Author: roovari

ಬೆಂಗಳೂರು : ದೃಶ್ಯ (ರಿ.) ರಂಗತಂಡ ಪ್ರಯೋಗಿಸುತ್ತಿರುವ ದಾಕ್ಷಾಯಿಣಿ ಭಟ್ ಎ. ಇವರ ರಂಗರೂಪ, ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ರಕ್ತ ಧ್ವಜ’ ನಾಟಕ ಪ್ರದರ್ಶನವನ್ನು ದಿನಾಂಕ 22 ಜನವರಿ 2026ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವು ಬಸವರಾಜ್ ಕಟ್ಟೀಮನಿಯವರ ‘ರಕ್ತ ಧ್ವಜ’ ಕತೆ ಹಾಗೂ ಆರ್. ಬಸವರಾಜ್ ರವರ ‘ಈಸೂರಿನ ಚಿರಂಜೀವಿಗಳು’ ಕಾದಂಬರಿ ಆಧಾರಿತ ಕಥೆಯಾಗಿದೆ. ಇದೇ ಸಂದರ್ಭದಲ್ಲಿ ಪಿಚ್ಚಳ್ಳಿ ಶ್ರೀನಿವಾಸ್ ಇವರು ಸಿಜಿಕೆ ಕುರಿತು ಮಾತನಾಡಲಿದ್ದಾರೆ.

Read More

ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ದಿನಾಂಕ 20 ಜನವರಿ 2026ರಂದು ಮಾಸಿಕ ತಾಳಮದ್ದಲೆ ಕಾಸರಗೋಡು ಸುಬ್ರಾಯ ಪಂಡಿತ ವಿರಚಿತ ‘ರಾವಣ ವಧೆ’ ಎಂಬ ಆಖ್ಯಾನದೊಂದಿಗೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್, ಕುಸುಮಾಕರ ಆಚಾರ್ಯ ಹಳೆನೇರಂಕಿ ಹಾಗೂ ಚೆಂಡೆ ಮದ್ದಲೆಗಳಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಲೀಧರ ಕಲ್ಲೂರಾಯ, ಅನೀಶ ಕೃಷ್ಣ ಪುಣಚ ಭಾಗವಹಿಸಿದರು. ಶ್ರೀರಾಮನಾಗಿ ಗುಡ್ಡಪ್ಪ ಬಲ್ಯ, ರಾವಣನಾಗಿ ಗುಂಡ್ಯಡ್ಕ ಈಶ್ವರ ಭಟ್, ಮಂಡೋದರಿಯಾಗಿ ವಿ.ಕೆ. ಶರ್ಮ ಅಳಿಕೆ, ವಿಭೀಷಣನಾಗಿ ದುಗ್ಗಪ್ಪ ಯನ್, ಮಾತಲಿಯಾಗಿ ಬಡೆಕ್ಕಿಲ ಚಂದ್ರಶೇಖರ ಭಟ್ ಪಾತ್ರಪೋಷಣೆ ಮಾಡಿದರು. ಭಾಸ್ಕರ ಬಾರ್ಯರ ಸಂಯೋಜನೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ದೇವಳದ ಸಂಚಾಲಕ ಮೖರ್ಕಳ ವೆಂಕಟಕೃಷ್ಣ ಭಟ್ ಪ್ರಾಯೋಜಿಸಿದರು. ದುಗ್ಗಪ್ಪ ಯನ್. ಸ್ವಾಗತಿಸಿ, ಭಾಸ್ಕರ ಬಾರ್ಯ ವಂದಿಸಿದರು.

