Author: roovari

ಬಂಟ್ವಾಳದ ತುಂಬೆಗುತ್ತು ಮನೆತನದ ಸುಬ್ಬಯ್ಯ ಆಳ್ವ ಮತ್ತು ತುಂಗಮ್ಮ ದಂಪತಿಗಳ ಹಿರಿ ಮಗಳಾಗಿ 29 ಅಕ್ಟೋಬರ್ 1916ರಂದು ಜನಿಸಿದ ಚಂದ್ರಭಾಗಿ ರೈಯವರು ಸ್ವತಂತ್ರ ಪೂರ್ವದಿಂದಲೇ ಲೇಖಕಿಯಾಗಿ ಗುರುತಿಸಿಕೊಂಡವರು. ಸಾಹಿತ್ಯ ಪ್ರೇಮಿಯಾದ ತಂದೆಯಿಂದಾಗಿ ಚಂದ್ರಭಾಗಿ ರೈಯವರಿಗೆ ಓದುವ ಹವ್ಯಾಸ ಬೆಳೆಯಿತು. ಸಂಗೀತ, ನಾಟಕ, ಆಶು ಕವಿತೆ ರಚನೆಯೂ ಅವರ ಆಸಕ್ತಿಯ ವಿಷಯವಾಗಿತ್ತು. ಬಾಲ್ಯದಲ್ಲಿಯೇ ಸುತ್ತಮುತ್ತಲ ಮಕ್ಕಳನ್ನು ಸೇರಿಸಿ, ತಾನೇ ಬರೆದ ನಾಟಕಗಳನ್ನು, ಹಾಡುಗಳನ್ನು ಕಲಿಸಿ ಪ್ರದರ್ಶನ ಮಾಡುತ್ತಿದ್ದರು ಎಂಬುದನ್ನು ಅವರ ತಮ್ಮ ಏರ್ಯ ಲಕ್ಷ್ಮೀನಾರಾಯಣ ಆಳ್ವರು ಸ್ಮರಿಸಿಕೊಳ್ಳುತ್ತಿದ್ದರು. ಸೃಷ್ಠಿಶೀಲ ಪ್ರತಿಭೆಯುಳ್ಳ ಚಂದ್ರಭಾಗಿ ರೈಯವರು ದೇರಾಜೆಯ ಕೃಷ್ಣ ರೈಯವರನ್ನು ವಿವಾಹವಾದರು. ತನ್ನ ವಿವಾಹದ ಆರತಿಯ ಹಾಡನ್ನೂ ತಾನೇ ರಚಿಸಿ, ರಾಗ ಹಾಕಿ ಮದುವೆಯ ದಿನದಂದು ಹಾಡಿಸಿದ್ದರಂತೆ. ಕೃಷ್ಣ ರೈಗಳಿಗೆ ಸಾಹಿತ್ಯ ಸಂಗೀತಗಳಲ್ಲಿ ಆಸಕ್ತಿ ಇಲ್ಲದ ಕಾರಣ ಹೆಚ್ಚಿನ ಪ್ರೋತ್ಸಾಹ ಸಿಗದಿದ್ದರೂ ಕಂಗೆಡದೆ ಚಂದ್ರಭಾಗಿ ರೈಯವರು ಸೀಮಿತ ಅವಕಾಶದೊಳಗೂ ಸಾಕಷ್ಟು ಸಾಹಿತ್ಯ ಕೃಷಿ ಮಾಡಿದ್ದಾರೆ. ಅವರ ಕವನ, ಲೇಖನ, ಕತೆಗಳು ಆ ಕಾಲದ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದವು.…

