Author: roovari

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯ‌ರ್ ಎಜ್ಯುಕೇಶನ್ ಮಣಿಪಾಲ ಮತ್ತು ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಸ್ತುತ ವರ್ಷದಿಂದ ಕೊಡಲ್ಪಡುವ ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ದಿನಾಂಕ 13 ಫೆಬ್ರವರಿ 2026ರ ಶುಕ್ರವಾರದಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ನೂತನ ರವೀಂದ್ರ ಮಂಟಪದ ಸಭಾಂಗಣದಲ್ಲಿ ನಡೆಯಲಿದೆ. ಪ್ರಶಸ್ತಿಯನ್ನು ಪ್ರಸಿದ್ಧ ಕನ್ನಡ ಕವಿ, ಕಥೆಗಾರ, ವಿಮರ್ಶಕರಾದ ಶ್ರೀ ಸುಬ್ರಾಯ ಚೊಕ್ಕಾಡಿಯವರಿಗೆ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ಬಿ.ಎ. ವಿವೇಕ ರೈ ಇವರು ವಹಿಸಲಿದ್ದು, ಪ್ರಶಸ್ತಿಯನ್ನು ಮಾಹೆ ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಪ್ರದಾನ ಮಾಡಲಿರುವರು. ಪ್ರಶಸ್ತಿ ಪುರಸ್ಕೃತರ ಕುರಿತು ವಿಶ್ರಾಂತ ಪ್ರಾಧ್ಯಾಪಕರು, ಹಿರಿಯ ಸಾಹಿತಿಗಳೂ ಆದ ಡಾ. ನಾ. ದಾಮೋದರ ಶೆಟ್ಟಿ ಅಭಿನಂದನಾ ಭಾಷಣ ಮಾಡಲಿದ್ದು, ಪ್ರೊ. ಎಸ್.ವಿ. ಪರಮೇಶ್ವರ ಭಟ್ಟರ ಸುಪುತ್ರರಾದ ಎಸ್.ಪಿ. ರಾಮಚಂದ್ರ, ಎಂ.ಜಿ.ಎಂ. ಕಾಲೇಜಿನ…

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ದಿನಾಂಕ 07 ಫೆಬ್ರವರಿ 2026ರಂದು ‘ಕಾವ್ಯಾಂ ವ್ಹಾಳೊ-11’ ಶೀರ್ಷಿಕೆಯಡಿ ಕವಿಗೋಷ್ಠಿ ನಡೆಯಿತು. ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ‘ಕಾವ್ಯಾಂ ವ್ಹಾಳೊ’ ಎಂಬ ಕಾರ್ಯಕ್ರಮವು ಕಳೆದ ವರ್ಷ ಮಾರ್ಚ್ 8ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಧರ್ಭದಲ್ಲಿ ಮಹಿಳೆಯರಿಗಾಗಿ ಪ್ರಾರಂಭಿಸಿ, ಇಂದು ಕಾವ್ಯಾಂ ವ್ಹಾಳೊ ಇದರ 11ನೇ ಆವೃತ್ತಿಗೆ ತಲುಪಿದೆ ಎಂದು ಹರುಷ ವ್ಯಕ್ತಪಡಿಸಿ, ಕರ್ನಾಟಕ ಸರ್ಕಾರವು ಕೊಂಕಣಿ ಸಮುದಾಯಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಿ ಕೊಂಕಣಿ ಭಾಷೆಯ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಕಳೆದ ಎಪ್ರಿಲ್ ತಿಂಗಳಿನಿಂದ ಆರಂಭವಾದ ಕಾವ್ಯಾಂ- ವ್ಹಾಳೊ ಕವಿಗೋಷ್ಟಿಗಳಲ್ಲಿ ಕೊಂಕಣಿ ಕವಿಗಳು ಪ್ರಸ್ತುತ ಪಡಿಸಿದ ಕವಿತೆಗಳ ಸಂಗ್ರಹ ‘ಕಾವ್ಯಾಂ- ವ್ಹಾಳೊ’ ಭಾಗ-1 ಈ ಪುಸ್ತಕವನ್ನು ಮುದ್ರಿಸಿ, ಬಿಡುಗಡೆಗೊಳಿಸಲು ಸಂತೋಷಪಡುತ್ತಿದೆ” ಎಂದು ಹೇಳಿ ಎಲ್ಲರನ್ನೂ ಸ್ವಾಗತಿಸಿದರು. 2025 ಎಪ್ರಿಲ್ ತಿಂಗಳಿನಿಂದ…

