Author: roovari

ಮಂಗಳೂರು : ಇಂದಿರಾ ಪ್ರಿಯದರ್ಶಿನಿ ಉದ್ಯಾನವನದಲ್ಲಿ ದಿನಾಂಕ 22 ನವೆಂಬರ್ 2025ರಂದು ನಡೆದ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪರವರ ಕವನಗಳ ವಾಚನ, ಗಾಯನ ಹಾಗೂ ಭಾವಾರ್ಥ ವಿಚಾರ ಸಂಕಿರಣ ಕಾರ್ಯಕ್ರಮವು ಸೌಹಾರ್ದ ಸಾಹಿತ್ಯ ವೇದಿಕೆ ಹುಬ್ಬಳ್ಳಿ ಇದರ ಮಂಗಳೂರು ಘಟಕದ ಅಡಿಯಲ್ಲಿ ಸಂಸ್ಥೆಯ ಸಂಸ್ಥಾಪಕ ಗೊಗೇರಿ ಇವರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಮಂಗಳೂರಿನ ಖ್ಯಾತ ನಾಮರೂ, ಕವಿಗಳೂ ಸೇರಿ ಜಿ.ಎಸ್.ಎಸ್.ರವರ ಇತರೇತರ ಕವನಗಳನ್ನು ಆರಿಸಿ ವಾಚಿಸಿದರು ಮತ್ತು ಸವಿವರವಾಗಿ ಭಾವಾರ್ಥ ಮಂಡನೆ ಮಾಡಿದರು. ವಿಶೇಷ ಅತಿಥಿಗಳಾಗಿ ಎನ್.ಎಸ್.ಸಿ.ಡಿ.ಎಫ್. ಮುಖ್ಯಸ್ಥ ಖ್ಯಾತ ಗಾಯಕ ಗಂಗಾಧರ ಗಾಂಧಿ, ಕಥಾಬಿಂದು ಪ್ರಕಾಶನ ಮುಖ್ಯಸ್ಥರು ಪಿ.ವಿ. ಪ್ರದೀಪ್ ಕುಮಾರ್, ಸಾಹಿತಿ ಕೊಲಚಪ್ಪೆ ಗೋವಿಂದ ಭಟ್ ರವರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇನ್ನೊರ್ವ ಅತಿಥಿಯಾಗಿ ಸ್ತ್ರೀ ಅಂದರೆ ಅಷ್ಟೇ ಸಾಕೆ ಎಂಬ ಜಿ.ಎಸ್.ಎಸ್.ರವರ ಕವನದ ವಾಚನ ಹಾಗೂ ಅರ್ಥ ಮಂಡಿಸಿದ ಮಂಗಳೂರಿನ ಮೂಲವ್ಯಾಧಿ ತಜ್ಞ ವೈದ್ಯ ಹಾಗೂ ಕಣಚೂರು ವೈದ್ಯಕೀಯ ಕಾಲೇಜಿನ ಸಲಹೆಗಾರ ಡಾ. ಸುರೇಶ ನೆಗಳಗುಳಿಯವರು ಮಾತನಾಡುತ್ತಾ ಬೇರೆಲ್ಲೂ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಘಟಕದ ವತಿಯಿಂದ ಪರಿಷತ್ತಿನ ಸಾಧಕರಿಗೆ ಸನ್ಮಾನ ಸಮಾರಂಭವು ಮಂಗಳೂರಿನ ವುಡ್ ಲ್ಯಾಂಡ್ಸ್ ಹೊಟೇಲಿನಲ್ಲಿ ದಿನಾಂಕ 21 ನವೆಂಬರ್ 2025ರಂದು ಜರಗಿತು. ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದು, ಇತ್ತೀಚೆಗೆ ‘ವಿಶುಕುಮಾರ ಪ್ರಶಸ್ತಿ’ಗೆ ಭಾಜನರಾದ ಶ್ರೀ ಬೆನೆಟ್ ಅಮ್ಮನ್ನ, ಮುಂಬಯಿ ಮಹಿಳೆಯರ ಬಗ್ಗೆ ಪುಸ್ತಕ ಬರೆದು ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಸಾಹಿತಿ ಶ್ರೀಮತಿ ಸುಖಲಾಕ್ಷಿ ವೈ. ಸುವರ್ಣ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ಹಲವು ಪ್ರಶಸ್ತಿ ಪುರಸ್ಕೃತರೂ, ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತನದ ಅಭಿಯಾನದಲ್ಲಿ ನೂರಕ್ಕಿಂತಲೂ ಅಧಿಕ ಸದಸ್ಯರನ್ನು ನೋಂದಣಿ ಮಾಡಿಸಿ ಜನಜನಿತರೂ ಆದ ಶ್ರೀ ಇಸ್ಮಾಯಿಲ್ ಬಬ್ಬುಕಟ್ಟೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಅರೆಹೊಳೆ ಸದಾಶಿವರಾಯರು ಸಾಧಕರನ್ನು ಸನ್ಮಾನಿಸಿ ಮಾತನಾಡುತ್ತಾ, “ಪರಿಷತ್ತಿನ ಒಳಗಿನ ಸಾಧಕರನ್ನೇ ಗುರುತಿಸಿ ಗೌರವಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಸಂಭ್ರಮಾಚರಣೆ ಮನೆಯೊಳಗಿನಿಂದಲೇ ಆದರೆ ಅದು ಹೆಚ್ಚು ಆಪ್ತವೂ ಅರ್ಥಪೂರ್ಣವೂ ಆಗುತ್ತದೆ. ಮತ್ತಷ್ಟು ಸಾಧಿಸಲು ಪ್ರೇರಣೆಯಾಗುತ್ತದೆ”…

