Author: roovari

ಮಂಗಳೂರು : ಪ್ರತಿಷ್ಠಿತ ಸಾಹಿತ್ಯೋತ್ಸವಗಳಲ್ಲಿ ಒಂದಾದ ‘ಮಂಗಳೂರು ಲಿಟ್‌ಫೆಸ್ಟ್’ನ ಎಂಟನೇ ಆವೃತ್ತಿಯು ದಿನಾಂಕ 10 ಮತ್ತು 11 ಜನವರಿ 2026ರಂದು ಮಂಗಳೂರಿನ ‘ಡಾ. ಟಿ.ಎಂ.ಎ. ಪೈ ಇಂಟರ್ ನ್ಯಾಷನಲ್ ಕನ್ವೆನ್ಷಲ್ ಸೆಂಟರ್’ನಲ್ಲಿ ನಡೆಯಲಿದೆ. ಈ ಸಲದ ಮಂಗಳೂರು ಲಿಟ್ ಫೆಸ್ಟ್ ಪ್ರಶಸ್ತಿಗೆ ಖ್ಯಾತ ಇತಿಹಾಸಕಾರ್ತಿ, ರಾಜ್ಯಸಭಾ ಸದಸ್ಯರಾದ ಪದ್ಮಶ್ರೀ ಡಾ. ಮೀನಾಕ್ಷಿ ಜೈನ್ ಆಯ್ಕೆಯಾಗಿದ್ದು, ಎರಡು ದಿನ ನಡೆಯಲಿರುವ ‘ಮಂಗಳೂರು ಲಿಟ್ ಫೆಸ್ಟ್’ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಲಿಟ್ ಫೆಸ್ಟ್ ಆಯೋಜಿಸುತ್ತಿರುವ ಭಾರತ್ ಫೌಂಡೇಷನ್ ತಿಳಿಸಿದೆ. ಸಮಾರಂಭದಲ್ಲಿ ಭಾರತದ ಬಾಹ್ಯ ಗುಪ್ತಚರ ಸಂಸ್ಥೆ ‘ರಾ’ದ ಮಾಜಿ ಮುಖ್ಯಸ್ಥರಾದ ವಿಕ್ರಂ ಸೂದ್, ವಿಶ್ವಸಂಸ್ಥೆಯಲ್ಲಿ ಭಾರತದ ಮೊದಲ ಮಹಿಳಾ ಖಾಯಂ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ಅಂಬಾಸಿಡರ್ ರುಚಿರಾ ಕಾಂಬೋಜ್, ವಿಶ್ವ ಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ ಅಂಬಾಸಿಡರ್ ಟಿ.ಎಸ್. ತಿರುಮೂರ್ತಿ, ಎ.ಎನ್.ಐ. ಸಂಪಾದಕೀಯ ನಿರ್ದೇಶಕಿ ಸ್ಮಿತಾ ಪ್ರಕಾಶ್, ಪದ್ಮಜಾ ಜೋಶಿ, ಪಿ. ಶೇಷಾದ್ರಿ, ಮಳವಿಕಾ ಅವಿನಾಶ್ ಮತ್ತು ಪಲ್ಲವಿ ರಾವ್…