Read More

ಕಾಸರಗೋಡು : ಕಾಸರಗೋಡಿನ ನುಳ್ಳಿಪ್ಪಾಡಿ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ಕಾಸರಗೋಡಿನ ಕನ್ನಡ ಭವನದ ರಜತ ಸಂಭ್ರಮ, ನಾಡು-ನುಡಿಹಬ್ಬ ಸಾಧಕರಿಗೆ ವಿವಿಧ ಪ್ರಶಸ್ತಿ ಪ್ರದಾನ, ಕೃತಿ ಬಿಡುಗಡೆ ಸಮಾರಂಭವನ್ನು ದಿನಾಂಕ 18 ಜನವರಿ 2026ರಂದು ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್‌ ಸ್ಥಾಪಕ ಸಂಚಾಲಕ ಡಾ. ಎಂ.ಜಿ.ಆರ್. ಅರಸ್ “ಗಡಿನಾಡಿನಲ್ಲಿ ಕನ್ನಡ ಕಟ್ಟುವ ಕಾಯಕದಲ್ಲಿ ನಿರತರಾದವರನ್ನು ಗುರುತಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ಇಲ್ಲಿನ ಕನ್ನಡಿಗರ ನೊಂದ ಮನಸ್ಸಿಗೆ ಸಾಂತ್ವನ ಲಭಿಸಲು ಸಾಧ್ಯ. ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿಗೆ ಧಕ್ಕೆಯಾಗುವುದನ್ನು ಸಹಿಸಲಾಗದು. ಕನ್ನಡ ಭಾಷೆಯ ಮೇಲಿನ ದಬ್ಬಾಳಿಕೆ ವಿರುದ್ಧ ಹೋರಾಡುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಬೇಕು. ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ಕೆ. ವಾಮನ್ ರಾವ್ ಬೇಕಲ್ ಇವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿರುವುದು ಸಂತಸದ ವಿಚಾರ” ಎಂದು ಹೇಳಿದರು. ಕನ್ನಡ…

Read More

ಮಂಗಳೂರು : ದಶಮಾನದ ಹೊತ್ತಿನಲ್ಲಿರುವ ಕೋಡಿಕಲ್ ನ ವಿಪ್ರ ವೇದಿಕೆಯ ಅಷ್ಟಮ ಕಾರ್ಯಕ್ರಮವು ದಿನಾಂಕ 18 ಜನವರಿ 2026ರಂದು ನಡೆಯಿತು. ದೀಪ ಬೆಳಗಿಸಿ ಉದ್ವಾಟನಾ ಮಾತುಗಳನ್ನಾಡಿ ಸಂಘಟನೆಯ ಅಗತ್ಯವನ್ನು ವಿವರಿಸಿದ ಖ್ಯಾತ ಉದ್ಯಮಿ ಶಿಕ್ಷಣ ತಜ್ಞ ಶ್ರೀ ಅನೂಪ್ ರಾವ್ ಬಾಗ್ಲೋಡಿಯವರು “ಸಮಾಜ ಒಗ್ಗೂಡಿ ಬರುವ ಎಲ್ಲರನ್ನೂ ಸ್ವೀಕರಿಸುತ್ತದೆ. ಸಮಾಜವು ಅದನ್ನೇ ಬಯಸಿ ಸಜ್ಜನರನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಬಲಿಷ್ಠವಾಗುತ್ತದೆ. ನಾವೂ ಸಮಾಜಕ್ಕಾಗಿ ದುಡಿಯುವ ಹುಮ್ಮಸ್ಸು ಬರುತ್ತದೆ. ಬಹಳವನ್ನು ಸಮಾಜದಿಂದ ಪಡೆದು ಒಂದಂಶವನ್ನು ಸಮಾಜದ ಏಳ್ಗೆಗಾಗಿ ನೀಡುವ ಸದ್ಭುದ್ದಿ ಎಲ್ಲರಲ್ಲೂ ಮೂಡಲಿ” ಎಂದು ಹೇಳಿದರು. ದುರ್ಗಾದಾಸ್‌ ಕಟೀಲ್, ವಿಶ್ವೇಶ್ವರ ಭಟ್, ವಿ.ಎಸ್. ಹೆಬ್ಬಾರ್, ಗೋಪಾಲಕೃಷ್ಣ ರಾವ್, ವಿದ್ಯಾ ಗಣೇಶ ರಾವ್, ಪ್ರಭಾವತಿ ಮಡಿ, ಉಷಾ ಎ. ಬಾಗ್ಲೋಡಿ, ಅನಂತ ಪದ್ಮನಾಭ ಉಪಾಧ್ಯಾಯ, ಉದ್ಯಮಿ ಗಿರೀಶ್ ರಾವ್ ಕೆ. ಹಾಗೂ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು. ಶ್ರೀಮತಿ ರೂಪಕಲಾ ರಾಮಚಂದ್ರ ಭಟ್ ನಿರ್ವಹಿಸಿದರೆ, ಕಿಶೋರ್ ಕೃಷ್ಣ ವಂದಿಸಿದರು. ಬಳಿಕ ಕೆ. ಗೌರವ್ ರಾವ್ ನೇತೃತ್ವದಲ್ಲಿ…