Read More

ಕುಶಾಲನಗರ : ಕುಶಾಲನಗರದ ಎ.ಪಿ.ಸಿ.ಎಂ.ಎಸ್. ಕನ್ವೆನ್ಷನ್ ಸಭಾಂಗಣದಲ್ಲಿ ದಿನಾಂಕ 21 ನವೆಂಬರ್ 2025ರಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು, ಕೊಡಗು ಜಿಲ್ಲಾ ಘಟಕ, ಸಂಗಮ ಟಿ.ವಿ. ಹಾಗೂ ವಂಶಿ ನ್ಯೂಸ್ ಸಹಯೋಗದೊಂದಿಗೆ ಕನ್ನಡ ಸುವರ್ಣ ಸಂಭ್ರಮ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್ ಎಸ್. ಉಪ್ಪಾರ್ “ಕನ್ನಡ ಭಾಷೆಯನ್ನು ಬೆಳೆಸುವ ಅಗತ್ಯವಿಲ್ಲ ನಾವು ಬಳಸಿದರೆ ಸಾಕು, ನಮ್ಮ ಕನ್ನಡ ಭಾಷೆ ಅನ್ನದ ಭಾಷೆಯಾಗಬೇಕು, ಕರ್ನಾಟಕ ಸರಕಾರದ ನೇಮಕಾತಿಗಳಲ್ಲಿ ಕನ್ನಡ ಭಾಷಿಕರಿಗೆ ಆದ್ಯತೆ ಸಿಗಬೇಕು. ಜೊತೆಗೆ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದ ಮಕ್ಕಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ಮೀಸಲಾತಿ ಸಿಗಬೇಕು ಅಂದಾಗ ಮಾತ್ರ ಸರಕಾರಿ ಶಾಲೆಗಳು ಉಳಿಯಲು ಸಾಧ್ಯ.…

