Author: roovari

ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯದ ನೂತನ ಪಯಣಕ್ಕೆ ಚಾಲನೆಯ ರೂಪದಲ್ಲಿ ಕನ್ನಡ ಸಾಹಿತ್ಯ ಸಂಘವನ್ನು ರಚಿಸಿ ದಿನಾಂಕ 05 ನವೆಂಬರ್ 2025ರಂದು ಉದ್ಘಾಟಿಸಲಾಯಿತು. ಕನ್ನಡ ಸಾಹಿತ್ಯ ಸಂಘದ ಉದ್ಘಾಟನೆಗೆ ಆಗಮಿಸಿದ ವಿದ್ವಾಂಸರು, ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಪಾದೆಕಲ್ಲು ವಿಷ್ಣು ಭಟ್ಟರು ಮಾತನಾಡಿ “ಕನ್ನಡವನ್ನು ಉಳಿಸಿ ಬೆಳೆಸಬೇಕಾದ್ದು ಕನ್ನಡಿಗರಾದ ನಮ್ಮ ಕರ್ತವ್ಯ. ಸಾಹಿತ್ಯದ ಓದುವಿಕೆ ಮತ್ತು ಬರೆಯುವಿಕೆ ನಮ್ಮ ಅನುಭವಗಳನ್ನು ಹೆಚ್ಚಿಸುವ ಪ್ರಕ್ರಿಯೆ. ಆದ್ದರಿಂದ ಸಾಹಿತ್ಯವನ್ನು ಓದುವ ಆಸಕ್ತಿ ಬೆಳೆಸಿಕೊಳ್ಳಿ. ಭಾಷೆಯ ಬಗೆಗೆ ಹೆಚ್ಚಿನ ಗಮನ ಕೊಡಿ. ವಾಕ್ಯಗಳ ರಚನೆಯಲ್ಲಿ ತೊಡಗಿ, ಬಳಿಕ ಸಾಹಿತ್ಯ ರಚನೆಗೂ ಮುಂದಾಗಬೇಕು ಎನ್ನುತ್ತಾ ಕನ್ನಡ ಸಾಹಿತ್ಯದ ಕಾಲಘಟ್ಟಗಳು, ನಿಘಂಟುಗಳು, ಗದ್ಯ – ಪದ್ಯ ಕವಿಗಳ ವಿವರ, ಕವಿರಾಜಮಾರ್ಗ, ತಾಳೆಗರಿಗಳ ಉಲ್ಲೇಖದೊಂದಿಗೆ ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಕುರಿತು ವಿವರಿಸಿದರು. ಕ್ರಿಯೇಟಿವ್ ಕನ್ನಡ ಸಾಹಿತ್ಯ ಸಂಘದ ಮೂಲಕ ಇನ್ನಷ್ಟು ಸೃಜನಾತ್ಮಕ ಸಾಹಿತ್ಯ ಕೃತಿಗಳು ಮೂಡಿ ಬರಲಿ” ಎಂದು ಹಾರೈಸಿದರು. ಕ್ರಿಯೇಟಿವ್…

