇಂದ್ರ ಚುಟುಕು ಸಾಹಿತ್ಯ ಪರಿಷತ್ತು ರಾಜ್ಯ ಪ್ರಧಾನ ಸಂಚಾಲಕರಾದ ಡಾ. ಎಂ.ಜಿ.ಆರ್. ಅರಸ್ ಇವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಖ್ಯಾತ ಚುಟುಕು ಸಾಹಿತಿ, ಚುಟುಕು ಸಾಹಿತ್ಯ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಇವರ ನೇನೋಕತೆಗಳ ಸಂಕಲನ ‘ಕೋಲ್ಮಿಂಚು’ ಕೃತಿಯನ್ನು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ಹಾಗೂ ಚುಸಾಪ ಗೌರವಾಧ್ಯಕ್ಷ ಇರಾ ನೇಮು ಪೂಜಾರಿಯವರ ‘ಚುಟುಕು ಕಾವ್ಯ ಕಾಮಿನಿ’ ಕಾವ್ಯಸಂಕಲನವನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

Read More

ವಿಜಯಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವಿಜಯಪುರ ಜಿಲ್ಲಾ ಸಮಿತಿಯು ಆಯೋಜಿಸಿದ್ದ ಕುಮಾರ ವಾಲ್ಮೀಕಿ ರಚಿಸಿದ ತೊರವೆ ರಾಮಾಯಣದ ಸೀತಾರಾಮ ಕಲ್ಯಾಣ ಪ್ರಸಂಗದ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮವು ದಿನಾಂಕ 19 ಜನವರಿ 2026ರಂದು ಯಶಸ್ವಿಯಾಗಿ ಪೂರ್ಣಗೊಂಡಿತು. ಹಿರಿಯ ಗಮಕಿ ಶ್ರೀಮತಿ ಶಾಂತಾಬಾಯಿ ಕೌತಾಳ ಇವರು ಸ್ಪಷ್ಟವಾಗಿ, ನಿರಾಯಾಸವಾಗಿ ಗಮಕ ವಾಚನ ಮಾಡಿದರು ಮತ್ತು ಹಿರಿಯ ಸಾಹಿತಿ, ಗಮಕ ಸಾಹಿತ್ಯ ಪರಿಷದ್ ವಿಜಯಪುರ ಜಿಲ್ಲಾ ಉಪಾಧ್ಯಕ್ಷ ಶ್ರೀ ಕಲ್ಯಾಣರಾವ ದೇಶಪಾಂಡೆ ವ್ಯಾಖ್ಯಾನ ಮಾಡಿದರು. ಸುಮಾರು ಒಂದೂವರೆ ಗಂಟೆಗಳ ಕಾಲ ಜರುಗಿದ ಕಾರ್ಯಕ್ರಮದಲ್ಲಿ 55ಕ್ಕಿಂತ ಹೆಚ್ಚು ಆಸಕ್ತರಿಗೆ ಹಿರಿಯ ಕಲಾವಿದರಿಬ್ಬರೂ ಗಮಕದ ಸವಿ ಉಣಬಡಿಸಿದರು.

