Subscribe to Updates
Get the latest creative news from FooBar about art, design and business.
Author: roovari
ಬೆಂಗಳೂರು : ಚಿಣ್ಣರಲೋಕ ಟ್ರಸ್ಟ್(ರಿ.) ಬೆಂಗಳೂರು, ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ, ಶ್ರೀ ಆನಂದ ಲಿಂಗೇಶ್ವರ ಟ್ರಸ್ಟ್ (ರಿ.) ಬೆಂಗಳೂರು, ಭಾರತೀಯ ಸ್ತ್ರೀ ಶಕ್ತಿ ಸಂಘಟನಾ ಟ್ರಸ್ಟ್(ರಿ.) ಬೆಂಗಳೂರು ಜಂಟಿಯಾಗಿ ಆಯೋಜಿಸುವ ಕಲೆ,ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮವು ದಿನಾಂಕ 18 ಅಕ್ಟೋಬರ್ 2025ರ ಶನಿವಾರ ಬೆಳಗ್ಗೆ ಘಂಟೆ 10:00ಕ್ಕೆ ಬೆಂಗಳೂರು ಹೆಬ್ಬಾಳದಲ್ಲಿರುವ ಶ್ರೀ ಆನಂದಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ ಕನ್ನಡ ಕುವರ ರಂಗ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದರಾದ ಬೆಂಗಳೂರಿನ ಶ್ರೀ ಎಂ. ಅಶೋಕ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಹೆಬ್ಬಾಳ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ಸಿ. ಮುನಿಕೃಷ್ಣ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕವಿಗೋಷ್ಠಿ, ಉಪನ್ಯಾಸ, ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.
ಮಂಗಳೂರು: ತುಲುವೆರೆ ಟ್ರಸ್ಟ್ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ‘ತುಡರ ಪರ್ಬ’ ಕವಿಗೋಷ್ಠಿ ಕಾರ್ಯಕ್ರಮವು ದಿನಾಂಕ 19 ಅಕ್ಟೋಬರ್ 2025ರಂದು ಬೆಳಗ್ಗೆ ಘಂಟೆ 9.30ಕ್ಕೆ ಕೆನರಾ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ ಸಮಿತಿ ಮಾಜಿ ಅಧ್ಯಕ್ಷ ರಾಜೇಶ್ ಬಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸುರತ್ಕಲ್ ಗೋವಿಂದದಾಸ ಕಾಲೇಜು ಉಪನ್ಯಾಸಕಿ ಅಕ್ಷತಾ ವಿ. ‘ತುಡರ ಪರ್ಬ’ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಬಳಿಕ ನಡೆಯಲಿರುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕೆನರಾ ಕಾಲೇಜು ಇಲ್ಲಿನ ಉಪನ್ಯಾಸಕರಾದ ರಘು ಇಡ್ಡಿದು ವಹಿಸಲಿದ್ದು, ಇದೇ ಸಂದರ್ಭದಲ್ಲಿ ಟ್ರಸ್ಟ್ ಸದಸ್ಯತ್ವ ಅಭಿಯಾನ ನಡೆಯಲಿದೆ ಎಂದು ತುಲುವೆರೆ ಕಲ ಟ್ರಸ್ಟ್ ಅಧ್ಯಕ್ಷೆ ಗೀತಾ ಲಕ್ಷ್ಮೀಶ್ ತಿಳಿಸಿದ್ದಾರೆ.
