Subscribe to Updates
Get the latest creative news from FooBar about art, design and business.
Author: roovari
ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಸಮಿತಿ ಹಾಗೂ ಕರ್ನಾಟಕ ಗಮಕ ಕಲಾ ಪರಿಷದ್ ಇದರ ಕಾರ್ಕಳ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಹರಿಶ್ಚಂದ್ರ ಕಾವ್ಯದ ವಾಚನ ವ್ಯಾಖ್ಯಾನವು ದಿನಾಂಕ 31-08-2023ರಂದು ಕಾರ್ಕಳ ಸರಕಾರಿ ಪ.ಪೂ.ಕಾಲೇಜಿನಲ್ಲಿ ನಡೆಯಿತು. “ರಾಘವಾಂಕ ಕವಿ ವಿರಚಿತ ಹರಿಶ್ಚಂದ್ರ ಕಾವ್ಯದ ವಿಶ್ವೇಶ್ವರ ಸಾಕ್ಷಾತ್ಕಾರ” ಎಂಬ ಗಮಕ ವಾಚನ ವ್ಯಾಖ್ಯಾನ ಕಾರ್ಯಕ್ರಮದಲ್ಲಿ ಅವರು ವ್ಯಾಖ್ಯಾನಕಾರರಾಗಿ ಹರಿಶ್ಚಂದ್ರ ಕಾವ್ಯದ ಮಹತ್ವವನ್ನು ಹೇಳಿ ಕಾವ್ಯದ ವ್ಯಾಖ್ಯಾನವನ್ನು ನೆರವೇರಿಸಿದರು. ಗಮಕಿ ವಿದ್ವಾನ್ ಸುರೇಶ್ ರಾವ್ ಅತ್ತೂರು ಅವರು ಕಾವ್ಯದ ವಾಚನಕಾರರಾಗಿ ಭಾಗವಹಿಸಿದ್ದರು. “ಹರನೆಂಬುದೇ ಸತ್ಯ. ಸತ್ಯವೆಂಬುದೇ ಹರ. ಅದನ್ನುಳಿದು ಅನ್ಯವಿಲ್ಲ. ದೇವರೊಬ್ಬನೇ ಎಂಬ ಸಂದೇಶವನ್ನು ಸಾರುವ ರಾಘವಾಂಕ ಕವಿಯ ಹರಿಶ್ಚಂದ್ರ ಕಾವ್ಯವು ಹನ್ನೆರಡನೇ ಶತಮಾನದ ಶ್ರೇಷ್ಠ ಕಾವ್ಯಗಳಲ್ಲಿ ಒಂದಾಗಿದೆ” ಎಂಬುದಾಗಿ ಹಿರಿಯ ವ್ಯಾಖ್ಯಾನಕಾರರಾದ ಗಮಕಿ ವಿದ್ವಾನ್ ತೆಕ್ಕೆಕೆರೆ ಸುಬ್ರಹ್ಮಣ್ಯ ಭಟ್ ಬೆಂಗಳೂರು ಇವರು ಇಲ್ಲಿ ಮಾತನಾಡುತ್ತಾ ತಿಳಿಸಿದರು. ಕನ್ನಡ ಸಂಘದ ಕಾರ್ಯಾಧ್ಯಕ್ಷರಾದ ಡಾ.ನಾ.ಮೊಗಸಾಲೆ, ಗಮಕ…
ಕಾಸರಗೋಡು : ಕಾಸರಗೋಡಿನ ರಂಗ ಚಿನ್ನಾರಿ ಹಾಗೂ ಮಹಿಳಾ ಘಟಕ ನಾರಿ ಚಿನ್ನಾರಿಯ ಸಹಯೋಗದೊಂದಿಗೆ ಆಯೋಜಿಸುವ ವಿನೂತನ ಕಾರ್ಯಕ್ರಮ ‘ಸ್ವರ ಚಿನ್ನಾರಿ’ ಇದರ ಉದ್ಘಾಟನಾ ಸಮಾರಂಭ ಹಾಗೂ ‘ಈ ನೆಲ ಈ ಸ್ವರ’ ಭಾವಗೀತೆ ಗಾಯನ ಕಾರ್ಯಕ್ರಮವು ದಿನಾಂಕ 09-09-2023ರ ಶನಿವಾರದಂದು ಸಂಜೆ ಘಂಟೆ 4.30ಕ್ಕೆ ಕಾಸರಗೋಡಿನ ಪಿಲಿಕುಂಜೆಯ ಮುನ್ಸಿಪಲ್ ಕಾನ್ಸರೆನ್ಸ್ ಹಾಲ್ ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ಕವಿಗಳು ಹಾಗೂ ಸ್ವರಚಿನ್ನಾರಿಯ ಗೌರವಾಧ್ಯಕ್ಷರಾದ ಶ್ರೀ ಕೃಷ್ಣಯ್ಯ ಅನಂತಪುರ ಇವರು ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರಾದ ಡಾ. ನಾ.ದಾಮೋದರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಗೌರವಾಧ್ಯಕ್ಷರು ಹಾಗೂ ಖ್ಯಾತ ಗಾಯಕರಾದ ವೈ.