Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಬೆಂಗಳೂರಿನಲ್ಲಿ ನೃತ್ಯ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ಕೇವಲ ವೇದಿಕೆಯ ಮೇಲೆ ನೃತ್ಯ ಪ್ರದರ್ಶನವೊಂದೇ ನೃತ್ಯಕಲಾವಿದರ ಗುರಿಯಾಗಬಾರದು. ನೃತ್ಯ ಮಾಡಲು ತಕ್ಕ ಅಂಗಸೌಷ್ಟವ, ಪ್ರದರ್ಶನಕ್ಕೆ ಅಗತ್ಯವಾದ ಉತ್ತಮ ಶಿಕ್ಷಣ -ಅಭ್ಯಾಸವಷ್ಟೇ ಆಗದೇ, ಜ್ಞಾನಾರ್ಜನೆಯ ಸಮಗ್ರ ಬೆಳವಣಿಗೆಯ ಕಡೆ ಆದ್ಯ ಗಮನ ನೀಡಬೇಕಾದ್ದು ಅವಶ್ಯ ಎಂಬುದನ್ನು ಮನಗಾಣಿಸುವುದು ‘ಸಾಧನ ಸಂಗಮ’ದ ‘ಮುಕುಳೋತ್ಸವ’. ಕಾಲ ಕಾಲಕ್ಕೆ ಹೊಸ ಚಿಂತನೆಗಳು, ಪ್ರಯೋಗ-ಪ್ರಯತ್ನಗಳಿಂದ ನೂತನ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿರುವ ಬಸವೇಶ್ವರ ನಗರದ ಖ್ಯಾತ ನೃತ್ಯ ಸಂಸ್ಥೆ ‘ಸಾಧನ ಸಂಗಮ’ದ ಹಿಂದಿನ ಧೀ ಶಕ್ತಿ, ಅನುಭವ ಭಂಡಾರ ಖ್ಯಾತ ನೃತ್ಯಜ್ಞೆ ವಿ. ಜ್ಯೋತಿ ಪಟ್ಟಾಭಿ ರಾಮ್ ಅವರದು ಸಮಗ್ರ ದೃಷ್ಟಿ. ಅಂತಸ್ಸತ್ವ ಬೆಳೆಸುವ ಸುತ್ಯಾರ್ಹ ಪ್ರಯತ್ನ- ಸಾಧನ ಸಂಗಮದ ‘ಮುಕುಳೋತ್ಸವ’ ಇದಕ್ಕೆ ಸಾಕ್ಷಿ. ಉದಯೋನ್ಮುಖ ಕಲಾವಿದರಾಗಿದ್ದಾಗಲೇ ಅವರನ್ನು ಸಂಪೂರ್ಣ ಜ್ಞಾನಾರ್ಜನೆಯಿಂದ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಂಸ್ಥೆ ಪ್ರತಿವರ್ಷ ಅನೇಕ ವಿಧವಾದ ಚಿಂತನೆಗಳಿಂದ ಹೂರಣಗೊಂಡ ನೃತ್ಯ ಕಾರ್ಯಕ್ರಮವನ್ನು ಕಳೆದ 25 ವರ್ಷಗಳಿಂದ ವಿಶಿಷ್ಟ ‘ಮುಕುಳೋತ್ಸವ’ವನ್ನು ನಡೆಸಿಕೊಂಡು ಬರುತ್ತಿದೆ. ಖ್ಯಾತ…
ಮಂಗಳೂರು : ಸಾಧನಾ ಬಳಗ (ರಿ.) ಮಂಗಳೂರು ಇವರ ಆಶ್ರಯದಲ್ಲಿ ಕೊಂಕಣಿ ಬಾಲ ನಾಟಕ ‘ಭಕ್ತ ಪುರಂದರು’ ಪ್ರಥಮ ಪ್ರದರ್ಶನವನ್ನು ದಿನಾಂಕ 30 ನವೆಂಬರ್ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಕೃಷ್ಣ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಯು. ಪ್ರಕಾಶ್ ಶೆಣೈ ಇವರು ಈ ನಾಟಕದ ರಚನೆ ಮತ್ತು ನಿರ್ಮಾಣ ಮಾಡಿರುತ್ತಾರೆ.
