Author: roovari

ಮಂಗಳೂರು : ‘ಸಾಹಿತ್ಯ, ಸಂಸ್ಕೃತಿ, ಕಲೆ, ಸಂಘಟನೆ, ಸದ್ವಿಚಾರ’ ಎಂಬ ನೆಲೆಯಲ್ಲಿ ಸಾಹಿತ್ಯ ಪುಸ್ತಕಗಳ ಪ್ರಕಟಣೆ ಮತ್ತು ದೇಶ ವಿದೇಶಗಳಲ್ಲಿ ಸಾಹಿತ್ಯ ಪರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಿರುವ ಕಲ್ಲಚ್ಚು ಪ್ರಕಾಶನ ಸಂಸ್ಥೆಯ ನೇತೃತ್ವದಲ್ಲಿ ಕರಾವಳಿಯ ಭಾಷ ಸೊಗಡಿನ ಕವಿಗೋಷ್ಠಿಯನ್ನು ದಿನಾಂಕ 17 ಡಿಸೆಂಬರ್ 2025ರಂದು ಮಂಗಳೂರಿನ ಕೊಟ್ಟಾರ ಕ್ರಾಸ್ ಇಲ್ಲಿರುವ ಟಿ.ಎಲ್.ಸಿ. ಕೆಫೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಬಹುಭಾಷಾ ಕವಿಗೋಷ್ಠಿಯಲ್ಲಿ ಏಳು ಮಂದಿ ಕವಿಗಳು ಭಾಗವಹಿಸಲಿದ್ದು, ದಕ್ಷಿಣ ಕನ್ನಡದ ಭಾಷಾ ಮತ್ತು ಸಾಂಸ್ಕೃತಿಕ ವೈವಿದ್ಯತೆಯನ್ನು ಆಚರಿಸುವ ಒಂದು ಸಂಜೆಯ ಕಾರ್ಯಕ್ರಮವಾಗಿದೆ.

Read More

ಬಡ ಕೃಷಿ ಕುಟುಂಬದಲ್ಲಿ ಜನಿಸಿದ ಪ್ರೊಫೆಸರ್ ಡಿ. ಲಿಂಗಯ್ಯನವರು ಪ್ರಸಿದ್ಧ ಜಾನಪದ ತಜ್ಞರಾಗಿ, ಪ್ರಾಧ್ಯಾಪಕರಾಗಿ, ಕವಿಗಳಾಗಿ, ಸಾಹಿತಿಗಳಾಗಿ ವೃತ್ತಿ ಜೀವನದೊಂದಿಗೆ ಸಾಹಿತ್ಯ ಕೃಷಿ ಮಾಡಿದ ಅನುಭವಿ. ಶ್ರೀರಂಗಪಟ್ಟಣ ತಾಲೂಕಿನ ಪೀ ಹಳ್ಳಿಯಲ್ಲಿ 16 ಡಿಸೆಂಬರ್ 1939ರಲ್ಲಿ ದೇವೇಗೌಡ ಮತ್ತು ಸಿದ್ದಮ್ಮ ದಂಪತಿಗಳ ಸುಪುತ್ರರಾಗಿ ಜನಿಸಿದರು. ಆರಂಭದ ಶಿಕ್ಷಣವನ್ನು ಮಂಡ್ಯದಲ್ಲಿ ಮುಗಿಸಿ 1968ರಲ್ಲಿ ಕನ್ನಡ ಎಂ.ಎ. ಪದವಿ ಪಡೆದು, ವಿಶ್ವೇಶ್ವರಯ್ಯ ಪದವಿ ಕಾಲೇಜಿಗೆ ಉಪನ್ಯಾಸಕರಾಗಿ ಸೇರಿದರು. ಹಂತ ಹಂತವಾಗಿ ಮೇಲೇರುತ್ತ ವಿದ್ಯಾರ್ಥಿಗಳಿಗೆ ಆದರ್ಶ ಶಿಕ್ಷಕರಾಗಿ, ಸಹೋದ್ಯೋಗಿಗಳಿಗೆ ಆತ್ಮೀಯರಾಗಿ ಉತ್ತಮ ಸೇವೆ ನೀಡಿ 1997ರಲ್ಲಿ ನಿವೃತ್ತಿ ಹೊಂದಿದರು. ಪ್ರೊಫೆಸರ್ ಲಿಂಗಯ್ಯನವರು ಕೇವಲ ಕಾಲೇಜು, ಸಾಹಿತ್ಯ ಮತ್ತು ತಮ್ಮ ವೈಯಕ್ತಿಕ ಜೀವನಕ್ಕೆ ತಮ್ಮನ್ನು ಸೀಮಿತಗೊಳಿಸದೆ ಸಾಮಾಜಿಕವಾಗಿಯೂ ದುಡಿದ್ದಾರೆ ಎಂಬುದು ಸಂತೋಷದ ಸಂಗತಿ. ಬೆಂಗಳೂರು ವಿಶ್ವವಿದ್ಯಾಲಯ ಅಕಾಡೆಮಿಕ್ ಕೌನ್ಸಿಲ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾಗಿ, ಸ್ನಾತಕ ಅಧ್ಯಯನ ಮಂಡಳಿಯ ಸದಸ್ಯರಾಗಿಯು ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಕರ್ನಾಟಕ ಲೇಖಕರ ಸಂಘದ ಅಧ್ಯಕ್ಷರಾಗಿ, ಬಿಎಂಶ್ರೀ ಪ್ರತಿಷ್ಠಾನದ…

