Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಇವರ ಸಹಯೋಗದಲ್ಲಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ದಿನಾಂಕ 28 ಡಿಸೆಂಬರ್ 2025ರಂದು 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಜೊತೆಗೆ ವಾದಿರಾಜ ಕನಕದಾಸ ‘ಸಾಹಿತ್ಯ ಮಂಥನ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ವಿದ್ವಾಂಸ ಡಾ. ಬಿ ಎ. ವಿವೇಕ ರೈ “ಉಡುಪಿ ಎಂಬ ಈ ಸ್ಥಳ ಬಹು ಪವಿತ್ರವಾದದ್ದು, ತತ್ವಜ್ಞಾನಿಗಳು, ಕವಿಗಳು, ಯತಿಗಳು ಇದ್ದಂತಹ ನಾಡು. ಜೊತೆಗೆ ವಿದ್ವತ್ತಿನ ಜಿಜ್ಞಾಸೆಯ ಕೆಂದ್ರವೂ ಹೌದು. ಶ್ರೀ ವಾದಿರಾಜರು, ಮಧ್ವಾಚಾರ್ಯರ ಹಲವು ಚಿಂತನೆಗಳನ್ನು ಕೃತಿರೂಪದಲ್ಲಿ ಕನ್ನಡ ಮತ್ತು ತುಳುವಿನಲ್ಲಿ ತಂದರು. ಹಾಗಾಗಿ ಶ್ರೀ ವಾದಿರಾಜರು ಮತ್ತು ಕನಕದಾಸರು ಜನಸಾಮಾನ್ಯರ ಬದುಕಿಗೆ ಮಾರ್ಗದರ್ಶಿಗಳಾದರು. ವಾದಿರಾಜರು ಮತ್ತು…
ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 28 ಡಿಸೆಂಬರ್ 2025ರ ಭಾನುವಾರ ತಾಲೂಕು ಮಟ್ಟದ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಹಿತಿ ಹಾಗೂ ಪತ್ರಕರ್ತರಾದ ಸಿದ್ದಾಪುರ ವಾಸುದೇವ ಭಟ್ “ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ. ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದು” ಎಂದು ಅಭಿಪ್ರಾಯಪಟ್ಟರು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, “ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ ಎಂಬುದು ಈ ಸಂದರ್ಭಗಳಲ್ಲಿ ಸ್ಪಷ್ಟವಾಗುತ್ತದೆ.…