Read More

ಆಲಮೇಲ : ವಿಜಯಪುರ ತಾಲೂಕಿನ ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ‌ ನೀಡುವ 2026ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದೆ. ಮಾಜಿ ಸಚಿವ ದಿ. ಎಂ.ಸಿ. ಮನಗೂಳಿ ಸ್ಮರಣಾರ್ಥ ನೀಡಲಾಗುವ ‘ಕರುನಾಡಿನ ಅತ್ಯುತ್ತಮ ಪ್ರಕಾಶನ’ ಪ್ರಶಸ್ತಿಯನ್ನು ಬೆಂಗಳೂರಿನ ‘ಅಂಕಿತ ಪುಸ್ತಕ ಪ್ರಕಾಶನ’ ಆಯ್ಕೆ‌ಯಾಗಿದ್ದು, ರೂ. ಇಪ್ಪತ್ತೈದು ಸಾವಿರ ನಗದು, ಪ್ರಶಸ್ತಿಫಲಕ ಒಳಗೊಂಡಿದೆ. ಅಂಕಿತ ಪ್ರಕಾಶನವು ಕಳೆದ 30 ವರ್ಷಗಳಲ್ಲಿ ಸಾವಿರ ಪುಸ್ತಕಗಳನ್ನು ಪ್ರಕಟಿಸಿದ್ದು ಬಹುದೊಡ್ಡ ಸಾಧನೆಯನ್ನು ಗಮನಿಸಿ‌ ಈ ಪ್ರಶಸ್ತಿ ನೀಡಲಾಗಿದೆ. ‘ಬೆರಗು ಸಮಗ್ರ ಸಾಹಿತ್ಯ ಪ್ರಶಸ್ತಿ’ಗೆ ಕಲಬುರಗಿಯ ಹಿರಿಯ‌ ಸಾಹಿತಿ ಡಾ. ಶ್ರೀಶೈಲ‌ ನಾಗರಾಳ ಇವರಿಗೆ ನೀಡಲು ತೀರ್ಮಾನಿಸಿದ್ದು ಪ್ರಶಸ್ತಿಯು ಹತ್ತು ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದ್ದು, ಫೆಬ್ರವರಿ ಮೊದಲ ವಾರದದಲ್ಲಿ ಕಡಣಿಯಲ್ಲಿ ನಡೆಯುವ 9ನೇ ವರ್ಷದ ಸಂಭ್ರಮ ಹಾಗೂ 25 ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷ್ಮಿ ಆರ್. ಕತ್ತಿ ತಿಳಿಸಿದ್ದಾರೆ.