Read More

ಕಳೆದ ಸುಮಾರು ಏಳೆಂಟು ವರ್ಷಗಳಿಂದ ಪತ್ರಿಕೆಗಳಲ್ಲೂ ನಿಯತಕಾಲಿಕಗಳಲ್ಲೂ ಜಾಲತಾಣಗಳಲ್ಲೂ ನಿರಂತರವಾಗಿ ಸಾಮಾಜಿಕ ಜಾಗೃತಿ ಮೂಡಿಸುವ ಲೇಖನಗಳನ್ನು ಬರೆಯುತ್ತಿದ್ದ ನರೇಂದ್ರ ಎಸ್. ಗಂಗೊಳ್ಳಿಯವರ ಆರನೇ ಕೃತಿ ‘ಅವಳ ನಿಟ್ಟುಸಿರು’ ಎಂಬ ಈ ಲೇಖನ ಸಂಕಲನ. ಸಾಮಾಜಿಕ ಕಾಳಜಿ ಹೊಂದಿರುವ ವಸ್ತುಗಳ ಮೇಲೆ ಬರೆದ 50 ಲೇಖನಗಳು ಇದರಲ್ಲಿವೆ. ಆಯ್ದುಕೊಂಡ ವಸ್ತುಗಳ ಬಗ್ಗೆ ಎಲ್ಲ ವಿವರಗಳನ್ನೂ ಪರಾಮರ್ಶನ ಗ್ರಂಥಗಳಿಂದಲೂ ಪತ್ರಿಕೆಗಳಿಂದಲೂ ಜಾಲತಾಣಗಳಿಂದಲೂ ಕೂಲಂಕುಶವಾಗಿ ಅಧ್ಯಯನ ಮಾಡಿ ಚಿಂತನೆ ನಡೆಸಿ ಅಚ್ಚುಕಟ್ಟಾಗಿ ಪೋಣಿಸಿ ಬರೆದ ಈ ಲೇಖನಗಳ ಓದು ಖುಷಿಯನ್ನೂ ಮಾಹಿತಿಗಳನ್ನೂ ನೀಡುವುದರೊಂದಿಗೆ ಕುತೂಹಲವನ್ನೂ ತಣಿಸುತ್ತವೆ, ಚಿಂತನೆಗೂ ಹಚ್ಚುತ್ತವೆ. ಮುಖ್ಯವಾಗಿ ಇಲ್ಲಿನ ಕೆಲವು ಲೇಖನಗಳು ನರೇಂದ್ರ ಅವರ ಅದ್ಭುತ ಸ್ತ್ರೀ ಸಂವೇದನೆಗೆ ಸಾಕ್ಷಿಯಾಗಿ ನಿಲ್ಲುತ್ತವೆ. ‘ನಮ್ಮನೆ ಮಗಳು ವೇಶ್ಯಾವೃತ್ತಿ ಅಯ್ದುಕೊಂಡರೆ’ ಅನ್ನುವ ಲೇಖನದಲ್ಲಿ ಪುರುಷರು ಇತಿಹಾಸ ಕಾಲದಿಂದಲೂ ತಮ್ಮ ಲೈಂಗಿಕ ಹಸಿವನ್ನು ತೀರಿಸಿಕೊಳ್ಳಲು ಹೆಣ್ಣನ್ನು ಹೇಗೆ ಸಾಧನವಾಗಿ ಬಳಸಿಕೊಳ್ಳುತ್ತ ಬಂದರು ಮತ್ತು ಬಳಸಿದ ವಸ್ತುವನ್ನು ಎಸೆಯುವಂತೆ ಸಮಾಜದಲ್ಲಿ ಅವಳಿಗೆ ಯಾವುದೇ ಗೌರವ ಕೊಡದೆ ವೇಶ್ಯೆಯೆಂದು ಕರೆದು…

