Author: roovari

ಮೂಡುಬಿದಿರೆ : ಕಡಂದಲೆಯ ಶ್ರೀ ನಾರಾಯಣಗುರು ಸಭಾಭವನದಲ್ಲಿ ದಿನಾಂಕ 21 ಫೆಬ್ರವರಿ 2026ರಂದು ನಡೆಯಲಿರುವ ಮೂಡುಬಿದಿರೆ ತಾಲೂಕು ದ್ವಿತೀಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಮಿಜಾರಿನ ಅಬ್ದುಲ್ ಹಮೀದ್ ಪಕ್ಕಲಡ್ಕ ಇವರು ಆಯ್ಕೆಯಾಗಿರುತ್ತಾರೆ ಎಂಬುದಾಗಿ ಕ.ಸಾ.ಪ. ಮೂಡುಬಿದಿರೆ ತಾಲೂಕು ಅಧ್ಯಕ್ಷರಾದ ಕೆ. ವೇಣುಗೋಪಾಲ ಶೆಟ್ಟಿಯವರು ತಿಳಿಸಿದ್ದಾರೆ. ಮಂಗಳೂರು ತಾಲೂಕಿನ ಕಂಕನಾಡಿ ಗ್ರಾಮದ ಪಕ್ಕಲಡ್ಕದ ಅಹಮ್ಮದ್ ಕೆ.ಪಿ. ಹಾಗೂ ಫಾತಿಮಾ ದಂಪತಿಯ ಸುಪುತ್ರರಾಗಿ 1947ರಲ್ಲಿ ಜನಿಸಿದ ಅವರು ಬಿ.ಕಾಂ ಪದವೀಧರರು. 1968ರಲ್ಲಿ ರಾಜ್ಯ ಸರಕಾರದ ಅರಣ್ಯ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ತನ್ನ ವೃತ್ತಿ ಜೀವನವನ್ನು ಪ್ರಾರಂಭಿಸಿದ ಅವರು ನಂತರ ಪ್ರಥಮ ದರ್ಜೆ ಸಹಾಯಕರಾಗಿ ಹಾಗೂ ಅಧೀಕ್ಷರಾಗಿಯೂ ಭಡ್ತಿ ಪಡೆದು 37 ವರ್ಷಗಳ ತನ್ನ ಸಾರ್ಥಕ ಸೇವೆಯನ್ನು ಮುಗಿಸಿ 2005ರಲ್ಲಿ ನಿವೃತ್ತರು. ಕೃಷಿಯ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ತೊಡಗಿಸಿಕೊಂಡಿರುವ ಅವರು ಸಣ್ಣ ಕಥಾ ರಚನೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದವರು. ಈಗಾಗಲೇ ‘ಪಾದದಡಿಯ ಸ್ಪರ್ಗ’, ‘ಬಿಳಿಗೋಡೆ’, ‘ಅಲೆಮಾರಿ’, ‘ಭ್ರಮೆ’ ‘ಒಂಟಿತೆಪ್ಪ’, ‘ನೆನಪುಗಳು ಸಾಯುವುದಿಲ್ಲ’,…