Read More

ಬೆಂಗಳೂರು : ಬೆಂಗಳೂರಿನ ಹೆಸರಾಂತ ‘ನಟರಾಜರಂಗಂ ಸ್ಕೂಲ್ ಆಫ್ ಡ್ಯಾನ್ಸ್’ ನೃತ್ಯ ಸಂಸ್ಥೆಯ ದಕ್ಷ ನಾಟ್ಯಗುರು ಮತ್ತು ನುರಿತ ನೃತ್ಯಕಲಾವಿದೆ ಶ್ರೀಮತಿ ಅಭಿನಯ ನಟರಾಜನ್ ಇವರ ಬಳಿ ನೃತ್ಯ ಕಲಿಯುತ್ತಿರುವ ಬಾಲಪ್ರತಿಭೆ ಕುಮಾರಿ ಸ್ತುತಿ ಎಸ್. ಅಣ್ಣಿಗೇರಿ. ಈ ಹದಿನೈದರ ಬಾಲೆ ಡಾ. ಗಂಗೂಬಾಯಿ ಹಾನಗಲ್ ಮ್ಯೂಸಿಕ್ ಮತ್ತು ಪರ್ಫಾರ್ಮಿಂಗ್ ಆರ್ಟ್ಸ್ ಯೂನಿವರ್ಸಿಟಿಯಿಂದ ಜ್ಯೂನಿಯರ್ ಬೋರ್ಡ್ ಪರೀಕ್ಷೆಯಲ್ಲಿ ‘ಡಿಸ್ಟಿಂಕ್ಷನ್’ ಪಡೆದು ತೇರ್ಗಡೆಯಾಗಿದ್ದಾಳೆ. ಬಹುಮುಖ ಆಸಕ್ತಿಯುಳ್ಳ ಒಂಭತ್ತನೆಯ ತರಗತಿಯಲ್ಲಿ ಓದುತ್ತಿರುವ ಇವಳು, ಕರ್ನಾಟಕ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದು, ಚಿತ್ರಕಲೆ ಮತ್ತು ಫೋಟೋಗ್ರಫಿಯಲ್ಲೂ ಪರಿಶ್ರಮಿಸುತ್ತಿದ್ದಾಳೆ. ಈಗಾಗಲೇ ದೇಶಾದ್ಯಂತ ಅನೇಕ ನೃತ್ಯಪ್ರದರ್ಶನಗಳನ್ನು ನೀಡಿ ಕಲಾರಸಿಕರ ಮೆಚ್ಚುಗೆ ಪಡೆದಿದ್ದಾಳೆ. ಇದೀಗ ಇವಳು, ತನ್ನ ನೃತ್ಯಪ್ರತಿಭೆಯನ್ನು ಪ್ರದರ್ಶಿಸಲು ದಿನಾಂಕ 21 ಡಿಸೆಂಬರ್ 2025ರ ಭಾನುವಾರ ಸಂಜೆ 5-00 ಗಂಟೆಗೆ ಬೆಂಗಳೂರು ಗಾಯನ ಸಮಾಜದಲ್ಲಿ ವಿದ್ಯುಕ್ತವಾಗಿ ರಂಗಪ್ರವೇಶ ಮಾಡುತ್ತಿದ್ದಾಳೆ. ಈ ಕನ್ನಿಕೆಯ ಸುಮನೋಹರ ನೃತ್ಯಸೊಬಗನ್ನು ಕಣ್ತುಂಬಿಕೊಳ್ಳಲು ಸರ್ವರಿಗೂ ಸುಸ್ವಾಗತ. ಬೆಂಗಳೂರಿನಲ್ಲಿ ವಾಸವಾಗಿರುವ ಶ್ರೀ ಸುಧೀರ್ ಅಣ್ಣಿಗೇರಿ ಮತ್ತು ವೈಷ್ಣವಿ ಅಣ್ಣಿಗೇರಿ…