Read More

ಕನ್ನಡ ಮಹಿಳಾ ಸಾಹಿತ್ಯ ಪರಂಪರೆಯ ನಾಲ್ಕು ಪೀಳಿಗೆಗಳನ್ನು ವಿಮರ್ಶಕರು ಸ್ಪಷ್ಟವಾಗಿ ಗುರುತಿಸಿದ್ದಾರೆ. ಮೊದಲ ಪೀಳಿಗೆಯ ಲೇಖಕಿಯರಾದ ಕೊಡಗಿನ ಗೌರಮ್ಮ, ಶ್ಯಾಮಲಾ ಬೆಳಗಾಂವಕರ ಮೊದಲಾದವರು ಸಾಮಾಜಿಕ ಹಿನ್ನೆಲೆಯಲ್ಲಿ ಹೆಣ್ಣಿನ ಸಮಸ್ಯೆಗಳ ಕುರಿತು ಮೂಲಭೂತ ಪ್ರಶ್ನೆಗಳನ್ನು ಎತ್ತಿದರು. ಸಮಾಜದ ಜ್ವಲಂತ ಸಮಸ್ಯೆಗಳ ಚಿತ್ರಣವನ್ನು ನೀಡಲು ವಾಸ್ತವದ ಹಾದಿಯನ್ನು ಅನುಸರಿಸಿದರು. ಆ ಕಾಲದ ಹೆಂಗಸರಿಗೆ ಸ್ವತಂತ್ರ ಅಸ್ತಿತ್ವವಿಲ್ಲದಿದ್ದುದರಿಂದ ಇವರ ಕತೆಗಳಲ್ಲಿ ಹೆಂಗಸರು ಹೆಚ್ಚಾಗಿ ಶೋಷಿತ ಪಾತ್ರಗಳಾಗಿ ಕಾಣಿಸಿಕೊಂಡರು. ಅವರ ಅಸ್ತಿತ್ವ, ಹೃದಯವಂತಿಕೆ ಮತ್ತು ಪ್ರತಿಭೆಗಳನ್ನು ಸಮಾಜವು ಗುರುತಿಸುವುದಿಲ್ಲ ಎಂಬ ನೋವು ಅವರಿಂದ ಕತೆಗಳನ್ನು ಬರೆಸಿತು. ಎರಡನೇ ಪೀಳಿಗೆಯ ಪ್ರಮುಖ ಲೇಖಕಿಯರಾದ ತ್ರಿವೇಣಿ, ಅನುಪಮಾ ನಿರಂಜನ ಮೊದಲಾದವರ ಕತೆ ಕಾದಂಬರಿಗಳು ಹೆಣ್ಣಿನ ಅಸ್ಮಿತೆಯ ಅರಿವು, ಆಕೆಯ ಕ್ರಿಯಾಶಕ್ತಿಯನ್ನು ಅನಾವರಣಗೊಳಿಸುವುದರೊಂದಿಗೆ ವೈಜ್ಞಾನಿಕ ತಿಳಿವು ಮತ್ತು ಮನೋವೈಜ್ಞಾನಿಕ ಒಳನೋಟಗಳನ್ನು ಒದಗಿಸಿದ್ದರಿಂದ ಅವರ ಕೃತಿಗಳಿಗೆ ಆಳ, ವಿಸ್ತಾರಗಳು ಒದಗಿದವು. ರಾಜಲಕ್ಷ್ಮಿ ಎನ್. ರಾವ್ ಮತ್ತು ವೀಣಾ ಶಾಂತೇಶ್ವರರ ಕತೆಗಳಲ್ಲಿ ಕಾಣುವ ಅಂತರ್ಮುಖತೆ, ದ್ವಂದ್ವ ಮತ್ತು ದಿಟ್ಟತನಗಳು ನವ್ಯ ಮನೋಧರ್ಮದ ಅಂಗವಾಗಿ ಬಂದವು.…

Read More

ಬೆಂಗಳೂರು : ಚೇತನ ಪ್ರತಿಷ್ಠಾನ ಧಾರವಾಡ ಮತ್ತು ಗಡಿನಾಡ ಕನ್ನಡ ಸಾಂಸ್ಕೃತಿಕ ಸೇವಾ ಸಂಸ್ಥೆ ಕಾಸರಗೋಡು ಇವರ ಜಂಟಿ ಆಶ್ರಯದಲ್ಲಿ 77ನೇ ಗಣ ರಾಜ್ಯೋತ್ಸವದ ಅಂಗವಾಗಿ ‘ಜನ ಗಣ ಮನ’ ಯಕ್ಷಗಾನ ನೃತ್ಯ, ಗೀತಗಾಯನ, ಬಹುಭಾಷಾ ಭಾವೈಕ್ಯತಾ ಕಾವ್ಯವಾಚನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 24 ಜನವರಿ 2026ರಂದು ಬೆಂಗಳೂರು ಚಾಮರಾಜಪೇಟೆ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಲೇಖಕಿ ಡಾ. ಶ್ವೇತಾ ಪ್ರಕಾಶ್ ಇವರು ಉದ್ಘಾಟಿಸಲಿದ್ದು, ಸಾಹಿತಿ ಡಾ. ಚಂದ್ರಶೇಖರ ಮಾಡಲಗೇರಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಸೇವಕ ಮಹೇಂದ್ರ ಮುಣ್ಣೋತ ಇವರ ಘನ ಉಪಸ್ಥಿತಿಯಲ್ಲಿ ಖ್ಯಾತ ಚಲನಚಿತ್ರ ಗೀತ ರಚನೆಕಾರರಾದ ಡಾ. ವಿ. ನಾಗೇಂದ್ರ ಪ್ರಸಾದ್ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಭಾರತ ಸೇವಾರತ್ನ ಪ್ರಶಸ್ತಿ, ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ, ಜ್ಞಾನ ಭಾರತಿ ರಾಷ್ಟ್ರೀಯ ಶಿಕ್ಷಕ/ಕಿ ಪ್ರಶಸ್ತಿ ಪ್ರದಾನ ನಡೆಯಲಿದೆ.