Read More

ಮಂಗಳೂರು : ಅಡ್ಯಾರ್‌ನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ದಿನಾಂಕ 31 ಅಕ್ಟೋಬರ್ 2025ರಂದು ಸಂಸ್ಕಾರ ಭಾರತೀ ಇದರ ವತಿಯಿಂದ ‘ದೀಪಾವಳಿ ಕುಟುಂಬ ಮಿಲನ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಾಗ್ಮಿ ದಾಮೋದರ ಶರ್ಮ “ಭಾರತ ಬೆಳಕಿನ ದೇಶ ಜ್ಞಾನ ಪರಂಪರೆಯಿಂದ ಈ ಬೆಳಕು ಲಭ್ಯವಾಗಿದೆ. ಪ್ರಕೃತಿಯನ್ನು ಪೂಜಿಸುವ ಭಾರತೀಯರು ಭಾವನೆಗಳೊಂದಿಗೆ ಬದುಕನ್ನು ಕಟ್ಟಿಕೊಂಡವರು. ಭಾರತದ ವೈಭವಪೂರ್ಣ ಕಥಾನಕಗಳು, ನಮ್ಮಲ್ಲಿನ ಉನ್ನತವಾದ ಹಾಗೂ ಮೌಲ್ಯಯುತ ಸಂಸ್ಕಾರಗಳು ಈಗಿನ ಮಕ್ಕಳಿಗೆ ಸ್ಫೂರ್ತಿ- ಪ್ರೇರಣೆಯಾಗಬೇಕು. ಈ ನಿಟ್ಟಿನಲ್ಲಿ ಸಂಸ್ಕಾರ ಭಾರತೀ ಸಂಘಟನೆಯ ದೀಪಾವಳಿ ಕುಟುಂಬ ಮಿಲನ ಕಾರ್ಯಕ್ರಮ ಸರ್ವರಿಗೂ ಮಾದರಿ” ಎಂದು ಹೇಳಿದರು. ಸಂಸ್ಕಾರ ಭಾರತೀ ಮಂಗಳೂರು ನಗರ ಅಧ್ಯಕ್ಷ ಪುರುಷೋತ್ತಮ ಕೆ. ಭಂಡಾರಿ ಅಧ್ಯಕ್ಷತೆ ವಹಿಸಿದ್ದು, “ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ದಶಕಗಳ ಕಾಲದಿಂದ ದೀಪಾವಳಿ ಹಬ್ಬವನ್ನು ಎಲ್ಲರನ್ನು ಸೇರಿಸಿಕೊಂಡು ಬಹಳ ಅರ್ಥ ಪೂರ್ಣ ಕಾರ್ಯಕ್ರಮ ಸಂಸ್ಕಾರ ಭಾರತೀ ಮಾಡಿಕೊಂಡು ಬರುತ್ತಿದೆ. ಕಲಾವಿದರಿಗೆ ಪುರಸ್ಕಾರ, ಹಬ್ಬದೂಟ ಹೀಗೆ ಎಲ್ಲವನ್ನು ಶಿಸ್ತು ಬದ್ಧವಾಗಿ…

Read More

ಮಂಗಳೂರು : ಕಲ್ಕೂರ ಪ್ರತಿಷ್ಠಾನ ಮಂಗಳೂರು ಮತ್ತು ಕರ್ಣಾಟಕ ಯಕ್ಷಧಾಮ ಮಂಗಳೂರು ಇದರ ವತಿಯಿಂದ ಕನಕ ಜಯಂತಿ ಪ್ರಯುಕ್ತ ಏಕವ್ಯಕ್ತಿ ನಾಟಕ ಮತ್ತು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 08 ನವೆಂಬರ್ 2025ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಡಾನ್ ಬಾಸ್ಕೋ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಖ್ಯಾತ ಕಲಾವಿದ ಯಕ್ಷಚಂದ್ರಿಕೆ ಶಶಿಕಾಂತ ಶೆಟ್ಟಿ ಕಾರ್ಕಳ ಇವರ ನೂತನ ಏಕವ್ಯಕ್ತಿ ನಾಟಕ ‘ಸ್ತ್ರೀ ಗೃಹಂ ರಕ್ಷತಿ’ ರಂಗ ಪ್ರದರ್ಶನ ಹಾಗೂ ಕುಂದಾಪುರ ಹಾಲಾಡಿಯ ಮಯ್ಯ ಯಕ್ಷಬಳಗ ಟ್ರಸ್ಟ್ ಇವರಿಂದ ‘ಶರಸೇತು ಬಂಧನ’ ಪೌರಾಣಿಕ ಪ್ರಸಂಗಯ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.