Read More

ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಸ್‌.ಡಿ.ಎಂ. ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶ್ರೀಮತಿ ವನಜಾ ಜೋಶಿಯವರ ‘ನಕ್ಕು ಬಿಡು ಬಾನಕ್ಕಿ’ ಗಜಲ್ ಸಂಕಲನದ ಬಿಡುಗಡೆ ಹಾಗೂ ಗಜಲ್ ರಚನಾ ಕಾರ್ಯಾಗಾರವು ದಿನಾಂಕ 06 ಡಿಸೆಂಬರ್ 2025ರಂದು ಉಜಿರೆಯ ಎಸ್‌.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಕರ್ಷಕವಾಗಿ ನೆರವೇರಿತು. ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರು ಅಧ್ಯಕ್ಷತೆ ವಹಿಸಿದ್ದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸಂತೋಷ್ ಆಲ್ಬರ್ಟ್ ಸಲ್ದಾನಾ ಉದ್ಘಾಟನೆ ನೆರವೇರಿಸಿದರು. ಎನ್‌.ವಿ. ಡಿಗ್ರಿ ಕಾಲೇಜು, ಕಲಬುರಗಿಯ ಗಜಲ್ ಕವಿ ಹಾಗೂ ಕನ್ನಡ ಪ್ರಾಧ್ಯಾಪಕರಾದ ಡಾ. ಮಲ್ಲಿನಾಥ ಎಸ್. ತಳವಾರ ಇವರು ಗಜಲ್ ರಚನಾ ಕಾರ್ಯಾಗಾರ ನಡೆಸಿ ಗಜಲ್ ಸಾಹಿತ್ಯದ ವಿನ್ಯಾಸ, ಪರಂಪರೆ ಮತ್ತು ತಂತ್ರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಆಳವಾದ ತಿಳಿವಳಿಕೆ ನೀಡಿದರು. ಸಾಹಿತಿ ಸುಮನಾ ಆರ್. ಹೇರ್ಳೆ ಪುಸ್ತಕ ಪರಿಚಯ ನೀಡಿ, ಕೃತಿಯ ಭಾವನಾತ್ಮಕ ವ್ಯಾಪ್ತಿ ಮತ್ತು ಸಂಗತಿಯನ್ನೆತ್ತಿಹಿಡಿದರು. ಕೃತಿಕಾರರಾದ…

