Subscribe to Updates
Get the latest creative news from FooBar about art, design and business.
Author: roovari
ಉಡುಪಿ : ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ಕಾರಂತ ಜನ್ಮದಿನೋತ್ಸವ-ಸಾಹಿತ್ಯೋತ್ಸವ ಮತ್ತು ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 11 ಅಕ್ಟೋಬರ್ 2025ರಂದು ಸಂಜೆ 4-00 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭವನ್ನು ಮಾನ್ಯ ಶಾಸಕರಾದ ಯಶ್ ಪಾಲ್ ಎ. ಸುವರ್ಣ ಇವರ ಅಧ್ಯಕ್ಷತೆಯಲ್ಲಿ ಮಾನ್ಯ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಇವರು ಉದ್ಘಾಟನೆ ಮಾಡಲಿದ್ದಾರೆ. ಹಿರಿಯ ವಿದ್ವಾಂಸರಾದ ಪ್ರೊ. ಬಿ.ಎ. ವಿವೇಕ ರೈ ಇವರಿಗೆ ಮಾನ್ಯ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ. ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಖ್ಯಾತ ವಿಮರ್ಶಕ ಡಾ. ಎಸ್.ಆರ್. ವಿಜಯ ಶಂಕರ್ ಇವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಸಂಶೋಧಕರಾದ ಡಾ. ರೇಖಾ ಬನ್ನಾಡಿ, ಜಾನಪದ ವಿದ್ವಾಂಸ ಎಸ್.ಎ. ಕೃಷ್ಣಯ್ಯ ಮತ್ತು ಯಕ್ಷಗಾನ ಕಲಾವಿದ ಶೇಖ್ ಮಹಮ್ಮದ್ ಗೌಸ್ ಕಾವ್ರಾಡಿ ಇವರಿಗೆ ವಿಶೇಷ ಪುರಸ್ಕಾರ ನೀಡಲಾಗುವುದು. ಸಾಂಸ್ಕೃತಿಕ…
ಧಾರವಾಡ : ಅಭಿನಯ ಭಾರತಿ (ರಿ), ಧಾರವಾಡ ಈವರು ಪ್ರೊ. ಕೀರ್ತಿನಾಥ ಕುರ್ತಕೋಟಿ ಸ್ಮರಣಾರ್ಥ ಆಯೋಜಿಸುವ ದತ್ತಿ ಉಪನ್ಯಾಸ ಕಾರ್ಯಕ್ರಮವು ದಿನಾಂಕ 11 ಅಕ್ಟೋಬರ್ 2025ರ ಶನಿವಾರದಂದು ಬೆಳಿಗ್ಗೆ ಘಂಟೆ 11.30ಕ್ಕೆ ಧಾರವಾಡದ ಸುಭಾಷ ರಸ್ತೆಯಲ್ಲಿರುವ ಮನೋಹರ ಗ್ರಂಥ ಮಾಲಾ ಲಕ್ಕಿ ಭವನದಲ್ಲಿ ನಡೆಯಲಿದೆ. ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್, ಧಾರವಾಡ ಇವರ ಪ್ರಯೋಜಕತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ‘ಕೀರ್ತಿ ಅವರ ಜ್ಞಾನೇಶ್ವರ ಚಿಂತನೆಗಳು’ ವಿಷಯದಲ್ಲಿ ಧಾರವಾಡದ ಹಿರಿಯ ಸಾಹಿತಿಗಳಾದ ಶ್ರೀ ಆನಂದ ಝುಂಜರವಾಡ ಉಪನ್ಯಾಸ ನೀಡಲಿದ್ದಾರೆ.