Read More

ಮಂಗಳೂರು : ಯಕ್ಷಾಂಗಣ ಮಂಗಳೂರು ಮತ್ತು ಕರ್ನಾಟಕ ಯಕ್ಷ ಭಾರತಿ ಪುತ್ತೂರು ಆಶ್ರಯದಲ್ಲಿ ಜರಗುವ ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ – 2024’ ಹನ್ನೆರಡನೇ ವರ್ಷದ ನುಡಿ ಹಬ್ಬ ದ್ವಾದಶ ಸರಣಿಯ ಆಮಂತ್ರಣ ಪತ್ರಿಕೆಯನ್ನು ಕದ್ರಿ ಶ್ರೀ ಮಂಜುನಾಥ ದೇವರ ಸನ್ನಿಧಿಯಲ್ಲಿ ದಿನಾಂಕ 28 ಅಕ್ಟೋಬರ್ 2024ರಂದು ಬಿಡುಗಡೆಗೊಳಿಸಲಾಯಿತು. ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಎ.ಜೆ. ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಹಾಗೂ ಯಕ್ಷಾಂಗಣದ ಗೌರವಾಧ್ಯಕ್ಷ ಡಾ. ಎ.ಜೆ. ಶೆಟ್ಟಿ “ಮನೋರಂಜನೆಯೊಂದಿಗೆ ವಿವಿಧ ಭಾರತೀಯ ಜ್ಞಾನಶಾಖೆಗಳನ್ನು ಪರಿಚಯಿಸುವ ಯಕ್ಷಗಾನ ತಾಳಮದ್ದಳೆ ಬಹಳ ವಿಚಾರ ಪ್ರಚೋದಕವಾದ ಕಲಾ ಪ್ರಕಾರ. ಪ್ರತಿ ವರ್ಷ ಸಪ್ತಾಹದ ರೂಪದಲ್ಲಿ ಇದನ್ನು ನವೆಂಬರ ತಿಂಗಳ ನುಡಿ ಹಬ್ಬವಾಗಿ ಆಚರಿಸುತ್ತಿರುವ ಯಕ್ಷಾಂಗಣದ ಕಾರ್ಯವನ್ನು ಕಲಾಭಿಮಾನಿಗಳು ಬೆಂಬಲಿಸಬೇಕು” ಎಂದು ಹೇಳಿದರು. ಮಹೇಶ್ ಮೋಟರ್ಸ್ ಮಾಲಕ ಎ.ಕೆ. ಜಯರಾಮ ಶೇಖ ಮತ್ತು ಉದ್ಯಮಿ ಲೋಟಸ್ ಬಿಲ್ಡರ್ಸ್ ನ ಜಿತೇಂದ್ರ ಕೊಟ್ಟಾರಿ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು. ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ…

Read More

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ‘ಬಿತ್ತಿ’ ದಿನಾಚರಣೆ ಹಾಗೂ ವಾರ್ಷಿಕ ಚಟುವಟಿಕೆಗಳ ಬಿಡುಗಡೆ ಸಮಾರಂಭವು ದಿನಾಂಕ 28 ಅಕ್ಟೋಬರ್ 2024ರಂದು ನಡೆಯಿತು. ಕಾರ್ಯಕ್ರಮದಲ್ಲಿ ವಾರ್ಷಿಕ ಚಟುವಟಿಕೆಯನ್ನು ಬಿಡುಗಡೆಗೊಳಿಸಿ ‘ಬರವಣಿಗೆಯ ಮಹತ್ವ’ದ ಕುರಿತು ಉಪನ್ಯಾಸ ನೀಡಲು ಆಗಮಿಸಿದ ಕಾರ್ಕಳ ಭುವನೇಂದ್ರ ಕಾಲೇಜಿನ ಕನ್ನಡ ಉಪನ್ಯಾಸಕಿ ಸುಲೋಚನಾ ಪಚ್ಚಿನಡ್ಕ ಮಾತನಾಡಿ “ಬದುಕಿನಲ್ಲಿ ಆತಂಕಗಳು, ಸವಾಲುಗಳು ಸಹಜ. ಎಲ್ಲಾ ಕಾಲದ ಸಮಾಜದಲ್ಲೂ ಭಯ, ಕ್ರೌರ್ಯ, ಅನಾಚಾರಗಳು ಇರುತ್ತವೆ. ಆದರೆ ಅದನ್ನೇ ಮುಂದು ಮಾಡಿ ಭರವಸೆಯನ್ನು ಕಳೆದುಕೊಳ್ಳದಿರಿ. ನಿಮ್ಮ ನಡವಳಿಕೆ ಮತ್ತು ಬರವಣಿಗೆಯಲ್ಲಿ ಇವನ್ನು ಮೀರುವ, ಮಾನವತೆಯ ಕಡೆಗೆ ಹೆಜ್ಜೆ ಹಾಕುವ ಪ್ರಯತ್ನವನ್ನು ಮುಂದುವರಿಸಿ. ಕನ್ನಡ ಭಾಷೆ ನಮ್ಮ ಭಾವದ ಭಾಷೆ. ಕನ್ನಡಿಗರಾಗಿರುವುದಕ್ಕೆ ನಾವು ಹೆಮ್ಮೆ ಪಡಬೇಕು. ಸಾಹಿತ್ಯದ ಓದು ನಮ್ಮ ವ್ಯಕ್ತಿತ್ವವನ್ನು ರೂಪಿಸುತ್ತದೆ.” ಎಂದರು. ಅಧ್ಯಕ್ಷತೆ ವಹಿಸಿದ ಎಸ್. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಸೋಮಣ್ಣ ಮಾತನಾಡಿ “ಕನ್ನಡ ವಿಭಾಗದ ಬಿತ್ತಿ ಪತ್ರಿಕೆಗೆ…