Read More

ಬೆಂಗಳೂರು : ಜನಸಂಸ್ಕೃತಿ ಪ್ರತಿಷ್ಠಾನ ಕಾವ್ಯಮಂಡಲ ಮತ್ತು ಸ್ನಾತಕೋತ್ತರ ಕೇಂದ್ರ ರಾಮನಗರ ಬೆಂಗಳೂರು ವಿಶ್ವವಿದ್ಯಾನಿಲಯ ಇದರ ವತಿಯಿಂದ ‘ಕಾವ್ಯ ಶಿವರಾತ್ರಿ’ ಅಹೋರಾತ್ರಿ ಕಾವ್ಯ ಗಾಯನ ಕಾರ್ಯಕ್ರಮವನ್ನು ದಿನಾಂಕ 15 ಫೆಬ್ರವರಿ 2026ರಂದು ಸಂಜೆ 6-00 ಗಂಟೆಗೆ ಬೆಂಗಳೂರು ವಿ.ವಿ.ಯ ಜ್ಞಾನ ಭಾರತಿ ಆವರಣ ಡಾ. ವೆಂಕಟಗಿರಿಗೌಡ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಅಲ್ಕೆರೆ ಶಿವಕುಮಾರ್ ಮತ್ತು ಸಂಗಡಿಗರಿಂದ ‘ಮಂಟೇಸ್ವಾಮಿ ಮತ್ತು ಮಲೆ ಮಹಾದೇಶ್ಯರ’ ಮಹಾ ಕಾವ್ಯ ಗಾಯನ ನಡೆಯಲಿದೆ. ಸಂಜೆ 6-00 ಗಂಟೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಚಲಂ ಹಾಡ್ಲಹಳ್ಳಿ ಇವರು ಅಧ್ಯಕ್ಷತೆ ವಹಿಸಲಿದ್ದು, ಡಾ. ಎಚ್. ಲಕ್ಷ್ಮೀ ನಾರಾಯಣ ಸ್ವಾಮಿ ಇವರು ಕವಿಗೋಷ್ಠಿಗೆ ಚಾಲನೆ ನೀಡಲಿದ್ದಾರೆ. 7-00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಕುಲಪತಿಗಳಾದ ಡಾ. ಜಯಕರ್ ಎಸ್.ಎಂ. ಇವರು ವಹಿಸಲಿದ್ದು, ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಟಿ. ವೆಂಕಟೇಶ ಮೂರ್ತಿ ಇವರು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರಿನ ಚಂಚನ ಪಾಳ್ಯದ ಶೃತಿ ಶಿಲ್ಪಿ ಏಕತಾರಿ ರಾಮಯ್ಯ ಇವರಿಗೆ…

Read More

ಉಡುಪಿ : ದೊಂದಿ (ಪಂಜು) ಬೆಳಕಿನ ಯಕ್ಷಗಾನವು ಕರಾವಳಿ ಕರ್ನಾಟಕದ ಸಾಂಪ್ರದಾಯಿಕ ಕಲೆ. ಇದು ಆಧುನಿಕ ವಿದ್ಯುತ್ ದೀಪಗಳಿಲ್ಲದೆ ಕೇವಲ ಪಂಜಿನ ಬೆಳಕಿನಲ್ಲಿ ನಡೆಯುವ ಅಪರೂಪದ ಪ್ರದರ್ಶನ. ಇಂತಹ ಪ್ರದರ್ಶನವು ಮಾಹೆಯ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾದ ಯಕ್ಷಗಾನ ಕೇಂದ್ರ ಇಂದ್ರಾಳಿಯಲ್ಲಿ ದಿನಾಂಕ 06 ಫೆಬ್ರವರಿ 2026ರಂದು ಮಾಸಿಕ ಕಾರ್ಯಕ್ರಮದ ಅಂಗವಾಗಿ ಕೇಂದ್ರದ ವಿದ್ಯಾರ್ಥಿಗಳಿಂದ ‘ಚಕ್ರವ್ಯೂಹ’ ಎಂಬ ಯಕ್ಷಗಾನ ಪ್ರಸಂಗ ಪ್ರದರ್ಶನಗೊಂಡಿತು. ಕೇಂದ್ರದ ಗುರುಗಳ ಮುತುವರ್ಜಿಯಿಂದ ಅದ್ಭುತವಾಗಿ ಮೂಡಿಬಂತು. ಭಾಗವತರ ರಾಗಭರಿತ ಗಾಯನ, ಚಂಡೆ ಮದ್ದಲೆಗಳ ಘೋಷದಿಂದ ರಂಗಭೂಮಿ ಜೀವಂತವಾಯಿತು. ಪಾತ್ರಧಾರಿ ವಿದ್ಯಾರ್ಥಿಗಳು ಅದ್ಭುತ ವೇಷಭೂಷಣ, ಮುಖವರ್ಣಿಕೆ ಮತ್ತು ಸಂಭಾಷಣೆಯ ಮೂಲಕ ಪ್ರೇಕ್ಷಕರನ್ನು ಆಕರ್ಷಿಸಿದರು. ಭಾಗವತರಾಗಿ ಗೋಪಾಡಿ ಉಮೇಶ್ ಸುವರ್ಣ, ಚಂಡೆಯಲ್ಲಿ ಕೃಷ್ಣಮೂರ್ತಿ ಭಟ್ ಬಗ್ವಾಡಿ, ಮದ್ದಳೆಯಲ್ಲಿ ಬಸವ ಮರಕಾಲ ಮುಂಡಾಡಿ ಸಹಕರಿಸಿದರು. ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀ ಸುರೇಶ್ ಮರಕಾಲ ಮುಂಡಾಡಿ ದೊಂದಿ ಬೆಳಕನ್ನು ಆಯೋಜಿಸಿದರು. ಕೇಂದ್ರದ ವಿದ್ಯಾರ್ಥಿಗಳು ವಿವಿಧ ಪಾತ್ರಗಳಲ್ಲಿ ತಮ್ಮ ಅಭಿನಯವನ್ನು ಅಚ್ಚುಕಟ್ಟಾಗಿ ಪ್ರದರ್ಶಿಸಿದರು. ಒಟ್ಟಿನಲ್ಲಿ ದೊಂದಿ ಬೆಳಕಿನ…