ಮೈಸೂರು : ನಟನ ರಂಗಶಾಲೆಯ ವತಿಯಿಂದ 2025-26ನೇ ಸಾಲಿನ ರಂಗಭೂಮಿ ಡಿಪ್ಲೋಮಾ ವಿದ್ಯಾರ್ಥಿಗಳ ಮೊದಲ ಅಭ್ಯಾಸಿ ಪ್ರಯೋಗ ಭಾಸ ಮಹಾಕವಿಯ ಐದು ನಾಟಕಗಳ ಸಂಕಲಿತ ರೂಪ ‘ಭಾಸ ಪಂಚಕ’ ನಾಟಕ ಪ್ರದರ್ಶನವನ್ನು ದಿನಾಂಕ 29 ಮತ್ತು 30 ನವೆಂಬರ್ 2025ರಂದು ಸಂಜೆ 6-30 ಗಂಟೆಗೆ ಮೈಸೂರಿನ ರಾಮಕೃಷ್ಣ ನಗರ, ನಟನ ರಂಗಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕದ ಕನ್ನಡಾನುವಾದ ಡಾ. ಕೆ. ಕೃಷ್ಣಮೂರ್ತಿ ಇವರು ಮಾಡಿದ್ದು, ದಿಶಾ ರಮೇಶ್ ಸಂಗೀತ ಹಾಗೂ ಮೇಘ ಸಮೀರ ರಂಗಪಠ್ಯ ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 7259537777, 9480468327 ಮತ್ತು 9845595505 ಸಂಖ್ಯೆಗಳನ್ನು ಸಂಪರ್ಕಿಸಿರಿ. ನಟನ ರಂಗಶಾಲೆಯ ಈ ವರ್ಷದ ವಿದ್ಯಾರ್ಥಿಗಳು ಅಭಿನಯಿಸುತ್ತಿರುವ ನಾಟಕ ಭಾಸ ಮಹಾ ಕವಿಯ ಐದು ಪ್ರಸಿದ್ಧ ನಾಟಕಗಳ ಸಂಕಲಿತ ರೂಪ ‘ಭಾಸಪಂಚಕ’ ! ಭಾರತೀಯ ನಾಟಕಕಾರರಲ್ಲಿ ಪುರಾಣದ ವಸ್ತುಗಳನ್ನು ಆಧುನಿಕ ಪ್ರಜ್ಞೆಯಲ್ಲಿ ನೋಡಿದ ಬಹು ಅಪರೂಪದ ಶ್ರೇಷ್ಠ ನಾಟಕಕಾರ. ವಸ್ತು, ಸಂವಿಧಾನ, ಭಾಷೆ, ನವೀನ ದೃಷ್ಟಿಕೋನ ಮತ್ತು ಪ್ರಸ್ತುತಿಗೆ…
ಮಂಗಳೂರು : ಯಕ್ಷಾಂಗಣ ಮಂಗಳೂರು ವತಿಯಿಂದ ಮಂಗಳೂರು ವಿ.ವಿ. ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಇವರ ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ಏರ್ಪಡಿಸಲಾದ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2025’ ಹದಿಮೂರನೇ ವರ್ಷದ ನುಡಿ ಹಬ್ಬ ಪ್ರಯುಕ್ತ ಅಗಲಿದ ಕಲಾವಿದರ ಸ್ಮರಣಾಂಜಲಿ ಕಾರ್ಯಕ್ರಮವು ದಿನಾಂಕ 27 ನವೆಂಬರ್ 2025ರಂದು ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಮಾತನಾಡಿದ ಹಿರಿಯ ನಾಟಕಕಾರ ಮತ್ತು ಉದ್ಯಮಿ ಡಾ. ಸಂಜೀವ ದಂಡಕೇರಿ “ತಲೆ ತಲಾಂತರದಿಂದ ಸಾಗಿ ಬಂದ ಭಾರತೀಯ ಕಲಾ ಪರಂಪರೆ ಚಿರ ನೂತನವಾದುದು. ಕಲಾವಿದರು ಭೌತಿಕವಾಗಿ ಅಳಿದು ಹೋದರೂ ಅವರು ತಮ್ಮ ಸಾಧನೆಯ ಬಲದಿಂದ ಶಾಶ್ವತವಾಗಿ ಬದುಕಿ ಉಳಿಯುತ್ತಾರೆ. ಯಕ್ಷಗಾನದಲ್ಲಿ ಆಗಿ ಹೋದ ಅದೆಷ್ಟೋ ಮಹಾನ್ ಕಲಾವಿದರ ಮಾತುಗಾರಿಕೆ, ಪಾತ್ರ ಚಿತ್ರಣ ಮತ್ತು ಅಭಿನಯ ಕೌಶಲ್ಯ, ಅದನ್ನು ಕಂಡವರ ಮನಸ್ಸಿನಲ್ಲಿ ಈಗಲೂ…
