Author: roovari

ಕಾಸರಗೋಡು : ಸಂಗೀತ ಮತ್ತು ಸಂಸ್ಕೃತಿ ಪರಸ್ಪರ ಸಂಬಂಧ ಹೊಂದಿದೆ. ಕರ್ನಾಟಕ ಸಂಸ್ಕೃತಿಯಲ್ಲಿ ಸಂಗೀತ ಪ್ರಮುಖ ಪಾತ್ರ ವಹಿಸುತ್ತದೆ. ಕರ್ನಾಟಕ ಸಂಗೀತವು ರಾಗ, ತಾಳ ಮತ್ತು ಪಲ್ಲವಿಗಳನ್ನು ಆಧರಿಸಿದ್ದು, ಅಂಶಗಳನ್ನು ಗಮನದಲ್ಲಿಟ್ಟು ಹಾಡಿದಾಗ ಕೇಳುಗರು ಆಸ್ವಾದಿಸುತ್ತಾರೆ. ಸಂಗೀತದಿಂದ ಆರೋಗ್ಯವನ್ನೂ ವೃದ್ಧಿಸಿಕೊಳ್ಳಬಹುದು ಎಂದು ಚಲನಚಿತ್ರ ನಟಿ ಶೋಭಾ ಶೆಟ್ಟಿ ಹೇಳಿದರು. ರಂಗಚಿನಾರಿ ಕಾಸರಗೋಡು ಇದರ ಸಂಗೀತ ಘಟಕವಾದ ಸ್ವರ ಚಿನ್ನಾರಿ ನೇತೃತ್ವದಲ್ಲಿ ಕರಂದಕ್ಕಾಡಿನ ವದ್ಮಗಿರಿ ಕಲಾ ಕುಟೀರದಲ್ಲಿ ದಿನಾಂಕ 20 ಜುಲೈ 2025ರಂದು ಆಯೋಜಿಸಿದ ‘ಸಿ. ಅಶ್ವಥ್ ಗಾನ – ನಮನ’ ಪ್ರತಿಭಾನ್ವಿತ ಕರೋಕೆ ಗಾಯಕರ ಸಮ್ಮಿಲನ ಅಂತರ್ಧ್ವನಿ – 6 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯವನ್ನು ಉಳಿಸಿ ಬೆಳೆಸಲು ಪ್ರಯತ್ನಿಸುತ್ತಿರುವ ರಂಗಚಿನ್ನಾರಿ ಸಂಸ್ಥೆಯ ಕೊಡುಗೆ ಶ್ಲಾಘನೀಯ, ಇದೀಗ ಸ್ವರ ಚಿನ್ನಾರಿಯ ಮೂಲಕ ಎಲೆಮರೆಯ ಪ್ರತಿಭಾವಂತ ಸಂಗೀತ ಕಲಾವಿದರಿಗೆ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದರು. ರಂಗಚಿನ್ನಾರಿ ಸಂಸ್ಥೆಯ ನಿರ್ದೇಶಕ…

Read More

ಬೆಂಗಳೂರು : ಕರ್ನಾಟಕ ರಂಗ ಪರಿಷತ್ತು ಕೇಂದ್ರ ಸಮಿತಿ ಬೆಂಗಳೂರು ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ವತಿಯಿಂದ ಮಂಡ್ಯ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದ ಪ್ರೊ. ಜಯಪ್ರಕಾಶ್ ಗೌಡ ಇವರಿಗೆ ‘ಜೆ.ಪಿ. ಅಭಿನಂದನೆ’ ಕಾರ್ಯಕ್ರಮವನ್ನು ದಿನಾಂಕ 31 ಜುಲೈ 2025ರಂದು ಸಂಜೆ 6-00 ಗಂಟೆಗೆ ಬೆಂಗಳೂರಿನ ಕನ್ನಡ ಭವನದ ನಯನ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಚಾಮರಾಜನಗರದ ಸಿ.ಎಂ. ನರಸಿಂಹ ಮೂರ್ತಿ ಮತ್ತು ಸಂಗಡಿಗರ ಗಾಯನದೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಹಿರಿಯ ರಂಗ ಸಂಘಟಕ ಶ್ರೀನಿವಾಸ್ ಜಿ. ಕಪ್ಪಣ್ಣ ಹಾಗೂ ಹಿರಿಯ ನಾಟಕಕಾರರಾದ ಡಾ. ಚಂದ್ರು ಕಾಳೇನಹಳ್ಳಿ ಇವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಗಂಟೆ 7-15ಕ್ಕೆ ಬೆಂಗಳೂರು ಏಷಿಯನ್ ಥಿಯೇಟರ್ ಅಭಿನಯಿಸುವ ಸಿದ್ಧರಾಮ ಕೊಪ್ಪರ್ ಇವರ ನಿರ್ದೇಶನದಲ್ಲಿ ‘ನೀಗಿಕೊಂಡ ಸಂಸ’ ನಾಟಕ ಪ್ರದರ್ಶನಗೊಳ್ಳಲಿದ್ದು, ರಂಗಸ್ವಾಮಿ ಕೆ. ಇವರು ಅಭಿನಯಿಸಲಿದ್ದಾರೆ.