Read More

ಮಂಡ್ಯ : ಕರ್ನಾಟಕ ಸಂಘ ಮಂಡ್ಯ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ ಗಂಟೆ 11-00ಕ್ಕೆ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನ ವನರಂಗದಲ್ಲಿ ಆಯೋಜಿಸಲಾಗಿದೆ. ಮಂಡ್ಯದ ಎಸ್.ಬಿ. ಎಜುಕೇಷನ್ ಟ್ರಸ್ಟ್ ಇವರ ಅಧ್ಯಕ್ಷರಾದ ಡಾ. ಬಿ. ಶಿವಲಿಂಗಯ್ಯ ಇವರು ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಪ್ರಸಿದ್ಧ ಗಾಯಕರಾದ ಡಾ. ಅಪ್ಪಗೆರೆ ತಿಮ್ಮರಾಜು ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಿ ರಾಜ್ಯೋತ್ಸವ ಕುರಿತು ಮಾತನಾಡಲಿದ್ದಾರೆ. ಮಂಡ್ಯ ಜಿಲ್ಲಾ ಲಯನ್ಸ್ ಇದರ ಮಾಜಿ ರಾಜ್ಯಪಾಲರಾದ ಶ್ರೀ ಲಯನ್ ಕೆ. ದೇವೇಗೌಡ ಮತ್ತು ಪರಿಸರ ಇಂಜಿನಿಯರಿಂಗ್ ಸಂಘ ಕರ್ನಾಟಕ ಇದರ ಅಧ್ಯಕ್ಷರಾದ ಡಾ. ಕೆ.ಸಿ. ಜಯರಾಮು ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯತ್ತ) ಇದರ ಪ್ರಾಂಶುಪಾಲರಾದ ಪ್ರೊ. ಗುರುರಾಜಪ್ರಭು ಕೆ. ಇವರು ಪ್ರಶಸ್ತಿ ಪುರಸ್ಕೃತರ ಪರಿಚಯ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ.

Read More

ಸಾಗರ : ನಾಟ್ಯಶ್ರೀ ಕಲಾತಂಡ (ರಿ.) ಶಿವಮೊಗ್ಗ, ಶ್ರೀ ಗುರು ಯಕ್ಷಗಾನ ಮಂಡಲಿ ಸಾಗರ, ವಿದ್ವಾನ್ ದತ್ತಮೂರ್ತಿ ಭಟ್ ಸಂಘಟನೆಯಲ್ಲಿ ‘ಯಕ್ಷ ಷಡಾಖ್ಯಾನಮ್’ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 10-00 ಗಂಟೆಗೆ ಸಾಗರ ಎಲ್.ಬಿ. ಕಾಲೇಜ್ ದೇವರಾಜ ಅರಸು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ‘ದುಷ್ಯಂತ ಶಾಕುಂತಲಾ’, ‘ಅದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ಮಹಾತ್ಮೆ’, ‘ದ್ರುಪದ ಗರ್ವಭಂಗ’, ‘ಲವ ಕುಶ’, ‘ರಾಜ ಉಗ್ರಸೇನ’, ‘ಚಕ್ರವ್ಯೂಹ’ ಪ್ರಸಂಗದ ಯಕ್ಷಗಾನ ಪ್ರದರ್ಶನವು ಪ್ರಸಿದ್ಧ ಕಲಾವಿದರಿಂದ ಪ್ರದರ್ಶನಗೊಳ್ಳಲಿದೆ.