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ಡಾ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಕರ್ನಾಟಕ ಯಕ್ಷ ಭಾರತಿ (ರಿ.) ಪುತ್ತೂರು ಸಹಯೋಗದಲ್ಲಿ ಯಕ್ಷಾಂಗಣ ಮಂಗಳೂರು ಆಯೋಜಿಸಿದ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ 13ನೇ ವರ್ಷದ ನುಡಿ ಹಬ್ಬದಲ್ಲಿ ಐದನೇ ದಿನ ಯಕ್ಷಗಾನ ಕಲಾವಿದ, ಶಿಕ್ಷಕ, ಕ್ರೀಡಾಪಟು ಮತ್ತು ಸಮಾಜ ಸೇವಕ ದಿ. ಜಲಂಧರ ರೈ ಸಂಸ್ಮರಣಾ ಕಾರ್ಯಕ್ರಮವು ದಿನಾಂಕ 27 ನವೆಂಬರ್ 2025ರಂದು ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯ ಕಾರ್ಯಾಧ್ಯಕ್ಷರಾದ ಭಾಸ್ಕರ ರೈ ಕುಕ್ಕುವಳ್ಳಿ “ಸಮಾಜದಲ್ಲಿ ಹೆಸರು, ಕೀರ್ತಿ, ಸ್ಥಾನ-ಮಾನ, ಗೌರವಗಳಿಗಾಗಿ ಸೇವೆ ಮಾಡುವವರು ಬಹಳ. ಆದರೆ ನಿಸ್ಪ್ರಹತೆಯಿಂದ ತಳಮಟ್ಟದ ಕಾರ್ಯಕರ್ತರಾಗಿ ದುಡಿಯುವವರೇ ನಿಜವಾದ ಸಮಾಜ ಸೇವಕರು. ಯಕ್ಷಗಾನ, ಕ್ರೀಡೆ, ಶಿಕ್ಷಣ ಮತ್ತು ಧಾರ್ಮಿಕ ಸಂಘಟನೆಗಾಗಿ ಅವಿರತ ದುಡಿದು ಸಣ್ಣಪ್ರಾಯದಲ್ಲೆ…
ಕನ್ನಡದ ಪ್ರಮುಖ ಸಾಹಿತಿಗಳಲ್ಲಿ ಒಬ್ಬರಾದ ವೇಣುಗೋಪಾಲ ಸೊರಬ ಇವರು ತಮ್ಮ ಎಳವೆಯಲ್ಲಿಯೇ ಕವನ ಬರೆಯುವ ಹವ್ಯಾಸವನ್ನು ರೂಡಿಸಿಕೊಂಡಿದ್ದರು. ರಾಮರಾವ್ ಸೊರಬ ಮತ್ತು ಸೀತಾಬಾಯಿ ದಂಪತಿಗಳ ಪುತ್ರರಾಗಿ 1937ರ ನವೆಂಬರ್ 29ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಜನಿಸಿದರು. ಬಾಲ್ಯದಲ್ಲಿ ತಂದೆ ತಾಯಿಗಳ ಪ್ರೀತಿಯಿಂದ ವಂಚಿತರಾದ ಇವರು ಹಿರಿಯಕ್ಕ ವೆಂಕಟಮ್ಮ ಹಾಗೂ ಭಾವ ಶ್ರೀನಿವಾಸ ಆಚಾರ್ ಇವರುಗಳ ಪೋಷಣೆಯಲ್ಲಿ ಬೆಳೆದರು. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಇಂಟರ್ಮೀಡಿಯಟ್ ಶಿಕ್ಷಣದ ನಂತರ ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿ ಹಾಗೂ ಇಂಗ್ಲೀಷಿನಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದರು. 1965ರಲ್ಲಿ ಕನಕಪುರ ರೂರಲ್ ಕಾಲೇಜಿನಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ವೃತ್ತಿ ಜೀವನಕ್ಕೆ ಪಾದಾರ್ಪಣೆ ಮಾಡಿದ ಇವರು ಅಲ್ಲಿ ಸುಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಳಿಕ ಎನ್.ಎಂ.ಕೆ.ಆರ್.ವಿ. ಮಹಿಳಾ ಕಾಲೇಜಿನಲ್ಲಿ ಕೆಲವು ವರ್ಷಗಳ ಕಾಲ ಸೇವೆ ಸಲ್ಲಿಸಿ, ವೃತ್ತಿ ಜೀವನಕ್ಕೆ ವಿದಾಯ ಹೇಳುವ ಮೊದಲೇ 1995 ಮಾರ್ಚ್ 29ರಂದು ಇಹಲೋಕದಿಂದ ದೂರವಾದರು. ಬಾಲ್ಯದಿಂದಲೇ ಸಾಹಿತ್ಯದಲ್ಲಿ ಆಸಕ್ತಿ ಇದ್ದ ವೇಣುಗೋಪಾಲ…