Read More

ಕಾಸರಗೋಡು : ಶ್ರೀ ಪುರಂದರದಾಸ ಸಂಗೀತ ಕಲಾ ಮಂದಿರ ಎಸ್.ವಿ.ಟಿ. ರಸ್ತೆ, ಕಾಸರಗೋಡು ಈ ಸಂಸ್ಥೆಯ 22ನೇ ‘ದ್ವಿದಿನ ಸಂಕೀರ್ತನಾ ಆರಾಧನೋತ್ಸವ’ವು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದ ವ್ಯಾಸ ಮಂಟಪದಲ್ಲಿ ದಿನಾಂಕ 14 ಮತ್ತು 15 ಫೆಬ್ರುವರಿ 2026ರಂದು ಹಮ್ಮಿಕೊಳ್ಳಲಾಗಿದೆ. ಭಾವೈಕ್ಯರಾದ ಸಂಗೀತ ವಿದ್ವಾನ್ ಶ್ರೀ ರಮಣ ಮಾಸ್ಟರ್ ಇವರ ಶುಭಾನುಗ್ರಹ ಹಾಗೂ ಶತಾಯುಷಿ ಮೃದಂಗ ವಿದ್ವಾನ್ ಬಾಬು ರೈ ಇವರ ಶುಭಾಶೀರ್ವಾದಗಳೊಂದಿಗೆ ಸಂಸ್ಥೆಯ ಸ್ಥಾಪಕರೂ ರೂವಾರಿಗಳೂ ಆದ ಕಲ್ಮಾಡಿ ಸದಾಶಿವ ಆಚಾರ್ಯ, ಕ್ಷೇತ್ರ ಸಮಿತಿ ಮುಖ್ಯಸ್ಥ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ಕನ್ನಡ ಭವನದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಸಂಪ್ರಾರ್ಥಿಸಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮ ಸಂಪನ್ನಗೊಳಿಸಿದರು. ಕಾರ್ಯಕ್ರಮದಲ್ಲಿ ಮನಮೋಹನ ಕೆರೆಮನೆ, ಪ್ರಜಿತ್, ಶ್ರೀಧರ್ ಭಟ್, ಬಾಲರಾಜ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಂಗೀತ ವಿದ್ವಾಂಸರುಗಳಿಂದ ಸಂಗೀತ ಕಾರ್ಯಕ್ರಮ ಚಾಲನೆಗೊಂಡಿತು.

Read More

ಮಂಗಳೂರು : ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಏಕದಿನ ಸಾಹಿತ್ಯ ಅಭಿಯಾನವು ದಿನಾಂಕ 10 ಫೆಬ್ರುವರಿ 2026ರಂದು ಮಂಗಳವಾರ ಮಂಗಳೂರಿನ ಪಳ್ನೀರು ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮುಖೇನ ಕಾರ್ಯಕ್ರಮ ಆರಂಭವಾಯಿತು. ಶಿಕ್ಷಕರು, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜಾ ದೀಪ ಬೆಳಗಿಸಿ ಉದ್ಘಾಟನೆಗೈದರು. ಶ್ರೀ ಉಮೇಶ್ ರಾವ್ ಕುಂಬಳೆ ಕಾರ್ಯಾಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಘಟಕ ಪ್ರಸ್ತಾವನೆ ನುಡಿಗಳನ್ನಾಡಿದರು. ಕನ್ನಡ ಭವನ ಮತ್ತು ಗ್ರಂಥಾಲಯ ಕಾಸರಗೋಡು, ಇದರ ಸ್ಥಾಪಕ ಅಧ್ಯಕ್ಷರು ಡಾ. ವಾಮನ್ ರಾವ್ ಬೇಕಲ್ ಕನ್ನಡ ಸಾಹಿತ್ಯದ ಬಗ್ಗೆ ಒಲವು ಆಸಕ್ತಿ ಮೂಡಲು ವಿದ್ಯಾರ್ಥಿಗಳನ್ನು ಉದ್ದೇಶಿಸಿ, ಹಿತನುಡಿಗಳನಾಡಿದರು. ಶ್ರೀಮತಿ ಸಂಧ್ಯಾರಾಣಿ ಟೀಚರ್ ಕನ್ನಡ ಭವನ ಕಾಸರಗೋಡು ಸಂಚಾಲಕರು, ಸ್ಥಾಪಕರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕರು ಶ್ರೀಮತಿ ಲವೀನ ಅನಿಟ ಡಿಸೋಜಾ…

