Author: roovari

ಕೋಟ : ಕಾರಂತ ಪ್ರತಿಷ್ಠಾನ (ರಿ.) ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೋಟ, ಉಸಿರು ಕೋಟ ಸಹಕಾರದಲ್ಲಿ ಡಾ. ಶಿವರಾಮ ಕಾರಂತ ಜನ್ಮದಿನೋತ್ಸವ ಮತ್ತು ರಾಜ್ಯೋತ್ಸವದ ಅಂಗವಾಗಿ ದಿನಾಂಕ 02 ನವೆಂಬರ್ 2025ರಂದು ಕೋಟ ಕಾರಂತ ಥೀಂ ಪಾರ್ಕಿನಲ್ಲಿ ‘ಬೆಳ್ಳಂಬೆಳಗೆ ಕವಿಗೋಷ್ಠಿ’ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಂಸ್ಕೃತಿಕ ಚಿಂತಕ ಡಾ. ಬಾಲಕೃಷ್ಣ ಶೆಟ್ಟಿ ಇವರು ಮಾತನಾಡಿ “ಒಬ್ಬ ಕವಿಯಾದವನು ಗುಣಗ್ರಾಹಿಯಾಗಿರಬೇಕು ತನ್ನ ಸುತ್ತಮುತ್ತಲಿನ ಪರಿಸರವನ್ನು ಸೂಕ್ಷ್ಮವಾಗಿ ಅವಲೋಕನ ಮಾಡಿರಬೇಕು. ಜೊತೆಗೆ ಇತರ ಕವಿಗಳ ಕವಿತೆಗಳನ್ನು ಆಳವಾಗಿ ಅಧ್ಯಯನ ಮಾಡಿದಾಗ ಒಂದು ಪರಿಪಕ್ವವಾದಂತಹ ಕೃತಿ ಮೂಡಬಲ್ಲದು. ಆ ದಿಸೆ ಯಲ್ಲಿ ಎಲ್ಲ ಕವಿಗಳು ಜಾಗೃತ ರಾಗಬೇಕು” ಎಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ ಕುಂದರ್ ಬಾರಿಕೆರೆಯವರು “ಇದೊಂದು ಅಪೂರ್ವವಾದ ಕಾರ್ಯಕ್ರಮ ಬೆಳಿಗ್ಗೆ 6-00 ಗಂಟೆಗೆ ಕವಿಗೋಷ್ಠಿ ನಡೆಯುತ್ತಿರುವುದು ಇದೇ ಮೊದಲ ಬಾರಿ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟಿ…

Read More

ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ಆಶ್ರಯದಲ್ಲಿ, ಸಸಿಹಿತ್ಲು ಘಟಕದ ಆತಿಥ್ಯದಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಕಾರದೊಂದಿಗೆ, ವಿಶುಕುಮಾರ್ ದತ್ತಿನಿಧಿ ಸಂಚಾಲನ ಸಮಿತಿ ಸಹಯೋಗದಲ್ಲಿ ‘ವಿಶುಕುಮಾರ್ ತುಳು ಸಾಹಿತ್ಯೋತ್ಸವ’ದ ಅಂಗವಾಗಿ ದಿನಾಂಕ 09 ನವೆಂಬರ್ 2025ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ತುಳು ಕುಣಿತ ಭಜನಾ ಸ್ಪರ್ಧೆ ಮತ್ತು ‘ವಿಶುಕುಮಾ‌ರ್ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸಾಹಿತಿ ಹಾಗೂ ಪಿಲಿಕುಳ ನಿಸರ್ಗಧಾಮ ಸಮಿತಿ ಸದಸ್ಯ ಎಂ.ಜಿ. ಮೋಹನ್ “ವಿಶುಕುಮಾ‌ರ್ ಈ ಜಗತ್ತನ್ನು ಅಗಲಿ ದಶಕಗಳೇ ಕಳೆದರೂ, ಅವರು ಬದುಕಿದ ರೀತಿ ಹಾಗೂ ಸಾಧನೆಗಳು ಜನರ ಮನಸಿನಲ್ಲಿ ಅಚ್ಚಳಿಯದೆ ಉಳಿಸುವ ಕೆಲಸವನ್ನು ಯುವವಾಹಿನಿ ಸಂಸ್ಥೆ ಮಾಡಿದೆ. ಯಾರು ಸಮಾಜಕ್ಕಾಗಿ ತಮ್ಮ ಜೀವ ತೇಯುತ್ತಾರೋ, ನಾನಾ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತಾರೋ, ಅಂತಹ ವ್ಯಕ್ತಿಗಳು ಸಮಾಜದಲ್ಲಿ ಬಹುಕಾಲ ನೆನಪಿನಲ್ಲಿತ್ತಾರೆ. ಅಂತಹ ವ್ಯಕ್ತಿಗಳಲ್ಲಿ ವಿಶುಕುಮಾರ್ ಒಬ್ಬರು” ಎಂದು ಹೇಳಿದರು. ಹಿರಿಯ ಸಾಹಿತಿ ಹಾಗೂ ಸಂಶೋಧಕ ಬೆನೆಟ್ ಜಿ.ಅಮ್ಮಣ್ಣ ಇವರಿಗೆ ‘ವಿಶುಕುಮಾರ್ ಪ್ರಶಸ್ತಿ’…