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಸಹಕಾರದೊಂದಿಗೆ ಪುತ್ತೂರು ತಾಲೂಕು ಕಚೇರಿಯ ಉಪ ತಹಶೀಲ್ದಾರ್ ಸುಲೋಚನಾ ಪಿ.ಕೆ. ಇವರ ‘ಮೂಗಿಯ ಮನದೊಳು’ ಚೊಚ್ಚಲ ಕನ್ನಡ ಕಾದಂಬರಿಯು ದಿನಾಂಕ 28 ಡಿಸೆಂಬರ್ 2025ರಂದು ಪುತ್ತೂರಿನ ಬೈಪಾಸ್ ರಸ್ತೆಯ ಬಳಿಯ ಡಾ. ಎನ್. ಸುಕುಮಾರ ಗೌಡರ ಮಕ್ಕಳ ಮಂಟಪದಲ್ಲಿ ಲೋಕಾರ್ಪಣೆಗೊಂಡಿತು. ಡಾ. ತಾಳ್ತಜೆ ವಸಂತ ಕುಮಾರ ಇವರು ಕೃತಿಯನ್ನು ಲೋಕಾರ್ಪಣೆಗೊಳಿಸಿ, ಕೃತಿಯ ಬಗ್ಗೆ ಮಾತನಾಡುತ್ತಾ “ಕಾದಂಬರಿಗೆ ಸಿದ್ಧ ಶಿಲ್ಪದ ಹಿನ್ನಲೆಯಿದ್ದು, ಕಾದಂಬರಿಯ ಬೆಳವಣಿಗೆಯಲ್ಲಿ ಅತಿಮಾನುಷ ಅಂಶದ ಸ್ವರೂಪ ಮತ್ತು ಆಕೃತಿಯಲ್ಲಿ ತಾಂತ್ರಿಕ ವಿಷಯಗಳ ಪಾತ್ರಗಳನ್ನು ಅದ್ಭುತವಾಗಿ ಲೇಖಕಿ ಚಿತ್ರೀಕರಿಸಿರುತ್ತಾರೆ. ಸಾಂಸ್ಕೃತಿಕ ತಾತ್ತ್ವಿಕ ನೆಲೆಯನ್ನು ಹಿಡಿದಿಡುವಲ್ಲಿಯೂ ಈ ಕಾದಂಬರಿ ಮುಖ್ಯವಾಗಿದೆ. ಪಾತ್ರಗಳಿಗೆ ಹೆಸರುಗಳ ಆಯ್ಕೆ ಕಲಾತ್ಮಕವಾಗಿದ್ದು, ಆಯಾಯ ಸನ್ನವೇಷಕ್ಕೆ ಹೊಂದಿಕೆಯಾಗುವಂತಹ ಹೆಸರುಗಳ ಆಯ್ಕೆ ಮಾಡಿದ್ದು, ಪ್ರಧಾನ ಪಾತ್ರ ʼಮದುರಂಗಿʼ ಎಂಬ ಹೆಸರೇ ಬಹಳ ಸಾಂಕೇತಿಕವಾಗಿದೆ ಎಂದು ಡಾ. ಶಿವರಾಮ ಕಾರಂತರ ‘ಮೂಕಜ್ಜಿಯ ಕನಸುಗಳು’ ಮತ್ತು ಸಾಹಿತಿ ಬೈರಪ್ಪನವರ…
ಮಂಗಳೂರು : ಹರಿಕಥಾ ಪರಿಷತ್ ಮಂಗಳೂರು, ರಾಮಕೃಷ್ಣ ಮಿಷನ್ ಮಂಗಳೂರು ಇವುಗಳ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮತ್ತು ಕಾಸರಗೋಡು ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ ‘ಹರಿಕಥಾ ಸ್ಪರ್ಧೆ’ಯನ್ನು ದಿನಾಂಕ 27 ಡಿಸೆಂಬರ್ 2025ರಂದು ರಾಮಕೃಷ್ಣ ಮಠದ ಅಮೃತ ಭವನದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಜೀ “ಎಳೆವೆಯಿಂದಲೇ ಹರಿಕಥೆ ಅಳವಡಿಸುವುದರಿಂದ ನೈತಿಕ ಶಿಕ್ಷಣ ಸುಗಮವಾಗಿ ಪಡೆಯಬಹುದು. ಪುರಾಣ ಕಥೆಗಳನ್ನು ತಿಳಿಯುವ ಮೂಲಕ ನಮ್ಮ ಬದುಕಿನ ಶೈಲಿಯನ್ನು ಬದಲಾಯಿಸಿ ಕೊಳ್ಳಬಹುದು” ಎಂದು ಹೇಳಿದರು. ಲೆಕ್ಕಪರಿಶೋಧಕ ಎಸ್.