Read More

ಮಂಗಳೂರು : ಕವಿತಾ ಟ್ರಸ್ಟ್ ನೀಡುವ 2025ನೇ ಸಾಲಿನ ‘ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ’ಗೆ ‘ವಲ್ಲಿ ವಗ್ಗ’ ಎಂಬ ಕಾವ್ಯನಾಮದಲ್ಲಿ ಬರೆಯುವ ವಲೇರಿಯನ್ ಡಿಸೋಜ ಇವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ರೂ.25,000/- ನಗದು, ಸ್ಮರಣಿಕೆ ಮತ್ತು ಪ್ರಮಾಣಪತ್ರವನ್ನು ಒಳಗೊಂಡಿದೆ. ದಿನಾಂಕ 11 ಜನವರಿ 2026ರಂದು ಮಂಗಳೂರಿನ ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ)ನಲ್ಲಿರುವ ಮದರ್ ತೆರೇಸಾ ಪೀಸ್‌ ಪಾರ್ಕ್‌ನಲ್ಲಿ ನಡೆಯುವ 20ನೇ ಕವಿತಾ ಫೆಸ್ತ್ ಉತ್ಸವದ ಸಂದರ್ಭದಲ್ಲಿ ಪ್ರಸಿದ್ಧ ಕೊಂಕಣಿ ಬರಹಗಾರ ಮತ್ತು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಣ್ಣ ಕಥೆಗಾರ ದಾಮೋದರ್ ಮಾವೊ ಇವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಕವಿತಾ ಟ್ರಸ್ಟಿನ ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿಯನ್ನು ಮಂಗಳೂರು ಬಳಿಯ ಕುಪ್ಪೆಪದವುವಿನ ಜೋಸೆಫ್ ಮಥಾಯಸ್ ಸ್ಥಾಪಿಸಿದ್ದು, ಇವರು ದುಬೈನ ಮೆರಿಟ್ ಫ್ರೈಟ್ ಸಿಸ್ಟಮ್ಸ್ ಎಲ್‌ಎಲ್‌ಸಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಈ ಪ್ರಶಸ್ತಿಯನ್ನು ಇಲ್ಲಿಯವರೆಗೆ ಗೋವಾ, ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕದ ಹದಿನೇಳು ಕವಿಗಳಿಗೆ ನೀಡಲಾಗಿದೆ. ವಲ್ಲಿ ವಗ್ಗ 18ನೇ ಪ್ರಶಸ್ತಿ ವಿಜೇತರಾಗಿದ್ದಾರೆ.…

Read More

ಅದೊಂದು ಸಂಭ್ರಮದ ನಲಿವಿನ ನೋಟ. ಕರ್ನಾಟಕ ಕಲಾಶ್ರೀ ಡಾ. ರಮಾ ನೇತೃತ್ವದ ‘ನಿರಂತರಂ’ನ ಯಾವ ಕಾರ್ಯಕ್ರಮವೇ ಇರಲಿ ಅಲ್ಲಿ ಸಡಗರ-ಲವಲವಿಕೆ ಇರಲೇಬೇಕು. ಅವರ ಕ್ರಿಯಾಶೀಲ- ಸ್ನೇಹಪೂರ್ಣ ವ್ಯಕ್ತಿತ್ವವೇ ಅಂಥದು. ಕಲಾವಿದರ ಬಲವಾದ ಸಂಘಟನೆ ರಮಾ ವೈಶಿಷ್ಟ್ಯ. ಅಪಾರ ಶಿಷ್ಯ ಬಾಂಧವ್ಯ, ಸ್ನೇಹಿತರ ಒಲುಮೆ- ಸಹಕಾರ- ಕಾರ್ಯಕ್ಷಮತೆ ಅವರು ಗಳಿಸಿದ ಆಸ್ತಿ. ಹಿರಿ-ಕಿರಿಯರೆನ್ನುವ ಭೇದವಿಲ್ಲದ ಪ್ರತಿಭಾ ಪೋಷಣೆ ಅವರ ಅನುಪಮ ಕಾರ್ಯಕ್ರಮಗಳ ಸದಾಶಯ. ಕಳೆದ ಮೂರು ದಶಕಗಳಿಂದ ನಿರಂತರವಾಗಿ ಸುಮನೋಹರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿರುವ ‘ನಿರಂತರಂ’ ಸಂಸ್ಥೆ, ಕಳೆದ 15 ವರುಷಗಳಿಂದ ನಾಡಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಅವರಿಗೆ ‘ಸಂಭ್ರಮ’ ಪ್ರಶಸ್ತಿ ನೀಡಿ ಗೌರವಿಸುತ್ತ ಬಂದಿರುವುದು ಅದರ ಅಸ್ಮಿತೆ. ಇದುವರೆಗೂ ಇಂಥ ನೂರಾರು ಸಾಧಕರು ಇಲ್ಲಿ ಸನ್ಮಾನಿತರಾಗಿ ಸಂಭ್ರಮಿತರಾಗಿರುವ ಸಂಗತಿ ಸರ್ವವಿದಿತ. ಪ್ರತಿವರ್ಷ ಹೊಸವರ್ಷದ ಹೊಸ್ತಿಲಲ್ಲಿ ಈ ಸಂಭ್ರಮದ ಹೊನಲು ಹರಿಯುತ್ತದೆ. ಜನವರಿ ಮೊದಲ ವಾರದಲ್ಲಿ ದೇಶ-ವಿದೇಶದ ಉದಯೋನ್ಮುಖ ನೃತ್ಯ ಕಲಾವಿದರೊಡನೆ ಹಿರಿಯ ಸಂಗೀತ-ನೃತ್ಯ ಕಲಾವಿದರಿಗೂ ವೇದಿಕೆಯನ್ನು ಒದಗಿಸುವುದು ‘ನಿರಂತರಂ’…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮುಂಬಯಿಯ ಕವಯಿತ್ರಿ ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನವು ಅವರ ಹುಟ್ಟುಹಬ್ಬದ ದಿನವಾದ ದಿನಾಂಕ 03 ಜನವರಿ 2026ರಂದು ಎಸ್‌.ಡಿ.ಎಂ. ಕಾನೂನು ಕಾಲೇಜಿನ ಸಭಾಗೃಹದಲ್ಲಿ ಬಿಡುಗಡೆಗೊಂಡಿತು. ಕವಿತಾಸಂಕಲನ ಬಿಡುಗಡೆ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ, “ಜಯಲಕ್ಷ್ಮೀ ಇವರ ಹುಟ್ಟುಹಬ್ಬದಂದೇ ಅವರ ಚೊಚ್ಚಲ ಕವಿತಾ ಸಂಕಲನ ಕನ್ನಡ ಸಾಹಿತ್ಯ ಪರಿಷತ್ತು ವೇದಿಕೆಯಿಂದ ಬಿಡುಗಡೆ ಅಗುತ್ತಿರುವುದು ಸಂತೋಷವಾದರೆ ಅವರು ಇಂದು ನಮ್ಮ ಜೊತೆಗಿಲ್ಲ ಅನ್ನುವುದಕ್ಕೆ ದುಃಖವೂ ಆಗುತ್ತಿದೆ. ಮುಂಬಯಿಯಲ್ಲಿ ಸಕ್ರಿಯ ಪತ್ರಕರ್ತರಾಗಿರುವ ಅವರ ಪತಿ ಶ್ರೀನಿವಾಸ ಜೋಕಟ್ಟೆಯವರು ನನಗೆ ಮೂರು ದಶಕಗಳಿಂದ ಪರಿಚಿತರು. ಮುಂಬಯಿಯ ಸಾಹಿತ್ಯ ವಲಯವನ್ನು ನಾವು ಮರೆಯುವಂತಿಲ್ಲ, ಅಲ್ಲಿನ ವಿವಿ ಕನ್ನಡ ವಿಭಾಗದ ವಿದ್ಯಾರ್ಥಿ ನಾನು. ಅಲ್ಲಿನವರ ನಾಡಪ್ರೇಮ ಶ್ಲಾಘನೀಯ” ಎಂದು ಹೇಳಿದರು.…