Read More

ಬೆಂಗಳೂರು: ಶೇಷಾದ್ರಿಪುರಂ ಶಿಕ್ಷಣ ದತ್ತಿ, ಶೇಷಾದ್ರಿಪುರಂ ಸಂಜೆ ಕಾಲೇಜು ಹಾಗೂ ಗೋಧೂಳಿ ಕನ್ನಡ ಸಂಘ ಮತ್ತು ಮಂಗಳೂರಿನ ಶೋಧನ ಪ್ರಕಾಶನದ ಸಹಯೋಗದಲ್ಲಿ ಪ್ರೊ. ಎ.ವಿ. ನಾವಡ ಸಂಪಾದಿಸಿದ ‘ಮುದ್ದಣ ಕೃತಿ ಕರಜನ’ ಮುದ್ದಣ ಕವಿಯ ಸಮಗ್ರ ಕಾವ್ಯ ಸಂಪುಟ ಕೃತಿಯ ಲೋಕಾರ್ಪಣಾ ಸಮಾರಂಭವು ದಿನಾಂಕ 16 ಅಕ್ಟೋಬರ್ 2024ರ ಬುಧವಾರದಂದು ಬೆಂಗಳೂರಿನಲ್ಲಿರುವ ಶೇಷಾದ್ರಿಪುರಂ ಸಂಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೃತಿಯನ್ನು ಲೋಕಾರ್ಪಣೆಗೊಳಿಸಿದ ಹಿರಿಯ ವಿದ್ವಾಂಸ ನಾಡೋಜ ಹಂಪ ನಾಗರಾಜಯ್ಯ ಮಾತನಾಡಿ “ತಂದೆಯ ಅಚ್ಚಿನ ಮುಖ, ಅದೇ ಎರಕದ ಮೊಗ ನಮ್ಮ ವಾಸುದೇವ ನಾವಡ ಅವರದ್ದು. ತಂದೆಯ ಅಚ್ಚನ್ನು ಮಾತ್ರವಲ್ಲದೇ, ತಂದೆಯ ವಿದ್ವತ್ ಪರಂಪರೆಯನ್ನು ಅವರು ಉತ್ಕರ್ಷ ಸ್ಥಿತಿಗೆ ತೆಗೆದುಕೊಂಡು ಹೋಗುವಂತಹ ಕೆಲಸವನ್ನು ತಮ್ಮ ಅಧ್ಯಯನದ ಮೂಲಕ ಮಾಡುತ್ತಿದ್ದಾರೆ. ಸ್ವತಃ ತಮ್ಮ ಅಧ್ಯಯನದಿಂದ ತಮ್ಮ ವಿದ್ವತ್ತನ್ನು ಬೆಳೆಸಿಕೊಂಡು, ಎಷ್ಟೆಷ್ಟೋ ಕ್ಷೇತ್ರಗಳಲ್ಲಿ ಅವರು ತಮ್ಮ ಬಹುಶ್ರುತತ್ವವನ್ನು ಪ್ರಕಟಿಸಿದ್ದಾರೆ ಎಂದರೆ, ಅದನ್ನು ನೋಡಿದ, ಓದಿದ, ತಿಳಿದ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಸಹಜವಾಗಿಯೇ ಅವರ ವಿಚಾರದಲ್ಲಿ…