Read More

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ವಾರ್ಷಿಕ 2025ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಮೊಗಸಾಲೆ ಪ್ರತಿಷ್ಠಾನದಿಂದ ನೀಡುವ ‘ಸಾಹಿತ್ಯ ಪ್ರಶಸ್ತಿ’ಯನ್ನು ಕಾಸರಗೋಡಿನ ಸಾಹಿತಿ ಶ್ರೀ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಇವರಿಗೆ, ಶ್ರೀಪತಿ ಮಂಜನಬೈಲು ದತ್ತಿನಿಧಿಯ ‘ರಂಗಸನ್ಮಾನ ಪ್ರಶಸ್ತಿ’ಯನ್ನು ಮಂಗಳೂರಿನ ರಂಗಕರ್ಮಿ ಶ್ರೀ ಶಶಿರಾಜ ಕಾವೂರು ಇವರಿಗೆ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶ್ರೀಮತಿ ಸರೋಜಿನಿ ನಾಗಪ್ಪಯ್ಯ ಈಶ್ವರ ಮಂಗಲ ಅವರ ದತ್ತಿನಿಧಿಯ ‘ಯಕ್ಷಗಾನ ಸಾಹಿತ್ಯ ಸಂಶೋಧನ ಪ್ರಶಸ್ತಿ’ಯನ್ನು ಶಿರಸಿಯ ಹಿರಿಯ ಸಾಹಿತಿ ಶ್ರೀ ಅಶೋಕ ಹಾಸ್ಯಗಾರ ಇವರಿಗೆ, ಸಂಘದ ‘ವಾರ್ಷಿಕ ಗೌರವ ಪ್ರಶಸ್ತಿ’ಯನ್ನು ಶ್ರೀ ಹುಲಿಮನೆ ಜಯರಾಮ ಹೆಗಡೆ ಮಿಜಾರು ಇವರಿಗೆ ನೀಡಲು ನಿರ್ಣಯಿಸಲಾಗಿದೆ. ಇವುಗಳಲ್ಲಿ ದತ್ತಿ ಪ್ರಶಸ್ತಿಗಳ ಮೌಲ್ಯ ರೂಪಾಯಿ ಹತ್ತು ಸಾವಿರವಾದರೆ ವಾರ್ಷಿಕ ಗೌರವ ಪ್ರಶಸ್ತಿಯು ರೂಪಾಯಿ ಐದು ಸಾವಿರದಾಗಿದ್ದು ಪ್ರತೀ ಪ್ರಶಸ್ತಿಗಳು ತಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿವೆ. ಇವುಗಳ ಪ್ರದಾನ ಸಮಾರಂಭವನ್ನು ದಿನಾಂಕ 28 ಡಿಸೆಂಬರ್ 2025ರಂದು ಕಾಂತಾವರ ಕನ್ನಡ ಭವನದಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ…

Read More

ಉಡುಪಿ : ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಕರಕುಶಲ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿ. ಪುತ್ತೂರು ಇವರ ನೇತೃತ್ವದಲ್ಲಿ 25 ದಿನಗಳ ಅವಧಿಯ ಅಳಿವಿನಂಚಿನ ಕಾವಿ ಕಲೆಯ ವಿನ್ಯಾಸಗಳ ಅಭಿವೃದ್ಧಿ ಕಾರ್ಯಾಗಾರವು ದಿನಾಂಕ 14 ಡಿಸೆಂಬರ್ 2025ರಂದು ಹಾವಂಜೆಯ ಭಾಸ ಗ್ಯಾಲರಿ ಮತ್ತು ಸ್ಟುಡಿಯೋದಲ್ಲಿ ಸಂಪನ್ನಗೊಂಡಿತು. ಹಾವಂಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಆಶಾ ಪೂಜಾರಿಯವರು “ನಮ್ಮ ಗ್ರಾಮದಲ್ಲಿ ಈ ರೀತಿಯ ಕಾರ್ಯಾಗಾರಗಳು ನಡೆಯುತ್ತಿರುವುದು ಬಹಳ ಸಂತೋಷದ ವಿಷಯ, ಕಾವಿ ಕಲಾವಿದ ಜನಾರ್ದನ ಹಾವಂಜೆ ನಮ್ಮೂರಿನ ಹೆಮ್ಮೆ. ಸ್ಥಳೀಯ ಕರಕುಶಲಕರ್ಮಿಗಳು ಇನ್ನಷ್ಟು ಈ ಕಲಾಪ್ರಕಾರದಲ್ಲಿ ತೊಡಗಿಸಿಕೊಂಡು ನಮ್ಮ ಗ್ರಾಮದ ಅಭಿವೃದ್ಧಿಯೂ ಆಗಲಿ” ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಕರಕುಶಲ ಅಭಿವೃದ್ಧಿ ಮಂಡಲಿಯ ಸಹ ನಿರ್ದೇಶಕಿ ರಾಜೇಶ್ವರಿಯವರು “ಗ್ರಾಮೀಣ ಭಾಗದಲ್ಲಿನ ಕುಶಲಕರ್ಮಿಗಳಿಗೆ ಈ ರೀತಿಯ ವಿನ್ಯಾಸಗಳನ್ನು ಬೆಳೆಸುವ ವಿವಿಧ ರೀತಿಯ ಕಾರ್ಯಕ್ರಮಗಳು ದಿನಭತ್ಯೆಯೊಂದಿಗೆ ನಡೆಸಲ್ಪಡುತ್ತದೆ. ಅಲ್ಲದೇ ಮಾರುಕಟ್ಟೆಗೆ ಸಹಕಾರ ನೀಡುವ ಪ್ರದರ್ಶನಗಳೂ ಇಲಾಖೆಯಲ್ಲಿದೆ. ಪ್ರಸ್ತುತ ಅಳಿವಿನಂಚಿನ ಕಾವಿ ಕಲೆಯನ್ನು…