Read More

ಮಂಗಳೂರು : ಮಂಗಳೂರಿನ ಡಾನ್ ಬೋಸ್ಕೊ ಸಭಾಂಗಣದಲ್ಲಿ ದಿನಾಂಕ 09 ನವೆಂಬರ್ 2025ರಂದು ನಡೆದ ಭರತನಾಟ್ಯ ಪ್ರದರ್ಶನವು ಸಂಸ್ಕೃತಿ ಪ್ರೇಮಿಗಳನ್ನು ಮೋಡಿ ಮಾಡಿತು. ಖ್ಯಾತ ಭರತನಾಟ್ಯ ಕಲಾವಿದೆ ಮೀರಾ ಶ್ರೀನಾರಾಯಣನ್ ಅವರ ನೃತ್ಯ ವೈಭವವು ಶ್ರಾವಣೀಯ ಸಂಗೀತ, ದೃಢ ತಾಳ ಮತ್ತು ಮನಸ್ಸಿಗೆ ತಾಕುವ ಅಭಿನಯಗಳ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆದ್ದಿತು. ಈ ನೃತ್ಯ ಸಂಜೆಯನ್ನು ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಭರತಾಂಜಲಿ ಕೊಟ್ಟಾರ, ಮಂಗಳೂರು ಇವರ 30 ವರ್ಷಗಳ ಸಂಭ್ರಮಾಚರಣೆಯ ‘ಕಿಂಕಿಣಿ ತ್ರಿಂಶತ್’ ಪ್ರಯುಕ್ತ ಆಯೋಜಿಸಲಾಗಿತ್ತು. ಮಂಗಳೂರಿನ ಸಾಂಸ್ಕೃತಿಕ ವಲಯಕ್ಕೆ ಇದೊಂದು ಕಲಾಮಧುರ ಕ್ಷಣವಾಯಿತು. ಮೀರಾ ಶ್ರೀನಾರಾಯಣನ್ ಅವರು ವೇದಿಕೆಯ ಮೇಲೆ ತೋರಿಸಿದ ನೃತ್ಯಾಭಿನಯವು ಕೇವಲ ಕೌಶಲ್ಯವಲ್ಲ, ಅದು ಭಾವನೆ ಮತ್ತು ಭಕ್ತಿ ತುಂಬಿದ ಕಲಾತ್ಮಕ ಪ್ರಯಾಣವಾಗಿತ್ತು. ಆಕೆಯ ತಾಳ, ಲಯ ಮತ್ತು ಭಾವ ಸಂಯೋಜನೆಗಳು ಪ್ರೇಕ್ಷಕರನ್ನು ಆಳವಾಗಿ ಸ್ಪರ್ಶಿಸಿತು. ಪರಂಪರೆ, ಕಲಾತತ್ಪರತೆ ಮತ್ತು ಕಲಾಸಾಧನೆ ಎಲ್ಲವೂ ಮೇಳೈಸಿದ…