ಕೆ. ಮುದ್ದುಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟರು ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಮಿಮಿಕ್ರಿ ಕಲಾವಿದರಾದ ಮಿಮಿಕ್ರಿ ದಯಾನಂದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಸ್.ವಿ.ಭಟ್ ಹಾಗೂ ಧಾರ್ಮಿಕ ಮುಂದಾಳು ಮತ್ತು ಖ್ಯಾತ ನೇತ್ರ…
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪ್ರತ್ತೂರು ಮತ್ತು ಗ್ರಾಮ ಪಂಚಾಯತ್ ಕೋಡಿಂಬಾಡಿ ಇವರ ಸಹಕಾರದೊಂದಿಗೆ ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗರಾದ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಇವರ ಮಹಾಪೋಷಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಗ್ರಾಮ ಸಾಹಿತ್ಯ ಸಂಭ್ರಮ’ದ ಸರಣಿ ಎಂಟನೇ ಕಾರ್ಯಕ್ರಮ ದಿನಾಂಕ 26-08-2023ರಂದು ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕೋಡಿಂಬಾಡಿ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ ಅವರು ಮಾತನಾಡಿ ‘ಕನ್ನಡ ಸಾಹಿತ್ಯ ಪರಿಷತ್ನ ಮೂಲಕ ನಡೆಯುವ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಿಂದ ಶಾಲಾ ಮಕ್ಕಳಿಗೆ ಮತ್ತು ಗ್ರಾಮದ ಜನತೆಗೆ ಸಾಹಿತ್ಯದ ಬಗ್ಗೆ ತಿಳಿಸುವ ಕಾರ್ಯವಾಗುತ್ತಿದೆ. ಈ ಕಾರ್ಯಕ್ರಮ ತಾಲೂಕಿನೆಲ್ಲೆಡೆ ನಡೆಯುತ್ತಿದ್ದು ಇದು ಯಶಸ್ವಿಯಾಗಿ ನಡೆಯಲಿ ಎಂದರು. ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100…
ಬೆಳ್ತಂಗಡಿ : ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಶ್ರಯದಲ್ಲಿ ಬೆಳ್ತಂಗಡಿ ಯಕ್ಷಭಾರತಿಯ 9ನೇ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ ಮತ್ತು ಯಕ್ಷಗಾನ ಪ್ರದರ್ಶನ ದಿನಾಂಕ 10-09-2023ರಂದು ಅಪರಾಹ್ನ ಗಂಟೆ 2ಕ್ಕೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶ್ರೀ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಕಣಿಯೂರು ರೈತಬಂಧು ಆಹಾರೋದ್ಯಮ ಸಂಸ್ಥೆಯ ಶ್ರೀ ಶಿವಶಂಕರ ನಾಯಕ್ ಇವರು ಉದ್ಘಾಟಿಸಲಿದ್ದಾರೆ. ಉಜಿರೆ ಶ್ರೀ ಜನಾರ್ದನ ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ಶ್ರೀ ಶರತ್ ಕೃಷ್ಣ ಪಡುವೆಟ್ನಾಯ, ಉಜಿರೆ ಗ್ರಾ.