Read More

ಮಂಗಳೂರು : ಸೋಮೇಶ್ವರ ಕೊಲ್ಯದಲ್ಲಿರುವ ನಾಟ್ಯನಿಕೇತನ (ರಿ.) ಅರ್ಪಿಸುವ ‘ಕರ್ನಾಟಕ ರಾಜ್ಯೋತ್ಸವ’, ‘ಶಾಂತಲಾ ನಾಟ್ಯ’ ಪ್ರಶಸ್ತಿ’ ಪುರಸ್ಕೃತ ನೃತ್ಯ ಗುರು ನಾಟ್ಯಾಚಾರ್ಯ ಶ್ರೀ ಉಳ್ಳಾಲ ಮೋಹನ್ ಕುಮಾರ್ ಇವರ 90ನೇ ವರ್ಷಾಚರಣೆಯ ಪ್ರಯುಕ್ತ ನೃತ್ಯಶ್ರೀ ಸರಣಿ-ಮಾಲಿಕೆ 19 ‘ನಾಟ್ಯ ಮೋಹನ ನವತ್ಯುತ್ಸಹ’ ಕಾರ್ಯಕ್ರಮವನ್ನು ದಿನಾಂಕ 31 ಜುಲೈ 2025ರಂದು ಸಂಜೆ 6-00 ಗಂಟೆಗೆ ಕೊಲ್ಯದ ನಾಟ್ಯನಿಕೇತನ ನೃತ್ಯಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಕಲಾತಿಲಕ ನಾಟ್ಯಾಚಾರ್ಯ ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಂದ ದೇವತಾ ದೀಪ ಪ್ರಜ್ವಲನೆಯೊಂದಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಶ್ರೀಮತಿ ನಿಶಾ ಡಿ. ಪಣಿಕ್ಕರ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ವಿದುಷಿ ದಿವ್ಯಾ ಸಂದೀಪ್ ಇವರು ನೃತ್ಯ ಪ್ರಸ್ತುತಿ ನೀಡಲಿದ್ದಾರೆ.

Read More

ಮಂಡ್ಯ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಡ್ಯ, ಅರುವಿ ಟ್ರಸ್ಟ್ (ರಿ.) ಮಂಡ್ಯ, ದೃಶ್ಯ ಟ್ರಸ್ಟ್ (ರಿ.) ಮೇಲುಕೋಟೆ ಹಾಗೂ ಎಸ್.ಇ.ಟಿ. ಪಾಲಿಟೆಕ್ನಿಕ್ ಮೇಲುಕೋಟೆ ಇವರ ಸಹಯೋಗದಲ್ಲಿ 2025-26ನೇ ಸಾಲಿನ ‘ಚಿಗುರು’ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದಿನಾಂಕ 31 ಜುಲೈ 2025ರಂದು ಬೆಳಗ್ಗೆ 11-00 ಗಂಟೆಗೆ ಮೇಲುಕೋಟೆಯ ಎಸ್.ಇ.ಟಿ. ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಮಾನ್ಯ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಇವರ ಘನ ಉಪಸ್ಥಿತಿಯಲ್ಲಿ ಮಾನ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಇವರು ಉದ್ಘಾಟನೆ ಮಾಡಲಿದ್ದಾರೆ. ವಾದ್ಯ ಸಂಗೀತದಲ್ಲಿ ಕೆ.ಆರ್. ಪೇಟೆಯ ಲೋಹಿತ್ ಎಂ. ಮತ್ತು ತಂಡ, ಸುಗಮ ಸಂಗೀತದಲ್ಲಿ ಮಂಡ್ಯದ ತನ್ವಿ ಸಿ. ಮತ್ತು ತಂಡ, ಜನಪದ ಗೀತೆ ಮಂಡ್ಯದ ರಾಜೇಶ್ವರಿ ಮತ್ತು ತಂಡ, ಸಮೂಹ ನೃತ್ಯದಲ್ಲಿ ಮದ್ದೂರು ತನುಷಿ ಗೌಡ ಮತ್ತು ತಂಡ, ನಾಟಕ ಪ್ರದರ್ಶನ ಮಂಡ್ಯದ ಪೃಥ್ವಿರಾಜ್ ಕೆ.ಎಲ್. ಮತ್ತು ತಂಡ ಹಾಗೂ ಏಕಪಾತ್ರಾಭಿನಯದಲ್ಲಿ ಪಾಂಡವಪುರದ ಮೋನಿಷ್ ಎನ್. ಶೆಟ್ಟಿ ಮತ್ತು ತಂಡದವರು ಭಾಗವಹಿಸಲಿದ್ದಾರೆ.…