Read More

ಬೆಳೆಯೂರು : ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಹಾಗೂ ಕೇರಂ ನೆಮ್ಮದಿ ಕೇಂದ್ರ ಬೆಳೆಯೂರು ಇವರ ಸಹಯೋಗದಲ್ಲಿ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಅಮೋಘ ಯಕ್ಷಗಾನ ಬಯಲಾಟವನ್ನು ದಿನಾಂಕ 07 ನವೆಂಬರ್ 2025ರಂದು ಬೆಳೆಯೂರು ಇಲ್ಲಿ ಆಯೋಜಿಸಲಾಗಿದೆ. ‘ಭೀಷ್ಮ ಪ್ರತಿಜ್ಞೆ ವಿಜಯ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದ್ದು, ಹಿಮ್ಮೇಳದಲ್ಲಿ ರಾಘವೇಂದ್ರ ಆಚಾರ್ಯ ಜನ್ಸಾಲೆ, ಸೃಜನ್ ಗಣೇಶ್ ಹೆಗಡೆ, ಶಶಾಂಕ್ ಆಚಾರ್ಯ, ಗಣೇಶ್ ಗಾಂವ್ಕರ್, ಮಂಜುನಾಥ ಗುಡ್ಡೇದಿಂಬ ಹಾಗೂ ಮುಮ್ಮೇಳದಲ್ಲಿ ಸುಧೀರ ಉಪ್ಪೂರು, ಮಾಧವ ನಾಗೂರು, ಶಿವು ಶಿರಳಗಿ, ಅವಿನಾಶ್ ಕೊಪ್ಪ, ರವೀಂದ್ರ ದೇವಾಡಿಗ, ಪುರಂದರ ಮೂಡ್ಕಣಿ, ವಿದ್ಯಾಧರ ಜಲವಳ್ಳಿ, ಸಂಜಯ ಬೆಳೆಯೂರು, ಕಾರ್ತಿಕ ಜಿಟ್ಟಾಣಿ, ಸನ್ಮಯ ಭಟ್, ಮಹಾಬಲೇಶ್ವರ ಗೌಡ, ಲಕ್ಷ್ಮಣ ಮಾಸೂರು, ಜನಾರ್ದನ ಹಾರ್ಸಿಕಟ್ಟಾ ಇವರುಗಳು ಸಹಕರಿಸಲಿದ್ದಾರೆ.

Read More

ಸಾಲಿಗ್ರಾಮ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ವತಿಯಿಂದ ಕಲಾಕೇಂದ್ರದ ನಿಕಟಪೂರ್ವ ಅಧ್ಯಕ್ಷರಾದ ರಂಗಭೂಮಿ ನಿರ್ದೇಶಕರಾದ ಐರೋಡಿ ವೈಕುಂಠ ಹೆಬ್ಬಾರ್ ಸಂಸ್ಮರಣಾ ಕಾರ್ಯಕ್ರಮವು ದಿನಾಂಕ 26 ಅಕ್ಟೋಬರ್ 2025ರಂದು ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಷಿಯವರು “ವೈಕುಂಠ ಹೆಬ್ಬಾರ್ ಇವರು ಒಬ್ಬ ಸಮರ್ಥ ನಾಟಕ ನಿರ್ದೇಶಕರಾಗಿ, ಕಲಾವಿದರಾಗಿ ಮತ್ತು ಉದ್ಯಮಿಯಾಗಿ ಪ್ರಸಿದ್ದಿ ಪಡೆದವರು. ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂಧಿಯಾಗಿ ತನ್ನ ವೃತ್ತಿ ಜೀವನ ಪ್ರಾರಂಭಿಸಿದ ಹೆಬ್ಬಾರರು ಶ್ರಮದಿಂದ ಮೇಲ್ಬಂದವರು. ಔಷಧ ಅಂಗಡಿ, ಆಸ್ಪತ್ರೆ, ಮೂರು ಮಕ್ಕಳಿಗೆ ವೈದ್ಯಕೀಯ ವಿದ್ಯಾಭ್ಯಾಸ ನೀಡಿದ್ದಲ್ಲದೇ ಹಲವಾರು ಸಂಸ್ಥೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡವರು. ರೂಪರಂಗ, ಗೆಳೆಯರ ಬಳಗ ಹಂಗಳೂರು ಇವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಲವಾರು ನಾಟಕಗಳಿಗೆ ನಿರ್ದೇಶನ ನೀಡಿದವರು. ಹಂಗಾರಕಟ್ಟೆ- ಯಕ್ಷಗಾನ ಕಲಾಕೇಂದ್ರದ ಸದಸ್ಯರಾಗಿದ್ದು, ಅಧ್ಯಕ್ಷರಾಗಿ ಅದರ ಸರ್ವಾಂಗೀಣ ಪ್ರಗತಿಗೆ ಕಾರಣ ಪುರುಷರು, ಸಾರ್ವಜನಿಕವಾಗಿ ಗುರುತಿಸಿಕೊಂಡವರು. ಹಲವರ ಆರೋಗ್ಯ, ವಿದ್ಯಾಭ್ಯಾಸಗಳಿಗೆ ಆರ್ಥಿಕ ಸಹಾಯ ನೀಡುವ ಮೂಲಕ ಆಧಾರ…