Read More

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕುವರೆ ದಶಕಗಳಿಂದ ಗುಣಾತ್ಮಕ ಯಕ್ಷಗಾನ ಪ್ರದರ್ಶನ, ಯಕ್ಷಗಾನ ತರಬೇತಿ, ಕಮ್ಮಟ, ಪುಸ್ತಕ ಬಿಡುಗಡೆ, ಯಕ್ಷಗಾನ ಉತ್ಸವ, ಯಕ್ಷಗಾನ ಪ್ರಾತ್ಯಕ್ಷಿಕೆ ಹೀಗೆ ಹಲವು ಚಟುವಟಿಕೆಯಿಂದಿರುವ ಯಕ್ಷದೇಗುಲ ಸಂಸ್ಥೆಯು ನಾಡಿನಾದ್ಯಂತ ಪ್ರದರ್ಶನ ನೀಡಿರುವುದಲ್ಲದೇ ಜಮ್ಮು-ಕಾಶ್ಮೀರ ಹೊರತು ಪಡಿಸಿ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಪ್ರದರ್ಶನಗಳನ್ನು ನೀಡಿದೆ. ಅಮೇರಿಕ ಮತ್ತು ಲಂಡನ್‌ನಲ್ಲಿಯೂ ಹಲವು ಪ್ರದರ್ಶನ ನೀಡಿದಲ್ಲದೆ ಇತ್ತೀಚೆಗೆ ಸಿಂಗಾಪುರ ಮತ್ತು ಮೊದಲ ಬಾರಿಗೆ ಇಸ್ರೇಲ್‌ನಲ್ಲೂ ಯಕ್ಷಗಾನದ ಕಂಪನ್ನು ಹರಿಸಿದೆ. ಯಕ್ಷದೇಗುಲವು ಪ್ರತಿ ವರ್ಷವೂ ಸಾಧಕ ಕಲಾವಿದರನ್ನು ಗುರುತಿಸಿ ಗೌರವಿಸುತ್ತಿರುವ ಯಕ್ಷದೇಗುಲ ಸಂಸ್ಥೆಯು ಈವರೆಗೆ 38 ಕಲಾವಿದರನ್ನು ಗೌರವಿಸಿದೆ. ಪ್ರಸ್ತುತ ವರ್ಷ ಸಂಸ್ಥೆಯು ಕಳೆದ ಐವತ್ತು ವರ್ಷಗಳಿಂದ ಯಕ್ಷ ಗುರುಗಳಾಗಿ ದಕ್ಷಿಣೋತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಸರು ಮಾಡಿದ, ಯಕ್ಷ ಕಲೆಯ ಕುರಿತಾದ ಸಮಗ್ರ ಜ್ಞಾನವನ್ನು ಹೊಂದಿದ, ಅನೇಕ ವಿಚಾರ ಸಂಕಿರಣ, ಕಮ್ಮಟಗಳಲ್ಲಿ ಭಾಗವಹಿಸುವ ಮೂಲಕ ಯಕ್ಷ ಕಲೆಯ ಸಮರ್ಥ ವಿದ್ವಾಂಸರಾಗಿದ್ದ ಪ್ರಾಚಾರ್ಯ ಗುಂಡ್ಮಿ ಸದಾನಂದ ಐತಾಳರನ್ನು ‘ಯಕ್ಷದೇಗುಲ 2025’ರ ಪ್ರಶಸ್ತಿಗೆ…