ಉಡುಪಿ : ಉಡುಪಿಯ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನೆಗಲ್ ಇದರ ವತಿಯಿಂದ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ 2025, ಪುಸ್ತಕ ಲೋಕಾರ್ಪಣೆ ಮತ್ತು ಸಾಕ್ಷಾ ಚಿತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ 23 ನವೆಂಬರ್ 2025ರಂದು ಅಂಬಲಪಾಡಿಯ ಭವಾನಿ ಮಂಟಪದಲ್ಲಿ ಸಂಪನ್ನಗೊಂಡಿತು. ಅಂಬಲಪಾಡಿಯ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ಡಾ. ನಿ. ಬೀ. ವಿಜಯ ಬಲ್ಲಾಳರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಸಾಂಸ್ಕೃತಿಕ ಮತ್ತು ಧಾರ್ಮಿಕ ಕೇಂದ್ರವಾದ ಉಡುಪಿಯಲ್ಲಿ ವಿವಿಧ ವೈಶಿಷ್ಟ್ಯ ಪೂರ್ಣ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವೆ. ಆ ಕಾರಣದಿಂದ ನಮ್ಮ ಆಚಾರ, ವಿಚಾರ ಹಾಗೂ ಸಂಸ್ಕೃತಿಗಳ ಪರಿಚಯ ಇತರರಿಗೂ ಪ್ರಸಾರವಾಗುತ್ತದೆ. ಒಬ್ಬ ಆದರ್ಶ ಶಿಕ್ಷಕರಾಗಿದ್ದು ಸಾಹಿತಿಯಾಗಿ ಗುರುತಿಸಿಕೊಂಡವರು ಕವಿ ಕುರಾಡಿ ಸೀತಾರಾಮ ಅಡಿಗರು ಅವರ ಹೆಸರಿನಲ್ಲಿ ಕೊಡ ಮಾಡುವ ಈ ಗೌರವ ಬಹಳ ಶ್ರೇಷ್ಠವಾದದ್ದು” ಎಂದರು. ಕವಿ ಕುರಾಡಿ ಸೀತಾರಾಮ…
ಮೈಸೂರು : ಮಂಗಳೂರು ಕೊಲ್ಯದ ಶ್ರೀ ನಾಟ್ಯನಿಕೇತನದ ನೃತ್ಯ ಗುರು ಕರ್ನಾಟಕ ಕಲಾಶ್ರೀ ವಿದುಷಿ ರಾಜಶ್ರೀ ಉಳ್ಳಾಲ ಹಾಗೂ ಸನಾತನ ನಾಟ್ಯಾಲಯದ ನೃತ್ಯಗುರು ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಇವರು ದಿನಾಂಕ 24 ನವೆಂಬರ್ 2025ರಂದು ಮೈಸೂರಿನ ವಸುಂಧರಾ ಭವನದಲ್ಲಿ ಯುಗಳ ಭರತನಾಟ್ಯ ಪ್ರದರ್ಶನವನ್ನು ನೀಡಿದರು. ಮೈಸೂರಿನ ನೃತ್ಯಗುರು ವಸುಂಧರಾ ದೊರೆಸ್ವಾಮಿ ಆಯೋಜಿಸಿದ ವಸುಂಧರೋತ್ಸವದಲ್ಲಿ ನೃತ್ಯ ಪ್ರದರ್ಶನ ನೀಡಿದ್ದರು. ಹಿಮ್ಮೇಳದಲ್ಲಿ ನಟುವಾಂಗ ವಿದುಷಿ ಶ್ರೀಲತಾ ನಾಗರಾಜ್, ಗಾಯನ ವಿನೀತ್ ಪೂರವಂಕರ, ಮೃದಂಗ ವಿಕ್ರಂ ಭಾರದ್ವಾಜ್, ಕೊಳಲು ವಾದನ ಸಮೃದ್ಧ ಶ್ರೀನಿವಾಸನ್ ಸಹಕರಿಸಿದ್ದರು.