Read More

ಮೈಸೂರು : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಹಕಾರದೊಂದಿಗೆ ನಿರಂತರ ಫೌಂಡೇಶನ್ (ರಿ.) ಮೈಸೂರು ಆಯೋಜಿಸಿರುವ ‘ನಿರಂತರ ರಂಗ ಉತ್ಸವ – 2025’ವು ದಿನಾಂಕ 17ರಿಂದ 21 ಡಿಸೆಂಬರ್ 2025 ರವರೆಗೆ ಮೈಸೂರಿನ ಕಿರು ರಂಗಮಂದಿರದಲ್ಲಿ ಪ್ರಸ್ತುತಗೊಳ್ಳಲಿದೆ. ವೇದಿಕೆ ಕಾರ್ಯಕ್ರಮಗಳ ವಿವರ : ದಿನಾಂಕ 17 ಡಿಸೆಂಬರ್ 2025ರಂದು ಸಂಜೆ ಗಂಟೆ 5-30ಕ್ಕೆ ಹಾಸನದ ಮಾನವ ತಂಡದಿಂದ ‘ಜಡೆ ಕೋಲಾಟ’, ಸಂಜೆ ಗಂಟೆ 6-15ಕ್ಕೆ ಉದ್ಘಾಟನಾ ಸಮಾರಂಭ ನಮ್ಮೊಂದಿಗೆ ಕವಿ ಹಾಗೂ ಸಂಸ್ಕೃತಿ ಚಿಂತಕರಾದ ಎಸ್.ಜಿ. ಸಿದ್ದರಾಮಯ್ಯ, ಹಿರಿಯ ರಂಗಕರ್ಮಿ ರಾಮೇಶ್ವರಿ ವರ್ಮ ಮತ್ತು ನಿರಂತರದ ಪ್ರಸಾದ್ ಕುಂದೂರು ಭಾಗವಹಿಸಲಿದ್ದಾರೆ. ಸಂಜೆ ಗಂಟೆ 7-00ಕ್ಕೆ ರಾಜೇಶ್ವರಿ ತೇಜಸ್ವಿಯವರ ಆತ್ಮಕಥೆ ಆಧಾರಿತ ನಾಟಕ ‘ನನ್ನ ತೇಜಸ್ವಿ’ ನಾಟಕವನ್ನು ಬೆಂಗಳೂರಿನ ಕಲಾಮಾಧ್ಯಮ ತಂಡ ಪ್ರಸ್ತುತಪಡಿಸಲಿದೆ. ಸಂಗೀತ : ಭರತ್ ಬಿ.ಜೆ. ರಂಗರೂಪ, ವಿನ್ಯಾಸ ಮತ್ತು ನಿರ್ದೇಶನ : ಬಿ.ಎಂ. ಗಿರಿರಾಜ. ದಿನಾಂಕ 18 ಡಿಸೆಂಬರ್ 2025ರಂದು ಸಂಜೆ ಗಂಟೆ 5-30ಕ್ಕೆ ದೇವಾನಂದ್…