Read More

ಸಾಲಿಗ್ರಾಮ : ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ ಚಿಣ್ಣರ ತಂಡದವರಿಂದ ‘ದ್ರೌಪದಿ ಪ್ರತಾಪ’ ಎಂಬ ಯಕ್ಷಗಾನ ಪ್ರಸಂಗದ ಪ್ರದರ್ಶನವು ವಾರ್ಷಿಕ ದೀಪೋತ್ಸವದ ಸಂದರ್ಭದಲ್ಲಿ ದಿನಾಂಕ 19 ನವೆಂಬರ್ 2025ರಂದು ಸಾಲಿಗ್ರಾಮ ಗುರುನರಸಿಂಹ ಬಯಲು ರಂಗ ಮಂಟಪದಲ್ಲಿ ನಡೆಯಿತು. ಗುರು ನರಸಿಂಹ ದೇವಳದ ಅಧ್ಯಕ್ಷ, ಮನೋವೈದ್ಯಕೀಯ ತಜ್ಞ ಡಾ. ಕೆ.ಎಸ್. ಕಾರಂತರು ಚಿಣ್ಣರನ್ನುದ್ದೇಶಿಸಿ ಮಾತನಾಡಿ “ಚಿಣ್ಣರ ವೇಷಭೂಷಣ, ಕುಣಿತ, ಸಂಭಾಷಣೆ, ಹಾವ ಭಾವಗಳು ಪ್ರೇಕ್ಷಕರ ಮನಸೂರೆಗೊಂಡದ್ದನ್ನು ಗಮನಿಸಿದ್ದೇನೆ. ಬದುಕೆಂಬ ರಂಗಸ್ಥಳದಲ್ಲಿ ಭವಿಷ್ಯದ ಬೇರೆ ಬೇರೆ ಕಾರ್ಯಭಾರವನ್ನು ವಹಿಸಿಕೊಳ್ಳಲಿರುವ ಇವತ್ತಿನ ಪುಟಾಣಿ ವೇಷಧಾರಿಗಳು ಇಂದು ಕಟ್ಟಿಕೊಂಡಿರುವ ಗೆಜ್ಜೆ, ಹಾಕಿದ ಹೆಜ್ಜೆಗಳು ಲಯಬದ್ಧ ಭವಿಷ್ಯಕ್ಕೆ ಭದ್ರ ಬುನಾದಿಯಾಗುವಂತೆ ಶ್ರೀ ಮದ್ಯೋಗಾನಂದ ಗುರು ನರಸಿಂಹನು ಅನುಗ್ರಹಿಸಲಿ” ಎಂದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ತಂಡದ ಕಾರ್ಯದರ್ಶಿ ವೆಂಕಟೇಶ ವೈದ್ಯ ಇವರನ್ನು ಗೌರವಿಸಲಾಯಿತು. ವೇಷಧಾರಿಯಾದ ಪೂಜಾ ಆಚಾರ್ ತೆಕ್ಕಟ್ಟೆ, ಪರಿಣಿತ ವೈದ್ಯ, ರಚಿತ್ ಶೆಟ್ಟಿ, ಮನೋಮಯ್ ಕಾರಂತ್, ಸನ್ನಿಧಿ ಹೊಳ್ಳ ಉಪಸ್ಥಿತರಿದ್ದರು.

Read More

ಉಡುಪಿ : ರಾಜ್ಯದ ಹೆಸರಾಂತ ಹವ್ಯಾಸಿ ನಾಟಕ ಸಂಸ್ಥೆಯಾದ ‘ರಂಗಭೂಮಿ (ರಿ.) ಉಡುಪಿ’ ತನ್ನ 61ನೇ ವರ್ಷದಲ್ಲಿ ದಿ. ಡಾ. ಟಿ.ಎಂ.ಎ. ಪೈ, ದಿ. ಎಸ್.ಎಲ್. ನಾರಾಯಣ ಭಟ್ ಮತ್ತು ದಿ. ಮಲ್ಪೆ ಮಧ್ವರಾಜ್ ಸ್ಮಾರಕ 46ನೇ ‘ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ -2025’ಯನ್ನು ದಿನಾಂಕ 23 ನವೆಂಬರ್ 2025ರಿಂದ 04 ಡಿಸೆಂಬರ್ 2025ರವರೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿ ಮುದ್ದಣ ಮಂಟಪದಲ್ಲಿ ನಡೆಸಲಿದೆ. ದಿನಾಂಕ 23 ನವೆಂಬರ್ 2025ರಂದು ಈ ಸಮಾರಂಭದ ಉದ್ಘಾಟನೆಯನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಇವರು ನಿರ್ವಹಿಸಲಿದ್ದು, ರಂಗಭೂಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 4-00 ಗಂಟೆಗೆ ರಂಗಭೂಮಿ ಕಲಾವಿದರಿಂದ ‘ಸಂಗೀತ ಸೌರಭ’ ಪ್ರಸ್ತುತಗೊಳ್ಳಲಿದೆ. ಸಭಾ ಕಾರ್ಯಕ್ರಮದ ಬಳಿಕ ಸ್ಪರ್ಧೆಯ ಮೊದಲ ದಿನದ ನಾಟಕ ಭಾನುಪ್ರಕಾಶ್ ಎಸ್.ವಿ. ಇವರ ನಿರ್ದೇಶನದಲ್ಲಿ ತುಮಕೂರಿನ ಗುಬ್ಬಿ ವೀರಣ್ಣ ಶಿಕ್ಷಣ ಕಲಾ ತಂಡದವರಿಂದ ‘ಗೌತಮ ಬುದ್ಧ’ ನಾಟಕ ಪ್ರದರ್ಶನಗೊಳ್ಳಲಿದೆ. ದಿನಾಂಕ 24 ನವೆಂಬರ್…