Read More

ಕೋಟ : ಮಣೂರು ಪಡುಕೆರೆ ಶಾಲಾ ಆವರಣದಲ್ಲಿ ದಿನಾಂಕ 08 ಫೆಬ್ರವರಿ 2026ರಂದು ಇಂಡಿಕಾ ಕಲಾ ಬಳಗ ಆಯೋಜಿಸಿದ ‘ಸಂಭ್ರಮ-2026’ ಕಾರ್ಯಕ್ರಮದಡಿಯಲ್ಲಿ ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆ ಇವರಿಂದ ‘ಗಾನ ವೈಭವ’ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇಂಡಿಕಾ ಕಲಾ ಬಳಗದ ಅಧ್ಯಕ್ಷರಾದ ಜಯರಾಮ ಶೆಟ್ಟಿ ಇವರು ಮಾತನಾಡಿ “ಗಣಪತಿ ಸ್ತುತಿಯೊಂದಿಗೆ ಆರಂಭಿಸಲಾಗುವ ಗಾನ ವೈಭವ ಸಾಂಸ್ಕೃತಿಕ ಕಾರ್ಯಕ್ರಮದ ಆರಂಭಕ್ಕೆ ಅತ್ಯಂತ ಸೂಕ್ತ. ಪ್ರತಿಭಾನ್ವಿತ ತಂಡದ ಗಾನ ವೈಭವ ಕಾರ್ಯಕ್ರಮದ ಕಳೆಗಟ್ಟಿತು. ತಂಡದ ಪ್ರಶಾಂತ್ ಪಡುಕೆರೆ ಚುರುಕುತನದಿಂದಲೇ ಯಕ್ಷಗಾನ, ಭಜನೆ ಇತ್ಯಾದಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾ ಪ್ರಬುದ್ಧ ಕಲಾವಿದರೆನಿಸಿಕೊಂಡಿದ್ದಾರೆ. ಅವರನ್ನು ಗೌರವಿಸುವುದು ನಮ್ಮ ಕರ್ತವ್ಯ” ಎಂದು ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಪ್ರಶಾಂತ್ ಪಡುಕೆರೆ ಇವರನ್ನು ಗೌರವಿಸಲಾಯಿತು. ಪಂಚಮಿ ವೈದ್ಯ, ಸುದೀಪ ಉರಾಳ, ರಾಹುಲ್ ಅಮೀನ್, ಕಿಶನ್ ಪೂಜಾರಿ, ಪವನ್ ಆಚಾರ್, ಪರಿಣಿತ ವೈದ್ಯ ಇವರುಗಳು ಉಪಸ್ಥಿತರಿದ್ದರು.

Read More

ಮಂಗಳೂರು : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಇದರ ವತಿಯಿಂದ ‘ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026’ ಕಾರ್ಯಕ್ರಮವನ್ನು ದಿನಾಂಕ 14 ಫೆಬ್ರವರಿ 2025ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಚಾರ ಸಂಕಿರಣವನ್ನು ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ ಶಾಸ್ತ್ರೀಯ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ ನಿಕಟಪೂರ್ವ ಯೋಜನಾ ನಿರ್ದೇಶಕ ಪ್ರೊ. ಬೋಳಾರ ಶಿವರಾಮ ಶೆಟ್ಟಿ ಉದ್ಘಾಟಿಸಲಿದ್ದು, ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಶ್ರೀಮತಿ ಶುಭ ಧನಂಜಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ. ಸಹಾಯಕ ನಿರ್ದೇಶಕ ರಾಜೇಶ ಜಿ., ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಭಾಗವಹಿಸಲಿದ್ದಾರೆ. ವಿಚಾರ ಸಂಕಿರಣ ಗೋಷ್ಠಿಯಲ್ಲಿ ಭಾಗವಹಿಸುವ ಸಂಶೋಧಕರು ತಮ್ಮ ಪಿಎಚ್‌ಡಿ ಪದವಿಯ ಸಂಶೋಧನೆಯ ವಿಷಯವನ್ನು ಮಂಡಿಸಲಿದ್ದಾರೆ. ಕರ್ನಾಟಕ ಸಂಗೀತ ಗೋಷ್ಠಿ, ಭರತನಾಟ್ಯ…