ಪಂ. ಅಧ್ಯಕ್ಷೆಯಾದ ಶ್ರೀಮತಿ ಉಷಾ ಕಿರಣ್ ಕಾರಂತ್, ಧರ್ಮಸ್ಥಳ ಗ್ರಾ.ಪ. ಉಪಾಧ್ಯಕ್ಷರಾದ ಶ್ರೀನಿವಾಸ ರಾವ್, ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ಶ್ರೀ ಪ್ರೀತಮ್ ಡಿ. ಅತಿಥಿಗಳಾಗಿರುವರು. ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾವಿದ, ಸಂಘಟಕ ಶ್ರೀ ಭಾಸ್ಕರ ಬಾರ್ಯ ಅವರಿಗೆ ‘ಯಕ್ಷ ಭಾರತಿ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಲಿದ್ದಾರೆ. ಸಂಜೆ 5ರಿಂದ ವಾರ್ಷಿಕ…
ಉಡುಪಿ : ಆದರ್ಶ ಅಧ್ಯಾಪಕ, ಕವಿ, ಲೇಖಕ, ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥದಾರಿ, ಕೀರ್ತಿಶೇಷ ಅಂಬಾತನಯ ಮುದ್ರಾಡಿಯವರು, ಹೆಚ್ಚು ಪ್ರಸ್ತುತರಾಗಿರುವುದು ನಾಟಕಗಳ ರಚನೆಯಿಂದ ಮತ್ತು ರಂಗಭೂಮಿಗೆ ಪ್ರಸ್ತುತವೆನ್ನಿಸುವ ಲೇಖನಗಳಿಂದ. ಅವರ ಸಂಸ್ಕರಣೆಯಲ್ಲಿ ಉಡುಪಿ ರಂಗಭೂಮಿಯು, ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಸಹಯೋಗದಲ್ಲಿ, ಅಂಬಾತನಯ ಮುದ್ರಾಡಿಯವರ ಹೆಸರಿನ ಪ್ರಶಸ್ತಿ – ಪುರಸ್ಕಾರವೊಂದನ್ನು ಈ ವರ್ಷದಿಂದ ಅನುಷ್ಠಾನಕ್ಕೆ ತರಲಿದೆ. ಇದು ಪರಿಶೀಲನ ಅವಧಿಯಲ್ಲಿ ಪ್ರಕಟವಾದ, ರಂಗಭೂಮಿಗೆ ಪ್ರಸ್ತುತವಾದ ಗಂಭೀರ ಚಿಂತನೆಯ ನಾಟಕೇತರ ಸಾಹಿತ್ಯಕೃತಿ ಅಥವಾ ಪರಿಶೀಲನ ಅವಧಿಯಲ್ಲಿ ಪ್ರಕಟವಾದ ಅತ್ಯುತ್ತಮ ನಾಟಕ ಕೃತಿಯನ್ನು ಪರ್ಯಾಯ ವರ್ಷಗಳಲ್ಲಿ ಸ್ಪರ್ಧೆಯ ಮೂಲಕ ಗುರುತಿಸಿ ಪುರಸ್ಕಾರವನ್ನು ನೀಡುವ ಮೂಲಕ ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯನ್ನು ನಿರಂತರವಾಗಿ ನಡೆಸುವ ಯೋಜನೆಯಾಗಿದೆ. ‘ಅಂಬಾತನಯ ಮುದ್ರಾಡಿಯವರ ಸಂಸ್ಕರಣೆಯ ತಲ್ಲೂರು ಫ್ಯಾಮಿಲಿಟ್ರಸ್ಟ್ ಸಹಯೋಗದ ಉಡುಪಿ ರಂಗಭೂಮಿ ಪುರಸ್ಕಾರ’ ಎಂದು ಕರೆಯಲ್ಪಡುವ ಈ ಪ್ರಶಸ್ತಿಯು ಪ್ರತಿವರ್ಷ ಡಿಸೆಂಬರ್ ತಿಂಗಳಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರದಾನಗೊಳ್ಳಲಿದ್ದು, ಪ್ರಶಸ್ತಿ ಪತ್ರ, ಸ್ಮರಣಿಕೆ, ಹಾಗೂ ಹದಿನೈದು ಸಾವಿರ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ಪ್ರಶಸ್ತಿಗೆ…