Read More

ಮೈಸೂರು : ಕರ್ನಾಟಕ ಸರ್ಕಾರದ ‘ರಂಗಾಯಣ, ಮೈಸೂರು’ ಆಧುನಿಕ ರಂಗಭೂಮಿಯ ಪ್ರತಿಷ್ಠೆಯ ರಂಗಸಂಸ್ಥೆಯಾಗಿದೆ. ಈ ಸಂಸ್ಥೆಯ ಮಹತ್ವದ ಒಂದು ರಂಗ ಯೋಜನೆ ‘ಬಹುರೂಪಿ ಬಹುಭಾಷಾ ರಾಷ್ಟ್ರೀಯ ನಾಟಕೋತ್ಸವ’. ಈ ನಾಟಕೋತ್ಸವವನ್ನು ಪ್ರಸಕ್ತ ಸಾಲಿನಲ್ಲಿ 2026ರ ಜನವರಿ 12ರಿಂದ 18ರವರೆಗೆ ರಂಗಾಯಣದ ಆವರಣದಲ್ಲಿ ‘ಬಹುರೂಪಿ ಬಾಬಾ ಸಾಹೇಬ್’ ಎಂಬ ಶೀರ್ಷಿಕೆಯಡಿ ನಡೆಸಲು ಯೋಜಿಸಲಾಗಿದೆ. ಬಹುರೂಪಿ ಉತ್ಸವ ರಾಷ್ಟ್ರೀಯ ಮಟ್ಟದ ನಾಟಕೋತ್ಸವವಾಗಿದ್ದು, ಈ ಶೀರ್ಷಿಕೆಗೆ ಪೂರಕವಾದ ಅತ್ಯುತ್ತಮ ಗುಣಮಟ್ಟದ ರಂಗಪ್ರಯೋಗಗಳನ್ನು ಈ ಉತ್ಸವದಲ್ಲಿ ಪ್ರದರ್ಶಿಸಬೇಕೆಂಬುದು ರಂಗಾಯಣದ ಆಶಯ. ಈ ಹಿನ್ನೆಲೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಇವರ ಬದುಕು ಬರಹ ಹೋರಾಟಗಳನ್ನು ನೆನಪಿಸುವ ಧಮನಿತ/ಶೋಷಿತ ಸಮುದಾಯ ಕಥನಗಳ ನಾಟಕಗಳೂ ಸೇರಿದಂತೆ ಹಲವು ವೈವಿಧ್ಯಮಯ ನಾಟಕಗಳನ್ನು ಬಹುರೂಪಿಯಲ್ಲಿ ಆಯೋಜಿಸಲು ಕನ್ನಡ, ಇಂಗ್ಲೀಷ್ ಸೇರಿದಂತೆ ಭಾರತೀಯ ಇತರ ಭಾಷೆಗಳ ನಾಟಕಗಳನ್ನು ಆಹ್ವಾನಿಸಲಾಗಿದೆ ಮತ್ತು ‘ಮಕ್ಕಳ ಬಹುರೂಪಿ’ಗಾಗಿ ಮುಖ್ಯ ನಾಟಕಗಳೊಂದಿಗೆ ಮಕ್ಕಳಿಗಾಗಿ ಪ್ರದರ್ಶಿಸುವ ನಾಟಕಗಳನ್ನು ಆಹ್ವಾನಿಸುತ್ತಿದ್ದೇವೆ. ಈ ಉತ್ಸವದಲ್ಲಿ ಭಾಗವಹಿಸಲು ಇಚ್ಛೆಯುಳ್ಳ ರಂಗತಂಡಗಳು ರಂಗಾಯಣದ ವೆಬ್‌ ಸೈಟ್ rangayanamysore.karnataka.gov.in…