ಕೋಟ: ಹೊಸದಿಗಂತ ದಿನಪತ್ರಿಕೆ ಮತ್ತು ಡಾ. ಶಿವರಾಮ ಕಾರಂತ ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆಯ ಸಂಯುಕ್ತ ಅಶ್ರಯದಲ್ಲಿ ಕಾವ್ಯ ಸಿಂಧು ಕಡಲತಡಿಯಲ್ಲ ಕವಿ ಸಮ್ಮಿಲನ ಕಾರ್ಯಕ್ರಮ ದಿನಾಂಕ 07 ಅಕ್ಟೋಬರ್ 2025ರಂದು ಸಾಲಿಗ್ರಾಮದಲ್ಲಿ ನಡೆಯಿತು. ಸಮ್ಮಿಲನ ಉದ್ಘಾಟಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹಬೌದ್ಧಿಕ ಪ್ರಮುಖ್ ಸುಧೀರ್ “ಕವಿತಾ ರಚನೆಯಲ್ಲಿ ಸಾಮಾಜಿಕ ಕಳಕಳಿ ಇರಬೇಕು. ಗೀತೆಗಳು ದೇಶ, ಸಮಾಜ, ಧರ್ಮದ ಬಗ್ಗೆ ಭಾವ ಜಾಗರಣ ಮಾಡಬೇಕು” ಎಂದರು. ಸಮಾರಂಭದಲ್ಲಿ ಕವಿತಾ ರಚನೆಯಲ್ಲಿ ಸಮಷ್ಟಿ ಚಿಂತನೆ: ಅಂದು- ಇಂದು ಮತ್ತು ಕವಿತಾ ವಾಚನದಲ್ಲಿ ತತ್ವಾಭಿವ್ಯಕ್ತಿ ಮತ್ತು ರಸಾಭಿವ್ಯಕ್ತಿ – ಈ ವಿಷಯಗಳ ಬಗ್ಗೆ ಗೋಷ್ಠಿಗಳು ನಡೆದವು. ರಾಜ್ಯದ ವಿವಿಧ ಕಡೆಗಳಿಂದ 70 ಕವಿಗಳು ಪಾಲ್ಗೊಂಡಿದ್ದರು. 63ಕವಿಗಳು ತಾವು ರಚಿಸಿದ ಕವನಗಳನ್ನು ವಾಚಿಸಿದರು. ಇದೇ ಸಂದರ್ಭದಲ್ಲಿ ಡಾ. ಶಿವರಾಮ ಕಾರಂತರ ಸಂಸ್ಮರಣೆ ನಡೆಸಲಾಯಿತು. ಹೊಸದಿಗಂತ ಪತ್ರಿಕೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಪಿ. ಎಸ್. , ಡಾ. ಶಿವರಾಮ ಕಾರಂತ ಸಂಶೋಧನಾ…
ಬೆಂಗಳೂರು : ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಮತ್ತು ತರಂಗ ಅಕಾಡೆಮಿ ಆಫ್ ಆರ್ಟ್ಸ್ ಇವರ ಜಂಟಿ ಆಶ್ರಯದಲ್ಲಿ ಪ್ರಸ್ತುತ ಪಡಿಸುವ ‘ರಾಷ್ಟ್ರೀಯ ನೃತ್ಯ ಉತ್ಸವ’ವನ್ನು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 6-30 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ನೃತ್ಯ ಸರಸ್ವತಿ ಶುಭಾ ಧನಂಜಯ್ ಇವರು ಉದ್ಘಾಟನೆ ಮಾಡಲಿದ್ದು, ವಿದುಷಿ ಅಪರ್ಣಾ ವಿನೋದ್ ಮೆನನ್, ಡಾ. ರಾಜಶ್ರೀ ವಾರಿಯರ್ ಮತ್ತು ಗುರು ವಸುಂಧರ ದೊರೈಸ್ವಾಮಿ ಇವರುಗಳು ಭರತನಾಟ್ಯ ಪ್ರಸ್ತುತ ಪಡಿಸಲಿದ್ದಾರೆ.