Read More

ಮಂಗಳೂರು: ಮಂಗಳೂರಿನ ವಿಶ್ವಕರ್ಮ ಕಲಾ ಪರಿಷತ್ ಹಾಗೂ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇವರಿಗೆ ಶ್ರದ್ಧಾಂಜಲಿ ಸಭೆಯು ದಿನಾಂಕ 27 ಅಕ್ಟೋಬರ್ 2024ರ ಭಾನುವಾರದಂದು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಪಟ್ಟೆ ಲಿಂಗಪ್ಪಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಯಕ್ಷಗಾನ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ “ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರ ಹಾಸ್ಯ ಬುದ್ದಿಗೆ ಚುರುಕು ಮುಟ್ಟಿಸುವಂತಹದ್ದು. ಪಾತ್ರೋಚಿತವಾಗಿ ಹಾಸ್ಯ ರಸವನ್ನು ಹುಟ್ಟಿಸುವ ಮೇಧಾಶಕ್ತಿ ಅವರಿಗಿತ್ತು. ಅವರ ಆದರ್ಶದ ಬೆಳಕಿನಲ್ಲಿ ಹೊಸ ಕಲಾವಿದರು ರೂಪುಗೊಳ್ಳಬೇಕು. ಈಗಿನ ಅನೇಕ ಕಲಾವಿದರಿಗೆ ಪರಂಪರೆಯ ಹಾಸ್ಯ ಗೊತ್ತಿಲ್ಲ. ಹಗುರ ರಂಜನೆ ಒದಗಿಸಲು ಹೋಗುವ ಅವರು ತಮ್ಮ ಚೇಷ್ಟೆ, ಅಶ್ಲೀಲತೆ ಮಾತುಗಳಿಂದ ಅಪಹಾಸ್ಯಕ್ಕೀಡಾಗುವುದೇ ಜಾಸ್ತಿ. ಆದರೆ, ಬಂಟ್ವಾಳ ಜಯರಾಮ ಆಚಾರ್ಯರ ಮಾತುಗಳಲ್ಲಿ ಅಪಸವ್ಯಕ್ಕೆ ಅವಕಾಶವೇ ಇರಲಿಲ್ಲ. ಭಾಷಾ ಶುದ್ಧಿಗೆ ಮಹತ್ವ ನೀಡುತ್ತಿದ್ದ ಅವರಿಗೆ…

Read More

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ ಹಾಗೂ ಎಸ್‌. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇವರ ಜಂಟಿ ಆಶ್ರಯದಲ್ಲಿ ಅಂಬಲಪಾಡಿ ವ್ಯಾಸ ಬಲ್ಲಾಳ ಜಾನಕಿ ದತ್ತಿನಿಧಿ ಸೇಡಿಯಾಪು ಕೃಷ್ಣ ಭಟ್ ಸಂಸ್ಮರಣೆ ಉಪನ್ಯಾಸ ಕಾರ್ಯಕ್ರಮವು ದಿನಾಂಕ 29 ಅಕ್ಟೋಬರ್ 2024ರಂದು ಅಪರಾಹ್ನ ಘಂಟೆ 2.30 ರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರೀಯ ವಿಶ್ವವಿದ್ಯಾನಿಲಯ ಪೆರಿಯ ಕಾಸರಗೋಡು ಇಲ್ಲಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರವೀಣ ಪದ್ಯಾಣ ‘ಸೇಡಿಯಾಪು – ವಿಚಾರ ಪ್ರಪಂಚ’ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ. ಹಾಗೂ ಇದೇ ಸಂದರ್ಭದಲ್ಲಿ ವಿಭಾಗದ ವಿದ್ಯಾರ್ಥಿಗಳಿಂದ ಸೇಡಿಯಾಪು ಕವಿತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ.