Read More

ಗಿಡದಲ್ಲರಳಿದ ಗೊಂಚಲು ಗೊಂಚಲು ಗುಲಾಬಿ ಕಂಡಾಗ ಮರಳುತ್ತದೆ ನನ್ನ ಮನ ಬಾಲ್ಯದತ್ತ ಆಹಾ ಅದೆಂತಹ ಅದ್ಭುತ ಬಾಲ್ಯ ಒಂದೇ ಮನೆಯಲ್ಲಿ ಹತ್ತಾರು ಮಕ್ಕಳು ದೊಡ್ಡಪ್ಪನ ಮಕ್ಕಳು ಚಿಕ್ಕಪ್ಪನ ಮಕ್ಕಳು ಎಲ್ಲರೂ ಒಟ್ಟಾಗಿ ಅಂಗಳದಲ್ಲಿ ಆಡುವಾಗ ಏನು ಮೋಜು ಏನು ಮೋಜು ಕಿತ್ತಾಟ ಕಚ್ಚಾಟ ಮತ್ತೆ ಒಟ್ಟುಗೂಡಿ ಆಟ ಬಾಲ್ಯವೆಂದರೆ ಹಾಗೇ ಅಲ್ಲವೇ ಅವ ಹಿರಿಯವ ಇವ ಕಿರಿಯವ ಎಂಬ ಭಾವ ಮೂಡುವುದೇ ಇಲ್ಲ ಅವ ಅಣ್ಣನ ಮಗ ಇವ ತಮ್ಮನ ಮಗ ಎಂಬ ಭೇದವಿಲ್ಲ ನಾವೆಲ್ಲರೂ ಒಂದು ಎಂಬ ಸದ್ಭಾವ ನಾವು ಕಚ್ಚಾಡಿದರೆ ನಾವು ಜಗಳಾಡಿದರೆ ಎಂದೂ ಬರುತ್ತಿರಲಿಲ್ಲ ನಮ್ಮ ಮಧ್ಯೆ ಹಿರಿಯರು ನಾವು ನಾವೇ ಜಗಳಾಡಿ ಮತ್ತೆ ಮರೆತು ಒಂದುಗೂಡಿ ಆಡುತ್ತಿದ್ದ ಆ ದಿನಗಳು ಎಷ್ಟು ಚೆಂದ ಅಂದು ನೋವಿರಲಿಲ್ಲ ಎಂಬ ತೀರ್ಮಾನ ಬೇಡ ಹೂವಿನ ಮುಂದೆ ಮುಳ್ಳಿರುವಂತೆ ನಮಗೂ ಹಲವು ನೋವುಗಳಿದ್ದರೂ ಅರಳಿದ ಗುಲಾಬಿಗಳಂತೆ ನೋವ ಮರೆತು ಸದಾ ನಗುತ್ತಿದ್ದೆವು ಆ ದಿನಗಳು ಆ ಬದುಕು ಎಷ್ಟು ಚಂದ…