Read More

ಮೈಸೂರು : ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ವತಿಯಿಂದ ದಿನಾಂಕ 07 ಫೆಬ್ರವರಿ 2026ರಂದು ಮೈಸೂರಿನ ಕಲಾಮಂದಿರದಲ್ಲಿ ‘ಆಯಾಮೋತ್ಸವ – ಸಂಗೀತ, ನೃತ್ಯ, ನಾಟಕಗಳ ಉತ್ಸವ’ ಕಾರ್ಯಕ್ರಮವು ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎಸ್. ಮಲ್ಲಿಕಾರ್ಜುನ ಸ್ವಾಮಿ “ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಸಂಗೀತ, ನೃತ್ಯ, ನಾಟಕ ಸಾಹಿತ್ಯದ ಮೂಲಕ ಬೆಳವಣಿಗೆಗೆ ಸಹಕಾರಿಯಾಗಿರುವ ವಿದುಷಿ ಡಾ. ಶಾಂಭವಿ ಸ್ವಾಮಿ ಮತ್ತು ಆಯಾಮ ಸಂಸ್ಥೆಗೆ ಅಭಿನಂದನೆಗಳು. ಮಕ್ಕಳನ್ನೇ ಕೇಂದ್ರೀಕರಿಸಿ ನಡೆಯುತ್ತಿರುವ ಈ ಚಟುವಟಿಕೆಗಳು ಅವರಿಗಾಗಿ ಮಾತ್ರವಲ್ಲ ನಮಗಾಗಿಯೂ ಕೂಡ. ನಾವು ಯಾವ ಸಮಾಜವನ್ನು ನಮ್ಮಿಂದ ಪೂರ್ಣವಾಗಿ ಸುಸಂಸ್ಕೃತವಾಗಿ ಇರಲು ಆಗೋದಿಲ್ಲವೋ ಆ ಸಮಾಜದ ಭವಿಷ್ಯವನ್ನ ಇಂಥ ಕಲೆಗಳ ಮೂಲಕ ಪರಿಪೂರ್ಣವಾದ ಸಮಾಜವಾಗಿ ಎಲ್ಲರಿಗೂ ಶಾಂತಿ ಮತ್ತು ಸಹನೆ ಸಹಬಾಳ್ವೆಯನ್ನ ಒದಗಿಸುವಂತಹ ಸಮಾಜವನ್ನು ಕಟ್ಟುವ ದಿಕ್ಕಿನಲ್ಲಿ ಈ ಮಕ್ಕಳ ಮನಸ್ಸುಗಳು ತುಂಬ ನಿರ್ಮಲವಾಗಿ ಸಮಾಜದೊಂದಿಗೆ ಬೆರೆತುಕೊಳ್ಳಿ ಅಂತ ಆಶಿಸುತ್ತೇನೆ” ಎಂದರು. ಕನ್ನಡ ಮತ್ತು…

Read More

ಕಾಸರಗೋಡು : ಮಠಗಾರ್ ಕುಟುಂಬದ ತರವಾಡು ಮನೆ ಅಡ್ಕಸ್ಥಳ ಇದರ ಶ್ರೀ ಮಹಮ್ಮಾಯಿ ದೇವಸ್ಥಾನ ಮತ್ತು ಪರಿವಾರ ದೈವಗಳ ಆರಾಧನಾ ಕ್ಷೇತ್ರದ 10ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ ದಿನಾಂಕ 08 ಫೆಬ್ರವರಿ 2026ರಂದು ಅಗರಿ ಭಾಗವತ ವಿರಚಿತ ‘ಶಾಂಭವಿ ವಿಲಾಸ’ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಗಣೇಶ್ ಭಟ್ ಹೊಸ ಮೂಲೆ, ಚೆಂಡೆ ಮದ್ದಳೆಗಳಲ್ಲಿ ನಾರಾಯಣ ಶರ್ಮ ಕಾಟುಕುಕ್ಕೆ, ಮುರಳೀಧರ ಕಲ್ಲೂರಾಯ ಸಹಕರಿಸಿದರು. ಮುಮ್ಮೇಳದಲ್ಲಿ ಭಾರತಿ ರೈ (ಕೌಶಿಕೆ), ಹರಿಣಾಕ್ಷಿ ಜೆ. ಶೆಟ್ಟಿ (ಶುಂಭ), ಶುಭಾ ಗಣೇಶ್ (ರಕ್ತಬೀಜ), ಶುಭಾ ಅಡಿಗ (ಚಂಡ), ಕಿಶೋರಿ ದುಗ್ಗಪ್ಪ ನಡುಗಲ್ಲು (ಮುಂಡ) ಸಹಕರಿಸಿದರು. ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ವಂದಿಸಿದರು. ಶ್ರೀಮತಿ ಕುಸುಮ ಹಾಗೂ ಶ್ರೀ ವಸಂತ ನಾಯ್ಕ ದಂಪತಿಗಳು ಕಲಾವಿದರಿಗೆ ಶ್ರೀ ದೇವರ ಪ್ರಸಾದವನ್ನಿತ್ತು ಗೌರವಿಸಿದರು.