ಬೆಂಗಳೂರು : ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕರ್ನಾಟಕ ನಾಟಕ ಅಕಾಡೆಮಿ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಇವರ ವತಿಯಿಂದ ‘ರೂಪಾಂತರ’ ತಂಡದವರಿಂದ ಸಂತ ಕವಿ ಕನಕದಾಸರ ಅನನ್ಯ ಕಾವ್ಯ ಆಧಾರಿತ ‘ರಾಮಧಾನ್ಯ’ ನಾಟಕ ಪ್ರದರ್ಶನವನ್ನು ದಿನಾಂಕ 17 ಅಕ್ಟೋಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ನಾಟಕವನ್ನು ಡಾ. ರಾಮಕೃಷ್ಣ ಮರಾಠೆ ಇವರು ರಚನೆ ಮಾಡಿದ್ದು, ದೇಸಿ ಮೋಹನ್ ಇವರು ಸಂಗೀತ ನೀಡಿದ್ದು, ಕೆ.ಎಸ್.ಡಿ.ಎಲ್. ಚಂದ್ರು ಇವರು ನಿರ್ದೇಶನ ಮಾಡಿರುತ್ತಾರೆ. ರೂಪಾಂತರ…….. ಕಳೆದ ಮೂರುವರೆ ದಶಕಗಳಿಂದ ನಿರಂತರವಾಗಿ ಹವ್ಯಾಸಿ ರಂಗಭೂಮಿಯಲ್ಲಿ ಕ್ರಿಯಾಶೀಲವಾಗಿರುವ ರಂಗ ತಂಡ. ‘ರೂಪಾಂತರ’ ವಿಶೇಷವಾಗಿ ಕನ್ನಡ ಸಾಹಿತ್ಯ ಲೋಕದ ಮಹತ್ವದ ಲೇಖಕರ ಕಥೆ, ಕಾವ್ಯ, ಆಧಾರಿತ ಕಾದಂಬರಿಗಳ ರಂಗ ಪ್ರಯೋಗಗಳನ್ನು ಈ ನಾಡಿನಾದ್ಯಂತ ಮತ್ತು ಹೊರ ರಾಜ್ಯಗಳಲ್ಲಿ ಯಶಸ್ವಿಯಾಗಿ ಪ್ರದರ್ಶಿಸಿ ಪ್ರೇಕ್ಷಕರ ಮತ್ತು ವಿಮರ್ಷಕರ ಮೆಚ್ಚುಗೆ ಗಳಿಸಿದೆ. ಲಂಕೇಶರ ರೊಟ್ಟಿ, ಮುಸ್ಸಂಜೆ ಕಥಾಪ್ರಸಂಗ, ತೇಜಸ್ವಿಯವರ ಕಿರಗೂರಿನ ಗಯ್ಯಾಳಿಗಳು,…
ಪುತ್ತೂರು : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು (ರಿ.), ಕರ್ನಾಟಕ ಗಮಕ ಕಲಾ ಪರಿಷತ್ತು ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ 10ನೆಯ ಗಮಕ ಸಮ್ಮೇಳನವನ್ನು ದಿನಾಂಕ 17 ಮತ್ತು 18 ಅಕ್ಟೋಬರ್ 2025ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆ ಶ್ರೀ ಮುಳಿಯ ತಿಮ್ಮಪ್ಪಯ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಸ್ಥಾನ ಮೆಲ್ಕಾರ್ ಬಂಟ್ವಾಳ, ವಸುಧಾ ಪ್ರತಿಷ್ಠಾನ ಉಪ್ಪಿನಂಗಡಿ, ಎಸ್.ಡಿ.ಪಿ. ರೆಮಿಡೀಸ್ ಪುತ್ತೂರು, ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ಪುತ್ತೂರು, ದ್ವಾರಕಾ ಸಮೂಹ ಸಂಸ್ಥೆಗಳು ಪುತ್ತೂರು, ಗೌರಿ ಮಾಧವ ನಾಯಕ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು, ಪ್ರಗತಿ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಖ್ಯಾತ ಪ್ರವಚನಕಾರರಾದ ಮುಳಿಯ ಶಂಕರ ಭಟ್ಟ ಇವರು ಸಮ್ಮೇಳನಧ್ಯಕ್ಷತೆ ವಹಿಸಲಿದ್ದು, ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು…
ಹಾಸನ : ಮಾಣಿಕ್ಯ ಪ್ರಕಾಶನ (ರಿ.) ಹಾಸನ ಇದರ ವತಿಯಿಂದ ದಿನಾಂಕ 02 ನವೆಂಬರ್ 2025ರ ಭಾನುವಾರದಂದು ಹಾಸನದ ಸಂಸ್ಕೃತ ಭವನದಲ್ಲಿ ಹಮ್ಮಿಕೊಳ್ಳುವ ದಶಮಾನೋತ್ಸವ ಹಾಗೂ ರಾಜ್ಯಮಟ್ಟದ ಕವಿ-ಕಾವ್ಯ ಸಂಭ್ರಮದ ಸರ್ವಾಧ್ಯಕ್ಷರನ್ನಾಗಿ ಮುಂಬಯಿಯ ಸಾಹಿತಿ, ಸಂಘಟಕಿ ವಾಣಿ ಶೆಟ್ಟಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪ್ರಕಾಶಕಿ ದೀಪಾ ಉಪ್ಪಾರ್ ತಿಳಿಸಿದ್ದಾರೆ. ನಿಕಟಪೂರ್ವ ಸಂಭ್ರಮಗಳ ಸರ್ವಾಧ್ಯಕ್ಷರಾದ ಡಾ. ವಿಶ್ವೇಶ್ವರ ಎನ್. ಮೇಟಿ, ಡಾ. ಅಮರೇಶ್ ಪಾಟೀಲ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್, ಸಾಹಿತಿಗಳಾದ ನಾಗರಾಜ್ ದೊಡ್ಡಮನಿ, ಡಾ. ಎಚ್.ಕೆ. ಹಸೀನಾ, ಎಚ್.ಎಸ್. ಬಸವರಾಜ್, ವಾಸು ಸಮುದ್ರವಳ್ಳಿ, ಡಾ. ಪಿ. ದಿವಾಕರ ನಾರಾಯಣ, ದೇಸು ಆಲೂರು ಇವರನ್ನೊಳಗೊಂಡ ಸಮಿತಿ ವಾಣಿ ಶೆಟ್ಟಿಯವರು ಹೊರನಾಡಿನಲ್ಲಿದ್ದುಕೊಂಡು ಕನ್ನಡ ಸಾಹಿತ್ಯ ಮತ್ತು ಸಂಘಟನೆಗೆ ಸಲ್ಲಿಸುತ್ತಿರುವ ಅನುಪಮ ಸೇವೆಯನ್ನು ಪರಿಗಣಿಸಿ ದಶಮಾನೋತ್ಸವದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ವಾಣಿ ಶೆಟ್ಟಿಯವರ ಪರಿಚಯ : ವಾಣಿ ಶೆಟ್ಟಿಯವರು ಮೂಲತಃ ಮೂಡಬಿದ್ರಿಯವರು. ತಂದೆ ವಾಸು ಶೆಟ್ಟಿ…
ಮಂಗಳೂರು : ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಮಂಗಳಗಂಗೆ ವಾರ್ಷಿಕ ಸಂಚಿಕೆ ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಇವರ ಆಶ್ರಯದಲ್ಲಿ ಎರಡು ದಿನಗಳ ‘ಸೃಜನೇತರ ಬರೆವಣಿಗೆ ಕಾರ್ಯಾಗಾರ’ವನ್ನು ದಿನಾಂಕ 17 ಮತ್ತು 18 ಅಕ್ಟೋಬರ್ 2025ರಂದು ಅಪರಾಹ್ನ 2-00 ಗಂಟೆಗೆ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ಮಾನ್ಯ ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ನಿರಂಜನ ವಾನಳ್ಳಿ ಇವರು ಈ ಕಾರ್ಯಾಗಾರವನ್ನು ಉದ್ಘಾಟನೆ ಮಾಡಲಿದ್ದಾರೆ. ‘ಸೃಜನೇತರ ಬರೆವಣಿಗೆಯ ಕಲ್ಪನೆ ಸಾಧ್ಯತೆಗಳು ಮಾಧ್ಯಮಗಳು ಇತಿ ಮಿತಿ’ ಎಂಬ ವಿಷಯದ ಬಗ್ಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ನಿರಂಜನ ವಾನಳ್ಳಿ ಇವರು ವಿಷಯ ಮಂಡನೆ ಮಾಡಲಿದ್ದಾರೆ. ದಿನಾಂಕ 18 ಅಕ್ಟೋಬರ್ 2025ರಂದು ಪೂರ್ವಾಹ್ನ 9-30 ಗಂಟೆಗೆ ‘ಕಿರು ಬರೆವಣಿಗೆ’ ಬಗ್ಗೆ ಹಿರಿಯ ಲೇಖಕರಾದ ಡಾ. ಚ. ನ. ಶಂಕರ್ ರಾವ್,…
ಮಂಗಳೂರು: ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತ, ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದ, ದಿನೇಶ್ ಅಮ್ಮಣ್ಣಾಯ ದಿನಾಂಕ 16 ಅಕ್ಟೋಬರ್ 2025ರ ಗುರುವಾರದ ಬೆಳಿಗ್ಗೆ ನಿಧನರಾದರು. ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ಪ್ರಸಿದ್ಧರಾಗಿದ್ದ ಶ್ರೀಯುತರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪೌರಾಣಿಕ ಮತ್ತು ತುಳು ಪ್ರಸಂಗಗಳೆರಡರಲ್ಲೂ ತಮ್ಮ ಛಾಪು ಮೂಡಿಸಿರುವ ಇವರು, ಯಕ್ಷಗಾನ ಕ್ಷೇತ್ರದ ಅಗ್ರಗಣ್ಯ ಭಾಗವತರು. ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದರಾದ, ತೆಂಕುತಿಟ್ಟು ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ ದಾಮೋದರ ಮಂಡೆಚ್ಚರ ಗರಡಿಯಲ್ಲಿ ಪಳಗಿದ ದಿನೇಶ್ ಅಮ್ಮಣ್ಣಾಯರು, ತಮ್ಮ ವೃತ್ತಿಜೀವನವನ್ನು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ಆರಂಭಿಸಿದ್ದರು. ಹಿಮ್ಮೇಳ ವಾದನದ ಅನುಭವದೊಂದಿಗೆ ಭಾಗವತಿಕೆಯತ್ತ ಆಸಕ್ತಿ ಮೂಡಿ ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ರೂಪಿಸಿಕೊಂಡು ಯಶಸ್ವಿಯಾದರು. ಅಮ್ಮಣ್ಣಾಯರು ಕೇವಲ ಪೌರಾಣಿಕ ಪ್ರಸಂಗಗಳಿಗಷ್ಟೇ ಅಲ್ಲದೆ, ಅನೇಕ ತುಳು ಪ್ರಸಂಗಗಳಿಗೂ ಧ್ವನಿಯಾಗಿ ಅಪಾರ ಜನಮನ್ನಣೆ ಗಳಿಸಿದವರು. ಅದರಲ್ಲೂ ‘ಕಾಡಮಲ್ಲಿಗೆ’, ‘ಕಚ್ಚೂರ…
ಚಾಮರಾಜನಗರ : ಶಿರಸಿಯ ಸುಪ್ರಸಿದ್ಧ ಪಂಚತಾರಾ ಹೋಟೆಲ್ ಸುಪ್ರಿಯಾ ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ದಿನಾಂಕ 12 ಅಕ್ಟೋಬರ್ 2025ರಂದು ಕದಂಬ ಕಲಾ ಸಾಂಸ್ಕೃತಿಕ ಪರಿಷತ್ತು ಕರ್ನಾಟಕ ಸಾರಥ್ಯದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಉ.ಕ. ಘಟಕ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ನಾಡಿನ ಖ್ಯಾತ ಕವಿ ಡಾ. ಕಾವೆಂಶ್ರೀ ಕಾವ್ಯಯಾನ-ಭಾವಗಾನ 1, ಶತಕಂಠ ಗೀತಗಾಯನ, ಕದಂಬ ರತ್ನಾಕರರ ಹೊನ್ನುಡಿ ಕವನ ಸಂಕಲನ ಲೋಕಾರ್ಪಣೆ ಹಾಗೂ ಕದಂಬ ಕಲಾರಾಧಕ -2025 ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕದಂಬ ರತ್ನಾಕರ, ತಹಶೀಲ್ದಾರ ಪಟ್ಟರಾಜ ಗೌಡ ಹಾಗೂ ಕ.ಸಾ.ಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಸೇರಿದಂತೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು. ಜಾನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ ಇವರ ಜೊತೆಗೆ ಡಾ. ನಾಗರಾಜ ಬೈರಿ -ಮೈಸೂರು, ಪ್ರತಿಭಾಂಜಲಿ ಡೇವಿಡ್ – ಮಂಡ್ಯ, ಶಾಂತಾ ಶೆಟ್ಟಿ- ಶಿವಮೊಗ್ಗ, ಗಣೇಶ್ ಶೆಣೈ- ದಾವಣಗೆರೆ ಹಾಗೂ ಎರ್ರಿಸ್ವಾಮಿ ಎಚ್. – ಬೆಂಗಳೂರು ಇವರಿಗೂ ಇವರ ಸಾಂಸ್ಕೃತಿಕ ಸೇವೆಯನ್ನ…