Read More

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ ಮತ್ತು ಜನವರಿ ಮಾಹೆಯಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರಮಾಣ ವರ್ಷ ನಡೆಸುವ ಈ ಸಮ್ಮೇಳನ ನಮ್ಮ ಜಿಲ್ಲೆಯಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ನಿರಂತರ ನಡೆಸಿಕೊಂಡು ಬಂದಿರುವ ಹೆಗ್ಗಳಿಕೆ ನಮ್ಮದು ಎಂದು ಅಧ್ಯಕ್ಷರಾದ ಡಿ. ಮಂಜುನಾಥ ತಿಳಿಸಿದ್ದಾರೆ. ಡಿಸೆಂಬರ್ ಕೊನೆಯ ವಾರದಲ್ಲಿ ಎಲ್ಲಾ ತಾಲೂಕು ಮಟ್ಟದಲ್ಲಿ ಸಮ್ಮೇಳನ ಏರ್ಪಡಿಸಲಾಗುವುದು. ಜನವರಿ ಮೊದಲ ವಾರ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ. ನಂತರ ರಾಜ್ಯ ಮಟ್ಟದ ಸಮ್ಮೇಳನ ಏರ್ಪಡಿಸಲಾಗುವುದು. ಜಿಲ್ಲೆಯ ವ್ಯಾಪ್ತಿಯಲ್ಲಿರುವ ಪ್ರಾಥಮಿಕ, ಪ್ರೌಢಶಾಲಾ, ಪದವಿ ಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸ್ವಂತ ಕವನ, ಕಥೆ, ಪ್ರಬಂಧ ಬರೆಯುತ್ತಿದ್ದರೆ, ಆಶುಭಾಷಣದಲ್ಲಿ ಆಸಕ್ತಿಯಿದ್ದರೆ ನಿಮಗೆ ಸಾಮೂಹಿಕ ವೇದಿಕೆ ಕಲ್ಪಿಸುವ ಉದ್ದೇಶದಿಂದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿಯಿರುವ ವಿದ್ಯಾರ್ಥಿಗಳು ತಮ್ಮ…

Read More

ಮಂಗಳೂರು : ತುಳು ಕೂಟ ಕುಡ್ಲ ಮತ್ತು ಸರಯೂ ಬಾಲ ಯಕ್ಷವೃಂದ ಕೋಡಿಕಲ್ ಇವರ ವತಿಯಿಂದ ನಡೆಯುತ್ತಿರುವ ಮರೋಳಿ ಬಿ. ದಾಮೋದರ ನಿಸರ್ಗ ಸಂಸ್ಮರಣೆ-ತುಳು ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭವು ದಿನಾಂಕ 13 ಡಿಸೆಂಬರ್ 2025ರಂದು ಮಂಗಳೂರಿನ ಕಂಕನಾಡಿ ಗರೋಡಿ ದೇವಿ ಬೈದೆತಿ ಬಾವಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಕ.ಸಾ.ಪ.ದ ಮಾಜಿ ರಾಜ್ಯಾಧ್ಯಕ್ಷರೂ, ಧರ್ಮದರ್ಶಿಗಳೂ ಆದ ಡಾ. ಪುನರೂರು “ತುಳುವಿಗಾಗಿ ಈ ಹಿಂದೆಯೂ ಅನೇಕ ಹೋರಾಟಗಳು ನಡೆದಿವೆ. ಹಳ್ಳಿಯಿಂದ ದಿಲ್ಲಿಯವರೆಗೂ ಸಾಗಿದ್ದೇವೆ. ಅದರಲ್ಲೆಲ್ಲಾ ದಾಮೋದರ ನಿಸರ್ಗರೂ ಇದ್ದರು. ಇಂದು ಅವರ ನೆನಪಿನಲ್ಲಿ ಸಂಸ್ಮರಣಾ ಸಪ್ತಾಹ ನಡೆಸಿರುವುದು ಸಾಮಯಿಕವೇ ಆಗಿದೆ. ತುಂಬು ಅಭಿಮಾನದ ಕಾರ್ಯಕ್ರಮವಿದು” ಎಂದು ಹೇಳಿದರು. ತುಳು ಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗರು ಸಪ್ತಾಹವನ್ನು ಯಶಸ್ವಿಗೊಳಿಸಿದವರನ್ನು ಅಭಿನಂದಿಸುತ್ತಾ ನಿವೃತ್ತ ಬ್ಯಾಂಕ್ ಉದ್ಯೋಗಿ ರೊ. ಜೆ.ವಿ. ಶೆಟ್ಟರನ್ನು ತುಳು ಕೂಟ ಹಾಗೂ ಸರಯೂ ಬಳಗದ ವತಿಯಿಂದ ಸನ್ಮಾನಿಸಿದರು. ಹಿರಿಯರಾದ ಶ್ರೀ ಗಂಗಾಧರ ಶಾಂತಿ, ಯೋಗೀಶ್ ಶೆಟ್ಟಿ ಜೆಪ್ಪು,…

Read More