Read More

ಮೂಡುಬಿದಿರೆ : ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ದಿನಾಂಕ 08 ನವೆಂಬರ್ 2025ರಂದು ಮೂಡುಬಿದಿರೆ ಶ್ರೀ ಯಕ್ಷನಿಧಿ ದಶಮಾನೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಕರಿಂಜೆ ಕ್ಷೇತ್ರದ ಮುಕ್ತಾನಂದ ಸ್ವಾಮೀಜಿ “ಮಕ್ಕಳು ಯಕ್ಷಗಾನದಲ್ಲಿ ಒಲವನ್ನು ಬೆಳೆಸಿದಾಗ ತುಳುನಾಡಿನಲ್ಲಿ ಯಕ್ಷಗಾನ ಇನ್ನಷ್ಟು ಶ್ರೀಮಂತ ಕಲೆಯಾಗಿ ಬೆಳೆಯಲು ಸಾಧ್ಯ” ಎಂದು ಹೇಳಿದರು. ಜೈನ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಕುಮಾರ್ ಬಲ್ನಾಡ್ ಮಾತನಾಡಿ “ಆರ್ಥಿಕ ಶಿಸ್ತು, ಕಲಾಭಿಮಾನ, ಸಂಘಟನಾ ಚಾತುರ್ಯ ಮೌಲ್ಯಗಳನ್ನು ಅಳವಡಿಸಿಕೊಂಡರೆ ಯಕ್ಷಗಾನವನ್ನು ಇಂದಿಗೂ ವೃತ್ತಿಯಾಗಿ ಸ್ವೀಕರಿಸಬಹುದು” ಎಂದರು. ಬಿಜೆಪಿ ಮುಖಂಡ ಸುದರ್ಶನ್ ಎಂ. ಮಾತನಾಡಿ, “ಯಕ್ಷಗಾನವನ್ನು ಕೇವಲ ಸಾಂಸ್ಕೃತಿಕ ದೃಷ್ಟಿಕೋನದಿಂದ ನೋಡಬಾರದು. ಇದಕ್ಕೆ ದೈವತ್ವದ ಹಿನ್ನೆಲೆ ಹಾಗೂ ಧಾರ್ಮಿಕ ಪರಂಪರೆ ಇದೆ. ಇತ್ತೀಚಿನ ದಿನಗಳಲ್ಲಿ ಯುವ ಕಲಾವಿದರು ಯಕ್ಷಗಾನದ ಕಡೆ ಆಕರ್ಷಿತರಾಗುತ್ತಿರುವುದು ಉತ್ತಮ ಬೆಳವಣಿಗೆ” ಎಂದರು. ಉದ್ಯಮಿ ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಕಟೀಲು ಮೇಳದ ಯಕ್ಷಗಾನ ಕಲಾವಿದ ಅಶೋಕ್ ಆಚಾರ್ಯ ವೇಣೂರು ಇವರಿಗೆ ರೂ. ಹತ್ತು ಸಾವಿರ ನಗದು…

Read More

ಬ್ರಹ್ಮಾವರ : ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಬೈಕಾಡಿ ಬ್ರಹ್ಮಾವರ ಇವರ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆಯ ಪ್ರಯುಕ್ತ ನಾಲ್ಕನೇ ವರ್ಷದ ನುಡಿಚಿತ್ತಾರ ಕಾರ್ಯಕ್ರಮವು ದಿನಾಂಕ 09 ನವೆಂಬರ್ 2025ರಂದು ಬ್ರಹ್ಮಾವರದ ಎಸ್.ಎಮ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ‎‎ಕಾರ್ಯಕ್ರಮವು ದೀಪ ಬೆಳಗಿಸಿ, ನಿತ್ಯೋತ್ಸವ ಹಾಡಿನೊಂದಿಗೆ ಆರಂಭಗೊಂಡಿತು. ಕವಿ, ಅನುವಾದಕರಾಗಿರುವ ಶಂಕರ್ ಕೆಂಚನೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, “ಭಾಷೆ ಎಂದರೆ ಕೇವಲ ಸಾಹಿತ್ಯವಲ್ಲ, ಅದರ ಸುತ್ತಮುತ್ತಲಿನ ಎಲ್ಲವೂ ಕೂಡ ಭಾಷೆಗೆ ಸಂಬಂಧಿಸಿದ್ದು, ಸಾಹಿತ್ಯ ಹೆಚ್ಚಾಗಿ ಆಚರಿಸಲ್ಪಡುತ್ತದೆ” ಎಂದರು. ಲೇಖಕಿ, ಪ್ರಾಂಶುಪಾಲರಾದ ಅಭಿಲಾಷ ಹಂದೆ ಇವರು ಮಾತನಾಡಿ “ನಮ್ಮ ತಾಯ್ನುಡಿ ಕನ್ನಡ ನಮ್ಮ ಜೀವಕ್ಕೆ, ನಮ್ಮ‌ ಭಾವಕ್ಕೆ ಅಂಟಿಕೊಂಡಿರುತ್ತೆ. ಅದು ನಮ್ಮ ಸಂಸ್ಕೃತಿಗಳನ್ನ ತೆರೆಯಬಲ್ಲಂಥಹ ಬೀಗದ ಕೈ” ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಬ್ರಹ್ಮಾವರ ವ್ಯವಸಾಯ ಸಹಕಾರಿ ಸಂಘ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಬಿರ್ತಿ ಹಾಗೂ ಬ್ರಹ್ಮಾವರ ಎಸ್.ಎಮ್.ಎಸ್. ಪ.ಪೂ ಕಾಲೇಜಿನ ಪ್ರಾಂಶುಪಾಲರು ಐವನ್ ಡೊನಾತ್ ಸುವಾರಿಸ್ ಇವರು ಉಪಸ್ಥಿತರಿದ್ದರು. ತದನಂತರ…