Read More

ಕಾಸರಗೋಡು : ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ದಿನಾಂಕ 04 ನವೆಂಬರ್ 2025ರಂದು ನಡೆದ ಶಿವರಾಮ ಕಾಸರಗೋಡು ಇವರ 60ನೇ ಜನ್ಮವರ್ಷಾಚರಣೆಯ ಸಂಭ್ರಮದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ ಶ್ರೀಯುತರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದ. ಕ. ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹರೀಶ ಸುಲಾಯ ಒಡ್ಡಂಬೆಟ್ಟು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಸುರೇಶ ನೆಗಳಗುಳಿ, ಕಾಸರಗೋಡು ಗಡಿನಾಡು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಸಿ. ಸೋಮಶೇಖರ್, ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಸ್ಥಾಪಕ ಅಧ್ಯಕ್ಷರಾದ ಕೆ.ಪಿ. ಮಂಜುನಾಥ ಸಾಗರ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು. ಬಳಿಕ ಡಾ. ಸುರೇಶ ನೆಗಳಗುಳಿ ಅಧ್ಯಕ್ಷತೆಯಲ್ಲಿ ಹದಿನಾಲ್ಕು ಭಾಷೆಗಳ ಬಹುಭಾಷಾ ಕವಿಗೋಷ್ಠಿ ಸಂಪನ್ನವಾಯಿತು.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ತಿಂಗಳ ಸರಣಿ ತಾಳಮದ್ದಳೆಯು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ದಿನಾಂಕ 03 ನವೆಂಬರ್ 2025ರಂದು ‘ಭೀಷ್ಮ ಸೇನಾಧಿಪತ್ಯ’ ಪ್ರಸಂಗದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಅಚ್ಯುತ ಪಾಂಗಣ್ಣಾಯ ಕೋಡಿಬೈಲು, ಪರೀಕ್ಷಿತ್ ಹಂದ್ರಟ್ಟ, ಸಮರ್ಥ ವಿಷ್ಣು ಈಶ್ವರಮಂಗಲ ಸಹಕರಿಸಿದರು. ಮುಮ್ಮೇಳದಲ್ಲಿ ಭೀಷ್ಮ (ಭಾಸ್ಕರ್ ಶೆಟ್ಟಿ ಸಾಲ್ಮರ ಮತ್ತು ಭಾಸ್ಕರ್ ಬಾರ್ಯ), ಕೌರವ (ಗುಡ್ಡಪ್ಪ ಬಲ್ಯ), ಕರ್ಣ (ದುಗ್ಗಪ್ಪ ನಡುಗಲ್ಲು), ದ್ರೋಣ‌ (ಲಕ್ಷ್ಮೀ ಕಾಂತ ಹೆಗ್ಡೆ ಪುತ್ತೂರು) ಸಹಕರಿಸಿದರು. ಕಾರ್ಯಕ್ರಮದ ಮೊದಲಿಗೆ ಇತ್ತೀಚೆಗೆ ಅಗಲಿದ ಯಕ್ಷಗಾನದ ಹಿರಿಯ ಕಲಾವಿದ ಶಂಭುಶರ್ಮ ವಿಟ್ಲರವರ ಕುರಿತು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಇವರ ಉಪಸ್ಥಿತಿಯಲ್ಲಿ ಭಾಸ್ಕರ್ ಶೆಟ್ಟಿ ಸಾಲ್ಮರ, ಗುಡ್ಡಪ್ಪ ಬಲ್ಯ ಹಾಗೂ ಭಾಸ್ಕರ್ ಬಾರ್ಯರು ನುಡಿನಮನ ಸಲ್ಲಿಸಿದರು. ಗೌರವ ಕಾರ್ಯದರ್ಶಿ ಟಿ. ರಂಗನಾಥ ರಾವ್ ಸ್ವಾಗತಿಸಿ, ವಂದಿಸಿದರು.