Read More

ಮಂಗಳೂರು : ಆಕೃತಿ ಆಶಯ ಪಬ್ಲಿಕೇಶನ್ಸ್ ಇದರ ವತಿಯಿಂದ ಪ್ರೊ. ಬಿ.ಎ. ವಿವೇಕ ರೈ ಇವರ ಕೃತಿ ಬಿಡುಗಡೆ ಸರಣಿ -1 ಕಾರ್ಯಕ್ರಮವನ್ನು ದಿನಾಂಕ 11 ಫೆಬ್ರವರಿ 2026ರಂದು ಪೂರ್ವಾಹ್ನ 11-30 ಗಂಟೆಗೆ ಮಂಗಳೂರು ಸುಲ್ತಾನ್ ಬತ್ತೇರಿ ರಸ್ತೆಯಲ್ಲಿರುವ ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ ಗೊಳ್ಳಲಿದ್ದು, ಚಂದ್ರಕಲಾ ನಂದಾವರ, ಡಾ. ಕೆ. ಚಿನ್ನಪ್ಪ ಗೌಡ, ಡಾ. ನಾ. ದಾಮೋದರ ಶೆಟ್ಟಿ, ಪ್ರೊ. ಬಿ.ಎ. ವಿವೇಕ ರೈ, ಮಂಗಳೂರಿನ ಮಾಧ್ಯಮ ಮಿತ್ರರು ಭಾಗವಹಿಸಲಿದ್ದಾರೆ.

Read More

ಉಪ್ಪಿನಂಗಡಿ : ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಅಧ್ಯಕ್ಷ ಡಾ. ಶ್ರೀಪತಿ ಕಲ್ಲುರಾಯ ಇವರ ಪ್ರಾಯೋಜಕತ್ವದಲ್ಲಿ ದಿನಾಂಕ 07 ಫೆಬ್ರವರಿ 2026ರಂದು ನಡೆದ ತಾಳಮದ್ದಳೆ ಕೂಟದಲ್ಲಿ ‘ಜಾಂಬವತಿ ಕಲ್ಯಾಣ’ ತಾಳಮದ್ದಳೆ ಜರಗಿತು. ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶಬರಾಯ ಉಡುಪಿ, ಚೆಂಡೆ ಮದ್ದಳೆಯಲ್ಲಿ ಪದ್ಯಾಣ ಜಯರಾಮ್ ಭಟ್ ಮತ್ತು ಮುರಳೀಧರ ಕಲ್ಲೂರಾಯ, ಹಾಗೂ ಮುಮ್ಮೇಳದಲ್ಲಿ ಬಲರಾಮನಾಗಿ ಡಾ. ಶ್ರೀಪತಿ ಕಲ್ಲೂರಾಯ, ಶ್ರೀ ಕೃಷ್ಣನಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಜಾಂಬವಂತನಾಗಿ ಗಣರಾಜ ಕುಂಬಳೆ, ಜಾಂಬವತಿಯಾಗಿ ರಾಜಶ್ರೀ ಶಬರಾಯ ಉಡುಪಿ ಭಾಗವಹಿಸಿದ್ದರು. ದೇವಳದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ, ಕಾರ್ಯದರ್ಶಿ ಪ್ರಶಾಂತ ಪೈ, ಸ್ವರ್ಣಲತಾ, ಮನೋಹರ ಶೆಟ್ಟಿ ಮತ್ತು ಸೇವಾ ಟ್ರಸ್ಟಿನ ಪದಾಧಿಕಾರಿಗಳು ಕಲಾವಿದರನ್ನು ಗೌರವಿಸಿದರು. ಭಾಸ್ಕರ ಬಾರ್ಯ ಸ್ವಾಗತಿಸಿ, ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು.