Read More

ಉಡುಪಿ : ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಮತ್ತು ವಿಶ್ವಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಸಹಯೋಗದೊಂದಿಗೆ ಕವಿ ಕುರಾಡಿ ಸೀತಾರಾಮ ಅಡಿಗ ‘ಕಾವ್ಯ ಪ್ರಶಸ್ತಿ -2025’ ಪ್ರದಾನ ಸಮಾರಂಭವನ್ನು ದಿನಾಂಕ 23 ನವೆಂಬರ್ 2025ರಂದು ಸಂಜೆ 5-00 ಗಂಟೆಗೆ ಉಡುಪಿಯ ಅಂಬಲಪಾಡಿ ಭವಾನಿ ಮಂಟಪದಲ್ಲಿ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಪುಸ್ತಕ ಲೋಕಾರ್ಪಣೆ ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ನಡೆಯಲಿದೆ. ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳ್ ಇವರು ದೀಪ ಪ್ರಜ್ವಲನೆ ಮಾಡಿ ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ವಿಶ್ರಾಂತ ಉಪಸಂಪಾದಕರಾದ ಎಸ್. ನಿತ್ಯಾನಂದ ಪಡ್ರೆ ಇವರು ಕವಿ ಕುರಾಡಿ ಸೀತಾರಾಮ ಅಡಿಗ ‘ಕಾವ್ಯ ಪ್ರಶಸ್ತಿ’ಯನ್ನು ಶಶಿ ತರೀಕೆರೆ ಇವರಿಗೆ ಪ್ರದಾನ ಮಾಡಲಿದ್ದಾರೆ. ಮಂಜುಶ್ರೀ ಕೃಷ್ಣ ಭಟ್ ಇವರ ‘ಜೀವನ ಧರ್ಮ’ ಕೃತಿಯನ್ನು ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ…

Read More

ಸಾಗರ : ಶ್ರೀಮತಿ ಸುಶೀಲಾ ಆರ್. ಶೆಟ್ಟಿಗಾರ್ ಇವರು ನೂತನವಾಗಿ ನಿರ್ಮಿಸಿರುವ ‘ಶ್ರೀ ಚೌಡೇಶ್ವರಿ ಪ್ರಸಾದತ್’ ಗೃಹಪ್ರವೇಶದ ಅಂಗವಾಗಿ ‘ಯಕ್ಷ-ಗಾನ-ವೈಭವ’ ಕಾರ್ಯಕ್ರಮವನ್ನು ದಿನಾಂಕ 23 ನವೆಂಬರ್ 2025ರಂದು ಬೆಳಗ್ಗೆ 11-30 ಗಂಟೆಗೆ ಸಾಗರ ಸೊರಬ ರಸ್ತೆ ಗಮಗಶ್ರೀ ಹೊಟೇಲ್ ಹತ್ತಿರ, ಟೀಚರ್ ಲೇಔಟ್ ಎದುರು ಬಸವೇಶ್ವರ ನಗರದಲ್ಲಿ ಆಯೋಜಿಸಲಾಗಿದೆ. ಚಿನ್ಮಯ ಭಟ್ ಕಲ್ಲಡ್ಕ, ದಿನೇಶ್ ಶೆಟ್ಟಿ ಬೆಪ್ಡೆ, ಶಾಲಿನಿ ಹೆಬ್ಬಾರ್, ಕೌಶಲ್ ರಾವ್ ಪುತ್ತಿಗೆ, ಶ್ರೀಧರ ವಿಟ್ಲ, ನಿಶ್ವತ್ಥ್ ಜೋಗಿ, ಸುನಿಲ ಭಂಡಾರಿ ಮತ್ತು ಸುಜಾನ್ ಹಾಲಾಡಿ ಇವರುಗಳು ಭಾಗವಹಿಸಲಿದ್ದಾರೆ.

Read More