ಎಸ್. ನಾಯಕ್ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಅನೇಕ ಕಡೆ ಹರಿದಾಸರಿಗೆ ಹೆಚ್ಚಿನ ಪ್ರಾಶಸ್ಯ ಸಿಗುತ್ತಿರುವುದು ಖುಷಿಯ ವಿಚಾರ” ಎಂದರು. ಎರಡು ವರ್ಷಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಸೀಮಿತವಾಗಿದ್ದ ಈ ಸ್ಪರ್ಧೆ ಈ ವರ್ಷ ರಾಜ್ಯ ಮಟ್ಟಕ್ಕೆ ವಿಸ್ತರಿಸಲಾಗಿತ್ತು. ದಕ್ಷಿಣ ಕನ್ನಡ, ಕಾಸರಗೋಡು ಮಾತ್ರವಲ್ಲದೆ ಬೆಂಗಳೂರು, ಶಿವಮೊಗ್ಗ ಬಾಗಲಕೋಟೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಯ್ದ 22 ಮಂದಿ ಯುವ…
ಬೆಂಗಳೂರು : ವಿದುಷಿ ಕುಸುಮ ಎ. ನೃತ್ಯಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಬದ್ಧತೆಯ ನೃತ್ಯ ಕಲಾವಿದೆ ಮತ್ತು ನೃತ್ಯಗುರು. ಅವರ ನೇತೃತ್ವದ ‘ಶರ್ವಾಣಿ ನಾಟ್ಯ ಕಲಾಕೂಟ’ (ಅಕಾಡೆಮಿ ಆಫ್ ಆರ್ಟ್ಸ್) ನೃತ್ಯಶಾಲೆಯಲ್ಲಿ ಅನೇಕ ಉದಯೋನ್ಮುಖ ಪ್ರತಿಭೆಗಳು ನಾಟ್ಯಶಿಕ್ಷಣ ಪಡೆದು ಕಲಾರಂಗದಲ್ಲಿ ಮುನ್ನಡೆಯುತ್ತಿದ್ದಾರೆ. ಭರತನಾಟ್ಯದಲ್ಲಿ ಎಂ.ಎ. ಪದವೀಧರೆಯಾದ ಕುಸುಮಾ ವಿದ್ವತ್ ಪದವಿಯನ್ನು ಪಡೆದಿರುವುದಲ್ಲದೆ, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲೂ ಕರ್ನಾಟಕ ಸರ್ಕಾರದ ಸೀನಿಯರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಕಲರಿಪಯಟು – ಯುದ್ಧಕಲೆಯ ನೃತ್ಯ ಆಯಮದಲ್ಲೂ ಪಳಗಿದ್ದು, ನಾಡಿನಾದ್ಯಂತ ಅನೇಕ ಪ್ರತಿಷ್ಠಿತ ವೇದಿಕೆಗಳ ಮೇಲೆ ನೃತ್ಯ ಪ್ರದರ್ಶನ ಮಾಡಿ ಕಲಾರಸಿಕರ ಮೆಚ್ಚುಗೆ ಗಳಿಸಿದ್ದಾರೆ. ಬಿ.ಎ., ಎಲ್.ಎಲ್.