Read More

ಮಡಿಕೇರಿ : ಕನ್ನಡ ಭವನ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಡಿಕೇರಿಯ ಪತ್ರಿಕಾ ಭವನದಲ್ಲಿ ದಿನಾಂಕ 09 ನವೆಂಬರ್ 2025ರಂದು ಲೇಖಕಿ ರುಬೀನಾ ಎಂ.ಎ. ಇವರ ಚೊಚ್ಚಲ ಕೃತಿ ‘ಕಣ್ಣಾ ಮುಚ್ಚಾಲೆ’ಯ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕೃತಿ ಬಿಡುಗಡೆಗೊಳಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ “ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುತ್ತಿದ್ದು, ಪ್ರತಿಯೊಬ್ಬರು ಪುಸ್ತಕ ಓದುವ ಮೂಲಕ ಬರಹಗಾರರಿಗೆ ಪ್ರೋತ್ಸಾಹ ನೀಡಬೇಕು. ಹಿಂದೆ ಸಾಹಿತ್ಯ ಕ್ಷೇತ್ರದಲ್ಲಿ ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡಿದ್ದರು. ಇಂದು ಮಹಿಳೆಯರು ಪುರುಷರಿಗೆ ಸಮಾನವಾಗಿ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ. ಹಿಂದೆ ಪುಸ್ತಕ ಓದುವವರ ಸಂಖ್ಯೆ ಹೆಚ್ಚಿತ್ತು. ಇಂದು ಅತಿಯಾದ ತಂತ್ರಜ್ಞಾನದ ಬಳಕೆಯಿಂದಾಗಿ ಓದುಗರ ಸಂಖ್ಯೆ ಕಡಿಮೆಯಾಗಿದೆ. ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಆಸಕ್ತಿ ಹೊಂದಬೇಕು. ಪುಸ್ತಕ ರಚನೆ ಕಷ್ಟಕರ ಕೆಲಸ, ಆದರೂ ಸವಾಲಿನ ನಡುವೆ ಮಹಿಳಾ ಪ್ರಧಾನವಾದ ಪುಸ್ತಕವನ್ನು ರುಬೀನಾ ಅವರು ಹೊರತಂದಿದ್ದು, ಶ್ರಮಕ್ಕೆ ತಕ್ಕ…

Read More

ಮಂಗಳೂರು : ಬಿಜೈಯಲ್ಲಿರುವ ನೃತ್ಯಾಂಗನ್ ಸಂಸ್ಥೆಯ ವತಿಯಿಂದ ‘ನೃತ್ಯೋಲ್ಲಾಸ 2025’ ಕಾರ್ಯಕ್ರಮವನ್ನು ದಿನಾಂಕ 16 ನವೆಂಬರ್ 2025ರಂದು ಸಾಯಂಕಾಲ 5-00 ಗಂಟೆಗೆ ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ವೇದ್ಯ ಸ್ಪೂರ್ತಿ ಕೊಂಡ ಇವರು ಕೂಚಿಪುಡಿ ಪ್ರದರ್ಶನ ನೀಡಲಿದ್ದಾರೆ. ಅದ್ವಿತಾ ಜಿ. ರಾವ್, ಪ್ರೇರಣಾ ಶೆಣೈ ಮತ್ತು ಅವನಿ ಎಸ್. ಇವರಿಂದ ಹಾಗೂ ನೃತ್ಯಾಂಗನ್ ಸಂಸ್ಥೆಯ ವಿದ್ಯಾರ್ಥಿಗಳಿಂದ ನಡೆಯುವ ಭರತನಾಟ್ಯ ಪ್ರದರ್ಶನಕ್ಕೆ ನಟುವಾಂಗದಲ್ಲಿ ರಾಧಿಕಾ ಶೆಟ್ಟಿ, ಹಾಡುಗಾರಿಕೆಯಲ್ಲಿ ವಿದ್ಯಾಶ್ರೀ ರಾಧಾಕೃಷ್ಣ, ಮೃದಂಗದಲ್ಲಿ ಬಾಲಚಂದ್ರ ಭಾಗವತ್ ಮತ್ತು ಕೊಳಲಿನಲ್ಲಿ ರಾಜಗೋಪಾಲ ಕಾಂಞಗಾಡ್ ಇವರುಗಳು ಸಹಕರಿಸಲಿದ್ದಾರೆ.

Read More

ಮಂಗಳೂರು : ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಮಂಗಳೂರು ತಂಡಕ್ಕೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಕುಂಜತ್ತಬೈಲ್ ಆಸರೆ ಮನೆಯಲ್ಲಿ ದಿನಾಂಕ 09 ನವೆಂಬರ್ 2025ರಂದು ‘ರಂಗಾಂತರಂಗ’ ಸ್ವರ-ಕರಗಳ ಸಮ್ಮಿಳನ ಹಾಗೂ ಕಲಾವಿದ ನಾದ ಮಣಿ ನಾಲ್ಕೂರು ಇವರಿಂದ ವಿನೂತನ ತತ್ವ-ಭಾವ ಗಾನಯಾನ ‘ಕತ್ತಲ ಹಾಡು’ ಕಾರ್ಯಕ್ರಮ ಜರುಗಿತು. ಸ್ವರೂಪ ಅಧ್ಯಯನ ಸಮೂಹ ಮಂಗಳೂರು ನಿರ್ದೇಶಕ ಗೋಪಾಡ್ಕರ್, ಸಾಹಿತಿ ಡಾ. ವಸಂತ್ ಕುಮಾರ್ ಪೆರ್ಲಾ, ಕಲಾವಿದ ದಿನೇಶ್ ಹೊಳ್ಳ, ಶೈಕ್ಷಣಿಕ ಸಲಹೆಗಾರ ಮೊಹಮ್ಮದ್ ರಫೀಕ್ ಅವರು ಮಾತನಾಡಿ ರಂಗ ಸ್ವರೂಪ ತಂಡದ ಸಾಮಾಜಿಕ, ಶೈಕ್ಷಣಿಕ ಹಾಗೂ ಪರಿಸರ ಸ್ನೇಹಿ ಕಾರ್ಯಗಳನ್ನು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಹುಸೈನ್ ರಿಯಾಝ್, ಜ್ಯೋತಿ ಸುಬ್ರಹ್ಮಣ್ಯ, ತಸ್ಲೀಮಾ ಬಾನು, ಹನೀಷಾ, ಅರವಿಂದ ಕುಡ್ಲ, ರೈಹಾನ್, ವೈಷ್ಣವಿ, ಆದಂ ಖಾನ್, ಬದ್ರುದ್ದೀನ್ ಕೂಳೂರು, ಸುಮನಾ ರೆಬೆಲ್ಲೋ, ಸಂಸಾದ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ತಂಡದ ಸ್ಥಾಪಕರಾದ ಗೋಪಾಡ್ಕ‌ರ್ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ರಂಗ ಸ್ವರೂಪ…