Read More

ಹೊನ್ನಾವರ : ಬಡಗುತಿಟ್ಟಿನ ಉತ್ತರ ಕನ್ನಡ ಜಿಲ್ಲೆಯ ಯಕ್ಷಗಾನ ಪರಂಪರೆಯಲ್ಲಿ ಅಚ್ಚಳಿಯದ ಗುರುತು ಮೂಡಿಸಿದ್ದ ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ಭಾಗವತ (98) ಇವರು ದಿನಾಂಕ 05 ಜನವರಿ 2026ರಂದು ನಿಧನ ರಾಗಿದ್ದಾರೆ. ಇವರ ನಿಧನದಿಂದ ಉತ್ತರ ಕನ್ನಡ ಜಿಲ್ಲೆಯ ಯಕ್ಷಗಾನ ಲೋಕಕ್ಕೆ ಅಪಾರ ನಷ್ಟ ಉಂಟಾಗಿದೆ. ಮೃತರು ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕಡತೋಕಾ ಗ್ರಾಮದವರಾಗಿದ್ದ ಲಕ್ಷ್ಮೀನಾರಾಯಣ ಭಾಗವತರು, ಯಕ್ಷಗಾನ ಲೋಕದ ಸವ್ಯಸಾಚಿ ಎಂದೇ ಖ್ಯಾತರಾಗಿದ್ದ ಮಂಜುನಾಥ ಭಾಗವತರ ಹಿರಿಯ ಸಹೋದರರಾಗಿದ್ದರು. ವೃತ್ತಿಯಿಂದ ಕಡತೋಕಾ ಸಹಕಾರಿ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅವರು, ಕಲೆ ಮತ್ತು ಬದುಕನ್ನು ಸಮನ್ವಯಗೊಳಿಸಿದ ಅಪರೂಪದ ವ್ಯಕ್ತಿತ್ವವಾಗಿದ್ದರು. ಸ್ವಲ್ಪ ಕಾಲ ವೇಷಧಾರಿಯಾಗಿ ಕೆರೆಮನೆ ಶಿವರಾಮ ಹೆಗಡೆಯವರ ಜತೆ ಪಾತ್ರ ಮಾಡಿದ್ದರು. ಕರ್ಕಿ ಮೇಳದ ಪ್ರಮುಖ ಭಾಗವತರಾಗಿ ಗುರುತಿಸಿಕೊಂಡಿದ್ದ ಅವರು, ಸುಮಾರು 50 ವರ್ಷಕ್ಕೂ ಅಧಿಕ ಕಾಲ ಯಕ್ಷಗಾನ ಭಾಗವತಿಕೆಯಲ್ಲಿಯೇ ತೊಡಗಿಸಿಕೊಂಡಿದ್ದರು. ಅನೇಕ ಶಿಷ್ಯರನ್ನು ತಯಾರಿಸಿ, ಉತ್ತರ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಯಕ್ಷಗಾನ…