Read More

ಬೆಳಗಾವಿ : ಸಹೃದಯ ಸಾಹಿತ್ಯ ಪ್ರತಿಷ್ಠಾನವು ಅತ್ಯುತ್ತಮ ಕವನ ಹಾಗೂ ಗಜಲ್ ಸಂಕಲನಗಳಿಗೆ ರಾಜ್ಯಮಟ್ಟದ ‘ಸಹೃದಯ ಕಾವ್ಯ ಪ್ರಶಸ್ತಿ’ ನೀಡಲು ನಿರ್ಧರಿಸಿದ್ದು, ಲೇಖಕರಿಂದ ಕವನ ಸಂಕಲನ ಆಹ್ವಾನಿಸಿದೆ. ಪ್ರಶಸ್ತಿಯು ರೂ. ಐದು ಸಾವಿರ ನಗದು ಬಹುಮಾನ ಒಳಗೊಂಡಿದ್ದು, 2025ರಲ್ಲಿ ಮೊದಲ ಮುದ್ರಣವಾಗಿ ಪ್ರಕಟಗೊಂಡಿರುವ ಕವನ ಹಾಗೂ ಗಜಲ್ ಸಂಕಲನಗಳ ಮೂರು ಪ್ರತಿಗಳನ್ನು ದಿನಾಂಕ 10 ಮಾರ್ಚ್ 2026ರೊಳಗಾಗಿ ಕಳುಹಿಸಲು ಕೋರಲಾಗಿದೆ. ಕೃತಿಗಳನ್ನು ನಾಗೇಶ ಜೆ. ನಾಯಕ ಅಧ್ಯಕ್ಷರು, ಸಹೃದಯ ಸಾಹಿತ್ಯ ಪ್ರತಿಷ್ಠಾನ (ರಿ.), ಅವ್ವ ಶಿವಬಸವ ನಗರ, ರಾಮಾಪುರ ಸೈಟ್, ಸವದತ್ತಿ-591126 ಬೆಳಗಾವಿ ಈ ವಿಳಾಸಕ್ಕೆ ಕಳುಹಿಸಬಹುದು ಎಂದು ತಿಳಿಸಿದೆ.

Read More

ಮಂಗಳೂರು : ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ’ಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತರಾದ ಕಾವ್ಯಶ್ರೀ ಅಜೇರು ಮತ್ತು ರಂಗಭೂಮಿ ಕಲಾವಿದರಿಗೆ ನೀಡಲಾಗುವ ‘ಶ್ರೀ ಕುಂದೇಶ್ವರ ಕಲಾಭೂಷಣ ಪ್ರಶಸ್ತಿ’ಗೆ ಈ ಬಾರಿ ನಟ ಉಮೇಶ್ ಮಿಜಾರು ಇವರುಗಳು ಆಯ್ಕೆಯಾಗಿದ್ದಾರೆ. ಶ್ರೀ ಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ ಜನವರಿ 21ರಿಂದ 23ರವರೆಗೆ ವರ್ಷಾವಧಿ ಜಾತ್ರೆ ನಡೆಯಲಿದ್ದು, ದಿನಾಂಕ 23 ಜನವರಿ 2026ರಂದು ರಾತ್ರಿ 7-00 ಗಂಟೆಯಿಂದ ರಾಮಚಂದ್ರ ಭಟ್ ಎಲ್ಲೂರು ನಿರ್ದೇಶನದಲ್ಲಿ ಕದ್ರಿ ಮಹಿಳಾ ಯಕ್ಷಕೂಟದವರಿಂದ ಮಹಿಳಾ ಯಕ್ಷಗಾನ ಮತ್ತು ನಮ್ಮ ಬೆದ್ರ ತಂಡದವರಿಂದ ‘ವೈರಲ್ ವೈಶಾಲಿ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಇದೇ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