Read More

ಕಾಸರಗೋಡು : ಕರ್ನಾಟಕ ಹಾಗೂ ಕೇರಳದ ಜಾದೂ ರಂಗದ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡಿದ್ದ, ನಾರ್ತ ಮಲಬಾರ್ ಮ್ಯಾಜಿಕ್ ಫೌಂಡೇಶನ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿದ್ದ ಹಿರಿಯ ಜಾದೂಗಾರ ಪ್ರೊ. ಮಾಧವರವರು (73 ವರ್ಷ) ದಿನಾಂಕ 13 ಫೆಬ್ರವರಿ 2026ರಂದು ಬೆಳಗ್ಗೆ ನಿಧನರಾಗಿದ್ದಾರೆ. ನಾರ್ತ್ ಮಲಬಾರ್ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ವೃತ್ತಿ ನಿರ್ವಹಿಸಿದ್ದ ಪ್ರೊ. ಮಾಧವರು ಜಾದೂ ಕಲೆಯಲ್ಲಿ ವೃತ್ತಿಪರ ಜಾದೂಗಾರರನ್ನು ಮೀರಿಸುವ ಪರಿಣಿತಿಯನ್ನು ಹೊಂದಿದ್ದರು. 15 ಕಲಾವಿದರ ‘ಮಾಯ ರಂಜಿನಿ’ ತಂಡವನ್ನು ಕಟ್ಟಿ, ಅಪಾರ ಪ್ರಮಾಣದ ಇಲ್ಲ್ಯುಷನ್ ಜಾದೂ ಸಾಮಾಗ್ರಿಗಳನ್ನು ಬಳಸಿ ಕರ್ನಾಟಕ ಹಾಗೂ ಕೇರಳದ ವಿವಿಧೆಡೆ ಸುಮಾರು ಐದು ದಶಕಗಳ ಕಾಲ ಸಾವಿರಾರು ಪ್ರದರ್ಶನಗಳನ್ನು ನೀಡಿದ್ದಾರೆ. ಉತ್ತಮ ವಾಗ್ಮಿಯಾಗಿ, ಜಾದೂ ಕ್ಷೇತ್ರದ ಅಪಾರ ಅನುಭವ ಹಾಗೂ ಜ್ಞಾನವನ್ನು ಹೊಂದಿದ್ದ ಪ್ರೊ. ಮಾಧವರು ನಾರ್ತ್ ಮಲಬಾರ ಮ್ಯಾಜಿಕ್ ಫೌಂಡೇಷನ್ ಸಂಘಟನೆಯ ಮೂಲಕ ಜಾದೂ ಕ್ಷೇತ್ರದ ಉನ್ನತಿಗೆ ಶ್ರಮಿಸಿದ್ದರು. ಮಂಗಳೂರಿನ ಜಾದೂ ಸಂಘಟನೆ ಮಂಗಳಾ ಮ್ಯಾಜಿಕ್ ಸರ್ಕಲ್ ಇದರ ಸ್ಥಾಪಕ ಸದಸ್ಯರಾಗಿದ್ದರು.…