Read More

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಹಿರಿಯ ಸಾಹಿತಿ ಅಬ್ದುಲ್ ರಹಿಮಾನ್ ಕುತ್ತೆತ್ತೂರು ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’ವು ದಿನಾಂಕ 04 ಜನವರಿ 2026ರಂದು ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ನಡೆಯಿತು. ಗಾಯಕ ಶರೀಫ್ ನಿರ್ಮುಂಜೆ ಧ್ಯೇಯ ಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ರಾಜೇಶ್ ಸ್ವಾಗತಿಸಿ, ಯು.ಕೆ. ಖಾಲಿದ್ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಗುರುಪುರ ಕೈಕಂಬದ ಸಬೀಲುಲ್ ಹುದಾ ಅಲ್‌ಬಿರ್ ಶಾಲಾ ವಠಾರದಿಂದ ಸಭಾಂಗಣದವರೆಗೆ ಸಮ್ಮೇಳನಾಧ್ಯಕ್ಷ ಮೆರವಣಿಗೆ ನಡೆಯಿತು. ಸ್ವಾಗತ ಸಮಿತಿ ಗೌರವಾಧ್ಯಕ್ಷ ಎಂ.ಹೆಚ್. ಮೊಹಿದಿನ್ ಅಡ್ಡೂರು ಉದ್ಘಾಟಿಸಿದರು. ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಎಚ್. ಧ್ವಜಾರೋಹಣ ನೆರವೇರಿಸಿದರು. ಸಮ್ಮೇಳನಾಧ್ಯಕ್ಷರ ಭಾಷಣ ಮೇಲೆ ಚರ್ಚಾ ಗೋಷ್ಠಿ, ಬ್ಯಾರಿ ಕವಿಗೋಷ್ಠಿ, ದಫ್ ಮತ್ತು ಬ್ಯಾರಿ ಹಾಡುಗಳ ಸಂಭ್ರಮ ನಡೆದವು. ಸಮಾರೋಪದಲ್ಲಿ ನಾನಾ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಲಾಯಿತು. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.…

Read More

ಮಂಗಳೂರು : ನೃತ್ಯ ಸುಧಾ (ರಿ.) ಮಂಗಳೂರು – ಉಡುಪಿ ಇದರ ವತಿಯಿಂದ ಇಪ್ಪತ್ತೊಂದು ಸಂವತ್ಸರಗಳ ನೃತ್ಯ ಪಯಣದ ಮೆಲುಕು ‘ನೃತ್ಯ ಸುಧಾರ್ಪಣಂ -2026’ ಕಾರ್ಯಕ್ರಮವನ್ನು ದಿನಾಂಕ 11 ಜನವರಿ 2026ರಂದು ಸಂಜೆ 4-30 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ಶಾರದಾ ಸಮೂಹ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್, ಕದ್ರಿ ನೃತ್ಯ ವಿದ್ಯಾನಿಲಯದ ನಿರ್ದೇಶಕರಾದ ಗುರು ವಿದ್ವಾನ್ ಯು.ಕೆ. ಪ್ರವೀಣ್ ರಾವ್ ಮತ್ತು ಭರತಾಂಜಲಿಯ ನಿರ್ದೇಶಕರಾದ ಗುರು ವಿದುಷಿ ಪ್ರತಿಮಾ ಶ್ರೀಧರ್ ಇವರುಗಳು ಅಭ್ಯಾಗತರಾಗಿ ಭಾಗವಹಿಸಲಿದ್ದು, ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಲಿದೆ.