Read More

ಪುತ್ತೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ(ರಿ.) ಪುತ್ತೂರು ಇದರ 133ನೇ ಸರಣಿ ಕಾರ್ಯಕ್ರಮ ‘ನೃತ್ಯಾಂತರಂಗ’ ಕಾರ್ಯಕ್ರಮ ದಿನಾಂಕ 29 ಜುಲೈ 2025 ರಂದು ಪುತ್ತೂರಿನ ಶಶಿಶಂಕರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ದುಬೈಯ ಬಾಲಪ್ರತಿಭೆ ಕು. ನಿತಾರಾ ನಾಯರ್ ಇವರ ಭರತನಾಟ್ಯ ಕಾರ್ಯಕ್ರಮ ಪುತ್ತೂರಿನ ಜನರ ಮನಗೆದ್ದಿತು. ಭರತನಾಟ್ಯ ಕಾರ್ಯಕ್ರಮದುದ್ದಕ್ಕೂ ತನ್ನ ಹಿತಮಿತವಾದ ಸಹಜ ಅಭಿನಯ, ಕರಾರುವಕ್ಕಾದ ಅಡವು ಹಾಗೂ ತನ್ನ ಮಾಧುರ್ಯಭರಿತ ನಿರೂಪಣೆಯಿಂದ ಸೇರಿದ ಸಭಿಕರ ಮನಗೆದ್ದ ನಿತಾರಾ, ತನ್ನ ನೃತ್ಯ ಜೀವನದ ಅನುಭವಗಳನ್ನು ಹಂಚಿಕೊಂಡರು. ಅಭ್ಯಾಗತರಾದ ಎಸ್. ಡಿ. ಪಿ. ರೆಮೆಡೀಸ್ ಇದರ ಸಹ ಪಾಲುದಾರರಾದ ಶ್ರೀಮತಿ ರೂಪಲೇಖಾ ಇವರು ಕಲಾವಿದೆ ನಿತಾರಾಳ ಶ್ರದ್ಧೆ, ಪರಿಶ್ರಮ ಹಾಗೂ ಸಂಸ್ಥೆಯ ನಿರ್ದೇಶಕ ವಿದ್ವಾನ್ ದೀಪಕ್ ಕುಮಾರ್ ಇವರ ಕಲಾಪರಿಶ್ರಮದ ಬಗ್ಗೆ ಬಹಳಷ್ಟು ಮೆಚ್ಚುಗೆಯ ಮಾತುಗಳನ್ನಾಡಿದರು. ಊತುಕ್ಕಾಡು ವೆಂಕಟಸುಬ್ಬ ಅಯ್ಯರ್ ರಚನೆಯ, ಜಯಂತಶ್ರೀ ರಾಗ ಹಾಗೂ ಆದಿತಾಳದಲ್ಲಿರುವ ಕೃಷ್ಣ ಕೃತಿಯೊಂದಿಗೆ ತನ್ನ ನೃತ್ಯ ಪ್ರಸ್ತುತಿಯನ್ನು ಪ್ರಾರಂಭಿಸಿದ ನಿತಾರಾ ಮುಂದೆ ಸುಮಾರು 30…