ಬಿ. ತೇರ್ಗಡೆಯಾಗಿ ವಕೀಲೆಯಾಗಿರುವ ಕುಸುಮಾ, ಅಷ್ಟೇ ಉತ್ತಮ ನೃತ್ಯಗುರುವಾಗಿಯೂ ಮಕ್ಕಳಿಗೆ ನಿರ್ವಂಚನೆಯಿಂದ ವಿದ್ಯಾಧಾರೆ ಎರೆಯುತ್ತಿದ್ದಾರೆ. ಇದೀಗ ಅವರ ಸಂಸ್ಥಾಪನೆಯ ‘ಶರ್ವಾಣಿ ನಾಟ್ಯ ಕಲಾಕೂಟ’ ಸಂಸ್ಥೆ ತನ್ನ ದಶಮಾನೋತ್ಸವವನ್ನು ‘ನರ್ತನ ಶ್ರುತಿ’ ಶೀರ್ಷಿಕೆಯಲ್ಲಿ ಆಚರಿಸಿಕೊಳ್ಳುತ್ತಿದೆ. ಅವರ ಶಿಷ್ಯಗಣ ಮನಮೋಹಕ ನೃತ್ಯ ವೈಭವವನ್ನು ಪ್ರದರ್ಶಿಸುವುದರ ಜೊತೆಗೆ, ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರನ ಕುರಿತ ವಿಶಿಷ್ಟ…
ಮಂಗಳೂರು : ಅಲೆವೂರಾಯ ಪ್ರತಿಷ್ಠಾನದ ವತಿಯಿಂದ ದಿನಾಂಕ 26 ಡಿಸೆಂಬರ್ 2025ರಂದು ಮಂಗಳಾದೇವಿ ದೇವಸ್ಥಾನದಲ್ಲಿ ‘ಯಕ್ಷ ತ್ರಿವೇಣಿ’ಯ ಎರಡನೇ ದಿನದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ತನ್ನ ಮನದಾಳದ ಮಾತುಗಳನ್ನಾಡಿದ ಹಿರಿಯ ಯಕ್ಷಗಾನ ಕಲಾವಿದ ವಸಂತ ಗೌಡ ಕಾಯರ್ತಡ್ಕ “ಕಲೆಗಳೆಲ್ಲಾ ನಮ್ಮ ಸಂಸ್ಕೃತಿಯ ವಿವಿಧ ಮುಖಗಳು. ಅದರ ಆರಾಧನೆಯಿಂದ ಕಲಾವಿದರಾದ ನಾವು ಬೆಳಗುತ್ತೇವೆ. ಸರ್ವಸಮರ್ಪಣಾ ಭಾವದಿಂದ ನಾನು ನನ್ನನ್ನು ಶ್ರೀಕ್ಷೇತ್ರ ಧರ್ಮಸ್ಥಳ ಮೇಳದಲ್ಲೇ ತೊಡಗಿಸಿಕೊಂಡೆ. ಸಂತಸವನ್ನು ಪಡೆದೆ. ಇದೀಗ ಐವತ್ತೊಂದು ವರ್ಷದ ತಿರುಗಾಟದಲ್ಲಿದ್ದೇನೆ. ಯಕ್ಷಗಾನ ನನಗೆ ಎಲ್ಲವನ್ನೂ ನೀಡಿದೆ.” ಎಂದು ಸಂತೃಪ್ತ ಭಾವದಿಂದ ಹೇಳಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ ಚಂದ್ರಶೇಖರ್ ರವರು ವಸಂತಗೌಡರ ತಿರುಗಾಟ, ಅವರು ನಿರ್ವಹಿಸುವ ಭಿನ್ನ ಭಿನ್ನ ಪಾತ್ರಗಳ ಬಗ್ಗೆ ಮೆಚ್ಚುಗೆ ಸೂಸಿ ಅವರನ್ನು ಅಭಿನಂದಿಸಿದರು. ತುಳು ಕೂಟದ ಅಧ್ಯಕ್ಷೆ ಹೇಮಾ ದಾಮೋದರ ನಿಸರ್ಗ, ಉಳ್ಳಾಲ ಪುರಸಭೆಯ ಅಧಿಕಾರಿ ರವಿಕೃಷ್ಣ ದಂಬೆ ಉಪಸ್ಥಿತರಿದ್ದರು. ಸಂಘಟಕ ಪೇಜಾವರ ಸುಧಾಕರ ರಾವ್ ನಿರ್ವಹಿಸಿದರೆ, ಯಕ್ಷಮಂಜುಳಾದ ಸದಸ್ಯೆ ಪೂರ್ಣಿಮಾ ಪ್ರಶಾಂತ ಶಾಸ್ತ್ರಿ…