Read More

ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ.) ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ.) ಶಿವಮೊಗ್ಗ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ ಇವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 08 ಜನವರಿ 2026ರಂದು ಬೆಳಗ್ಗೆ 10-30 ಗಂಟೆಗೆ ಶಿವಮೊಗ್ಗ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀಕಾಂತ ಪಿ.ಬಿ. ಇವರು ಈ ಸಮ್ಮೇಳನವನ್ನು ಉದ್ಘಾಟನೆ ಮಾಡಲಿದ್ದು, ಕುಮಾರಿ ಹಂಸಿಕಾ ಜೆ. ತಮ್ಮಡಿಹಳ್ಳಿ ಇವರು ಸಮ್ಮೇಳನ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಡಿ. ಮಂಜುನಾಥ ಇವರು ಆಶಯ ಮಾತುಗಳನ್ನಾಡಲಿದ್ದಾರೆ. ರಾಷ್ಟ್ರಕವಿ ಕುವೆಂಪು ಇವರು ಬರೆದ ‘ಬೊಮ್ಮನಹಳ್ಳಿಯ ಕಿಂದರ ಜೋಗಿ’ ಶತಮಾನದ ಸಂಭ್ರಮ ಪ್ರಯುಕ್ತ ಶಿವಮೊಗ್ಗ ಸಹ್ಯಾದ್ರಿ ರಂಗ ತರಂಗ ತಂಡದವರಿಂದ ಮಂಜುನಾಥ ತೇಜಸ್ವಿನಿ ಇವರ ನಿರ್ದೇಶನದಲ್ಲಿ ನಾಟಕ ಪ್ರದರ್ಶನ ನಡೆಯಲಿದೆ. ಕವಯತ್ರಿ ಕುಮಾರಿ ರುಕ್ಮಿಣಿ ಬಿ.ಎಲ್. ಇವರ ಅಧ್ಯಕ್ಷತೆಯಲ್ಲಿ…

Read More

ಬೆಂಗಳೂರು : ಖ್ಯಾತ ‘ನಾಟ್ಯ ಕಲಾಕ್ಷೇತ್ರ’ (ಹೆಬ್ಬಾಳ) ನೃತ್ಯಸಂಸ್ಥೆಯ ನೃತ್ಯಗುರು ಹಾಗೂ ನೃತ್ಯ ಕಲಾವಿದ ಪ್ರಶಾಂತ್ ಗೋಪಾಲ್ ಶಾಸ್ರೀ ಇವರು ಬದ್ಧತೆಗೆ ಇನ್ನೊಂದು ಹೆಸರು. ಇಂದಿನ ಪುರುಷ ನರ್ತಕರಲ್ಲಿ ಗಮನಾರ್ಹರಾಗಿರುವ ಪ್ರಶಾಂತ್ ಉತ್ತಮ ನೃತ್ಯ ಕಲಾವಿದರಾಗಿದ್ದು, ತಮ್ಮ ಶಿಷ್ಯರನ್ನೂ ಆ ದಿಸೆಯಲ್ಲಿ ಉತ್ತಮವಾಗಿ ತಯಾರು ಮಾಡುತ್ತಿರುವ ನುರಿತ ಉತ್ತಮ ಗುರುವೂ ಹೌದು. ಇಂಥವರ ಸಮರ್ಥ ಗರಡಿಯಲ್ಲಿ ರೂಪುಗೊಂಡ ನೃತ್ಯಶಿಲ್ಪ ಶ್ರೀಮತಿ ಎಂ.ಎಸ್. ಕೀರ್ತನಾ ತನ್ನ 7ನೆಯ ವಯಸ್ಸಿನಿಂದಲೇ ನೃತ್ಯ ಕಲಿಯುತ್ತ ನಾಡಿನಾದ್ಯಂತ ಅನೇಕ ಪ್ರತಿಷ್ಠಿತ ವೇದಿಕೆ- ದೇವಾಲಯಗಳಲ್ಲಿ ನೃತ್ಯ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿದ್ದಾಳೆ. ಎಂ.ಬಿ.ಎ. ಪದವೀಧರೆಯಾದ ಕೀರ್ತನಾ ಚಿತ್ರಕಲೆ, ಸಂಗೀತ, ಸಮಾಜಸೇವೆ ಇನ್ನಿತರ ಉತಮ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಬಹುಮುಖ ಪ್ರತಿಭೆಯಾದ ಇವಳು ಕಳೆದ 17 ವರ್ಷಗಳಿಂದ ಅತ್ಯಂತ ಆಸಕ್ತಿಯಿಂದ ಭರತನಾಟ್ಯಾಭ್ಯಾಸ ಮಾಡುತ್ತಿದ್ದು, ಗುರು ಪ್ರಶಾಂತ್ ಶಾಸ್ತ್ರಿಯವರ ಉನ್ನತ ಮಾರ್ಗದರ್ಶನದಲ್ಲಿ ಮುಂದುವರೆಯುತ್ತಿದ್ದಾಳೆ. ಆತ್ಮವಿಶ್ವಾಸದಿಂದ ನೃತ್ಯದ ವಿವಿಧ ಆಯಾಮಗಳನ್ನು ಮೈಗೂಡಿಸಿಕೊಂಡಿರುವ ಇವಳು ಇದೀಗ ತನ್ನ ಮೊದಲ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಸಿದ್ಧಳಾಗಿದ್ದಾಳೆ. ಕೀರ್ತನಳ ನೃತ್ಯ…