ಮುಂಬಯಿ : ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ಟೀಮ್ ಐಲೇಸಾ ಸಹಕಾರದೊಂದಿಗೆ ದಿನಾಂಕ 04 ಅಕ್ಟೋಬರ್ 2025ರಂದು ಕವಿ ಕುಸುಮಾಗ್ರಜ ಸಭಾಂಗಣದಲ್ಲಿ ಆಯೋಜಿಸಿದ್ದ ಕುಸುಮೋತ್ಸವ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮುಂಬಯಿ ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಜಿ.ಎನ್. ಉಪಾಧ್ಯ “ಮುಂಬಯಿ ವಿಶ್ವವಿದ್ಯಾಲಯದಲ್ಲಿ ನೂರಾರು ವಿಭಾಗಗಳಿವೆ. ನಮ್ಮ ಕನ್ನಡ ವಿಭಾಗ ಪುಟ್ಟಗೂಡಾದರೂ ಅತಿ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ ಕೀರ್ತಿ ವಿಭಾಗಕ್ಕೆ ಇದೆ. ಜ್ಞಾನಂ ವಿಜ್ಞಾನ ಸಹಿತಂ ಎಂಬ ಮಾತಿನಂತೆ ಕಲಾ ಭಾಗ್ವತ್ ಇವರು ವಿಜ್ಞಾನಕ್ಷೇತ್ರದಿಂದ ಬಂದು ಸಾಹಿತ್ಯದ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅವರು ಸರ್ವಕುತೂಹಲಿ. ಜಾನಪದ ನಮ್ಮ ಜೀವನಾಡಿ. ಇಂದು ಬಿಡುಗಡೆಗೊಂಡ ಕಲಾ ಭಾಗ್ವತ್ ಅವರ ‘ಮುಂಬಾಪುರಿ’ ಕೃತಿಯಲ್ಲಿ ನಗರ ಜಾನಪದವನ್ನು ಸೃಷ್ಟಿ ಮಾಡಿದ್ದಾರೆ. ಆಕರ್ಷಕ ಶೀರ್ಷಿಕೆಯೊಂದಿಗೆ ಕಲಾ ಭಾಗ್ವತ್ ಇವರು ಈ ಕೃತಿಯ ಮೂಲಕ ಮುಂಬಯಿಯ ದರ್ಶನವನ್ನು ಮಾಡಿಸುತ್ತಾರೆ. ಕನ್ನಡಕ್ಕೆ ಒಂದು ಮೌಲಿಕವಾದ ಕೃತಿಯ ಸೇರ್ಪಡೆಯಾಗಿದೆ. ಒಳ್ಳೆಯ…
ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಹಂಪನ್ಕಟ್ಟಾದ ಎಂ.ಸಿ.ಸಿ. ಬ್ಯಾಂಕ್ ಲಿ. ಇದರ ಸಭಾಂಗಣದಲ್ಲಿ ದಿನಾಂಕ 19 ಅಕ್ಟೋಬರ್ 2025ರಂದು ಅಪರಾಹ್ನ 10-30 ಗಂಟೆಗೆ ‘ಸಾಹಿತ್ಯ ಭಂಡಾರ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಕೊಂಕಣಿ ಸಾಹಿತಿಗಳು ಬರೆದ ಕೊಂಕಣಿಯ 9 ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರವರು ವಹಿಸಿಕೊಳ್ಳಲಿರುವರು. ಜವಹರ್ಲಾಲ್ ನೆಹರು ವಿಶ್ವವಿದ್ಯಾಲಯ ನ್ಯೂಡೆಲ್ಲಿ ಇಲ್ಲಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊಫೆಸರ್ ವಲೇರಿಯನ್ ರೊಡ್ರಿಗಸ್ರವರು ಮುಖ್ಯ ಅತಿಥಿಗಳಾಗಿ ಹಾಗೂ ದಾಯ್ಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ, ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊರವರು ಗೌರವ ಅತಿಥಿಗಳಾಗಿ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಕೊಂಕಣಿ ಅಕಾಡೆಮಿಯು ಹಮ್ಮಿಕೊಂಡ ಕಾದಂಬರಿ ಹಾಗೂ ಕಿರು ನಾಟಕಗಳನ್ನು ಬರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿರುವುದು. ಈ ಸ್ಪರ್ಧೆಯ ನಗದು ಬಹುಮಾನವನ್ನು ಎಂ.ಸಿ.ಸಿ. ಬ್ಯಾಂಕ್ ಪ್ರಾಯೋಜಕತ್ವದಲ್ಲಿ ವಿತರಿಸಲಾಗುವುದು.