Read More

ರಾಗ ಧನ ಸಂಸ್ಥೆಯ ಆಶ್ರಯದಲ್ಲಿ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿನಾಂಕ 06 ಫೆಬ್ರವರಿ 2026ರಂದು ಆಯೋಜಿಸಲಾಗಿರುವ ಶ್ರೀ ಪುರಂದರದಾಸರು ಹಾಗೂ ಸಂಗೀತ ತ್ರಿಮೂರ್ತಿ ಉತ್ಸವದ ಮೊದಲ ದಿನದಂದು ಚೆನ್ನೆಯ ಹೆಸರಾಂತ ಕಲಾವಿದರಾದ ಸಾಯಿ ವಿಶ್ಲೇಶ್ ಇವರು ಪ್ರಧಾನ ಕಛೇರಿಯನ್ನು ನೀಡಿದರು. ಇದಕ್ಕೂ ಮುನ್ನ ನಡೆದ ಪೂರ್ವಭಾವಿ ಕಛೇರಿಯನ್ನು ನಡೆಸಿಕೊಟ್ಟವರು ಮಂಗಳೂರಿನ ಆರೋಹಣಂ ಸಂಸ್ಥೆಯ ನಿರ್ದೇಶಕ ಹಾಗೂ ಸಂಗೀತ ಗುರುಗಳಾದ ಡಾ. ಅನೀಶ್ ಭಟ್ ಇವರ ಶಿಷ್ಯೆಯರಾದ ಶ್ರೀವರದ ಪಿ., ಸುಮನ ಕೆ. ಹಾಗೂ ಚಿನ್ಮಯಿ ವಿ.ಭಟ್. ತಮ್ಮ ಹಾಡುಗಾರಿಕೆಯಲ್ಲಿ ಮಾಯಾ ಮಾಳವಗೌಳ ರಾಗದ ಕೃತಿಗೆ ಸ್ವರ ಪ್ರಸ್ತಾರ ಮಾಡಿ ಅಚ್ಚುಕಟ್ಟಾಗಿ ಪ್ರಸ್ತುತಪಡಿಸಿದರು. ಮುಂದೆ ಕಾಪಿ ರಾಗಾಲಾಪನೆ ‘ಇಂತ ಸೌಖ್ಯ’ ಕೃತಿಗೆ ಸುಂದರವಾದ ಅನಾವರಣವನ್ನು ಮಾಡಿ ಶ್ರೋತೃಗಳಿಗೆ ಉಣ ಬಡಿಸಿದರು. ಮುಂದೆ ‘ರಾಮನಾಮ ಪಾಯಸಕ್ಕೆ’ ದೇವರ ನಾಮದೊಂದಿಗೆ ಕಚೇರಿ ಸಂಪನ್ನಗೊಂಡಿತು. ಧನಶ್ರೀ ಶಬರಾಯ ವಯೊಲಿನ್‌ನಲ್ಲಿ ಹಾಗೂ ಮೃದಂಗದಲ್ಲಿ ಡಾ. ಬಾಲಚಂದ್ರ ಆಚಾರ್ ಉತ್ತಮವಾಗಿ ಸಹಕಾರ ನೀಡಿದರು. ಆ ಬಳಿಕ…

Read More

ಮಂಗಳೂರು : ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ. ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ನಿವೃತ್ತ ಭೂಮಾಪನ ಅಧಿಕಾರಿ ದಿ. ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ‘ಬೊಂಡಾಲ ಪ್ರಶಸ್ತಿ’ಗೆ ಕಟೀಲು ಮೇಳದ ಹಿರಿಯ ವೇಷಧಾರಿ ಲಕ್ಷ್ಮಣ ಶೆಟ್ಟಿ ತಾರೆಮಾರ್ ಆಯ್ಕೆಯಾಗಿದ್ದಾರೆ. ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆಸಲ್ಲಿಸಿದ ಕಲಾವಿದರಿಗಾಗಿಯೇ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಇವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ, ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸಂಚಾಲಕರಾಗಿರುವ ಆಯ್ಕೆಸಮಿತಿ 2025-26ನೇ ಸಾಲಿಗೆ ಲಕ್ಷ್ಮಣ ಶೆಟ್ಟರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂ.10,000/- ನಗದು, ಶಾಲು, ಸ್ಮರಣಿಕೆ ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಲಕ್ಷ್ಮಣ ಶೆಟ್ಟಿ ತಾರೆಮಾರ್ : ತೆಂಕುತಿಟ್ಟು ಯಕ್ಷಗಾನ ರಂಗದ ಪ್ರತಿಭಾನ್ವಿತ ಕಲಾವಿದರಾದ ಲಕ್ಷ್ಮಣ ಶೆಟ್ಟಿಯವರು ಬೆಳ್ತಂಗಡಿ ತಾಲೂಕಿನ ತಾರೆಮಾರಿನಲ್ಲಿ…

Read More