Read More

ಉಪ್ಪಿನಂಗಡಿ : ಕಾಂಚನ ಶ್ರೀ ಲಕ್ಷ್ಮೀನಾರಾಯಣ ಮ್ಯೂಸಿಕ್‌ ಅಕಾಡೆಮಿ ಟ್ರಸ್ಟ್‌ ವತಿಯಿಂದ ಸ್ಥಾಪಕಗುರು, ಸಂಗೀತರತ್ನ ಋಷಿಗಂಧರ್ವ ವಿ. ಕಾಂಚನ ವೆಂಕಟಸುಬ್ರಹ್ಮಣ್ಯಂ ಅವರ 105ನೇ ಜನ್ಮ ವರ್ಷ ಮಹೋತ್ಸವದ ಅಂಗವಾಗಿ ಕಾಂಚನದಲ್ಲಿ ನಿರ್ಮಾಣವಾಗಿರುವ ನೂತನ ಸಂಗೀತ ಕಲಾಶಾಲೆ, ಸಭಾಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆಯ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ದಿನಾಂಕ 05 ಫೆಬ್ರವರಿ 2026ರಂದು ಪ್ರಾರಂಭವಾಗಿದ್ದು, 72ನೇ ವರ್ಷದ ‘ಕಾಂಚನೋತ್ಸವ 2026’ ಚಾಲನೆ ಪಡೆಯಿತು. ಕಾಂಚನ ಶ್ರೀ ಲಕ್ಷ್ಮೀನಾರಾಯಣ ಸಂಗೀತ ಕಲಾಶಾಲೆಯಲ್ಲಿ ವೇದ ಬ್ರಹ್ಮ ನಾರಾಯಣ ಬಡಿಕಿಲ್ಲಾಯರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. 72ನೇ ವರ್ಷದ ಶ್ರೀ ತ್ಯಾಗರಾಜ, ಶ್ರೀ ಪುರಂದರದಾಸರ ಆರಾಧನ ಮಹೋತ್ಸವ, ಸ್ಥಾಪಕ ಗುರು, ಸಂಗೀತ ರತ್ನ ಕಾಂಚನ ವೆಂಕಟಸುಬ್ರಮಣ್ಯಂ ಹಾಗೂ ಕರ್ನಾಟಕ ಕಲಾಶ್ರೀ ಕಾಂಚನ ವಿ. ಸುಬ್ಬರತ್ನಂರವರ ಪುಣ್ಯ ಸ್ಮರಣೆಯ ಅಂಗವಾಗಿ ಆರಂಭ ಸ್ತುತಿಯಲ್ಲಿ ಸಂವಿತ್ ಆರ್.ಎಸ್. ಅವರು ತಬಲ ಹಾಗೂ ಕೆ.ಜೆ. ಋತ ವಯಲಿನ್ ನುಡಿಸಿದರು. ಸ್ವರ ಲಯ ಲಹರಿಯಲ್ಲಿ ಕೆ.ಜೆ. ಋತ, ಅಭಯ್…

Read More

ಕುಂದಾಪುರ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ಶ್ರೀಮತಿ ಜಿ. ಸರೋಜಮ್ಮ ಪ್ರಾಯೋಜಿತ ‘ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮ, ಪುಂಡಲೀಕ ಹಾಲಂಬಿ ಪ್ರಶಸ್ತಿ ಪ್ರದಾನ ಸಮಾರಂಭವು ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಮಂದಿರದಲ್ಲಿ ದಿನಾಂಕ 14 ಫೆಬ್ರವರಿ 2026ರಂದು ಸಂಜೆ 5-00 ಗಂಟೆಗೆ ನಡೆಯಲಿದೆ. ಯಕ್ಷಗಾನ ಕಲಾವಿದ ಹಳ್ಳಾಡಿ ಜಯರಾಮ್ ಶೆಟ್ಟಿ ಇವರಿಗೆ ಈ ಬಾರಿಯ ಪುಂಡಲೀಕ ಹಾಲಂಬಿ ಪ್ರಶಸ್ತಿ ಹಾಗೂ 25 ಸಾವಿರ ರೂ. ನಗದನ್ನು ನೀಡಿ ಗೌರವಿಸಲಾಗುತ್ತಿದೆ. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಲಿದ್ದು, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಡಾ. ಉಮೇಶ ಪುತ್ರನ್ ಆಶಯ ನುಡಿಗಳನ್ನಾಡಲಿದ್ದು, ಎ.ಎಸ್.ಎನ್. ಹೆಬ್ಬಾರ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಶ್ರೀಮತಿ ಜಿ. ಸರೋಜಮ್ಮ ಪುಂಡಲೀಕ ಹಾಲಂಬಿ, ನರೇಂದ್ರ ಕುಮಾರ್ ಕೋಟಿ, ಕೆ. ಸೀತಾರಾಮ ನಕ್ಕತ್ತಾಯ, ಪ್ರಾಂಶುಪಾಲ ಜಿ. ರಾಮಕೃಷ್ಣ ಉಪಸ್ಥಿತರಿರುವರು.