Read More

ಉಡುಪಿ : ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿನಾಂಕ 09 ನವೆಂಬರ್ 2025ರಂದು ಹೇರಂಜಾಲು ಯಕ್ಷ ಬಳಗದಿಂದ ಹೇರಂಜಾಲು ಯಕ್ಷ ಸಂಭ್ರಮ, ಹೇರಂಜಾಲು ಕೃತಿ ಲೋಕಾರ್ಪಣೆ ಹಾಗೂ ಹೇರಂಜಾಲು ಗೌರವ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಶಿವರಾಮ ಶೆಟ್ಟಿ “ಓರ್ವ ಯಕ್ಷಗಾನ ಕಲಾವಿದ, ಓರ್ವ ಭಾಗವತ ಹೇಗಿರಬೇಕು ಎಂಬುದಕ್ಕೆ ಹೇರಂಜಾಲು ಗೋಪಾಲ ಗಾಣಿಗರೇ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಯಕ್ಷಗಾನ ಕಲೆಗೆ ಅವರ ಕೊಡುಗೆ ಅಪಾರ. ಸುಮಾರು 25 ವರ್ಷಗಳ ಕಾಲ ಕನ್ನರ್ಪಾಡಿಯಲ್ಲಿ ಮಂದಾರ್ತಿ ಮೇಳದ ಯಕ್ಷಗಾನವನ್ನು ಆಡಿಸಿ, ಹೇರಂಜಾಲು ಗೋಪಾಲ ಗಾಣಿಗರೇ ಭಾಗವತರಾಗಬೇಕು ಎಂಬ ಅಭಿಲಾಷೆ ಹೊಂದಿದ್ದ, ಗೋಪಾಲ ಗಾಣಿಗರು ಉಚ್ಛಾಯ ಸ್ಥಿತಿಯಲ್ಲಿದ್ದ ಕಾಲವದು. ಅಂತಹ ಮೇರು ಕಲಾವಿದ ತನಗೇನೂ ಗೊತ್ತಿಲ್ಲ ಎಂಬಂತೆ ವಿನಮ್ರನಾಗಿ ಕಲಾಸೇವೆಯನ್ನು ಮಾಡುತ್ತಿರುವುದನ್ನು ಕಂಡಾಗ ಅಭಿಮಾನ ಉಕ್ಕಿ ಬರುತ್ತದೆ. ಸುಮಾರು 9 ಕೃತಿಗಳನ್ನು ಅವರು ಬರೆದಿದ್ದಾರೆ. ಯಕ್ಷಗಾನ ಅಕಾಡೆಮಿ ಕೊಡಮಾಡುವ ಯಕ್ಷಗಾನದ ಶ್ರೇಷ್ಠ ಪಾರ್ಥಿಸುಬ್ಬ ಪ್ರಶಸ್ತಿಯನ್ನು…

Read More

ಸುರತ್ಕಲ್ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಇಡ್ಯಾ ಸುರತ್ಕಲ್ ಇವರ ವತಿಯಿಂದ ಮನು ಇಡ್ಯಾ ಇವರ ‘ಗಂಧದ ಕೊರಡ್’ ಮತ್ತು ‘ತಾಂಗ್ ನಿರೆಲ್’ ಎರಡು ನಾಟಕಗಳ ಪುಸ್ತಕ ಬಿಡುಗಡೆ ಮತ್ತು ಚಾವಡಿ ತಮ್ಮನ ಕಾರ್ಯಕ್ರಮವನ್ನು ದಿನಾಂಕ 13 ನವೆಂಬರ್ 2025ರಂದು ಸಂಜೆ 4-00 ಗಂಟೆಗೆ ಸುರತ್ಕಲ್ ಇಡ್ಯಾ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ವಹಿಸಲಿದ್ದು, ವಿಜಯ ಕರ್ನಾಟಕದ ನಿವೃತ್ತ ಸ್ಥಾನೀಯ ಸಂಪಾದಕರಾದ ಯು.ಕೆ. ಕುಮಾರನಾಥ ಇವರು ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಹಿರಿಯ ರಂಗ ನಟಿ ಗೀತಾ ಸುರತ್ಕಲ್ ಇವರು ಚಾವಡಿ ತಮ್ಮನದ ಅಭಿನಂದನಾ ಮಾತುಗಳನ್ನಾಡಲಿದ್ದು, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀಮತಿ ಯಮುನಾ ಶೇಖರ್, ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀಮತಿ ಗುಣವತಿ ರಮೇಶ್ ಮತ್ತು ಸಿಂಗಾರ…

Read More