ಶಿವಮೊಗ್ಗ : ಕುಪ್ಪಳ್ಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಿಂದ ಕೊಡಮಾಡುವ 2025ನೇ ಸಾಲಿನ ‘ಕುವೆಂಪು ರಾಷ್ಟ್ರೀಯ ಪ್ರಶಸ್ತಿ’ಗೆ ಕೊಂಕಣಿ ಮತ್ತು ಮರಾಠಿ ಬರಹಗಾರ ಮಹಾಬಲೇಶ್ವರ ಸೈಲ್ ಆಯ್ಕೆಯಾಗಿದ್ದಾರೆ. ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ರೂ.5 ಲಕ್ಷ ನಗದು ಹಾಗೂ ಬೆಳ್ಳಿಯ ಪದಕವನ್ನು ಪ್ರಶಸ್ತಿಯು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಕುವೆಂಪು ಅವರ ಜನ್ಮದಿನವಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯಲ್ಲಿ ದಿನಾಂಕ 29 ಡಿಸೆಂಬರ್ 2025ರಂದು ನಡೆಯಲಿದೆ. ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಡಾ. ಬಿ.ಎಲ್. ಶಂಕರ್ ಇವರ ಅಧ್ಯಕ್ಷತೆಯಲ್ಲಿ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿಯಲ್ಲಿ ಕೊಂಕಣಿ ಭಾಷಾ ಸಾಹಿತಿಗಳೂ ಅನುವಾದಕ ಶಾ.ಮಂ. ಕೃಷ್ಣರಾಯ, ಸಾಹಿತ್ಯ ಅಕಾಡೆಮಿಯ ನಿವೃತ್ತ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಮತ್ತು ಪ್ರತಿಷ್ಠಾನದ ಕಾರ್ಯದ ಕಡಿದಾಳ್ ಪ್ರಕಾಶ್ ಸಮಿತಿಯ ಸಂಚಾಲಕರಾಗಿದ್ದರು. ಕೊಂಕಣಿ ಭಾಷಾ ಸಾಹಿತ್ಯದ ಶ್ರೀಮಂತಿಕೆ ಹಾಗೂ ಸತ್ವವನ್ನು ತಮ್ಮ…
ಮಂಗಳೂರು : ಡಾ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ಯಕ್ಷಭಾರತಿ (ರಿ.) ಪುತ್ತೂರು ಇವರ ಸಹಯೋಗದೊಂದಿಗೆ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಏರ್ಪಡಿಸಿದ 13ನೇ ವರ್ಷದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ನಾಲ್ಕನೇ ದಿನ ಹಿರಿಯ ವಿದ್ವಾಂಸ ಮತ್ತು ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ದಿ. ವಿದ್ವಾನ್ ಕೆ. ಕಾಂತ ರೈ ಮೂಡುಬಿದಿರೆ ಇವರ ಸಂಸ್ಮರಣಾ ಕಾರ್ಯಕ್ರಮ ದಿನಾಂಕ 26 ನವೆಂಬರ್ 2025ರಂದು ನಡೆಯಿತು. ಮಂಗಳೂರು ಎಸ್.ಕೆ. ಗೋಲ್ಡ್ ಸ್ಮಿತ್ ಕೋ-ಆಪರೇಟಿವ್ ಸೊಸೈಟಿ ಇದರ ಅಧ್ಯಕ್ಷರಾದ ಉಪೇಂದ್ರ ಆಚಾರ್ಯ ಪೆರ್ಡೂರು ಸಂಸ್ಮರಣಾ ಜ್ಯೋತಿ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ‘ಯಕ್ಷಗಾನವನ್ನು ಪ್ರೀತಿಸುವವರು ತಮ್ಮ ಹಿರಿಯರನ್ನು ಯಾವತ್ತೂ ಗೌರವಿಸುತ್ತಾರೆ. ಯಕ್ಷಗಾನ ವಾಙ್ಮಯಕ್ಕೆ ಅಪೂರ್ವ ಕೊಡುಗೆ ನೀಡಿದ ಹಿರಿಯ ಅರ್ಥಧಾರಿ ವಿದ್ವಾನ್ ಕಾಂತ ರೈಯವರ ಬಂಧುಗಳು ಪ್ರತಿವರ್ಷ ಅದ್ದೂರಿ ಕಾರ್ಯಕ್ರಮದ ಮೂಲಕ ಅವರನ್ನು…