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಮಂದಿರದಲ್ಲಿ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 31-08-2023 ರಂದು ನಡೆಯಿತು. ಕಾರ್ಯಕ್ರಮದಲ್ಲಿ ದಿವ್ಯಸಾನ್ನಿದ್ಯ ವಹಿಸಿ ಉದ್ಘಾಟಿಸಿದ ಬೇಲಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶಿವರುದ್ರ ಮಹಾಸ್ವಾಮಿಗಳು “ಸರಕಾರ ಯರ್ಯಾರಿಗೋ ಏನೇನೋ ಸೌಲತ್ತುಗಳನ್ನು ನೀಡುತ್ತದೆ. ಆದರೆ ನಿಜವಾದ ಸಾಧಕರನ್ನು ಗುರುತಿಸುವ ಕೆಲಸವಾಗುತ್ತಿಲ್ಲ. ನಮ್ಮ ನಾಡಿನ ಅನರ್ಘ್ಯ ರತ್ನಗಳು ಎಂದರೆ ವಿವಿಧ ಕ್ಷೇತ್ರದಲ್ಲಿ ಅದ್ಭುತಗಳನ್ನು ಸೃಷ್ಟಿಮಾಡುವ ಮೂಲಕ ಕರುನಾಡಿನ ಹೆಸರನ್ನು ಜಗತ್ತಿಗೆ ತೋರಿಸಿಕೊಡುವವರು. ಅಂತವರನ್ನು ಕನ್ನಡ ಸಾಹಿತ್ಯ ಪರಿಷತ್ತು ಹುಡುಕಿ ಗುರುತಿಸುತ್ತಿದೆ. ನಾಡೋಜ ಡಾ.ಮಹೇಶ ಜೋಶಿಯವರು ತಮ್ಮ ಆಡಳಿತ ಅವಧಿಯಲ್ಲಿ ಪರಿಷತ್ತಿನ ಎಂದೆಂದಿಗೂ ಮರೆಯಲಾಗದ ಕೆಲಸಗಳನ್ನು ಮಾಡುತ್ತ ಬಂದಿರುವುದು ಸ್ವಾಗತಾರ್ಹ” ಎಂದು ಹೇಳಿದರು. ಪ್ರಶಸ್ತಿ ಪ್ರದಾನಮಾಡಿ ಮಾತನಾಡಿದ ನಾಡಿನ ಖ್ಯಾತ ವಿಮರ್ಶಕ ಮತ್ತು ಬಿ.ಎಂ.ಶ್ರೀ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಡಾ. ಪಿ.ವಿ. ನಾರಾಯಣ ಇವರು “ರಾಜ್ಯದಲ್ಲಿ ಕನ್ನಡ ಅಕ್ಷರ ಮೆರೆಯಾಗುತ್ತಿದೆ. ಆದರೆ ಉತ್ತರ ಭಾರತದವರು ನಮ್ಮಲ್ಲಿ ಬಂದು ತಮ್ಮದ್ದೇ ನೆಲ ಎನ್ನುವಂತೆ ನಡೆದುಕೊಳ್ಳುತ್ತಿದ್ದಾರೆ. ನನ್ನ ದೃಷ್ಟಿಯಲ್ಲಿ…
ಬೆಂಗಳೂರು : ಕರ್ನಾಟಕ ಸರ್ವೋದಯ ಮಂಡಲವು ‘ಗಾಂಧೀಜಿ ಜಯಂತಿ’ ಅಂಗವಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಿದೆ. ‘ಗಾಂಧಿ ನಮಗೆಷ್ಟು ಬೇಕು’, ‘ಗಾಂಧಿ ಅನಂತರದ ಭಾರತ ನಡೆದಿದ್ದು, ಎಡವಿದ್ದು, ಎಲ್ಲಿ – ಹೇಗೆ’, ‘ಗಾಂಧಿ ಇಂದಿಗೂ ಪ್ರಸ್ತುತ ಯಾಕೆ ಹೇಗೆ’, ‘ಯುವಜನರಿಗೆ ಗಾಂಧಿಯನ್ನು ತಲುಪಿಸುವುದು ಹೇಗೆ’, ‘ಸಾಮಾಜಿಕ ಮಾಧ್ಯಮದಲ್ಲಿ ಗಾಂಧಿ ನಿಂದನೆ -ಪರಿಹಾರ ಮಾರ್ಗಗಳು’, ‘ಎಲ್ಲರೂ ಸರಿ ಆದರೆ ಯಾವುದೂ ಸರಿ ಇಲ್ಲ, ಪ್ರಸ್ತುತ ಸ್ಥಿತಿಗತಿಗಳ ಸಮೀಕ್ಷೆ’ ಇವುಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಆಯ್ಕೆ ಮಾಡಿಕೊಂಡು 500 ಪದಗಳ ಮಿತಿಯಲ್ಲಿ ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಬರೆದು ಕರ್ನಾಟಕ ರಾಜ್ಯ ಸರ್ವೋದಯ ಮಂಡಲ, ವಲ್ಲಭ ನಿಕೇತನ, ಕುಮಾರ ಪಾರ್ಕ್, ಪೂರ್ವ ಬೆಂಗಳೂರು 560001 ಕ್ಕೆ ಅಥವಾ [email protected] ಸೆಪ್ಟೆಂಬರ್ 15ರೊಳಗೆ ಕಳುಹಿಸಬೇಕು.