Read More

ಪುತ್ತೂರು: ಪುತ್ತೂರಿನ ಸ್ವರ್ಣೋದ್ಯಮಿ ಜಿ. ಎಲ್. ಆಚಾರ್ಯ ಶತಮಾನೋತ್ಸವದ ಅಂಗವಾಗಿ ಶಿಕ್ಷಕರಿಗಾಗಿ ಕವಿಗೋಷ್ಠಿಯನ್ನು ಪುತ್ತೂರಿನ ರೋಟರಿ ಭವನದಲ್ಲಿ ದಿನಾಂಕ 4 ಆಗಸ್ಟ್ 2025ರಂದು ಅಪರಾಹ್ನ ಘಂಟೆ 2.00ಕ್ಕೆ ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ಸಾಹಿತಿ ಜಯಾನಂದ ಪೆರಾಜೆ ಸಂಪಾದಕತ್ವದ ಭಗವದ್ಗೀತೆಯ ಬಗ್ಗೆ ಕವಿಗಳಿಂದ ರಚಿತವಾದ ಕೃತಿ ‘ಗೀತಾ ಫಲ’ ಲೋಕಾರ್ಪಣೆಗೊಳ್ಳಲಿದೆ ಎಂದು ಕಥಾಬಿಂದು ಪ್ರಕಾಶನ ಮಂಗಳೂರಿನ ಪಿ. ವಿ. ಪ್ರದೀಪ ಕುಮಾರ್ ಮತ್ತು ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಇದರ ಮಾಲಕ ಜಿ. ಎಲ್. ಬಲರಾಮ ಆಚಾರ್ಯ ತಿಳಿಸಿದ್ದಾರೆ‌. ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ಕವಿಗಳು ಈ ಸಂಖ್ಯೆಯನ್ನು ಸಂಪರ್ಕಿಸಬಹುದು –  9448348234

Read More

ಕಾರ್ಕಳ : ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಕಾರ್ಕಳದಲ್ಲಿ ಆತ್ರೇಯಾ ಕ್ಲಿನಿಕ್‌ ನಡೆಸುತಿದ್ದ ಖ್ಯಾತ ವೈದ್ಯ ಡಾ. ಜಗದೀಶ್ ಪೈ ಇವರು 28 ಜುಲೈ 2025ರಂದು ನಿಧನ ಹೊಂದಿದರು. ಅವರಿಗೆ 62 ವರ್ಷ ವಯಸ್ಸಾಗಿತ್ತು. ಕನ್ನಡ ಹಾಗೂ ಕೊಂಕಣಿ ಸಾಹಿತಿಯಾಗಿದ್ದ ಇವರು ರಾಷ್ಟ್ರೀಯ ಸ್ವಯಂ ಸೇವಕರಾಗಿದ್ದರು. ರಾಷ್ಟ್ರೀಯವಾದಿ ಲೇಖನ, ಹಾಸ್ಯ ಲೇಖನ, ವ್ಯಕ್ತಿತ್ವ ವಿಕಸನ ಕುರಿತು ಹಲವಾರು ಪುಸ್ತಕ ಪ್ರಕಟಿಸಿದ್ದ ಇವರು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲೂ ಸಕ್ರಿಯರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಡಾ. ನಂದಾ ಪೈ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Read More

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ನೇತೃತ್ವದಲ್ಲಿ ವಿವಿಧ ಕೊಂಕಣಿ ಸಂಘಟನೆಗಳ ಸಹಕಾರದಲ್ಲಿ ಇತ್ತೀಚೆಗೆ ನಿಧನರಾದ ಕೊಂಕಣಿ ಸಾಹಿತಿ ಗ್ಲೇಡಿಸ್ ರೇಗೊ ಇವರಿಗೆ ಶೃದ್ಧಾಂಜಲಿ ಸಭೆಯನ್ನು ದಿನಾಂಕ 26 ಜುಲೈ 2025ರಂದು ಸಂದೇಶ ಸಭಾಂಗಣದಲ್ಲಿ ನಡೆಸಲಾಯಿತು. ಸಂದೇಶ ಫೌಂಡೇಶನ್, ಮಾಂಡ್ ಸೊಭಾಣ್, ಕೊಂಕಣಿ ಲಖಕ ಸಂಘ ಕರ್ನಾಟಕ, ಸಂತ ಎಲೋಶಿಯಸ್ ಕಾಲೇಜಿನ ಕೊಂಕಣಿ ಸಂಘ, ದಾಯ್ಜಿ ದುಬಾಯ್ ಮಂಗಳೂರು ಘಟಕ, ಕೊಂಕಣಿ ಭಾಷಾ ಮಂಡಳ ಕರ್ನಾಟಕ ಇದರ ಪದಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿದರು. ಸ್ವಾಗತಿಸಿ, ಪ್ರಸ್ತಾವನೆಗೈದ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಇವರು “ಗ್ರೇಡಿಸ್ ರೇಗೊ ಕೊಂಕಣಿಯ ವೀರ ಮಹಿಳೆಯಂತಿದ್ದರು. ಕೊಂಕಣಿ ಪುಸ್ತಕ ಪ್ರಕಾಶನ, ಸಾಹಿತ್ಯ ರಚನೆ, ಸಂಶೋಧನೆ, ಜನಪದ, ಕತೆ, ಕವಿತೆ, ಕಾದಂಬರಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಕೆಲನ ಮಾಡಿ, ಸ್ಪೂರ್ತಿಯ ನೆಲೆಯಾಗಿದ್ದವರು. ಅವರ ಕೆಲಸ ಕಾರ್ಯಗಳ ಪ್ರೇರಣೆಯಿಂದ ನಮ್ಮ ಕೆಲಸ ಮುಂದುವರಿಸೋಣ. ಹಿರಿಯ ಲೇಖಕರನ್ನು ಅವರು ಜೀವಂತವಿರುವಾಗ ಗೌರವಿಸಬೇಕು. ಈ ಪರಿಪಾಟವನ್ನು ಅಕಾಡೆಮಿ ಆರಂಭಿಸಿದ್ದು, ವಯಸ್ಸು…