Read More

ಮಂಗಳೂರು : ಸಂದೇಶ ಸಂಸ್ಥೆಯ ಆವರಣದಲ್ಲಿ ದಿನಾಂಕ 21 ಜನವರಿ 2026ರಂದು ಕರ್ನಾಟಕ ಪ್ರಾಂತೀಯ ಕಥೋಲಿಕ ಧರ್ಮಾಧ್ಯಕ್ಷರ ಮಂಡಳಿಯ ಆಶ್ರಯದಲ್ಲಿರುವ ಸಂದೇಶ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನ (ರಿ.) ಇದರ ವತಿಯಿಂದ 35ನೇ ವರ್ಷದ ‘ಸಂದೇಶ ಪ್ರಶಸ್ತಿ 2026’ ಪ್ರದಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಿತ್ರ ನಿರ್ದೇಶಕ ಡಾ. ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ “ಇಂದು ಜಗತ್ತು ಯುದ್ಧದ ಕಾತರ, ತಲ್ಲಣದಿಂದ ತುಂಬಿದೆ. ಲಾಭಕೋರತನ, ಸಾಮ್ರಾಜ್ಯಶಾಹಿತ್ವದ ಲಾಲಸೆಗಳು ಗಾಬರಿ ಹುಟ್ಟಿಸುತ್ತಿವೆ. ಇಂತಹ ಸಂದರ್ಭದಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳು ಮಾತ್ರ ಸಮಾಜವನ್ನು ಒಗ್ಗೂಡಿಸುತ್ತವೆ. ಜಗತ್ತಿಗೆ ಸೌಹಾರ್ದ, ಸಾಮರಸ್ಯ, ಎಲ್ಲರ ಒಳಗೊಳ್ಳುವಿಕೆಯ ಜಾತ್ಯತೀತ ವ್ಯವಸ್ಥೆ ಬೇಕಾಗಿದೆ. ಅದರಿಂದ ಮಾತ್ರ ಎಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯ. 1998ರಲ್ಲಿ ಸಂದೇಶ ಪ್ರಶಸ್ತಿಯನ್ನು ‘ಅಮೇರಿಕಾ ಅಮೇರಿಕಾ’ ಸಿನೆಮಾಕ್ಕಾಗಿ ಸ್ವೀಕರಿಸಿ ತುಂಬಾ ಸಂತೋಷಗೊಂಡಿದ್ದೆ. ‘ಅಮೇರಿಕಾ ಅಮೇರಿಕಾ ಭಾಗ-2’ ಸದ್ಯದಲ್ಲಿ ಬಿಡುಗಡೆಯಾಗಲಿದ್ದು ಆ ಸಂದರ್ಭ ಪ್ರಶಸ್ತಿ ನೀಡಲು ಬಂದಿರುವುದು ಸಂತೋಷ ತಂದಿದೆ” ಎಂದು ಹೇಳಿದರು. ಮಂಗಳೂರು…

Read More

ಬಾಗಲಕೋಟೆ : ಚೇತನ ಫೌಂಡೇಶನ್ ಧಾರವಾಡ ಇದರ ವತಿಯಿಂದ ‘ಅಖಿಲ ಕರ್ನಾಟಕ ಯುವ ಸಾಹಿತ್ಯ ಸಮ್ಮೇಳನ’ವನ್ನು ದಿನಾಂಕ 25 ಜನವರಿ 2026ರಂದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದೆ. ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದ ರಮೇಶ ಕಮತಗಿ ಇವರು ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಜಾನಪದ ಕಲಾ ಪ್ರದರ್ಶನ, ಪುಸ್ತಕ ಬಿಡುಗಡೆ, ಯುವಕವಿಗಳಿಗಾಗಿ ಕವಿಗೋಷ್ಠಿ, ವಿಚಾರ ಮಂಡನೆ, ಸರ್ವಾಧ್ಯಕ್ಷರು-ಹಿರಿಯ ಲೇಖಕರ ಸಂವಾದ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ‘ವೀರ ಪುಲಿಕೇಶಿ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’, ಯುವ ಕವಿಗಳಿಗೆ, ಶಿಕ್ಷಕರಿಗೆ, ಸಮಾಜ ಸೇವಕರಿಗೆ ‘ಚಾಲುಕ್ಯ ಯುವ ಪ್ರಶಸ್ತಿ’, ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ಅತ್ಯುತ್ತಮ ಯುವ ಶಿಕ್ಷಕರಿಗೆ ‘ಆದರ್ಶ ಶಿಕ್ಷಕ ಪ್ರಶಸ್ತಿ’ ಹಾಗೂ ಹಿರಿಯ ಸಾಹಿತಿಗಳು, ಶಿಕ್ಷಕರಿಗೆ ಕಿರಿಯ ಸಾಹಿತಿ, ಶಿಕ್ಷಕರಿಂದ ಗೌರವಾರ್ಪಣೆ ಗುರುವಂದನಾ ಸಮಾರಂಭ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Read More