ಪುತ್ತೂರು : ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ದೇರಾಜೆ ಸೀತಾರಾಮಯ್ಯ ಯಕ್ಷಗಾನ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಯಕ್ಷರಂಜಿನಿ ಘಟಕ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ಯಕ್ಷ ದೀಕ್ಷಾ ಪ್ರದಾನ ಹಾಗೂ ಯಕ್ಷರಂಜಿನಿ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯು ದಿನಾಂಕ 30 ಸೆಪ್ಟೆಂಬರ್ 2025ರಂದು ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಗಾನ ತಾಳಮದ್ದಳೆ ಅರ್ಥಧಾರಿ ಹಾಗೂ ವೇಷಧಾರಿ ಸುಣ್ಣಂಬಳ ವಿಶ್ವೇಶ್ವರ ಭಟ್ ಇವರು ಮಾತನಾಡಿ “ಒಳಿತು ಕೆಡುಕುಗಳನ್ನು ವಿಮರ್ಶಿಸಿ ಒಳ್ಳೆಯ ವಿಚಾರಗಳನ್ನು ಪುರಾಣಗಳಲ್ಲಿ ತಿಳಿಸಲಾಗಿದೆ. ಮಕ್ಕಳ ಬೆಳವಣಿಗೆಯ ಸಂದರ್ಭದಲ್ಲಿ ಒಳ್ಳೆಯ ಸಂಸ್ಕೃತಿ, ಆಚರಣೆಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಅವಶ್ಯಕ. ಯಕ್ಷಗಾನ ಸ್ವಂತಿಕೆಯನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾದ ಕಲೆ. ಬುದ್ಧಿಯ ಮಟ್ಟವನ್ನೂ ಹೆಚ್ಚಿಸುತ್ತದೆ. ಯಕ್ಷಗಾನ ಪ್ರಸಂಗಗಳ ಮೂಲಕ ಒಳ್ಳೆಯ ವಿಚಾರಗಳನ್ನು ತಿಳಿದುಕೊಳ್ಳಬಹುದು. ಇಂತಹಾ ಕಲಾ ಪ್ರಕಾರಗಳು ಹಾಗೂ ಧಾರ್ಮಿಕ ಆಚರಣೆಗಳಿಂದ ಕೂಡಿದ ಸಂಸ್ಕೃತಿಯನ್ನು ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ” ಎಂದು ನುಡಿದರು. ಈ ಸಂದರ್ಭದಲ್ಲಿ ಸುಣ್ಣಂಬಳ…
ಧಾರವಾಡ : ಧಾರವಾಡದ ಪ್ರಸಿದ್ಧ ಆಕಾಶವಾಣಿ ಕಲಾವಿದರು ಹಾಗೂ ಗಾಯಕರಾದ ಶ್ರೀಮತಿ ಅನುರಾಧ ಧಾರೇಶ್ವರ ಅವರು ದಿನಾಂಕ 09 ಅಕ್ಟೋಬರ್ 2025ರಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. 