Read More

ಬೆಂಗಳೂರು : ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ) ಕರ್ನಾಟಕ ಆಯೋಜಿಸುವ ಕಾವ್ಯಶ್ರೀ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಕಾವ್ಯಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕಾವ್ಯಶ್ರೀ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಚರ್ಚಾಗೋಷ್ಠಿ, ಸಂವಾದ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಾಂಕ 03 ನವೆಂಬರ್ 2024ರ ರವಿವಾರ ಬೆಳಿಗ್ಗೆ ಘಂಟೆ 09.30ರಿಂದ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿದೆ. ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಶನ್ ಟ್ರಸ್ಟ್ ಇದರ ಡಾ. ಆರೂಢ ಭಾರತೀ ಸ್ವಾಮಿ ಇವರ ದಿವ್ಯ ಉಪಸ್ಥಿತಿಯಲ್ಲಿ ಉಪನ್ಯಾಸಕ, ಕವಿ, ಸಾಂಸ್ಕೃತಿಕ ಸಂಘಟಕ ಹಾಗೂ ಕನ್ನಡ ಪರ ಹೋರಾಟಗಾರರಾದ ಡಾ. ಎಸ್. ರಾಮಲಿಂಗೇಶ್ವರ (ಸಿಸಿರಾ) ಇವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಬೆಂಗಳೂರು ದೂರದರ್ಶನ ಕೇಂದ್ರದ ವಿಶ್ರಾಂತ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿಗಳಾದ ಶ್ರೀ ಸುಬ್ಬು ಹೊಲೆಯಾರ್ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ವಿಜಯ ಪದವಿ ಕಾಲೇಜು ಇಲ್ಲಿನ ಕನ್ನಡ ಪ್ರಾಧ್ಯಾಪಕರು ಮತ್ತು ಸಾಹಿತಿಗಳಾದ …

Read More

ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನ ಸಹಯೋಗದಲ್ಲಿ 31 ಅಕ್ಟೋಬರ್ 2024ರಂದು ರಾಜ್ಯ ಮಟ್ಟದ ಕವನ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಭಾವ ಸಂಗಮ ಸಂಚಾಲಕ ರಾಜೇಂದ್ರ ಪಾಟೀಲ ತಿಳಿಸಿದ್ದಾರೆ. ಕವನದ ವಿಷಯ: ಕತ್ತಲೆಯಿಂದ ಬೆಳಕಿನೆಡೆಗೆ…. ಕವನಗಳು 20 ಸಾಲುಗಳ ಮಿತಿಯೊಳಗಿರಲಿ‌‌. ಯಾವುದೇ ಬಳಗ, ಸಂಘ, ಸಂಸ್ಥೆಗಳಿಗೆ ಸಂಬಂಧಿಸಿದ್ದರೂ ಆವರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧೆಗೆ ಮುಕ್ತವಾದ ಅವಕಾಶ ನೀಡಿದೆ‌.  ಒಬ್ಬರು ಒಂದೇ ಕವನ ಕಳುಹಿಸುವುದು. ಕಳುಹಿಸುವ ಮೊದಲೇ ಕವನವನ್ನು ಎರಡು ಮೂರು ಸಲ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಮಾಡಿ . ಕಳುಹಿಸಿ‌. ಪದೇ ಪದೇ ತಿದ್ದುಪಡಿ ಮಾಡಿ ಕಳುಹಿಸಬೇಡಿ. ಮೊದಲ ಸಲ ಕಳಿಸಿದ್ದನ್ನೇ ಸ್ಪರ್ಧೆಗೆ ಪರಿಶೀಲಿಸಲಾಗುತ್ತದೆ. ಕವನವನ್ನು 31ಅಕ್ಟೋಬರ್ 2024ರಂದು ಸಾಯಂಕಾಲ 4 ರಿಂದ ಸಂಜೆ 9 ರ ಅವಧಿಯೊಳಗೆ ಕಡ್ಡಾಯವಾಗಿ 9591323453  ವಾಟ್ಸಾಪ್ ಸಂಖ್ಯೆಗೆ ಕಳಿಸಬೇಕು. ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು 30 ಅಕ್ಟೋಬರ್ 2024ರ ರಾತ್ರಿ 10 ರೊಳಗೆ ತಮ್ಮ ಹೆಸರುಗಳನ್ನು 9591323453 ವಾಟ್ಸಾಪ್ ಗೆ ಕಳುಹಿಸಿ ನೋಂದಾಯಿಸಿಕೊಳ್ಳುವುದು ಕಡ್ಡಾಯ‌.  ಫೋನ್ ಕರೆಗೆ ಅವಕಾಶ…