Read More

ಮೈಸೂರು : ಗಾಂಧಿವಾದಿ, ಪತ್ರಕರ್ತ ಕೆ.ವಿ. ಶ್ರೀನಿವಾಸನ್ (81) ಅವರು ಹುಣಸೂರಿನ ಕಲ್ಕುಣಿಕೆ ಗ್ರಾಮದಲ್ಲಿ ವಯೋಸಹಜ ಅನಾರೋಗ್ಯದಿಂದ ದಿನಾಂಕ 06 ಫೆಬ್ರವರಿ 2026ರಂದು ನಿಧನರಾದರು. ಅವಿವಾಹಿತರಾಗಿದ್ದ ಅವರು, ವೃತ್ತಿ ಬದ್ಧತೆ, ಕಿರಿಯರಿಗೆ ನೀಡುತ್ತಿದ್ದ ಪ್ರೋತ್ಸಾಹದ ಕಾರಣಕ್ಕೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಶ್ರೀನಿವಾಸನ್ ‘ಬ್ರದರ್’ ಎಂದೇ ಹೆಸರಾಗಿದ್ದರು. 1944ರ ಮಾರ್ಚ್ 6ರಂದು ಜನಿಸಿದ ಅವರು ಎಂ.ಎ. ಪತ್ರಿಕೋದ್ಯಮ ಹಾಗೂ ಎಲ್‌ಎಲ್‌ಬಿ ಪದವಿ ಪಡೆದಿದ್ದರು. ಭಾರತೀಯ ಹಾಗೂ ಪಾಶ್ಚಾತ್ಯ ತತ್ವಶಾಸ್ತ್ರದ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದರು. ಗಾಂಧಿ ತತ್ವದಲ್ಲಿ ಅಪಾರ ಒಲವಿದ್ದ ಅವರು, ಗಾಂಧಿ ಅಧ್ಯಯನದಲ್ಲಿ ಡಿಪ್ಲೊಮಾ ಮಾಡಿದ್ದರು. ‘ಪತ್ರಿಕೋದ್ಯಮಿಯಾಗಿ ಗಾಂಧೀಜಿ’ ಮತ್ತು ‘ಸಹ ಬರಹಗಾರರ ಜಾಹೀರಾತು’ ಕೃತಿಗಳನ್ನು ಬರೆದಿದ್ದಾರೆ. ‘ನವಧ್ವನಿ’ ಕನ್ನಡ ವಾರಪತ್ರಿಕೆಯನ್ನು ಸ್ಥಾಪಿಸಿದ್ದರು. ಹಲವು ಪತ್ರಕರ್ತರನ್ನು ರೂಪಿಸಿದ ‘ಮಹಾನಂದಿ’ ಪತ್ರಿಕೆಯ ಸಹಾಯಕ ಸಂಪಾದಕರಾಗಿದ್ದರು. ‘ಸಂಕ್ರಾಂತಿ’, ‘ಅಶೋಕ’, ‘ವಿಜಯ’, ‘ವರ್ತಮಾನ’ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಆಕಾಶವಾಣಿಯ ವರದಿಗಾರರಾಗಿದ್ದರು. 70ರ ದಶಕದಲ್ಲಿ ಜಯಪ್ರಕಾಶ ನಾರಾಯಣ ಮುನ್ನಡೆಸಿದ ಚಳವಳಿಗಳಲ್ಲಿ ಪಾಲ್ಗೊಂಡಿದ್ದರು. ಹಿಂದಿ ವಿರೋಧಿ ಚಳವಳಿಯಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ್ದರು.…

Read More