1938ರ ನವೆಂಬರ್ 26ರಂದು ಹುಬ್ಬಳ್ಳಿಯಲ್ಲಿ ಜನಿಸಿದ ಅನುರಾಧಾ ತಂದೆ ನಾಗೇಶ್ರಾವ್ ಹಾಗೂ ತಾಯಿ ಕೃಷ್ಣಾಭಾಯಿ ಇಟ್ಟ ಹೆಸರು ಶಾಂತಾಮತಿ. ಸಂಪ್ರದಾಯದ ರೀತಿ ಶಾಂತಾಮತಿ ಮದುವೆಯ ನಂತರ ಅನುರಾಧಾ ಧಾರೇಶ್ವರರಾಗಿ ಆ ಹೆಸರಿನಿಂದಲೇ ಪ್ರಸಿದ್ಧಿ ಪಡೆದರು. ಅನುರಾಧಾ ಅವರು, ಚಿಕ್ಕವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡು ಕಷ್ಟಗಳ ನಡುವೆ ಹೋರಾಟದ ಜೀವನ ನಡೆಸಿ ಅತ್ಯುತ್ತಮ ಗಾಯಕಿಯಾಗಿ ರೂಪುಗೊಂಡಿದ್ದು ಮಹತ್ತರವಾದ ಸಾಧನೆಯೇ ಸರಿ. ಚಿಕ್ಕಂದಿನಿಂದಲೇ ಶಾಲಾ ಸಮಾರಂಭಗಳಲ್ಲಿ ಹಾಡುತ್ತಾ ಬಂದರು. ಈಕೆಯ ಮಧುರ ಕಂಠ ಮತ್ತು ಗುಣಸ್ವಭಾವಗಳನ್ನು ಆತ್ಮೀಯವಾಗಿ ಕಂಡ ರಾಮಚಂದ್ರ ಜಂತ್ರಿ ದಂಪತಿಗಳು ಇವರ ಬಗ್ಗೆ ವಿಶೇಷ ಕಾಳಜಿ ವಹಿಸಿ ತಾವು ಕಲಿತ ಸಂಗೀತವೆಲ್ಲವನ್ನು ಧಾರೆ ಎರೆದರು. ಅನುರಾಧಾ ಅವರಿಗೆ ಶಾಸ್ತ್ರೀಯ ಸಂಗೀತದ ಮಜಲುಗಳು ಪರಿಚಯವಾಗುತ್ತಿದ್ದಂತೆ ಭಾವಗೀತೆಗಳನ್ನೂ ಹೇಳಿಕೊಡುತ್ತಾ ಬಂದರು. ಹೀಗೆ ಶ್ರೇಷ್ಠ ಕವಿಗಳ ಕವಿತೆಗಳು…
ಚಂಡೀಗಢ : ಸ್ಪಿಕ್ ಮಕೆ ಚಂಡೀಗಢ ಮತ್ತು ಚಂಡೀಗಢ ಸಿಟಿಜನ್ಸ್ ಫೌಂಡೇಷನ್ ಇವರು ಪ್ರಸ್ತುತ ಪಡಿಸುವ ಸಂಗೀತ ಕಾರ್ಯಕ್ರಮವನ್ನು ದಿನಾಂಕ 10 ಅಕ್ಟೋಬರ್ 2025ರಂದು ಸಂಜೆ 6-00 ಗಂಟೆಗೆ ಚಂಡೀಗಢ ವಸ್ತು ಸಂಗ್ರಹಾಲಯ ಮತ್ತು ಕಲಾ ಗ್ಯಾಲರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ವಿದುಷಿ ಕಮಲಾ ಶಂಕರ್ ಇವರ ಶಂಕರ್ ಸ್ಲೈಡ್ ಗಿಟಾರ್ ವಾದನಕ್ಕೆ ಪಂಡಿತ್ ದುರ್ಜಯ್ ಭೌಮಿಕ್ ಇವರು ತಬಲಾ ಸಾಥ್ ನೀಡಲಿದ್ದಾರೆ.
ಧಾರವಾಡ : ‘ಕನ್ನಡದ ಕೀರ್ತಿ’ ಕೀರ್ತಿನಾಥ ಕುರ್ತಕೋಟಿಯವರ 97ನೆ ಜನ್ಮದಿನವನ್ನು ಮನೋಹರ ಗ್ರಂಥಮಾಲೆ ಹಾಗೂ ಕುರ್ತಕೋಟಿ ಮೆಮೋರಿಯಲ್ ಟ್ರಸ್ಟ್ ಸಂಯುಕ್ತವಾಗಿ ‘ಕೀರ್ತಿ ನೆನಪು’ ಕಾರ್ಯಕ್ರಮವನ್ನು ದಿನಾಂಕ 13 ಅಕ್ಟೋಬರ್ 2025 ಸೋಮವಾರದಂದು ಬೆಳಗ್ಗೆ 11-00 ಗಂಟೆಗೆ ಧಾರವಾಡದ ರಂಗಾಯಣ ಆವರಣದಲ್ಲಿರುವ ಸವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿ ಹಮ್ಮಿಕೊಂಡಿವೆ. ಇತ್ತೀಚೆಗೆ ಬಿಡುಗಡೆ ಆದ ಅವರ ‘ವಾಗರ್ಥ’ ಕೃತಿ ಕುರಿತು ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು, ಸುಮಾರು ಐದು ದಶಕಗಳ ಕಾಲ ಕುರ್ತಕೋಟಿಯವರು ಬೇಂದ್ರೆ ಸಾಹಿತ್ಯ ಕುರಿತು ಪ್ರಕಟಿಸಿದ ಕೃತಿಗಳು ಹಾಗೂ ಲೇಖನಗಳ ಸಂಗ್ರಹ ಇದಾಗಿದೆ. ಅವರ ವಿಮರ್ಶಾ ಲೇಖನಗಳು ಸಂಸ್ಕೃತ, ಕನ್ನಡ, ಇಂಗ್ಲೀಷ್ ಈ ಭಾಷೆಯ ಸಾಹಿತ್ಯ ಹಾಗೂ ಸಂಸ್ಕೃತಿಯಿಂದ ಕೂಡಿರುತ್ತವೆ. ಕನ್ನಡ ವಿಮರ್ಶಾ ಪ್ರಕಾರಕ್ಕೆ ಅಸ್ತಿಭಾರ ಹಾಕಿದವರು ಕುರ್ತಕೋಟಿಯವರು. ಇಂದು ನಾಡಿನಲ್ಲಿ ಕುರ್ತಕೋಟಿ ವಿಮರ್ಶಾ ಪರಂಪರೆಯೆ ಇದೆ. ಅದನ್ನು ಕುರ್ತಕೋಟಿ ಕ್ರಿಟಿಸಿಜಮ್ ಸ್ಕೂಲ್ ಎಂದೆ ವಿಮರ್ಶಕರು ಉಲ್ಲೇಖಿಸುತ್ತಾರೆ. ಬೇಂದ್ರೆಯವರ ಕಾವ್ಯ ಅರ್ಥವಾಗಬೇಕಾದರೆ ಕೀರ್ತಿ ಅವರ ವಿಮರ್ಶಾ ಬರಹಗಳನ್ನು ಓದಲೇಬೇಕು. ಬೇಂದ್ರೆ ಕಾವ್ಯ ಜಗತ್ತು ಕಂಡ…
ಬೋಳೂರು : ಮಾತಾ ಅಮೃತಾನಂದಮಯಿಯವರ ಜನ್ಮದಿನೋತ್ಸವದ ವಿಶೇಷ ಸಂದರ್ಭದಲ್ಲಿ ದಿನಾಂಕ 11 ಅಕ್ಟೋಬರ್ 2025ನೇ ಶನಿವಾರ ಬೆಳಿಗ್ಗೆ 9-00 ಗಂಟೆಯಿಂದ ನಿರಂತರವಾಗಿ ಶ್ರೀ ಗುರು ಪಾದುಕಾ ಪೂಜೆ, ಸತ್ಸಂಗ, ಭಜನೆ, ಧ್ಯಾನ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ, ಶ್ರೀ ಚಕ್ರ ಪೂಜೆ ಮೊದಲಾದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ವಿಶೇಷವಾಗಿ ಜಗದ್ವಿಖ್ಯಾತರಾದ ಅಮ್ಮನವರ ಜೀವನ ಆಧಾರಿತ ಕಥೆಯನ್ನು ಅವಲಂಬಿಸಿ ಯಕ್ಷಗುರು ವರ್ಕಾಡಿ ರವಿ ಅಲೆವೂರಾಯ ವಿರಚಿತ ‘ಅಮೃತಮಯಿ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟವೂ ಪ್ರಸ್ತುತಗೊಳ್ಳಲಿದೆ.
ಮಂಗಳೂರು : ಸ್ಪಿಕ್ ಮಕೆ ಎನ್.ಐ.ಟಿ.ಕೆ. ಇವರು ಪ್ರಸ್ತುತ ಪಡಿಸುವ ‘ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮವನ್ನು ದಿನಾಂಕ 12 ಅಕ್ಟೋಬರ್ 2025ರಂದು ಸಂಜೆ 6-00 ಗಂಟೆಗೆ ಎನ್.ಐ.ಟಿ.ಕೆ.ಯ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ವಿದುಷಿ ಅಮೃತ ಮುರಳಿ ಇವರ ಹಾಡುಗಾರಿಕೆಗೆ ವಿದ್ವಾನ್ ಬಿ.ಎಸ್. ಪ್ರಶಾಂತ್ ಇವರು ಮೃದಂಗದಲ್ಲಿ ಹಾಗೂ ವಿದುಷಿ ಅದಿತಿ ಕೃಷ್ಣಪ್ರಕಾಶ್ ಇವರು ವಯೋಲಿನ್ ನಲ್ಲಿ ಸಾಥ್ ನೀಡಲಿದ್ದಾರೆ.