“ಗುರು ಗೋವಿಂದ ದೋವು ಖಡೆ ಕಾಕೆ ಲಾಗೂ ಪಾಯ್ ಬಲಿಹಾರಿ ಗುರು ಆಪೆನೆ ಗೋವಿಂದ ದಿಯೋ ಬತಾಯ್.” “ಗುರು ಮತ್ತು ದೇವರು ಇಬ್ಬರೂ ಜೊತೆಯಾಗಿ ಬಂದರೆ ಮೊದಲು ಗುರುವಿನ ಪಾದಕ್ಕೆ ನಮಸ್ಕರಿಸುವೆ. ಏಕೆಂದರೆ ದೇವರ ಅಸ್ತಿತ್ವದ ತಿಳುವಳಿಕೆ ನೀಡಿದವರು ಗುರು. ಭೂಮಿಯನ್ನು ಕಾಗದ ಮಾಡಿ ಏಳು ಸಮುದ್ರವನ್ನು ಶಾಯಿ ಮಾಡಿ ಬರೆದರೂ ಗುರುವಿನ ಗುಣಗಾನ ಮಾಡಲಿಕ್ಕಾಗದು” ಎಂದು ಸಂತ ಕಬೀರರು ಗುರುವಿನ ಸ್ಥಾನದ ಮಹತ್ವವನ್ನು ತಿಳಿಸಿದ್ದಾರೆ. ರಾಜಾ ಅಲೆಗ್ಸಾಂಡರ್ ತನ್ನ ಗುರು ಅರಿಸ್ಟಾಟಲ್ ನ ಬಗ್ಗೆ ಹೇಳುತ್ತಾ “ತಂದೆ ಸ್ವರ್ಗದಿಂದ ಭೂಮಿಗೆ ತಂದ, ಗುರುವು ಸ್ವರ್ಗದೆತ್ತರಕ್ಕೆ ಏರಿಸಿದ. ತಂದೆ ನಶ್ವರ ದೇಹ ಕೊಟ್ಟರೆ ಗುರುವು ಅಮರ ಸಿರಿಯನ್ನೂ ದಿವ್ಯ ಜೀವನವನ್ನೂ ನೀಡಿದ” ಎನ್ನುತ್ತಾನೆ. ಒಬ್ಬ ಅಶಕ್ತನನ್ನು ಶಕ್ತನನ್ನಾಗಿಸುವ, ಅವಿವೇಕಿಯನ್ನು ವಿವೇಕಿಯನ್ನಾಗಿಸುವ ಶಕ್ತಿ ಗುರುವಿಗಿದೆ. ಶಿಕ್ಷಣ ಸಂಸ್ಥೆಯ ಪಾಠಪಟ್ಟಿಯಲ್ಲಿರುವ ಪಾಠಗಳನ್ನು ಪೂರ್ಣಗೊಳಿಸುವುದಷ್ಟೇ ಶಿಕ್ಷಕನ ಕರ್ತವ್ಯವಾಗಿರಬಾರದು. ಪ್ರತಿಭಾವಂತ ಶಿಕ್ಷಕ ತನ್ನ ಪ್ರತಿಭೆಯ ಪ್ರಭಾವದಿಂದ ವಿದ್ಯಾರ್ಥಿಗಳನ್ನು ಪಾಠ ಕೇಳಿ ಅಂಕ ಪಡೆಯುವುದಕ್ಕೆ ತಯಾರು ಮಾಡುವುದರೊಂದಿಗೆ, ಅವನಲ್ಲಿರುವ…
ಸುಳ್ಯ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ಯಕ್ಷ ಧ್ರುವ ಯಕ್ಷ ಶಿಕ್ಷಣ ಅಭಿಯಾನದ ಅಂಗವಾಗಿ ತೆಂಕುತಿಟ್ಟು ಯಕ್ಷಗಾನ ತರಗತಿಯ ಉದ್ಘಾಟನಾ ಸಮಾರಂಭ 30-08-2023ರಂದು ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದ ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಉಮೇಶ್ ಶೆಟ್ಟಿ ಉಬರಡ್ಕ “ಯಕ್ಷಗಾನ ಕಲಿಕೆಯಿಂದ ಶಾಲಾ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಇದು ನಮ್ಮಲ್ಲಿ ಏಕಾಗ್ರತೆ ವೃದ್ಧಿಸಿ ಕಲಿಕೆಯನ್ನು ದೃಢೀಕರಿಸುತ್ತದೆ” ಎಂದು ಹೇಳಿದರು. ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಶ್ರೀ ಎಂ.ಎಲ್ ಸಾಮಗ ಇವರು ಮಾತನಾಡಿ “ಯಕ್ಷಗಾನ ಕಲಿಕೆಯಿಂದ ಪುರಾಣ ಜ್ಞಾನ, ಭಾಷಾ ಶುದ್ಧಿ ಹಾಗೂ ಉತ್ತಮ ಸಂವಹನ ಕೌಶಲ ಬೆಳೆಯುತ್ತದೆ. ಇದು ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆಗೆ ಪೂರಕ” ಎಂದರು. ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುರುಳ್ಯ ಗ್ರಾಮ ಪಂಚಾಯತ್ತಿನ ನಿಕಟಪೂರ್ವ ಅಧ್ಯಕ್ಷರಾದ ಕುಮಾರಿ ಜಾನಕಿ ಎಸ್,…
ಶಿಕ್ಷಣ ಹಾಗೂ ಕಲೆಯ ಮೂಲಕ ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯಗಳನ್ನು ಅರಳಿಸುವ ಪ್ರಭಾವೀ ಕುಟುಂಬ ‘ಹಂದಟ್ಟು ಪಟೇಲರ ಮನೆ’. ಉಡುಪಿ ಜಿಲ್ಲೆ ಕೋಟ ಪರಿಸರದ ಈ ಕುಟುಂಬದಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರಿದ್ದಾರೆ. ಅಂತರಾಷ್ಟ್ರೀಯ ಮನ್ನಣೆ ಪಡೆದ ಕಲಾವಿದರಿದ್ದಾರೆ. ಈ ಕುಟುಂಬ ಸೃಜನಶೀಲತೆಗೆ ಒಂದು ಮಾದರಿ ಕುಟುಂಬ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀ ಶ್ರೀಧರ ಹಂದೆ ಹಾಗೂ ಶ್ರೀಮತಿ ವಸುಮತಿ ಹಂದೆ ದಂಪತಿಯ ಸುಪುತ್ರನಾಗಿರುವ ಶ್ರೀ ಸುಜಯೀಂದ್ರ ಹಂದೆಯವರು ‘ಪಟೇಲರ ಮನೆ’ಯ ಕಲಾ ಪರಂಪರೆಗೆ ದಿವ್ಯ ಮೆರುಗು ನೀಡುತ್ತಿರುವ ಪ್ರಬುದ್ಧ ಕಲಾವಿದ, ಶ್ರೇಷ್ಟ ಉಪನ್ಯಾಸಕ. ತಾ.22-07-1974ರಲ್ಲಿ ಜನಿಸಿದ ಇವರು ಪ್ರಾಥಮಿಕ ವಿದ್ಯಾಭ್ಯಾಸವನ್ನು ಕೋಟ ಶಾಲೆ ಹಾಗೂ ಗಿಳಿಯಾರು ಶಾಲೆಗಳಲ್ಲಿ ಮುಗಿಸಿ ಹೈಸ್ಕೂಲು ಹಾಗೂ ಪದವಿ ಪೂರ್ವ ಶಿಕ್ಷಣವನ್ನು ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಪೂರೈಸಿದರು. ತಮ್ಮ ಪದವಿಯನ್ನು ಭಂಡಾರ್ಕರ್ಸ್ ಕಾಲೇಜಿನಲ್ಲಿ ಮುಗಿಸಿ ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಎಂ.ಎ. ಪದವಿಯನ್ನು ಪಡೆದರು. ತಮ್ಮ ಐದನೆಯ ವಯಸ್ಸಿನಲ್ಲಿಯೇ ಯಕ್ಷಗಾನ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ ಇವರು ಯಕ್ಷರಂಗದ…