Read More

ಉಡುಪಿ : ಚೆನ್ನೈಯ ‘ದಕ್ಷಿಣ’ ಇವರು ಪ್ರಸ್ತುತ ಪಡಿಸುವ ಗುರು ದಿವ್ಯಾ ನಾಯರ್ ಇವರ ಶಿಷ್ಯೆ ಮಾನಸ ಇವರ ‘ಭರತನಾಟ್ಯ ರಂಗಪ್ರವೇಶ’ವನ್ನು ದಿನಾಂಕ 30 ಜುಲೈ 2025ರಂದು ಸಂಜೆ ಗಂಟೆ 5-30ಕ್ಕೆ ಉಡುಪಿಯ ಇನ್ಫೋಸಿಸ್ ಯಕ್ಷಗಾನ ಕಲಾರಂಗದಲ್ಲಿ ಆಯೋಜಿಸಲಾಗಿದೆ. ಶ್ರೀಮತಿ ಮಲ್ಲಿಕಾ ಮತ್ತು ಸಿ.ಕೆ. ಮಂಜುನಾಥ ಇವರ ಪುತ್ರಿಯಾಗಿರುವ ಮಾನಸ ಭರತನಾಟ್ಯದಲ್ಲಿ ಜೂನಿಯರ್, ಸೀನಿಯರ್ ಮತ್ತು ವಿದ್ವತ್ ಪರೀಕ್ಷೆಗಳನ್ನು ಉತ್ತಮ ಶ್ರೇಣಿಯಲ್ಲಿ ಪೂರೈಸಿರುತ್ತಾರೆ. 2019ರಲ್ಲಿ ಯುವ ಕಲಾ ಪ್ರಶಸ್ತಿ ದೊರಕಿದ್ದು, ರಾಜ್ಯ ಮತ್ತು ಕೇಂದ್ರ ಸರಕಾರದ ವಿದ್ಯಾರ್ಥಿ ವೇತನವನ್ನು ಪಡೆದಿರುತ್ತಾರೆ.

Read More

ಕಾಸರಗೋಡು : ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಂಯುಕ್ತ ಆಶ್ರಯದಲ್ಲಿ ‘ಮನೆ ಮನೆ -ಕನ್ನಡ ಜಾಗೃತಿ ಅಭಿಯಾನ’ದ ದ್ವಿತೀಯ ಕಾರ್ಯಕ್ರಮವು ದಿನಾಂಕ 27 ಜುಲೈ 2025ರಂದು ದ.ಕ. ಜಿಲ್ಲಾ ಅಧ್ಯಕ್ಷರಾದ ಸಾಹಿತಿ ಡಾ. ಗೋವಿಂದ ಭಟ್ ಕೊಳ್ಚಪ್ಪೆ ಇವರ ಮಂಗಳೂರಿನ ನಿವಾಸದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಕನ್ನಡ ಭವನ ಮತ್ತು ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಇವರು ಮಾತನಾಡಿ “ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕನ್ನಡದ ಕಟ್ಟಾಳುಗಳನ್ನು ಪರಸ್ಪರ ಜೋಡಿಸುವುದೇ ‘ಮನೆ ಮನೆ -ಕನ್ನಡ ಜಾಗೃತಿ ಅಭಿಯಾನ’ದ ಪ್ರಧಾನ ಉದ್ದೇಶ. ಕನ್ನಡ ಮನಸುಗಳು ಒಂದಾಗಬೇಕು. ಕನ್ನಡ ಪ್ರಜ್ಞೆ ಹೊಸ ತಲೆಮಾರಿನಲ್ಲಿ ಬೇರೂರಿಸುವ ಪ್ರಯತ್ನಕ್ಕೆ, ಕವಿಗಳು, ಸಾಹಿತಿಗಳು, ಕಲಾವಿದರು, ಸಂಘಟಕರು ಒಂದಾಗಿ ಸೇರಿ ಚರ್ಚಿಸುವ ವೇದಿಕೆ…

Read More