Read More

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ಕರಾವಳಿ ಉತ್ಸವ ಪ್ರಯುಕ್ತ ಮಂಗಳೂರಿನ ಶರಧಿ ಪ್ರತಿಷ್ಠಾನ ಆಯೋಜಿಸುವ, ಅಸ್ತ್ರ ಗೋಲ್ಡ್ ಮತ್ತು ಡೈಮಂಡ್ಸ್ ಸಹಕಾರದೊಂದಿಗೆ ‘ಕಲಾಪರ್ಬ’ ಚಿತ್ರ- ಶಿಲ್ಪ- ಸಾಂಸ್ಕೃತಿಕ ಮೇಳವು ಕದ್ರಿ ಪಾರ್ಕಿನಲ್ಲಿ ದಿನಾಂಕ 09ರಿಂದ 11 ಜನವರಿ 2026ರವರೆಗೆ ನಡೆಯಲಿದೆ ಎಂದು ಚಿತ್ರಕಲಾ ಚಾವಡಿಯ ಕಾರ್ಯದರ್ಶಿ ಎಸ್.ಎಂ. ಶಿವಪ್ರಕಾಶ್ ತಿಳಿಸಿದ್ದಾರೆ. ದಿನಾಂಕ 06 ಜನವರಿ 2026ರಂದು ಕದ್ರಿ ಪಾರ್ಕಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ “ಈಗಾಗಲೇ 120 ಮಳಿಗೆಗಳಲ್ಲಿ ರಾಜ್ಯಾದ್ಯಂತ ಕಲಾವಿದರ ಸಾವಿರಾರು ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ರಾಷ್ಟ್ರಮಟ್ಟದ ಛಾಯಾಚಿತ್ರ ಪ್ರದರ್ಶನ ಮಕ್ಕಳಿಗಾಗಿ ಚಿತ್ರ ಕಲಾಸ್ಪರ್ಧೆ ನಡೆಯಲಿದೆ. ಕಲಾವಿದರಿಗೆ ಉತ್ತೇಜನ ಸಿಗಬೇಕೆಂಬ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಗುತ್ತದೆ. ಈ ಉತ್ಸವದಲ್ಲಿ ದೇಶದ 120ಕ್ಕೂ ಅಧಿಕ ಕಲಾವಿದರು ಪಾಲ್ಗೊಳ್ಳಲಿದ್ದು 5,000ಕ್ಕೂ ಅಧಿಕ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ” ಎಂದು ಹೇಳಿದರು. ದಿನಾಂಕ 09 ಜನವರಿ 2026ರಂದು ಸಂಜೆ ಗಂಟೆ 5-30ಕ್ಕೆ ಕಲಾ ಪರ್ಬ ಉದ್ಘಾಟನೆ, ಮಳಿಗೆಗಳ ಉದ್ಘಾಟನೆ ಹಾಗೂ ಶಿಲ್ಪಕಲಾ ಮಳಿಗೆಗಳ ಉದ್ಘಾಟನೆ,…

Read More