Read More

ಉಡುಪಿ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಮಾಹೆ, ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜ್ಯುಕೇಶನ್‌ ಹಾಗೂ ಮುಳಿಯ ತಿಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಹಯೋಗದಲ್ಲಿ ದಿನಾಂಕ 17 ಜನವರಿ 2026ರಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ಗೀತಾಂಜಲಿ ಸಭಾಂಗಣದಲ್ಲಿ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿದ ವಿಶ್ರಾಂತ ಕುಲಪತಿ ಡಾ. ಬಿ.ಎ. ವಿವೇಕ ರೈ ಮಾತನಾಡಿ “ಸಂಶೋಧನೆ ಎಂದರೆ ಇರುವುದನ್ನೇ ಚಂದಮಾಡಿ ಬರೆಯುವುದಲ್ಲ, ಹಾಗೆ ಮಾಡಿದರೆ ಸಂಶೋಧನೆಯಲ್ಲಿ ಯಾವ ಸತ್ವವೂ ಇರುವುದಿಲ್ಲ. ಸಂಶೋಧನೆಯಲ್ಲಿ ಭಾಷೆಯ ಆಳಕ್ಕೆ ಇಳಿದು ಅರ್ಥದ ಅನುಸಂಧಾನ ನಡೆಯಬೇಕು. ಗೋವಿಂದ ಪೈ ಮುಳಿಯ ತಿಮ್ಮಪ್ಪಯ್ಯ, ಪಂಚಮಂಗೇಶ್‌ ರಾಯರು, ಸೇಡಿಯಾಪು ಕೃಷ್ಣಭಟ್ ಮೊದಲಾದವರು ಸಂಶೋಧನೆ ಮತ್ತು ಕಾವ್ಯ ಎರಡು ಕ್ಷೇತ್ರದಲ್ಲಿ ಸಮಾನವಾಗಿ ಕೆಲಸ ಮಾಡಿದ್ದಾರೆ. ಕರಾವಳಿ ಜಿಲ್ಲೆಯ ಲೇಖನಗಳಲ್ಲಿ ಮಣ್ಣಿನ ಸತ್ವವಿದೆ. ನೆಲದ ಮೂಲಕ ಕಾವ್ಯ ಕಟ್ಟಿದ್ದಾರೆ. ಆದರೆ ಯುವಜನತೆ ಮುಳಿಯ ತಿಮ್ಮಪ್ಪಯ್ಯ ಅವರ ಬಗ್ಗೆ…

Read More

ಮೂಡುಬಿದಿರೆ : ಆಳ್ವಾಸ್ ಕಾಲೇಜಿನ ಇಂಗ್ಲೀಷ್ ಮತ್ತು ವಿದೇಶಿ ಭಾಷೆಗಳ ವಿಭಾಗದ ಸಾಹಿತ್ಯಿಕ ಸಂಘ ‘ಮೆಟಾಫೋರಿಯಾ’ದ ಉದ್ಘಾಟನೆ ಹಾಗೂ ವಿಭಾಗದ ಹೊಸ ಪಠ್ಯಪುಸ್ತಕಗಳಾದ ಇಕ್ವಿಟಿ, ಪೆನಾಮ್ಟ್ರ, ರೆಸೊನೆನ್ಸ್ಸ್ ಬಿಡುಗಡೆ ಸಮಾರಂಭ ಕಾಲೇಜಿನ ಆಡಿಯೋ–ವಿಜುವಲ್ ಹಾಲ್‌ನಲ್ಲಿ ದಿನಾಂಕ 16 ಜನವರಿ 2026ರ ಶುಕ್ರವಾರ ನಡೆಯಿತು. ಸಾಹಿತ್ಯ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಆಳ್ವ ಫಾರ್ಮಸಿಯ ಆಡಳಿತಾಧಿಕಾರಿ ಡಾ. ಗ್ರೀಷ್ಮಾ ಆಳ್ವ “ಇಂತಹ ವೇದಿಕೆ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಒಲವನ್ನು ಉದ್ದೀಪನಗೊಳಿಸಬಲ್ಲದು. ಆತ್ಮವಿಶ್ವಾಸವು ಹುಟ್ಟಿನಿಂದ ಬರಲು ಸಾಧ್ಯವಿಲ್ಲ. ಅದು ಅಭ್ಯಾಸದಿಂದ ಬೆಳೆಸಿಕೊಳ್ಳಬಹುದಾದ ಗುಣ. ಭಾಷಣದ ವೇಳೆ ಭಯಕ್ಕೆ ಒಳಗಾಗದೆ, ಸರಳ ಹಾಗೂ ಸ್ಪಷ್ಟ ಸಂವಹನಕ್ಕೆ ಒತ್ತು ನೀಡಬೇಕು. ಸಾರ್ವಜನಿಕ ಭಾಷಣ ಕೌಶಲ್ಯದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಭಾಷಣದ ಸಂಧರ್ಭದಲ್ಲಿ ಬಾಡಿ ಲಾಂಗ್ವೇಜ್, ಪೋಶ್ಚರ್, ಉಚ್ಚಾರಣೆ, ಶಬ್ದ ಸ್ಪಷ್ಟತೆ, ಧ್ವನಿಯ ಮೇಲೆ ಹಿಡಿತ ಮತ್ತು ಶ್ರೋತೃಗಳೊಂದಿಗೆ ನೇರ ಸಂವಾದದ ಮಹತ್ವವನ್ನು ವಿವರಿಸಿದರು. ನೀವು ಮಾತನಾಡುವ ವೇಳೆಯಲ್ಲಿ ಜನರು ನಿಮ್ಮ ಮಾತಿಗೆ ಹೇಗೆ ಸ್ಫಂದಿಸುತ್ತಾರೆ ಎಂಬುದು ಮುಖ್ಯ.…