Read More

ಮಡಿಕೇರಿ : ಕನ್ನಡ ಭವನ ಕೊಡಗು ಜಿಲ್ಲಾ ಘಟಕ ಇವರ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ‘ಕಣ್ಣಾ ಮುಚ್ಚಾಲೆ..!!’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 09 ನವೆಂಬರ್ 2025ರಂದು ಬೆಳಿಗ್ಗೆ 10-30 ಗಂಟೆಗೆ ಮಡಿಕೇರಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕೊಡಗು ಕನ್ನಡ ಭವನದ ಅಧ್ಯಕ್ಷರಾದ ಬೊಳ್ಳಜಿರ ಬಿ. ಅಯ್ಯಪ್ಪ ಇವರ ಅಧ್ಯಕ್ಷತೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷರಾದ ಅನಂತಶಯನ ಬಿ.ಜಿ., ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀಮತಿ ಬಿ.ಆರ್. ಸವಿತಾ ರೈ, ಕೇಂದ್ರ ಸಮಿತಿ ಕನ್ನಡ ಭವನದ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿಗಳಾದ ಭಾರದ್ವಾಜ್ ಕೆ. ಆನಂದತೀರ್ಥ, ‘ಕಣ್ಣಾ ಮುಚ್ಚಾಲೆ’ ಪುಸ್ತಕದ ಬರಹಗಾರರಾದ ಶ್ರೀಮತಿ ರುಬೀನಾ ಎಂ.ಎ. ಮತ್ತು ಮರ್ಕರ ಪೋಸ್ಟ್ ಪತ್ರಿಕೆಯ ಸಂಪಾದಕರಾದ ಜೈರೋಸ್ ಧೋಮಸ್ ಅಲೆಕ್ಸಾಂಡರ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Read More

ಹೃಷೀಕೇಶ : ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು ಇವರ ವತಿಯಿಂದ ‘ಬನ್ನಂಜೆ 90ರ ವಿಶ್ವನಮನ’ ಸಮಾರಂಭವನ್ನು ದಿನಾಂಕ 05ರಿಂದ 11 ನವೆಂಬರ್ 2025ರಂದು ಹೃಷೀಕೇಶದ ಮುನಿ ಕಿ ರೇತಿ ಸ್ವರ್ಗಾಶ್ರಮ ವಾನಪ್ರಸ್ಥ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಬೆಳಿಗ್ಗೆ 08-00 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಸತ್ಸಂಗ, ಭಜನೆ, ಮಂತ್ರ ಮತ್ತು ಉಪನ್ಯಾಸ ನಡೆಯಲಿದೆ. ಡಾ. ಪ್ರತೋಷ ಏ.ಪಿ. ಇವರಿಂದ ‘ಮಧ್ವಸಿದ್ಧಾಂತ ವಿಜ್ಞಾನ ಬನ್ನಂಜೆ’, ಡಾ. ಗುರುರಾಜ ಕರ್ಜಗಿ ಇವರಿಂದ ದಿನಕ್ಕೊಂದು ಬನ್ನಂಜೆಯವರ ಕೃತಿ ಪರಿಚಯ ಮತ್ತು ಅಭಿಪ್ರಾಯ’, ವಿಜಯ ಸಿಂಹ ಆಚಾರ್ಯರು ‘ಆಚಾರ್ಯರ ಸರ್ವಮೂಲ ಗ್ರಂಥ’, ವಿಷ್ಣು ಸಹಸ್ರನಾಮ ಪಠನ, ಶ್ರೀ ಬ್ರಹ್ಮಣ್ಯಾಚಾರ್ಯರು ‘ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮ ವಿರಚಿತ ಶ್ರೀ ರಾಮಚಾರಿತ್ರಮಂಜರೀ’, ಶ್ರೀ ಶ್ರೀ ವಿದ್ಯಾಧೀಶ ತೀರ್ಥರು ಇವರಿಂದ ‘ಶ್ರೀಮದ್ಭಾಗವತ ಪ್ರವಚನ’, ಶ್ರೀಮತಿ ಕವಿತಾ ಉಡುಪ ಮತ್ತು ಶ್ರೀಮತಿ ಸುಮಾ ಶಾಸ್ತ್ರಿಯರಿಂದ ಹಾಡುಗಳ ಭಜನೆ ಹಾಗೂ ದಿನಾಂಕ 11 ನವೆಂಬರ್ 2025ರಂದು 4-00 ಗಂಟೆಗೆ ಶ್ರೀ ವಿದ್ಯಾಭೂಷಣರು ಮತ್ತು ತಂಡದವರಿಂದ…

Read More