Read More

ಉಡುಪಿ: ಜೀವ ವಿಮಾ ಅಧಿಕಾರಿಗಳಾಗಿ ನಿವೃತ್ತರಾಗಿದ್ದ,ಕಲಾಪ್ರೇಮಿ ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮರಣೆಯಲ್ಲಿ ಪ್ರತೀ ವರ್ಷ ಆಯೋಜಿಸುತ್ತಾ ಬಂದ ಸರ್ಪಂಗಳ ಯಕ್ಷೋತ್ಸವ ಕಾರ್ಯಕ್ರಮವು ದಿನಾಂಕ 27 ಅಕ್ಟೋಬರ್ 2024ರ ಭಾನುವಾರದಂದು ಯಕ್ಷಗಾನ ಕಲಾರಂಗದ ಐ. ವೈ. ಸಿ. ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಇವರಿಗೆ ‘ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಚೌಕಿ ಸಹಾಯಕರಾಗಿ ಐದು ದಶಕಗಳ ಕಾಲ ಸೇವೆ ಸಲ್ಲಿಸಿದ ಕಾಟುಕುಕ್ಕೆ ಗೋವಿಂದ ನಾಯ್ಕ ಇವರಿಗೆ ‘ಸರ್ಪಂಗಳ ಕಲಾ ಸೇವಾ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಈರ್ವರನ್ನು ಸನ್ಮಾನಿಸಿದರು. ಕಾರ್ಯಕ್ರಮದ ಪ್ರಾಯೋಕರಾದ ಡಾ. ನರೇಂದ್ರ ಶೆಣೈ, ಮತ್ತು ಡಾ.ಶೈಲಜಾ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ‘ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನಗೊಂಡಿತು.

Read More

ಮೂಡಬಿದಿರೆ : ಮೂಡಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ ಖ್ಯಾತ ಪತ್ರಕರ್ತರಾಗಿದ್ದ ವಕೀಲ ವೇಣುಗೋಪಾಲ್ ಮತ್ತು ಡಾ. ಶೇಖರ ಅಜೆಕಾರು ಇವರುಗಳ ಸಂಸ್ಮರಣ ಕಾರ್ಯಕ್ರಮ ಹಾಗೂ ಬಹುಭಾಷಾ ಕವಿಗೋಷ್ಠಿಯು ದಿನಾಂಕ 25 ಅಕ್ಟೋಬರ್ 2024ರಂದು ಮೂಡಬಿದಿರೆ ಸಮಾಜ ಮಂದಿರದಲ್ಲಿ ನಡೆಯಿತು. ಪತ್ರಕರ್ತೆ ಪ್ರೇಮಾ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಮಾಜಿ ಶಾಸಕ ಹಾಗೂ ಮಂತ್ರಿಯಾದ ಶ್ರೀ ಅಭಯಚಂದ್ರ ಜೈನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಬಹುಮುಖ ಪ್ರತಿಭೆಯ ಡಾ. ಶೇಖರ ಅಜೆಕಾರು ವಿಶೇಷವಾಗಿ ಮೂಡುಬಿದಿರೆಯಲ್ಲಿ ಹಲವು‌ಕಾಲ ನೆಲಸಿ ‘ಬೆಳದಿಂಗಳ ಸಾಹಿತ್ಯ ಸಮ್ಮೇಳನ’ದಂತಹ ಹಲವಾರು ವಿಭಿನ್ನ ಮಾದರಿಯ ಕಾರ್ಯಕ್ರಮದ ರೂವಾರಿಗಳಾಗಿದ್ದು, ಹಲವಾರು ತೆರೆಮರೆಯ ಪ್ರತಿಭೆಗಳನ್ನು ಗುರುತಿಸಿದ್ದರು. ಹಾಗೂ ವಕೀಲರಾಗಿದ್ದ ವೇಣುಗೋಪಾಲರ ಶ್ರಮದ ಫಲವಾಗಿ ಸ್ವತಂತ್ರ ಪತ್ರಕರ್ತರಿಗೆ ಕೊಠಡಿ ಲಭ್ಯವಾಯಿತು.” ಎಂದರು ವಿಜಯ ಕರ್ನಾಟಕದ ಸ್ಥಾನೀಯ ಸಂಪಾದಕ ರವೀಂದ್ರ ಶೆಟ್ಟಿ ಇವರು ‘ಮಾಧ್ಯಮ ಮತ್ತು ವಿಶ್ವಾಸಾರ್ಹತೆ’ ಎಂಬ ವಿಷಯದ ಕುರಿತು ಮಾತನಾಡಿ “ಜಾಲತಾಣಗಳ ಮತ್ತು ಯಂತ್ರ ಮಾದ್ಯಮಗಳ ಪೈಪೋಟಿಯ…

Read More