ಮಂಗಳೂರು : ಮಂಗಳೂರಿನ ಸಪ್ನ ಬುಕ್ ಹೌಸ್ 70ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಪ್ರಕಟಿಸಿದ 70 ಕನ್ನಡ ಪುಸ್ತಕಗಳು ದಿನಾಂಕ 27 ಡಿಸೆಂಬರ್ 2025ರಂದು ಲೋಕಾರ್ಪಣೆಗೊಂಡವು. ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದ ವಿದ್ವಾಂಸರಾದ ಪ್ರೊ. ಬಿ.ಎ. ವಿವೇಕ ರೈ “2022ರಿಂದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಮೂಲಕ ಸರಕಾರ ಮಾಡುತ್ತಿರುವ ಸಗಟು ಖರೀದಿ ನಡೆಯುತ್ತಿಲ್ಲ. ಇದನ್ನು ನಿಲ್ಲಿಸಿದರೆ ಲೇಖಕ ಪ್ರಕಾಶಕರು ಪ್ರಕಟಣೆಯನ್ನು ನಿಲ್ಲಿಸುತ್ತಾರೆ. ಮಾತ್ರವಲ್ಲ ಸಾರ್ವಜನಿಕ ಗ್ರಂಥಾಲಯಗಳು ಹೊಸಪುಸ್ತಕಗಳಿಲ್ಲದೇ ಪಳೆಯುಳಿಕೆಯಂತಾಗುತ್ತವೆ. ಇಂತಹ ಗ್ರಂಥಾಲಯಗಳನ್ನು ಹೆಚ್ಚು ಬಳಸುವ ಮಹಿಳೆಯರು, ಬಡವರು, ಮಕ್ಕಳಲ್ಲಿ ಓದುವ ಆಸಕ್ತಿ ಕುಂಠಿತಗೊಳ್ಳುತ್ತದೆ. ಸಗಟು ಖರೀದಿ ಆಯಾ ವರ್ಷವೇ ನಡೆಯುವಂತೆ ನೋಡಿಕೊಳ್ಳುವುದು ಸರಕಾರದ ಸಾಂಸ್ಕೃತಿಕ ಜವಾಬ್ದಾರಿ. ಪುಸ್ತಕ ಮಾರಾಟ ಮಳಿಗೆಗಳು ಸಂಪರ್ಕ ಸೇತುಗಳಾಗಿ ಕಾರ್ಯನಿರ್ವಹಿಸಬೇಕು. ಗುಜರಾತಿನಿಂದ ಬಂದು ನಿತಿನ್ ಷಾ ಅವರು ಸಪ್ನವನ್ನು ಆರಂಭಿಸಿ ತೋರುತ್ತಿರುವ ಕನ್ನಡ ಪ್ರೀತಿ ವಿಶೇಷವಾದುದು. ಕನ್ನಡಕ್ಕೆ ಮನ್ನಣೆ ಬರುವುದು ಕೇವಲ ಘೋಷಣೆ ಭಾಷಣಗಳಿಂದಲ್ಲ, ಇಂತಹ ಕೆಲಸಗಳಿಂದ. ಜಗತ್ತಿನ ಜ್ಞಾನ ಕನ್ನಡದ ಮೂಲಕ ಬರಬೇಕು. ಡಿಜಿಟಲ್ ವೇದಿಕೆಗಳಿಂದ ಮಾಹಿತಿ…
ಬದುಕು ಮತ್ತು ಬರವಣಿಗೆಯಲ್ಲಿ ಅಪೂರ್ವ ಸಂಯಮವನ್ನು ಮೆರೆದ ಹಿರಿಯ ಮಹಿಳೆ ಪ್ರೊ. ಮಾಲತಿ ಪಟ್ಟಣಶೆಟ್ಟಿ. ಬದುಕಿನಲ್ಲಿ ಜಂಝಾವಾತವೇ ಎದುರಾದರೂ ಅದಕ್ಕೆ ಶರಣಾಗದೆ, ಮಾನವೀಯವಾಗಿಯೂ, ಧೀರೋದಾತ್ತ ನಡೆಯಿಂದಲೂ ಎಲ್ಲರ ಗೌರವಾದರಗಳನ್ನು ಗೆದ್ದ ವ್ಯಕ್ತಿತ್ವ ಅವರದು. ಕತೆ ಮತ್ತು ವಿಮರ್ಶೆಯ ಪ್ರಕಾರಗಳಲ್ಲಿ ದೃಢವಾದ ಹೆಜ್ಜೆಗಳನ್ನು ಊರುತ್ತಿರುವ ಡಾ. ಸುಭಾಷ್ ಪಟ್ಟಾಜೆಯವರು ಇತ್ತೀಚೆಗೆ ಕನ್ನಡದ ಅಪರೂಪದ ಬರಹಗಾರ್ತಿ ಸುನಂದಾ ಬೆಳಗಾಂವಕರರ ಕುರಿತಾದ ಮೊನೋಗ್ರಾಫನ್ನು ಬಹಳ ಸುಂದರವಾಗಿ ಕಟ್ಟಿ ಕೊಟ್ಟಿದ್ದಾರೆ. ಲೇಖಕಿಯ ಬದುಕು ಮತ್ತು ಬರಹದ ಬಗ್ಗೆ ಮಾಹಿತಿಗಳನ್ನು ಕಲೆಹಾಕಿ, ವಿಶ್ಲೇಷಿಸಿ, ಪುಸ್ತಕವನ್ನು ಕೋದ ಬಗೆ ಹಿರಿಯ ಕಿರಿಯರ ಮೆಚ್ಚುಗೆಯನ್ನು ಗಳಿಸಿದೆ. ಕಾಸರಗೋಡಿನಲ್ಲಿದ್ದುಕೊಂಡು ಧಾರವಾಡದ ಅಕ್ಷರ ಲೋಕದ ಹಿರಿಯರ ಪ್ರೀತಿ ಅಭಿಮಾನಗಳನ್ನು ತನ್ನ ಅಪ್ಪಟವಾದ ದುಡಿಮೆಯಿಂದಲೇ ಗಳಿಸಿಕೊಂಡ ಸುಭಾಷ್ ನನ್ನ ವಿದ್ಯಾರ್ಥಿಯಾಗಿದ್ದವರು. ಪ್ರಸ್ತುತ ಗಡಿನಾಡಿನಲ್ಲಿ ಅಧ್ಯಾಪಕರಾಗಿದ್ದುಕೊಂಡು, ಬೋಧನೆಯೊಂದಿಗೆ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಪ್ರೀತಿಯನ್ನು ಹುಟ್ಟು ಹಾಕುತ್ತಿರುವವರು. ಈ ಕಿರು ಹೊತ್ತಗೆಯಲ್ಲಿ ಸುಭಾಷ್ ಅವರು ಮಾಲತಿ ಪಟ್ಟಣಶೆಟ್ಟಿಯವರ ವೈಯಕ್ತಿಕ ಹಾಗೂ ಸಾಮಾಜಿಕ ಬದುಕಿನ ವಿವರಗಳನ್ನು ಸಂಕ್ಷಿಪ್ತವಾಗಿ ನೀಡಿದ್ದಾರೆ. ಮುಂದೆ ಕಾವ್ಯ,…
ಮಂಜೇಶ್ವರ : ಸವಿಹೃದಯದ ಕವಿಮಿತ್ರರು ವೇದಿಕೆ ಪೆರ್ಲ ಇದರ ವತಿಯಿಂದ ಮಂಜೇಶ್ವರ ಗೋವಿಂದ ಪೈ ನಿವಾಸ ಗಿಳಿವಿಂಡುವಿನಲ್ಲಿ ದಿನಾಂಕ 25 ಡಿಸೆಂಬರ್ 2025ರಂದು ಕೃತಿ ಬಿಡುಗಡೆ ಹಾಗೂ ಕವಿಗೋಷ್ಠಿಯು ಜರಗಿತು. ಈ ಕಾರ್ಯಕ್ರಮದಲ್ಲಿ ‘ಕಥಾ ದೀಪ್ತಿ’ ಸಂಪಾದಿತ ಕತೆಗಳು ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಶಂಪಾ ಪ್ರತಿಷ್ಠಾನ ಬೆಂಗಳೂರು ಸಂಸ್ಥಾಪಕ, ವಿಶ್ರಾಂತ ಪ್ರಾಧ್ಯಾಪಕಿ ಡಾ.ಪ್ರಮೀಳಾ ಮಾಧವ್ “ಕತೆ ಕೇಳುವ, ಹೇಳುವ ಅಭ್ಯಾಸ ಸೃಜನಶೀಲ ಮನಸ್ಸುಗಳನ್ನು ಸೃಷ್ಟಿಸುತ್ತವೆ. ಹಿಂದೆ ಹೆಚ್ಚಿನ ಮಕ್ಕಳು ಕತೆ ಹೇಳಲು ಹಿರಿಯರಿಗೆ ದುಂಬಾಳು ಬೀಳುತ್ತಿದ್ದರು. ಕತೆ ಮುಗಿದ ಬಳಿಕ ಕೂಡಾ ಹೇಳುತ್ತಿದ್ದ ಕತೆಯನ್ನು ಬೆಳೆಸಿ (ಸೃಷ್ಟಿಸಿ) ಮಕ್ಕಳಿಗೆ ಹೇಳುವ ಸಾಮರ್ಥ್ಯವನ್ನು ಹಿರಿಯರು ಹೊಂದಿದ್ದರು. ಕತೆಗಾಗಿ ಹಟ ಹಿಡಿಯುತ್ತಿದ್ದ ಸಣ್ಣ ಮಕ್ಕಳ ಕೈಗೆ ಇಂದು ಹಿರಿಯರು ಮೊಬೈಲ್ ಕೊಟ್ಟು ಸುಮ್ಮನಾಗಿಸುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಬದುಕು ಸುಂದರಗೊಳಿಸುವುದು, ಸ್ವಾಸ್ಥ್ಯ, ಸಮಾಜ ರೂಪಿಸುವುದು ಎಲ್ಲಾ ಸಾಹಿತ್ಯ ಪ್ರಕಾರಗಳ ಆಶಯವಾಗಿದೆ” ಎಂದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡು ಘಟಕದ ಅಧ್ಯಕ್ಷ ಡಾ.…
ಮಂಗಳೂರು : ಕಲಾವಿದ ಪ್ರವೀಣ್ ಕುಮಾರ್ ಅವರ ಕುಂಚದಿಂದ ಮೈಸೂರು ಮತ್ತು ತಾಂಜಾವೂರು ಶೈಲಿಯಲ್ಲಿ ಹೊರಹೊಮ್ಮಿರುವ ಕಲಾಕೃತಿಗಳ ‘ವರ್ಣ ಬೆಳದಿಂಗಳು’ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ನಗರದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ದಿನಾಂಕ 02ರಿಂದ 05 ಜನವರಿ 2025ರವರೆಗೆ ಆಯೋಜಿಸಲಾಗಿದೆ. ದಿನಾಂಕ 02 ಜನವರಿ 2025ರಂದು ಸಂಜೆ ಗಂಟೆ 5-30ಕ್ಕೆ ದೃಢವ್ರತ ಗೊರಿಕ್ರವರು ಪ್ರದರ್ಶನ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಯಾಗಿ ಸಮೀರ್ ಪುರಾಣಿಕ್ ಭಾಗವಹಿಸಲಿದ್ದು, ಅಸ್ಟ್ರೋ ಮೋಹನ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ ಕಲಾ ತರಬೇತಿ ಪಡೆದಿರುವ ಪಿ. ಪ್ರವೀಣ್ ಕುಮಾರ್ ಇವರು ಕಳೆದ 24 ವರ್ಷಗಳಿಂದ ಸುಮಾರು 4,000ಕ್ಕೂ ಅಧಿಕ ಚಿತ್ರಕಲೆಗಳನ್ನು ರಚಿಸಿದ್ದಾರೆ. ಸುಮಾರು 15ರಷ್ಟು ಕಲಾಕೃತಿಗಳು ಪ್ರದರ್ಶನಗೊಳ್ಳಲಿದೆ. ದೇವರುಗಳ ಕಲಾತ್ಮಕ ಚಿತ್ರಣಗಳನ್ನು ಚಿನ್ನದ ತಗಡಿನ ಎಂಬೋಸ್ನ ಮೂಲಕ ರಚಿಸಲ್ಪಟ್ಟ ರೂ.20 ಸಾವಿರದಿಂದ ರೂ.80 ಸಾವಿರ ವರೆಗಿನ ಚಿತ್ರಕಲೆಗಳು ಪ್ರದರ್ಶನದಲ್ಲಿ ಲಭ್ಯವಿರಲಿವೆ ಎಂದು ಕಲಾವಿದ ದಿನೇಶ್ ಹೊಳ್ಳ ತಿಳಿಸಿದ್ದಾರೆ. ದಿನಾಂಕ 03ರಿಂದ 05 ಜನವರಿ 2025ರವರೆಗೆ ಬೆಳಗ್ಗೆ 10-00ರಿಂದ 7-00 ಗಂಟೆಗೆ…