Read More

ಮಣಿಪಾಲ : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಮಣಿಪಾಲ ಸಮೀಪದ ಶಿವಳ್ಳಿ ಗ್ರಾಮ ಮೂಡು ಪೆರಂಪಳ್ಳಿಯ ಶ್ರೀ ಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಉತ್ಸವದ ಅಂಗವಾಗಿ ದಿನಾಂಕ 20 ಜನವರಿ 2026ನೇ ಮಂಗಳವಾರ ‘ದಕ್ಷ ಯಜ್ಞ’ ಎಂಬ ತಾಳಮದ್ದಳೆಯು ಶ್ರೀ ದೇವಳದ ಪ್ರಾಂಗಣದಲ್ಲಿ ನಡೆಯಿತು . ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶಬರಾಯ ಹಾಗೂ ಚೆಂಡೆ, ಮದ್ದಳೆಗಳಲ್ಲಿ ಬಸವ ಮುಂಡಾಡಿ, ರಾಮ ಬಾಯಿರಿ ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀಮತಿಯರಾದ ಶುಭಾ ಜೆ.ಸಿ. ಅಡಿಗ (ಈಶ್ವರ), ಕಿಶೋರಿ ದುಗ್ಗಪ್ಪ ನಡುಗಲ್ಲು (ದಾಕ್ಷಾಯಿಣಿ), ಹರಿಣಾಕ್ಷಿ ಜೆ. ಶೆಟ್ಟಿ (ದಕ್ಷ ), ರಾಜಶ್ರೀ ಶಬರಾಯ (ಬ್ರಾಹ್ಮಣ), ವಿದ್ಯಾಲಕ್ಷ್ಮಿಆರ್. ಭಟ್ (ದೇವೇಂದ್ರ), ಕುಮಾರಿ ಅನನ್ಯ ಮಂಡೆಚ್ಚ (ಮರೀಚಿ ಬ್ರಹ್ಮ), ಕುಮಾರಿ ಅದಿತಿ ಮಂಡೆಚ್ಚ (ವೀರಭದ್ರ) ಸಹಕರಿಸಿದರು. ಸಂಚಾಲಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ಹರಿಕೃಷ್ಣ ಶಿವತ್ತಾಯ ವಂದಿಸಿ, ರಾಜಶೇಖರ ಶಿವತ್ತಾಯ ಕಲಾವಿದರನ್ನು ಅಭಿನಂದಿಸಿದರು. ರಾಜಶ್ರೀ ಶಬರಾಯ, ನಾರಾಯಣ ಶಬರಾಯ ದಂಪತಿಗಳು ಮತ್ತು ಸಹೋದರಿಯರು…

Read More